೦೧

೦೦೦ ಸೂ ಕಾಯಿದರು ...{Loading}...

ಸೂ. ಕಾಯಿದರು ಸತ್ಯವನು ವನವಾ
ಸಾಯತವ ನೆರೆ ಗೆಲಿದು ಪಾಂಡವ
ರಾಯರೋಲೈಸಿದರು ಬಂದು ವಿರಾಟ ನಗರಿಯಲಿ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಮುನಿಜನ ನೃಪಜನಂಗಳ
ಬೀಳುಗೊಟ್ಟನು ಭೂಮಿಪತಿ ಬಲವಂದು ಹುತವಹನ
ಮೇಲು ಶಕುನದ ಚಾರು ನಿನದವ
ನಾಲಿಸುತ ಸೋದರರು ಸಹಿತ ವ
ನಾಲಯವ ಹೊರವಂಟು ಸಾರಿದರೊಂದು ವಟಕುಜವ ॥1॥

೦೦೨ ಬನ್ದು ವಟಕುಜದಡಿಯಲನಿಬರು ...{Loading}...

ಬಂದು ವಟಕುಜದಡಿಯಲನಿಬರು
ನಿಂದು ದುರುಪದಿ ಸಹಿತ ಬಳಲಿಕೆ
ಯಿಂದ ವಿಶ್ರಮಿಸಿದರು ಚಿಂತಿಸಿ ಧರ್ಮನಂದನನು
ಹಿಂದೆ ಹನ್ನೆರಡಬುದ ಸವೆದವು
ಮುಂದಣನುವಿಂಗೇನು ಗತಿ ಬಳಿ
ಕೊಂದು ವರುಷಜ್ಞಾತವಾಸಕ್ಕಾವ ಠಾವೆಂದ ॥2॥

೦೦೩ ಬಡಗಲವರದು ಮೂಡಣರಸುಗ ...{Loading}...

ಬಡಗಲವರದು ಮೂಡಣರಸುಗ
ಳೊಡೆ ಗೆಣೆಯರಾಗಿಹರು ತೆಂಕಣ
ಕಡೆಯವರು ಕಂಡಿಹರು ಕೆಲಬಲದವರು ಕೊಂಡೆಯರು
ಪಡುವಣವರತಿ ಕೃಶರು ನಾವಿ
ನ್ನಡಗಿರಲು ತೆರನಾವುದೆಂದೆನೆ
ನುಡಿದನರ್ಜುನ ದೇವನವನೀಪತಿಗೆ ವಿನಯದಲಿ ॥3॥

೦೦೪ ವಳಿತವನು ಹೊಕ್ಕಿರಿದು ...{Loading}...

ವಳಿತವನು ಹೊಕ್ಕಿರಿದು ಕೌರವ
ರೊಳಗೆ ಹಗೆಯಾಗಿಹನು ಕೀಚಕ
ಬಲ ವಿರಾಟನಿಗವನ ದೆಸೆಯಿಂ ಭಯ ವಿಹೀನವದು
ಮುಳಿದು ಹೇಳಿಕೆಯಾದ ರವಿಸುತ
ಕಲಿ ತ್ರಿಗರ್ತಾದಿಗಳೆನಿಪ ಮಂ
ಡಳಿಕರನು ಕೈಕೊಳ್ಳದಾಳುವರವರು ಪಶ್ಚಿಮವ ॥4॥

೦೦೫ ನೃಪತಿ ನಿಶ್ಚೈಸಿದನು ...{Loading}...

ನೃಪತಿ ನಿಶ್ಚೈಸಿದನು ಮತ್ಸ್ಯಾ
ಧಿಪನ ನಗರಿಯೊಳಲ್ಲಿ ಸೈರಿಸಿ
ಕೃಪಣತನದಲಿ ನೂಕಬೇಹುದು ನುಡಿದ ವತ್ಸರವ
ಗುಪಿತವೆಂತಳವಡುವುದಾಶ್ರಯ
ದಪದೆಸೆಯನೆಂತಾನುವಿರಿ ನಿ
ಷ್ಕೃಪೆಯೊಳೆಂತಾನೆಂಬೆನೆಂದನು ಧರ್ಮನಂದನನು ॥5॥

೦೦೬ ದೇವ ನಿಮ್ಮಯ ...{Loading}...

ದೇವ ನಿಮ್ಮಯ ಮತವೆ ಮತವೆಮ
ಗಾವ ವೇಷದ ವಿವರ ನಿಮಗದ
ನೀವು ಬೆಸಸುವುದೆಂದು ಭೀಮಾರ್ಜುನರು ಬಿನ್ನವಿಸೆ
ನಾವು ಭೂಸುರ ವೇಷದಲಿ ಸಂ
ಭಾವಿತರು ಮತ್ತಲ್ಲಿ ಸನ್ಯಾ
ಸಾವಲಂಬನ ಕಂಕನೆಂಬಭಿಧಾನ ತನಗೆಂದ ॥6॥

೦೦೭ ವಲಲನೆಮ್ಬಭಿಧಾನದಲಿ ನೃಪ ...{Loading}...

ವಲಲನೆಂಬಭಿಧಾನದಲಿ ನೃಪ
ನಿಳಯವನು ಸಾರುವೆನು ತಾನೆಂ
ದುಲಿಯೆ ಮಾರುತಿ ನುಡಿದ ವರ ನಾಟ್ಯವಿದ ವೇಷವನು
ಫಲುಗುಣನು ಹಯ ಗೋ ನಿವಾಸ
ಸ್ಥಳ ವಿಳಾಸಿತರೆನಲು ಯಮಳರು
ಲಲನೆ ಬಿನ್ನಹ ಮಾಡಿದಳು ಸೈರಂಧ್ರಿ ವೇಷವನು ॥7॥

೦೦೮ ತೊಳಲಿದಿರಿ ಹನ್ನೆರಡು ...{Loading}...

ತೊಳಲಿದಿರಿ ಹನ್ನೆರಡು ವರುಷವು
ಹಳುವದಲಿ ಸೊಂಪಡಗಿ ಪರರೊಡ
ನುಳಿಗೆಲಸದೋಲಗವಿದೆಂತೈ ಸಾರ್ವಭೌಮರಿಗೆ
ಬಳಲಿದಿರಿ ಹಿರಿದಾಗಿ ನಿಮ್ಮುವ
ನಳಲಿಸಿದೆನೆನ್ನಿಂದ ಪಾಪಿಗ
ಳೊಳರೆ ಭುವನದೊಳೆಂದು ಕುಂತೀಸೂನು ಬಿಸುಸುಯ್ದ ॥8॥

೦೦೯ ಒಡಲ ಬಳಿ ...{Loading}...

ಒಡಲ ಬಳಿ ನೆಳಲಿಂಗೆ ಗತಿ ಬೇ
ರ್ಪಡಿಸಿಹುದೆ ಸುಖದುಃಖವಿವು ನಿ
ಮ್ಮಡಿಗಳಲಿ ತನು ನಾಲ್ಕರಲಿ ಜೀವಾತ್ಮ ನೀವೆಮಗೆ
ಅಡವಿಯೇ ಸಾಮ್ರಾಜ್ಯ ನಿಮ್ಮಡಿ
ಯೊಡನಿರಲು ನೀವಿಲ್ಲದಾ ಪುರ
ವಡವಿ ನಮಗಹುದೆಂದು ಬಿನ್ನವಿಸಿದರು ಭೂಪತಿಗೆ ॥9॥

೦೧೦ ತುಷ್ಟನಾದನು ನೃಪತಿ ...{Loading}...

ತುಷ್ಟನಾದನು ನೃಪತಿ ಕೃತ ಪರಿ
ಶಿಷ್ಟಪಾಲನು ಜಗದೊಳತ್ಯು
ತ್ಕೃಷ್ಟ ಚರಿತನು ತೆಂಕ ದೆಸೆಗೆ ಸಹೋದರರು ಸಹಿತ
ದುಷ್ಟ ಮೃಗಗಳ ಬೇಂಟೆಯಾಡಿ ವ
ಸಿಷ್ಠ ಮುನಿಯಾಶ್ರಮದ ಸುಜನರ
ರಿಷ್ಟವನು ಪರಿಹರಿಸುತೈತಂದನು ಸರಾಗದಲಿ ॥10॥

೦೧೧ ಕಾಳಿ ಪರಮ ...{Loading}...

ಕಾಳಿ ಪರಮ ಕರಾಳಿ ಸುರಮುನಿ
ಮೌಳಿಮಂಡಿತ ಚರಣೆ ಖಳ ದನು
ಜಾಳಿ ಮರ್ದಿನಿ ಘನ ಕಪರ್ದಿ ವರಾರ್ಧ ತನುಯುತಳೆ
ಶೂಲ ಪರಶು ಪರಶ್ವಧಾದಿಗ
ಳಾಳುತೊಪ್ಪುವ ಕರಚತುಷ್ಟಯೆ
ಪಾಲಿಸೆಮ್ಮನೆನುತ್ತ ದುರ್ಗೆಯನಂದು ನುತಿಸಿದರು ॥11॥

೦೧೨ ಬನ್ದು ಮತ್ಸ್ಯ ...{Loading}...

ಬಂದು ಮತ್ಸ್ಯ ಪುರೋಪಕಂಠದ
ನಂದನದ ಕೆಲ-ಕಡೆಯಲ್ ಅನಿಬರು+++(=ಅನೇಕರು)+++
ನಿಂದು ನಾಲುಕು ದೆಸೆಯನ್ ಈಕ್ಷಿಸಿ ನಿಜ-ನಿವಾಸದಲಿ
ತಂದ ಚರ್ಮದಲ್ ಅಖಿಳ ಕೈದುವನ್+++(=ಶಸ್ತ್ರಗಳನ್)+++
ಒಂದು ಹೆಣನ್ ಆಕಾರದಲಿ ಬಿಗಿದ್
ಒಂದು ಬನ್ನಿಯ ಮರನ ತುದಿಯಲಿ ಕಟ್ಟಲ್ ಏಱಿದರು ॥12॥

೦೧೩ ತೆಗೆಯದಿರಿ ನೀವೆನ್ದು ...{Loading}...

ತೆಗೆಯದಿರಿ ನೀವೆಂದು ತುರುಗಾ
ಹಿಗಳನಂಜಿಸಿ ಧರ್ಮಸುತ ದೃಗು
ಯುಗವ ಮುಚ್ಚಿ ಸುರೇಂದ್ರ ಯಮ ವರುಣಾದಿಗಳಿಗೆರಗಿ
ವಿಗಡನೀ ಕಲಿಭೀಮನೀ ಕೈ
ದುಗಳನೀತಂಗೀಯದಿರಿ ಕೈ
ಮುಗಿದು ಬೇಡಿದೆನೆಂದು ಸುರರಿಗೆ ನುಡಿದನವನೀಶ ॥13॥

೦೧೪ ಈವುದಾ ಬೇಡಿದರೆ ...{Loading}...

ಈವುದಾ ಬೇಡಿದರೆ ಪಾರ್ಥಂ
ಗೀವುದೀಯಜ್ಞಾತ ವಾಸದೊ
ಳೀ ವಿಗಡ ಭೀಮಂಗೆ ಕೊಡದಿರಿಯೆನಲು ಖತಿಗೊಂಡ
ನೀವು ಕುಂತಿಯ ಮಕ್ಕಳಾದಿರಿ
ನಾವು ದುರ್ಯೋಧನನವರು ತ
ಪ್ಪಾವುದಿದಕೆಂದನಿಲಸುತನೌಡೊತ್ತಿ ಗರ್ಜಿಸಿದ ॥14॥

೦೧೫ ಸುರನಿಕರ ಕಾದಿರಲಿ ...{Loading}...

ಸುರನಿಕರ ಕಾದಿರಲಿ ಮೇಣೀ
ಧರಣಿ ಕೊಡೆನೆಂದಿರಲಿ ಹಸ್ತಿನ
ಪುರಿಗೆ ಧಾಳಿಯನಿಡುವೆನಮರರ ಮೋರೆಗಳ ತಿವಿದು
ಉರುತರಾಸ್ತ್ರವನೊಯ್ವೆನೆಂದ
ಬ್ಬರಿಸಿ ಮಾರುತಿ ನುಡಿಯೆ ತಮ್ಮನ
ಬರಸೆಳೆದು ಬಿಗಿಯಪ್ಪಿ ಮೈದಡವಿದನು ಭೂಪಾಲ ॥15॥

೦೧೬ ಅವಧಿಯೊನ್ದೇ ವರುಷವಿದರೊಳ ...{Loading}...

ಅವಧಿಯೊಂದೇ ವರುಷವಿದರೊಳ
ಗೆವಗೆ ಸೈರಣೆಯುಂಟು ನೀ ಮುನಿ
ದವಗಡಿಸಿದೊಡೆ ಬಳಿಕ ಸೈರಿಸಲರಿಯೆ ಮನ ಮುಳಿದು
ಅವನಿಯಲಿ ಹನ್ನೆರಡು ವರುಷವು
ನವೆದುದುಂ ನಿಷ್ಫಲವಲಾ ಕೌ
ರವರಿಗತಿ ಲಾಗಹುದು ನೀನೇ ಬಲ್ಲೆ ಹೋಗೆಂದ ॥16॥

೦೧೭ ಹದುಳವಿಟ್ಟನು ಭೀಮನನು ...{Loading}...

ಹದುಳವಿಟ್ಟನು ಭೀಮನನು ನಿ
ರ್ಮದನು ಮತ್ಸ್ಯನ ಪುರಿಗೆ ಯತಿ ವೇ
ಷದಲಿ ಬಂದನು ಹೊನ್ನ ಸಾರಿಯ ಚೀಲ ಕಕ್ಷದಲಿ
ಇದಿರೊಳಾನತರಾಯ್ತು ಕಂಡವ
ರುದಿತ ತೇಜಃಪುಂಜದಲಿ ಸೊಂ
ಪೊದವಿ ಬರಲು ವಿರಾಟ ಕಾಣಿಸಿಕೊಂಡು ಬೆಸಗೊಂಡ ॥17॥

೦೧೮ ಇತ್ತ ಬಿಜಯಙ್ಗೈಯಿ ...{Loading}...

ಇತ್ತ ಬಿಜಯಂಗೈಯಿ ಹಿರಿಯರಿ
ದೆತ್ತಣಿಂದೈತಂದಿರೈ ಅ
ತ್ಯುತ್ತಮದ ವೇಷದ ಮಹಾತ್ಮರ ಕಂಡು ಬದುಕಿದೆವು
ಇತ್ತಪೆವು ಬೇಡಿದುದ ನಾವೆನೆ
ಸುತ್ತಬಳಸೆವು ರಾಜಸೇವೆ ನಿ
ಮಿತ್ತ ಬಂದೆವು ಮುನ್ನಿನೋಲಗವಂತರಿಸಿತಾಗಿ ॥18॥

೦೧೯ ಕೆಟ್ಟುದಿನ್ದ್ರಪ್ರಸ್ಥ ...{Loading}...

ಕೆಟ್ಟುದಿಂದ್ರಪ್ರಸ್ಥ ಪಾಂಡವ
ರುಟ್ಟು ಹೋದರು ನಾರ ಸೀರೆಯ
ನಟ್ಟಡವಿ ಮನೆಯಾಯ್ತು ರಾಜಾನ್ವಯದ ರಾಯರಿಗೆ
ಬಿಟ್ಟರೆಮ್ಮನು ಜಠರ ಭರಣಕೆ
ನೆಟ್ಟನಾಶ್ರಯವಿಲ್ಲದಿರೆ ಕಂ
ಗೆಟ್ಟು ಬಂದೆವು ಕಂಕನೆಂಬಭಿಧಾನ ತನಗೆಂದ ॥19॥

೦೨೦ ಓಲಗಕೆ ಬನ್ದಖಿಳ ...{Loading}...

ಓಲಗಕೆ ಬಂದಖಿಳ ರಾಯರ
ಮೌಳಿಮೌಕ್ತಿಕಮಣಿ ಮಯೂಖ ನಿ
ವಾಳಿಯಲಿ ನೆರೆ ಮೆರೆವುದಾತನ ಪಾದಪದ್ಮಯುಗ
ಕಾಲವಾವನನಾವ ಪರಿಯಲಿ
ಕೀಳು ಮಾಡದು ಧರ್ಮಪುತ್ರನ
ನಾಳುಗೊಂಡನು ಮತ್ಸ್ಯನೆಲೆ ಜನಮೇಜಯ ಕ್ಷಿತಿಪ ॥20॥

೦೨೧ ಆದುದೈ ನಿರ್ವಾಹ ...{Loading}...

ಆದುದೈ ನಿರ್ವಾಹ ಕಂಕಂ
ಗಾದುದಾ ಮತ್ಸ್ಯೇಶನಿಂದ ವಿ
ವಾದವಿಲ್ಲದೆ ಸೇವೆ ನಿಜವಾದಂತೆಯಿರುತಿರಲು
ಹೋದವಿತ್ತಲು ಕೆಲವು ದಿನ ತನ
ಗಾದ ಸಾಹಾಯ್ಯದಲಿ ರಿಪುಬಲ
ಭೇದಿ ಮಾರುತಿ ಬಂದು ಕಂಡನು ಮತ್ಸ್ಯಭೂಪತಿಯ ॥21॥

೦೨೨ ಏನು ಪರಿಣತೆ ...{Loading}...

ಏನು ಪರಿಣತೆ ನಿನಗೆ ಬಾಣಸಿ
ಯಾನು ಭೀಮನ ಮನೆಯವನು ಮ
ತ್ತೇನು ಭುಜಬಲವರಿವೆನಗ್ಗದ ಮಲ್ಲವಿದ್ಯೆಯಲಿ
ನೀನಧಿಕನೆಂದಾ ಸಮೀರನ
ಸೂನುವನು ಮನ್ನಿಸಿದನಿತ್ತಲು
ಮಾನನಿಧಿ ಮರುದಿವಸ ಹೊಕ್ಕನು ಪಾರ್ಥನಾ ಹೊಳಲ ॥22॥

೦೨೩ ಸುರಪನರಸಿಯ ಶಾಪದಲಿ ...{Loading}...

ಸುರಪನರಸಿಯ ಶಾಪದಲಿ ಸಿತ
ತುರಗನರೆವೆಣ್ಣಾಗಿ ಮತ್ಸ್ಯೇ
ಶ್ವರನ ಮಗಳಿಗೆ ನಾಟ್ಯವಿದ್ಯಾಭ್ಯಾಸ ಸಂಗದಲಿ
ಇರಲು ಯಮಳರು ತುರಗ ಗೋವ್ರಜ
ಭರಣರಾದರು ಬಳಿಕ ಪಾಂಡವ
ರರಸಿ ಸಾರಿದಳೊಲವಿನಲಿ ವೈರಾಟ ಪಟ್ಟಣವ ॥23॥

೦೨೪ ತರಣಿಗಞ್ಜಿದಡಿನ್ದು ತಲೆಗಾ ...{Loading}...

ತರಣಿಗಂಜಿದಡಿಂದು ತಲೆಗಾ
ಯ್ದಿರಿಸಿದನೊ ಮರೆಯಾಗಿ ತಿಮಿರದ
ಹೊರಳಿಗಳನೆನೆ ಮುಡಿಗೆ ಮೋಹಿದ ವೇಣಿವಲ್ಲರಿಯ
ಹಿರಿದು ಸೈರಿಸಲಾರೆನೆಂದೊಡ
ನಿರಿಸಿದನೊ ಕೈರವವನೆನಲೆಂ
ದರರೆ ಕಂಗಳ ಢಾಳವೊಪ್ಪಿರೆ ಬಂದಳಬುಜಮುಖಿ ॥24॥

೦೨೫ ಮೊಲೆಯ ಮೇಲುದು ...{Loading}...

ಮೊಲೆಯ ಮೇಲುದು ಜಾರೆ ಜಾರಿದ
ರಳಿಮನರು ಕಂಗಳಿನ ಮಿಂಚಿನ
ಹಿಳುಕಿನೆಡೆ ನಡೆಗೆಟ್ಟು ನಿಂದರು ಚಿತ್ತವಿಹ್ವಲರು
ತೆಳುವಸುರು ತಲೆದೋರೆ ತೋರಿದು
ದಲಗು ಮರು ಮೊನೆಯೆನುತ ವಿಟರಳ
ವಳಿಯೆ ನಡೆತರುತಿರ್ದಳಂಗನೆ ರಾಜ ವೀಧಿಯಲಿ ॥25॥

೦೨೬ ಎಲೆಲೆ ಮದನನ ...{Loading}...

ಎಲೆಲೆ ಮದನನ ಗಜವು ತೊತ್ತಳ
ದುಳಿದುದೋ ಕಾಮುಕರನೆನೆ ಗಾ
ವಳಿಯೊಳಗೆ ಗಾರಾಯ್ತು ಗರುವಿಕೆ ವಿಟ ವಿದೂಷಕರ
ಅಳುಕಿದರು ಮನುಮಥನ ಗರುಡಿಯ
ಬಲುವೆಗಾರರು ಬಂದಳಗ್ಗದ
ನಳಿನಮುಖಿ ಬಹುಜನದ ಮನಕಚ್ಚರಿಯನೊದವಿಸುತ ॥26॥

೦೨೭ ಜನದ ಜಾಣಕ್ಕಾಡಲಾ ...{Loading}...

ಜನದ ಜಾಣಕ್ಕಾಡಲಾ ಮೋ
ಹನ ಮಹಾಂಬುಧಿಯೊಳಗೆ ನೃಪನಂ
ಗನೆಯು ಭವನಕೆ ಬರಲು ಬೆರಗಾಯ್ತಖಿಳ ನಾರಿಯರು
ವನಿತೆ ಮಾನಿಸೆಯಲ್ಲ ಮನುಜರಿ
ಗಿನಿತು ರೂಪೆಲ್ಲಿಯದು ವಿಸ್ಮಯ
ವೆನುತ ಮನದೊಳಗಳುಕಿದರು ಮತ್ಸ್ಯೇಶನರಸಿಯರು ॥27॥

೦೨೮ ಬರವ ಕಣ್ಡು ...{Loading}...

ಬರವ ಕಂಡು ಸುದೇಷ್ಣೆ ಮನದಲಿ
ಹರುಷ ಮಿಗೆ ಹೊಂಗಿದಳು ಕರೆ ಕರೆ
ತರುಣಿಯಾರೆಂದಟ್ಟಿದಳು ಕೆಳದಿಯರನನಿಬರನು
ಸರಸಿಜಾಯತದಂದವನು ಮೋ
ಹರಿಸಿ ಮುಂಚುವ ಪರಿಮಳವನಂ
ದರಸಿ ಬೀರುತ ಬಂದು ಹೊಕ್ಕಳು ರಾಜ ಮಂದಿರವ ॥28॥

೦೨೯ ಕೆಳದಿಯರು ಕಾಣಿಸಿದರರಸನ ...{Loading}...

ಕೆಳದಿಯರು ಕಾಣಿಸಿದರರಸನ
ಲಲನೆಯನು ಪರಿಯಂಕ ಪೀಠದ
ಕೆಲಕೆ ಕರೆದಳು ಕಮಲವದನೆಯನುಚಿತ ವಚನದಲಿ
ನಳಿನಮುಖಿ ನೀನಾರು ನಿನಗಾ
ರೊಳರು ರಮಣರು ಮಾಸಿಕೊಂಡಿಹ
ಮಲಿನ ವೃತ್ತಿಯಿದೇಕೆನುತ ಬೆಸಗೊಂಡಳಂಗನೆಯ ॥29॥

೦೩೦ ಅತುಳಬಲ ಗನ್ಧರ್ವರೈವರು ...{Loading}...

ಅತುಳಬಲ ಗಂಧರ್ವರೈವರು
ಪತಿಗಳೆನಗುಂಟೆನ್ನ ಚಿತ್ತಕೆ
ಖತಿಯ ಮಾಡಿದರೊಂದು ವರುಷವು ಬಿಡುವೆನವರುಗಳ
ಸತತವಾ ಕುಂತೀಕುಮಾರರ
ಸತಿಯರೋಲೈಸಿದ್ದೆ ಬಳಿಕವ
ರತಿ ಗಹನ ವನನಿಷ್ಠರಾದರು ತನಗೆ ಬರವಾಯ್ತು ॥30॥

೦೩೧ ಏನ ಮಾಡಲು ...{Loading}...

ಏನ ಮಾಡಲು ಬಲ್ಲೆಯೆಂದರೆ
ಮಾನಿನಿಯ ಸಿರಿಮುಡಿಯ ಕಟ್ಟುವ
ಸೂನ ಮುಡಿಸುವ ವರ ಕಟಾಕ್ಷಕೆ ಕಾಡಿಗೆಯನಿಡುವ
ಏನ ಹೇಳಿದ ಮಾಡಬಲ್ಲೆನು
ಸಾನುರಾಗದೊಳೆಂದೆನಲು ವರ
ಮಾನಿನಿಯ ನಸುನಗುತ ನುಡಿಸಿದಳಂದು ವಿನಯದಲಿ ॥31॥

೦೩೨ ಎನಲು ಮೆಚ್ಚಿದಳಾ ...{Loading}...

ಎನಲು ಮೆಚ್ಚಿದಳಾ ವಿರಾಟನ
ವನಿತೆ ವೀರರ ವಧುವನಾ ಸಖಿ
ಜನದೊಳಗೆ ನೇಮಿಸಿದಳನಿಬರಿಗಾಯ್ತು ನಿರ್ವಾಹ
ಮನದ ಢಗೆಯಡಗಿದವು ಮತ್ಸ್ಯೇ
ಶನ ಪುರಾಂತರದೊಳಗೆ ಮೈಮರೆ
ಸನುಪಮಿತ ಭುಜಸತ್ವರಿದ್ದರು ಭೂಪ ಕೇಳ್ ಎಂದ ॥32॥

೦೩೩ ಆ ಸುದೇಷ್ಣಾ ...{Loading}...

ಆ ಸುದೇಷ್ಣಾ ದೇವಿಯರ ನಿಡು
ಕೇಶವನು ಹಿಕ್ಕುವಳು ಮುದದಲಿ
ಸೂಸು ಮಲ್ಲಿಗೆಯರಳ ದೆಖ್ಖಾಳವನು ಮುಡಿಸುವಳು
ಆ ಸತಿಯ ಮನವೊಲಿದು ನಡೆವಳು
ಲೇಸು ಲೇಸೆಂದೆನಿಸಿ ಬಾಳುವ
ಭಾಷೆಯನು ಸಲಿಸುತ್ತಲಿರ್ದಳು ಪತಿಗಳಾಜ್ಞೆಯಲಿ ॥33॥

೦೩೪ ಜವನ ಮಗ ...{Loading}...

ಜವನ ಮಗ ಸನ್ಯಾಸಿ ವೇಷದಿ
ಪವನಸುತ ಬಾಣಸಿನ ಮನೆಯಲಿ
ದಿವಿಜ ರಾಯನ ತನಯನಿರ್ದ ಶಿಖಂಡಿ ವೇಷದಲಿ
ಜವಳಿ ಮಕ್ಕಳು ತುರಗ ಗೋವ್ರಜ
ನಿವಹಕಾರರು ಕಮಲಮುಖಿ ಕಾ
ಲವನು ಕಳೆದಳು ರಾಯನೊಲುಮೆಯ ಕೆಳದಿಯರ ಕೂಡೆ ॥34॥

+೦೧ ...{Loading}...