೦೩

೦೦೦ ಸೂ ತಿಳುಹಿದನು ...{Loading}...

ಸೂ. ತಿಳುಹಿದನು ವಿದುರನು ಮಹೀಪತಿ
ತಿಲಕನನು ನಯನೀತಿ ಧರ್ಮಂ
ಗಳ ಸುಸಂಗತಿಯಿಂದ ನೂಕಿದರಿವರು ಯಾಮಿನಿಯ

೦೦೧ ಬನ್ದನಾ ಧೃತರಾಷ್ಟ್ರ ...{Loading}...

ಬಂದನಾ ಧೃತರಾಷ್ಟ್ರ ರಾಯನ
ಮಂದಿರಕೆ ಕಂಡನು ಮಹೀಶನ
ನೊಂದೆರಡು ಮಾತಿನಲಿ ಸೂಚಿಸಿ ಮರಳಿದನು ಮನೆಗೆ
ಅಂದಿನಿರುಳೊಳು ನಿದ್ರೆ ಬಾರದೆ
ನೊಂದು ವಿದುರನ ಕರೆದು ರಾಯನ
ತಂದೆ ಬಿಸುಸುಯ್ಯುತ್ತ ನುಡಿದನು ವಿದುರದೇವಂಗೆ ॥1॥

೦೦೨ ನಾಳೆ ಸಭೆಯಲಿ ...{Loading}...

ನಾಳೆ ಸಭೆಯಲಿ ಬಂದ ಹದನನು
ಹೇಳುವನು ಸಂಜಯನು ಸಂಧಿಯೊ
ಕಾಳಗವೊ ಮುಂದರಿಯಬಾರದು ದುಗುಡವಾಯÉ್ತುನಗೆ
ಹೇಳು ನಿರುತವನಿಂದಿನಿರುಳನು
ಬೀಳುಕೊಟ್ಟುದು ನಿದ್ರೆಯೆನೆ ಭೂ
ಪಾಲಕನ ಸಂತೈಸಿ ಮತ್ತಿಂತೆಂದನಾ ವಿದುರ ॥2॥

೦೦೩ ಬಲವಿಹೀನನು ಬಲ್ಲಿದನ ...{Loading}...

ಬಲವಿಹೀನನು ಬಲ್ಲಿದನ ಕೂ
ಡೊಲಿದು ತೊಡಕಿದವಂಗೆ ಕಾಮದ
ಕಳವಳದಲಿರ್ದಂಗೆ ಧನದಳಲಿಂದ ಮರುಗುವಗೆ
ಕಳವಿನಲಿ ಕುದಿವಂಗೆ ದೈವದ
ನೆಲೆಯನರಿಯದವಂಗೆ ದಿಟವಿದು
ತಿಳಿಯೆ ಬಾರದು ನಿದ್ರೆಯೆಂದನು ಭೂಪತಿಗೆ ವಿದುರ ॥3॥

೦೦೪ ಒನ್ದರಿನ್ದೆರಡಹುದನರಿ ಮೂ ...{Loading}...

ಒಂದರಿಂದೆರಡಹುದನರಿ ಮೂ
ರಂದವನು ತಿಳಿ ನಾಲ್ಕರಲಿ ಮನ
ಗುಂದದಿರದೈದರಲಿ ವರ್ಜಿಪುದಾರನೇಳರಲಿ
ಒಂದಿಸದಿರೆಂಟನು ವಿಚಾರಿಸಿ
ಮುಂದುವರಿವೊಂಬತ್ತರಲಿ ಮನ
ಗುಂದಿಸದಿರೀರೈದರಲಿ ಭೂಪಾಲ ಕೇಳ್ ಎಂದ ॥4॥

೦೦೫ ತನ್ನ ಚಿನ್ತೆಯದೊನ್ದು ...{Loading}...

ತನ್ನ ಚಿಂತೆಯದೊಂದು ದೈವದ
ಗನ್ನಗತಕವದೆರಡು ಭಾವದ
ಬನ್ನಣೆಯ ಬಗೆ ಮೂರು ದೈವದ ಭಿನ್ನಮುಖ ನಾಲ್ಕು
ತನ್ನ ನೆನಹಿನವೋಲು ಕಾರ್ಯವು
ಚೆನ್ನಹಡೆ ಲೋಕಕ್ಕೆ ತಾ ಬೇ
ರಿನ್ನು ದೈವವದೇಕೆ ತಾನೇ ದೈವರೂಪೆಂದ ॥5॥

೦೦೬ ಒನ್ದು ವರ್ಣವನರುಹಿದವ ...{Loading}...

ಒಂದು ವರ್ಣವನರುಹಿದವ ಗುರು
ವೊಂದಪಾಯದಲುಳಿಹಿದವ ಗುರು
ಬಂದ ವಿಗ್ರಹದೊಳಗೆ ರಕ್ಷಿಸಿದಾತ ಪರಮಗುರು
ಒಂದೆರಡು ಮೂರೈಸಲೇ ತಾ
ನೆಂದು ಗರ್ವೀಕರಿಸಿದವರುಗ
ಳೊಂದುವರು ಚಾಂಡಾಲ ಯೋನಿಯೊಳರಸ ಕೇಳ್ ಎಂದ ॥6॥

೦೦೭ ತನ್ನ ಕಾರಿಯ ...{Loading}...

ತನ್ನ ಕಾರಿಯ ಕಾರಣವನುಳಿ
ದನ್ಯಥಾ ಚಿಂತೆಯನು ಮಾಡುವು
ದುನ್ನತಿಕೆ ತಾನಲ್ಲ ನೀತಿಜ್ಞರಿಗೆ ಭಾವಿಸಲು
ಮನ್ನಿಸುವುದಾತ್ಮನನು ಮಿಕ್ಕುದ
ನನ್ಯರಿಗೆ ಮಾಡುವುದದಲ್ಲದೆ
ತನ್ನ ತಾ ಮರೆದಿಹುದು ಮತವಲ್ಲೆಂದನಾ ವಿದುರ ॥7॥

೦೦೮ ಹಾವು ಹಲವನು ...{Loading}...

ಹಾವು ಹಲವನು ಹಡೆದು ಲೋಕಕೆ
ಸಾವ ತಹವೊಲು ನೂರು ಮಕ್ಕಳ
ನಾವ ಪರಿಯಲಿ ಹಡೆದು ಕೆಡಿಸಿದೆ ಭೂಮಿ ಭಾರಕರ
ಭಾವಿಸಲು ಸರ್ವಜ್ಞ ಸರ್ವಗು
ಣಾವಲಂಬನನೊಬ್ಬನರ್ಜುನ
ದೇವ ಸಾಲದೆ ನಾಡ ನಾಯಿಗಳೇನು ಫಲವೆಂದ ॥8॥

೦೦೯ ದೀಪ ದೀಪವ ...{Loading}...

ದೀಪ ದೀಪವ ತೊಳಲಿ ಕರ್ಮ ಕ
ಳಾಪದಲಿ ಕುದಿಕುದಿದು ನಾನಾ
ರೂಪಿನಿಂದಾರ್ಜಿಸುವ ಧರ್ಮದ ಗೊಡವೆ ತಾನೇಕೆ
ಭೂಪ ಕೇಳೈ ಸತ್ಯವೊಂದೇ
ಸೋಪನವು ಸಗ್ಗಕ್ಕೆ ಜನ್ಮದ
ಕೂಪರಕ್ಕಿದು ನಾವೆಯಾಗಿಹುದೆಂದನಾ ವಿದುರ ॥9॥

೦೧೦ ಪಾಪದಿನ್ದಾರ್ಜಿಸಿದೊಡರ್ಥವ ...{Loading}...

ಪಾಪದಿಂದಾರ್ಜಿಸಿದೊಡರ್ಥವ
ನಾ ಫಲವನುಂಬವರಿಗಿಲ್ಲಾ
ಪಾಪವೊಬ್ಬಂಗಪ್ಪುದಾರ್ಜಿಸಿದುರಗನಂದದಲಿ
ಕಾಪಥವನಾಶ್ರಯಿಸಿ ಕೋಪಾ
ಟೋಪದಿಂದುತ್ತಮರ ಸರ್ವ
ಸ್ವಾಪಹಾರವ ಮಾಡಿ ಬದುಕುವುದಾವ ಗುಣವೆಂದ ॥10॥

೦೧೧ ಬವರ ಮುಖದಲಿ ...{Loading}...

ಬವರ ಮುಖದಲಿ ವೈರಿ ರಾಯರ
ನವಗಡಿಸಿ ತಂದಾ ಧನವ ಭೂ
ದಿವಿಜ ಸಂತತಿಗಿತ್ತ ಫಲವಿನಿತೆಂದು ಗಣಿಸುವಡೆ
ದಿವಿಜಪತಿಗಾಗದು ಕಣಾ ಮಾ
ನವಪತಿಗೆ ಸದ್ಧರ್ಮವಿದು ನಿ
ನ್ನವನು ನೀತಿಯನರಿಯನೈ ಧೃತರಾಷ್ಟ್ರ ಕೇಳ್ ಎಂದ ॥11॥

೦೧೨ ಧರಣಿಯಮರರ ಧನದಿ ...{Loading}...

ಧರಣಿಯಮರರ ಧನದಿ ಸಲಹಿದ
ಕರಿತುರಗ ಮೊದಲಾದ ದಳವು
ಬ್ಬರದಿ ಹೆಚ್ಚಿಹುದರಿನೃಪಾಲರ ಯುದ್ಧ ಪರಿಯಂತ
ಜರಿದು ನಸಿವುದು ವಾಹಿನಿಗೆ ಮಲೆ
ತುರು ಮಳಲ ಕಟ್ಟೆಯವೊಲಿದನರಿ
ದರಸುಗಳು ವರ್ಣೋತ್ತಮರ ದೆಸೆಗಂಜಬೇಕೆಂದ ॥12॥

೦೧೩ ಉರಗನೌಡಿದೊಡದರ ವಕ್ತ್ರದೊ ...{Loading}...

ಉರಗನೌಡಿದೊಡದರ ವಕ್ತ್ರದೊ
ಳಿರದೆ ಮೇಣಾ ದಷ್ಟ ದೇಹದೊ
ಳಿರದೆ ರುಧಿರವು ಪೋಪವೊಲು ದುಷ್ಟಾಧಿಕಾರಿಗಳ
ಒರಸೊರಸಿನಿಂ ಜನಪದದ ಧನ
ಹರಿವುದರಸಂಗಲಸಿದಾ ಪ್ರಜೆ
ಗಿರದುಭಯ ಪಿಂಗುವುದನರಿ ಭೂಪಾಲ ಕೇಳ್ ಎಂದ ॥13॥

೦೧೪ ಉರಗನಗಿದೊಡೆ ಮೇಣು ...{Loading}...

ಉರಗನಗಿದೊಡೆ ಮೇಣು ಶಸ್ತ್ರದ
ಲಿರಿದಡೊಬ್ಬನೆ ಸಾವನದರಿಂ
ದರಸು ನೆಗಳಿದ ಮಂತ್ರ ಭೇದಿಸಲರಿನೃಪಾಲಕರ
ಧರೆ ಸಹಿತ ತತ್ಸಕಲ ಬಲ ಸಂ
ಹರಣವಹುದಿದನರಿದು ಭೂಪೋ
ತ್ತರ ರಹಸ್ಯದ ಮಂತ್ರವುಂಟೇ ರಾಯ ನಿನಗೆಂದ ॥14॥

೦೧೫ ಏಸು ಧರ್ಮದಲಾರ್ಜಿಸಿದ ...{Loading}...

ಏಸು ಧರ್ಮದಲಾರ್ಜಿಸಿದ ಧನ
ವೈಸು ಸಿರಿ ವದಿರ್sಸುವುದದರಿಂ
ದೇಶಮಂಗಳ ಪುತ್ರ ಮಿತ್ರ ಕಳತ್ರವರಿವಿಜಯ
ಪೈಸರಿಸುವುದು ಬಂದ ಬಳಿವಿಡಿ
ದಾಸುರದ ಪಥವಿದನರಿದು ಭೂ
ಮೀಶ ಧರ್ಮವ ಹಿಡಿಯಧರ್ಮವ ಬಿಟ್ಟು ಕಳೆಯೆಂದ ॥15॥

೦೧೬ ಹರಿವ ನದಿ ...{Loading}...

ಹರಿವ ನದಿ ತನ್ನಿಚ್ಛೆಯಲಿ ದಡ
ವೆರಡ ಕೆಡಿಸುವವೋಲು ನಾರಿಯ
ರುರವಣೆಗೆ ಕೈಗೊಟ್ಟು ನಡೆಸಿದಡುಭಯ ವಂಶವನು
ನೆರಹುವಳು ನೀರೊಳಗೆ ಮೇರೆಯ
ಮುರಿಯಲೀಯದೆ ಮಾರ್ಗದಲಿ ಮ
ತ್ಸರಿಸದಾಳುವುದನುನಯವು ಭೂಪಾಲ ಕೇಳ್ ಎಂದ ॥16॥

೦೧೭ ಧರೆಯೊಳಗೆ ಕಡು ...{Loading}...

ಧರೆಯೊಳಗೆ ಕಡು ಮೂರ್ಖರಿವರಿ
ಬ್ಬರು ಕಣಾ ದುರಿಯೋಧನನು ದಶ
ಶಿರನು ಗೋಗ್ರಹಣದಲಿ ವನ ಭಂಗದಲಿ ಮುಂಕೊಂಡು
ಅರಿನೃಪರ ಸತ್ವಾತಿಶಯದು
ಬ್ಬರದ ಬಲುಹನು ಕಂಡು ಕಂಡೆ
ಚ್ಚರದೆ ಮರುಳಹುದುಚಿತವೇ ಭೂಪಾಲ ಕೇಳ್ ಎಂದ ॥17॥

೦೧೮ ಕರಣಿಕನ ಹಗೆಗೊಣ್ಡವಙ್ಗೈ ...{Loading}...

ಕರಣಿಕನ ಹಗೆಗೊಂಡವಂಗೈ
ಶ್ವರಿಯ ಹಾನಿ ಚಿಕಿತ್ಸಕನನಾ
ದರಿಸದಾತಂಗಾಗದಾಯುಷ್ಯಾಭಿವೃದ್ಧಿಗಳು
ಅರಸ ಕೇಳಾಯುಷ್ಯ ಭಾಗ್ಯಗ
ಳೆರಡು ಕೆಡುವವು ತಪ್ಪದವನೀ
ಸುರರ ಬದ್ಧದ್ವೇಷ ಲೇಸಲ್ಲೆಂದನಾ ವಿದುರ ॥18॥

೦೧೯ ಧರೆಯೊಳಗೆ ರವಿ ...{Loading}...

ಧರೆಯೊಳಗೆ ರವಿ ಮಂಡಲವನೊದೆ
ದುರವಣಿಸಿ ಹಾಯ್ವವರು ತಾವಿ
ಬ್ಬರು ಕಣಾ ಸನ್ಯಾಸಿಯಾಗಿಯೆ ಯೋಗ ಮಾರ್ಗದಲಿ
ಹರಣವನು ಬಿಟ್ಟವರುಗಳು ಸಂ
ಗರದೊಳಭಿಮುಖರಾಗಿ ಮರಣಾಂ
ತರವನೆಯ್ದುವರವರು ಅವನೀಪಾಲ ಕೇಳ್ ಎಂದ ॥19॥

೦೨೦ ಮಾತೃಪಿತೃಗಳು ಶತ್ರು ...{Loading}...

ಮಾತೃಪಿತೃಗಳು ಶತ್ರು ಭಾವವ
ನಾಂತು ನಿಜಸಂತಾನದಲಿ ಸಂ
ಪ್ರೀತಿಯನು ನೆಲೆಗೊಳಿಸಿ ಸರ್ವಜ್ಞಾಧಿಕಾರದಲಿ
ಖ್ಯಾತರನು ಮಾಡದಡೆ ಹಂಸ
ವ್ರಾತ ಮಧ್ಯದ ಬಕನವೊಲು ವಿ
ಖ್ಯಾತ ಸಭೆಯೊಳು ಯೋಗ್ಯರಹರೇ ಭೂಪ ಕೇಳ್ ಎಂದ ॥20॥

೦೨೧ ಸುರರ ಮೇಳದಲಾಡುವವರಿ ...{Loading}...

ಸುರರ ಮೇಳದಲಾಡುವವರಿ
ಬ್ಬರು ಕಣಾ ಪ್ರಭುವಾಗಿಯು ಕ್ಷಮೆ
ವೆರಸಿದವನು ದರಿದ್ರನಾಗಿಯು ದಾನಿಯೆನಿಸುವನು
ಅರಿದೆನಿಸದತಿಬಲನ ಧರ್ಮೋ
ತ್ಕರುಷ ದುರ್ಬಲಯುತನ ಸೈರಣೆ
ಸರಿಸವೆನಿಸದು ರಾಯ ಚಿತ್ತೈಸೆಂದನಾ ವಿದುರ ॥21॥

೦೨೨ ಧರಣಿ ನುಙ್ಗುವಳಿಬ್ಬರನು ...{Loading}...

ಧರಣಿ ನುಂಗುವಳಿಬ್ಬರನು ಸಂ
ಗರವ ಜಯಿಸದ ನೃಪನ ದೇಶಾಂ
ತರವ ಚರಿಸದ ಪಂಡಿತನನಿದು ಶಾಸ್ತ್ರಸಿದ್ಧವಲೆ
ಅರಸು ಕುಲದಲಿ ಹುಟ್ಟಿ ಸಾಪ
ತ್ನರುಗಳಿರೆ ದೇಹಾಭಿಲಾಷೆಯ
ಲುರಗನಂತೊಳಗಿಹುದು ಧರ್ಮವೆಯೆಂದನಾ ವಿದುರ ॥22॥

೦೨೩ ನರ ಜನುಮವತ್ಯಧಿಕವದರೊಳು ...{Loading}...

ನರ ಜನುಮವತ್ಯಧಿಕವದರೊಳು
ಗುರು ಹಿರಿಯರಿವರೆಂದು ದಾನ
ಕ್ಕರುಹರಿವರಲ್ಲೆಂದು ನೋಡದೆ ಮೂಢ ಮಾರ್ಗದಲಿ
ಕರೆದಪಾತ್ರಂಗಿತ್ತು ಪಾತ್ರನ
ಪರಿಹರಿಸಲೀ ಎರಡರಿಂ ಸಂ
ಹರಣವೈದುವುದಾರ್ಜಿಸಿದ ಧನವರಸ ಕೇಳ್ ಎಂದ ॥23॥

೦೨೪ ತನ್ದೆ ತಾಯಿಗಳಿಬ್ಬರಾತ್ಮಜ ...{Loading}...

ತಂದೆ ತಾಯಿಗಳಿಬ್ಬರಾತ್ಮಜ
ವೃಂದವನು ಮಿಗೆ ಸಲಹಿ ತತ್ಸುತ
ರಿಂದ ಲೇಸನು ಪಡೆವವೊಲು ತಜ್ಜನಪದದ ಧನವ
ಕುಂದಿಸದೆ ನೃಪ ಮಂತ್ರಿಗಳು ಸಾ
ನಂದದಲಿ ರಕ್ಷಿಸಲು ಬಳಿಕವ
ರಿಂದ ಸಕಲೈಶ್ವರ್ಯ ಪದವಹುದರಸ ಕೇಳ್ ಎಂದ ॥24॥

೦೨೫ ಕಾಮಿನಿಯರುಗಳಾರು ಕೆಲಬರು ...{Loading}...

ಕಾಮಿನಿಯರುಗಳಾರು ಕೆಲಬರು
ಕಾಮಿತವ ಕಾಮಿಸುವರಲ್ಲದೆ
ತಾಮಸದಿನಾ ಮೂರುಕರು ಪೂಜಿಸಿದ ಪೂಜೆಗಳ
ಪ್ರೇಮದಿಂದೊಡಬಡುವರಲ್ಲದೆ
ಸೀಮೆವಿಡಿದಿಹುದಾಗದೆಂಬುದ
ನಾ ಮದಾಂಧರು ಬಲ್ಲರೇ ಧೃತರಾಷ್ಟ್ರ ಕೇಳ್ ಎಂದ ॥25॥

೦೨೬ ತನ್ನ ಸುಖದುಃಖಙ್ಗಳಿಗೆ ...{Loading}...

ತನ್ನ ಸುಖದುಃಖಂಗಳಿಗೆ ನಿ
ಬಿರ್sನ್ನರಹ ಬಾಂಧವರ ವರ್ಜಿಸಿ
ಗನ್ನಗತಕದಲುಂಡು ಜಾರುವ ಗಾವಿಲರ ಕೂಡಿ
ಅನ್ಯರನು ಪತಿಕರಿಸಿ ಬಹುಮಾ
ನೋನ್ನತಿಕೆಯನು ವಿರಚಿಸುವುದಿದು
ತನ್ನ ತಾನೇ ಕೊಂದುಕೊಂಬುದು ಭೂಪ ಕೇಳ್ ಎಂದ ॥26॥

೦೨೭ ಪಿತನಿರಲು ದಾತಾರನಿರೆ ...{Loading}...

ಪಿತನಿರಲು ದಾತಾರನಿರೆ ನಿಜ
ಪತಿಯಿರಲು ಸುತ ದಾಸ ಸತಿಯೀ
ತ್ರಿತಯರುಂ ಸ್ವಾತಂತ್ರ ್ಯದವರಲ್ಲಾವ ಕಾಲದಲಿ
ಕ್ಷಿತಿಯೊಳುತ್ತಮ ಮಧ್ಯಮಾಧಮ
ಗತಿಯ ಪುರಷತ್ರಯವನವರಿಂ
ಗಿತವನವರಾಯತವನರಿವೈ ಭೂಪ ಕೇಳ್ ಎಂದ ॥27॥

೦೨೮ ಬೆಳಸು ಘನ ...{Loading}...

ಬೆಳಸು ಘನ ತೃಣವಧಿಕ ಜಲ ನಿ
ರ್ಮಳವೆನಿಪ ಕಾಲದಲಿ ಪರ ಮಂ
ಡಲಕೆ ನಡೆವುದು ಘೃಷ್ಟಪುಷ್ಟವಿಹಾರನೆಂದೆನಿಸಿ
ಬಲುಹಹುದು ನಿಜಬಲಕೆ ಬಲವಾ
ನೆಲನ ಮೆಟ್ಟಲು ವೈರಿ ಸೇನಾ
ವಳಿಗೆ ಹೀನತೆ ದೊರಕುವುದು ಧೃತರಾಷ್ಟ್ರ ಕೇಳ್ ಎಂದ ॥28॥

೦೨೯ ಮಾಲೆಗಾರ ಸಿಳೀಮುಖನ ...{Loading}...

ಮಾಲೆಗಾರ ಸಿಳೀಮುಖನ ಪಶು
ಪಾಲಕನವೊಲ್ ಪ್ರಜೆಯ ರಕ್ಷಿಸಿ
ಮೇಲೆ ತೆಗೆವೈ ಧನವನುಳಿದಂಗಾರಕಾರಕನ
ವೋಲು ಕಡದುರು ವ್ಯಾಘ್ರನಂತೆ ವಿ
ತಾಳಿಸಲು ಪ್ರಜೆ ನಸಿಯಲರಸಿನ
ಬಾಳಿಕೆಗೆ ಸಂದೇಹವರಿಯಾ ರಾಯ ಕೇಳ್ ಎಂದ ॥29॥

೦೩೦ ಎಲ್ಲಿಹುದು ಋಣಭಯವು ...{Loading}...

ಎಲ್ಲಿಹುದು ಋಣಭಯವು ಮನುಜರೊ
ಳಲ್ಲಿಹುದು ದೇವಾಂಶ ನಿಜವಾ
ಗೆಲ್ಲಿಹುದು ಸನ್ಮಾರ್ಗ ಬಳಿಕಲ್ಲಿಹುದು ಬ್ರಾಹ್ಮಣ್ಯ
ಎಲ್ಲಿಹುದು ಪರಸತಿಯರಂಜಿಕೆ
ಯಲ್ಲಿಹುದು ವಿಜ್ಞಾನವಿದನರಿ
ದಲ್ಲದಿಹಪರವಿಲ್ಲ ಚಿತ್ತೈಸೆಂದನಾ ವಿದುರ ॥30॥

೦೩೧ ರಕ್ಷಿಸಿದ ಧನದಿಮ್ ...{Loading}...

ರಕ್ಷಿಸಿದ ಧನದಿಂ ಪುರಂಧಿ್ರಯ
ರಕ್ಷಿಸುವುದು ಪುರಂಧಿ್ರಯಿಂದವೆ
ರಕ್ಷಿಸುವುದಾತ್ಮನನು ಧನವಿಡಿದಾವ ಕಾಲದಲಿ
ಲಕ್ಷ ಭೇದವನರಿದು ನಡೆದು ವಿ
ಲಕ್ಷವನು ಮುರಿದಾತ್ಮ ರಕ್ಷÉಯ
ನೀಕ್ಷಿಸುವುದನುನಯವಲೈ ಭೂಪಾಲ ಕೇಳ್ ಎಂದ ॥31॥

೦೩೨ ತಿಳಿದು ನಾಲ್ವರೊಳೊರೆದ ...{Loading}...

ತಿಳಿದು ನಾಲ್ವರೊಳೊರೆದ ಕಾರ್ಯವ
ನುಳಿವುದಿಬ್ಬರನಿಬ್ಬರೊಳು ಮ
ತ್ತುಳಿವುದೊಬ್ಬನನೊಬ್ಬನಿಂ ನಿಶ್ಚಯಿಸಿ ಬಳಿಕವನ
ಕಳೆದು ತಾನೇ ತನ್ನೊಳಗೆ ಬಗೆ
ಗೊಳೆ ವಿಚಾರಿಸಿ ಮಾಳ್ಪ ಕಾರ್ಯಕೆ
ಹಳಿವು ಹೊರುವುದೆ ರಾಯ ಚಿತ್ತೈಸೆಂದನಾ ವಿದುರ ॥32॥

೦೩೩ ನಿವಡಿಸಿದ ವಿದ್ಯಕ್ಕೆ ...{Loading}...

ನಿವಡಿಸಿದ ವಿದ್ಯಕ್ಕೆ ಸಮ ಬಂ
ಧುವನು ರೋಗಾವಳಿಗೆ ಸಮ ಶ
ತ್ರುವನು ಸಂತಾನಕ್ಕೆ ಸಮ ಸಂತೋಷದುದಯವನು
ರವಿಗೆ ಸಮವಹ ತೇಜವನು ವಾ
ಸವನ ಸಮ ಭೋಗವನು ಬಲದಲಿ
ಶಿವನ ಬಲದಿಂದಧಿಕ ಬಲವನು ಕಾಣೆ ನಾನೆಂದ ॥33॥

೦೩೪ ಹಿರಿದು ಮಾನೋನ್ನತಿಕೆಯನು ...{Loading}...

ಹಿರಿದು ಮಾನೋನ್ನತಿಕೆಯನು ಬಂ
ಧುರದ ಧನವನು ಗಾರುಹಸ್ತ್ಯದ
ಪರಮಧರ್ಮವನಾವ ಬಯಸುವನವನ ಭವನದಲಿ
ನಿರುತ ವೃದ್ಧಜ್ಞಾನಿ ವಂಶೋ
ತ್ತರ ದರಿದ್ರಪ್ರಿಯನಪತ್ಯಾಂ
ತರ ಭಗಿನಿಯೀ ನಾಲ್ವರಿರಬೇಕೆಂದನಾ ವಿದುರ ॥34॥

೦೩೫ ಧರಣಿಪತಿ ಚಿತ್ತವಿಸು ...{Loading}...

ಧರಣಿಪತಿ ಚಿತ್ತವಿಸು ಸ್ವರ್ಗದ
ಲೊರೆದನಿಂದ್ರಂಗಮರ ಗುರು ದೇ
ವರಲಿ ಸಂಕಲ್ಪವನು ಕೃತವಿದ್ಯರಲಿ ವಿನಯವನು
ಹಿರಿಯರಲಿ ಸಂಭಾವನೆಯ ಸಂ
ಹರಣ ಪದವನು ಪಾಪ ಕಾರ್ಯದೊ
ಳಿರದೆ ಮಾಡುವುದೆಂಬ ನಾಲ್ಕನು ರಾಯ ಕೇಳ್ ಎಂದ ॥35॥

೦೩೬ ಆವುದೀ ಲೋಕಕ್ಕೆ ...{Loading}...

ಆವುದೀ ಲೋಕಕ್ಕೆ ಹಿತವದ
ನೋವಿ ನಡೆವ ಜನಕ್ಕೆ ನಿಂದೆಯ
ದಾವುದದನಾಚರಿಸದಿಹ ನಾಸ್ತಿಕರ ನಂಬುಗೆಯ
ಠಾವುಗಾಣದ ತತ್ವವಿಜ್ಞಾ
ನಾವಲಂಬನನೆನಿಪನಾತನು
ಭೂವಲಯದೊಳಗುತ್ತಮನು ಭೂಪಾಲ ಕೇಳ್ ಎಂದ ॥36॥

೦೩೭ ಪಿತನು ಗುರು ...{Loading}...

ಪಿತನು ಗುರು ಶಿಖಿಯಾತ್ಮ ತಾಯೆಂ
ಬತುಳ ಪಂಚಾಗ್ನಿಯನು ಕ್ರಮದಿಂ
ಪ್ರತಿದಿನಂ ಪರಿಚರಿಯ ಮಾಳ್ಪುದು ಲೇಸ ಬಯಸುವರೆ
ಪಿತೃಗಳನು ದೇವರನು ವೃದ್ಧರ
ನತಿಥಿಗಳ ಪೂಜಿಸಿದನಾವವ
ಪಿತನ ಕೀರ್ತಿಯ ಧರ್ಮವನು ಪಡೆವವನೆ ಸುತನೆಂದ ॥37॥

೦೩೮ ಸಿರಿಯನುಳ್ಳವನವನೆ ಕುಲಜನು ...{Loading}...

ಸಿರಿಯನುಳ್ಳವನವನೆ ಕುಲಜನು
ಸಿರಿಯನುಳ್ಳವನೇ ವಿದಗ್ಧನು
ಸಿರಿಯನುಳ್ಳವನೇ ಮಹಾತ್ಮನು ಸಕಲಗುಣಯುತನು
ಸಿರಿಯನುಳ್ಳವನೇ ಸುಶೀಲನು
ಸಿರಿರಹಿತ ಶಿವನಾದೊಡಾಗಲಿ
ಸರಕು ಮಾಡದು ಲೋಕವವನೀಪಾಲ ಕೇಳ್ ಎಂದ ॥38॥

೦೩೯ ಸಿರಿ ನೆಲೆಯೆ ...{Loading}...

ಸಿರಿ ನೆಲೆಯೆ ಜವ್ವನ ನೆಲೆಯೆ ಮೈ
ಸಿರಿ ನೆಲೆಯೆ ತನು ನೆಲೆಯೆ ಖಂಡೆಯ
ಸಿರಿ ನೆಲೆಯೆ ನಿನಗರಸುತನವುಳ್ಳನ್ನ ನೀತಿಯಲಿ
ಧರೆಯ ರಕ್ಷಿಸು ಬಂಧುಗಳನು
ದ್ಧರಿಸು ಧರ್ಮವ ಸಾಧಿಸಿಂತಿದು
ನರಪತಿಗಳಿಗೆ ನೀತಿ ಚಿತ್ತೈಸೆಂದನಾ ವಿದುರ ॥39॥

೦೪೦ ವರುಷವೈದರೊಳರಸೆನಿಸಿ ದಶ ...{Loading}...

ವರುಷವೈದರೊಳರಸೆನಿಸಿ ದಶ
ವರುಷ ದಾಸತ್ವವನು ಭಾವಿಸಿ
ವರುಷ ಹದಿನಾರರಲಿ ಪುತ್ರನ ಮಿತ್ರನೆಂದೆನಿಸಿ
ಪರಿವಿಡಿಗಳಲಿ ನಡೆಸಿ ಮದ ಮ
ತ್ಸರವ ಮಾಣಿಸಿ ನೆರೆದ ಮಕ್ಕಳ
ನರಮೃಗವ ಮಾಡುವರೆ ಭೂಮೀಪಾಲ ಕೇಳ್ ಎಂದ ॥40॥

೦೪೧ ಧನಮದದಿ ಕುಲಮದದಿ ...{Loading}...

ಧನಮದದಿ ಕುಲಮದದಿ ವಿದ್ಯಾ
ಘನದಿ ಯವ್ವನ ಮದದಿ ದ್ವಿಜ ಗುರು
ವನು ವಿಭಾಡಿಸಿ ನೀನು ತಾನೆಂದೆನುತ ಹೂಂಕರಿಸಿ
ಮುನಿಸಿನಲಿ ಸಾತ್ವಿಕರೊಳೊಬ್ಬರ
ನನುಗಡಿಸಿ ಗರ್ಜಿಸಲು ನರಕದಿ
ಮುಣುಗಿದಲ್ಲದೆ ಬೇರೆ ಗತಿಯಿಲ್ಲೆಂದನಾ ವಿದುರ ॥41॥

೦೪೨ ಸಲಹಿದೊಡೆಯನ ದಿವ್ಯ ...{Loading}...

ಸಲಹಿದೊಡೆಯನ ದಿವ್ಯ ಮಂತ್ರವ
ಕಲಿಸಿದಾಚಾರ್ಯನನು ಅನುವರ
ದೊಳಗೆ ತಲೆಗಾಯಿದನ ದುಬಿರ್sಕ್ಷದಲಿ ಸಲಹಿದನ
ಜಲದೊಳಾಳ್ದನನೆತ್ತಿದನನುರಿ
ಯೊಳಗೆ ಪರಿಹರಿಸಿದನ ಮರೆದವ
ನಿಳಿವನೈ ಕುಲಕೋಟಿ ಸಹಿತ ಮಹಾಂಧ ನರಕದಲಿ ॥42॥

೦೪೩ ಒಲಿದವಳ ಬಿಸುಟೊಲ್ಲದವಳಿಗೆ ...{Loading}...

ಒಲಿದವಳ ಬಿಸುಟೊಲ್ಲದವಳಿಗೆ
ಹಲುಬುವವನಹಿತರಲಿ ಸಖ್ಯಾ
ವಳಿಯನೆಸಗುವನರಿಯದುದ ತಾ ಬಲ್ಲೆನೆಂಬವನ
ಒಲಿದು ಕೇಳದೆ ಹೇಳುವವ ಕೈ
ನಿಲುಕಲರಿಯದ ಕಾರ್ಯದಲಿ ಹಂ
ಬಲಿಸಿ ಮರುಗುವನವನೆ ಮೂಢನು ರಾಯ ಕೇಳ್ ಎಂದ ॥43॥

೦೪೪ ಹರುಷ ದರ್ಪ ...{Loading}...

ಹರುಷ ದರ್ಪ ಕ್ರೋಧ ಲಜ್ಜಾ
ತುರತೆ ಮಾನ ವಿಮಾನವಿವರಲಿ
ನಿರುತ ಸಮನೆಂದೆನಿಸಿ ಕೃತ್ಯಾಕೃತ್ಯ ಕೌಶಲವ
ವಿರಚಿಸುವ ಕಾಲದಲಿ ಶೀತೋ
ತ್ಕರದಿ ಭಯವೊಡ್ಡೆ ೈಸಲದರಿಂ
ಪರಿಹರಿಸದಾ ಕಾರ್ಯವೆಸಗುವನವನೆ ಪಂಡಿತನು ॥44॥

೦೪೫ ಕರೆಕರೆದು ಮೃಷ್ಟಾನ್ನವನು ...{Loading}...

ಕರೆಕರೆದು ಮೃಷ್ಟಾನ್ನವನು ಭೂ
ಸುರರಿಗೀವ ಸದಾಗ್ನಿ ಹೋತ್ರಾ
ಚರಿತನಹ ವೇದಾಂತ ವೇದಿಯನಾ ಪತಿವ್ರತೆಯ
ಉರುತರದ ಮಾಸೋಪವಾಸಿಯ
ನಿರದೆ ಮಾಸ ಸಹಸ್ರ ಜೀವಿಯ
ನರಸ ಕೇಳಭಿವಂದಿಸುವರೈ ಮೂರು ಮೂರ್ತಿಗಳು ॥45॥

೦೪೬ ಬಿಸುಟು ಕಳೆವುದು ...{Loading}...

ಬಿಸುಟು ಕಳೆವುದು ನೀತಿ ಶಾಸ್ತ್ರವ
ನುಸುರದಾಚಾರಿಯನ ವೇದ
ಪ್ರಸರವಿಲ್ಲದ ಋಷಿಜನವ ರಕ್ಷಿಸದ ಭೂಭುಜನ
ಒಸೆಯದಬಲೆಯನೂರೊಳಾಡುವ
ಪಶುವ ಕಾಯ್ದನನಡವಿಗುರಿಯಹ
ನುಸಿಯನಾ ಪಿತನಿಂತರುವರನು ರಾಯ ಕೇಳ್ ಎಂದ ॥46॥

೦೪೭ ವ್ಯಸನವೇಳರ ಕಾಲುಕಣ್ಣಿಯ ...{Loading}...

ವ್ಯಸನವೇಳರ ಕಾಲುಕಣ್ಣಿಯ
ಹಸರದೊಳಗಳವಳಿದು ಹೆಚ್ಚಿದ
ವಿಷಮದಿರುಬಿನೊಳದ್ದು ಮಾಯಾಮಯದ ತೋಹಿನಲಿ
ಬಸವಳಿದು ಷಡುವರ್ಗ ವೇಧೆಯ
ನುಸುಳುಗಂಡಿಯನೀಕ್ಷಿಸದೆ ತಾ
ಮಸದೊಳಿರುತಿಹುದುಚಿತವೇ ಹೇಳೆಂದನಾ ವಿದುರ ॥47॥

೦೪೮ ಅತಿಬಲನ ಹಗೆಗೊಳುವನಿಹಪರ ...{Loading}...

ಅತಿಬಲನ ಹಗೆಗೊಳುವನಿಹಪರ
ಗತಿ ವಿಚಾರವ ಮರೆವ ಲೋಕ
ಸ್ಥಿತಿಯನುಲ್ಲಂಘಿಸುವ ಮರ್ಮಜ್ಞರ ವಿರೋಧಿಸುವ
ವಿತತ ಭಾಷಿತನಪ್ಪ ತನ್ನಿಂ
ಗಿತವನವರಾಯತವನರಿಯದ
ಕ್ಷಿತಿಪನವ ಮೂಢಾತ್ಮನೈ ಭೂಪಾಲ ಕೇಳ್ ಎಂದ ॥48॥

೦೪೯ ಬಲುಹರಿದು ಕೋಪಿಸುವ ...{Loading}...

ಬಲುಹರಿದು ಕೋಪಿಸುವ ಬದುಕಿನ
ಬಳಿಯರಿದು ಕೊಡುವಾತ್ಮ ಹಿತವನು
ತಿಳಿದು ನಿರ್ಮಲವೆನಿಪ ಮೇಲಣ ತಾಗು ಬಾಗುಗಳ
ಹೊಲಬರಿದು ಸುಖ ದುಃಖದಲಿ ಸಂ
ಚಲಿಸದಿಹ ಗಂಗಾ ಮಡುವಿನಂ
ತೊಳಗುದೋರದೆ ನಡೆವವನು ಪಂಡಿತನು ಕೇಳ್ ಎಂದ ॥49॥

೦೫೦ ದಾನವಿಲ್ಲದ ವಿತ್ತ ...{Loading}...

ದಾನವಿಲ್ಲದ ವಿತ್ತ ಬುಧ ಸ
ನ್ಮಾನವಿಲ್ಲದ ರಾಜ್ಯ ಬಲು ಸುಯಿ
ಧಾನವಿಲ್ಲದ ಸುದತಿ ಧೀಮಾನಿಲ್ಲದಾಸ್ಥಾನ
ಜ್ಞಾನವಿಲ್ಲದ ತಪವು ವೇದ ವಿ
ಧಾನವಿಲ್ಲದ ವಿಪ್ರ ಶರಸಂ
ಧಾನವಿಲ್ಲದ ಸಮರ ಮೆರೆಯದು ರಾಯ ಕೇಳ್ ಎಂದ ॥50॥

೦೫೧ ದಿನವ ಬಞ್ಜೆಯ ...{Loading}...

ದಿನವ ಬಂಜೆಯ ಮಾಡದಿಹಪರ
ವಿನಯನಹ ವರ ದೈವಗುರುಪೂ
ಜನೆಯ ಬುಧಸೇವನೆಯ ಕಾಲೋಚಿತದ ವಿತರಣವ
ಮನನದಿಂ ಶ್ರವಣದಿ ನಿದಿಧ್ಯಾ
ಸನದಿ ದಿನವನು ಕಳೆವನಾತನು
ಮನುಜರೊಳಗುತ್ತಮನೆಲೇ ಭೂಪಾಲ ಕೇಳ್ ಎಂದ ॥51॥

೦೫೨ ಸಲುವೆನೆನ್ದನ್ತಃಪುರಕೆ ಸಂ ...{Loading}...

ಸಲುವೆನೆಂದಂತಃಪುರಕೆ ಸಂ
ಚಲಿಸುವವನಾಪ್ತರನು ಬಿಸುಟ
ಗ್ಗಳಿಸುವವನಹಿತರಲಿ ಧರ್ಮವನುಳಿದಧರ್ಮವನು
ಬಳಸುವವನೇಕಾಂತದಲ್ಲಿಗೆ
ಸುಳಿವವನು ಹಸಿವಿಲ್ಲದುಂಬುವ
ನಿಳೆಯೊಳಗೆ ಮೂಢಾತ್ಮನೈ ಧೃತರಾಷ್ಟ್ರ ಕೇಳ್ ಎಂದ ॥52॥

೦೫೩ ಬುಧರೊಳಗೆ ಹಗೆಗೊಳುವ ...{Loading}...

ಬುಧರೊಳಗೆ ಹಗೆಗೊಳುವ ಬುಧರಂ
ನಿಧನಗೆಯ್ದಿಪ ಬುಧರನೇಳಿಪ
ಬುಧರ ಜರೆದೊಡೆ ನಲಿವ ಬುಧರಂ ಪೊಗಳ್ದರಂ ಪಳಿವ
ಬುಧರನಧಮರ ಮಾಳ್ವ ಬುಧರಂ
ವಿಧಿಗೊಳಿಪ ಬುಧರ್ಗೀವರಂ ಕವ
ರ್ವಧಮ ಭೂಪರಿಗಂಟದಿಹುದೆ ವಿನಾಶಕರವೆಂದ ॥53॥

೦೫೪ ಕುಸುಮ ಫಲ ...{Loading}...

ಕುಸುಮ ಫಲ ತಾಂಬೂಲ ಗಂಧ
ಪ್ರಸರ ಭೋಜನ ಗಮನ ನೆನಹಿಂ
ದೆಸೆವ ಕಾರ್ಯದೊಳಿನಿಬರೊರಗಿದಡೊಬ್ಬನೆಚ್ಚರಿಕೆ
ಎಸೆಯಲನಿತುವನೊಬ್ಬನೇ ಭೋ
ಗಿಸುವಡವನೀಪಾಲರಿಗೆ ತಾ
ಸಸಿನವೆನಿಸದು ರಾಯ ಚಿತ್ತೈಸೆಂದನಾ ವಿದುರ ॥54॥

೦೫೫ ಕಳಿದ ತರಣಿಯ ...{Loading}...

ಕಳಿದ ತರಣಿಯ ಕಿರಣದಲಿ ನಿ
ರ್ಮಲಿನ ಜಲದಲಿ ದುಗ್ಧಪಾನಂ
ಗಳಲಿ ವರ ಯುವತಿಯರ ಸಂಭೋಗಾಂತರಂಗದಲಿ
ತಳಿತ ಹೋಮದ ಹೊಗೆಗಳಲಿ ದಿನ
ಬಲದೊಳಾಯುಷ್ಯಾಭಿವೃದ್ಧಿಯ
ಬೆಳವಿಗೆಗಳಹವರಸ ಚಿತ್ತೈಸೆಂದನಾ ವಿದುರ ॥55॥

೦೫೬ ಎಳೆಯ ರವಿ ...{Loading}...

ಎಳೆಯ ರವಿ ರಶ್ಮಿಯಲಿ ಪ್ರೇತಾಂ
ಗಳದ ಧೂಮಜ್ವಾಲೆಯಲಿ ಗಾ
ವಿಲ ವಯೋವೃದ್ಧೆಯರ ಸಂಭೋಗಾಂತರಂಗಳಲಿ
ಕೊಳಚೆ ನೀರಿನ ಬಳಕೆಯಲಿ ಕ
ತ್ತಲೆಯ ದಧ್ಯೋದನದಲಾಯುಷ
ವಿಳಿದು ಹೋಗದೆ ದಿನ ದಿನದೊಳವನೀಶ ಕೇಳ್ ಎಂದ ॥56॥

೦೫೭ ಮಸುಳಿಸಿದ್ದ ದುಕೂಲ ...{Loading}...

ಮಸುಳಿಸಿದ್ದ ದುಕೂಲ ರದನದೊ
ಳೆಸೆವ ಹಾವಸೆ ಭುಕ್ತದುನ್ನತ
ದೆಸಕ ನಿಷ್ಠುರ ವಾಕ್ಯವುದಯಾಸ್ತಮಯ ಕಾಲದಲಿ
ಎಸೆವ ನಿದ್ರಾಂಗನೆಯೊಳೊಂದಿರೆ
ಬಿಸಜಲೋಚನನಾದೊಡೆಯು ವ
ರ್ಜಿಸುವಳವರನು ಭಾಗ್ಯಸಿರಿ ಭೂಪಾಲ ಕೇಳ್ ಎಂದ ॥57॥

೦೫೮ ಒನ್ದು ಮೊದಲಾರನ್ತ್ಯವಾದಾ ...{Loading}...

ಒಂದು ಮೊದಲಾರಂತ್ಯವಾದಾ
ಸಂದ ಪೂಗಫಲ ಕ್ರಮಂಗಳ
ಚಂದವನು ಚಿತ್ತೈಸು ಲಾಭಾಲಾಭ ಸುಖದುಃಖ
ಕುಂದದಿಹುದಾಯುಷ್ಯ ಮರಣವಿ
ದೆಂದು ತತ್ಕಾಲದಲಿ ಭೋಗಿಸು
ವಂದವನು ಚಿತ್ತೈಸುವುದು ತಾಂಬೂಲಧಾರಕರು ॥58॥

೦೫೯ ನಾಗವಲ್ಲಿಯ ಹಿನ್ದು ...{Loading}...

ನಾಗವಲ್ಲಿಯ ಹಿಂದು ಮುಂದನು
ನೀಗಿ ಕಳೆಯದೆ ಚೂರ್ಣಪರ್ಣ
ತ್ಯಾಗವಿಲ್ಲದೆ ದಂತಧಾವನ ಪರ್ಣವನು ಸವಿದು
ಭೋಗಿಸುವೊಡಮರೇಂದ್ರನಾಗಲಿ
ನಾಗಭೂಷಣನಾದೊಡವನನು
ನೀಗಿ ಕಳೆವಳು ಭಾಗ್ಯವಧು ಭೂಪಾಲ ಕೇಳ್ ಎಂದ ॥59॥

೦೬೦ ಸ್ಥಾನ ಪಞ್ಚಕದಿನ್ದ್ರಿಯದ ...{Loading}...

ಸ್ಥಾನ ಪಂಚಕದಿಂದ್ರಿಯದ ಸಂ
ಸ್ಥಾನದಲಿ ನಿದ್ರಾಂಗನೆಯ ಸ
ನ್ಮಾನಿಸುವೊಡಾ ಸಾಧನದ ಪಂಚಕದ ಪರಿವಿಡಿಯ
ಸ್ಥಾನವರಿದಾರೋಗಣೆಯ ಸಂ
ಧಾನದಲಿ ಚಿತ್ತೈಸುವುದು ರಾ
ಜಾನುಮತವಿದು ಸಕಲ ಸುಖಕರವೆಂದನಾ ವಿದುರ ॥60॥

೦೬೧ ಜನಜನಿತ ಮಲ ...{Loading}...

ಜನಜನಿತ ಮಲ ಮೂತ್ರ ಮೂರಾ
ರೆನಿಸುವುದು ರತಿಯೊಂದು ನಿಜ ಭೋ
ಜನವೆರಡು ಸುಯಿಲೊಂದು ವರ ತಾಂಬೂಲ ಹದಿನೈದು
ಇನಿತುವನು ತಪ್ಪದೆ ನಡೆಸಲಾ
ಜನಪನಾರೋಗಣೆಗೆ ಸುಖ ಸಂ
ಜನಿಸುವುದು ದಿನಚರಿಯದಿಂದವನೀಶ ಕೇಳ್ ಎಂದ ॥61॥

೦೬೨ ನೆರೆದ ಸಚರಾಚರವಿದೆಲ್ಲವು ...{Loading}...

ನೆರೆದ ಸಚರಾಚರವಿದೆಲ್ಲವು
ನರರ ನಿಜಭೋಜನಕೆ ಜನಿಸಿದ
ವರಸ ಕೇಳಿದರೊಳಗೆ ಭೋಜ್ಯಾಭೋಜ್ಯವನು ತಿಳಿದು
ಪರಿಹರಿಸ ಬಲ್ಲವರುಗಳು ಘನ
ತರದ ಸುಕೃತವನೈದುವರು ಭೂ
ವರರೊಳಗೆ ಸಂದೇಹವೇ ಭೂಪಾಲ ಕೇಳ್ ಎಂದ ॥62॥

೦೬೩ ತುರಗಹೃದಯ ಧ್ವನಿಯ ...{Loading}...

ತುರಗಹೃದಯ ಧ್ವನಿಯ ಸಿಡಿಲಿನ
ಧರಧುರದ ಗರ್ಜನೆಯ ನಾರಿಯ
ರಿರವ ಪುರುಷನ ಭಾಗ್ಯದೇವತೆಯೊಲಿವ ಕಾಲವನು
ವರುಷದುದಯವ ಬರನ ಬರವನು
ವಿರಚಿಸುವೊಡೆ ವಿಧಾತೃಗಳವ
ಲ್ಲರಸ ಕೇಳ್ ಮಾನವರಿಗಿದು ಗೋಚರಿಸಲರಿದೆಂದ ॥63॥

೦೬೪ ಬಡತನಗಳಡಸಿದೊಡೆ ಬನ್ಧುಗ ...{Loading}...

ಬಡತನಗಳಡಸಿದೊಡೆ ಬಂಧುಗ
ಳೆಡಹಿ ಕಾಣರು ಭಂಟ ತಾನಾ
ದೊಡೆಯು ಬಂದಾಪತ್ತಿನೊಳಗೆ ಪರಾಙ್ಮುಖನೆಯಾಗಿ
ನುಡಿಸದವನೇ ಹಗೆ ಶರೀರದೊ
ಳಡಸಿದಾ ರುಜೆ ಬಾಧೆಗಡವಿಯ
ಗಿಡ ಮರಂಗಳು ರಕ್ಷಿಸವೆ ಹೇಳೆಂದನಾ ವಿದುರ ॥64॥

೦೬೫ ಕಾಲದೊಳಗೆ ವಸನ್ತ ...{Loading}...

ಕಾಲದೊಳಗೆ ವಸಂತ ವಿದ್ಯಾ
ಜಾಲದೊಳಗೆ ಕವಿತ್ವ ಗಜ ವೈ
ಹಾಳಿಯಲಿ ದೇವೇಂದ್ರ ಮಿತ್ರಶ್ರೇಣಿಯೊಳು ವಾಣಿ
ಭಾಳನೇತ್ರನು ದೈವದಲಿ ಬಿ
ಲ್ಲಾಳಿನಲಿ ಮನ್ಮಥನು ಧನದಲಿ
ಹೇಳಲೇನಭಿಮಾನವೇ ಧನವೆಂದನಾ ವಿದುರ ॥65॥

೦೬೬ ಮುನ್ದೆ ಗುರುವನು ...{Loading}...

ಮುಂದೆ ಗುರುವನು ಬಂಧು ಜನವನು
ಹಿಂದೆ ಕರ್ಮಾಂತ್ಯದಲಿ ಸೇವಕ
ವೃಂದವನು ಕೊಂಡಾಡುವುದು ಸಾಹಿತ್ಯ ಭಾವವಿದು
ಹಿಂದು ಮುಂದಾವಾಗ ನಿನ್ನಯ
ನಂದನರ ನಾರಿಯರ ಹೊಗಳುವು
ದಂದವೇ ಭೂಪಾಲ ಚಿತ್ತೈಸೆಂದನಾ ವಿದುರ ॥66॥

೦೬೭ ತುರಗದೆಡಬಲ ಗಜದ ...{Loading}...

ತುರಗದೆಡಬಲ ಗಜದ ಸಮ್ಮುಖ
ತರುಣಿಯರುಗಳ ಸರ್ವತೋಮುಖ
ಹಿರಿದು ದುರ್ಜನನಿದ್ದ ದೇಶವದೆಯÉ್ದು ವ್ಯಾಘ್ರಮುಖ
ಭರದಿನಾ ದೇಶವನು ಬಿಟ್ಟರ
ವರಿಸದನ್ಯಗ್ರಾಮಗಳ ವನಾಂ
ತರವನೈದುವುದಲ್ಲದಲ್ಲಿಹುದುಚಿತವಲ್ಲೆಂದ ॥67॥

೦೬೮ ಎತ್ತಲೆತ್ತಲು ಪೋಪ ...{Loading}...

ಎತ್ತಲೆತ್ತಲು ಪೋಪ ಮನುಜಂ
ಗತ್ತಲತ್ತಲೆ ದೈವ ಕೂಡೆ ಬ
ರುತ್ತಿಹುದು ಬೆಂಬಿಡದೆ ನಾನಾ ದೇಶ ದೇಶದಲಿ
ಮಿತ್ರನುರು ಮಧ್ಯಸ್ಥಪುರುಷನ
ಮಿತ್ರನೌದಾಸೀನನೊಬ್ಬನು
ಕೃತ್ರಿಮನು ಸಹಜೀವಿಯಿಂತಿವರರಸ ಕೇಳ್ ಎಂದ ॥68॥

೦೬೯ ಗುರು ವಿರೋಧ ...{Loading}...

ಗುರು ವಿರೋಧ ಮಹೀಬುಧರ ಮ
ತ್ಸರವು ದೈವದ್ರೋಹ ಗುಣ ಸಾ
ಗರನ ಬಂಧು ದ್ವೇಷವತ್ಯಾಲೀಢ ದೀನತನ
ಶರಣಜನ ಪಾಂಡಿತ್ಯವೆಂಬಿವ
ನರವರಿಸದಂಗೈಸೆ ಭೂಪನ
ಸಿರಿಗೆ ಮೊಳೆಯದೆ ಕೇಡು ಚಿತ್ತೈಸೆಂದನಾ ವಿದುರ ॥69॥

೦೭೦ ಬಲು ಪ್ರಧಾನನ ...{Loading}...

ಬಲು ಪ್ರಧಾನನ ವೈರ ಹಿತವಹ
ಲಲನೆಯರ ಮನದಳಲು ಹಗೆಯಲಿ
ಬಳಸುವಂತಸ್ಥತೆಯನಾಮಿಕರೊಡನೆ ಕೆಳೆಗೋಷ್ಠಿ
ಬಲದೊಡನೆ ನಿರ್ಬಂಧ ಧರ್ಮದ
ನೆಲೆಯನರಿಯದ ದಾನಿಗಳ ಸಿರಿ
ಸುಳಿವ ಗಾಳಿಗೆ ಮಲೆವ ದೀಪವು ಕೇಳು ಧೃತರಾಷ್ಟ್ರ ॥70॥

೦೭೧ ಹುಸಿ ಪರದ್ರೋಹವು ...{Loading}...

ಹುಸಿ ಪರದ್ರೋಹವು ಪರ ಸ್ತ್ರೀ
ವ್ಯಸನಪೇಯವಸೂಯೆ ಮಾನ್ಯ
ದ್ವಿಷತೆ ಪತಿತ ಸಮೇತವಾತ್ಮಸ್ತುತಿಯೆನಿಪ್ಪಿವನು
ಬಿಸುಟು ತದ್ವಿಪರೀತದಲಿ ವ
ರ್ತಿಸುವನವನೇ ರಾಯನಾತಗೆ
ವಸುಧೆಯೊಳಗೆಣೆ ಯಾವನೈ ಭೂಪಾಲ ಕೇಳ್ ಎಂದ ॥71॥

೦೭೨ ಇದು ಸಮಾಹಿತವಿದು ...{Loading}...

ಇದು ಸಮಾಹಿತವಿದು ಶುಭೋದಯ
ವಿದು ಸಕಲ ಪುರುಷಾರ್ಥ ಸಾಧನ
ವಿದು ಸುಜನ ಸನ್ಮಾನವಿದು ಸಂಸಾರ ಸೌಖ್ಯಫಲ
ಇದು ಸುಬಲವಿದಬಲವಿದಾಮಾ್ನ
ಯದ ಸುನಿಶ್ಚಯ ನೀತಿ ಕಾರ್ಯದ
ಹದನನರಿದಾಚರಿಸಬಲ್ಲವನವನೆ ಪಂಡಿತನು ॥72॥

೦೭೩ ಶತ್ರುಕಾಲ ಸುದೇಶ ...{Loading}...

ಶತ್ರುಕಾಲ ಸುದೇಶ ವರ್ಗ ಸು
ಮಿತ್ರರುದಯೋಪಾಯಕರಣ ಸು
ಪಾತ್ರವೆಂಬಿವು ಮೂರು ತೆರನಾಗಿಪ್ಪವಿದರೊಳಗೆ
ಕ್ಷತ್ರಧರ್ಮ ವಿವೇಕವೆಂಬಿವ
ನ್ತೋತ್ರಗೊಳಿಪನೆ ರಾಯನವಗೆ ಧ
ರಿತ್ರಿಯೊಳಗೆಣೆ ಯಾವನೈ ಭೂಪಾಲ ಕೇಳ್ ಎಂದ ॥73॥

೦೭೪ ಎಲ್ಲಿ ಸುಲಲಿತ ...{Loading}...

ಎಲ್ಲಿ ಸುಲಲಿತ ವಿದ್ಯೆ ಬಹು ಗುಣ
ವೆಲ್ಲಿ ಗಣಿಕಾ ನಿಕರ ಮಣಿ ಗಣ
ವೆಲ್ಲಿ ಗಜ ಜಾತ್ಯಶ್ವವೆಲ್ಲಿ ವರೂಥ ಸಂದೋಹ
ಎಲ್ಲಿ ಸುಭಟ ನಿಕಾಯ ನೆರೆದಿಹು
ದಲ್ಲಿ ತನ್ನಾಧೀನ ಮಾಡಲು
ಬಲ್ಲವನೆ ನೃಪನಾತಗಿದಿರಾರೈ ಧರಿತ್ರಿಯಲಿ ॥74॥

೦೭೫ ದ್ವಾರವೊಮ್ಬತ್ತಿನ್ದ್ರಿಯದಹಂ ...{Loading}...

ದ್ವಾರವೊಂಬತ್ತಿಂದ್ರಿಯದಹಂ
ಕಾರಕರಣಚತುಷ್ಟಯಂಗಳ
ಸಾರ ಭೂತಾಧಿಕದ ಸುಳಿವಿನ ಪಂಚವಾಯುಗಳ
ಹೋರಟೆಗಳಲಿ ಬಳಲಿ ಜೀವನ
ಧೀರನಹವೊಲು ಪಾಂಡುಪುತ್ರರ
ಕೌರವರ ಬೇಳಂಬದಲಿ ಬೆಂಡಾದೆ ನೀನೆಂದ ॥75॥

೦೭೬ ಮತ್ತನತಿಶ್ರಾನ್ತನು ಪ್ರಮದೋ ...{Loading}...

ಮತ್ತನತಿಶ್ರಾಂತನು ಪ್ರಮದೋ
ನ್ಮತ್ತನತಿಕುಪಿತಾನನನು ಚಲ
ಚಿತ್ತನತಿ ಕಾಮುಕನು ಲುಬ್ಧನು ಶೂರನೆಂಬವನು
ಕ್ಷುತ್ತು ಘನವಾಗುಳ್ಳನಿಂತೀ
ಹತ್ತು ಜನವಾವಾಗ ಧರ್ಮದ
ತತ್ತವಣೆಗಳನರಿಯರೈ ಭೂಪಾಲ ಕೇಳ್ ಎಂದ ॥76॥

೦೭೭ ದಾನವಿಷ್ಟಾಪೂರ್ತ ವಿನಯ ...{Loading}...

ದಾನವಿಷ್ಟಾಪೂರ್ತ ವಿನಯ ಸ
ಮಾನ ದೇವಾರ್ಚನೆ ಮಹೀಸುರ
ಧೇನು ಸಂತರ್ಪಣ ಮಹಾತಿಥಿ ಪೂಜೆ ಗುರುಭಕ್ತಿ
ಧ್ಯಾನ ದೀನಾನಾಥಬಂಧು ವಿ
ತಾನ ಶರಣಾಗತ ಸುರಕ್ಷಾ
ಸ್ನಾನ ತೀರ್ಥಂಗಳನು ಮಾಡಲು ಬೇಹುದವನಿಪರು ॥77॥

೦೭೮ ಧರೆಯೊಳೀ ಹೊತ್ತಿನಲಿ ...{Loading}...

ಧರೆಯೊಳೀ ಹೊತ್ತಿನಲಿ ನಿನಗೈ
ಶ್ವರಿಯದಲಿ ಮಕ್ಕಳಲಿ ಖಂಡೆಯ
ಸಿರಿಯಲೊಡಹುಟ್ಟಿದರು ಸಪ್ತಾಂಗದಲಿ ಸತಿಯರಲಿ
ಗುರು ಪಿತಾಮಹ ಬಂಧುಜನ ಮಿ
ತ್ರರಲದಾವುದು ಕೊರತೆ ಕೌಂತೇ
ಯರನೆರವಿಗರ ಮಾಡುವರೆ ಧೃತರಾಷ್ಟ್ರ ಕೇಳ್ ಎಂದ ॥78॥

೦೭೯ ಉಭಯಕುಲಶುದ್ಧಿಯಲಿ ಹೆಚ್ಚಿದ ...{Loading}...

ಉಭಯಕುಲಶುದ್ಧಿಯಲಿ ಹೆಚ್ಚಿದ
ವಿಭವದಲಿ ವಿಗ್ರಹದಲಧಿಕ
ಪ್ರಭೆಗಳಲಿ ಸತ್ಯದಲಿ ಸಾಹಿತ್ಯದಲಿ ವಿನಯದಲಿ
ಅಭವನಂಘ್ರಿಯ ಸೇವೆಯಲಿ ಹರಿ
ನಿಭನೆನಿಸಿ ಬದುಕುವನು ರಾಜ್ಯಕೆ
ವಿಭುವೆನಿಸುವನು ರಾಯ ಚಿತ್ತೈಸೆಂದನಾ ವಿದುರ ॥79॥

೦೮೦ ವೇಸಿಯಹ ಪರಿಯಙ್ಕದಲಿ ...{Loading}...

ವೇಸಿಯಹ ಪರಿಯಂಕದಲಿ ನಿಜ
ದಾಸಿಯಹ ಶಿಶ್ರೂಷೆಯಲಿ ನಿ
ರ್ದೋಷಿಯಹ ಪತಿಭಕ್ತಿಯಲಿ ಮೋಹದಲಿ ತಾಯೆನಿಸಿ
ಏಸು ಕಾರ್ಯಕೆ ಮಂತ್ರಿಯೆನಿಸುವ
ಮೈಸಿರಿಯನುಳ್ಳವಳು ರಾಣೀ
ವಾಸವೆಂದೆನಿಸುವಳೆಲೈ ಭೂಪಾಲ ಕೇಳ್ ಎಂದ ॥80॥

೦೮೧ ತನ್ದೆ ತಾಯಿಗಳಾಏ್ಞÉಯನು ...{Loading}...

ತಂದೆ ತಾಯಿಗಳಾಜ್ಞೆಯನು ಸಾ
ನಂದದಲಿ ಪಾಲಿಸುತ ಮದವನು
ಮುಂದುಗೆಡಿಸಿ ಸುಧರ್ಮದಲಿ ರಾಜ್ಯವನು ಪಾಲಿಸುತ
ಬಂಧು ಬಳಗವ ಸಲಹಿ ಭೂಸುರ
ವೃಂದವನು ನೆರೆ ಹೊರೆವಡೆವ ಸುತ
ವಂದ್ಯನೈ ಲೋಕಕ್ಕೆ ಚಿತ್ತೈಸೆಂದನಾ ವಿದುರ ॥81॥

೦೮೨ ಇಹಪರದ ಸುಖ ...{Loading}...

ಇಹಪರದ ಸುಖ ಸಂಗತಿಯ ಸಂ
ಗ್ರಹಿಸಿ ವೇದಾಚಾರದಲಿ ಸ
ನ್ನಿಹಿತನಾಗಿ ಸಮಸ್ತ ಕಳೆಯಲಭಿಜ್ಞನೆಂದೆನಿಸಿ
ಅಹಿತ ಕುಲವನು ಸಮರದಲಿ ನಿ
ರ್ವಹಿಸಿ ಶರಣಾಗತರ ಪಾಲಿಸು
ತಿಹಡವನು ಮಗನೆನಿಸುವನು ಭೂಪಾಲ ಕೇಳ್ ಎಂದ ॥82॥

೦೮೩ ಇನ್ದ್ರಿಯವನೊಡೆತುಳಿದು ...{Loading}...

ಇಂದ್ರಿಯವನೊಡೆತುಳಿದು ಕರ್ಮದ
ಬಂದಿಯನು ತಲೆಬಳಚಿ ವಿಷಯದ
ದಂದುಗವನೀಡಾಡಿ ಮಾಯಾ ಪಾಶವನು ಹರಿದು
ದ್ವಂದ್ವವಿರಹಿತನಾಗಿ ವಿಶ್ವದ
ಲೊಂದಿ ಮೆರೆಯಲು ಬಲ್ಲವನು ಗುರು
ವೆಂದೆನಿಸುವನು ರಾಯ ಚಿತ್ತೈಸೆಂದನಾ ವಿದುರ ॥83॥

೦೮೪ ಒಡಲೊಡವೆ ಮೊದಲಾದುವೆಲ್ಲವ ...{Loading}...

ಒಡಲೊಡವೆ ಮೊದಲಾದುವೆಲ್ಲವ
ತಡೆಯದೊಪ್ಪಿಸಿ ಗುರುವಿನಂಘ್ರಿಯ
ಹಿಡಿದು ಭಜಿಸುತ ಕೊಟ್ಟ ಕೆಲಸಂಗಳೊಳಗನಿತುವನು
ಬಿಡದೆ ಮಾರುತ್ತರವನವರಿಗೆ
ಕೊಡದೆ ಭಯ ಭಕ್ತಿಯಲಿ ತಪ್ಪದೆ
ನಡೆಯ ಬಲ್ಲವನವನೆ ಶಿಷ್ಯನು ರಾಯ ಕೇಳ್ ಎಂದ ॥84॥

೦೮೫ ಯುಕುತಿವಿದರುಗಳಾಗಿ ವಿದ್ಯಾ ...{Loading}...

ಯುಕುತಿವಿದರುಗಳಾಗಿ ವಿದ್ಯಾ
ಧಿಕರೆನಿಸಿ ಸಮಬುದ್ಧಿಗಳ ನಾ
ಟಕವ ನಟಿಸುತ ಪರಮ ತತ್ವಜ್ಞಾನಪರರಾಗಿ
ಸಕಲ ಕಳೆಯಲಭಿಜ್ಞರಹ ಧಾ
ರ್ಮಿಕರು ಪರಪುರುಷಾರ್ಥಿಗಳು ವೈ
ದಿಕರಲೇ ವಿದ್ವಾಂಸರೆನಿಸುವರರಸ ಕೇಳ್ ಎಂದ ॥85॥

೦೮೬ ದಣ್ಡನೀತಿ ಸ್ಮಾರ್ತ ...{Loading}...

ದಂಡನೀತಿ ಸ್ಮಾರ್ತ ಶೌಚೋ
ದ್ದಂಡ ವೇದಾಧ್ಯಯನ ನಿಪುಣನ
ಪಂಡಿತಪ್ರಿಯ ಶಾಂತಿ ಪೌಷ್ಟಿಕ ಕರ್ಮದೀಧಿತನ
ಚಂಡ ದೈವಜ್ಞನನಧಿಕ ಗುಣ
ಮಂಡನನ ಬಹುಶಾಸ್ತ್ರಪಠಣನ
ಪಂಡಿತನ ಪೌರೋಹಿತನ ಮಾಡುವುದರಸ ಕೇಳ್ ಎಂದ ॥86॥

೦೮೭ ಸ್ಥೂಲಸೂಕ್ಷ ್ಮ ...{Loading}...

ಸ್ಥೂಲಸೂಕ್ಷ ್ಮ ಕೃತಜ್ಞನುತ್ಸವ
ಶೀಲನಕ್ರೋಧಿಯನ ದೀರ್ಘ ವಿ
ಶಾಲ ಸೂತ್ರಿಯ ವೃದ್ಧಸೇವಕ ಸತ್ಯ ವಾಕ್ಶುಚಿಯ
ಕಾಲವೇದಿ ವಿನೀತನವ್ಯಸ
ನಾಳಿ ಸೂರಿ ರಹಸ್ಯ ಸತ್ಕೃತಿ
ಪಾಲನಾನ್ವಿತ ಮಂತ್ರಿಯುಂಟೇ ರಾಯ ನಿನಗೆಂದ ॥87॥

೦೮೮ ತುರುಗ ಗಜ ...{Loading}...

ತುರುಗ ಗಜ ಭಟರಳವರಿವ ಸಂ
ಗರ ಮಹೋತ್ಸಾಹನ ಜಿತಶ್ರಮ
ನರಿಕಟಕ ಭೇದಕನ ನಾನಾಯುಧ ವಿಶಾರದನ
ಭರಿತ ಧೈರ್ಯನ ಪತಿಹಿತನ ಸಂ
ಗರಸದಾರನನೂಧ್ರ್ವರೋಮನ
ನಿರದೆ ಸೇನಾಪತಿಯ ಮಾಡುವುದರಸ ಕೇಳ್ ಎಂದ ॥88॥

೦೮೯ ತಿಳಿದವನ ಮತಿವಿದನ ...{Loading}...

ತಿಳಿದವನ ಮತಿವಿದನ ಭಾಷಾ
ವಳಿ ಲಿಪಿಜ್ಞನ ಸಾಕ್ಷರನ ಮಂ
ಡಳಿಕ ಸಾವಂತರ ವಿಶೇಷದಲವಸರವನರಿದು
ಸಲೆ ಕರೆವ ಕಳುಹಿಸುವ ನಿಲಿಸುವ
ಬಲುಹನುಳ್ಳನ ಸುಕರ ದುಷ್ಕರ
ತಿಳಿವ ಹೃದಯನ ಸಂಧಿವಿಗ್ರಹರೆನಿಸಬೇಕೆಂದ ॥89॥

೦೯೦ ಮಿಸುಪ ಮಣಿಗಣ ...{Loading}...

ಮಿಸುಪ ಮಣಿಗಣ ಲೋಹ ಕಾಂಚನ
ವಿಸರ ಭೇದವನರಿವ ಕೊಟ್ಟುದ
ನಸಿಯಲೀಯದೆ ತಾನು ಭಕ್ಷಿಸದಹಿ ನಿಧಾನವನು
ಒಸೆದು ಕಾದಿಪ್ಪಂತೆ ಕಾದಿಹ
ಹುಸಿಯದಾಪ್ತನ ಬಹುಕುಟುಂಬ
ವ್ಯಸನವುಳ್ಳನ ಮಾಳ್ಪುದೈ ಭಂಡಾರ ರಕ್ಷಕನ ॥90॥

೦೯೧ ಮನ ವಚನ ...{Loading}...

ಮನ ವಚನ ಕಾಯದಲಿ ದಾತಾ
ರನ ಹಿತವನುಳ್ಳನ ವಿನೀತನ
ವಿನುತ ವನಿತಾ ನತಮುಖನ ನಿಷ್ಕಳಿತ ರೋಷಕನ
ಮುನಿವವರ ಬುದ್ಧಿಯಲಿ ಸಿಲುಕದ
ವನ ವಿಶೇಷ ಕಳಾಪ್ರವೀಣನ
ಜನಪ ಚಿತ್ತೈಸುವುದೆಲೈ ತಾಂಬೂಲಧಾರಕನ ॥91॥

೦೯೨ ಪಿತೃ ಪಿತಾಮಹ ...{Loading}...

ಪಿತೃ ಪಿತಾಮಹ ಸೂಪ ಶಾಸ್ತ್ರಾ
ಯುತನ ಕೈಕರಣೆಗಳಲಧಿಕನ
ನತಿ ಶುಚಿಯ ಸಾಧಕನನಕ್ರೋಧಿಯನನಾಲಸನ
ಪತಿಹಿತನ ಷಡುರಸ ವಿಶೇಷಾ
ನ್ವಿತನನಿತರಾಲಯವಿದೂರನ
ಪತಿಕರಿಸುವುದು ಸೂಪಕಾರತೆಗರಸ ಕೇಳ್ ಎಂದ ॥92॥

೦೯೩ ನಿಶಿತ ಪರಿಮಳ ...{Loading}...

ನಿಶಿತ ಪರಿಮಳ ಮೋದದಿಂ ಮೋ
ದಿಸುವ ಗಂಧದ್ರವ್ಯದಲಿ ಪಂ
ಠಿಸಿದ ಜೀವನ ಜೀವ ತನ್ನಯ ಜೀವನವೆಯೆಂದು
ವಸುಮತೀಶರಿಗಿತ್ತು ತಾ ಭೋ
ಗಿಸದೆ ಬಳಸದೆ ರಾಜನನೋಲ
ಗಿಸುವವನೆ ಪಾನೀಯಧಾರಕನರಸ ಕೇಳ್ ಎಂದ ॥93॥

೦೯೪ ಉನ್ನತನ ರೂಪಾಧಿಕನ ...{Loading}...

ಉನ್ನತನ ರೂಪಾಧಿಕನ ಸಂ
ಪೂರ್ಣದಕ್ಷನನನ್ಯರೆನ್ನವ
ರೆನ್ನದನ ಪರರಿಂಗಿತಾಕಾರ ಪ್ರಭೇದಕನ
ಮನ್ನಣೆಗೆ ಬೆರೆಯದನನಾಪ್ತನ
ನನ್ಯ ಕಾರ್ಯೋಚಿತ ಸಮಪ್ರತಿ
ಪನ್ನ ಪಡಿಹಾರಕನ ಮಾಡುವುದರಸ ಕೇಳ್ ಎಂದ ॥94॥

೦೯೫ ಗ್ರಾಮ ಮೂರರ ...{Loading}...

ಗ್ರಾಮ ಮೂರರ ಸಂಚರಣೆಗಳ
ಸೀಮೆಯಲಿ ಸರಿಗಮಪದನಿಗಳ
ನೇಮ ತಪ್ಪದೆ ಹರಣಭರಣದ ಹೆಂಪು ತಿರುಪುಗಳ
ಕೋಮಲಿತ ಶಾರೀರ ಹೃದಯದ
ರಾಮಣೀಯಕ ರಚನೆಯಲ್ಲಿ ಸ
ನಾಮನೆನಿಸುವನವನೆ ಗಾಯಕನರಸ ಕೇಳ್ ಎಂದ ॥95॥

೦೯೬ ತಾಳಲಯ ಬೊಮ್ಬಾಳ ...{Loading}...

ತಾಳಲಯ ಬೊಂಬಾಳ ಮಿಶ್ರದ
ಹೇಳಿಕೆಯನಾ ಠಾಯ ಶುದ್ಧದ
ಸಾಳಗದ ಸಂಕೀರ್ಣ ದೇಸಿಯ ವಿವಿಧ ರಚನೆಗಳ
ಮೇಳವರಿವುತ ವಾದ್ಯ ಸಾಧನ
ದೇಳಿಗೆಯ ಸಂಪೂರ್ಣಮಾರ್ಗದ
ಸೂಳುಗಳ ಲಯಮಾನವರಿದವನವನೆ ಗಾಯಕನು ॥96॥

೦೯೭ ಗಾಯದಲಿ ಮೇಣ್ ...{Loading}...

ಗಾಯದಲಿ ಮೇಣ್ ಚೊಕ್ಕೆಯದಲಡು
ಪಾಯಿಗಳಲುಪಕಾಯದೊಳಗೆ ನ
ವಾಯಿಗಳ ಬಿನ್ನಾಣದಲಿ ಬಳಿಸಂದು ಬೇಸರದೆ
ಸ್ಥಾಯಿಯಲಿ ಸಂಚಾರದಲಿ ಸಮ
ಗೈಯೆನಿಸಿ ನಾನಾ ವಿನೋದದ
ದಾಯವರಿವವನವನೆ ಮಲ್ಲನು ಕೇಳು ಧೃತರಾಷ್ಟ್ರ ॥97॥

೦೯೮ ಎಡಬಲನನಾರೈವುತೊಬ್ಬನ ಬಿಡದೆ ...{Loading}...

ಎಡಬಲನನಾರೈವುತೊಬ್ಬನ
ಬಿಡದೆ ನೋಡುತ ಮಕ್ಷಿಕಂಗಳ
ಗಡಣವನು ಕೆದರಿಸುತ ಕಿಗ್ಗಣ್ಣಿಕ್ಕಿ ಕೆಲಬಲನ
ಜಡಿದು ನೂಕುವ ಸ್ವಾಮಿ ಕಾರ್ಯದ
ಕಡೆಯೆನಿಸುತಾವಾಗ ಸೇವೆಗೆ
ಸೆಡೆಯದವನೇ ಚಮರಧಾರಕನರಸ ಕೇಳ್ ಎಂದ ॥98॥

೦೯೯ ಗುಳಿ ತೆವರನೀಕ್ಷಿಸುತ ...{Loading}...

ಗುಳಿ ತೆವರನೀಕ್ಷಿಸುತ ಬಟ್ಟೆಯ
ಮೆಳೆ ಮರಂಗಳ ಹೊಯ್ಲ ತಪ್ಪಿಸಿ
ನೆಳಲನರಸುತ ವೇಗಗತಿ ಸಾಮಾನ್ಯ ಗತಿಗಳಲಿ
ಬಳಿವಿಡಿದು ಭೂಭುಜರ ಯಾನಂ
ಗಳೊಳಗಳುಕದೆ ಡಗೆಯ ಸೈರಿಸಿ
ಬಳಸುವವನೇ ಛತ್ರಧಾರಕನರಸ ಕೇಳ್ ಎಂದ ॥99॥

೧೦೦ ಹರುಷದಲಿ ನಿಜಜನನಿ ...{Loading}...

ಹರುಷದಲಿ ನಿಜಜನನಿ ಗರ್ಭವ
ಧರಿಸಿಕೊಂಡಾಡುವವೊಲುತ್ತಮ
ಪುರುಷರಂತರ್ಯಾಮಿಯನು ತಾಳ್ವಂತೆ ಭೂಭುಜರ
ಧರಿಸಿ ಸುಖ ಸಂಗತಿಗಳಲಿ ಸಂ
ಚರಿಸುತಾಳ್ದನ ಹಾನಿ ವೃದ್ಧಿಯ
ಲಿರಲು ಬೆಸದವರೆನಿಸುವರು ಭೂಪಾಲ ಕೇಳ್ ಎಂದ ॥100॥

೧೦೧ ಹಿನ್ದೆ ಮಾಡಿದ ...{Loading}...

ಹಿಂದೆ ಮಾಡಿದ ಸುಕೃತ ಫಲವೈ
ತಂದು ಸಾರುವವೋಲು ನಾನಾ
ಚಂದದಾಪತ್ತಿನಲಿ ಹರಿನಿಜಭಕ್ತ ಸಂತತಿಯ
ಮುಂದೆ ನಿಲುವವೊಲವನಿಪಾಲರ
ದಂದುಗದ ಹೊತ್ತಿನಲಿ ಗಜ ಹಯ
ವೃಂದವನೆ ಚಾಚುವನು ವಾಹಕನರಸ ಕೇಳ್ ಎಂದ ॥101॥

೧೦೨ ಪರ್ಬತವನೊಡೆದುಳಿಸಿ ಭೂಮಿಯ ...{Loading}...

ಪರ್ಬತವನೊಡೆದುಳಿಸಿ ಭೂಮಿಯ
ನಿಬ್ಬಗೆಯ ಮಾಡಿಸುತ ರಥ ಗಜ
ದೊಬ್ಬುಳಿಯ ಹರೆಗಡಿಸಿ ಕಾದಿಸುತಾನೆಗಳ ಮೇಲೆ
ಬೊಬ್ಬಿರಿದು ಶರವಳೆಯ ಸುರಿಸುರಿ
ದುಬ್ಬರದ ಬವರದೊಳಗಹಿತರಿ
ಗುಬ್ಬಸವನೆಸಗುವನೆ ಜೋಧನು ರಾಯ ಕೇಳ್ ಎಂದ ॥102॥

೧೦೩ ಕುದುರೆಗಳನಾರೈದು ರಥವನು ...{Loading}...

ಕುದುರೆಗಳನಾರೈದು ರಥವನು
ಹದುಳಿಸುತ ಸಾರಥಿಯನೊಲವು
ತ್ತಿದಿರ ಮುರಿವುತ ತನ್ನ ಕಾಯಿದುಕೊಳುತ ಕೆಲಬಲನ
ಸದೆದು ಮರಳುವ ಲಾಗುವೇಗದ
ಕದನ ಕಾಲಾನಲನವನು ತಾ
ಮೊದಲಿಗನಲೇ ರಥಿಕರಿಗೆ ಧೃತರಾಷ್ಟ್ರ ಕೇಳ್ ಎಂದ ॥103॥

೧೦೪ ಬಿಟ್ಟ ಸೂಟಿಯಲರಿ ...{Loading}...

ಬಿಟ್ಟ ಸೂಟಿಯಲರಿ ನೃಪಾಲರ
ಮುಟ್ಟಿ ಮೂದಲಿಸುತ್ತ ಮೋಹಿದ
ಥಟ್ಟ ನೊಡೆಹಾಯ್ದಹಿತ ಬಲದೊಳಗಾನೆವರಿವರಿದು
ಹಿಟ್ಟುಗುಟ್ಟುತ ಹೆಣನ ವಟ್ಟಾ
ವಟ್ಟಿ ಮಸಗಲು ಕಳನ ಚೌಕದ
ಲಟ್ಟಿಯಾಡಿಸಬಲ್ಲಡವ ರಾವುತನು ಕೇಳ್ ಎಂದ ॥104॥

೧೦೫ ಬೇಸರದೆ ಕಾಳೋರಗನನ ...{Loading}...

ಬೇಸರದೆ ಕಾಳೋರಗನನ
ಡ್ಡೆ ೈಸಿ ಕಟ್ಟಿರುವೆಗಳು ಖಂಡವ
ಸೂಸಿ ಕಡಿಕಡಿದೊಟ್ಟಿದಂದದಲಹಿತ ಬಲದೊಳಗೆ
ಓಸರಿಸದೊಳಹೊಕ್ಕು ಸಮರ ವಿ
ಳಾಸವನು ನೆರೆ ಮೆರೆದು ಕೇಶಾ
ಕೇಶಿಗೊದಗುವನವನೆ ಕಾಲಾಳರಸ ಕೇಳ್ ಎಂದ ॥105॥

೧೦೬ ಬರಲು ಕಣ್ಡಡೆ ...{Loading}...

ಬರಲು ಕಂಡಡೆ ವಂದಿಸುತಲಂ
ತರಿಸಿ ಮಿಗೆ ಹತ್ತಿರವೆನಿಸದತಿ
ತರದ ದೂರವ ಸಾರದೀಪರಿ ಮಧ್ಯಗತನೆನಿಸಿ
ಪರಿವಿಡಿಯಲೋಲಗಿಸುತರಸನ
ಸಿರಿಮೊಗವನೀಕ್ಷಿಸುತ ಬೆಸಸಿದ
ನರವರಿಸದಾಕ್ಷಣಕೆ ಮಾಡುವನವನೆ ಸೇವಕನು ॥106॥

೧೦೭ ಕುನಖಿ ಕುಷ್ಠಿ ...{Loading}...

ಕುನಖಿ ಕುಷ್ಠಿ ಕುಚೇಲನನು ಕು
ಬ್ಜನನು ವಿಧವಾಂಗನೆಯ ದಾಸಿಯ
ತನುವಿಕಾರಿಯನಂಗಹೀನನ ಪಂಗುಳಾಂಧಕನ
ಘನ ರುಜಾಂಗನ ಬಿಡುದಲೆಯ ರೋ
ದನಿಯನುಪ್ಪವಡಿಸುವ ಸಮಯದೊ
ಳಿನಿಬರನು ಕಾಣ್ಬುದು ಮಹೀಶರಿಗಂಗವಲ್ಲೆಂದ ॥107॥

೧೦೮ ಕಲಶ ಕನ್ನಡಿ ...{Loading}...

ಕಲಶ ಕನ್ನಡಿ ಕರಿ ತುರಗ ಗೋ
ಕುಲ ವೃಷಭ ಬುಧನಿಚಯ ಗಿರಿ ಸಂ
ಕುಳ ಸುವಾಸಿನಿ ಮಾತೃಪಿತೃ ವರವಾಹಿನೀನಿಚಯ
ಜಲಧಿವಸನಚ್ಛತ್ರ ಉರ್ವೀ
ಲಲನೆಯರನೀಕ್ಷಿಸುವುದವನಿಪ
ತಿಲಕರುಪ್ಪವಡಿಸುವ ಸಮಯದೊಳರಸ ಕೇಳ್ ಎಂದ ॥108॥

೧೦೯ ಶ್ವಾನ ಕುಕ್ಕಟ ...{Loading}...

ಶ್ವಾನ ಕುಕ್ಕಟ ಕಾಕ ಬಕ ಪವ
ಮಾನ ಖಗಪತಿ ದಿವಿಜ ರಜನಿ ಕೃ
ಶಾನುವಿನ ಗಾರ್ದಭನ ವೃಷಭನ ಶಿಂಶುಮಾರಕನ
ವಾನರನ ಹಯ ಕುಂಜರನ ಪಂ
ಚಾನನನ ಮೃಗಪೋತಕನ ಗುಣ
ವಾ ನರೇಂದ್ರನೊಳಿರಲು ಬೇಹುದು ಭೂಪ ಕೇಳ್ ಎಂದ ॥109॥

೧೧೦ ಪರಿಪರಿಯ ದಾನಙ್ಗಳನು ...{Loading}...

ಪರಿಪರಿಯ ದಾನಂಗಳನು ಕರೆ
ಕರೆದು ಲೋಗರಿಗಿತ್ತು ಪರರನು
ಹೊರೆದು ತನ್ನಾಶ್ರಿತರನತಿಗಳೆದಾಪ್ತ ಬಾಂಧವರ
ಸರಕು ಮಾಡದೆ ಗರ್ವದಿಂದು
ಬ್ಬರಿಸುತಿಹ ಪಾತಕರ ಪದವಿಯ
ನರಸ ಬಣ್ಣಿಸಲಾರು ಬಲ್ಲರು ಯಮನ ನಗರಿಯಲಿ ॥110॥

೧೧೧ ಮೂರು ಕೋಟಿಯ ...{Loading}...

ಮೂರು ಕೋಟಿಯ ಕೋಟಿಧರ್ಮವ
ಮೀರದಿಹ ರೋಮಾಳಿ ಸಂಖ್ಯೆಯೊ
ಳಾರೆನೆನ್ನದೆ ನಿಜಪತಿಯ ಸಹಗಮನದಲಿ ತನುವ
ಮಾರಿದಬಲೆಯರುಗಳ ದೆಸೆಯಿಂ
ದಾರುಮಡಿ ಸ್ವರ್ಗಾದಿ ಭೋಗವ
ಸೂರೆಗೊಂಬುದು ತಪ್ಪದವನೀಪಾಲ ಕೇಳ್ ಎಂದ ॥111॥

೧೧೨ ಆವನೊಬ್ಬನು ಸತ್ಯಕೋಸುಗ ...{Loading}...

ಆವನೊಬ್ಬನು ಸತ್ಯಕೋಸುಗ
ಭಾವಶುದ್ಧಿಯಲೊರಡಿಚುವ ಶಪ
ಥಾವಸಾನದಲವನಧರ್ಮದಲರ್ಧವನು ಯಮನು
ಓವನನ್ಯಾಯದಲಿ ಸೂರುಳ
ನೋವಿ ರಚಿಸಿದವಂಗೆ ಗತಿಯಿ
ನ್ನಾವುದೆಂಬುದನಾರು ಬಲ್ಲರು ಭೂಪ ಕೇಳ್ ಎಂದ ॥112॥

೧೧೩ ಕೋಪವೆಮ್ಬುದನರ್ಥ ಸಾಧನ ...{Loading}...

ಕೋಪವೆಂಬುದನರ್ಥ ಸಾಧನ
ಕೋಪವೇ ಸಂಸಾರ ಬಂಧನ
ಕೋಪದಿಂದಿಹಪರದ ಸುಕೃತವು ಲಯವನೈದುವುದು
ಕೋಪವನು ವರ್ಜಿಸಲು ಬೇಹುದು
ಕೋಪವುಳ್ಳವನಾವನಾಗಲಿ
ಕಾಪುರುಷನಿಹಪರಕೆ ಚಿತ್ತೈಸೆಂದನಾ ವಿದುರ ॥113॥

೧೧೪ ವೈದ್ಯನಲಿ ಮಾಂಸದಲಿ ...{Loading}...

ವೈದ್ಯನಲಿ ಮಾಂಸದಲಿ ದ್ವಿಜನಲಿ
ನಿದ್ರೆಯಲಿ ತರುವಿನಲಿ ವನದಲಿ
ವಿದ್ಯೆಯಲಿ ಪದವಿಯಲಿ ಸಂಖ್ಯಾಸಂಖ್ಯವೆಸರುಗಳ
ತದ್ವಿಷಯಕೆ ಮಹಾ ಸಬುದವನು
ಹೊದ್ದಿಸುವುದತಿಕಷ್ಟವವರಿಗೆ
ಸದ್ಯಫಲವದು ತಪ್ಪದವನೀಪಾಲ ಕೇಳ್ ಎಂದ ॥114॥

೧೧೫ ಗರುವ ಮಾನ್ಯನುಮನಿತ ...{Loading}...

ಗರುವ ಮಾನ್ಯನುಮನಿತ ದೈವಾ
ಪರನು ಕಡುಸುಖಿ ಭೋಗಿ ರೂಪೋ
ತ್ಕರನು ಧನಿಕನು ರಾಜಪೂಜ್ಯನು ಕೀರ್ತಿವಲ್ಲಭನು
ಗುರುಜನಕೆ ಬಹು ವಿದ್ಯವುಳ್ಳವ
ನರಸ ಕೇಳೈ ವಿದ್ಯೆಯಿಲ್ಲದ
ನರನು ನರಪಶುವವನ ಜನ್ಮ ನಿರರ್ಥಕರವೆಂದ ॥115॥

೧೧೬ ವಿದ್ಯೆ ಸತ್ಕುಲ ...{Loading}...

ವಿದ್ಯೆ ಸತ್ಕುಲ ಬಹು ವಿವೇಕವು
ಬುದ್ಧಿ ಜಾಣ್ಮೆಯ ನುಡಿಯ ಸಡಗರ
ಶುದ್ಧಚಿತ್ತ ಸುಶೀಲ ಭುಜಬಲ ಭದ್ರನೆಂದೆನಿಸಿ
ಉದ್ಯೊಗವು ಮೊದಲಾದ ಗುಣಗಳಿ
ವಿದ್ದು ಫಲವೇನರಸ ಭಾಗ್ಯದ
ಬುದ್ಧಿ ಹೊದ್ದದ ನರಗೆ ದಾರಿದ್ರಾಂಗನವನೆಂದ ॥116॥

೧೧೭ ಧರೆಯೊಳಗೆ ಶುಚಿಯಹನು ...{Loading}...

ಧರೆಯೊಳಗೆ ಶುಚಿಯಹನು ವೈಶ್ವಾ
ನರನು ಕಾಂತಾದರ್ಶಿಯಹ ಕವಿ
ವರನು ಸುವ್ರತ ಕಾಮನೆನಿಸುವ ಬ್ರಾಹ್ಮಣೋತ್ತಮನು
ಹರಿಹರಾತ್ಮಕ ನಾಮಕೀರ್ತನ
ವೆರಸಿ ಬದುಕುವನೊಬ್ಬನೀ ನಾ
ಲ್ವರುಗಳಲ್ಲದೆ ಭುವನದೊಳಗನ್ಯತ್ರವಿಲ್ಲೆಂದ ॥117॥

೧೧೮ ಹರಿಭಕುತಿ ಲೋಲುಪನೆನಿಸಿ ...{Loading}...

ಹರಿಭಕುತಿ ಲೋಲುಪನೆನಿಸಿ ಶಂ
ಕರನ ಬದ್ಧದ್ವೇಷಿಯಹ ಶಂ
ಕರನ ಭಕ್ತಿಯೊಳಧಿಕವಾಗಿಯು ವೈಷ್ಣವರ ಮೇಲೆ
ಎರಕವಿಲ್ಲದ ಕರ್ಮ ಚಾಂಡಾ
ಲರುಗಳೆಪ್ಪತ್ತೈದು ಕೋಟಿಯ
ನರಕದೊಳಗೋಲಾಡುತಿಹರೆಲೆ ರಾಯ ಕೇಳ್ ಎಂದ ॥118॥

೧೧೯ ಯತಿ ಕೆಡುಗು ...{Loading}...

ಯತಿ ಕೆಡುಗು ದುಸ್ಸಂಗದಲಿ ಭೂ
ಪತಿ ಕೆಡುಗು ದುರ್ಮಂತ್ರಿಯಲಿ ವರ
ಸುತ ಕೆಡುಗು ಲಾಲನೆಗಳಲಿ ಕೃಷಿ ಕೆಡುಗುಪೇಕ್ಷÉಯಲಿ
ಮತಿ ಕೆಡುಗು ಮಧುಪಾನದಲಿ ಸ
ದ್ಗತಿ ಕೆಡುಗು ದುಶ್ಚರಿತದಲಿ ನಿಜ
ಸತಿ ಕೆಡುಗು ದುವ್ರ್ಯಸನದಲಿ ಭೂಪಾಲ ಕೇಳ್ ಎಂದ ॥119॥

೧೨೦ ಉಣ್ಡು ತೀರಿಸಬೇಕು ...{Loading}...

ಉಂಡು ತೀರಿಸಬೇಕು ತಾ ಮುಂ
ಕೊಂಡು ಮಾಡಿದ ಪುಣ್ಯ ಪಾಪದ
ತಂಡವನು ತರಹರಣವಿಲ್ಲದೆ ಭವ ಭವಂಗಳಲಿ
ಹಿಂಡಿ ಹಿಳಿವುದು ಬೆಂಬಿಡದೆ ಸಮ
ದಂಡಿಯಲಿ ಹಗೆ ಕೆಳೆಗಳೆನ್ನದೆ
ಗಂಡುಗೆಡಿಸದೆ ಬಿಡುವುದೇ ವಿಧಿಯೆಂದನಾ ವಿದುರ ॥120॥

೧೨೧ ಸ್ನೇಹಪೂರ್ವಕದಿನ್ದ ಮನದೊಳು ...{Loading}...

ಸ್ನೇಹಪೂರ್ವಕದಿಂದ ಮನದೊಳು
ಗಾಹಿಸಲು ಲಕ್ಷಿ ್ಮೀಶನವರಿಗೆ
ಬೇಹ ಪುರುಷಾರ್ಥಂಗಳಹವೆಲ್ಲಿದ್ದರಲ್ಲಲ್ಲಿ
ಈ ಹದನು ತಪ್ಪುವುದೆ ಕೂರ್ಮನ
ಮೋಹದಲಿ ತತ್ಸಂತತಿಗೆ ನಿ
ರ್ವಾಹವಹವೋಲರಸ ಚಿತ್ತೈಸೆಂದನಾ ವಿದುರ ॥121॥

೧೨೨ ಕೂಡಿದೆಡೆಯಲಕೃತ್ಯ ಶತವನು ...{Loading}...

ಕೂಡಿದೆಡೆಯಲಕೃತ್ಯ ಶತವನು
ಜೋಡಿಸಿದವರು ಮಿತ್ರರುಗಳಿಗೆ
ಕೇಡ ಚಿಂತಿಸಿದವರುಗಳು ಪುರುಷಾರ್ಥವನು ತಮಗೆ
ಮಾಡಿದವರುಗಳಿಗೆ ವಿಘಾತಿಯ
ಹೂಡಿದವದಿರು ನರಕದೊಳಗೋ
ಲಾಡದಿಹರೇ ರಾಯ ಚಿತ್ತೈಸೆಂದನಾ ವಿದುರ ॥122॥

೧೨೩ ಕುಲಜನಾಗಲಕುಲಜನಾಗಲಿ ...{Loading}...

ಕುಲಜನಾಗಲಕುಲಜನಾಗಲಿ
ಜಲರುಹಾಕ್ಷನ ನಾಮ ಕೀರ್ತನ
ದೊಳಗೆ ಬದುಕುವನಾವನಾತನೆ ಸುಕೃತಿಯೆಂಬವನು
ಉಳಿದ ಜಪ ತಪ ನಿಯಮ ಹೋಮಂ
ಗಳಲಿ ಸಂಸಾರಾರ್ಣವವನು
ಚ್ಚಳಿಸಬಹುದೇ ರಾಯ ಚಿತ್ತೈಸೆಂದನಾ ವಿದುರ ॥123॥

೧೨೪ ಜಾತರೂಪದಲೇಸು ಹೊಲ್ಲೆಹ ...{Loading}...

ಜಾತರೂಪದಲೇಸು ಹೊಲ್ಲೆಹ
ವೀತಿಹೋತ್ರನ ದೇಹಕಾರಣ
ಭೂತವಾಗಿಹುದವಗೆ ಸದಸತ್ತುಗಳ ಭೇದವನು
ನೀತಿ ಮುಖದಿಂದರಿವುದುತ್ತಮ
ನೀತ ಮಧ್ಯಮನೀತ ಕನಿಯಸ
ನೀತವೆಂಬುದನರಸ ಚಿತ್ತೈಸೆಂದನಾ ವಿದುರ ॥124॥

೧೨೫ ಅವನಿಯಲಿ ಜನಜನಿತ ...{Loading}...

ಅವನಿಯಲಿ ಜನಜನಿತ ಧನ ಧಾ
ನ್ಯವನು ಕಳಹಲಗೈದು ಸಂತೋ
ಷವನು ಮಾಡುವ ಕಡೆಯಲೊಂದಕೆ ನೂರು ಮಡಿಯಾಗಿ
ಲವಲವಿಕೆ ಮಿಗಲಿತ್ತು ಸಪ್ತಾಂ
ಗವನು ಸಲಹುತ್ತಿರಲುಬೇಹುದು
ರವಿಯವೊಲು ಸಾವಿರ ಮುಖದೊಳವನೀಶ ಕೇಳ್ ಎಂದ ॥125॥

೧೨೬ ಇನನುದಯಿಸಲಿ ...{Loading}...

ಇನನುದಯಿಸಲಿ ಪಶ್ಚಿಮಾದ್ರಿಯೊ
ಳನಲನೊಮ್ಮೆ ಹಿಮಾಂಶುವಾಗಲಿ
ಕನಕಗಿರಿಗಲ್ಲಾಟವಾಗಲಿ ಪರ್ವತಾಗ್ರದಲಿ
ವನಜ ವಿಕಸಿತವಾದೊಡೆಯು ಸ
ಜ್ಜನರುಗಳು ನುಡಿದೆರಡನಾಡರು
ಮನವಚನ ಕಾಯದಲಿ ಚಿತ್ತೈಸೆಂದನಾ ವಿದುರ ॥126॥

೧೨೭ ಹರನ ಕೊರಳಿಙ್ಗಾಭರಣವಾ ...{Loading}...

ಹರನ ಕೊರಳಿಂಗಾಭರಣವಾ
ದುರಗ ಪವನಾಶನವೆನಿಸುವಂ
ತರಸ ನಿನ್ನಯ ಬಸುರ ಬಂದೇನಹರು ಪಾಂಡವರು
ನರಪಶುಗಳಾದರು ಕಣಾ ನೀ
ನಿರಲು ವನವಾಸದಲಿ ಸೊಪ್ಪನ
ವರತ ಮೆಲುವುದೆ ರಾಯ ಚಿತ್ತೈಸೆಂದನಾ ವಿದುರ ॥127॥

೧೨೮ ದೇವತಾಸ್ಥಾನದಲಿ ವಿಪ್ರ ...{Loading}...

ದೇವತಾಸ್ಥಾನದಲಿ ವಿಪ್ರ ಸ
ಭಾವಳಯದಲಿ ರಾಜಪುರುಷರ
ಸೇವೆಯಲಿ ರವಿ ಶಶಿಗಳುದಯಾಸ್ತಮಯ ಕಾಲದಲಿ
ಗೋವುಗಳ ನೆರವಿಯಲಿ ವರ ವೃಂ
ದಾವನದೊಳುಪಹತಿಯ ಮಾಡುವು
ದಾವ ಗುಣ ಗರುವರಿಗೆ ಚಿತ್ತೈಸೆಂದನಾ ವಿದುರ ॥128॥

೧೨೯ ನಾಯ ನಡುಬೋನವನು ...{Loading}...

ನಾಯ ನಡುಬೋನವನು ನೆಚ್ಚಿ ವೃ
ಥಾಯ ಕೆಡಬೇಡಾ ಯುಧಿಷ್ಠಿರ
ರಾಯನನು ಕರೆಸುವುದು ಭೀಷ್ಮಾದಿಗಳ ಮುಂದಿಟ್ಟು
ನ್ಯಾಯಮುಖದಲಿ ಸಕಲ ರಾಜ್ಯ
ಶ್ರೀಯನರ್ಧವನಿತ್ತು ಬದುಕುವು
ದಾಯತಿಕೆಯೊಳಗಹುದು ಚಿತ್ತೈಸೆಂದನಾ ವಿದುರ ॥129॥

೧೩೦ ಚಕ್ರವರ್ತಿಗಳಾರಲೇ ಭೂ ...{Loading}...

ಚಕ್ರವರ್ತಿಗಳಾರಲೇ ಭೂ
ಚಕ್ರದೊಳಗವರಿಗೆ ಮುರಾರಿಯ
ಚಕ್ರವೇ ಬೆಸಗೆಯ್ವುದಲ್ಲದೆ ಪಾಂಡು ತನಯರಿಗೆ
ಚಕ್ರಿ ತಾ ಬಂದವರ ಸೇವಾ
ಚಕ್ರದೊಳಗಿಹನಾ ಯುಧಿಷ್ಠಿರ
ಚಕ್ರವರ್ತಿಗದಾವನೈ ಸರಿಯೆಂದನಾ ವಿದುರ ॥130॥

೧೩೧ ನಳನೃಪತಿ ದಮಯನ್ತಿ ...{Loading}...

ನಳನೃಪತಿ ದಮಯಂತಿ ಸೀತಾ
ಲಲನೆ ರಾಘವದೇವ ದ್ರೌಪದಿ
ಕಲಿಯುಧಿಷ್ಠಿರದೇವನಿವರಿಂತಾರು ಮಾನಿಸರು
ಇಳೆಯೊಳುತ್ತಮ ಕೀರ್ತಿಗಳು ಜಾ
ವಳದ ಪುರುಷರೆ ಧರ್ಮಪುತ್ರನ
ಗೆಲುವ ಪರಿಯೆಂತೈ ಮಹಾದೇವೆಂದನಾ ವಿದುರ ॥131॥

೧೩೨ ಜನಪ ಕೇಳೈ ...{Loading}...

ಜನಪ ಕೇಳೈ ಸ್ಕಂದನನು ರಾ
ಮನನು ಹನುಮನ ಭೀಮಸೇನನ
ವಿನತೆಯಾತ್ಮಜನಿಂತಿದೈವರ ಭಾವಶುದ್ಧಿಯಲಿ
ನೆನೆದವರ ದುರಿತಂಗಳೋಡುವ
ವೆನಲು ನೀವೀ ಪವನಪುತ್ರನ
ನನುವರದೊಳೆಂತಕಟ ಜಯಿಸುವಿರೆಂದನಾ ವಿದುರ ॥132॥

೧೩೩ ಹರಿಹಯನು ಗುಹ ...{Loading}...

ಹರಿಹಯನು ಗುಹ ರಾಮ ಬಾಣಾ
ಸುರನು ದಶಶಿರ ಭೀಮಸೇನಾ
ದ್ಯರು ಕಣಾ ಗಿರಿಜಾಧಿನಾಥನ ಡಿಂಗರಿಗರಿವರು
ಸರಸವೇ ಮೃತ್ಯುಂಜಯನ ಕೂ
ಡರಸ ನಿನ್ನಳವನರಿಯ ಮರುಳ
ಹರೆ ಪವನಜನೊಡನೆ ಸಮಗೈಯೆ ನೀನೆಂದ ॥ 133 ॥

೧೩೪ ಬಲಿ ವಿಭೀಷಣ ...{Loading}...

ಬಲಿ ವಿಭೀಷಣ ಭೀಷ್ಮ ನಾರದ
ಫಲುಗುಣನು ಪ್ರಹ್ಲಾದದೇವನು
ಜಲರುಹಾಕ್ಷನ ನಚ್ಚು ಮೆಚ್ಚಿನ ಭಕುತರಿವರುಗಳು
ಸುಲಭವೇ ನಿನಗವರ ಕೂಡಣ
ಕಲಹ ಬೀಭತ್ಸುವಿನ ಕೈ ಮನ
ದಳವನರಿಯಾ ಕಂಡು ಕಾಣುತ ಮರುಳಹರೆಯೆಂದ ॥134॥

೧೩೫ ಎಲ್ಲಿ ಯೋಗಾಧಿಪತಿ ...{Loading}...

ಎಲ್ಲಿ ಯೋಗಾಧಿಪತಿ ಮುರಹರ
ನೆಲ್ಲಿಯರ್ಜುನದೇವನಿಹನ
ಲ್ಲಲ್ಲಿ ಜಯಸಿರಿಯಲ್ಲದೇ ಬೇರಿಲ್ಲ ಕೇಳಿದನು
ಬಲ್ಲವರು ಬಲ್ಲರು ಕಣಾ ನೀ
ನಿಲ್ಲಿ ಪಾಂಡು ಕುಮಾರರಿಗೆ ಸರಿ
ಯಿಲ್ಲ ಬಲ್ಲೆ ೈ ಹಿಂದೆ ಬಂದ ವಿಪತ್ಪರಂಪರೆಯ ॥135॥

೧೩೬ ಹಿನ್ದೆ ಗೋಗ್ರಹಣದಲಿ ...{Loading}...

ಹಿಂದೆ ಗೋಗ್ರಹಣದಲಿ ದ್ರುಪದನ
ನಂದನೆಯ ವೈವಾಹದಲಿ ಬಳಿ
ಸಂದ ಗಂಧರ್ವಕನ ದೆಸೆಯಲಿ ಘೋಷಯಾತ್ರೆಯಲಿ
ಬಂದ ಭಂಗವ ಕಂಡು ಕಂಡೇ
ನೆಂದು ಪಾಂಡು ಕುಮಾರರೊಡನನು
ಸಂಧಿಸುವೆ ಕಲಹವನು ಚಿತ್ತೈಸೆಂದನಾ ವಿದುರ ॥136॥

೧೩೭ ಸಕಲ ನೀತಿ ...{Loading}...

ಸಕಲ ನೀತಿ ರಹಸ್ಯವನು ಸು
ವ್ಯಕುತವೆನಲರುಹಿದೆನು ತತ್ವಕೆ
ಯುಕುತಿಯಾದರೆ ನೆನೆವುದಿನ್ನು ಸನತ್ಸುಜಾತನನು
ಮುಕುತಿಗಮಳಬ್ರಹ್ಮವಿದ್ಯಾ
ಪ್ರಕಟವನು ನೆರೆ ಮಾಡಿ ಚಿತ್ತದ
ವಿಕಳತೆಯನೊಡೆಮೆಟ್ಟಿ ಸಲಹುವನೆಂದು ಬೋಧಿಸಿದ ॥137॥

+೦೩ ...{Loading}...