೦೬

೦೦೦ ಸೂ ಭೀಮ ...{Loading}...

ಸೂ : ಭೀಮ ದುರ್ಯೋಧನರ ಸೆಣಸಿನ
ತಾಮಸಿಕೆ ಹೆಚ್ಚಿದುದು ಕದನೋ
ದ್ದಾಮರಸ್ತ್ರಾಭ್ಯಾಸವನು ಮಾಡಿದರು ದ್ರೋಣನಲಿ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಮಹೀಪತಿ
ಬಾಲಕರು ನೂರಾರು ಮೆರೆದರು
ಬಾಲಕೇಳೀವ್ಯಸನಿಗಳು ಹೊರವಳಯದಲಿ ಪುರದ
ಆಳಿನೇರಿಕೆ ಹಿಡಿಗವಡೆ ಗುರಿ
ಯಾಳು ಚೆಂಡಿನ ಹೊಣಕೆ ಚಿಣಿ ಕೋ
ಲಾಳು ಗೊತ್ತಿನ ದಂಡೆಯನೆ ನಾನಾ ವಿನೋದದಲಿ ॥1॥

೦೦೨ ಗುಡುಗು ಗುತ್ತಿನಚೆಣ್ಡು ...{Loading}...

ಗುಡುಗು ಗುತ್ತಿನಚೆಂಡು ಗುಮ್ಮನ
ಬಡಿವ ಕತ್ತಲೆ ಗುದ್ದುಗಂಬದ
ಗಡಣೆ ಕಣ್ಮುಚ್ಚಸಗವರಿ ಹರಿಹಲಗೆ ನಿಡುಗವಣೆ
ಕೆಡಹು ಕುಟ್ಟಿಗನಾದಿಯಾದವ
ಗಡ ವಿನೋದದಲಾಡಿದರು ಪಂ
ಗಡದಲೈವರು ನೂರ್ವರಿವರಿತ್ತಂಡವೊಂದಾಗಿ ॥2॥

೦೦೩ ಅದರೊಳೊಬ್ಬನೆ ಭೀಮನನಿಬರ ...{Loading}...

ಅದರೊಳೊಬ್ಬನೆ ಭೀಮನನಿಬರ
ಸದೆವ ತಾ ಸೋತರೆ ವಿಭಾಡಿಸಿ
ಕೆದರುವನು ಗೆದ್ದೋಡಿದರೆ ಬೆಂಬತ್ತಿ ಹಿಡಿದೆಳೆದು
ಸದೆದು ಬಿಡುವನು ಮುನ್ನ ಭೀಷ್ಮಂ
ಗೊದರಿ ದೂರುವನನಿಬರನು ಮೇ
ಳದಲಿ ಮಗುಳೊಂದಾಗಿ ಸಂಗಡವಹರು ಸೂರುಳಿದು ॥3॥

೦೦೪ ಕೆಣಕಿ ದುರ್ಯೋಧನನ ...{Loading}...

ಕೆಣಕಿ ದುರ್ಯೋಧನನ ನೆತ್ತಿಯ
ನಣೆದು ಹಾಯ್ವನು ನಿಮ್ಮ ನೂರ್ವರ
ಬಣಗುಗಳಿಗೆಡಗಾಲ ತೊಡರಿದೆ ಬನ್ನಿ ನೀವೆನುತ
ಗುಣವ ನುಡಿದೊಂದಾಗಿ ಕೆಳೆಗೊಂ
ಡಣಕಿಸದೆ ಮೈಮರೆಸಿ ಮರೆಯಲಿ
ಹಣಿದು ಬಿಡುವರು ಭೀಮನನು ದುರ್ಯೋಧನಾದಿಗಳು ॥4॥

೦೦೫ ಹೇಳುವರು ಯಮಜಙ್ಗೆ ...{Loading}...

ಹೇಳುವರು ಯಮಜಂಗೆ ನಿನ್ನವ
ನೂಳಿಗವ ನಿಲಿಸೆಂದು ಪಾರ್ಥಗೆ
ಹೇಳುವರು ಬಳಿಕವರು ಭೀಮನ ಕರೆದು ಗಾರುಡಿಸೆ
ಕೇಳುವನು ಹೈಯೆಂದು ತನ್ನಯ
ಸೋಲದಲಿ ಮೈಯೊಡ್ಡುವನು ಮೇ
ಲಾಳನೇರಿಸಿ ಹರಿದು ಸದೆವನು ಗುತ್ತಿನಲಿ ಕೆಡಹಿ ॥5॥

೦೦೬ ಅಳುತ ಧೃತರಾಷ್ಟ್ರಙ್ಗೆ ...{Loading}...

ಅಳುತ ಧೃತರಾಷ್ಟ್ರಂಗೆ ಭೀಮನು
ಕಳೆದ ಹಲುಗಳನೊಡೆದ ಮೊಳಕಾ
ಲ್ಗಳನು ತೋರಿಸಿ ದೂರುವರು ದುರ್ಯೋಧನಾದಿಗಳು
ಮುಳು ಮೊನೆಗಳಲಿ ಬೆದಕಿ ನೆತ್ತರ
ಗಳೆದು ಹುಡಿಯಲಿ ಹೊರಳಿ ತಾ ಬಂ
ದಳುತ ಧೃತರಾಷ್ಟ್ರಂಗೆ ಭೀಷ್ಮಗೆ ದೂರುವನು ಭೀಮ ॥6॥

೦೦೭ ಆಕೆವಾಳರು ಭೀಷ್ಮ ...{Loading}...

ಆಕೆವಾಳರು ಭೀಷ್ಮ ವಿದುರರು
ಸಾಕು ನಿಮ್ಮೊಳು ನೂರು ನಾಲ್ವರು
ಆ ಕುಮಾರರು ಬೇರೆ ನೀನಿಹುದೊಬ್ಬ ಬೇರೆಂದು
ನೂಕಿ ಸೂರುಳು ಮಾಡಿ ಬಿಟ್ಟರೆ
ನಾಕು ಜಾವದೊಳಿಹರು ಮರುದಿನ
ವಾ ಕುಮಾರರು ತಮ್ಮೊಳೊಂದಾಗಿಹರು ಗೆಳೆಯಾಗಿ ॥7॥

೦೦೮ ಒನ್ದು ದಿನ ...{Loading}...

ಒಂದು ದಿನ ನೂರಾರು ಮಾನಿಸ
ರೊಂದು ಗೆಳೆಯಲಿ ಪುರದ ಹೊರಗಿಹು
ದೊಂದು ಠಾವು ಪ್ರಮಾಣ ವೃಕ್ಷವ ಕಂಡು ನಡೆತರಲು
ಬಂದು ನಿಂದರು ಕೋಲ ಬಿಸುಟೀ
ವೃಂದ ಹತ್ತಿತು ಮರವನಿವನೈ
ತಂದು ತಂದೆಡೆಯಾಡಿ ಬಳಲಿದು ನೋಡಿದನು ಭೀಮ ॥8॥

೦೦೯ ಮರನ ಹಿಡಿದಲುಗಿದರೆ ...{Loading}...

ಮರನ ಹಿಡಿದಲುಗಿದರೆ ಬಿದ್ದರು
ಭರತಕುಲ ಪಾಲಕರು ನೂರೈ
ವರು ಮಹಾವಾತದಲಿ ತರುಫಲನಿಕರ ಬೀಳ್ವಂತೆ
ಶಿರವೊಡೆದು ಬೆನ್ನೊಡೆದು ಮೊಳಕಾ
ಲ್ಜರಿದು ಕೈಗಳು ಮುರಿದು ನೆತ್ತರು
ಸುರಿದು ಧೃತರಾಷ್ಟ್ರಂಗೆ ದೂರಿದರನಿಬರೀ ಹದನ ॥9॥

೦೧೦ ದುರುಳನವನೊಡನಾಡ ಬೇಡೆಂ ...{Loading}...

ದುರುಳನವನೊಡನಾಡ ಬೇಡೆಂ
ದರಸನನಿಬರ ಸಂತವಿಟ್ಟನು
ಹಿರಿದು ಹೆಚ್ಚಿತು ಭೀಮ ದುರ್ಯೋಧನರಿಗತಿವೈರ
ಮರಳಿ ತಾವೊಂದಾಗುತಾತನ
ಕರೆಸಿ ವಿವಿಧ ಕ್ರೀಡೆಯಲಿ ಮೈ
ಮರೆಸಿ ಭೀಮನ ಕಟ್ಟಿ ಹಾಯ್ಕಿದರೊಂದು ಮಡುವಿನಲಿ ॥10॥

೦೧೧ ಪಾಶವನು ಹರಿದೆದ್ದು ...{Loading}...

ಪಾಶವನು ಹರಿದೆದ್ದು ಬಂದತಿ
ರೋಷಿ ಸದೆದನು ಮತ್ತೆ ತಮ್ಮೊಳು
ಭಾಷೆಗಳಲೊಂದಾಗಿ ಕೂಡಿದರೊಂದು ದಿವಸದಲಿ
ಆ ಸಿತಗ ಮೈಮರೆದ ಹೊತ್ತು ಮ
ಹಾಸುರದ ಫಣಿಗಳಲಿ ಕಚ್ಚಿಸಿ
ಘಾಸಿ ಮಾಡಲು ಬದುಕಿ ಬೇಸರನಡಿಗಡಿಗೆ ಭೀಮ ॥11॥

೦೧೨ ಅರಸ ಕೇಳ್ ...{Loading}...

ಅರಸ ಕೇಳ್ ಆಯುಷ್ಯವುಳ್ಳರೆ
ಹರಿಹರ ಬ್ರಹ್ಮಾದಿಗಳು ಸಂ
ಹರಿಸಲರಿಯರು ಬರಿದೆ ದೈನ್ಯಂಬಡುವುದೀ ಲೋಕ
ಭರತ ವಂಶದ ಬಾಹಿರರು ನಿ
ಮ್ಮರಸುಗಳು ಭೀಮಂಗೆ ಮಾಡಿದ
ಹುರಿಯನಾ ಹುರಿ ಹರಿದ ಪರಿಯನು ಮತ್ತೆ ಕೇಳ್ ಎಂದ ॥12॥

೦೧೩ ಕಾಳಕೂಟ ಹಲಾಹಲವ ...{Loading}...

ಕಾಳಕೂಟ ಹಲಾಹಲವ ಕಾ
ರ್ಕೋಲ ದಾರದ ವತ್ಸನಾಭಿ ಕ
ರಾಳ ಸೌರಾಷ್ಟ್ರಿಕವ ಶೌಕ್ಲಿಕ ಸುಪ್ರದೀಪಕವ
ಹೇಳಲರಿದೆನಿಪೆಂಟು ವಿಷವನು
ಮೇಳವಿಸಿ ಬಳಿಕುಳಿದ ಮಧುರ ವಿ
ಶಾಲವಸ್ತುಗಳಿಂದ ಕಜ್ಜಾಯಗಳ ಮಾಡಿಸಿದ ॥13॥

೦೧೪ ದಿಟ್ಟಿಸಿದರೆವೆ ಸೀವುದಙ್ಗೈ ...{Loading}...

ದಿಟ್ಟಿಸಿದರೆವೆ ಸೀವುದಂಗೈ
ಮುಟ್ಟಿದರೆ ಹುಗುಳಹುದು ಬಳಿಕವ
ನಟ್ಟ ಕೈ ಕರಣದ ಸುವಾರದ ವಿದ್ಯವೇನರಿದೊ
ಕೊಟ್ಟರೀತಂಗೆಲ್ಲವನು ಜಗ
ಜಟ್ಟಿ ಹಾಯಿಕಿ ಕೊಂಡು ನುಣ್ಣನೆ
ಚಿಟ್ಟು ಮುರಿಯಾಟದಲಿ ಸದೆದನು ಮತ್ತೆ ಕೌರವರ ॥14॥

೦೧೫ ಮಡುವಿನಲಿ ಹಾಯ್ಕಿದಿರಿ ...{Loading}...

ಮಡುವಿನಲಿ ಹಾಯ್ಕಿದಿರಿ ಹಾವಿನ
ಹೆಡೆಯ ಕೊಂಡೂರಿದಿರಿ ಬಲು ವಿಷ
ದಡಿಗೆಗಳ ಮೆಲಿಸಿದಿರಿ ಬಲ್ಲಂದದ ವಿಕಾರದಲಿ
ಕೆಡಹಲನು ಮಾಡಿದಿರಿ ನೂರ್ವರ
ಕಡಿದು ಶಾಕಿನಿಯರಿಗೆ ರಕುತವ
ಕುಡಿಸಿದಲ್ಲದೆ ಮುನ್ನ ಸಾವೆನೆ ಕೇಳಿ ನೀವೆಂದ ॥15॥

೦೧೬ ಒಳಗೆ ಬೆಳೆದುದು ...{Loading}...

ಒಳಗೆ ಬೆಳೆದುದು ವೈರಶಿಖಿ ಕಡೆ
ಗಳಕೆ ಹಾಯ್ದುದು ಜನನಿ ಜನಕರ
ಬಲು ನುಡಿಗಳಲಿ ನೂರ್ವರಿರ್ದರು ಶಕುನಿ ಮತವಿಡಿದು
ಬಲಹುಗುಂದದೆ ಭೀಷ್ಮ ವಿದುರರ
ಬಳಕೆಯಲಿ ತಾವಡಗಿ ಗುಣದಲಿ
ಕೆಲನ ಮೆಚ್ಚಿಸಿ ನಡೆದರಿವರು ಯುಧಿಷ್ಠಿರಾದಿಗಳು ॥16॥

೦೧೭ ಆಟದಲಿ ತೊಡಗಿದರು ...{Loading}...

ಆಟದಲಿ ತೊಡಗಿದರು ಮೊದಲಲಿ
ತೋಟಿಯನು ಸಾಕೀತಗಳ ಕಾ
ಲಾಟವನು ನಿಲಿಸುವೆನು ಶಸ್ತ್ರಾಸ್ತ್ರ ಪ್ರಸಂಗದಲಿ
ಆಟವಿಕರಿವದಿರಲಿ ಬಲಿದೊಳ
ತೋಟಿ ಬರಿದೇ ಬಿಡದು ಮೃತ್ಯುವಿ
ನೂಟ ಮುಂದಿಹುದೆಂದು ಕರೆಕರೆಗುಂದಿದನು ಭೀಷ್ಮ ॥17॥

೦೧೮ ಧರಣಿಪತಿ ಚಿತ್ತೈಸು ...{Loading}...

ಧರಣಿಪತಿ ಚಿತ್ತೈಸು ಗೌತಮ
ವರಮುನಿಗೆ ಜನಿಸಿದ ಶರದ್ವನು
ಪರಮಋಷಿಯಾತನು ತಪೋಯುತನಾಗಿ ಧನು ಸಹಿತ
ಇರುತ ಕಂಡನು ದೈವ ಗತಿಯಲಿ
ಸುರವಧುವನಾ ಕ್ಷಣಕೆ ಕಾಮ
ಜ್ವರಿತನಾದನು ಚಲಿಸಿತಾತನ ವೀರ್ಯವವನಿಯಲಿ ॥18॥

೦೧೯ ಅದು ಶರಸ್ತಮ್ಭದಲಿ ...{Loading}...

ಅದು ಶರಸ್ತಂಭದಲಿ ನೆಲೆಯಾ
ದುದು ಮುನಿಚ್ಯುತ ವೀರ್ಯ ಮುನಿಸುತ
ರುದಿಸಿದರು ಶಂತನು ಮಹೀಪತಿ ಕಂಡು ಕೃಪೆಯಿಂದ
ಸದನದಲಿ ತನ್ಮಿಥುನವನು ಸಲ
ಹಿದನು ಕೃಪ ಕೃಪೆಯೆಂಬ ಹೆಸರಾ
ದುದು ಮಹಾ ಬಲನಾದನಾತನ ಕರೆಸಿದನು ಭೀಷ್ಮ ॥19॥

೦೨೦ ಆ ಕೃಪಾಚಾರಿಯನ ...{Loading}...

ಆ ಕೃಪಾಚಾರಿಯನ ದೆಸೆಯಿಂ
ದೀ ಕುಮಾರರು ನಿಖಿಳ ತರ್ಕ
ವ್ಯಾಕರಣ ಮೊದಲೆನೆ ಚತುರ್ದಶ ವಿದ್ಯಗಳನರಿದು
ಲೋಕ ವೈದಿಕ ಮುಖ್ಯ ಸಕಲ ಕ
ಲಾ ಕುಶಲರಾದರು ಧನುಃಪ್ರವಿ
ವೇಕ ನಿಪುಣರನರಸುತಿದ್ದನು ಮತ್ತೆ ಗಾಂಗೇಯ ॥20॥

೦೨೧ ಮುನಿ ಭರದ್ವಾಜಾಖ್ಯನಿರ್ದನು ...{Loading}...

ಮುನಿ ಭರದ್ವಾಜಾಖ್ಯನಿರ್ದನು
ಘನ ತಪೋನಿಷ್ಠೆಯಲಿ ದಿವಿಜಾಂ
ಗನೆಯ ಕಂಡನು ಗಾಯವಡೆದನು ಮದನನೆಸುಗೆಯಲಿ
ತನು ಪರಿಚ್ಯುತ ವೀರ್ಯವನು ಸ
ತ್ಕನಕ ಕಲಶದೊಳಿರಿಸಲಲ್ಲಿಯೆ
ಜನಿಸಿದನು ದ್ರೋಣಾಭಿಧಾನನು ಮುನಿಯ ದೆಸೆಯಿಂದ ॥21॥

೦೨೨ ದ್ರೋಣಕಲಶದೊಳಾದ ದೆಸೆಯಿಂ ...{Loading}...

ದ್ರೋಣಕಲಶದೊಳಾದ ದೆಸೆಯಿಂ
ದ್ರೋಣನಾದನು ಬಳಿಕ ಮುನಿಯಾ
ದ್ರೋಣಗುಪನಯನಾದಿ ವಿಪ್ರಕ್ರಿಯೆಗಳನು ರಚಿಸಿ
ದ್ರೋಣನೊಡನೋದಿಸಿ ನೃಪಾಲ
ಶ್ರೇಣಿಯನು ಶಸ್ತ್ರಾಸ್ತ್ರ ಕಳೆಯಲಿ
ಜಾಣರನು ಮಾಡಿದನು ಭಾರದ್ವಾಜ ಮುನಿಯಂದು ॥22॥

೦೨೩ ಕೃಪನನುಜೆಯನು ತನ್ದು ...{Loading}...

ಕೃಪನನುಜೆಯನು ತಂದು ದ್ರೋಣಂ
ಗುಪಯಮವ ಮಾಡಿದನು ಹರ್ಷದಿ
ದ್ರುಪದ ಬಂದೀ ದ್ರೋಣನೊಡನರಿದನು ಧನುಶ್ರುತಿಯ
ಕೃಪೆಯಲೀ ದ್ರೋಣಂಗೆ ಜನಿಸಿದ
ನಪರ ಶಂಕರ ರೂಪನಾಹವ
ನಿಪುಣನಶ್ವತ್ಥಾಮ ಭಾರದ್ವಾಜ ಗೋತ್ರದಲಿ ॥23॥

೦೨೪ ತನ್ದೆಯೊಳ್ ಶ್ರಮ ...{Loading}...

ತಂದೆಯೊಳ್ ಶ್ರಮ ಮಾಡಿದರು ನೃಪ
ವೃಂದಸಹಿತೀ ದ್ರೋಣ ದ್ರುಪದರು
ನಿಂದನಾ ದೃಪದಾಖ್ಯನಯ್ಯನು ದಿವಿಜ ನಗರಿಯಲಿ
ಅಂದು ಸಖ್ಯಪ್ರೀತಿಯನು ಸಾ
ನಂದದಲಿ ದ್ರೋಣಂಗೆ ವಿರಚಿಸಿ
ಬಂದು ನಿಜ ರಾಜ್ಯಾಭಿಷೇಕವ ಧರಿಸಿದನು ದ್ರುಪದ ॥24॥

೦೨೫ ಇತ್ತಲೀ ದ್ರೋಣನ ...{Loading}...

ಇತ್ತಲೀ ದ್ರೋಣನ ಪಿತನು ಸುರ
ರತ್ತ ಸರಿದನು ಕೆಲವು ದಿವಸಕೆ
ತತ್ತಪೋವನದಲ್ಲಿ ವಿಪ್ರ ಕ್ರಿಯೆಗಳನು ಮಾಡಿ
ಹೊತ್ತ ದಾರಿದ್ರ್ಯದಲಿ ಮನಮರು
ಗುತ್ತ ದೇಶಾಂತರದೊಳಗೆ ತೊಳ
ಲುತ್ತ ಬಂದನು ತನ್ನ ಮಗ ಸಹಿತಡವಿಯಲಿ ದ್ರೋಣ ॥25॥

೦೨೬ ಪರಶುರಾಮಾಶ್ರಮಕೆ ಮುನಿಯೈ ...{Loading}...

ಪರಶುರಾಮಾಶ್ರಮಕೆ ಮುನಿಯೈ
ತರಲು ಭಾರದ್ವಾಜನನು ಸ
ತ್ಕರಿಸಿ ನುಡಿದನು ಜಾಮದಗ್ನ್ಯನು ಮಧುರ ವಚನದಲಿ
ಧರೆಯನಿತ್ತೆನು ದ್ವಿಜರಿಗೀಯವ
ಸರದೊಳಾ ನಿರ್ಧನನು ನೀನೇ
ಪರಮ ಋಷಿಯಾತಿಥ್ಯ ಪೂಜೆಗಭಾಗ್ಯ ನಾನೆಂದ ॥26॥

೦೨೭ ಧನರಹಿತ ನಾ ...{Loading}...

ಧನರಹಿತ ನಾ ಹೊತ್ತ ಭಾರಿಯ
ಧನುವಿದೊಂದಿದೆ ದಿವ್ಯಶರವಿದೆ
ಮನಕೆ ಬಂದುದ ವರಿಸು ನೀನೆನೆ ದ್ರೋಣ ನಸುನಗುತ
ಎನಗೆ ನಿಮ್ಮಡಿಗಳ ಕೃಪಾಲೋ
ಕನವಲೇ ಪರಿಯಾಪ್ತಿ ಲೋಕದ
ಜನ ಮನೋರಂಜನವೆ ಬೇಹುದು ಶರವ ಕೊಡಿಯೆಂದ ॥27॥

೦೨೮ ಇವು ಮಹಾ ...{Loading}...

ಇವು ಮಹಾ ನಿಸ್ಸೀಮತರ ವೈ
ಷ್ಣವವಲೇ ದಿವ್ಯಾಸ್ತ್ರ ನಿವಹವ
ನವರು ಕೊಟ್ಟರು ಕೊಂಡನುಚಿತ ವಿಧಾನದಲಿ ದ್ರೋಣ
ಇವು ಮಹಾರಣರಂಗದಲಿ ಶಾ
ತ್ರವ ನಿವಾರಣವೈಸಲೆಮ್ಮೀ
ವ್ಯವಹೃತಿಗೆ ತಾನೇನುಪಾಯವೆನುತ್ತ ಚಿಂತಿಸಿದ ॥28॥

೦೨೯ ಮಗನೆ ಬಲ್ಲೈ ...{Loading}...

ಮಗನೆ ಬಲ್ಲೈ ದ್ರುಪದ ಭೂಪತಿ
ಮಗುವುತನದಿಂದೆಮ್ಮ ಸಖನೋ
ಲಗಿಸುವೆವು ನಾವಲ್ಲಿ ಸಲಹನೆ ಮಿತ್ರ ಭಾವದಲಿ
ಹೊಗುವ ನಡೆ ಪಾಂಚಾಲರಾಯನ
ನಗರಿಯನು ನಾವೆಂದು ಮುನಿ ಮೌ
ಳಿಗಳ ಮಣಿಯನು ಬೀಳು ಕೊಂಡನು ರೇಣುಕಾ ಸುತನ ॥29॥

೦೩೦ ಬನ್ದನೀತನು ದ್ರುಪದ ...{Loading}...

ಬಂದನೀತನು ದ್ರುಪದ ರಾಯನ
ಮಂದಿರಕೆಯಾ ಬಾಗಿಲವನೊಡ
ನೆಂದನೆಲವೋ ನಾವು ನಿಮ್ಮರಸಂಗೆ ಪೂರ್ವದಲಿ
ಸಂದ ಮಿತ್ರರು ದ್ರೋಣಮುನಿಪತಿ
ಯೆಂದು ನಮ್ಮಭಿಧಾನ ನೀ ಹೇ
ಳೆಂದು ಕಳುಹಲು ಬಂದು ಬಿನ್ನಹ ಮಾಡಿದನು ಹದನ ॥30॥

೦೩೧ ಸಿರಿಯ ಮದವಧಿಕ ...{Loading}...

ಸಿರಿಯ ಮದವಧಿಕ ಪ್ರತಾಪೋ
ತ್ಕರದ ಮದ ಮೊದಲಾದ ಮದ ಸಂ
ಚರಣ ರಜದಲಿ ಮಾಸಿತೀತನ ಮನದ ಮಡಿ ವರ್ಗ
ತಿರಿವ ಹಾರುವರೊಡನೆ ಭೂಮೀ
ಶ್ವರರಿಗೆತ್ತಣ ಮೈತ್ರಿ ಹೋಗಲಿ
ಕರೆಯ ಬೇಡೆನೆ ಬಂದು ಬಾಗಿಲಲವ ನಿವಾರಿಸಿದ ॥31॥

೦೩೨ ಮರೆದನೇ ತಪ್ಪೇನು ...{Loading}...

ಮರೆದನೇ ತಪ್ಪೇನು ನಾ ಕಂ
ಡರುಹಿ ಮರಳುವೆವೈಸಲೇಯೆನು
ತುರುಬಿದರೆ ತರುಬಿದರು ಕಂಬಿಯನಿಕ್ಕಿ ಬಾಗಿಲಲಿ
ಒರೆಯನುಗುಳಿಚಿ ಖಡ್ಗದಲಿ ಬಿಡ
ದರಿದನಿಕ್ಕೆಲದವರನೋಲಗ
ಕುರವಣಿಸಿದನು ಮುಂದೆ ನಿಂದನು ದ್ರುಪದ ಭೂಪತಿಯ ॥32॥

೦೩೩ ಏನೆಲವೊ ಪಾಞ್ಚಾಲ ...{Loading}...

ಏನೆಲವೊ ಪಾಂಚಾಲ ಚಿಕ್ಕಂ
ದಾನು ನೀನೊಂದಾಗಿ ತಂದೆಯೊ
ಳೇನನರಿದೆವು ಮರೆದು ಕಳೆದಾ ಹಾ ಮಹಾದೇವ
ಏನು ಬಂದಿರಿಯೆಂಬ ಗುಣವಚ
ನಾನುರಾಗವು ಸಾಲದೇ ಧನ
ವೇನು ಫಲ ಕಕ್ಕುಲಿತೆಯೆಮಗಿಲ್ಲೆಂದನಾ ದ್ರೋಣ ॥33॥

೦೩೪ ಸೂರಿಗಳಿಗತಿ ಮೂರ್ಖರಿಗೆ ...{Loading}...

ಸೂರಿಗಳಿಗತಿ ಮೂರ್ಖರಿಗೆ ಗಂ
ಭೀರರಿಗೆ ಭಂಡರಿಗೆ ವೇದಾ
ಚಾರ ಸಂಯುಕ್ತರಿಗನಾಚಾರ ಪ್ರಸಕ್ತರಿಗೆ
ಧೀರರಿಗೆ ಹಂದೆಗಳಿಗೆತ್ತ್ತಣ
ಸೇರುವೆಗಳೈ ಭೂಪರಿಗೆ ಬಡ
ಹಾರುವರಿಗೆತ್ತಣದು ಸಖತನವೆಂದನಾ ದ್ರುಪದ ॥34॥

೦೩೫ ಎಲವೊ ನಿನ್ನಾಸ್ಥಾನ ...{Loading}...

ಎಲವೊ ನಿನ್ನಾಸ್ಥಾನ ಸಹಿತೀ
ಹೊಳಲ ಸುಡುವೆನು ನಿನ್ನ ಸೀಳಿದು
ಬಲಿಯ ಕೊಡುವೆನು ಭೂತಗಣಕಿದಿರಲ್ಲ ನೀನೆನಗೆ
ಕಲಿತ ವಿದ್ಯದ ಕೋಲ ಮಕ್ಕಳ
ಕಳುಹಿ ಕಟ್ಟಿಸಿ ವಾಮ ಪಾದದಿ
ತಲೆಯನೊದೆವೆನು ಮರೆಯದಿರು ನೀನೆಂದನಾ ದ್ರೋಣ ॥35॥

೦೩೬ ಎನ್ದು ಭಾಷೆಯ ...{Loading}...

ಎಂದು ಭಾಷೆಯ ಮಾಡಿ ತನ್ನಯ
ನಂದನನೊಡಗೊಂಡು ಜನಪದ
ವೃಂದ ಹಲವನು ಕಳೆದು ಬಂದನು ಹಸ್ತಿನಾಪುರಿಗೆ
ಅಂದು ಸಕಲ ಕುಮಾರಕರು ನಲ
ವಿಂದ ನಗರಿಯ ಹೊರಗೆ ಗುರಿಗಳ
ಮುಂದುವರಿದೆಸುತಿರಲು ಮುದದಲಿ ಕಂಡನಾ ದ್ರೋಣ ॥36॥

೦೩೭ ಬೆರಸಿದನು ನೆರವಿಯನು ...{Loading}...

ಬೆರಸಿದನು ನೆರವಿಯನು ನೋಡು
ತ್ತಿರೆ ಯುಧಿಷ್ಠಿರ ನೃಪನ ಹರಳುಂ
ಗುರ ವಿಘಾತಿಯೊಳುಗಿದು ಬಿದ್ದುದಗಾಧ ಕೂಪದಲಿ
ನೆರೆದು ತಡಿಯಲಿ ನಿಂದು ನೂರರು
ವರು ನಿರೀಕ್ಷಿಸಿ ಸಾಧ್ಯವಲ್ಲೆನು
ತಿರೆ ಮಗಂಗೆ ಮುನೀಂದ್ರನೆಂದನು ಬೇಗ ತೆಗೆಯೆಂದು ॥37॥

೦೩೮ ಸರಳ ತೊಡಚಿ ...{Loading}...

ಸರಳ ತೊಡಚಿ ತದೀಯ ಮಣಿ ಬಂ
ಧುರದ ಮುದ್ರಿಕೆಗೆಚ್ಚು ಹಿಳುಕಿನ
ಶಿರಕೆ ಶರವಾ ಹಿಳುಕಿನಲಿ ಕಣೆಯೆಚ್ಚು ಬಂಧದಲಿ
ಸರಳ ಸಂದರ್ಭದಲಿ ನಿಮಿಷಾಂ
ತರಕೆ ಫಣಿಪನ ಹೆಡೆವಣಿಯನು
ದ್ಧರಿಸುವಂತಿರೆ ತೆಗೆದು ಬಿಸುಟನು ರತುನಮುದ್ರಿಕೆಯ ॥38॥

೦೩೯ ಕಣ್ಡು ಬೆರಗಾದುದು ...{Loading}...

ಕಂಡು ಬೆರಗಾದುದು ಕುಮಾರರ
ತಂಡ ತನತನಗೈದಿ ಭೀಷ್ಮನ
ನಂಡಲೆದುದೀ ಮುನಿಯನೀಗಲೆ ಸಂತವಿಡಿಯೆಂದು
ಚಂಡ ಭುಜಬಲನವರ ಕಾಣಿಸಿ
ಕೊಂಡು ಕೊಟ್ಟನು ಭೀಷ್ಮನವರಿಗ
ಖಂಡ ವಿಭವವನತುಳ ಧನಪತಿಯಾದನಾ ದ್ರೋಣ ॥39॥

೦೪೦ ವರ ಮುಹೂರ್ತದೊಳವರ ...{Loading}...

ವರ ಮುಹೂರ್ತದೊಳವರ ನೂರರು
ವರನು ಕೊಟ್ಟನು ಶಸ್ತ್ರವಿದ್ಯಾ
ಪರಿಣತರ ಮಾಡೆಂದು ದ್ರೋಣನ ಕೈಯಲಾ ಭೀಷ್ಮ
ಗರುಡಿ ಕಟ್ಟಿತು ನೂರು ಯೋಜನ
ವರೆಯ ವಿಸ್ತಾರದಲಿ ಸಾವಿರ
ಕುರಿಯ ಹೊಯ್ದರು ಪೂಜಿಸಿದರಾ ಚದುರಚಂಡಿಕೆಯ ॥40॥

೦೪೧ ಗರುಡಿ ಪೂಜಾ ...{Loading}...

ಗರುಡಿ ಪೂಜಾ ವಿಭವ ಸಮನಂ
ತರದಲನಿಬರು ಸಮವ ತೊಡಗಿದ
ರರಸು ಮಕ್ಕಳು ಕೇಳಿದರು ನಾನಾ ದಿಗಂತದಲಿ
ಬರುತಿಲಿದ್ದರು ಕೂಡೆ ಹಸ್ತಿನ
ಪುರಿಗೆ ವಿದ್ಯಾರ್ಥಿಗಳು ಪಾರ್ಥಿವ
ವರ ಕುಮಾರರು ಬಂದು ಕಂಡರು ಶಸ್ತ್ರ ಪಂಡಿತನ ॥41॥

೦೪೨ ರಾಯ ಬಲ್ಲೈ ...{Loading}...

ರಾಯ ಬಲ್ಲೈ ಮುನ್ನ ಶಿಶುವನು
ತಾಯಿ ಬಿಸುಟಳು ಗಂಗೆಯಲಿ ರಾ
ಧೇಯನಾದನು ರಾಧೆಯೆಂಬವಳೊಲಿದು ಸಾಕಿದರೆ
ಆಯತಾಕ್ಷನು ಪರಶುರಾಮನೊ
ಳಾಯುಧದ ಶ್ರಮಗಲಿತು ಬಳಿಕದು
ವಾಯವಾದೊಡೆ ಬಂದನಾ ಗಜಪುರಿಗೆ ಕಲಿಕರ್ಣ ॥42॥

೦೪೩ ಬನ್ದು ಹಸ್ತಿನಪುರಿಗೆ ...{Loading}...

ಬಂದು ಹಸ್ತಿನಪುರಿಗೆ ರಾಧಾ
ನಂದನನು ದುರ್ಯೋಧನನನೈ
ತಂದು ಕಂಡನು ಕೌರವೇಶ್ವರನಿವರ ಕಾಣಿಸಿದ
ಅಂದು ಮೊದಲಾಗವರ ಸಖ್ಯಕೆ
ಸಂದ ಕಾಣೆನು ಕರ್ಣ ಕುರುಪತಿ
ಗೊಂದೆ ಜೀವನವೊಂದೆ ಮನ ಮತವೊಂದೆ ಕೇಳ್ ಎಂದ ॥43॥

೦೪೪ ಬೇಟೆ ಕರ್ಣನ ...{Loading}...

ಬೇಟೆ ಕರ್ಣನ ಕೂಡೆ ಹಗಲಿರು
ಳಾಟ ಕರ್ಣನ ಕೂಡೆ ಷಡು ರಸ
ದೂಟ ಕರ್ಣನ ಕೂಡೆ ಶಸ್ತ್ರಾಭ್ಯಾಸವವ ಕೂಡೆ
ತೋಟಿ ಮನದಲಿ ನಗೆಯ ಮಧುರದ
ನೋಟ ಕಣ್ಣಿನೊಳುಳಿದವರ ಕೂ
ಡಾಟಗಳು ತಾವಿಬ್ಬರೊಂದೆನಿಸಿದರು ಜಗವರಿಯೆ ॥44॥

೦೪೫ ಸುರಗಿ ಸಬಳ ...{Loading}...

ಸುರಗಿ ಸಬಳ ಕಠಾರಿಯುಬ್ಬಣ
ಹರಿಗೆ ಹಿರಿಯುಬ್ಬಣವಡಾಯುಧ
ಪರಿಘ ಚಕ್ರ ಮುಸುಂಡಿ ತೋಮರ ಭಿಂಡಿವಾಳಚಯ
ಪರಶು ಕಕ್ಕಡೆ ಮುಸಲ ಹಲ ಮು
ದ್ಗರ ಧನುರ್ದಂಡಾದಿ ಶಸ್ತ್ರೋ
ತ್ಕರದಲನಿಬರು ಕುಶಲರಾದರು ಮುನಿಯ ಗರುಡಿಯಲಿ ॥45॥

೦೪೬ ಜನಪ ಕೇಳೈ ...{Loading}...

ಜನಪ ಕೇಳೈ ಭೀಮ ದುರ್ಯೋ
ಧನರು ಗದೆಯಲಿ ಮಿಗಿಲು ಕರ್ಣಾ
ರ್ಜುನರು ಧನುವಿನಲಧಿಕರಾದರು ನೃಪಕುಮಾರರಲಿ
ತನತನಗೆ ಸರ್ವಾಯುಧಂಗಳ
ಲನಿಬರರಿದರು ಕೂಡೆ ಗುರುವಿನ
ಮನಕೆ ಹತ್ತೆಯವಾದನರ್ಜುನನಸ್ತ್ರ ಶಿಕ್ಷೆಯಲಿ ॥46॥

+೦೬ ...{Loading}...