೧೭

೦೦೦ ಸೂ ಧಾಳಿಯಲಿ ...{Loading}...

ಸೂ. ಧಾಳಿಯಲಿ ಬಂದರಿಬಲದ ಹೆ
ಚ್ಚಾಳುತನವನು ಮುರಿದು ಸಂಧಿಯ
ಮೇಲೆ ಧರ್ಮಜ ಬಂದು ಹೊಕ್ಕನು ಹಸ್ತಿನಾಪುರವ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ನೃಪತಿ ಪಾಂ
ಚಾಲಸುತೆಯ ವಿವಾಹ ವಾರ್ತೆಯ
ಕೇಳಿದರಲೈ ಕೌರವರು ಮರುಗಿದರು ಮರುಕೊಳಿಸಿ
ಆಳ ನೆರಹಿದನಖಿಳದಳ ದೆ
ಖ್ಖಾಳವನು ನೋಡಿದರು ಭೂಮೀ
ಪಾಲ ಸಂಕುಲ ಸಹಿತ ಬಂದರು ದ್ರುಪದ ಪುರಿಗಾಗಿ ॥1॥

೦೦೨ ಏನ ಹೇಳುವೆ ...{Loading}...

ಏನ ಹೇಳುವೆ ನಿನ್ನವರ ಜಯ
ಮಾನವನು ಮತ್ತೊಂದು ಪೈಕದ
ಮಾನಭಂಗಸ್ಥಿತಿಯನೆಲೆ ಜನಮೇಜಯಕ್ಷಿತಿಪ
ಭಾನುವಿನ ಮಂಜಿನ ಶಿಲೋಚ್ಚಯ
ಸಾನುವಿನ ವಜ್ರದ ತರಕ್ಷುವ
ಧೇನುವಿನ ಹೋರಟೆಯ ಹವಣದು ಭೂಪ ಕೇಳ್ ಎಂದ ॥2॥

೦೦೩ ಮುರಿದುದಾ ಹೆಬ್ಬಲ ...{Loading}...

ಮುರಿದುದಾ ಹೆಬ್ಬಲ ವಿಘಾತಿಯ
ಲೊರಗಿದರು ಪಟುಭಟರು ಗಜ ಹಯ
ದೊರತೆ ಬತ್ತಿತು ಭೀಮ ಪಾರ್ಥರ ಶರ ನಿದಾಘದಲಿ
ಉರುಕುಗೊಂಡರು ನಿಚ್ಚಟರು ಕೈ
ಮೆರೆದುದಾಚೆಯ ದೊರೆಗಳಿವದಿರು
ನೆರೆ ವಿಭಾಡಿಸೆ ತೆಗೆದು ಹಾಯ್ದರು ಹಸ್ತಿನಾಪುರಕೆ ॥3॥

೦೦೪ ಬಳಿಕ ಪಾಞ್ಚಾಲಕನ ...{Loading}...

ಬಳಿಕ ಪಾಂಚಾಲಕನ ಭೀತಿಯ
ಮೊಳಕೆಯುರಿದುದು ಹರಿದುದುತ್ಸವ
ಜಲಧಿ ವಳಯದ ಭೂತಳಾಗ್ರದ ಭೂತಳೇಂದ್ರರಲಿ
ಹೊಳೆಹೊಳೆವ ರವಿ ರಶ್ಮಿಗಳ್ಪ್ರ
ಜ್ವಲಿಸುವಂತಿರೆ ಪಾಂಡುನಂದನ
ರಳವಿನುಬ್ಬಟೆ ಬಿಸಿಲು ನೆರೆ ಪಸರಿಸಿತು ದೆಸೆದೆಸೆಗೆ ॥4॥

೦೦೫ ಬನ್ದನಲ್ಲಿಗೆ ಸಕಲ ...{Loading}...

ಬಂದನಲ್ಲಿಗೆ ಸಕಲ ಯಾದವ
ವೃಂದ ಸಹಿತ ಮುರಾರಿ ಕುಂತೀ
ನಂದನರು ಬರಲಿದಿರುಗಾಣಿಸಿಕೊಂಡನುಚಿತದಲಿ
ತಂದ ಬಹುವಿಧ ವಸ್ತುಕಾರವ
ನಂದು ಕೊಟ್ಟನು ಗಜ ರಥಾಶ್ವವ
ನಿಂದುವದನೆಯರಿಗೆ ವಿಚಿತ್ರಾಂಬರ ವಿಭೂಷಣವ ॥5॥

೦೦೬ ಮಗನೆ ಧರ್ಮಜ ...{Loading}...

ಮಗನೆ ಧರ್ಮಜ ಕೇಳು ಭೀಮಾ
ದಿಗಳೆ ಹರಿಯೆಮ್ಮಣ್ಣ ದೇವನ
ಮಗನು ಸೋದರ ಮಾವನೀತನು ನಿಮಗೆ ವಸುದೇವ
ವಿಗಡರೀ ಯಾದವ ನೃಪರು ಬಂ
ಧುಗಳು ನಿಮಗೆಂದೈವರನು ಕೈ
ನೆಗಹಿ ಕಮಲೋದರನ ಕೈಯಲಿ ಕೊಟ್ಟಳಾ ಕುಂತಿ ॥6॥

೦೦೭ ವನದೊಳಪಗತನಾದನಿವರ ಯ್ಯನು ...{Loading}...

ವನದೊಳಪಗತನಾದನಿವರ
ಯ್ಯನು ಕುಮಾರರ ಬಾಲ್ಯಕಾಲದೊ
ಳೆನಗೆ ರಕ್ಷಾಭಾರ ಬಿದ್ದುದು ಪತಿ ಪರೋಕ್ಷದಲಿ
ಇನಿಬರನು ಗಜಪುರಿಗೆ ಕೊಂಡೊ
ಯ್ದೆನು ಸುಯೋಧನನಿಂದ ವೈರವು
ಜನಿತವಾಯಿತು ಬಳಿಕ ಲಾಕ್ಷಾಭವನ ದಹನದಲಿ ॥7॥

೦೦೮ ಉರಿಯೊಳುಳಿದೆವು ನಿಮ್ಮ ...{Loading}...

ಉರಿಯೊಳುಳಿದೆವು ನಿಮ್ಮ ಚರಣ
ಸ್ಮರಣ ಬಲದಲಿ ಬಹಳ ವಿಪಿನಾಂ
ತರದೊಳಗೆ ತೊಳಲಿದೆವು ಹೊರೆದೆವು ಸಾಯದೊಡಲುಗಳ
ಬರಬರಲು ತತ್ಸರ್ವ ದುಃಖೋ
ತ್ತರ ನಿವಾರಣ ದ್ರುಪದಕನ್ಯಾ
ವರಣ ನಿನ್ನೀಯಂಘ್ರಿ ದರುಶನವೆಂದಳಾ ಕುಂತಿ ॥8॥

೦೦೯ ದೇವಿ ಚಿತ್ತವಿಸೋಪಚಾರಕ ...{Loading}...

ದೇವಿ ಚಿತ್ತವಿಸೋಪಚಾರಕ
ಭಾವವೇ ಧರ್ಮಜನು ಭೀಮನು
ಭಾವನವರು ಧನಂಜಯಾದಿಗಳೆಮಗೆ ಮೈದುನರು
ಈವುಪಾಧಿ ಸ್ಥಳದೊಳಂತ
ರ್ಜೀವನ ಪ್ರಾಣಾದಿ ವಾಯುಗ
ಳಾವು ನಿಮ್ಮೈವರಿಗೆ ಕಾರಣವೆಂದನಸುರಾರಿ ॥9॥

೦೧೦ ದ್ರುಪದ ಗುಡಿಗಟ್ಟಿದನು ...{Loading}...

ದ್ರುಪದ ಗುಡಿಗಟ್ಟಿದನು ಕುಂತಿಯ
ವಿಪುಳ ಹರುಷವನೇನನೆಂಬೆನು
ದ್ರುಪದ ಯದು ಪರಿವಾರವುಲಿದುದು ಜಲದಿ ಘೋಷದಲಿ
ಅಪದೆಸೆಯ ಮುಗಿಲೊಡೆದು ಹೊಳೆಹೊಳೆ
ದುಪರಿಚರ ರವಿಯಂತೆ ತತ್‍ಕ್ಷಣ
ವಿಪುಳ ತೇಜಃಪುಂಜರೆಸೆದರು ಪಾಂಡು ನಂದನರು ॥10॥

೦೧೧ ಇದಿರೊಳವನಿಪ ಭೀಮನೆಡವಂ ...{Loading}...

ಇದಿರೊಳವನಿಪ ಭೀಮನೆಡವಂ
ಕದಲಿ ಮಾದ್ರೀಸುತರು ಬಲವಂ
ಕದಲಿ ದೇವಕಿ ಕುಂತಿ ವಸುದೇವಾದಿ ಯದುನಿಕರ
ಮುದದಿಯೈವರ ರಮಣಿ ಬಲವಂ
ಕದಲಿ ಕರುಣಾಳುವಿನ ವಾಮಾಂ
ಕದಲಿ ಫಲುಗುಣನೊಪ್ಪೆ ಮೆರೆದನು ದಾನವಧ್ವಂಸಿ ॥11॥

೦೧೨ ಆವುದೋ ಧರ್ಮಜನ ...{Loading}...

ಆವುದೋ ಧರ್ಮಜನ ಭೀಮನ
ಭಾವಶುದ್ಧಿ ಧನಂಜಯನ ಸುಕೃ
ತಾವಲಂಬನ ಸಾರವೆಂತಂಟೊ ಶಿವ ಮಹಾದೇವ
ಠಾವುಗಾಣವು ವೇದವುಪನಿಷ
ದಾವಳಿಗಳೋಲೈಸಿ ಕೃಷ್ಣ ಕೃ
ಪಾ ವಿಲಾಸವ ನೋಡಿಯೆಂದುದು ಸಕಲ ಸುರನಿಕರ ॥12॥

೦೧೩ ಅರಸ ಚಿತ್ತೈಸನ್ದಿನೋಲಗ ...{Loading}...

ಅರಸ ಚಿತ್ತೈಸಂದಿನೋಲಗ
ಹರಿದುದಾ ಹರಿಸೇನೆ ಬಿಟ್ಟುದು
ಪುರದ ಬಹಿರುದ್ಯಾನ ವೀಧಿಗಳೊಳಗೆ ಹರಹಿನಲಿ
ಕುರುನೃಪಾಲನ ಗುಪ್ತಚಾರರು
ಅರಿದರೀ ವಾರ್ತೆಯನು ಪುರದಲಿ
ಹರಹಿದರು ನೆರೆ ಕೇಳಿದನು ಧೃತರಾಷ್ಟ್ರನೀ ಹದನ ॥13॥

೦೧೪ ಕರೆಸಿದನು ಗಾಙ್ಗೇಯ ...{Loading}...

ಕರೆಸಿದನು ಗಾಂಗೇಯ ಗೌತಮ
ಗುರು ಸುಯೋಧನ ಶಲ್ಯ ಸೈಂಧವ
ಗುರುತನುಜ ರಾಧೇಯ ವಿದುರ ಕಳಿಂಗ ಸೌಬಲರ
ಚರಮುಖ ಪ್ರತಿಪನ್ನ ಬಂಧುರ
ತರ ವಚೋವಿನ್ಯಾಸ ಕರ್ಣ
ಜ್ವರವೋ ಕರ್ಣಾಮೃತವೊ ಕೇಳಿರೆಯೆಂದನಂಧನೃಪ ॥14॥

೦೧೫ ಕೇಳಿರೈ ಹೇಳುವೆನು ...{Loading}...

ಕೇಳಿರೈ ಹೇಳುವೆನು ಯಾದವ
ರಾಳು ಬಂದುದು ಗಡ ಜನಾರ್ದನ
ಕೋಳುವೋದನು ಗಡ ಯುಧಿಷ್ಠಿರ ಭೀಮ ಪಾರ್ಥರಿಗೆ
ಗಾಳಿ ಬೆಂಬಲವಾಗಲುರಿಯ ಛ
ಡಾಳವನು ನಿರ್ಣೈಸಬಹುದೆ ವಿ
ತಾಳಿಸಿತಲೈ ನಿಮ್ಮ ಗಾರುಡವೆಂದನಾ ನೃಪತಿ ॥15॥

೦೧೬ ಎನಲು ಘರ್ಜಿಸುತರಸ ...{Loading}...

ಎನಲು ಘರ್ಜಿಸುತರಸ ಮುರರಿಪು
ಜಿನುಗಿದರೆ ಗಿರಿ ಜರಿವುದೇ ಯಮ
ತನುಜ ಭೀಮಾರ್ಜುನರು ಹಿಡಿದರೆ ಗಗನವಡಗುವುದೆ
ದನುಜರಿಪುವಿನೊಳೇನಹುದು ಬರ
ಲನಿಮಿಷರು ನೆರವಾಗಿ ರಣದಲಿ
ಜನಪ ನೋಡೆಂದರು ಜಯದ್ರಥ ಸೌಬಲಾದಿಗಳು ॥16॥

೦೧೭ ಕೊರತೆಯಲ್ಲಿದು ನಿನ್ನೆ ...{Loading}...

ಕೊರತೆಯಲ್ಲಿದು ನಿನ್ನೆ ನಾವ್ಕಂ
ಡರಿದೆವಿವರತಿಬಲರು ಕೃಷ್ಣನ
ಬರಿ ಸಹಾಯದಲೇನು ಭೀಮಾರ್ಜುನರ ಬಲುಹೇನು
ನೆರವಣಿಗೆಯುಳ್ಳವರಲೈ ಹೊ
ಕ್ಕಿರಿದ ರಣ ಹಸಿಯಾರಿತೇ ನೀ
ವರಿಯಿರೇ ಭೂಪಾಲಯೆಂದನು ನಗುತ ಗಾಂಗೇಯ ॥17॥

೦೧೮ ಇವರ ಬಲುಹನ್ತಿರಲಿ ...{Loading}...

ಇವರ ಬಲುಹಂತಿರಲಿ ಸಾಕಿ
ನ್ನವರ ಕರೆಸು ವಿರೋಧ ಬಂಧ
ವ್ಯವಹೃತಿಗೆ ಫಲವಿಲ್ಲ ಮೂಲಚ್ಛೇದ ಕರ್ಮವಿದು
ಅವರು ಮುನ್ನತಿಬಲರು ಕೃಷ್ಣನ
ಹವಣ ನೀನೇ ಬಲ್ಲೆಯಿನ್ನೀ
ಸವಡಿಮಾರಿಯ ಸೋಕು ಲೇಸಲ್ಲೆಂದನಾ ಭೀಷ್ಮ ॥18॥

೦೧೯ ಕರೆಸು ವಿದುರನ ...{Loading}...

ಕರೆಸು ವಿದುರನ ಕಳುಹಿ ವಾರಣ
ಪುರದ ರಾಜ್ಯ ವಿಭಾಗವನು ವಿ
ಸ್ತರಿಸಿಕೊಡು ಭಂಡಾರವನು ದಾಯಾದ ಮಾರ್ಗದಲಿ
ನರ ಯುಧಿಷ್ಠಿರ ಭೀಮರನು ನೀ
ಬರಿಸು ಮ್ಮವಗುಣವ ನೋಡದೆ
ಬೆರಸಿ ಕೊಡುವೆವು ಕೂಡಿ ಬದುಕುವುದೆಂದನಾ ಭೀಷ್ಮ ॥19॥

೦೨೦ ಕರೆಸಿಕೊಡಿರೈ ನಿಮ್ಮ ...{Loading}...

ಕರೆಸಿಕೊಡಿರೈ ನಿಮ್ಮ ಚಿತ್ತಕೆ
ಬರಿಸಿ ನಡಸುವೆನೆನ್ನ ಮಕ್ಕಳ
ದುರುಳತನದಿಂದಾದ ಹಿಂದಣ ಮಕ್ಕಳಾಟಿಕೆಯ
ಮರೆದು ಕಳೆಯಲಿ ಪಾಂಡುನಂದನ
ರೆರವಿಗರೆ ಬಾ ವಿದುರ ಭೀಷ್ಮನ
ಪರಮ ಮತವೇ ನನ್ನ ಮತ ಹೋಗೆಂದ ಧೃತರಾಷ್ಟ್ರ ॥20॥

೦೨೧ ಕಳುಹಿದರು ವಿದುರನನು ...{Loading}...

ಕಳುಹಿದರು ವಿದುರನನು ಬುದ್ಧಿಯ
ಗಲಿಸಿ ಭೀಷ್ಮಾದಿಗಳು ಪಯಣದ
ಲಲಿತ ಸನ್ನಾಹದೊಳು ಪರುಠವಿಸಿದನು ಪಾವುಡವ
ಬಳಿಕ ಸುಮುಹೂರ್ತದಲಿ ವಿಪ್ರಾ
ವಳಿಗಳಾಶೀರ್ವಾದದಲಿ ಮಂ
ಗಳತೆ ಮಿಗಿಲೊಲವಿಂದ ಹಸ್ತಿನಪುರವ ಹೊರವಂಟ ॥21॥

೦೨೨ ಕೇಳು ಭೂಪತಿ ...{Loading}...

ಕೇಳು ಭೂಪತಿ ಹಲವು ಪಯಣದ
ಮೇಲೆ ಪಯಣದಲೈದಿದನು ಪಾಂ
ಚಾಲಪುರವನು ಬಂದನರಮನೆಗಧಿಕ ಹರ್ಷದಲಿ
ಕೇಳಿದರು ಕೌಂತೇಯರೀತನ
ಲಾಲಿಸಿದರಿದಿರೈದಿ ತನು ಪುಳ
ಕಾಳಿಯಲಿ ಮೈ ಮುಳುಗೆ ತೆಗೆದಪ್ಪಿದರು ತಮತಮಗೆ ॥22॥

೦೨೩ ಕ್ಷೇಮವನು ಕುಶಲವನು ...{Loading}...

ಕ್ಷೇಮವನು ಕುಶಲವನು ಬಂಧು
ಸ್ತೋಮದಲಿ ಕೇಳಿದರು ತಮ್ಮ
ಕ್ಷೇಮ ಕುಶಲವ ಹೇಳಿದರು ಪೂರ್ವಾಪರಸ್ಥಿತಿಯ
ಭೂಮಿಪತಿ ಚಿತ್ತೈಸು ಬಳಿಕಿನ
ರಾಮಣೀಯಕ ಯಾದವೇಂದ್ರ ಶಿ
ರೋಮಣಿಯ ಸಮ್ಮೇಳವನು ಹೇಳಿದನು ವಿದುರಂಗೆ ॥23॥

೦೨೪ ತನ್ದ ಪಾವುಡವನಿತುವನು ...{Loading}...

ತಂದ ಪಾವುಡವನಿತುವನು ಯಮ
ನಂದನಂಗೊಪ್ಪಿಸಿದ ದ್ರುಪದ ಮು
ಕುಂದ ಧೃಷ್ಟದ್ಯುಮ್ನ ಕಂದರ್ಪಾನಿರುದ್ಧರಿಗೆ
ತಂದ ವಸ್ತುವನಿತ್ತವನು ಸಾ
ನಂದದಲಿ ನೀಡಿದನು ನಗುತರ
ವಿಂದನಾಭನ ಪದಕೆ ಮೈಯಿಕ್ಕಿದನು ಭಕ್ತಿಯಲಿ ॥24॥

೦೨೫ ತೆಗೆದು ತಕ್ಕೈಸಿದನು ...{Loading}...

ತೆಗೆದು ತಕ್ಕೈಸಿದನು ಭೀಷ್ಮಾ
ದಿಗಳ ಕುಶಲವ ಕೇಳಿದನು ನಸು
ನಗುತ ಮೈದಡವಿದನು ವಿದುರನನಾ ಕೃಪಾಜಲಧಿ
ವಿಗಡನಾ ಧೃತರಾಷ್ಟ್ರನೀ ಬಂ
ಧುಗಳ ನೆನೆವನೆ ಪಾಂಡುಸುತರಿಗೆ
ಸೊಗಸುವನೆ ನೀ ಬಂದೆ ಲೇಸಾಯ್ತೆಂದನಸುರಾರಿ ॥25॥

೦೨೬ ಕಳುಹಿದನು ಬೀಡಾರಕಾತನ ...{Loading}...

ಕಳುಹಿದನು ಬೀಡಾರಕಾತನ
ಬಳಿಯ ಪರಿವಾರವನು ಮನ್ನಿಸಿ
ಬಳಿಕ ಮರುದಿನ ಮೇಳವಿಸಿದರು ಮಂತ್ರಶಾಲೆಯಲಿ
ತಿಳಿಹಿದನು ಧೃತರಾಷ್ಟ್ರ ಭೀಷ್ಮರ
ಲಲಿತ ಮತವನು ಬಂಧುವರ್ಗ
ಸ್ಖಲಿತವನು ಸೈರಿಸುವುದೆಂದನು ವಿನಯದಲಿ ವಿದುರ ॥26॥

೦೨೭ ಕರೆಸಿದನು ಧೃತರಾಷ್ಟ್ರನಾತನ ...{Loading}...

ಕರೆಸಿದನು ಧೃತರಾಷ್ಟ್ರನಾತನ
ಚರಣವನು ಕಾಂಬುದು ನದೀಸುತ
ಗುರು ಕೃಪರು ನಿಮಗೊಳ್ಳಿದರು ನೀವಖಿಳ ರಾಜ್ಯದಲಿ
ಸರಿಯಕೊಂಬುದು ಸೇರುವಡೆ ಗಜ
ಪುರದೊಳಿಹುದಲ್ಲದೊಡೆ ನಿಮ್ಮ್ಮಯ
ಪುರದಲಿರಿ ನೀವಾತ್ಮ ನಿರ್ಮಿತ ರಾಜಧಾನಿಯಲಿ ॥27॥

೦೨೮ ಮುರಹರನನಹುದೆನಿಸಿ ಭೂಮೀ ...{Loading}...

ಮುರಹರನನಹುದೆನಿಸಿ ಭೂಮೀ
ಶ್ವರನ ಮೆಚ್ಚಿಸಿ ಭೀಮನನು ಮನ
ಬರಿಸಿ ಪಾರ್ಥನನೊಲಿಸಿ ಮಾದ್ರೀಸುತರನೊಡಬಡಿಸಿ
ಅರಸಿಗಭಿಮತವೆನಿಸಿ ಪಾಂಚಾ
ಲರಿಗೆ ಕಾರ್ಯವಿದೆನಿಸಿ ಕುಂತಿಗೆ
ಪರಮ ಹರುಷವ ರಚಿಸಿ ನುಡಿದನು ಸಂಧಿಯನು ವಿದುರ ॥28॥

೦೨೯ ಕದಡು ತಿಳಿದುದು ...{Loading}...

ಕದಡು ತಿಳಿದುದು ಕಾರ್ಯಗತಿಗಾ
ಸ್ಪದವ ಕೊಟ್ಟರು ಬಳಿಕ ಸುಮುಹೂ
ರ್ತದಲಿ ಪಯಣವ ಮಾಡಿದರು ಪಾಂಚಾಲ ದಳ ಸಹಿತ
ಯದುಶಿರೋಮಣಿವೆರಸಿ ಬಹು ಪಯ
ಣದಲಿ ಬಂದರು ಮೇಲೆ ಕೌರವ
ರಿದಿರುಗೊಂಡರು ಕೂಡೆ ಹೊಕ್ಕರು ಹಸ್ತಿನಾಪುರವ ॥29॥

೦೩೦ ಬನ್ದು ಕಾಣಿಕೆಗೊಟ್ಟು ...{Loading}...

ಬಂದು ಕಾಣಿಕೆಗೊಟ್ಟು ಗಂಗಾ
ನಂದನ ಧೃತರಾಷ್ಟ್ರನನು ಸಾ
ನಂದದಲಿ ಗಾಂಧಾರಿಯನು ಗುರು ಗೌತಮಾದಿಗಳ
ವಂದಿಸಿದರಿವರೈವರವರಾ
ನಂದಜಲ ಪರಿಲುಳಿತ ನಯನಾ
ಸ್ಪಂದ ಪರಿತೋಷದಲಿ ತೆಗೆದಪ್ಪಿದರು ಪಾಂಡವರ ॥30॥

೦೩೧ ಕರೆಸಿ ತನ್ನ ...{Loading}...

ಕರೆಸಿ ತನ್ನ ಕುಮಾರಕರ ನೂ
ರ್ವರನು ಕಾಣಿಸಿದನು ಪರಸ್ಪರ
ಪರಮ ಸಂಪ್ರೀತಿಗಳ ನಿಬಿಡಾಲಿಂಗನೋತ್ಸವದ
ದರುಶನೋಚಿತ ಮಾನ್ಯಮಾನ
ಸ್ಫುರಣದಲಿ ವಿಸ್ತರಿಸಿ ಸೈಂಧವ
ಗುರುತನುಜ ರಾಧೇಯ ಸೌಬಲರಪ್ಪಿದರು ನೃಪನ ॥31॥

೦೩೨ ಯಾದವರು ಪಾಞ್ಚಾಲರಲಿ ...{Loading}...

ಯಾದವರು ಪಾಂಚಾಲರಲಿ ಸಂ
ಪಾದಿಸಿದುದನ್ಯೋನ್ಯ ಘನ ಸಂ
ವಾದ ಸುಖ ಸಂಪ್ರೀತಿ ಮೆರೆಯಲ್ಕಿಷ್ಟ ಸತ್ಕಾರ
ಆದುದುತ್ಸವ ಜನಜನಿತ ಹರು
ಷೋದಧಿಯ ಹೊನಲಿನಲಿ ಹಿಂದಣ
ಭೇದ ಕರ್ದಮವಡಗಿಹೋಯ್ತವನೀಶ ಕೇಳ್ ಎಂದ ॥32॥

೦೩೩ ವೀತ ಭಯರನ್ಯೋನ್ಯ ...{Loading}...

ವೀತ ಭಯರನ್ಯೋನ್ಯ ಪರಮ
ಪ್ರೀತಿಗಳ ಬೆಳವಿಗೆಯಲಿದ್ದರು
ಭೂತಳಾಧಿಪರೈದು ಸಂವತ್ಸರಗಳೊಂದಾಗಿ
ಖ್ಯಾತವಿದು ಪಾಂಚಾಲಪುರದೊಳ
ತೀತವಾಯಿತ್ತೊಂದು ವರುಷವ
ಭೀತ ಧರ್ಮಸುತಂಗೆ ಮುವ್ವತ್ತಾರು ಸಮವಾಯ್ತು ॥33॥

+೧೭ ...{Loading}...