೦೩

೦೦೦ ಸೂಚನೆ ಭೂಪತಿಯ ...{Loading}...

ಸೂಚನೆ: ಭೂಪತಿಯ ನೇಮದಲಿ ಜಂಬೂ
ದ್ವೀಪ ನವ ಖಂಡದಲಿ ಸಕಳ ಮ
ಹೀಪತಿಗಳನು ಗೆಲಿದು ಕಪ್ಪವ ತಂದನಾ ಪಾರ್ಥ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಪಾಂಡವ ಪುರಿಗೆ ಲಕ್ಷ್ಮೀ
ಲೋಲ ಬಿಜಯಂಗೈದು ಭೀಮಾರ್ಜುನರ ಗಡಣದಲಿ
ಬಾಲೆಯರ ಕಡೆಗಣ್ಣ ಮಿಂಚಿನ
ಮಾಲೆಗಳ ಲಾಜಾಭಿವರುಷದ
ಲಾಲನೆಯ ರಚನೆಯಲಿ ಹೊಕ್ಕನು ರಾಜಮಂದಿರವ ॥1॥

೦೦೨ ಕಣ್ಡು ಕೃಷ್ಣನನಿವರ ...{Loading}...

ಕಂಡು ಕೃಷ್ಣನನಿವರ ಕಾಣಿಸಿ
ಕೊಂಡನರಸು ಕ್ಷೇಮ ಕುಶಲವ
ಕಂಡು ಬೆಸಗೊಳಲೇಕೆ ಬಹು ಮಾತಿನಲಿ ಫಲವೇನು
ಕಂಡೆವೈ ನಿನ್ನಮಳ ಕರುಣಾ
ಖಂಡ ಜಲಧಿಯ ಭಕ್ತಜನಕಾ
ಖಂಡಲ ದ್ರುಮವೆಂದು ತಕ್ಕೈಸಿದನು ಹರಿಪದವ ॥2॥

೦೦೩ ನಡೆದ ಪರಿಯನು ...{Loading}...

ನಡೆದ ಪರಿಯನು ರಿಪು ಪುರವನವ
ಗಡಿಸಿ ಹೊಕ್ಕಂದವನು ಮಗಧನ
ತೊಡಕಿ ತೋಟಿಯ ಮಾಡಿ ಭೀಮನ ಕಾದಿಸಿದ ಪರಿಯ
ಬಿಡದೆ ಹಗಲಿರುಳೊದಗಿ ವೈರಿಯ
ಕಡೆಯ ಕಾಣಿಸಿ ನೃಪರ ಸೆರೆಗಳ
ಬಿಡಿಸಿ ಬಂದಂದವನು ವಿಸ್ತರಿಸಿದನು ಮುರವೈರಿ ॥3॥

೦೦೪ ಎಲೆ ಮಹೀಪತಿ ...{Loading}...

ಎಲೆ ಮಹೀಪತಿ ನಿನ್ನ ಯಜ್ಞ
ಸ್ಥಲಕೆ ಬಾಧಕರಿಲ್ಲ ವನದಲಿ
ಪುಲಿಯಿರಲು ಗೋಧನ ಕುಲಕೆ ಯವಸಾಂಬು ಗೋಚರವೆ
ನೆಲನ ಗರುವರ ಗೊಂದಣವನಂ
ಡಲೆವನಖಿಳ ದ್ವೀಪಪತಿಗಳ
ನೆಳಲ ಸೈರಿಸನಳಿದನವನಿನ್ನೇನು ನಿನಗೆಂದ ॥4॥

೦೦೫ ರಚಿಸು ಯಜ್ಞಾರಮ್ಭವನು ...{Loading}...

ರಚಿಸು ಯಜ್ಞಾರಂಭವನು ನೃಪ
ನಿಚಯವನು ದಾಯಾದ್ಯರನು ಬರಿ
ಸುಚಿತ ವಚನದಲೆಮ್ಮ ಕರೆಸಿದರಾ ಕ್ಷಣಕೆ ಬಹೆವು
ಸಚಿವರಾವೆಡೆ ಕಳುಹು ಬದರಿಯ
ರುಚಿರ ಋಷಿಗಳ ಕರೆಸು ನಿನ್ನಭಿ
ರುಚಿಗೆ ನಿಷ್ಪ್ರತ್ಯೂಹವೆಂದನು ದಾನವಧ್ವಂಸಿ ॥5॥

೦೦೬ ಎನ್ದು ಕಳುಹಿಸಿಕೊಣ್ಡು ...{Loading}...

ಎಂದು ಕಳುಹಿಸಿಕೊಂಡು ದೋರಕಿ
ಗಿಂದಿರಾಪತಿ ಮಾಗಧನ ರಥ
ದಿಂದ ಬಿಜಯಂಗೈದನಿನಿಬರು ಕಳುಹಿ ಮರಳಿದರು
ಬಂದ ವೇದವ್ಯಾಸ ಧೌಮ್ಯರ
ನಂದು ಕರೆಸಿ ಯುಧಿಷ್ಠಿರನು ನಿಜ
ಮಂದಿರದೊಳೊಪ್ಪಿದನು ಪರಿಮಿತ ಜನ ಸಮೂಹದಲಿ ॥6॥

೦೦೭ ಅಕಟ ನಾರದನೇಕೆ ...{Loading}...

ಅಕಟ ನಾರದನೇಕೆ ಯಜ್ಞ
ಪ್ರಕಟವನು ಮಾಡಿದನು ನಮಗೀ
ಸಕಲ ಧರಣೀಕ್ಷತ್ರ ವರ್ಗದ ವಿಜಯ ಕಿರುಕುಳವೆ
ವಿಕಟ ಜಂಬೂದ್ವೀಪ ಪರಿಪಾ
ಲಕರು ನಮ್ಮಿನಿಬರಿಗೆ ಸದರವೆ
ಸುಕರವೇ ವರ ರಾಜಸೂಯವೆನುತ್ತ ಚಿಂತಿಸಿದ ॥7॥

೦೦೮ ಮಣಿವರಲ್ಲರಸುಗಳು ಮಾಡದೆ ...{Loading}...

ಮಣಿವರಲ್ಲರಸುಗಳು ಮಾಡದೆ
ಮಣಿದೆವಾದರಕೀರ್ತಿಕಾಮಿನಿ
ಕುಣಿವಳೈ ತ್ರೈಜಗದ ಜಿಹ್ವಾರಂಗ ಮಧ್ಯದಲಿ
ಬಣಗುಗಳು ನಾವೆಂದು ನಾಕದ
ಗಣಿಕೆಯರು ನಗುವರು ಸುಯೋಧನ
ನಣಕವಾಡಾಯ್ತು ತೆರನೆಂದರಸ ಬಿಸುಸುಯ್ದ ॥8॥

೦೦೯ ಎನಲು ಧಿಮ್ಮನೆ ...{Loading}...

ಎನಲು ಧಿಮ್ಮನೆ ನಿಂದು ಭುಗಿಲೆಂ
ದನು ಕಿರೀಟಿ ವೃಥಾಭಿಯೋಗದ
ಮನಕತಕೆ ಮಾರಾಂಕವಾಯ್ತೇ ಹರ ಮಹಾದೇವ
ನಿನಗಕೀರ್ತಿ ವಧೂಟಿ ಕುಣಿವಳೆ
ಜನದ ಜಿಹ್ವಾರಂಗದಲಿ ಹಾ
ಯೆನುತ ತಲೆದೂಗಿದನು ಘನ ಶೌರ್ಯಾನುಭಾವದಲಿ ॥9॥

೦೧೦ ಮಣಿಯರೇ ಮನ್ನೆಯರು ...{Loading}...

ಮಣಿಯರೇ ಮನ್ನೆಯರು ನಾಕದ
ಗಣಿಕೆಯರು ನಗುವರೆ ಸುಯೋಧನ
ನಣಕವಾಡುವನೇ ಶಿವಾ ತಪ್ಪೇನು ತಪ್ಪೇನು
ಕಣೆಗಳಿವು ನಾಳಿನಲಿ ಕಬ್ಬಿನ
ಕಣೆಗಳೋ ಗಾಂಡೀವವಿದು ನಿ
ರ್ಗುಣವೊ ತಾನರ್ಜುನ ಮಹೀರುಹವೆಂದನಾ ಪಾರ್ಥ ॥10॥

೦೧೧ ಸಕಲ ಜಮ್ಬೂದ್ಪೀಪ ...{Loading}...

ಸಕಲ ಜಂಬೂದ್ಪೀಪ ಪರಿ ಪಾ
ಲಕರ ಭಂಡಾರಾರ್ಥಕಿದೆ ಸು
ಪ್ರಕಟವೆಂದುಂಗುರವನಿತ್ತನು ನೃಪನ ಹಸ್ತದಲಿ
ಸುಕರ ದುಷ್ಕರವೆಂಬ ಚಿಂತಾ
ವಿಕಳತೆಗೆ ನೀ ಪಾತ್ರನೇ ಸಾ
ಧಕರನೇ ಸಂಹರಿಪೆ ತಾ ವೀಳೆಯವನೆನಗೆಂದ ॥11॥

೦೧೨ ಫೂತು ಫಲುಗುಣ ...{Loading}...

ಫೂತು ಫಲುಗುಣ ನಿನ್ನ ಕುಲಕಭಿ
ಜಾತ ಶೌರ್ಯಕೆ ಗರುವಿಕೆಗೆ ಸರಿ
ಮಾತನಾಡಿದೆ ಸಲುವುದೈ ನಿನಗೆನುತ ಕೊಂಡಾಡಿ
ಈತನುತ್ತರ ದೆಸೆಗೆ ಭೀಮನು
ಶಾತಮನ್ಯುವ ದೆಸೆಗೆ ಯಮಳರ
ಭೀತರಿದ್ದೆಸೆಗೆಂದು ವೇದವ್ಯಾಸ ನೇಮಿಸಿದ ॥12॥

೦೧೩ ನೆರಹಿ ಬಲವನು ...{Loading}...

ನೆರಹಿ ಬಲವನು ನಾಲ್ಕು ದಿಕ್ಕಿಗೆ
ಪರುಠವಿಸಿದರು ಫಲುಗುಣನನು
ತ್ತರಕೆ ಮೂಡಲು ಪವನಸುತ ದಕ್ಷಿಣಕೆ ಸಹದೇವ
ವರುಣ ದಿಕ್ಕಿಗೆ ನಕುಲನೀ ನಾ
ಲ್ವರಿಗೆ ಕೊಟ್ಟನು ವೀಳೆಯವ ಹಿರಿ
ಯರಸಿ ತಂದಳು ತಳಿಗೆ ತಂಬುಲ ಮಂಗಳಾರತಿಯ ॥13॥

೦೧೪ ಪರಮ ...{Loading}...

ಪರಮ ಲಗ್ನದೊಳಿಂದುಕೇಂದ್ರದೊ
ಳಿರಲು ಗುರು ಭಾರ್ಗವರು ಲಗ್ನದೊ
ಳಿರೆ ಶುಭಗ್ರಹದೃಷ್ಟಿ ಸಕಳೇಕಾದಶ ಸ್ಥಿತಿಯ
ಕರಣ ತಿಥಿ ನಕ್ಷತ್ರ ವಾರೋ
ತ್ಕರದಲಭಿಮತ ಸಿದ್ದಿಯೋಗದೊ
ಳರಸನನುಜರು ದಿಗ್ವಿಜಯಕನುವಾದರೊಗ್ಗಿನಲಿ ॥14॥

೦೧೫ ಅರಸ ವೇದವ್ಯಾಸ ...{Loading}...

ಅರಸ ವೇದವ್ಯಾಸ ಧೌಮ್ಯಾ
ದ್ಯರಿಗೆ ಬಲವೆಂದೆರಗಿ ಕುಂತಿಯ
ಚರಣ ಧೂಳಿಯ ಕೊಂಡು ವಿಪ್ರವ್ರಜಕೆ ಕೈ ಮುಗಿದು
ಅರಸಿಯರು ದೂರ್ವಾಕ್ಷತೆಯ ದಧಿ
ವಿರಚಿತದ ಮಾಂಗಲ್ಯವನು ವಿ
ಸ್ತರಿಸೆ ಬಹುವಿಧ ವಾದ್ಯದಲಿ ಹೊರವಂಟರರಮನೆಯ ॥15॥

೦೧೬ ಅರಸ ಕೇಳೈ ...{Loading}...

ಅರಸ ಕೇಳೈ ಮೊದಲಲರ್ಜುನ
ಚರಿತವನು ವಿಸ್ತರದಲರುಪುವೆ
ನುರು ಪರಾಕ್ರಮಿ ನಡೆದು ಬಿಟ್ಟನು ಸಾಲ್ವ ದೇಶದಲಿ
ಪುರಕೆ ದೂತರ ಕಳುಹಲವನಿವ
ರುರವಣೆಗೆ ಮನವಳುಕಿ ಕೊಟ್ಟನು
ತುರಗ ಗಜ ರಥ ಧನ ವಿಲಾಸಿನಿ ಜನವನುಚಿತದಲಿ ॥16॥

೦೧೭ ಅವನ ಕಾಣಿಸಿಕೊಣ್ಡು ...{Loading}...

ಅವನ ಕಾಣಿಸಿಕೊಂಡು ರಾಜ್ಯದೊ
ಳವನ ನಿಲಿಸಿ ತದೀಯ ಸೇನಾ
ನಿವಹ ಸಹಿತಲ್ಲಿಂದ ನಡೆದನು ಮುಂದೆ ವಹಿಲದಲಿ
ಅವನಿಪತಿ ಕಟದೇವನೆಂಬವ
ನವಗಡಿಸಿ ಸರ್ವಸ್ವವನು ಕೊಂ
ಡವನ ಬಲಸಹಿತಾ ದ್ಯುಮತ್ಸೇನಕನ ಝೋಂಪಿಸಿದ ॥17॥

೦೧೮ ಆತನನು ಗೆಲಿದನು ...{Loading}...

ಆತನನು ಗೆಲಿದನು ಸುನಾಭನ
ನೀತಿಗೆಡಿಸಿ ತದೀಯ ಸೇನಾ
ವ್ರಾತ ಸಹಿತಲ್ಲಿಂದ ಪ್ರತಿವಿಂಧ್ಯಕನನಪ್ಪಳಿಸಿ
ಆತನರ್ಥವಕೊಂಡು ತತ್ಪ್ರಾ
ಗ್ಜ್ಯೋತಿಷಕೆ ಧಾಳಿಟ್ಟನಲ್ಲಿ ಮ
ಹಾತಿಬಲನವನೊಡನೆ ಬಲುಹಾಯ್ತರ್ಜುನನ ಸಮರ ॥18॥

೦೧೯ ಜೀನಕರ ಬೋಟಕ ...{Loading}...

ಜೀನಕರ ಬೋಟಕ ಕಿರಾತರ
ನೂನಬಲ ಸಹಿತೀ ಮಹೀಪತಿ
ಸೂನು ಕಾದಿದನೀತನಲಿ ಭಗದತ್ತನೆಂಬವನು
ಈ ನರನ ಶರ ಜಾಲವಿದು ಕ
ಲ್ಪಾನಲನ ಕಾಲಾಟವಿದರೊಡ
ನಾನಲಿಂದ್ರಾದ್ಯರಿಗೆ ಸದರವೆ ರಾಯ ಕೇಳ್ ಎಂದ ॥19॥

೦೨೦ ಮುರಿಯದಾ ಬಲವೀತನುರುಬೆಗೆ ...{Loading}...

ಮುರಿಯದಾ ಬಲವೀತನುರುಬೆಗೆ
ಹರಿಯದೀ ಬಲವುಭಯ ಬಲದಲಿ
ಕುರಿದರಿಯ ಕುಮ್ಮರಿಯ ಕಡಿತಕೆ ಕಾಣೆನವಧಿಗಳ
ಅರಿಯದೀತನ ದುರ್ಗವೀ ಬಲ
ದಿರಿವುಗಳ ಬೇಳಂಬವನು ಬೇ
ಸರದೆ ಕಾದಿದನೆಂಟು ದಿನ ಭಗದತ್ತನೀತನಲಿ ॥20॥

೦೨೧ ಆವನೈ ನೀನಧಿಕತರ ...{Loading}...

ಆವನೈ ನೀನಧಿಕತರ ಸಂ
ಭಾವಿತನು ಹೇಳೆನೆ ಯುಧಿಷ್ಠಿರ
ದೇವನನುಜ ಕಣಾ ಧನಂಜಯನೆನಲು ಮಿಗೆ ಮೆಚ್ಚಿ
ನಾವು ನಿಮ್ಮಯ್ಯಂಗೆ ಸಖರಿಂ
ದಾವು ನಿನ್ನವರೇನು ಬೇಹುದು
ನೀವೆಮಗೆ ಕಡು ಮಾನ್ಯರೆಂದನು ಕಂಡನರ್ಜುನನ ॥21॥

೦೨೨ ಆದರೆಮಗೆಯು ದಿವಿಜಪತಿಯೋ ...{Loading}...

ಆದರೆಮಗೆಯು ದಿವಿಜಪತಿಯೋ
ಪಾದಿ ನೀವೆಮ್ಮಣ್ಣದೇವನ
ಮೇದಿನಿಯ ಸಾಮ್ರಾಜ್ಯ ಪದವಿಯ ರಾಜಸೂಯವನು
ಆಧರಿಸಿ ಸಾಕೆನಲು ಗಜ ಹಯ
ವಾದಿಯಾದ ಸಮಸ್ತ ವಸ್ತುವ
ನೈದೆ ಕೊಟ್ಟನು ಫಲುಗುಣಂಗೆ ಸುಮಿತ್ರಭಾವದಲಿ ॥22॥

೦೨೩ ಒನ್ದುತಿಙ್ಗಳು ಪಲವು ...{Loading}...

ಒಂದುತಿಂಗಳು ಪಲವು ಮನ್ನಣೆ
ಯಿಂದ ಮನ್ನಿಸಿ ತನ್ನ ಸೇನಾ
ವೃಂದವನು ಹೇಳಿದನು ಬಳಿಯಲಿ ಕಳುಹಿದನು ನರನ
ಮುಂದೆ ನಡೆದನು ರಾಮಗಿರಿಯಲಿ
ನಿಂದು ಕಪ್ಪವ ಕೊಂಡು ನಡೆದನು
ಮುಂದಣೀಶಾನ್ಯದಲಿ ಹೊಕ್ಕನು ಭುವನಪರ್ವತವ ॥23॥

೦೨೪ ಆ ಗಿರೀನ್ದ್ರ ...{Loading}...

ಆ ಗಿರೀಂದ್ರ ನಿವಾಸಿಗಳ ಸರಿ
ಭಾಗ ಧನವನು ಕೊಂಡು ಬಳಿಕ ಮ
ಹಾ ಗಜಾಶ್ವನ ಸೂರೆಗೊಂಡನು ಮುಂದೆ ದಂಡೆತ್ತಿ
ಆ ಗಯಾಳರ ಗಾವಿಲರ ನಿ
ರ್ಭಾಗಧೇಯರ ಮಾಡಿಯುತ್ತರ
ಭಾಗದಲಿ ತಿರುಗಿತ್ತು ಪಾಳೆಯವರಸ ಕೇಳ್ ಎಂದ ॥24॥

೦೨೫ ಗಿರಿಯ ತಪ್ಪಲ ...{Loading}...

ಗಿರಿಯ ತಪ್ಪಲ ವನಚರರ ಸಂ
ಹರಿಸಿ ಮುಂದೆ ಬೃಹಂತಕನ ಕಾ
ತರಿಸಿ ಕಾಣಿಸಿಕೊಂಡು ಸೇನಾಬಿಂದು ನಗರಿಯಲಿ
ಇರವ ಮಾಡಿ ಸುಧಾಮ ದೈತ್ಯರ
ನುರೆ ವಿಭಾಡಿಸಿ ಪಾರ್ವತೇಯರ
ಪುರವ ಕೊಂಡು ವುಲೂಕರನು ಪೌರವರ ಭಂಗಿಸಿದ ॥25॥

೦೨೬ ಮುನ್ದೆ ದಸ್ಯುಗಳೇಳುವನು ...{Loading}...

ಮುಂದೆ ದಸ್ಯುಗಳೇಳುವನು ಕ್ಷಣ
ದಿಂದ ಕಾಶ್ಮೀರಕರ ಸಾಧಿಸಿ
ಬಂದು ದಶಮಂಡಲದ ಲೋಹಿತರನು ವಿಭಾಡಿಸಿದ
ತಂದ ಕಪ್ಪದಲಾ ತ್ರಿಗರ್ತರ
ನಂದು ಹದುಳಿಸಿ ಗರುವಿತರನಾ
ಟಂದು ತೆಂಕಣದಾಭಿಚಾರಕ ರೂಷಕರ ಗೆಲಿದ ॥26॥

೦೨೭ ಧಾಳಿಯಿಟ್ಟನು ರೋಚಮಾನನ ...{Loading}...

ಧಾಳಿಯಿಟ್ಟನು ರೋಚಮಾನನ
ಮೇಲೆ ಕಪ್ಪವಕೊಂಡು ಬಿಟ್ಟುದು
ಪಾಳೆಯವು ಚಿತ್ರಾಯುಧನ ನರಸಿಂಹ ನಗರಿಯಲಿ
ಮೇಲೆ ವಂಗರ ಮುರಿದು ವರನೇ
ಪಾಳ ಕರ್ಪರ ಹೂಣಿಯರನು ವಿ
ಶಾಲ ಕಾಂಭೋಜಾದಿಗಳನಪ್ಪಳಿಸಿದನು ತಿರುಗಿ ॥27॥

೦೨೮ ಪಾರಶೀಕ ಕಿರಾತ ...{Loading}...

ಪಾರಶೀಕ ಕಿರಾತ ಬರ್ಬರ
ಪಾರಿಯಾತ್ರರ ಮುರಿದು ಸರ್ವ ವಿ
ಹಾರವನು ಮಾಡಿದನು ಮ್ಲೇಚ್ಛ ಸಹಸ್ರಕೋಟಿಗಳ
ಕ್ಷಾರಕರ ಹೂಣಕರ ಡೊಕ್ಕರ
ಪಾರಕರ ಖುರಸಾಣ ಭೂಪರೊ
ಳಾರುಭಟೆಯಲಿ ಕಾದಿ ಕೊಂಡನು ಸಕಲ ವಸ್ತುಗಳ ॥28॥

೦೨೯ ಬೆದರಿಸಿದನಾ ಹಿಮಗಿರಿಯ ...{Loading}...

ಬೆದರಿಸಿದನಾ ಹಿಮಗಿರಿಯ ಪಾ
ಶ್ರ್ವದ ಕಿರಾತರ ಮುಂದೆ ವಾಯ
ವ್ಯದಲಿ ಶೋಧಿಸಿ ಮರಳಿದನು ಹಿಮಗಿರಿಯ ಕುಕ್ಷಿಯಲಿ
ಪುದಿದ ನಾನಾ ದ್ರೋಣಿಗಳ ಮ
ಧ್ಯದ ಕಿರಾತ ಪುಳಿಂದ ನಿಚಯವ
ಸದೆದು ಹತ್ತಿದನಗ್ರಶಿಖರಕೆ ಪಾರ್ವತೀ ಪಿತನ ॥29॥

೦೩೦ ಎರಡು ಸಾವಿರ ...{Loading}...

ಎರಡು ಸಾವಿರ ಯೋಜನವು ಹಿಮ
ಗಿರಿಯ ಬಹಳೋತ್ಸೇಧ ಶಿಖರಕೆ
ಸರಿಸದಲಿ ಹತ್ತಿದುದು ಪಾಳಯವೇನ ಹೇಳುವೆನು
ಕರಿ ತುರಗ ವರ ರಥ ಪದಾತಿಗೆ
ಪರಿಗಣನೆಯೆಲ್ಲಿಯದು ಹಿಮಗಿರಿ
ಯೆರಡು ಸಾವಿರದಗಲ ತಿರುಗಿತು ರಾಯ ಕೇಳ್ ಎಂದ ॥30॥

೦೩೧ ಗಿರಿಯ ಕೋಣೆಯ ...{Loading}...

ಗಿರಿಯ ಕೋಣೆಯ ಕುಹರ ಗುಹೆಗಳ
ಗರುವರುಂಟೆಂದಾ ಪುಳಿಂದರ
ನೊರಸಿ ಕಾಣಿಸಿಕೊಂಡು ಕೊಂಡನು ಸಕಲ ವಸ್ತುಗಳ
ಗಿರಿಯನಿಳಿದುದು ನಡೆದು ಬಲ ಕಿಂ
ಪುರುಷ ಖಂಡದ ಬಹಳ ನದಿಗಳ
ಲೆರಡು ತಡಿಯಲಿ ತಳಿತು ಬಿಟ್ಟುದು ವನ ವನಂಗಳಲಿ ॥31॥

೦೩೨ ಅದು ಗಣನೆಗೊಮ್ಬತ್ತು ...{Loading}...

ಅದು ಗಣನೆಗೊಂಬತ್ತು ಸಾವಿರ
ವದರೊಳಿದ್ದುದು ಯಕ್ಷಕಿನ್ನರ
ಸುದತಿಯರು ಕಿಂಪುರುಷರತಿರಾಗಿಗಳು ಸುಖಮಯರು
ಇದರ ಘಲ್ಲಣೆಗಾನಲೇನ
ಪ್ಪದು ತದೀಯ ಜನಂಗಳಿತ್ತುದು
ಸುದತಿಯರನಾ ಮಂಡಲಕೆ ಮೀಟಾದ ವಸ್ತುಗಳ ॥32॥

೦೩೩ ಅಲ್ಲಿ ಕೆಲಕಡೆಯಲ್ಲಿ ...{Loading}...

ಅಲ್ಲಿ ಕೆಲಕಡೆಯಲ್ಲಿ ಗಿರಿ ಗುಹೆ
ಯಲ್ಲಿ ನೆರೆದ ಕಿರಾತ ವರ್ಗವ
ಚೆಲ್ಲ ಬಡಿದಪಹರಿಸಿದನು ಬಹುವಿಧ ಮಹಾಧನವ
ಮೆಲ್ಲಮೆಲ್ಲನೆ ಹೇಮ ಕೂಟದ
ಕಲ್ಲನಡರಿದನಾ ಮಹಾದ್ರಿಗ
ಳೆಲ್ಲ ಹಿಮಶೈಲದ ಮಹೋನ್ನತಿ ಬಹಳವಿಸ್ತಾರ ॥33॥

೦೩೪ ಅಡರಿತೀ ಬಲವಿದರ ...{Loading}...

ಅಡರಿತೀ ಬಲವಿದರ ಬೊಬ್ಬೆಯ
ಗಡಬಡೆಗೆ ಪದಘಟ್ಟಣೆಗೆ ಹುಡಿ
ಹುಡಿಯಲಾ ಗಿರಿಕೋಟೆ ಕೋಳಾಹಳದ ಕೊಬ್ಬಿನಲಿ
ನಡೆದು ಬಿಟ್ಟುದು ಗಿರಿಯ ತುದಿಯಲಿ
ತುಡುಕಿದುದು ನಾನಾ ದಿಗಂತವ
ತಡೆಯದದುಭುತ ವಾದ್ಯ ಗಜ ಹಯ ರಥದ ನಿರ್ಘೋಷ ॥34॥

೦೩೫ ಹೇಮಕೂಟದ ಗಿರಿಯ ...{Loading}...

ಹೇಮಕೂಟದ ಗಿರಿಯ ಗಂಧ
ರ್ವಾಮರರ ಝೋಂಪಿಸಿದನವರು
ದ್ದಾಮ ವಸ್ತುವ ಕೊಂಡನಿಳಿದನು ಬಳಿಕ ಪರ್ವತವ
ಆ ಮಹಾ ಹರಿವರುಷದಲ್ಲಿಯ
ಸೀಮೆ ಯೋಜನ ನವ ಸಹಸ್ರ ವಿ
ರಾಮವದರೊಳಗೆಲ್ಲ ವಿವರಿಸಲರಿಯೆ ನಾನೆಂದ ॥35॥

೦೩೬ ಉತ್ತರೋತ್ತರ ದೇವಭೂಮಿಗ ...{Loading}...

ಉತ್ತರೋತ್ತರ ದೇವಭೂಮಿಗ
ಳೆತ್ತಣವರೀ ದಳ ನಿಚಯ ತಾ
ನೆತ್ತ ಭೂರಿಧ್ವನಿಯನೀ ಗಜಬಜವನೀ ಜನವ
ಎತ್ತಲೆಂದರಿಯರು ವಿನೋದಕೆ
ತೆತ್ತರಲ್ಲಿಯ ಪಕ್ಷಿಮೃಗ ಹಯ
ವುತ್ತಮಾಂಗನೆಯರನು ಮನ್ನಿಸಿ ಕಂಡು ಫಲುಗುಣಗೆ ॥36॥

೦೩೭ ಎರಡು ಕಡೆಯಮ್ಬುಧಿಯ ...{Loading}...

ಎರಡು ಕಡೆಯಂಬುಧಿಯ ಪಾಶ್ರ್ವದ
ದುರುಳರನು ಧಟ್ಟಿಸಿ ತದೀಯರು
ವೆರಸಿ ಬಡಗಲು ನಡೆದುದಲ್ಲಿಯ ನಿಷಧ ಪರ್ವತಕೆ
ಎರಡು ಸಾವಿರ ಯೋಜನದ ತುದಿ
ವರೆಗೆ ಹತ್ತಿತು ಬಿಟ್ಟಿತಾ ಗಿರಿ
ಬಿರಿಯೆ ಬಿರು ಸೂಳೈಸಿದವು ನಿಸ್ಸಾಳ ಕೋಟಿಗಳು ॥37॥

೦೩೮ ಮೇಲೆ ನಿಷಧಾಚಲದ ...{Loading}...

ಮೇಲೆ ನಿಷಧಾಚಲದ ಸುತ್ತಲು
ಧಾಳಿ ಹರಿದುದು ದೆಸೆದೆಸೆಯ ದೈ
ತ್ಯಾಳಿ ಹೆಚ್ಚಿದ ದುಷ್ಟ ದಾನವ ಮಂಡಲೇಶ್ವರರ
ಶೈಲ ಶಿಖರದೊಳುಳ್ಳ ದೊರೆಗಳ
ತಾಳು ಬಾಗಿಲ ಕುತ್ತರಲಿ ಕಾ
ಲಾಳು ಹೊಕ್ಕುದು ಹೊಯ್ದು ಕಟ್ಟಿತು ಕೂಡೆ ಸೂರೆಗಳ ॥38॥

೦೩೯ ಗಿರಿಯ ಶಿಖರದ ...{Loading}...

ಗಿರಿಯ ಶಿಖರದ ಮೇಲ್ಕಡೆಯನಾ
ಚರಿಸಿ ನಿಷಧಾಚಲವನಿಳಿದು
ನರನ ಪಾಳೆಯ ಬಿಟ್ಟುದಾಗಲಿಳಾ ವ್ರತದ ಮೇಲೆ
ಅರಸ ಕೇಳೊಂಬತ್ತು ಸಾವಿರ
ಪರಿಗಣಿತ ಯೋಜನದ ನೆಲ ಸುರ
ಗಿರಿಯ ಸುತ್ತಣ ದೇಶವತಿ ರಮಣೀಯತರವೆಂದ ॥39॥

೦೪೦ ಚೂಣಿಗಾನುವರಿಲ್ಲ ಪಾರ್ಥನ ...{Loading}...

ಚೂಣಿಗಾನುವರಿಲ್ಲ ಪಾರ್ಥನ
ಬಾಣಕಿದಿರಾರುಂಟು ವಾದ್ಯ
ಶ್ರೇಣಿ ಚಾತುರ್ಬಲದ ಘಲ್ಲಣೆಗಿಲ್ಲ ಗರ್ವಿತರು
ಹೂಣೆ ಹೊಕ್ಕನು ಕನಕ ಶೈಲ
ದ್ರೋಣಿಗಳ ದುರ್ಬಲ ಸುರೌಘವ
ನಾಣೆಗಂಜಿಸಿ ಕಳೆದುಕೊಂಡನು ಸಕಲ ವಸ್ತುಗಳ ॥40॥

೦೪೧ ಹರಿದು ಹತ್ತಿತು ...{Loading}...

ಹರಿದು ಹತ್ತಿತು ಗಂಧಮಾದನ
ಗಿರಿಯ ಸುತ್ತಣ ಯಕ್ಷ ವಿದ್ಯಾ
ಧರರನಂಜಿಸಿ ಕೊಂಡನಲ್ಲಿಯ ಸಾರ ವಸ್ತುಗಳ
ಗಿರಿಯನಿಳಿದರು ಜಂಬು ನೇರಿಲ
ಮರನ ಕಂಡರು ಗಗನ ಚುಂಬಿತ
ವೆರಡು ಸಾವಿರ ಯೋಜನಾಂತರದೊಳತಿ ವಿಳಾಸದಲಿ ॥41॥

೦೪೨ ಅದರ ಫಲ ...{Loading}...

ಅದರ ಫಲ ಹೇರಾನೆಗಳ ತೋ
ರದಲಿಹವು ಗಿರಿಸಾರ ಶಿಲೆಗಳ
ಹೊದರಿನಲಿ ಬಿದ್ದೊಡೆದು ಹೊಳೆಯಾದುದು ಮಹಾರಸದ
ಅದು ಸುಧಾಮಯವಾಯ್ತು ಜಂಬೂ
ನದಿ ಜಲಸ್ಪರ್ಶದಲಿ ಜಾಂಬೂ
ನದ ಸುವರ್ಣವೆಯಾದುದಾ ನದಿಯೆರಡು ತಡಿವಿಡಿದು ॥42॥

೦೪೩ ಆ ರಸೋದಕ ...{Loading}...

ಆ ರಸೋದಕ ಪಾನವೇ ಸಂ
ಸಾರ ಸೌಖ್ಯದ ಸಿದ್ದಿಯಿತರಾ
ಹಾರವಿಂಧನ ತಂಡುಲಾಗ್ನಿಕ್ರಮ ವಿಧಾನವದು
ನಾರಿಯರು ಸಹಿತಲ್ಲಿ ಸಿದ್ಧರು
ಚಾರಣರು ರಮಣೀಯ ತೀರ ವಿ
ಹಾರಿಗಳು ಬಹುರತ್ನದಿಂ ಮನ್ನಿಸಿದರರ್ಜುನನ ॥43॥

೦೪೪ ಕೇಳಿ ಸೊಗಸಿದ ...{Loading}...

ಕೇಳಿ ಸೊಗಸಿದ ವಸ್ತುವಿಗೆ ಕ
ಣ್ಣಾಲಿ ಬಿದ್ದಣವಾಯ್ತಲಾ ಸುರ
ಪಾಲ ಪದವಿದರೊರೆಗೆ ಬಹುದೇ ತೀರವಾಸಿಗಳ
ಧಾಳಿ ಧಟ್ಟಣೆಗಳನು ಮಾಣಿಸಿ
ಪಾಳೆಯವನು ಪವನ ಸರೋವರ
ವೇಲೆಯಲಿ ಬಿಡಿಸಿದನು ಜಂಬೂನದಿಯ ತೀರದಲಿ ॥44॥

೦೪೫ ಲಲಿತ ದಿವ್ಯಾಭರಣ ...{Loading}...

ಲಲಿತ ದಿವ್ಯಾಭರಣ ರತ್ನಾ
ವಳಿಯನನುಕರಿಸಿದನು ಪಾಳೆಯ
ಸುಳಿದುದಮರಾಚಲದ ಕೇಸರ ಶಿಖರಿಗಳ ಕಳೆದು
ಹೊಳೆ ಹೊಳೆವ ಮೇರುವಿನ ಸುತ್ತಣ
ವಳಯದರ್ಧವನಾಕರಿಸಿ ಕೈ
ವಳಿಸಿ ಬಿಟ್ಟನು ಹೊಕ್ಕಿಳಾವೃತವರುಷ ಸೀಮೆಯಲಿ ॥45॥

೦೪೬ ಸೇನೆ ಪಡುವಲು ...{Loading}...

ಸೇನೆ ಪಡುವಲು ತಿರುಗಿ ಸುತ್ತಣ
ವಾನುಪೂರ್ವಿಯ ಗಂಧಮಾದನ
ಸಾನುವನು ವೆಂಠಣಿಸಿಯಡರಿತು ಚೂಣಿಶೃಂಗದಲಿ
ಆ ನಗೇಂದ್ರನನಿಳಿದು ಪಡುವಣ
ಕಾನನಂಗಳ ಕೇತುಮಾಲದ
ಕಾನನಂಗಳ ಕಳೆದು ಬಿಟ್ಟುದು ಸೇನೆ ಬಳಸಿನಲಿ ॥46॥

೦೪೭ ಅಲ್ಲಿ ಸಾಗರ ...{Loading}...

ಅಲ್ಲಿ ಸಾಗರ ತೀರ ಪರಿಯಂ
ತೆಲ್ಲಿ ಗಜಹಯವೆಲ್ಲಿ ಸುದತಿಯ
ರೆಲ್ಲಿ ಮಣಿಗಣವೆಲ್ಲಿ ಬಹುಧನವೆಲ್ಲಿ ರಮಣೀಯ
ಅಲ್ಲಿಗಲ್ಲಿಗೆ ನಡೆದು ಸಾಧಿಸಿ
ಕೆಲ್ಲೆ ಕುಹರದ ಕೋಣೆ ಬಾಗುಗ
ಳೆಲ್ಲವನು ಹೊಕ್ಕರಿಸಿ ತೆರಳಿಚಿದನು ಮಹಾಧನವ ॥47॥

೦೪೮ ಎಡಕಡೆಯಲೊಮ್ಬತ್ತು ಸಾವಿರ ...{Loading}...

ಎಡಕಡೆಯಲೊಂಬತ್ತು ಸಾವಿರ
ನಡು ನೆಲನನಾಕರಿಸಿ ಮೂಡಣ
ಕಡೆಗೆ ತಿರುಗಿತು ಗಂಧಮಾದನ ಗಿರಿಯನೇರಿಳಿದು
ನಡೆದಿಳಾವೃತದೊಳಗೆ ಬಿಟ್ಟುದು
ಪಡೆ ಸುರಾದ್ರಿಯನುಳುಹಿ ಬಲದಲಿ
ನಡೆಯಲತಿ ದೂರದಲಿ ಕಂಡರು ಮಂದರಾಚಲವ ॥48॥

೦೪೯ ಇದುವೆ ಕಡೆಗೋಲಾಯ್ತು ...{Loading}...

ಇದುವೆ ಕಡೆಗೋಲಾಯ್ತು ಕಡೆವಂ
ದುದಧಿಯನು ತಾನಿದು ಮಹಾಗಿರಿ
ಯಿದರ ಬಿಂಕವ ನೋಡಬೇಕಂದರ್ಜುನನ ಸೇನೆ
ಒದರಿ ಹತ್ತಿತು ನಡುವಣರೆದು
ರ್ಗದಲಿ ಬೆಟ್ಟಂಗಳಲಿ ನೃಪರಿ
ದ್ದುದು ಮಹಾಹವವಾಯ್ತು ಪಾರ್ಥನ ಚೂಣಿಯವರೊಡನೆ ॥49॥

೦೫೦ ಇಳುಹಿದರು ಚೂಣಿಯನು ...{Loading}...

ಇಳುಹಿದರು ಚೂಣಿಯನು ಮುಂದರೆ
ನೆಲೆಯ ಭಟರೌಕಿದರು ಭಾರಿಯ
ತಲೆವರಿಗೆಗಳಲೊತ್ತಿದರು ಹೊಗಿಸಿದರು ದುರ್ಗವನು
ಕಲುವಳೆಯ ಕೋಲಾಹಲಕ್ಕಿವ
ರಳುಕದಿರಿದರು ಸುರಗಿಯಲಿ ತೆನೆ
ವಳಿಯ ಹಿಡಿದರು ಹೊಯ್ದು ಕೇಶಾಕೇಶಿ ಯುದ್ಧದಲಿ ॥50॥

೦೫೧ ಶಕರು ಖದ್ಯೋತ ...{Loading}...

ಶಕರು ಖದ್ಯೋತ ಪ್ರತಾಪರು
ವಿಕಟ ಜಂಘರು ದೀರ್ಘಮಯ ವೇ
ಣಿಕರು ಪಶುಪಾಲಕ ಪುಳಿಂದರು ಕಂಕಣಾಹ್ವಯರು
ಸಕಲ ದಸ್ಯುಗಳೈದೆ ಸೋತುದು
ವಿಕಳ ಬಲವೊಪ್ಪಿಸಿತು ಸರ್ವ
ಸ್ವಕವ ಸಂಧಾನದಲಿ ನೆಲೆಯಾಯ್ತಲ್ಲಿಯರ್ಜುನಗೆ ॥51॥

೦೫೨ ಶೋಧಿಸಿದನಾ ಗಿರಿಯನಾಚೆಯ ...{Loading}...

ಶೋಧಿಸಿದನಾ ಗಿರಿಯನಾಚೆಯ
ಹಾದಿಯಲಿ ಹೊರವಂಟು ಬರೆ ಮರಿ
ಯಾದೆಗಿಕ್ಕಿದ ಬೆಟ್ಟವಿದ್ದುದು ಮಾಲ್ಯವಂತ ಗಿರಿ
ಭೇದಿಸಿದನದರೊಳಗು ಹೊರಗಿನ
ಲಾದ ವಸ್ತುವ ಕೊಂಡು ತಚ್ಛೈ
ಲೋದರವನೇರಿಳಿದು ಭದ್ರಾಶ್ವಕ್ಕೆನಡೆತಂದ ॥52॥

೦೫೩ ಅದು ಮಹಾ ...{Loading}...

ಅದು ಮಹಾ ರಮಣೀಯತರವಂ
ತದರೊಳಿದ್ದುದು ಶುದ್ಧ ಭೋಗಾ
ಸ್ಪದರು ಯಕ್ಷೋರಕ್ಷಗಂಧರ್ವಾಪ್ಸರೋ ನಿಕರ
ಕುದುರೆ ರಥ ಗಜ ಪತ್ತಿ ನಿರ್ಘೋ
ಷದಲಿ ಬೆಬ್ಬಳೆಯಾಯ್ತು ಬೇಳಂ
ಬದ ವಿಘಾತಿಗೆ ಸಿಲುಕಿ ತೆತ್ತುದು ಸಕಲ ವಸ್ತುಗಳ ॥53॥

೦೫೪ ದೊರಕಿತಲ್ಲಿಯಪೂರ್ವ ವಸ್ತೂ ...{Loading}...

ದೊರಕಿತಲ್ಲಿಯಪೂರ್ವ ವಸ್ತೂ
ತ್ಕರ ಸಮುದ್ರದ್ವೀಪ ಪರಿಯಂ
ತರ ನಡೆದನೊಂಬತ್ತು ಸಾವಿರ ಯೋಜನಾಂತರವ
ತಿರುಗಿದನು ಭದ್ರಾಶ್ವಕವನಾ
ಕರಿಸಿ ಬಡಗಲು ನಡೆದರಲ್ಲಿಯ
ಗಿರಿಯ ಕಂಡರು ಹತ್ತಿದರು ಹರುಷದಲಿ ಬೊಬ್ಬಿಡುತ ॥54॥

೦೫೫ ನೀಲ ಗಿರಿಯಗ್ರದಲಿ ...{Loading}...

ನೀಲ ಗಿರಿಯಗ್ರದಲಿ ಬಿಟ್ಟುದು
ಪಾಳೆಯವು ಬೊಬ್ಬೆಯಲಿ ದಿಕ್ಕಿನ
ಮೂಲೆ ಬಿರಿದುದು ಜರಿದವದ್ರಿಗಳೇನನುಸುರುವೆನು
ಮೇಲು ದುರ್ಗದ ಸಂಧಿಗೊಂದಿಯೊ
ಳಾಳು ಹರಿದುದು ಸೂರೆಗೊಂಡು ವಿ
ಶಾಲ ವಸ್ತುವ ತಂದರಲ್ಲಿದ್ದರಸುಗಳ ಗೆಲಿದು ॥55॥

೦೫೬ ಎರಡು ಸಾವಿರದುದ್ದವದು ...{Loading}...

ಎರಡು ಸಾವಿರದುದ್ದವದು ಮ
ತ್ತೆರಡು ಸಾವಿರದಗಲವದನಾ
ಕರಿಸಿ ರಮ್ಯಕ ಭೂಮಿಗಿಳಿದರು ಹೊಕ್ಕರಾ ನೆಲನ
ಅರಸ ಕೇಳಲ್ಲಲ್ಲಿ ಸುಮನೋ
ಹರದ ವಸ್ತುವ ಕೊಂಡು ನವ ಸಾ
ವಿರವನಗಲಕೆ ಸುತ್ತಿ ಬಂದರು ಗೆಲಿದು ಗರ್ವಿತರ ॥56॥

೦೫೭ ಅರಸ ಕೇಳಲ್ಲಿನ್ದ ...{Loading}...

ಅರಸ ಕೇಳಲ್ಲಿಂದ ಬಡಗಲು
ಹರಿದು ಬಿಟ್ಟರು ಹತ್ತಿದರು ಬೇ
ಸರದೆ ಕಲುದರಿಗಳಲಿ ಬಹಳ ಶ್ವೇತಪರ್ವತವ
ಗಿರಿಯ ತುದಿಗಳ ತೋಟದಲಿ ಗ
ಹ್ವರದ ಕೊಳ್ಳದ ಕೋಹಿನಲಿ ಹೊ
ಕ್ಕಿರಿದು ಶೋಧಿಸಿ ಕೊಂಡರಲ್ಲಿಯ ಸಾರವಸ್ತುಗಳ ॥57॥

೦೫೮ ಇಳಿದನಾ ಗಿರಿಯನು ...{Loading}...

ಇಳಿದನಾ ಗಿರಿಯನು ಹಿರಣ್ಮಯ
ದೊಳಗೆ ಬಿಟ್ಟನು ಪಾಳೆಯವ ತ
ದ್ವಲಯ ಮಿಗಿಲೊಂಬತ್ತು ಸಾವಿರ ಯೋಜನಾಂತರವ
ಬಳಸಿ ಬಂದನು ವಿಮಲ ಸೌಧಾ
ವಳಿಯ ನೆಲೆಯುಪ್ಪರಿಗೆಗಳ ವರ
ಲಲನೆಯರು ಕಂಡೀತನನು ಹೊಗಳಿದರು ತಮ ತಮಗೆ ॥58॥

೦೫೯ ಈತ ಭಾರತ ...{Loading}...

ಈತ ಭಾರತ ವರುಷ ಪತಿಯನು
ಜಾತ ಗಡ ತತ್ಕರ್ಮ ಭೂಮಿಯ
ಲೀತನಧಿಪತಿ ಗೆಲಿದನಿತ್ತಲು ದೇವಭೂಮಿಪರ
ಈತ ಗೌರೀಸುತನವೋಲ್ ಪುರು
ಹೂತ ತನಯತ ವೋಲು ಭುವನ
ಖ್ಯಾತನೆಂದಾ ಸ್ತ್ರೀಕಟಕ ಕೊಂಡಾಡಿತರ್ಜುನನ ॥59॥

೦೬೦ ತನ ತನಗೆ ...{Loading}...

ತನ ತನಗೆ ತರುಣಿಯರು ಹೂವಿನ
ತನಿವಳೆಯ ಕರೆದರು ಕನತ್ಕಾಂ
ಚನ ವಿಭೂಷಣ ರತ್ನಚಯ ಪೂರಿತದ ಪೆಟ್ಟಿಗೆಯ
ವನಿತೆಯರನಾ ದೇಶದಲಿ ಮೀ
ಟೆನಿಪರನು ಮೃಗಪಕ್ಷಿ ಕೃಷ್ಣಾ
ಜಿನವನಂತವನಿತ್ತು ಸತ್ಕರಿಸಿದರು ಫಲುಗುಣನ ॥60॥

೦೬೧ ಧಾರುಣೀಪತಿ ಕೇಳು ...{Loading}...

ಧಾರುಣೀಪತಿ ಕೇಳು ದಳ ನಡು
ದಾರಿ ಬಡಗಣ ಶೃಂಗಪರ್ವತ
ದೋರೆಯಲಿ ದೊರೆಗಳನು ಧಟ್ಟಿಸಿ ಸೆಳೆದು ಬಹು ಧನವ
ಭಾರಣೆಯ ಮುಂಗುಡಿಯ ಕೊಳ್ಳೆಗ
ಳೋರಣಿಸಿ ತುದಿಗೇರಿ ಸಿದ್ಧರ
ಚಾರಣರ ವಿದ್ಯಾಧರರ ಮುತ್ತಿದರು ಮನ್ನಿಸದೆ ॥61॥

೦೬೨ ಅರಸು ಮೋಹರ ...{Loading}...

ಅರಸು ಮೋಹರ ಹತ್ತಿತಾ ಗಿರಿ
ಎರಡು ಸಾವಿರದಗಲವದರಲಿ
ತುರುಗಿ ಬಿಟ್ಟಿತು ಸೇನೆ ಸೂಳೈಸಿದವು ನಿಸ್ಸಾಳ
ಬಿರಿದುದಾ ಗಿರಿ ಕೆಳಗಣುತ್ತರ
ಕುರುಗಳೆದೆ ಜರ್ಝರಿತವಾಯ್ತ
ಬ್ಬರಕೆ ಬಡಗಣ ಕಡಲು ಕದಡಿತು ತಳದ ತಾಯ್ಮಳಲ ॥62॥

೦೬೩ ನೆರೆದರಲ್ಲಿಯ ನೃಪರು ...{Loading}...

ನೆರೆದರಲ್ಲಿಯ ನೃಪರು ದೂತರ
ಹರಿಯ ಬಿಟ್ಟರು ಪಾರ್ಥನಿದ್ದೆಡೆ
ಗರಸ ಕೇಳವರುಗಳು ಬಂದರು ಕಂಡರರ್ಜುನನ
ಗಿರಿಯನಿಳಿಯದಿರಿತ್ತಲುತ್ತರ
ಕುರುಗಳಿಹ ಸಂಸ್ಥಾನವಿದು ಗೋ
ಚರಿಸಲರಿಯದು ನರರ ಕಾಲ್ದುಳಿಗೆಂದರವರಂದು ॥63॥

೦೬೪ ಅಲ್ಲದಾಕ್ರಮಿಸಿದರೆ ನಿನಗವ ...{Loading}...

ಅಲ್ಲದಾಕ್ರಮಿಸಿದರೆ ನಿನಗವ
ರಲ್ಲಿ ಕಾಣಿಕೆ ದೊರಕಲರಿಯದು
ಬಲ್ಲಿದವರುತ್ತರದ ಕುರುಗಳು ನಿನಗೆ ಬಾಂಧವರು
ಗೆಲ್ಲದಲಿ ಫಲವಿಲ್ಲ ಸಾಹಸ
ವಲ್ಲಿ ಮೆರೆಯದು ಮತ್ರ್ಯದೇಹದೊ
ಳಲ್ಲಿ ಸುಳಿವುದು ಭಾರವೆಂದರು ಚರರು ಫಲುಗುಣಗೆ ॥64॥

೦೬೫ ಮಾಣಲದು ನಮಗವರು ...{Loading}...

ಮಾಣಲದು ನಮಗವರು ಬಂಧು
ಶ್ರೇಣಿಗಳು ಗಡ ಹೋಗಲದು ಕ
ಟ್ಟಾಣೆಯಾವುದು ನಿಮ್ಮ ದೇಶದೊಳುಳ್ಳ ವಸ್ತುಗಳ
ವಾಣಿಯವ ಮಾಡದೆ ಸುಯಜ್ಞದ
ಕಾಣಿಕೆಯನೀವುದು ಯುಧಿಷ್ಠಿರ
ನಾಣೆ ನಿಮಗೆನೆ ತಂದು ಕೊಟ್ಟರು ಸಕಲ ವಸ್ತುಗಳ ॥65॥

೦೬೬ ತಿರುಗಿತಲ್ಲಿನ್ದಿತ್ತ ಪಾಳೆಯ ...{Loading}...

ತಿರುಗಿತಲ್ಲಿಂದಿತ್ತ ಪಾಳೆಯ
ಮುರಿದು ಬಿಟ್ಟು ಹಿರಣ್ಮಯವನಾ
ಕರಿಸಿ ರಮ್ಯಕದಿಂದಿಳಾವೃತದಿಂದ ದಕ್ಷಿಣಕೆ
ಭರದಿನೈದುತ ಹರಿವರುಷ ಕಿಂ
ಪುರುಷವನು ದಾಟುತ ಹಿಮಾನ್ವಿತ
ಗಿರಿಯನೇರಿದುದಿಳಿದು ಬಂದುದು ತೆಂಕ ಮುಖವಾಗಿ ॥66॥

೦೬೭ ಕಳುಹಿ ಕಳೆದನು ...{Loading}...

ಕಳುಹಿ ಕಳೆದನು ಹಿಂದೆ ಕೂಡಿದ
ಬಲವನವರವರೆಲ್ಲ ಯಾಗ
ಸ್ಥಳಕೆ ಬಹ ನೇಮದಲಿ ಹರಿದುದು ನಿಜ ಪುರಂಗಳಿಗೆ
ನೆಲನನಗಲದ ವಸ್ತುವಿದನೆಂ
ತಳವಡಿಸಿದನೊ ಶಿವಯೆನುತ ಸುರ
ರುಲಿಯೆ ಹೊಕ್ಕನು ಪಾರ್ಥನಿಂದ್ರಪ್ರಸ್ಥ ಪುರವರವ ॥67॥

+೦೩ ...{Loading}...