೦೮

೦೦೦ ಸೂ ವಾಯುಸುತನುರಿಮನೆಯ ...{Loading}...

ಸೂ: ವಾಯುಸುತನುರಿಮನೆಯ ಕೌರವ
ರಾಯ ಕೃತಕವ ಕಳೆದು ಹೊಕ್ಕನು
ತಾಯಿ ವೊಡಹುಟ್ಟಿದರು ಸಹಿತ ಮಹಾವನಾಂತರವ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಗಜನಗರಿಯಲಿ ಕೌರವ
ರಾಳ ಪಾಂಡವರಾಳ ಸೆಣಸಿನ ಕಾಲು ಮೆಟ್ಟುಗಳ
ಸೂಳು ಮತ್ಸರ ಬಿರುದು ಪಾಡಿನ
ಚೂಳಿಗಲಹದ ಕದಡು ಜೂಜಿನ
ತೋಳುವಲರೊಳತೋಟಿ ಮಸಗಿತು ದಿವಸ ದಿವಸದಲಿ ॥1॥

೦೦೨ ಬೀದಿಗಲಹದ ಕದಡು ...{Loading}...

ಬೀದಿಗಲಹದ ಕದಡು ಬೀಡಿನ
ಲೈದೆ ಹಬ್ಬಿತು ಬೀಡುಗಲಹದ
ಕೈದೊಳಸು ಕೊಂಡೆಸಗಿ ನಟಿಸಿತು ನಾಡು ನಾಡಿನಲಿ
ಆದುದೆರಡರಸಿಭಪುರಿಗೆ ಕಾ
ಳಾದುದಿನ್ನೇನೆಂದು ಪುರಜನ
ವೈದೆ ಹೆದರಿತು ಭೀಮ ದುರ್ಯೋಧನರ ಹೋರಟೆಗೆ ॥2॥

೦೦೩ ಬೇರೆ ಪಾಣ್ಡವರಿರಲಿ ...{Loading}...

ಬೇರೆ ಪಾಂಡವರಿರಲಿ ರಾಯನ
ನೂರು ಮಕ್ಕಳು ಪುರವನಾಳಲಿ
ಬೇರೆ ಕೌರವರಿರಲಿ ಪಾಂಡವರಾಳಲಿಭ ಪುರಿಯ
ನೂರರೊಡನೈವರನು ಧರಿಸಿರ
ಲಾರದೀ ಪುರಿಯೆನುತ ದುಗುಡವ
ಹೇರಿ ಹೊದಕುಳಿಗೊಳುತಲಿರ್ದುದು ಹಸ್ತಿನಾನಗರ ॥3॥

೦೦೪ ಒನ್ದು ದಿವಸ ...{Loading}...

ಒಂದು ದಿವಸ ಸುಯೋಧನನು ನಿಜ
ಮಂದಿರದೊಳೇಕಾಂತದಲಿ ಮನ
ನೊಂದು ನುಡಿದನು ಶಕುನಿ ಕರ್ಣಜಯದ್ರಥಾದ್ಯರಿಗೆ
ಅಂದು ಭೀಮಾರ್ಜುನರು ದ್ರುಪದನ
ತಂದು ದಕ್ಷಿಣೆಯಿತ್ತು ಗುರುವಿಗೆ
ಸಂದರೈ ಸಮರದಲಿ ಪರಿಭವವಾಯ್ತು ತಮಗೆಂದ ॥4॥

೦೦೫ ವನಜ ವನದಲಿ ...{Loading}...

ವನಜ ವನದಲಿ ತುರುಚೆ ಕಬ್ಬಿನ
ಬನದಿ ಕಡಸಿಗೆ ಚೂತಮಯ ಕಾ
ನನದಿ ಬೊಬ್ಬುಲಿ ಭೀಮಸೇನನಯಿರವು ತಮ್ಮೊಳಗೆ
ಇನಿತು ಪಾರ್ಥನ ಮೇಲೆ ಯಮಳರ
ಜಿನುಗಿನಲಿ ಜಾರೆನು ಯುಧಿಷ್ಠಿರ
ಜನಪನಾಗಲಿ ಮೇಣು ಮಾಣಲಿ ಭೀತಿಯಿಲ್ಲೆಂದ ॥5॥

೦೦೬ ಹುದು ನಡೆಯದಿವರೊಡನೆ ...{Loading}...

ಹುದು ನಡೆಯದಿವರೊಡನೆ ನಮ್ಮಲಿ
ಕದನವೇ ಕೈಗಟ್ಟುವುದು ಕಾ
ದಿದೊಡೆ ಹೆಬ್ಬಲವಹುದು ದುರ್ಬಲ ದೈವಗತಿ ಬೇರೆ
ನದಿಗಳರಳೆಯ ಹಾಸು ನವ ವಿಷ
ವುದರ ದೀಪನ ಚೂರ್ಣವಾವಂ
ಗದಲಿ ಸಾಪತ್ನರಲಿ ಸದರವ ಕಾಣೆ ತಾನೆಂದ ॥6॥

೦೦೭ ದುಗುಡವೇತಕೆ ಜೀಯ ...{Loading}...

ದುಗುಡವೇತಕೆ ಜೀಯ ಡೊಂಬಿನ
ಜಗಳವನು ತೆಗೆದರಿನೃಪರ ಸುಂ
ಟಗೆಯನಾಯ್ಸುವೆನವರ ತನುವನು ಯದ್ಧ ರಂಗದಲಿ
ದಿಗು ಬಲಿಯ ಕೊಡಿಸುವೆನು ಸಾಕಿ
ನ್ನೊಗುಮಿಗೆಯ ಚಿಂತಾಂಗನೆಯನೋ
ಲಗಿಸದಿರು ಕುರುರಾಯ ಚಿತ್ತೈಸೆಂದನಾ ಕರ್ಣ ॥7॥

೦೦೮ ಹೊಡೆದು ಹೊಡೆ ...{Loading}...

ಹೊಡೆದು ಹೊಡೆ ಚೆಂಡಾಡಿ ರಿಪುಗಳ
ಗಡಣವನು ಯಮರಾಜಧಾನಿಗೆ
ನಡೆಸುವೆನು ನೀ ನೋಡುತಿರು ಸಾಕೊಂದು ನಿಮಿಷದಲಿ
ಕೊಡು ತನಗೆ ನೇಮವನು ದುಗುಡವ
ಬಿಡು ಮನಸ್ಸಿನ ಕಂದು ಕುಂದನು
ಹಿಡಿಯದಿರು ಕುರುರಾಯ ಚಿತ್ತೈಸೆಂದನಾ ಕರ್ಣ ॥8॥

೦೦೯ ಹಬ್ಬುಗೆಯ ಹದಿನಾಲ್ಕು ...{Loading}...

ಹಬ್ಬುಗೆಯ ಹದಿನಾಲ್ಕು ಲೋಕದ
ಮೊಬ್ಬುಗಳನೀಡಾಡಿ ನಭದೊಳ
ಗೊಬ್ಬನೇ ರವಿ ತೊಳಗಿ ಬೆಳಗುವವೋಲು ಪಾಂಡವರ
ಕೊಬ್ಬುಗಳ ನಿಲಿಸುವೆನು ಧರೆಯೊಳ
ಗೊಬ್ಬನೇ ದುರ್ಯೋಧನನು ಮ
ತ್ತೊಬ್ಬರಿಲ್ಲೆಂದೆನಿಸಿ ತೋರುವೆನೆಂದನಾ ಕರ್ಣ ॥9॥

೦೧೦ ವಿದುರ ಭೀಷ್ಮಾದಿಗಳು ...{Loading}...

ವಿದುರ ಭೀಷ್ಮಾದಿಗಳು ನಿನ್ನಯ
ಸದನದೊಳಗುಂಡುಟ್ಟು ಪರರ
ಭ್ಯುದಯವನೆ ಬಯಸುವರು ದೂರುವರೆಮ್ಮನವರುಗಳ
ಹದನ ನೀನೇ ಬಲ್ಲೆ ಸಾಕಿ
ನ್ನದರ ಮಾತೇಕರಸ ತನ್ನಯ
ಕದನವನು ಚಿತ್ತೈಸು ಸಾಕಿನ್ನೆಂದನಾ ಕರ್ಣ ॥10॥

೦೧೧ ಸಹಜವೀ ನುಡಿ ...{Loading}...

ಸಹಜವೀ ನುಡಿ ಕರ್ಣನಾಡಿದ
ನಹುದು ಪಾಂಡವರೆಂಬವರು ಕಡು
ಸಹಸಿಗಳು ಗೆಲಲರಿದು ಕುಹಕೋಪಾಯ ಮಾರ್ಗದಲಿ
ಅಹಿತರನು ಗೆಲಬಹುದು ಪರಿಕರ
ಸಹಿತವರುಗಳ ನಿಮ್ಮ ಚಿತ್ತಕೆ
ಬಹರೆ ತನ್ನಭಿಮತವನವಧರಿಸೆಂದನಾ ಶಕುನಿ ॥11॥

೦೧೨ ಐದು ಮುಖವೀರೈದು ...{Loading}...

ಐದು ಮುಖವೀರೈದು ಭುಜ ಹದಿ
ನೈದು ಕಂಗಳ ವಿಗಡ ರುದ್ರನು
ಮೇದಿನಿಯ ಮೇಲೊಂದು ಶಿರ ಭುಜವೆರಡನಳವಡಿಸಿ
ಆದಿಪುರುಷನು ಭೀಮ ಪೆಸರಿನ
ಲೈದೆ ಜನಿಸಿದನಾತನಿದಿರಲಿ
ಕೈದುಕಾರನದಾವನೈ ಹೇಳೆಂದನಾ ಶಕುನಿ

೦೧೩ ಅರಸ ಕೇಳ್ಬಿಲು ...{Loading}...

ಅರಸ ಕೇಳ್ಬಿಲು ವಿದ್ಯದಲಿ ಮೂ
ವರು ಕಣಾ ಸಾಮಥ್ರ್ಯ ಪುರುಷರು
ಧರೆಯೊಳೊಬ್ಬರಿಗೊಂದು ಗುಣ ಪಾರ್ಥಂಗೆ ಮೂರು ಗುಣ
ಭರಿತವಾಗಿಹುದಾತನೊಬ್ಬನ
ಸರಿಸದಲಿ ಮಾರಾಂತು ಜೀವಿಸಿ
ಮರಳಬಲ್ಲವನಾವನೈ ಹೇಳೆಂದನಾ ಶಕುನಿ ॥13॥

೦೧೪ ರಾಮಚನ್ದ್ರನ ಚರಣಯುಗ ...{Loading}...

ರಾಮಚಂದ್ರನ ಚರಣಯುಗ ನಿ
ಸ್ಸೀಮ ಭೀಷ್ಮಾಚಾರಿಯರ ಶಿರ
ವಾ ಮಹಾರಥ ದ್ರೋಣನೆದೆ ನಡುಗುವುದು ಸಮರದಲಿ
ಸೌಮನಸ್ಯನು ನಿಷ್ಪ್ರಕಂಪ ಸ
ನಾಮನರ್ಜುನ ದೇವನಿದಿರಲಿ
ಭೂಮಿಯಲಿ ಬಿಲ್ಲಾಳದಾವವನೆಂದನಾ ಶಕುನಿ ॥14॥

೦೧೫ ಶತ್ರುಗಳ ಸಂಹರಿಸಿ ...{Loading}...

ಶತ್ರುಗಳ ಸಂಹರಿಸಿ ರಾಜ್ಯವ
ನೊತ್ತಿಯಾಳುವೆನೆಂಬ ಸಾಹಸ
ಸತ್ವಗುಣ ನಿನಗಿಲ್ಲ ಪಾಂಡವರತುಲ ಭುಜಬಲರು
ಕೃತ್ರಿಮದ ಮುಖದಿಂದ ರಿಪುಗಳ
ಕಿತ್ತು ಹಾಯಿಕಿ ನೆಲನನೇಕ
ಚ್ಛತ್ರದಲಿ ಸಲಹುವುದು ಮತ ಕೇಳ್ ಎಂದನಾ ಶಕುನಿ ॥15॥

೦೧೬ ಸೋದರರುಗಳು ನೀವು ...{Loading}...

ಸೋದರರುಗಳು ನೀವು ನಿಮ್ಮೊಳು
ಭೇದ ಮಂತ್ರವ ಮಾಡುವುದು ಮ
ರ್ಯಾದೆಯೇ ನಾವ್ ನಿಮ್ಮಡಿಯಲರಮನೆಯ ಸೇವಕರು
ವಾದಿಸುವರಿತ್ತಂಡ ಸರಿ ನಮ
ಗಾದರೆಯು ಕಂಡುದ ನುಡಿಯ ಬೇ
ಕಾದರಿಸು ಮೇಣ್ ಮಾಣು ಬಿನ್ನಹವೆಂದನಾ ಶಕುನಿ ॥16॥

೦೧೭ ಪಕ್ಷವೆರಡೇ ಲೋಕದೊಳ್ ...{Loading}...

ಪಕ್ಷವೆರಡೇ ಲೋಕದೊಳ್ ಪಿತೃ
ಪಕ್ಷ ಮೇಣಾ ಮಾತೃಪಕ್ಷ ವಿ
ಪಕ್ಷ ತಂದೆಯ ದೆಸೆ ಸಪಕ್ಷವು ತಾಯ ದೆಸೆಯವರು
ತಕ್ಷಕನ ತೆರನಂತೆ ನಿಮ್ಮನು
ಭಕ್ಷಿಸುವರಾವಂಗದಲಿ ನೀ
ನೀಕ್ಷಿಸುವುದೈ ಪಾಂಡು ಪುತ್ರರನೆಂದನಾ ಶಕುನಿ ॥17॥

೦೧೮ ಮೊಳೆಯಲೇ ಮುರುಡಿಸಲು ...{Loading}...

ಮೊಳೆಯಲೇ ಮುರುಡಿಸಲು ಬೇಹುದು
ಬಲಿದ ಬಳಿಕದು ನಿನ್ನ ಹವಣೇ
ಇಳೆಯೊಳರ್ಧವನಿತ್ತು ರಿಪುಗಳ ಹೆಚ್ಚಿಸಿದ ಬಳಿಕ
ಗೆಲುವನಾವನು ದೇವ ದಾನವ
ರೊಳಗೆ ಭೀಮಾರ್ಜುನರ ಕೈ ಮನ
ದಳವನರಿಯಾ ಭಾರವೈ ಮೇಲೆಂದನಾ ಶಕುನಿ ॥18॥

೦೧೯ ಧಾರುಣಿಯೊಳು ಪಿಪೀಲಿಕೆಯು ...{Loading}...

ಧಾರುಣಿಯೊಳು ಪಿಪೀಲಿಕೆಯು ವಿ
ಸ್ತಾರದಲಿ ಮಾಡಿದ ಮನೆಯ ಕಾ
ಳೋರಗನು ಹೊಗುವಂತೆ ರಿಪು ಕುಂತೀಕುಮಾರಕರು
ವೈರದಲಿ ಸಪ್ತಾಂಗವನು ಕೈ
ಸೂರೆಗೊಂಬರು ತಪ್ಪದಿದಕೆ ವಿ
ಚಾರವನು ಕಾಲದಲಿ ಮಾಡುವುದೆಂದನಾ ಶಕುನಿ ॥19॥

೦೨೦ ಹಿನ್ದೆ ನೀನವರುಗಳ ...{Loading}...

ಹಿಂದೆ ನೀನವರುಗಳ ನಾನಾ
ಚಂದದಲಿ ನೋಯಿಸಿದೆ ಮನದಲಿ
ಕಂದು ಕುಂದದು ಕಷ್ಟ ವೃತ್ತಿಯನಾಚರಿಸುತಿಹರು
ಇಂದು ನೀನಾ ಪಾಂಡುಪುತ್ರರ
ನಂದಗೆಡಿಸದೆ ಬಿಟ್ಟೆಯಾದೊಡೆ
ಮುಂದೆ ಬೆಟ್ಟಿತು ರಾಜಕಾರಿಯವೆಂದನಾ ಶಕುನಿ ॥20॥

೦೨೧ ಇರುಬಿನಲಿ ಸಿಕ್ಕಿರ್ದ ...{Loading}...

ಇರುಬಿನಲಿ ಸಿಕ್ಕಿರ್ದ ಹುಲಿಯನು
ಮುರಿದು ಕಳೆಯುದೆ ತಳಪಟಕೆ ಬಿ
ಟ್ಟಿರಿಯ ಬಹುದೇ ಕೊಂದು ಕೂಗದೆ ಬಿಡುವುದೇ ಬಳಿಕ
ಕರುಬರಹ ಪಾಂಡವರಿಗೀಗಲೆ
ಹರುವ ನೆನೆ ಹೊರಬಿದ್ದರಾದೊಡೆ
ತರಿದು ಬಿಸುಡದೆ ಮಾಣ್ವರೇ ಹೇಳೆಂದನಾ ಶಕುನಿ ॥21॥

೦೨೨ ಹರಿಹಯನು ವೃತ್ರಾಸುರನ ...{Loading}...

ಹರಿಹಯನು ವೃತ್ರಾಸುರನ ಸಂ
ಹರಿಸಲರಿಯದೆ ಗರುವದಿಂದಿರು
ತಿರಲವನು ದಿನದಿನದೊಳಣುವಣು ಮಾತ್ರವನು ಬೆಳೆದು
ಧರೆಯ ತುಂಬಲು ತನ್ನ ಸತ್ವದ
ನೆರವಣಿಗೆಗೈದಿಸದೆ ನಾನಾ
ತೆರದೊಳಾಯಸಗೊಳ್ಳನೇ ಹೇಳೆಂದನಾ ಶಕುನಿ ॥22॥

೦೨೩ ಅಡವಿಯಲಿ ಜನಿಸಿದರು ...{Loading}...

ಅಡವಿಯಲಿ ಜನಿಸಿದರು ಬೆಳವಿಗೆ
ಯಡವಿಯೊಳಗಿನ್ನವರ ಬಾಳಿಕೆ
ಗಡವಿಯೇ ನೆಲೆಮನೆಯದಲ್ಲದೆ ಪಾಂಡುಪುತ್ರರಿಗೆ
ಪೊಡವಿಯೊಡೆತನ ಸಲ್ಲದವರನು
ನಡೆಸುವುದು ಕಾಲದಲಿ ರಾಜ್ಯವ
ಕೊಡುವುದಾವಂಗದಲಿ ಮತವಲ್ಲೆಂದನಾ ಶಕುನಿ ॥23॥

೦೨೪ ತಿಮಿರವಡಗಿದ ಲೋಕ ...{Loading}...

ತಿಮಿರವಡಗಿದ ಲೋಕ ಶಿಕ್ಷಾ
ಕ್ರಮಣವಡಗಿದ ದಂತಿ ಕರ್ಮ
ಭ್ರಮೆಗಳಡಗಿದ ಯೋಗಿ ರುಜೆಯಡಗಿದ ನರೋತ್ತಮನು
ಹಿಮವಡಗಿದ ಸರೋಜದಂತಿಹು
ದಮಲ ಮತ ಕೇಳ್ಪಗೆಗಳಡಗಿದ
ಡಮರ ಪದವೆನಿಸುವುದು ಚಿತ್ತೈಸೆಂದನಾ ಶಕುನಿ ॥24॥

೦೨೫ ಬಿಡದೆ ಸುಖದುಃಖಗಳೊಳೊನ್ದನು ...{Loading}...

ಬಿಡದೆ ಸುಖದುಃಖಗಳೊಳೊಂದನು
ಹಿಡಿದು ಸದ್ವ್ಯವಹಾರ ಮುಖದಲಿ
ನಡೆಯಲೊಂದರ ತುಷ್ಟಿಯೊಂದರ ನಷ್ಟ ತನಗಹುದು
ಹಿಡಿವುದಿಹಪರವೆರಡರೊಳಗಳ
ವಡಿಕೆ ತನಗಹುದೊಂದನೊಂದನು
ಬಿಡುವುದಲ್ಲದೆ ಬೇರೆ ಮತವಿಲ್ಲೆಂದನಾ ಶಕುನಿ ॥25॥

೦೨೬ ಭಾವ ಮೈದುನನಣ್ಣ ...{Loading}...

ಭಾವ ಮೈದುನನಣ್ಣ ತಮ್ಮನು
ಮಾವನಳಿಯನು ಪುತ್ರಮಿತ್ರರು
ಸೇವಕರು ಸಜ್ಜನರು ಸುಜನರು ಸತ್ಯಯುತರೆಂದು
ಭಾವಿಸದಿರಾರುವನು ನಿನ್ನಯ
ಜೀವವುಳ್ಳನ್ನೆಬರ ನಿನ್ನಯ
ದೈವವೇಗತಿಯೆಂದು ನಂಬಿಹುದೆಂದನಾ ಶಕುನಿ ॥26॥

೦೨೭ ಶತ್ರು ಶೇಷವಿದಲ್ಪವೆನ್ದುಳು ...{Loading}...

ಶತ್ರು ಶೇಷವಿದಲ್ಪವೆಂದುಳು
ಹುತ್ತ ಬರಲಾಗದು ಕಣಾ ಭೂ
ಪೋತ್ತಮರುಗಳು ವೈರಿ ರಾಯರ ವಂಶ ಬೀಜವನು
ಬಿತ್ತುವರೆ ನೇತ್ರಾವಳಿಯ ಮೀ
ಟೆತ್ತಿ ಕಾರಾಗಾರದೊಳಗೆ ಕ
ಳತ್ರ ಸಹಿತನಶದಲಧಿಕ ವ್ರತವ ಮಾಡೆಂದ ॥27॥

೦೨೮ ವಿಷವನಣುವೆನ್ದಳುಕದುಪಭೋ ...{Loading}...

ವಿಷವನಣುವೆಂದಳುಕದುಪಭೋ
ಗಿಸಲು ಕೊಲ್ಲದೆ ಬಿಡುವುದೇ ಕರ
ಗಸದ ನಡು ಬಡವಾದರೆಯು ಕುಯ್ದಿಕ್ಕದೇ ತರುವ
ಶಿಶುವಿವನು ಸಾಮಥ್ರ್ಯ ಪುರುಷನೆ
ಪುಸಿಕಣಾಯೆಂದುಳುಹಿದೊಡೆ ರ
ಕ್ಕಸನಹನು ಮುಂದಕ್ಕೆ ತನಗವನೆಂದನಾ ಶಕುನಿ ॥28॥

೦೨೯ ಕಾಲವನು ಗೂಗೆಗಳು ...{Loading}...

ಕಾಲವನು ಗೂಗೆಗಳು ನಿರ್ಜರ
ರೇಳಿಗೆಯನಾ ದೈತ್ಯರುಗಳು ತ
ಮಾಳಿ ರವಿರಶ್ಮಿಗಳನಾ ಬಲು ನಿದ್ರೆಯನು ಚೋರ
ಕಾಲ ಭುಜಗನು ಗರುಡನುಳಿವನು
ತಾಳದಂದದಿ ಪಾಂಡವರು ನಿ
ನ್ನೇಳಿಗೆಯ ಸೈರಿಸರು ಚಿತ್ತೈಸೆಂದನಾ ಶಕುನಿ ॥29॥

೦೩೦ ವಿಗಡ ರುದ್ರನು ...{Loading}...

ವಿಗಡ ರುದ್ರನು ಲೋಚನಾಗ್ನಿಯೊ
ಳೊಗುಮಿಗೆಯ ಕೋಪದಲಿ ಕಾಮನ
ಮಿಗೆ ದಹಿಸಿದಂದದಲಿ ರಿಪು ಕುಂತೀಕುಮಾರಕರ
ಹೊಗೆದು ಕಳೆ ಲಾಕ್ಷಾಭವನದಲಿ
ಹಗೆಗೆ ಹರಿವಹುದಿಲ್ಲದಿರ್ದೊಡೆ
ವಿಗಡಿಸುವುದೈ ರಾಜಕಾರ್ಯವಿದೆಂದನಾ ಶಕುನಿ ॥30॥

೦೩೧ ಹಿಡಿವ ಫಣಿಯನು ...{Loading}...

ಹಿಡಿವ ಫಣಿಯನು ಹೊಡೆವ ಸಿಡಿಲನು
ಜಡಿವ ಮಾರಿಯ ನಲಿವ ರುಜೆಯನು
ಮಡಿವ ದಿನವನು ಹಾನಿವೃದ್ಧಿಯ ಹೆಚ್ಚು ಕುಂದುಗಳ
ಕಡಿವ ಹಗೆಯನು ಕಾಲಕರ್ಮದ
ಗಡಣವನು ಸುಖದುಃಖದುದಯದ
ಕಡೆ ಮೊದಲ ಕಾಣಿಸುವನಾವವನೆಂದನಾ ಶಕುನಿ ॥31॥

೦೩೨ ಇನಿತು ಚಿನ್ತಿಸಲೇಕೆ ...{Loading}...

ಇನಿತು ಚಿಂತಿಸಲೇಕೆ ಕೌರವ
ಜನಪ ನಿಮ್ಮಡಿಗಳಿಗೆ ತಾನೊಂ
ದನುವ ಬಿನ್ನಹ ಮಾಡುವೆನು ಪಾಂಡವರ ನೆಳಲಿರಲು
ನಿನಗೆ ರಾಜ್ಯವನಾಳ್ವ ಫಲ ಸಂ
ಜನಿಸಲರಿಯದು ಕಾಲದಲಿ ನೀ
ನೆನೆ ಉಪಾಯವನೊಂದನೆಂದು ಕಳಿಂಗ ಕೈಮುಗಿದ ॥32॥

೦೩೩ ದೇವ ದಾನವರನ್ತೆ ...{Loading}...

ದೇವ ದಾನವರಂತೆ ಹದ್ದಿನ
ಹಾವಿನೋಲತಿ ವೈರ ಬಂಧದ
ಠಾವು ಠವಣೆಯಲಿರುತ ಭೇದಿಸುವಂತೆ ಭೇದಿಸುತ
ಕಾವವರ ಕಾವುತ್ತ ಕಂಟಕ
ಜೀವಿಗಳನಪಹರಿಸುತಂತ
ರ್ಭಾವಶುದ್ಧಿಯೊಳಿಳೆಯನಾಳುವುದೆಂದನಾ ಶಕುನಿ ॥33॥

೦೩೪ ಮೃತ್ಯುವಿನ ತಾಳಿಗೆಯೊಳಗ್ಗದ ...{Loading}...

ಮೃತ್ಯುವಿನ ತಾಳಿಗೆಯೊಳಗ್ಗದ
ಶತ್ರುಗಳ ಸಾಮೀಪ್ಯದಲಿ ದು
ರ್ವೃತ್ತರೋಲಗದೊಳಗೆ ಸಿಂಹದ ಗುಹೆಯೊಳಹಿಪತಿಯ
ಹುತ್ತಿನೊಳಗಿಹವೋಲು ಸಲೆ ಬಾ
ಳುತ್ತಲಂತಃಪುರದೊಳರಸಿರ
ಲತ್ಯಧಿಕದೆಚ್ಚರಿಕೆಯಿರ ಬೇಕೆಂದನಾ ಶಕುನಿ ॥34॥

೦೩೫ ಹಗೆಯ ಹೆಙ್ಗಳನರಮನೆಗಳೊಳು ...{Loading}...

ಹಗೆಯ ಹೆಂಗಳನರಮನೆಗಳೊಳು
ಪೊಗಿಸಲಾಗದು ತನಗವರು ಹೇ
ಳಿಗೆಯ ಹಾವಿನವೋಲು ಸುಖತರವಲ್ಲವರಿ ನೃಪರ
ಮಗಳ ಮಕ್ಕಳ ದೆಸೆಯವರನೋ
ಲಗಿಸುವರ ಬಾಹತ್ತರ ನಿಯೋ
ಗಿಗಳ ನಂಬುವುದುಚಿತವೇ ಹೇಳೆಂದನಾ ಶಕುನಿ ॥35॥

೦೩೬ ದೈವ ಹೊಡೆದನ್ದದಲಿ ...{Loading}...

ದೈವ ಹೊಡೆದಂದದಲಿ ಬೆರತು ಸ
ಭಾ ವಲಯದಲಿ ಗರ್ವ ವಿಭ್ರಮ
ಭಾವ ಭೂಷಿತನಾಗಿ ವೈಹಾಯಸವನೀಕ್ಷಿಸುತ
ಹಾವಿನಂದದೊಳಿರದೆ ಹಾಸ್ಯ ರ
ಸಾವಲಂಬನನಾಗದೆಯು ಸುಖ
ಜೀವಿಯಾಗಿಹುದುತ್ತಮವು ಕೇಳ್ ಎಂದನಾ ಶಕುನಿ ॥36॥

೦೩೭ ಹೀನಮುಖ ಬಹುಮುಖ ...{Loading}...

ಹೀನಮುಖ ಬಹುಮುಖ ಪರಾಙ್ಮುಖ
ದೀನಮುಖ ವಾಚಾಲಮುಖವ
ಜ್ಞಾನಮುಖವಂತರ್ಮುಖ ಬಹಿರ್ಮುಖದ ಕಾರ್ಯದಲಿ
ಆ ನರೇಂದ್ರನ ವರ್ತನಕೆ ದು
ಸ್ಥಾನವಾಗದೆ ಬಿಡದು ಸಂಶಯ
ವೇನಿದಕೆ ಕುರುರಾಯ ಚಿತ್ತೈಸೆಂದನಾ ಶಕುನಿ ॥37॥

೦೩೮ ಶಯನದಲಿ ವಹ್ನಿಯಲಿ ...{Loading}...

ಶಯನದಲಿ ವಹ್ನಿಯಲಿ ವೈಹಾ
ಳಿಯಲಿ ಬೇಟೆಯಲೂಟದಲಿ ಕೇ
ಳಿಯಲಿ ಸುರತ ಕ್ರೀಡೆಯಲಿ ಮಜ್ಜನದ ಸಮಯದಲಿ
ಜಯದ ಜೋಕೆಯಲೋಲಗದ ಮರ
ವೆಯಲಿ ವಾರಸ್ತ್ರೀಯರುಗಳಲಿ
ಲಯವನೈದಿಸಬಹುದು ಚಿತ್ತೈಸೆಂದನಾ ಶಕುನಿ ॥38॥

೦೩೯ ರುಜೆಯನಲುಗುವ ರದನವ ...{Loading}...

ರುಜೆಯನಲುಗುವ ರದನವ ದ್ರುಗು
ರಜವನನುಚಿತಜಾತ ಧೂಮ
ಧ್ವಜವ ರುಣವನವಿದ್ಯೆಯನು ಗೃಹವಾಸ ಕುಂಡಲಿಯ
ವೃಜಿನವನು ಕಂಪಿತವ ವೈರಿ
ವ್ರಜವನುಳುಹುವನೆಗ್ಗನೆಂಬಿದು
ಸುಜನರಭಿಮತ ನಿನ್ನಮತವೇನೆಂದನಾ ಶಕುನಿ ॥39॥

೦೪೦ ಮಣಿದು ಕೂಪದ ...{Loading}...

ಮಣಿದು ಕೂಪದ ಜೀವನವ ಕಡೆ
ಗಣಿಸದೇ ಘಟಯಂತ್ರ ಮೃಗರಿಪು
ಹಣಿಗಿದರೆ ಹರಿಣಂಗೆ ಗೆಲವೇ ಕಾರ್ಯಗತಿಯರಿದು
ಮಣಿವುದಳುಕುವುದಾವ ಪರಿಯಿಂ
ದೆಣಿಸಿ ಮನದಲಿ ವೈರಿ ರಾಯರ
ಹಣಿದವಾಡುವುಪಾಯವಿದು ಕೇಳ್ ಎಂದನಾ ಶಕುನಿ ॥40॥

೦೪೧ ಅಹಿಯ ಬಾಧೆಯ ...{Loading}...

ಅಹಿಯ ಬಾಧೆಯ ಬಲೆಗೆ ಸಿಲುಕಿದ
ಮಿಹಿರ ಬಿಂಬದವೋಲು ಮಾಯಾ
ವಿಹರಣದ ವೀಥಿಯಲಿ ಸಿಕ್ಕಿದ ಜೀವರುಗಳಂತೆ
ಅಹಿತರುಪಟಳದೊಳಗೆ ಸಿಲುಕದೆ
ಕುಹಕರವದಿರ ಹರಿವ ನೆನೆ ಲೇ
ಸಹುದು ಕಾಲಕ್ಷೇಪವಿದಕೇನೆಂದನಾ ಶಕುನಿ ॥41॥

೦೪೨ ನಮ್ಬುವರ ನೆರೆ ...{Loading}...

ನಂಬುವರ ನೆರೆ ನಂಬು ನಂಬದ
ಡಂಬಕರ ನಂಬದಿರು ಸಂಗರ
ವೆಂಬ ಮಾತಿಗೆ ಹಂಬಲಿಸಿ ಬೆಂಬೀಳ್ವ ಬಾಹಿರರ
ನಂಬಿರದಿರರಿರಾಯ ಹನನ ವಿ
ಳಂಬನವ ಮಾಡದಿರು ರೋಷಾ
ಡಂಬರವ ರಚಿಸದಿರು ಬಹಿರಂಗದಲಿ ನೀನೆಂದ ॥42॥

೦೪೩ ಖೂಳನಹ ದಾತಾರನನು ...{Loading}...

ಖೂಳನಹ ದಾತಾರನನು ದು
ರ್ಮೇಳನಹ ಮಿತ್ರನನು ತನಗನು
ಕೂಲೆಯಲ್ಲದ ಸತಿಯನಂತರ್ದಾಯಿಯಹ ನರನ
ವ್ಯಾಳಯುತವಹ ನಿಳಯವಿನಿತುವ
ಕಾಲದಲಿ ವರ್ಜಿಸುವುದಲ್ಲದೊ
ಡೂಳಿಗವು ಹಿರಿದಹುದು ಚಿತ್ತೈಸೆಂದನಾ ಶಕುನಿ ॥43॥

೦೪೪ ಎಲ್ಲರಿಮ್ ಬಹುಧನವ ...{Loading}...

ಎಲ್ಲರಿಂ ಬಹುಧನವ ಕೊಳು ನಿ
ನ್ನಲ್ಲಿ ಕಾಣಿಯ ಬರಿದೆ ಸೋಲದಿ
ರಿಲ್ಲವೆನ್ನದೆ ನುಡಿದು ಕಾಲಕ್ಷೇಪವನು ಮಾಡು
ಒಳ್ಳಿದನು ನಮಗೆಂಬ ನಯ ನುಡಿ
ಯೆಲ್ಲರಲಿ ಬೆಚ್ಚಂತೆ ರಿಪುಗಳ
ಗೆಲ್ಲಗೆಡಹುವ ಮಂತ್ರವಿದು ಕೇಳ್ ಎಂದನಾ ಶಕುನಿ ॥44॥

೦೪೫ ಧನವನಿತ್ತಾದೊಡೆಯು ಸಹ ...{Loading}...

ಧನವನಿತ್ತಾದೊಡೆಯು ಸಹ ಭೋ
ಜನವನುಂಡಾದೊಡೆಯು ಮೇಣ್ ನಿಜ
ತನುಜೆಯರನಿತ್ತಾದೊಡೆಯು ಬಳಿಸಂದು ಬೇಸರದೆ
ತನುವ ಬೆರೆಸಿದ್ದಾದೊಡೆಯು ನೂ
ತನಗುಣವ ನುಡಿದಾದೊಡೆಯು ರಿಪು
ಜನಪತಿಯ ವಶ ಮಾಳ್ಪುದುಚಿತವಿದೆಂದನಾ ಶಕುನಿ ॥45॥

೦೪೬ ಕೋಶ ಪಾನಾದಿಗಳ ...{Loading}...

ಕೋಶ ಪಾನಾದಿಗಳ ಮಾಡಿ ಮ
ಹೀಸುರರ ಮೇಲಾಯುಧಂಗಳ
ಸೂಸಿ ದೈವವ ಮುಟ್ಟಿ ದಿವ್ಯಾಜ್ಞೆಗಳಲೊಡಬಡಿಸಿ
ಹೇಸದರಿ ಭೂಪಾಲರನು ನಿ
ಶ್ಯೇಷವೆನಿಸುವುದಲ್ಲದಿರ್ದೊಡೆ
ಪೈಸರಿಸುವುದು ರಾಜಕಾರ್ಯವಿದೆಂದನಾ ಶಕುನಿ ॥46॥

೦೪೭ ನರಕವಿಲ್ಲದ ನರರು ...{Loading}...

ನರಕವಿಲ್ಲದ ನರರು ನಾರಿಯ
ರುರುಬೆಯಿಲ್ಲದ ಯತಿಗಳಸುರರ
ವಿರಸವಿಲ್ಲದ ಸುರರು ಮಾಯಾಪಾಶವನು ಹರಿದ
ಪರಮ ತತ್ವಜ್ಞಾನಿಯವೋಲೀ
ಧರೆಯ ನರಪಾಲಕರುಗಳು ಹಗೆ
ಹರಿದು ಹೋಗಲಸಾಧ್ಯವಹುದೇನೆಂದನಾ ಶಕುನಿ ॥47॥

೦೪೮ ಮಸಗೆ ಮೂಡಿದ ...{Loading}...

ಮಸಗೆ ಮೂಡಿದ ಹೊಲನು ದುಷ್ಟ
ಪ್ರಸರದೇಳಿಗೆ ಪಾಪಿಯೋಲಗ
ಹುಸಿಯ ಬಾಳುವೆ ಹುದುವಿನಾರಂಭದ ಫಲೋದಯವು
ನಸಿದು ಹೋಗದೆ ಲೋಕದೊಳಗವು
ಹೆಸರುವಡೆವವೆ ಹಗೆಯ ಹೆಚ್ಚುಗೆ
ಹಸನ ಕೊಡುವುದೆ ರಾಯ ಚಿತ್ತೈಸೆಂದನಾ ಶಕುನಿ ॥48॥

೦೪೯ ಜಾತಿ ಬಾವನ್ನದಲಿ ...{Loading}...

ಜಾತಿ ಬಾವನ್ನದಲಿ ಸರ್ಪದ
ಭೀತಿ ಸತ್ಪುರುಷರಿಗೆ ದುರ್ಜನ
ಭೀತಿ ದೇವಾದ್ಯರಿಗೆ ದನುಜಾದಿಗಳ ಬಲು ಭೀತಿ
ಜಾತ ಮಾತ್ರಕೆ ಜನನ ಮರಣದ
ಭೀತಿ ಬೆಂಬಿಡದಂತೆ ಗೋತ್ರಜ
ಭೀತಿ ಭೂಪಾಲರಿಗೆ ಹಿರಿದಹುದೆಂದನಾ ಶಕುನಿ ॥49॥

೦೫೦ ಕರಣಿಕರು ಕರಣಿಕರೊಡನೆ ...{Loading}...

ಕರಣಿಕರು ಕರಣಿಕರೊಡನೆ ಸಹ
ಚರರು ಸಹಚರರೊಡನೆ ಸಾವಂ
ತರಲಿ ಸಾವಂತರುಗಳಾ ಮಂತ್ರಿಯಲಿ ಮಂತ್ರಿಗಳು
ತರುಣಿಯರು ತರುಣಿಯರೊಡನೆ ಪರಿ
ಕರರು ಪರಿಕರರೊಡನೆಯಿರಲೊರ
ಸೊರಸು ಮಿಗೆ ಮಸೆವುದು ಕಣಾ ಭೂಭುಜನೆ ಕೇಳ್ ಎಂದ ॥50॥

೦೫೧ ವ್ಯಾಕುಲಿತ ವಿಪ್ರರ ...{Loading}...

ವ್ಯಾಕುಲಿತ ವಿಪ್ರರ ವಿಸತಿಯ ದಿ
ವಾಕರನ ಲೋಕಾಯತರ ರ
ತ್ನಾಕರನ ಲಾವಕರ ಹಿಸುಳರ ದಾಯಭಾಗಿಗಳ
ಶೋಕಿಗರ ಮಾಯಾವಿಗಳ ದ
ರ್ವೀಕರನ ವಿನಿಯೋಗಿಗಳ ಸ
ರ್ವೈಕ ಮತ್ಸರದೊಳಗೆ ಬದುಕುವನಾವ ಪೇಳೆಂದ ॥51॥

೦೫೨ ಮಞ್ಜು ಮಹಿಯನು ...{Loading}...

ಮಂಜು ಮಹಿಯನು ಮುಸುಕುವಂತೆ ಧ
ನಂಜಯನು ಕಾನನವ ಸುಡುವಂ
ತಂಜಿಕೆಗಳುಮ್ಮಾಹವನಂ ಹೊಯ್ದೊರಸುವಂದದಲಿ
ರಂಜಕರು ಪಾಂಡವರು ನಿನ್ನನು
ಭಂಜಿಸುವರಾವಂಗದಲಿ ನವ
ಕುಂಜರನ ಕಾಲಾಟ ಸಿಂಹಕೆ ಸೇರುವುದೆಯೆಂದ ॥52॥

೦೫೩ ದನಿಗೆ ನಡೆದೊಳ ...{Loading}...

ದನಿಗೆ ನಡೆದೊಳ ಪೊಕ್ಕು ಮರ ಗೂ
ಡಿನಲಿ ಸಿಲುಕಿದ ಹುಲಿಯವೋಲ್ ಕಾ
ನನದಿ ಬೀಸಿದ ಬಲೆಯೊಳಗೆ ಗಾನಕ್ಕೆ ಮನ ಸೋಲ್ದು
ಹನನವರಿಯದ ಮೃಗದವೋಲಿರು
ಬಿನಲಿ ಕೆಡಹಿದ ಕರಿಯವೋಲ್ ರಿಪು
ಜನಪರಭ್ಯುದಯದ ವಿನಾಶವನೆಸಗ ಬೇಕೆಂದ ॥53॥

೦೫೪ ಎನ್ದು ದುರ್ಬೋಧೆಗಳ ...{Loading}...

ಎಂದು ದುರ್ಬೋಧೆಗಳ ನಾನಾ
ಚಂದದಲಿ ಬೋಧಿಸಿ ಸುನೀತಿಯ
ನಂದಗೆಡಿಸಿ ತದೀಯ ವಂಶಚ್ಛೇದ ಮಾರ್ಗವನು
ಒಂದುಗೂಡಿ ಸುಯೋಧನಂಗಾ
ನಂದವೆನಿಸಿ ಕಳಿಂಗ ಲೋಕವ
ಕೊಂದನೈ ಜನಮೇಜಯ ಕ್ಷಿತಿಪಾಲ ಕೇಳ್ ಎಂದ ॥54॥

೦೫೫ ಎಮ್ಮ ಬಹುಮಾನಾವಮಾನವು ...{Loading}...

ಎಮ್ಮ ಬಹುಮಾನಾವಮಾನವು
ನಿಮ್ಮದಲ್ಲದೆ ಬೇರೆ ನಮ್ಮಯ
ಸೊಮ್ಮು ಸಂಬಂಧದಲಿ ಹಿತವರ ಕಾಣೆ ನಾನಿನ್ನು
ಸಮ್ಮತದಿ ಪಾಂಡವರಿಗಗ್ನಿಯ
ಲೊಮ್ಮೆ ಹರಿವನು ನೆನೆವೆನೊದವಿದ
ಡೆಮ್ಮ ಸುಕೃತೋದಯದ ಫಲವೆಂದನು ಸುಯೋಧನನು ॥55॥

೦೫೬ ಎನೆ ಕಳಿಙ್ಗಾದಿಗಳು ...{Loading}...

ಎನೆ ಕಳಿಂಗಾದಿಗಳು ತಂತ
ಮ್ಮನುಮತವ ಹೇಳಿದರು ಕೌರವ
ಜನಪನವರಿಗೆ ಕೇಡ ನಿಶ್ಚೈಸಿದನು ಮನದೊಳಗೆ
ಜನಕನಲ್ಲಿಗೆ ನಡುವಿರುಳು ಬಂ
ದನುನಯದೊಳೀ ಮಾತ ತೆಗೆದೆಂ
ದನು ವೃಕೋದರನೂಳಿಗವನರ್ಜುನನ ಸಾಹಸವ ॥56॥

೦೫೭ ಅರಿಗಳುದ್ಭವವಿನ್ನು ಗಣ್ಟಲ ...{Loading}...

ಅರಿಗಳುದ್ಭವವಿನ್ನು ಗಂಟಲ
ನರಿವುದೆಮ್ಮನು ನೂರು ಮಕ್ಕಳ
ನರಸ ಬರಿದೇ ಹಡೆದು ಕೆಡಿಸಿದೆ ತಾಯ ಜವ್ವನವ
ಇರಲಿ ಭೀಮಾರ್ಜುನರು ಹಸ್ತಿನ
ಪುರದೊಳೆಮ್ಮಿನಿಬರನು ದೇಶಾಂ
ತರಕೆ ನೇಮಿಸು ಜೀಯ ನೂಕದು ಭೀಮನೊಡನೆಂದ ॥57॥

೦೫೮ ಅಕಟ ಮಗನೇ ...{Loading}...

ಅಕಟ ಮಗನೇ ಧರ್ಮಸುತ ಬಾ
ಧಕನೆ ಭೀಮಾರ್ಜುನರ ಮತಿ ಕಂ
ಟಕದೊಳೆರಗದು ಮೀರಿ ನಡೆಯರು ಧರ್ಮನಂದನನ
ಸಕಲ ರಾಜ್ಯಕೆ ಪಾಂಡುವೇ ಪಾ
ಲಕನು ತನ್ನೊಳು ತಪ್ಪಿದನೆ ಬಿಡು
ವಿಕಳ ಮತಿಗಳ ಮಾತನೆಂದನು ಮಗಗೆ ಧೃತರಾಷ್ಟ್ರ ॥58॥

೦೫೯ ಬೊಪ್ಪ ಬಿನ್ನಹವವರ ...{Loading}...

ಬೊಪ್ಪ ಬಿನ್ನಹವವರ ಜನಕನು
ತಪ್ಪಿ ನಡೆಯನು ನಿಮಗೆ ನೀವಿ
ನ್ನೊಪ್ಪಿಸುವುದಾ ಪಾಂಡುಸುತರಿಗೆ ರಾಜ್ಯ ವೈಭವವ
ಅಪ್ಪುದಿಳೆ ಧರ್ಮಜನ ತರುವಾ
ಯಪ್ಪುದಾ ವಿಧಿಯಲಿ ಸಂತತಿ
ತಪ್ಪದವರಿಗೆ ಸಲಲಿ ನೆಲವಿದು ಹೊಲ್ಲೆಹೇನೆಂದ ॥59॥

೦೬೦ ಜನಪ ಸುಖದಲಿ ...{Loading}...

ಜನಪ ಸುಖದಲಿ ನಿಮ್ಮ ತಮ್ಮನ
ತನುಜರೊಡನೆಯು ರಾಜ್ಯ ಮಾಡುವು
ದನುನಯವಲಾ ಬೀಳುಕೊಡುವುದು ನಮ್ಮ ನೂರ್ವರನು
ಜನಪರುಂಟೋಲೈಸಿ ಕೊಂಬರೆ
ತನಗಿರದೆ ಖಂಡೆಯದ ಸಿರಿ ಕರೆ
ಜನನಿಯನು ಬೀಳ್ಕೊಂಬೆವಿನ್ನೇನೆಂದು ನಿಂದಿರ್ದ ॥60॥

೦೬೧ ಎಲೆ ಮಗನೆ ...{Loading}...

ಎಲೆ ಮಗನೆ ಎನ್ನಾಣೆ ಬಾ ಕುರು
ಕುಲತಿಲಕ ನೀ ಹೋಗಲೆನ್ನೊಡ
ಲುಳಿವುದೇ ಮರಿಯಾನೆ ಬಾರೈ ಕಂದ ಬಾಯೆಂದು
ಸೆಳೆದು ಬಿಗಿಯಪ್ಪಿದನು ಕಂಬನಿ
ದುಳುಕಿದನು ಹೇಳಿನ್ನು ಮೇಲಣ
ಬಳಕೆಯನು ರಿಪುರಾಜ ಕಾರ್ಯಕೆ ಬುದ್ಧಿಯೇನೆಂದ ॥61॥

೦೬೨ ನೀರ ವಿಷವಿಕ್ಕಿದೆವು ...{Loading}...

ನೀರ ವಿಷವಿಕ್ಕಿದೆವು ಕಿಚ್ಚಿನ
ಭಾರವಣೆಯೇನಹುದೊ ಪುಣ್ಯವ
ಹೋರಿಸುವ ಒದಗಿದರೆ ಹೋಗಲಿ ನಮ್ಮ ಹಗೆ ಹರಿದು
ಓರಣಿಸಿತೈ ವೈರಿಗಳ ವಿ
ಸ್ತಾರ ಮೆರೆಯಲಿ ಜೀಯ ಜೂಜಿನ
ಬಾರುಗುತ್ತಿದು ನಿಮ್ಮ ಚಿತ್ತಕೆ ಬಹಡೆ ಮಾಡುವೆವು ॥62॥

೦೬೩ ಆವ ತೆರದಲಿ ...{Loading}...

ಆವ ತೆರದಲಿ ವೈರಿ ಭಟಕುಲ
ದಾವಿಗೆಯನಿಡಿಸುವಿರಿ ನಿಮ್ಮೊಳ
ಗಾವು ಹೊರಗೇ ಮಗನೆ ಸೊಗಸೆನೆ ನಿಮ್ಮ ವೈಭವಕೆ
ಸಾವರಾವಂದದಲಿ ಮಿಗೆ ಸಂ
ಭಾವಿಸುವುದಾ ತೆರನ ನೀ ಹೇ
ಳಾವು ಸೊಗಸುವೆವೆಂದು ನುಡಿದನು ಮಗಗೆ ಧೃತರಾಷ್ಟ್ರ ॥63॥

೦೬೪ ಕರೆಸಿ ಪಾಣ್ಡುಕುಮಾರಕರ ...{Loading}...

ಕರೆಸಿ ಪಾಂಡುಕುಮಾರಕರ ನೀ
ಧರೆಯ ಹಸುಗೆಯ ಮಾಡಿಕೊಡು ಕರಿ
ತುರಗ ಭಂಡಾರವನು ಸಹ ದಾಯಾದ ವಿಷಯದಲಿ
ಇರವನವರಿಗೆ ವಾರಣಾವತಿ
ಪುರದೊಳಗೆ ಪರುಠವಿಸಿ ಕೊಡು ತಾ
ನುರುಹಿ ಸುಡುವೆನು ಬಳಿಕ ಲಾಕ್ಷಾಭವನ ರಚನೆಯಲಿ ॥64॥

೦೬೫ ಅಹುದು ಮಗನೇ ...{Loading}...

ಅಹುದು ಮಗನೇ ಮಂತ್ರವಿದು ಮತ
ವಹುದು ನಮಗೀ ಭೀಷ್ಮ ವಿದುರರು
ಕುಹಕಿಗಳು ಕೃತಭಿನ್ನವಾದರೆ ಭಾರವದು ಮೇಲೆ
ಗಹನ ಗತಿಯಲಿ ಗೂಢತರ ಸ
ನ್ನಿಹಿತ ಕರ್ಮಕಲಾಪದಲಿ ರಿಪು
ದಹನ ಸಿದ್ಧಿಯ ನೆನೆವುದೆಂದನು ಮಗಗೆ ಧೃತರಾಷ್ಟ್ರ ॥65॥

೦೬೬ ಜನಕನನು ಬೀಳ್ಕೊಣ್ಡು ...{Loading}...

ಜನಕನನು ಬೀಳ್ಕೊಂಡು ಕೌರವ
ಜನಪ ತನ್ನರಮನೆಯ ಸಚಿವರೊ
ಳನುಪಮಿತ ವಿಶ್ವಾಸ ಸೂಚಕನನು ಪುರೋಚನನ
ನೆನೆದ ರೌರವ ರಾಜಕಾರ್ಯದ
ಘನವನರುಹಿ ಸಮಗ್ರ ಧನ ಸಾ
ಧನವ ಜೋಡಿಸಿ ಕೊಟ್ಟು ಕಳುಹಿದನವನ ಗುಪ್ತದಲಿ ॥66॥

೦೬೭ ಆ ಪುರೋಚನನೆಮ್ಬವನು ...{Loading}...

ಆ ಪುರೋಚನನೆಂಬವನು ಬಲು
ಪಾಪಕರ್ಮನು ಕುರುಪತಿಗೆ ಬಳಿ
ಕಾ ಪುರಾಂತರದಿಂದ ಬಂದನು ವಾರಣಾವತಿಗೆ
ಆ ಪುರದ ಜನವರಿಯದಂತಿರೆ
ಕಾಪುರುಷನಳವಡಿಸಿದನು ನಸು
ದೀಪ ತಾಗಿದೊಡೇಕರೂಪಹ ರಾಜಭವನವನು ॥67॥

೦೬೮ ನಿಗಮ ಸಂಸ್ಥಿತ ...{Loading}...

ನಿಗಮ ಸಂಸ್ಥಿತ ವಾಸ್ತು ರಚನಾ
ದಿಗಳನಾಯ ವ್ಯಯದ ತಾರಾ
ದಿಗಳ ರಾಶಿಗ್ರಹ ಬಲದ ವಿಪರೀತ ಯೋಗದಲಿ
ಹಗಲು ತೀರಲು ತಳಿತ ಕೈ ದೀ
ವಿಗೆಯ ಹಂತಿಯ ಬೆಡಗಿನಲಿ ಕೇ
ಡಿಗನು ಕೃತ್ರಿಮ ರಚನೆಯಲಿ ಮಾಡಿಸಿದನರಮನೆಯ ॥68॥

೦೬೯ ಅರಗಿನಲಿ ಭಿತ್ತಿಗಳ ...{Loading}...

ಅರಗಿನಲಿ ಭಿತ್ತಿಗಳ ನವ ಸ
ಜ್ಜರಸ ಗುಡ ಮಿಶ್ರದಲಿ ನೆಲೆಯು
ಪ್ಪರಿಗೆಗಳನವರಲಿ ಕವಾಟ ಸ್ತಂಭ ವೇದಿಗಳ
ವಿರಚಿಸಿದ ನವಸೌಧ ಭದ್ರಾ
ಸ್ತರಣ ನಂದ್ಯಾವರ್ತದಲಿ ಪರಿ
ಪರಿಯ ಬಿನ್ನಾಣದೊಳಗರಗಿನ ಮನೆಯ ಮಾಡಿಸಿದ ॥69॥

೦೭೦ ಹಿರಿಯ ಭವನದ ...{Loading}...

ಹಿರಿಯ ಭವನದ ಸುತ್ತುವಳಯದ
ಮುರುಹಿನಲಿ ಮನೆ ಮನೆಗಳಾ ಮಂ
ದಿರ ನಿಕಾಯಕೆ ಬಾಗಿಲೊಂದಾ ದ್ವಾರ ದೇಶದಲಿ
ಇರವು ತನ್ನದು ಬಾಗಿಲಿಕ್ಕಿದು
ಹೊರಗೆ ಮುದ್ರಿಸಿ ಕಿಚ್ಚ ಚುಚ್ಚುವ
ಪರುಠವಣೆಯಲಿ ಖಳ ಪುರೋಚನನಂದು ನಿರ್ಮಿಸಿದ ॥70॥

೦೭೧ ಧರಣಿಪತಿ ಕೇಳಿತ್ತ ...{Loading}...

ಧರಣಿಪತಿ ಕೇಳಿತ್ತ ಹಸ್ತಿನ
ಪುರದೊಳಗೆ ಕುಂತೀ ಕುಮಾರರ
ಕರೆಸಿ ಕಟ್ಟೇಕಾಂತದಲಿ ಧೃತರಾಷ್ಟ್ರ ಭೂಪಾಲ
ಬೆರಗು ಬಿನ್ನಾಣದಲಿ ಮಕ್ಕಳ
ಮರುಳು ಮಾಡಿದನೇನ ಹೇಳುವೆ
ನುರಿವನೆಯ ಬೀಡಾರದಲಿ ಬಿಡಿಸಲ್ಕೆ ಮನದಂದ ॥71॥

೦೭೨ ದುರುಳರೀ ಕೌರವರು ...{Loading}...

ದುರುಳರೀ ಕೌರವರು ನೀವತಿ
ಗರುವರವದಿರು ಪಾಪಕರ್ಮರು
ಪರಮ ಪುಣ್ಯರು ನೀವು ತನ್ನವದಿರು ಕುಮಂತ್ರಿಗಳು
ಎರಳೆ ತೋಳನ ಸಾದು ಸುಣ್ಣದ
ನೆರವಿಗದುವಾವಗೆಯ ಸೇರುವೆ
ಯರಸ ನಿನ್ನೊಡನೆನ್ನ ಕುನ್ನಿಗಳೆನುತ ಬಿಸುಸುಯ್ದ ॥72॥

೦೭೩ ತನ್ದೆಯಿಲ್ಲದ ನಿಮಗೆ ...{Loading}...

ತಂದೆಯಿಲ್ಲದ ನಿಮಗೆ ಹಿತರಾ
ರೆಂದು ಮರುಗುವೆನೆನ್ನ ಮಕ್ಕಳು
ಕೊಂದು ಹಿಂಡೆಯ ಕೂಳನುಂಬರೆ ಹೇಸುವವರಲ್ಲ
ಇಂದು ನಿಮಗವರಿಂದಲುಪಹತಿ
ಬಂದುದಾದರೆ ತನ್ನ ತಲೆಯಲಿ
ನಿಂದು ಹೊರೆವುದಕೀರ್ತಿ ಕಿಲ್ಬಿಷ ಮಗನೆ ಕೇಳ್ ಎಂದ ॥73॥

೦೭೪ ತಾತ ಕೆಡುವಿರಿ ...{Loading}...

ತಾತ ಕೆಡುವಿರಿ ನೀವು ತನಗ
ಖ್ಯಾತಿ ಕೌರವರೆಂಬುವರು ದು
ರ್ನೀತಿಕಾರರು ಭೀಷ್ಮ ವಿದುರರು ಭೀತರವದಿರಿಗೆ
ನೀತಿ ಸಮ್ಮತವಾಗಿ ಚಿತ್ತದೊ
ಳಾತ ಮತವನು ಹೇಳಿ ನಮ್ಮೊಳು
ಭೀತಿ ಬೇಡೆಂದರಸ ಹಿಡಿದನು ಧರ್ಮಜನ ಕರವ ॥74॥

೦೭೫ ಬೇರೆ ಮತವೆಮಗೇನು ...{Loading}...

ಬೇರೆ ಮತವೆಮಗೇನು ಬೊಪ್ಪನ
ಚಾರಿ ನಿಮ್ಮದು ನೀವು ಬೊಪ್ಪನ
ನೂರು ಮಡಿಯೆಮಗೊಳ್ಳಿದರು ಬೇರಿನ್ನು ಹಿತರುಂಟೆ
ಬೇರಿರಿಸಿ ಕೂಡಿರಿಸಿ ನಿಮಗೆಯು
ತೋರಿದುದೆ ಮತ ನಿಮ್ಮ ನೇಮವ
ಮೀರ ಬಲ್ಲೆನೆಯೆಂದು ಧರ್ಮಜ ನುಡಿದನರಸಂಗೆ ॥75॥

೦೭೬ ಎರೆಯ ವಙ್ಕಿಯೊ ...{Loading}...

ಎರೆಯ ವಂಕಿಯೊ ಕಳಿತ ಮೆಕ್ಕೆಯೊ
ಹುರಿಯ ಬಲೆಯೋ ರಾಗ ಸನ್ನೆಯೊ
ಸರಿಯ ಗೊರೆಯೋ ಠಕ್ಕಿನುಂಡೆಯೊ ಸವಿಯ ಚಿತ್ರಕವೊ
ಅರಸನಂಕೆಯ ಮನದ ಬಯಕೆಯ
ಹೊರೆಯ ಬಳಕೆಯನೀ ಸಮಂಜಸ
ತರದ ಸಾತ್ವಿಕರೆತ್ತ ಬಲ್ಲರು ಭೂಪ ಕೇಳ್ ಎಂದ ॥76॥

೦೭೭ ಕನ್ದ ಮನ ...{Loading}...

ಕಂದ ಮನ ಮುನಿಸಿಲ್ಲಲೇ ನಾ
ವೆಂದ ನುಡಿಗೊಡಬಡುವಿರಾದೊಡೆ
ಮುಂದೆ ಪುರವಿದೆ ವಾರಣಾವತವಿಲ್ಲಿಗರುವತ್ತು
ಸಂದ ನಾಡು ಸಮಸ್ತ ವಸ್ತುಗ
ಳಿಂದ ಪೂರಿತ ಹಸ್ತಿನಾಪುರ
ದಿಂದ ಮಿಗಿಲದು ರಾಜಧಾನಿ ಸ್ಥಾನ ನಿಮಗೆಂದ ॥77॥

೦೭೮ ಹೈ ಹಸಾದ ...{Loading}...

ಹೈ ಹಸಾದ ಭವತ್ ಕೃಪಾ ಸ
ನ್ನಾಹವೇ ಸಾಮ್ರಾಜ್ಯವಾವುದ
ನೂಹಿಸಿದೊಡಾ ಸ್ಥಿತಿಯೊಳಡಗಿಹವೆಂದು ವಿನಯದಲಿ
ಗಾಹುಗತಕವನರಿಯದಿವರು
ತ್ಸಾಹದಲಿ ಕೈಕೊಂಡು ಭೀಷ್ಮಗೆ
ಬೇಹ ವಿದುರ ದ್ರೋಣಮುಖ್ಯರಿಗರುಹಿದರು ಹದನ ॥78॥

೦೭೯ ಧಾರುಣೀಪತಿ ರತ್ನಮಯ ...{Loading}...

ಧಾರುಣೀಪತಿ ರತ್ನಮಯ ಭಂ
ಡಾರ ಸಹಿತ ಗಜಾಶ್ವ ರಥ ಪರಿ
ವಾರವನು ಮಾಡಿದನು ಹಸಿಗೆಯನೆರಡು ಭಾಗವನು
ಕೌರವರಿಗೊಂದಿವರಿಗೊಂದೆನ
ಲೋರಣದಲಳವಡಿಸಿ ಬಹು ವಿ
ಸ್ತಾರದಲಿ ಭೀಷ್ಮಾದ್ಯರಹುದೆನಲಿವರ ಮನ್ನಿಸಿದ ॥79॥

೦೮೦ ಇವರು ಶುಭದಿನ ...{Loading}...

ಇವರು ಶುಭದಿನ ಶುಭಮುಹೂರ್ತ
ಪ್ರವರದಲಿ ಹೊರವಂಟರಾ ಜನ
ನಿವಹ ಮರುಗಿತರಣ್ಯವೇ ಗತಿಯರಸ ನಮಗೆಂದು
ಅವರ ಕಳುಹುತ ಬಂದರಾ ಕೌ
ರವರು ನಿಂದರು ಭೀಷ್ಮ ಕಲಶೋ
ದ್ಭವರು ಸುತರಿಗೆ ಬುದ್ಧಿ ಹೇಳಿದು ಮರಳಿದರು ಪುರಕೆ ॥80॥

೦೮೧ ವಿದುರನೊಡನೈತರುತ ಸಙ್ಕೇ ...{Loading}...

ವಿದುರನೊಡನೈತರುತ ಸಂಕೇ
ತದಲಿ ಸೂಚಿಸಿ ಮರಳಿದನು ನೃಪ
ಸುದತಿ ವರ ಗಾಂಧಾರಿ ಮೊದಲಾದಖಿಳ ರಾಣಿಯರು
ಮುದದ ಮುರುವಿನಲಿವರ ತೆಗೆದ
ಪ್ಪಿದರು ಭೂಪತಿ ಸಹಿತ ಕಡು ಶೋ
ಕದಲಿ ಕಳುಹಿಸಿ ಕೊಂಡು ಬಂದರು ಹಸ್ತಿನಾಪುರಕೆ ॥81॥

೦೮೨ ಅರಸ ಕೇಳೈ ...{Loading}...

ಅರಸ ಕೇಳೈ ಹಸ್ತಿನಾಪುರ
ವರವ ಹೊರವಡುವಾ ಮುಹೂರ್ತಕೆ
ವರುಷವಿಪ್ಪತ್ತೊಂಬತಾದುದು ಧರ್ಮನಂದನಗೆ
ವರುಷ ಹದಿಮೂರರಲಿ ಹಸ್ತಿನ
ಪುರದೊಳಿದ್ದರು ಹಿಂದೆ ಷೋಡಶ
ವರುಷ ವನದೊಳಗಿಂತು ಲೆಕ್ಕವ ನೋಡಿಕೋಯೆಂದ ॥82॥

೦೮೩ ಬನ್ದರೈವರು ಕುನ್ತಿ ...{Loading}...

ಬಂದರೈವರು ಕುಂತಿ ಸಹಿತಾ
ನಂದದಲಿ ವರ ವಾರಣಾವತ
ಕಂದು ಪುರಜನ ಕೂಡಿ ಕನ್ನಡಿ ಕಲಶ ವಿಭವದಲಿ
ಬಂದು ತಾವಿದಿರಾಗಿ ಕುಂತೀ
ನಂದನರ ಹೊಗಿಸಿದರು ಪಟ್ಟಣ
ವಂದು ಮೆರೆದುದು ಕೂಡೆ ಗುಡಿತೋರಣದ ರಚನೆಯಲಿ ॥83॥

೦೮೪ ಬೀಡು ಕಾಣಿಕೆಯಿತ್ತು ...{Loading}...

ಬೀಡು ಕಾಣಿಕೆಯಿತ್ತು ಕಂಡುದು
ನಾಡೆ ಕಾಣಿಸಿದನು ಪುರೋಚನ
ಕೂಡೆ ಸಂದನು ಹಾಸು ಹೊಕ್ಕಾಗವರ ಮನವರಿದು
ನೋಡಿದನು ಯಮನಂದನನು ಮನೆ
ಮಾಡಿದಂದವನರಗಿನರಮನೆ
ಗೂಡುರಿವ ಬೇಳುವೆಯ ನೆನೆದರೆ ಬೊಪ್ಪನವರೆಂದ ॥84॥

೦೮೫ ಸಮಿಧೆಗಳು ನಾವ್ ...{Loading}...

ಸಮಿಧೆಗಳು ನಾವ್ ನಾಲ್ವರಯ್ಯನ
ರಮಣಿಯಾಹುತಿ ಭೀಮನೇ ಪಶು
ಕುಮತಿ ಕಟ್ಟಿಸಿದರಗಿನರಮನೆಯಗ್ನಿ ಕುಂಡವಿದು
ಎಮಗೆ ಸಂಶಯವಿಲ್ಲ ರಾಜೋ
ತ್ತಮನೊ ದುರ್ಯೋಧನನೊ ದೀಕ್ಷಾ
ಕ್ರಮವ ಧರಿಸಿದನಾವನೆಂದನು ನಗುತ ಯಮಸೂನು ॥85॥

೦೮೬ ಜನಪ ಕೇಳೈ ...{Loading}...

ಜನಪ ಕೇಳೈ ವಿದುರನಟ್ಟಿದ
ಖನಕ ಬಂದನುಯಿವರ ಸಜ್ಜೆಯ
ಮನೆಯಲತಿ ಗುಪ್ತದಲಿ ನೆಲದೊಳು ಸವೆಸಿದನು ಪಥವ
ಅನುದಿನದೊಳಾ ಬಾಹಿರನು ಕಿ
ಚ್ಚಿನಲಿ ಚುಚ್ಚುವ ಸಂದುಗಟ್ಟನು
ನೆನೆವುತಿರ್ದನು ಖಳ ಪುರೋಚನನೊಡೆಯನಾಜ್ಞೆಯಲಿ ॥86॥

೦೮೭ ಒನ್ದು ದಿನ ...{Loading}...

ಒಂದು ದಿನ ಹಬ್ಬದಲಿ ಭೂಸುರ
ವೃಂದವುಂಡುದು ಪಂಚಪುತ್ರಿಕೆ
ಯೆಂದು ಬೇಡತಿಯೊಬ್ಬಳಿದ್ದಳು ಸುತರು ಸಹಿತಲ್ಲಿ
ಅಂದಿನಿರಳು ಪುರೋಚನನು ತಾ
ನೊಂದ ನೆನೆದರೆ ದೈವಗತಿ ಬೇ
ರೊಂದ ನೆನೆದುದು ಕೇಳು ಜನಮೇಜಯ ಮಹೀಪಾಲ ॥87॥

೦೮೮ ಅವನು ನಿದ್ರೆಯೊಳರಿಯದಿರಲಾ ...{Loading}...

ಅವನು ನಿದ್ರೆಯೊಳರಿಯದಿರಲಾ
ಭವನ ಮುಖದಲಿ ಕಿಚ್ಚನೊಟ್ಟಿಸಿ
ಪವನಸುತ ಸಹಿತಿವರು ಹಾಯ್ದರು ಬಿಲದ ಮಾರ್ಗದಲಿ
ಅವರು ಬೆಂದರು ಮುನ್ನ ಬಳಿಕಾ
ಭವನಪಂಕ್ತಿಗಳುರಿದು ಕರಗಿದ
ವವನಿಯಲಿ ಹೊನಲಾಯ್ತು ಪುರಜನವೈದೆ ಬೆರಗಾಗೆ ॥88॥

೦೮೯ ಅಕಟ ಪಾಣ್ಡವರಳಿದರೇ ...{Loading}...

ಅಕಟ ಪಾಂಡವರಳಿದರೇ ಕೌ
ಳಿಕದಿ ಕೌರವರಿರಿದರೇ ಮತಿ
ವಿಕಳರವದಿರು ಬೆಂದು ಹೋದರು ಧರ್ಮದಲಿ ನಡೆದು
ಪ್ರಕಟ ಪಾಪರಿಗಹುದು ಸಾಮ್ರಾ
ಜ್ಯಕವು ಧರ್ಮಾತ್ಮರಿಗೆಯೀ ಪರಿ
ವಿಕಟತೆಯಸುರರಾಜ್ಯವೆಂದುದು ಪೌರಜನ ಮರುಗಿ ॥89॥

೦೯೦ ಮುನ್ನ ಬೆನ್ದನಲಾ ...{Loading}...

ಮುನ್ನ ಬೆಂದನಲಾ ಪುರೋಚನ
ಕುನ್ನಿಯದು ಲೇಸಾಯ್ತು ಹದನಾ
ಪನ್ನರಾದರೆ ಅವ್ವೆಯರು ಸಹಿತಕಟ ಪಾಂಡವರು
ಇನ್ನು ಸುಡು ಸುಡು ಧರ್ಮ ಸಂಪ್ರತಿ
ಪನ್ನ ಗುಣದಾಚಾರಗಳ ಸಂ
ಪನ್ನತೆಯನೆಂದೊರಲಿ ಮರುಗಿತು ನಿಖಿಳ ಪರಿವಾರ ॥90॥

೦೯೧ ಒಗೆದುದೀ ಬೇಳಮ್ಬ ...{Loading}...

ಒಗೆದುದೀ ಬೇಳಂಬ ಹಸ್ತಿನ
ನಗರಿಯಲಿ ತತ್ಪೌರಜನ ಮನ
ವುಗಿದು ಬಿದ್ದುದು ಶೋಕಮಯಸಾಗರದ ಮಧ್ಯದಲಿ
ಹೊಗೆದುದಾನನ ವಿದುರ ಭೀಷ್ಮಾ
ದಿಗಳಿಗಾ ಧೃತರಾಷ್ಟ್ರ ಸುತರಿಗೆ
ದುಗುಡ ದಡ್ಡಿಯ ಹರುಷಸಿರಿ ಹೊಕ್ಕಳು ಮುಖಾಂಬುಜವ ॥91॥

೦೯೨ ಬನ್ದುದಾ ಸುರನದಿಗೆ ...{Loading}...

ಬಂದುದಾ ಸುರನದಿಗೆ ಕೌರವ
ವೃಂದ ಪರಿಜನವೈದೆ ಶೋಕಿಸಿ
ಮಿಂದು ಗಂಗಾ ತೀರದಲಿ ಬಳಿಕೂಧ್ರ್ವ ದೇಹಿಕವ
ಸಂದ ವಿಧಿಯಲಿ ಮಾಡಿ ಪರಮಾ
ನಂದ ಮಿಗಲವರಿರ್ದರಿತ್ತಲು
ಇಂದುಕುಲ ಸಂಭವರ ವಿಧಿಯನು ಮತ್ತೆ ಕೇಳ್ ಎಂದ ॥92॥

೦೯೩ ಬಿಲಮುಖದೊಳುತ್ತರಿಸಿ ಬಲುಗ ...{Loading}...

ಬಿಲಮುಖದೊಳುತ್ತರಿಸಿ ಬಲುಗ
ತ್ತಲೆಯೊಳಡವಿಯ ಮಾರ್ಗದಲಿ ಕಲು
ಮುಳುಗಳೊಳು ಕಾಪಥಕೆ ಕೋಮಲ ಚರಣಗಳ ಕೊಡುತ
ತೊಳಲಿದರು ಬೆಳಗಾಗೆ ಹಳ್ಳಿಯ
ಬಳಿಯ ಹೊದ್ದದೆ ಹಾಯ್ದು ಹೊಕ್ಕರು
ಹಳುವವನು ಬೆಳಗಡಗೆ ನಡೆದರು ಹಲವು ಯೋಜನವ ॥93॥

೦೯೪ ದಾಟಿದರು ಗಙ್ಗೆಯನು ...{Loading}...

ದಾಟಿದರು ಗಂಗೆಯನು ರಾಯನ
ಮಾಟದಲಿ ಹಲು ಮುರಿದುದೇ ನ
ಮ್ಮಾಟಕಿದು ಹಿರಿದಲ್ಲಲಾಯೆನುತೈವರಡಿಗಡಿಗೆ
ಕೋಟಲೆಯ ಕೊಲ್ಲಣಿಗೆಯಲಿ ಮೈ
ನೋಟಕಲಸದೆ ಬಿಸಿಲಲಿವರು ಮ
ಹಾಟವಿಯ ಮಧ್ಯವನು ಹೊಕ್ಕರು ನೃಪತಿ ಕೇಳ್ ಎಂದ ॥94॥

+೦೮ ...{Loading}...