೦೪

೦೦೦ ಸೂ ಮುನಿವರನ ...{Loading}...

ಸೂ. ಮುನಿವರನ ಕರುಣದಲಿ ಕೌರವ
ಜನಪನಮಳಬ್ರಹ್ಮ ವಿದ್ಯೆಯ
ನನುಕರಿಸಿ ಚರಿತಾರ್ಥಭಾವದಲಿರುಳ ನೂಕಿದನು

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ವಿದುರನ ಬೋಧೆಗಂಧನೃ
ಪಾಲನಂತಃಕರಣಶುದ್ಧಿಯನೆಯ್ದಿದನು ಬಳಿಕ
ಹೇಳು ಹೇಳಿನ್ನಾತ್ಮವಿದ್ಯೆಯ
ಮೂಲಮಂತ್ರಾಕ್ಷರದ ಬೀಜವ
ನಾಲಿಸುವೆನೆನೆ ನಗುತ ಕೈಮುಗಿದೆಂದನಾ ವಿದುರ ॥1॥

೦೦೨ ಅವಧರಿಸು ಪರತತ್ವ ...{Loading}...

ಅವಧರಿಸು ಪರತತ್ವ ವಿದ್ಯಾ
ವಿವರ ಭೇದವನನ್ಯ ಜಾತಿಗ
ಳೆವಗೆ ಸಲುವುದೆ ಮುನಿವರನ ಕರುಣೋದಯದಲಹುದು
ಅವರಿವರುಗಳ ಮುಖದಲಿದು ಸಂ
ಭವಿಸುವುದೆ ಬ್ರಹ್ಮೋಪದೇಶದ
ಹವಣ ಬಲ್ಲವನಾವನೈ ಧೃತರಾಷ್ಟ್ರ ಕೇಳ್ ಎಂದ ॥2॥

೦೦೩ ಒಬ್ಬನೇ ಬಲ್ಲವನು ...{Loading}...

ಒಬ್ಬನೇ ಬಲ್ಲವನು ಲೋಕದೊ
ಳಿಬ್ಬರಿಲ್ಲ ಸನತ್ಸುಜಾತನು
ಸರ್ವಗುಣಸಂಪೂರ್ಣನಾತನ ಭಜಿಸಿದೊಡೆ ನೀನು
ಸಭ್ಯನಹೆಯೆನಲಾ ಮುನಿಯ ಕ
ರ್ತವ್ಯಭಾವದೊಳರಸನಿರಲಾ
ವಿರ್ಭವಿಸಿದನು ವಿಪ್ರಕುಲಕಮಲಾರ್ಕನಾ ಕ್ಷಣಕೆ ॥3॥

೦೦೪ ನೆನೆಯಲೊಡನೆ ಸನತ್ಸುಜಾತನು ...{Loading}...

ನೆನೆಯಲೊಡನೆ ಸನತ್ಸುಜಾತನು
ಮನೆಗೆ ಬರಲಿದಿರೆದ್ದು ಕೌರವ
ಜನಕ ಮೈಯಿಕ್ಕಿದನೆನಗೆ ಬ್ರಹ್ಮೋಪದೇಶವನು
ಮುನಿಪ ನೀ ಕೃಪೆಮಾಡಬೇಕೆನ
ಲನುನಯದೊಳವನೀಪತಿಗೆ ಜನ
ಜನಿತವಹುದೆನಲರುಹಿದನು ಪರಲೋಕಸಾಧನವ ॥4॥

೦೦೫ ಚಿತ್ತವಿಸು ಧೃತರಾಷ್ಟ್ರನೃಪ ...{Loading}...

ಚಿತ್ತವಿಸು ಧೃತರಾಷ್ಟ್ರನೃಪ ಪರ
ತತ್ವ ವಿದ್ಯಾ ವಿಷಯ ಭೇದವ
ಬಿತ್ತರಿಸುವೆನು ಸಕಲ ಸಚರಾಚರದೊಳಗೆ ನೀನು
ಉತ್ತಮಾಧಮವೆನ್ನದೇ ಕಾ
ಣುತ್ತ ಹರುಷ ವಿಷಾದದಲಿ ಮುಳು
ಗುತ್ತಿರದೆ ಸಮರಸದೊಳಿಹುದುಪದೇಶ ನಿನಗೆಂದ ॥5॥

೦೦೬ ಅವನಿಪತಿ ಕೇಳಾತ್ಮನಿಂ ...{Loading}...

ಅವನಿಪತಿ ಕೇಳಾತ್ಮನಿಂ ಸಂ
ಭವಿಸಿತಂಬರವಂಬರದಲಾ
ಪವನ ಪವನನಲಗ್ನಿಯಗ್ನಿಯಲಾದುದಾ ಭುವನ
ಭುವನದಿಂ ಧರೆ ಧರಣಿಯಿಂದು
ದ್ಭವಿಸಿತೋಷಧಿಯೋಷಧಿಗಳಿಂ
ದವತರಿಸಿತಾನಾದಿ ಪುರುಷ ಪ್ರಕೃತಿ ವಿಕೃತಿಗಳು ॥6॥

೦೦೭ ನೇತ್ರ ನಾಸಿಕ ...{Loading}...

ನೇತ್ರ ನಾಸಿಕ ಪಾದ ಪಾಣಿ
ಶೋತ್ರವೆಂಬಿವು ತಮ್ಮೊಳೊಂದೇ
ಸೂತ್ರದಲಿ ಸಂಸೃಷ್ಟವಾಗಿ ಸಮಾನಬುದ್ಧಿಯಲಿ
ಗಾತ್ರವಿಡಿದಿಹವೋಲು ವಿಶ್ವದ
ಮೈತ್ರಿಯಲಿ ಮನಸಂದು ಪಾತ್ರಾ
ಪಾತ್ರವೆನ್ನದೆ ಬೆರಸಿ ಬದುಕುವುದಧಿಕಗುಣವೆಂದ ॥7॥

೦೦೮ ಸೃಷ್ಟಿ ಸಂಹಾರದಲಿ ...{Loading}...

ಸೃಷ್ಟಿ ಸಂಹಾರದಲಿ ಭೂತದ
ಕಟ್ಟಳೆಗಳ ಗತಾಗತಿಗಳಲಿ
ಮುಟ್ಟಿಸಿದ ವಿದ್ಯೆಯಲವಿದ್ಯೆಯಲಪ್ರತಿಮನೆನಿಸಿ
ನಷ್ಟಿಯಲಿ ತುಷ್ಟಿಯಲಿ ಮನವನು
ಬಿಟ್ಟು ಹಿಡಿಯದೆ ಕಾಲಕರ್ಮವ
ಮೆಟ್ಟಿ ನಿಲೆ ಭಗವಂತನೆನಿಸುವೆ ರಾಯ ಕೇಳ್ ಎಂದ ॥8॥

೦೦೯ ಅಣುವಿನಲಿ ಲಘುವಿನಲಿ ...{Loading}...

ಅಣುವಿನಲಿ ಲಘುವಿನಲಿ ಗುರುವಿನ
ಯೆಣಿಕೆಯಲಿ ಮಹಿಮೆಯಲಿ ಪ್ರಾಪ್ತಿಯ
ಭಣಿತೆಯಲಿ ಶೀಲತ್ವದಲಿ ಪ್ರಕಟಿತದ ಪರಿವಿಡಿಯ
ಕುಣಿಕೆಗಳಲಿ ವಶಿತ್ವದಲಿ ವೆಂ
ಟಣಿಸಿ ರೇಚಕ ಪೂರಕದ ರಿಂ
ಗಣವನರಿವುದು ಯೋಗ ಸಿದ್ಧಿಗೆ ಲಕ್ಷಣವಿದೆಂದ ॥9॥

೦೧೦ ತ್ಯಜಿಸುವುದು ದುಸ್ಸಙ್ಗವನು ...{Loading}...

ತ್ಯಜಿಸುವುದು ದುಸ್ಸಂಗವನು ನೀ
ಸೃಜಿಸುವುದು ಸತ್ಸಂಗವನು ಗಜ
ಬಜಿಸದಿರಹೋ ರಾತ್ರಿಯಲಿ ಧರ್ಮವನೆ ಸಂಗ್ರಹಿಸು
ಭಜಿಸು ನಿತ್ಯಾನಿತ್ಯವಸ್ತುವ
ವಿಜಯನಹೆ ಇಹಪರಕೆ ತತ್ವದ
ನಿಜವಿದೆಲೆ ಧೃತರಾಷ್ಟ್ರ ಚಿತ್ತೈಸೆಂದನಾ ಮುನಿಪ ॥10॥

೦೧೧ ಕಾಯವಿದು ನೆಲೆಯಲ್ಲ ...{Loading}...

ಕಾಯವಿದು ನೆಲೆಯಲ್ಲ ಸಿರಿ ತಾ
ಮಾಯರೂಪಿನ ಮೃತ್ಯುದೇವತೆ
ಬಾಯ ಬಿಡುತಿಹಳಾವುದೀತನ ಕಾಲಗತಿಯೆಂದು
ದಾಯವರಿದು ಮಹಾತ್ಮರಿದಕೆ ಸ
ಹಾಯ ಧರ್ಮವ ರಚಿಸುವುದು ನಿ
ರ್ದಾಯದಲಿ ಕೈಸೂರೆಗೊಂಬುದು ಮುಕುತಿ ರಾಜ್ಯವನು ॥11॥

೦೧೨ ಕೆಟ್ಟ ...{Loading}...

ಕೆಟ್ಟ ಮಾರ್ಗದಲಿಂದ್ರಿಯಂಗಳ
ಚಿಟ್ಟು ಮುರಿಯಾಟದಲಿ ಮನ ಸಂ
ದಷ್ಟವಾಗಿಯನಿತ್ಯಸಂಸಾರದ ಸುಖಕ್ಕೆಳಸಿ
ಹುಟ್ಟು ಸಾವಿನ ವಿಲಗದಲಿ ಕಂ
ಗೆಟ್ಟು ನಾನಾ ಯೋನಿಯಲಿ ತಟ
ಗುಟ್ಟಿ ಬಳಲುವುದುಚಿತವೇ ಭೂಪಾಲ ಕೇಳ್ ಎಂದ ॥12॥

೦೧೩ ಹಲವು ವರ್ಣದೊಳೆಸೆವ ...{Loading}...

ಹಲವು ವರ್ಣದೊಳೆಸೆವ ಗೋಸಂ
ಕುಲದೊಳೊಂದೇ ವರ್ಣದಲಿ ಕಂ
ಗೊಳಿಸುವೀ ಕ್ಷೀರಾಮೃತವು ಮೈಗೊಂಡು ತೋರ್ಪಂತೆ
ಹೊಲಬುಗೆಟ್ಟ ಚರಾಚರಂಗಳ
ಸುಳಿವಿನಲಿ ಸುಳಿದಡಗಿ ಕಡೆಯಲಿ
ನಿಲುವ ನಿಜವೊಂದಲ್ಲದೆರಡಿಲ್ಲೆಂದನಾ ಮುನಿಪ ॥13॥

೦೧೪ ಅತಿಶಯದ ಸುಕೃತವನು ...{Loading}...

ಅತಿಶಯದ ಸುಕೃತವನು ವಿರಚಿಸಿ
ಗತಿವಡೆದು ಸ್ವರ್ಗಾದಿ ಭೋಗೋ
ನ್ನತಿಕೆಯನು ಭೋಗಿಸಿದ ಸಮನಂತರದೊಳವನಿಯಲಿ
ಪತನ ತಪ್ಪದು ಮರಳಿ ಬಾರದ
ಗತಿಯನರಿದು ಮಹಾನುಭಾವರ
ಮತವಿಡಿದು ನಡೆವುದು ನಯವು ಕೇಳ್ ಎಂದನಾ ಮುನಿಪ ॥14॥

೦೧೫ ಸಕಲ ಧರ್ಮದ ...{Loading}...

ಸಕಲ ಧರ್ಮದ ಸಾರವನು ಮತಿ
ವಿಕಳನಾಗದೆ ಚಿತ್ತವಿಸು ಬಾ
ಧಕವದಾವುದು ನಿನಗದನು ನೀನನ್ಯರುಗಳಲ್ಲಿ
ಯುಕುತಿಯಿಂದದ ಮಾಡದಿರು ನಿ
ರ್ಮುಕುತನಹೆ ಸಂಸಾರದಲಿ ಸಾ
ಧಕವಿದೊಂದೇ ಸಕಲ ಜನಮತವೆಂದನಾ ಮುನಿಪ ॥15॥

೦೧೬ ಒನ್ದು ವಸ್ತುವನೆರಡು ...{Loading}...

ಒಂದು ವಸ್ತುವನೆರಡು ಮಾಡುವೆ
ನೆಂದು ಬುದ್ಧಿಭ್ರಾಂತಿಯಲಿ ಮನ
ಸಂದು ಸಮ್ಯಗ್ಜ್ಞಾನದುದಯದ ನೆಲೆಯ ಕಾಣಿಸದೆ
ದಂದುಗಂಬಡುತಿಹುದು ತತ್ವದ
ಹಿಂದು ಮುಂದರಿಯದೆ ಮಹಾತ್ಮರು
ಬಂದ ಪಥದಲಿ ಬಾರದೇ ಕೆಡುತಿಹುದು ಜಗವೆಂದ ॥16॥

೦೧೭ ಪ್ರಣವದೊನ್ದಾ ವರ್ಣಮೂರರ ...{Loading}...

ಪ್ರಣವದೊಂದಾ ವರ್ಣಮೂರರ
ಗುಣವಿಡಿದು ತೋರುವ ಚರಾಚರ
ವೆಣಿಸಬಾರದು ವಿಶ್ವದಲಿ ನಿಸ್ಯೂತವಾಗಿಹುದು
ಹಣಿದು ಬೀಳಲು ಹೊಳೆವ ಜ್ಯೋತಿ
ರ್ಗಣದವೊಲು ತೊಳತೊಳಗಿ ಬೆಳಗುವ
ಗುಣರಹಿತನ ನಿಜಸ್ವರೂಪವಿದೆಂದನಾ ಮುನಿಪ ॥17॥

೦೧೮ ನಳಿನಮಿತ್ರನು ...{Loading}...

ನಳಿನಮಿತ್ರನು ಪಶ್ಚಿಮಾಂಬುಧಿ
ಗಿಳಿಯೆ ನಾನಾ ಪಕ್ಷಿಜಾತಿಗ
ಳುಲಿವುತೈತಂದೊಂದು ವೃಕ್ಷವನೇರಿ ರಾತ್ರಿಯನು
ಕಳೆದು ನಾನಾ ದೆಸೆಗೆ ಹರಿವವೊ
ಲಿಳೆಯ ಭೋಗದ ದೃಷ್ಟಿ ತೀರಿದ
ಬಳಿಕ ಲೋಕಾಂತರವನೆಯ್ದುವರೆಂದನಾ ಮುನಿಪ ॥18॥

೦೧೯ ಪೊಡವಿಯೊಳಗುದಯಿಸಿದ ...{Loading}...

ಪೊಡವಿಯೊಳಗುದಯಿಸಿದ ದುಷ್ಕೃತ
ಬಿಡದು ಭೂಪರನದು ಪುರೋಹಿತ
ರೆಡೆಗೆ ಬಳಿಕಾ ಮೂರ್ಖ ಶಿಷ್ಯನ ದೋಷ ಗುರುವಿನದು
ಮಡದಿ ಮಾಡಿದ ಪಾತಕವು ಪತಿ
ಗೊಡಲಹುದು ಪರಮಾರ್ಥವಿದು ಪರಿ
ವಿಡಿಯನರಿಯದೆ ಕೆಡುವುದೀ ಜಗವೆಂದನಾ ಮುನಿಪ ॥19॥

೦೨೦ ದುರ್ಜನರಿಗಞ್ಜುವುದು ಲೋಕವು ...{Loading}...

ದುರ್ಜನರಿಗಂಜುವುದು ಲೋಕವು
ಸಜ್ಜನರ ಲೆಕ್ಕಿಸದು ತಾಕ್ಷ್ರ್ಯನ
ಸೆಜ್ಜೆಯೊಳಗಿಹ ದಂದಶೂಕನನರ್ಚಿಸುವರೊಲಿದು
ಉಜ್ಜ ್ವಲಿತ ಭಕ್ತಿಯಲಿ ಬಹಳ ವಿ
ತರ್ಜೆಯಲಿ ಮೂಢಾತ್ಮರಿಕ್ಕಿದ
ಹಜ್ಜೆಯಿದು ಲೋಕಕ್ಕೆ ಕೇಳ್ ನೀನೆಂದನಾ ಮುನಿಪ ॥20॥

೦೨೧ ತಳಪಟದೊಳಾಯುಷ್ಯ ರಾಶಿಯ ...{Loading}...

ತಳಪಟದೊಳಾಯುಷ್ಯ ರಾಶಿಯ
ನಳೆವ ಕೊಳಗವು ಸೂರ್ಯನೆಂಬುದ
ತಿಳಿದಹೋ ರಾತ್ರಿಯಲಿ ಸಂಖ್ಯೆಯ ಸಲುಗೆಯಂಕಿಸದೆ
ಬಳಸುವುದು ಸನ್ಮಾರ್ಗದಲಿ ಮುಂ
ಕೊಳಿಸುವುದು ಸದ್ಧರ್ಮದಲಿ ಕಳ
ವಳಿಸದಿರು ಷಡುವರ್ಗದಲಿ ಕೇಳ್ ಎಂದನಾ ಮುನಿಪ |\21॥

೦೨೨ ನಷ್ಟಿಯಿದು ಸಂಸಾರದೊಳಗು ...{Loading}...

ನಷ್ಟಿಯಿದು ಸಂಸಾರದೊಳಗು
ತ್ಕೃಷ್ಟವಿದು ಮನ್ವಾದಿ ಮಾರ್ಗದ
ದೃಷ್ಟವಿದು ಲೋಕಾಂತರದ ಸುಖ ದುಃಖದೇಳಿಗೆಯ
ಹುಟ್ಟುಮೆಟ್ಟಿನ ಕಾಲಕರ್ಮದ
ಕಟ್ಟಳೆಯಿದೆಂದರಿದು ನಡೆವಂ
ಗಿಟ್ಟಣಿಸುವುದದಾವುದೈ ಹೇಳೆಂದನಾ ಮುನಿಪ ॥22॥

೦೨೩ ಶಿಲೆಯ ರೂಹನು ...{Loading}...

ಶಿಲೆಯ ರೂಹನು ಮೂಢರುಗಳ
ಗ್ಗಳೆಯ ಪಾವಕನನು ಮಹೀಸುರ
ರಿಳೆಯೊಳಗೆ ಪರಮಾತ್ಮನೇ ಪರದೈವ ತಾನೆಂದು
ಒಲಿದು ಪೂಜಿಸುತಿಹರು ಹೃದಯಾಂ
ಗಳದೊಳಗೆ ವರಯೋಗಿಗಳು ಕೈ
ವಳಸುವುದು ಜನವೀ ಪ್ರಕಾರದೊಳರಸ ಕೇಳ್ ಎಂದ ॥23॥

೦೨೪ ಜ್ಞಾನಿಗಳನೊಡಬಡಿಸಬಹುದ ...{Loading}...

ಜ್ಞಾನಿಗಳನೊಡಬಡಿಸಬಹುದ
ಜ್ಞಾನಿಗಳನಹುದೆನಿಸಬಹುದು
ಜ್ಞಾನಲವವನು ಕೂಡಿಕೊಂಡಿಹ ದುರ್ವಿದಗ್ಧರನು
ಏನ ತಿಳುಹಲುಬಹುದು ವಿಷ್ವ
ಕ್ಸೇನಗಳವಲ್ಲರಸ ಮಿಕ್ಕಿನ
ಮಾನವರ ಪಾಡಾವುದೆಂದನು ಮುನಿ ನೃಪಾಲಂಗೆ ॥24॥

೦೨೫ ದಾನವೊನ್ದಾ ಪಾಲನೆಯ ...{Loading}...

ದಾನವೊಂದಾ ಪಾಲನೆಯ ಫಲ
ದಾನವೊಂದೇ ಉಭಯವಿದರೊಳು
ದಾನದಿಂದಹುದಿಹಪರಂಗಳ ಸೌಖ್ಯ ಸಂಪದವು
ದಾನವೇ ಸಂಸಾರ ಸಾಧನ
ದಾನದಿಂ ಪಾಲನೆಯ ಫಲಕಿ
ನ್ನೇನನೆಂಬೆನು ಕಡೆಯೊಳಚ್ಯುತ ಪದವಿ ಫಲವೆಂದ ॥25॥

೦೨೬ ಅರಸನೊಡೆಯನು ದಣ್ಡನಾಥನು ...{Loading}...

ಅರಸನೊಡೆಯನು ದಂಡನಾಥನು
ಗುರು ಹಿರಿಯನುತ್ತಮನು ದೈವಾ
ಪರನು ಸಾಹಿತ್ಯನು ಸದಸ್ಯನು ಸತ್ಪುರುಷನೆಂದು
ಪರಿಪರಿಯ ನಾಮಂಗಳಲಹಂ
ಕರಿಸುವರು ಜೀವಾತ್ಮ ತೊಲಗಿದ
ಮರುದಿವಸ ಹೆಣನೆನ್ನರೇ ಹೇಳೆಂದನಾ ಮುನಿಪ ॥26॥

೦೨೭ ವರುಷ ಮೂರೊಳು ...{Loading}...

ವರುಷ ಮೂರೊಳು ಮಾಸ ಮೂರರೊ
ಳಿರದೆ ಪಕ್ಷತ್ರಯದೊಳಗೆ ಬಂ
ದರುಹುವುದು ದಿನ ಮೂರರಲಿ ಸಂದೇಹ ಬೇಡಿದಕೆ
ಧರೆಯೊಳುತ್ಕಟ ಪುಣ್ಯ ಪಾಪೋ
ತ್ಕರದ ಫಲವಿದು ತಪ್ಪಬಾರದು
ಮರಳುವುದು ಪರಲೋಕದೆಸೆಗವನೀಶ ಕೇಳ್ ಎಂದ ॥27॥

೦೨೮ ಒನ್ದು ಭೂಪಿಣ್ಡದಲಿ ...{Loading}...

ಒಂದು ಭೂಪಿಂಡದಲಿ ನಾನಾ
ಚಂದದಿಂ ಪ್ರಾಣಿಗಳು ಜನಿಸುವು
ವೊಂದು ಜ್ಯೋತಿಸ್ಸಿನಲಿ ನಾನಾ ಜ್ಯೋತಿಯುದಿಸುವುವು
ಒಂದು ಪರವಸ್ತುವಿನ ಬಳಿಯಲಿ
ಬಂದುದಬುಜಭವಾಂಡ ಕೋಟಿಗ
ಳೆಂದÉೂಡವು ಬೇರಿಲ್ಲ ಸರ್ವವು ವಿಷ್ಣುಮಯವೆಂದ ॥28॥

೦೨೯ ತಾನಿದಿರು ಹಗೆ ...{Loading}...

ತಾನಿದಿರು ಹಗೆ ಕೆಳೆ ವಿವೇಕ
ಜ್ಞಾನವಜ್ಞಾನಂಗಳಿಹಪರ
ಹಾನಿ ವೃದ್ಧಿಯ ಮಾರ್ಗದಲಿ ತಾನೇಕ ಚಿತ್ತದಲಿ
ದಾನ ಧರ್ಮ ಪರೋಪಕಾರ ವಿ
ಧಾನ ದೀಕ್ಷಾಕರ್ಮನಿಷ್ಠರು
ಮಾನನೀಯರಲೇ ಮಹೀಪತಿ ಕೇಳು ನೀನೆಂದ ॥29॥

೦೩೦ ಕರಣಗುಣ ಸಂಹರಣ ...{Loading}...

ಕರಣಗುಣ ಸಂಹರಣ ಸಂಧ್ಯಾಂ
ತರದವಸ್ಥಾಂತರದ ಲೋಕೋ
ತ್ಕರದ ತಾಪತ್ರಯದ ಲಕ್ಷಣ ಲಕ್ಷಿತವನರಿದು
ಪರಿವಿಡಿಯ ಮೂರ್ತಿತ್ರಯಂಗಳ
ಗುರು ಲಘುವನಾರೈದು ನಡೆವಂ
ಗರಿದೆನಿಸುವುದದಾವುದೈ ಹೇಳೆಂದನಾ ಮುನಿಪ ॥30॥

೦೩೧ ವೇದ ನಾಲ್ಕಾಶ್ರಮವು ...{Loading}...

ವೇದ ನಾಲ್ಕಾಶ್ರಮವು ತಾ ನಾ
ಲ್ಕಾದಿಮೂರುತಿ ನಾಲ್ಕು ವರ್ಣ ವಿ
ಭೇದ ನಾಲ್ಕಾ ಕರಣ ನಾಲುಕುಪಾಯ ನಾಲ್ಕರಲಿ
ಭೇದಿಸಲು ಪುರುಷಾರ್ಥ ನಾಲ್ಕರ
ಹಾದಿಯರಿದು ವಿಮುಕ್ತಿ ನಾಲುಕ
ನೈದುವನು ಸಂದೇಹವೇ ಹೇಳೆಂದನಾ ಮುನಿಪ ॥31॥

೦೩೨ ಭೂತ ವರ್ಣಸ್ಥಾನ ...{Loading}...

ಭೂತ ವರ್ಣಸ್ಥಾನ ಸರ್ಗ ನಿ
ಪಾತವದರೊಳು ಕೃತ್ಯಗಳ ಸಂ
ಜಾತಮುಖವಾವರಣಶರಸಂಗತಿಯ ಸೋಹೆಗಳ
ಧಾತು ಮೂಲಾದಿಗಳನರಿವುದು
ಪ್ರೀತಿಯಿಂದಿಹಪರವ ಗೆಲುವುದು
ಭೂತಳದೊಳುತ್ತಮವಲೇ ಭೂಪಾಲ ಕೇಳ್ ಎಂದ ॥32॥

೦೩೩ ಆರು ಗುಣ ...{Loading}...

ಆರು ಗುಣ ಋತುವರ್ಣ ವರ್ಗವ
ದಾರು ದರ್ಶನ ಪಾತ್ರವಂಗವ
ದಾರು ಭೇದದ ಬಗೆಯನರಿವುದು ಶಿಷ್ಟಮಾರ್ಗದಲಿ
ತೋರುವೀ ಮಾಯಾಪ್ರಪಂಚವ
ಮೀರಿ ಕೇಡಿಲ್ಲದ ಪದವ ಕೈ
ಸೂರೆಗೊಂಬುದು ಪರಮ ಮಂತ್ರವಿದೆಂದನಾ ಮುನಿಪ ॥33॥

೦೩೪ ಜಲಧಿ ಮಾತೃಕೆ ...{Loading}...

ಜಲಧಿ ಮಾತೃಕೆ ವಾರ ಕುಲಗಿರಿ
ಗಳು ವಿಭಕ್ತಿ ದ್ವೀಪ ಸರ್ಪಾ
ವಳಿ ಮುನೀಶ್ವರರುಗಳ ಧಾತು ಗಡಣದ ವೇದಿಗಳ
ತಿಳಿದು ಕಾಲದ ಗತಿಯ ಗಮಕಂ
ಗಳನರಿದು ನಡೆವವರುಗಳು ನಿ
ರ್ಮಳದಲೆಡಹದೆ ಬೆರೆಸಿಕೊಂಬರು ಮುಕ್ತಿ ರಾಜ್ಯವನು ॥34॥

೦೩೫ ಕಾಯದಿಗ್ಬನ್ಧ ಪ್ರಣಾಮ ...{Loading}...

ಕಾಯದಿಗ್ಬಂಧ ಪ್ರಣಾಮ ವಿ
ಧೇಯವರ್ಚನೆ ಯೋಗಸಿದ್ಧಿ ನಿ
ಕಾಯ ನಾಲ್ಕರ ಇಂದ್ರಿಯಸ್ಥಿತಿ ಗತಿಯನಾರೈದು
ಆಯವನು ವಿವರಿಸುತ ಮೇಲಣ
ಬೀಯವಿದು ತನಗೆಂಬುದನು ನಿ
ರ್ದಾಯದಲಿ ನಿಶ್ಚಯಿಸಬೇಹುದು ರಾಯ ಕೇಳ್ ಎಂದ ॥35॥

೦೩೬ ನವ ನವ ...{Loading}...

ನವ ನವ ವ್ಯೂಹಂಗಳಬುಜೋ
ದ್ಭವನ ಪಾಳಿ ವಿಖಂಡ ನವರಸ
ನವವಿಧಗ್ರಹ ನಾಟಕಂಗಳ ಲಕ್ಷಣವನರಿದು
ನವವಿಧಾಮಳ ಭಕ್ತಿ ರಸವನು
ಸವಿದು ನಿತ್ಯಾನಿತ್ಯವಸ್ತುವ
ನವರಸವನಾರೈದು ನಡೆವುದು ಭೂಪ ಕೇಳ್ ಎಂದ ॥36॥

೦೩೭ ಹತ್ತು ಮುಖದಲಿ ...{Loading}...

ಹತ್ತು ಮುಖದಲಿ ಲೋಕದೊಳಗು
ತ್ಪತ್ತಿಯಾದ ಚರಾಚರಂಗಳ
ಲುತ್ತಮಾಧಮರೆನ್ನದೇ ಹರಿ ಸರ್ವಗತನಾಗಿ
ಸುತ್ತುವನು ನಾನಾ ತೆರದಲಿ ವಿ
ಚಿತ್ರಚರಿತನು ಕಪಟ ನಾಟಕ
ಸೂತ್ರಧಾರಕನೆಂದರಿದು ಸುಖಿಯಾಗು ನೀನೆಂದ ॥37॥

೦೩೮ ಲೇಸು ಮಾಡಿದಿರೆನ್ನ ...{Loading}...

ಲೇಸು ಮಾಡಿದಿರೆನ್ನ ಚಿತ್ತದ
ಬೇಸರಿಕೆ ಬಯಲಾಯ್ತು ನಿಮ್ಮುಪ
ದೇಶದಿಂದ ಕೃತಾರ್ಥನಾದೆನು ಗೆಲಿದೆನಿಹಪರವ
ಗಾಸಿಯಾದುದು ರಾಗ ಲೋಭದ
ಮೀಸಲಳಿದುದು ನಿನ್ನ ದೆಸೆಯಿಂ
ದೇಸು ಧನ್ಯರೊ ನಾವು ಚಿತ್ತೈಸೆಂದನಾ ಭೂಪ ॥38॥

೦೩೯ ಸ್ವರ್ಗವಾವುದು ನರಕವಾವುದು ...{Loading}...

ಸ್ವರ್ಗವಾವುದು ನರಕವಾವುದು
ವಿಗ್ರಹದಲಹ ಸಿದ್ಧಿ ಯಾವುದ
ನುಗ್ರಹಿಸಲೇನಹುದು ಪಾತ್ರಾಪಾತ್ರವೆಂದೇನು
ಉಗ್ರವಾವುದು ದೈವದೊಳಗೆ ಸ
ಮಗ್ರವಾವುದು ಧರ್ಮದೊಳಗ
ವ್ಯಗ್ರದಿಂದುಪದೇಶಿಸಲು ಬೇಕೆಂದನಾ ಭೂಪ ॥39॥

೦೪೦ ಸುಲಭನತಿ ಸಾಹಿತ್ಯ ...{Loading}...

ಸುಲಭನತಿ ಸಾಹಿತ್ಯ ಮಂಗಳ
ನಿಳಯನಗಣಿತ ಮಹಿಮನನ್ವಯ
ತಿಲಕನನುಪಮಚರಿತ ದೈವಾಪರನು ಪುಣ್ಯನಿಧಿ
ಕುಲಯುತನು ಕೋವಿದನು ಕರುಣಾ
ಜಲಧಿ ಕೌತುಕ ಯುಕ್ತಿವಿದನೆಂ
ದಿಳೆ ಹೊಗಳುತಿರಲದುವೆ ಕೇಳೈ ಸ್ವರ್ಗ ತಾನೆಂದ ॥40॥

೦೪೧ ಪಾತಕನು ಪತಿತನು ...{Loading}...

ಪಾತಕನು ಪತಿತನು ಕೃತಘ್ನನು
ಘಾತಕನು ಮರ್ಮನು ದುರಾಢ್ಯನ
ಭೀತಕನು ದೂಷಕನು ದುರ್ಜನನಪ್ರಯೋಜಕನು
ನೀತಿಹೀನನು ಜಾತಿಧರ್ಮ ಸ
ಮೇತ ದೈವ ದ್ರೋಹಿಯೆಂಬುದು
ಭೂತದೊಳೇ ನರಕ ಚಿತ್ತೈಸೆಂದನಾ ಮುನಿಪ ॥41॥

೦೪೨ ದೇಹವಿಡಿದಿಹ ಧರ್ಮವದು ...{Loading}...

ದೇಹವಿಡಿದಿಹ ಧರ್ಮವದು ನಿ
ರ್ದೇಹದಲಿ ದೊರಕುವುದೆ ಮಾನವ
ದೇಹವೇ ಸಾಧನ ಸಕಲ ಪುರುಷಾರ್ಥ ಶೀಲರಿಗೆ
ಐಹಿಕಾಮುಷ್ಮಿಕದ ಗತಿ ಸಂ
ಮೋಹಿಸುವುದು ಶರೀರದಲಿ ಸಂ
ದೇಹವೇ ಧೃತರಾಷ್ಟ್ರ ಚಿತ್ತೈಸೆಂದನಾ ಮುನಿಪ ॥42॥

೦೪೩ ಗರುಡ ...{Loading}...

ಗರುಡ ಪಂಚಾಕ್ಷರಿಯೊಳಲ್ಲದೆ
ಗರಳ ಭಯವಡಗುವುದೆ ವಿಷ್ಣು
ಸ್ಮರಣೆಯಿಂದಲ್ಲದೆ ಮಹಾಪಾತಕಕೆ ಕಡೆಯಹುದೆ
ಹಿರಿದು ಸಂಸಾರಾಂಬುಧಿಯನು
ತ್ತರಿಸುವೊಡೆ ಗುರುಮುಖದೊಳಲ್ಲದೆ
ನಿರತಿಶಯವಿನ್ನಾವುದೈ ಹೇಳೆಂದನಾ ಮುನಿಪ ॥43॥

೦೪೪ ತನ್ನ ಮನೆಯಲಿ ...{Loading}...

ತನ್ನ ಮನೆಯಲಿ ಮೂರ್ಖನತಿ ಸಂ
ಪನ್ನ ಪೂಜ್ಯನು ಭೂಮಿಪಾಲನು
ತನ್ನ ದೇಶದೊಳಧಿಕ ಸ್ವಗ್ರಾಮದಲಿ ಪ್ರಭು ಪೂಜ್ಯ
ಭಿನ್ನವಿಲ್ಲದೆ ಹೋದ ಠಾವಿನೊ
ಳನ್ಯವೆನಿಸದೆ ವಿಶ್ವದೊಳು ಸಂ
ಪನ್ನ ಪೂಜಾಪಾತ್ರರೈ ವಿದ್ವಾಂಸರುಗಳೆಂದ ॥44॥

೦೪೫ ಒಬ್ಬನಹನೈ ಶೂರ ...{Loading}...

ಒಬ್ಬನಹನೈ ಶೂರ ನೂರರೊ
ಳೊಬ್ಬನಹ ಸಾವಿರಕೆ ಪಂಡಿತ
ನೊಬ್ಬನಹನೈ ವಕ್ತ ಶತ ಸಾವಿರಕೆ ಲೋಕದಲಿ
ಒಬ್ಬ ದಾನಿಯ ಕಾಣೆ ನಾನಿ
ನ್ನೊಬ್ಬರೊಬ್ಬರಿಗೊಂದು ಗುಣವದು
ಸರ್ಬಗುಣ ಸಂಪನ್ನರೈ ವಿದ್ಯಾಂಸರುಗಳೆಂದ ॥45॥

೦೪೬ ಸತಿಯರಿಗೆ ಗತಿ ...{Loading}...

ಸತಿಯರಿಗೆ ಗತಿ ಯಾವುದೈ ನಿಜ
ಪತಿಗಳಲ್ಲದೆ ವಿಪ್ರಜಾತಿಗೆ
ಹುತವಹನು ವರ್ಣತ್ರಯಕೆ ಭೂದೇವರುಗಳಿರಲು
ಕ್ಷಿತಿಯೊಳತಿಶಯವಾವುದೈ ಭೂ
ಪತಿಯೆ ಕೇಳಿಹಪರಕೆ ಸುಖ ಸಂ
ಗತಿಯನೊಲುವೊಡೆ ಪೂಜಿಸುವುದೈ ಬ್ರಾಹ್ಮಣೋತ್ತಮರ ॥46॥

೦೪೭ ಚೋರನನು ಕಣ್ಟಕನ ...{Loading}...

ಚೋರನನು ಕಂಟಕನ ಹಿಸುಣನ
ಜಾರನನು ಷಂಡನನು ಸಮಯವಿ
ಕಾರ ಭೇದಿಯನಿಂತರುವರನು ಕಂಡು ಮನ್ನಿಸದೆ
ದೂರದಲಿ ವರ್ಜಿಸುವುದು ಬಹಿ
ಷ್ಕಾರಿಗಳು ಸರ್ವಕ್ಕಿವರುಗಳು
ಸಾರಿದುದು ಸರ್ವೇಶ್ವರನ ಮತವರಸ ಕೇಳ್ ಎಂದ ॥47॥

೦೪೮ ಮೊದಲಲಾ ಮಾಹಿಷಿಕನನು ...{Loading}...

ಮೊದಲಲಾ ಮಾಹಿಷಿಕನನು ಮ
ಧ್ಯದಲಿ ವೃಷಲೀ ವಲ್ಲಭನನಂ
ತ್ಯದಲಿ ವಾರ್ಧುಷಿಕನನು ಕಂಡವರುಗಳ ಭಾಗ್ಯನಿಧಿ
ಕದಡಿ ಹರಿವುದು ಕಂಡ ಮುಖದಲಿ
ಸದಮಳಿತ ಶಾಸ್ತ್ರಾರ್ಥ ನಿಶ್ಚಯ
ವಿದನರಿದು ನಡೆವುದು ನಯವು ಭೂಪಾಲ ಕೇಳ್ ಎಂದ ॥48॥

೦೪೯ ಕುಲಮಹಿಷಿ ದುರ್ಮಾರ್ಗ ...{Loading}...

ಕುಲಮಹಿಷಿ ದುರ್ಮಾರ್ಗ ಮುಖದಲಿ
ಗಳಿಸಿದರ್ಥವನುಂಡು ಕಾಲವ
ಕಳೆವ ನಿರ್ಭಾಗ್ಯರು ಕಣಾ ಮಾಹಿಷಿಕರೆಂಬವರು
ಇಳೆಯೊಳವರೊಡನಾಡಿದವದಿರು
ಗಳಿಗೆ ನರಕಾರ್ಣವದೊಳಾಳುತ
ಮುಳುಗುತಿರುತಿಹುದಲ್ಲದೇ ಗತಿಯಿಲ್ಲ ಕೇಳ್ ಎಂದ ॥49॥

೦೫೦ ದೈವದಾಧೀನದಲಿ ಜಗವಾ ...{Loading}...

ದೈವದಾಧೀನದಲಿ ಜಗವಾ
ದೈವ ಮಂತ್ರಾಧೀನ ಮಂತ್ರವು
ಭೂವಿಬುಧರಾಧೀನವಾಗಿಹುದಾಗಿ ಲೋಕದಲಿ
ದೈವವೇ ಬ್ರಾಹ್ಮಣನದಲ್ಲದೆ
ಭಾವಿಸಲು ಬುಧರಿಂದಧಿಕವಹ
ದೈವವೆಂಬುದದಾವುದೈ ಹೇಳೆಂದನಾ ಮುನಿಪ ॥50॥

೦೫೧ ಕೆಲಸ ಗತಿಯಲಿ ...{Loading}...

ಕೆಲಸ ಗತಿಯಲಿ ಕಡೆದ ಶಿಲೆಯನು
ಕಲುಕುಟಿಕನಿಳುಹುವನದಲ್ಲದೆ
ಹಲವು ಪರಿಯಿಂದದನು ಲೋಕಕೆ ದೈವವನು ಮಾಡಿ
ಸಲಿಸುವವರುಂಟೇ ಸುರಾಸುರ
ರೊಳಗೆ ವಿಪ್ರೋತ್ತಮರುಳಿಯೆ ಜಗ
ದೊಳಗೆ ದೈವವದಾವುದೈ ಹೇಳೆಂದನಾ ಮುನಿಪ ॥51॥

೦೫೨ ಎಣಿಸ ಬಹುದೂರ್ವರೆಯ ...{Loading}...

ಎಣಿಸ ಬಹುದೂರ್ವರೆಯ ಸೈಕತ
ಮಣಿಯನೊಯಾ್ಯರದಲಿ ಗಗನಾಂ
ಗಣದೊಳೈತಹ ವೃಷ್ಟಿಬಿಂದುವ ಲೆಕ್ಕಗೊಳಬಹುದು
ಎಣಿಸಬಾರದದೊಂದು ದಿವಿಜರ
ಗಣಕೆ ಗೋಚರವಾಗಿ ಸದ್ಬ್ರಾ
ಹ್ಮಣನೊಳೊಬ್ಬನ ರಕ್ಷಿಸಿದ ಫಲವರಸ ಕೇಳ್ ಎಂದ ॥52॥

೦೫೩ ಜಾತಿಧರ್ಮವನನುಸರಿಸಿ ವರ ...{Loading}...

ಜಾತಿಧರ್ಮವನನುಸರಿಸಿ ವರ
ಮಾತೃಪಿತೃ ಪರಿಚರಿಯದಲಿ ಸಂ
ಪ್ರೀತಿವಡೆಯುತೆ ಪರಗುಣಸ್ತುತಿ ನಿಂದೆಗಳನುಳಿದು
ಭೂತನಾಥನ ಭಕುತಿಯಲಿ ವಿ
ಖ್ಯಾತವಹ ಗುರುದೈವದಲಿ ಭಯ
ಭೀತಿ ಹಿರಿದಿರಲದುವೆ ಕೇಳ್ ಸುಕೃತಕ್ಕೆ ಕಡೆಯೆಂದ ॥53॥

೦೫೪ ಅರ್ಥದಿನ್ದಹ ಸಿದ್ಧಿ ...{Loading}...

ಅರ್ಥದಿಂದಹ ಸಿದ್ಧಿ ಯಾವುದ
ನರ್ಥವೆಂಬುದದೇನು ತನಗೆ
ಸ್ವಾರ್ಥವಾರು ಪರಾರ್ಥದಿಂದಹುದಾವುದವನಿಯಲಿ
ತೀರ್ಥವಾವುದು ವಿಪ್ರರೊಳಗೆ ಸ
ಮರ್ಥರಾರು ಸುಧಾತ್ರಿಯೊಳಗೆಯು
ವ್ಯರ್ಥಜೀವಿಗಳಾರು ಚಿತ್ತೈಸೆಂದನಾ ಮುನಿಪ ॥54॥

೦೫೫ ಧನವನುಳ್ಳ ಮಹಾತ್ಮನಾವುದ ...{Loading}...

ಧನವನುಳ್ಳ ಮಹಾತ್ಮನಾವುದ
ನೆನೆದೊಡದು ಕೈಸಾರುವುದು ನಿ
ರ್ಧನಿಕ ಬಯಸಿದ ಬಯಕೆ ಬಯಲಹುದಲ್ಲದೇ ಬೇರೆ
ಧನಿಕನಂತೆ ಸಮಸ್ತಸುಖ ಸಂ
ಜನಿಸುವುದೆ ಸರ್ವಕ್ಕೆ ಸಾಧನ
ಧನವದಲ್ಲದೆ ಭುವನದೊಳಗನ್ಯತ್ರವಿಲ್ಲೆಂದ ॥55॥

೦೫೬ ವ್ಯರ್ಥರುಗಳೊಡನಾಟ ತಮ್ಮ ...{Loading}...

ವ್ಯರ್ಥರುಗಳೊಡನಾಟ ತಮ್ಮ
ಸ್ವಾರ್ಥವಿಲ್ಲದರುಗಳ ಕೂಟ ಪ
ರಾರ್ಥದಿಂದುಜ್ಜೀವಿಸಿದವನ ಬದುಕು ಲೋಕದಲಿ
ಅರ್ಥವಿಲ್ಲದ ಸಿರಿಯ ಸಡಗರ
ಆರ್ಥಿಯಿಲ್ಲದ ಬಾಳುವೆಗಳಿವ
ನರ್ಥ ಪಾರಂಪರೆಯಲೇ ಕೇಳ್ ಎಂದನಾ ಮುನಿಪ ॥56॥

೦೫೭ ಮಾಡುವುದು ಧರ್ಮವನು ...{Loading}...

ಮಾಡುವುದು ಧರ್ಮವನು ಸುಜನರ
ಕೂಡುವುದು ಪರಪೀಡೆಯೆಂಬುದ
ಮಾಡಲಾಗದು ಕರಣ ಮೂರರೊಳಲ್ಲದಾಟವನು
ಆಡಲಾಗದು ದಸ್ಸುಜನವನು
ಕೂಡಲಾಗದಿದೆಂಬ ಮಾರ್ಗವ
ನೋಡಿ ನಡೆವುದು ತನಗೆ ಪರಮಸ್ವಾರ್ಥಕರವೆಂದ ॥57॥

೦೫೮ ಕರಿತುರಗ ಮೊದಲಾದ ...{Loading}...

ಕರಿತುರಗ ಮೊದಲಾದ ವಸ್ತುಗ
ಳರಮನೆಗಳಲಿ ಪುತ್ರ ಮಿತ್ರರು
ತರುಣಿಯರು ಸಹಭವರು ಗೋತ್ರಜರಡವಿಯೊಳಗಿಕ್ಕಿ
ತಿರುಗುವರು ನಿಜಸುಕೃತ ದುಷ್ಕೃತ
ವೆರಡು ಬೆಂಬಿಡವಲ್ಲದುಳಿದುದ
ನರಸ ಬಲ್ಲವರಾರು ಧರ್ಮರಹಸ್ಯ ವಿಸ್ತರವ ॥58॥

೦೫೯ ಧರ್ಮದಾಧಾರದಲಿಹುದು ಜಗ ...{Loading}...

ಧರ್ಮದಾಧಾರದಲಿಹುದು ಜಗ
ಧರ್ಮವುಳ್ಳನನಾಶ್ರಯಿಸುವುದು
ಧರ್ಮವೇ ನೂಕುವುದು ಜನ್ಮಾಂತರದ ಪಾತಕವ
ಧರ್ಮವೇ ಸರ್ವ ಪ್ರತಿಷ್ಠಿತ
ಧರ್ಮವೆಂಬುದು ಪರಮಪದವಾ
ಧರ್ಮವನು ಬಿಟ್ಟಿಹುದು ಬದುಕಲ್ಲರಸ ಕೇಳ್ ಎಂದ ॥59॥

೦೬೦ ಪರಿಪರಿಯ ಯಜ್ಞವನು ...{Loading}...

ಪರಿಪರಿಯ ಯಜ್ಞವನು ವಿರಚಿಸಿ
ಸುರಪತಿಯ ಸಂತುಷ್ಟಿಬಡಿಸಲು
ಸುರಿವನವ ಸಂಪೂರ್ಣವಾಗಿ ಸುವೃಷ್ಟಿಯನು ಜಗಕೆ
ಹರಿಹಯನು ಸಸ್ಯಾಧಿಕಂಗಳ
ಹೊರೆಯಲೋಸುಗ ಮೈಗೆ ಮೈಯಾ
ಗಿರುತಿಹನು ಭುವನದ್ವಯದೊಳವನೀಶ ಕೇಳ್ ಎಂದ ॥60॥

೦೬೧ ಎತ್ತಲಾನು ಸುತೀರ್ಥವೆಮ್ಬುದ ...{Loading}...

ಎತ್ತಲಾನು ಸುತೀರ್ಥವೆಂಬುದ
ಚಿತ್ತವಿಸುವೊಡೆ ಸರ್ವ ತೀರ್ಥದ
ಸತ್ವವನು ಸನ್ನಿಹಿತವಾಗವಧರಿಸು ನೀನದನು
ವಿಸ್ತರಿಸುವೆನು ವಿಪ್ರಪಾದ ವಿ
ಮುಕ್ತ ವಿಮಳೋದಕವನಾವನು
ನೆತ್ತಿಯಲಿ ಧರಿಸಿದವನವನು ಕೃತಾರ್ಥನಹನೆಂದ ॥61॥

೦೬೨ ಶರಧಿಯೊಳು ಹರಿ ...{Loading}...

ಶರಧಿಯೊಳು ಹರಿ ಯೋಗನಿದ್ರೆಯೊ
ಳಿರಲು ಭೃಗುವೈತಂದು ಲಕ್ಷಿ ್ಮೀ
ಧರನ ವಕ್ಷಸ್ಥಳವನೊದೆಯಲು ಮುನಿಯ ಚರಣವನು
ಸಿರಿಯುದರದೊಳಗೊತ್ತಿ ಧರಣೀ
ಸುರರ ಮೆರೆದನು ತೀರ್ಥಪಾದವ
ಧರೆಯೊಳಗೆ ಬುಧರಿಂದಧಿಕವಹ ತೀರ್ಥವಿಲ್ಲೆಂದ ॥62॥

೦೬೩ ಮಾಡುತಿಹ ಯಜ್ಞವನು ...{Loading}...

ಮಾಡುತಿಹ ಯಜ್ಞವನು ಪರರಿಗೆ
ಮಾಡಿಸುವ ವೇದಾಧ್ಯಯನವನು
ಮಾಡುತಿಹ ತದ್ವಿಷಯದಲಿ ಯೋಗ್ಯರನು ಮಾಡಿಸುವ
ಮಾಡುತಿಹ ದಾನವನು ಲೋಗರು
ನೀಡುತಿರಲೊಳಕೊಂಬ ಗುಣವನು
ಕೂಡಿಕೊಂಡಿಹನೇ ಸಮರ್ಥನು ವಿಪ್ರರೊಳಗೆಂದ ॥63॥

೦೬೪ ವೇದಪುರುಷನ ವಿಗ್ರಹದಲಿ ...{Loading}...

ವೇದಪುರುಷನ ವಿಗ್ರಹದಲಿ ವಿ
ಭೇದವಿಲ್ಲದೆ ಬಿಸಜ ಸಂಭವ
ನಾದಿಯಾದ ಸಮಸ್ತ ದೇವರು ನೆಲೆವನೆಗಳಾಗಿ
ನೇದುಕೊಂಡಿಹರಂತು ಕಾರಣ
ವಾದಿಸದೆ ವಿಪ್ರೋತ್ತಮರನಭಿ
ವಾದಿಸುವುದುತ್ತಮವಲೇ ಕೇಳ್ ಎಂದನಾ ಮುನಿಪ ॥64॥

೦೬೫ ಯುವತಿಯರು ಗಾಯಕರು ...{Loading}...

ಯುವತಿಯರು ಗಾಯಕರು ಕವಿಗಳು
ತವತವಗೆ ಕೈವಾರಿಸುವರಾ
ವವನವನೆ ಯಾವಗಲು ದೂಷಕನಿಹಪರಂಗಳಿಗೆ
ಇವರು ಮೂವರು ನಿಂದಿಸುವರಾ
ವವನವನು ಸರ್ವಜ್ಞನೆನಿಸುವ
ನವನಿಪತಿ ಚಿತ್ತೈಸು ಧರ್ಮರಹಸ್ಯ ವಿಸ್ತರವ ॥65॥

೦೬೬ ಜ್ಞಾತವಾವ್ದಜ್ಞಾತವಾವುದು ...{Loading}...

ಜ್ಞಾತವಾವ್ದಜ್ಞಾತವಾವುದು
ನೀತಿ ಯಾವುದನೀತಿ ಯಾವುದು
ದ್ವೆ ೈತವಾವ್ದದ್ವೆ ೈತವಾವುದು ವೈದಿಕಾಂಗದಲಿ
ಖ್ಯಾತಿಯಾವ್ದಖ್ಯಾತಿ ಯಾವುದು
ಜಾತಿಯಾವುದಜಾತಿ ಯಾವುದು
ಭೂತಳದೊಳವನೀಶ ಚಿತ್ತೈಸೆಂದನಾ ಮುನಿಪ ॥66॥

೦೬೭ ಧರಣಿಯಮರರ ಸೇವೆಯನು ...{Loading}...

ಧರಣಿಯಮರರ ಸೇವೆಯನು ವಿ
ಸ್ತರಿಸಿ ಸತ್ಕಾರದಲವರನಾ
ದರಿಸಿ ಬಹುಮಾನವನು ವಿರಚಿಸಿದಾ ಮಹಾತ್ಮರಿಗೆ
ಎರವಹುದೆ ಸ್ವರ್ಗಾಪವರ್ಗದ
ಸಿರಿಯದೆಂಬುದನರಿದು ನಡೆವಂ
ಗರಿದೆನಿಸುವದದಾವುದೈ ಹೇಳೆಂದನಾ ಮುನಿಪ ॥67॥

೦೬೮ ಯೋನಿಮುಖವೆಮ್ಬತ್ತುನಾಲ್ಕು ...{Loading}...

ಯೋನಿಮುಖವೆಂಬತ್ತುನಾಲ್ಕು ನ
ವೀನ ಜನ್ಮಂಗಳೊಳಗುದಯಿಸಿ
ಹಾನಿ ವೃದ್ಧಿಗಳರಿದು ಜ್ಞಾನದ ಕಡೆಯ ಕಣೆಯದಲಿ
ಮಾನವರ ಬಸುರಿನಲಿ ಬಂದ
ಜ್ಞಾನತರರಾಗಳಿವುದಿದು ಕ
ರ್ಮಾನುಗತವಾಗಿಹುದಲೇ ಭೂಪಾಲ ಕೇಳ್ ಎಂದ ॥68॥

೦೬೯ ಪಾನದಿಂ ಸೂಕರನು ...{Loading}...

ಪಾನದಿಂ ಸೂಕರನು ಬುಧರವ
ಮಾನದಿಂ ಕ್ಷಯರೋಗಿ ಗುರುಜನ
ಹಾನಿಯಿಂದವೆ ಕುಷ್ಠಿ ಗರ್ವದಿ ಕುಕ್ಕುಟಾಹ್ವಯನು
ಹೀನಗತಿಯಿಂದುರಗ ನಾನಾ
ಯೋನಿಗಳಲಿ ಚರಾಚರವು ಕ
ರ್ಮಾನುಗತವಾಗುದಯಿಸುವುದವನೀಶ ಕೇಳ್ ಎಂದ ॥69॥

೦೭೦ ಪರರ ಪಟುತನವಾದದಲಿ ...{Loading}...

ಪರರ ಪಟುತನವಾದದಲಿ ಮೂ
ಗರವೊಲಿಹ ಪರ ವಚನದುತ್ಕಟ
ವೊರೆಗೆ ಬಧಿರತ್ವವನು ಪರಗುಣ ದೋಷ ದರುಶನವು
ದೊರಕಿದೊಡೆ ಜಾತ್ಯಂಧನೆನಿಸುವ
ಪುರುಷನಾವವನವನು ಸಾಕ್ಷಾ
ತ್ಪರಮಪುರುಷೋತ್ತಮನಲೇ ಭೂಪಾಲ ಕೇಳ್ ಎಂದ ॥70॥

೦೭೧ ಇಪ್ಪ ಸನ್ತರ್ಪಣವ ...{Loading}...

ಇಪ್ಪ ಸಂತರ್ಪಣವ ಮಾಡಿ ವಿ
ಶಿಷ್ಟ ಪೂಜಾಪಾತ್ರರನು ಸಂ
ತುಷ್ಟಿಬಡಿಸಿ ಸಧರ್ಮದಲಿ ರಾಜ್ಯವನು ರಕ್ಷಿಸುತ
ಕೊಟ್ಟವರ ಕೊಂಡವರ ಮತ್ತೊಡ
ಬಟ್ಟವರನನುಜಾತ್ಮಜರನೊಳ
ಗಿಟ್ಟುಕೊಂಡಿಹುದುಚಿತವದು ಭೂಪಾಲ ಕೇಳ್ ಎಂದ ॥71॥

೦೭೨ ನುಡಿದುದನು ಪೂರೈಸಿ ...{Loading}...

ನುಡಿದುದನು ಪೂರೈಸಿ ಕಾಲದ
ಕಡೆಯ ಕಾಣಿಸಿ ಹೋಹವರ ಬೀ
ಳ್ಕೊಡುತ ಹಳೆಯರನಾಪ್ತರನು ಮನ್ನಿಸುತ ತನ್ನುವನು
ಹಿಡಿದು ಸೇವೆಯ ಮಾಡುವವರನು
ಬಿಡದೆ ನಾನಾ ತೆರದ ಪದವಿಯ
ಕೊಡುತಲಿಹುದಿದು ನೀತಿ ಚಿತ್ತೈಸೆಂದನಾ ಮುನಿಪ ॥72॥

೦೭೩ ವಿಲಗ ಸಾಗರನಾಗಿ ...{Loading}...

ವಿಲಗ ಸಾಗರನಾಗಿ ದೇಶವ
ಹಿಳಿದು ಹಿಂಡುತ ದಾನ ಧರ್ಮವ
ನುಳಿದು ದೇವ ಬ್ರಾಹ್ಮರೆನ್ನದೆ ಕಂಡವರನೆಳೆದು
ಗಳಿಗೆ ಸಂಖ್ಯೆಗೆ ದಂಡ ದೋಷವ
ಕೊಳುತ ಕಡೆಯಲಧೋಗತಿಗಳೊಳ
ಗಿಳಿದು ಹೋಹುದನೀತಿ ಚಿತ್ತೈಸೆಂದನಾ ಮುನಿಪ ॥73॥

೦೭೪ ಯೋನಿಯಲ್ಲದ ಠಾವುಗಳಲಿ ...{Loading}...

ಯೋನಿಯಲ್ಲದ ಠಾವುಗಳಲಿ ವಿ
ಯೋನಿಯಹ ವಿಷಯಂಗಳಲಿ ಪಶು
ಯೋನಿಯಲಿ ಸಂಭೋಗಿಸುವ ಪಾತಕರ ಪರಿವಿಡಿಯ
ಏನ ಹೇಳಲು ಬಹುದು ನರಕ ವಿ
ತಾನದೊಳಗೋಲಾಡಿ ಬಳಿಕಾ
ಶ್ವಾನ ಯೋನಿಯೊಳವರು ಜನಿಸುವರೆಂದನಾ ಮುನಿಪ ॥74॥

೦೭೫ ಜೀವ ಪರಮನಭೇದವನು ...{Loading}...

ಜೀವ ಪರಮನಭೇದವನು ಸಂ
ಭಾವಿಸದೆ ವೇದಾಂತ ಶಾಸ್ತ್ರ ವಿ
ದಾವ ಮುಖವೆಂದರಿಯದೆಯೆ ದಾಸೋಹವೆಂದೆನುತ
ಕೋವಿದರ ಸಂಗವನುಳಿದು ಮಾ
ಯಾ ವಿಲಾಸದ ನೆಲೆಯ ನೋಡದೆ
ಸಾವುತಿಹುದೇ ದ್ವೈತ ಚಿತ್ತೈಸೆಂದನಾ ಮುನಿಪ ॥75॥

೦೭೬ ಉತ್ತಮರ ಸಙ್ಗದೊಳಗೋಲಾ ...{Loading}...

ಉತ್ತಮರ ಸಂಗದೊಳಗೋಲಾ
ಡುತ್ತ ದುರ್ವಿಷಯಂಗಳನು ಮುರಿ
ಯೊತ್ತಿ ಸಕಲ ಚರಾಚರದ ಸುಖ ದುಃಖವನು ತಾನು
ಹೊತ್ತು ನಡೆವುತ ಪುಣ್ಯ ಪಾಪವಿ
ದೆತ್ತಣದು ತನಗೆಂಬ ಕಾಣಿಕೆ
ಯುತ್ತರೋತ್ತರ ಸಿದ್ಧಿ ಚಿತ್ತೈಸೆಂದನಾ ಮುನಿಪ ॥76॥

೦೭೭ ಪೊಡವಿಯೊಳಗೆ ಪುರೋಹಿತರನವ ...{Loading}...

ಪೊಡವಿಯೊಳಗೆ ಪುರೋಹಿತರನವ
ಗಡಿಸಿ ಧರ್ಮದ ಬಲದಿ ನಾಕಕೆ
ನಡೆವ ರಾಯರ ಹೊಯಿದಿಳಿಯಲಿಕ್ಕುವರಧೋಗತಿಗೆ
ಕೆಡಿಸುವರು ರಾಷ್ಟ್ರವನು ಕ್ಷಾತ್ರವ
ತಡೆಗಡಿಸಿ ಚತುರಂಗಬಲವನು
ಹುಡಿಹುಡಿಯ ಮಾಡುವರು ನಿರ್ಜರರರಸ ಕೇಳ್ ಎಂದ ॥77॥

೦೭೮ ಬಲಿಯ ರಾಜ್ಯ ...{Loading}...

ಬಲಿಯ ರಾಜ್ಯ ವಿಭೀಷಣನ ಸಿರಿ
ಜಲನಿಧಿಯ ಗಾಂಭೀರ್ಯ ಬಾಣನ
ಬಲುಹು ಹನುಮಾನುವಿನ ಭುಜಬಲ ವೀರ ರಾಘವನ
ಛಲ ದಧೀಚಿಯ ದಾನ ಪಾರ್ಥನ
ಕೆಳೆ ಯುಧಿಷ್ಠಿರ ನೃಪನ ಸೈರಣೆ
ಗಳವಡುವ ಬದುಕುಳ್ಳಡದು ವಿಖ್ಯಾತಿ ಕೇಳ್ ಎಂದ ॥78॥

೦೭೯ ಇರುಳು ಹಗಲನವರತ ...{Loading}...

ಇರುಳು ಹಗಲನವರತ ಪತಿ ಪರಿ
ಚರಿಯವನು ಮಾಡುತ್ತ ಪರ ಪುರು
ಷರನು ನೆನೆಯದೆ ಹಲವು ಸಂತತಿಗಳಿಗೆ ತಾಯಾಗಿ
ಇರುತ ದೇವ ಬ್ರಾಹ್ಮರನು ತಾ
ನಿರುತ ಸತ್ಕರಿಸುತ್ತಲಂತಃ
ಪುರದಲೆಸೆಯೆ ಗೃಹಸ್ಥೆಯೆನಿಸುವಳರಸ ಕೇಳ್ ಎಂದ ॥79॥

೦೮೦ ಮಡದಿ ನಿಜನಿಳಯವನು ...{Loading}...

ಮಡದಿ ನಿಜನಿಳಯವನು ಬಿಟ್ಟಡಿ
ಗಡಿಗೆ ಪರಗೃಹದೊಳಗೆ ಬಾಯನು
ಬಡಿದು ಮನೆಮನೆವಾರ್ತೆಯೆನ್ನದೆ ಬೀದಿಗಲಹವನು
ಒಡರಿಚುವ ಪತಿಯೊಬ್ಬನುಂಟೆಂ
ದೆಡಹಿ ಕಾಣದ ದಿಟ್ಟೆ ಹತ್ತನು
ಹಡೆದೊಡೆಯು ವರ್ಜಿಸುವುದುತ್ತಮ ಪುರುಷರುಗಳೆಂದ ॥80॥

೦೮೧ ಮುಡಿಯನೋಸರಿಸುತ್ತ ಮೇಲುದ ...{Loading}...

ಮುಡಿಯನೋಸರಿಸುತ್ತ ಮೇಲುದ
ನಡಿಗಡಿಗೆ ಸರಿವುತ್ತ ಮೌನವ
ಹಿಡಿದಧೋಮುಖಿಯಾಗಿ ಕಿಗ್ಗಣ್ಣಿಕ್ಕಿ ಕೆಲಬಲನ
ಬಿಡದೆ ನೋಡುತ ಮುಗುಳು ನಗೆಯಲಿ
ಜಡಿದು ಜಾರುವ ಜಾರ ವನಿತೆಯ
ಗೊಡವೆಗೊಳಗಾಗದವರುತ್ತಮ ಪುರುಷರುಗಳೆಂದ ॥81॥

೦೮೨ ಗುರುವಿನಲಿ ತನ್ದೆಯಲಿ ...{Loading}...

ಗುರುವಿನಲಿ ತಂದೆಯಲಿ ತಾಯಲಿ
ಹಿರಿಯರಲಿ ದೈವದಲಿ ಪಾಪದ
ಇರುಬಿನಲಿ ಗೋವಿನಲಿ ತೀರ್ಥದಲಿಮಿಗೆ ತನ್ನುವನು
ಹೊರೆವ ದಾತಾರನಲಿ ಮಂತ್ರದ
ಪರಮ ಸೇವೆಗಳಲ್ಲಿ ಧರಣೀ
ಸುರರೊಳಂಜಿಕೆ ಹಿರಿದಿರಲು ಬೇಕೆಂದನಾ ಮುನಿಪ ॥82॥

೦೮೩ ನೀತಿವಿದನಲ್ಲದ ಕುಮನ್ತ್ರೀ ...{Loading}...

ನೀತಿವಿದನಲ್ಲದ ಕುಮಂತ್ರೀ ವಿ
ನೀತಪರನಲ್ಲದ ಪುರೋಹಿತ
ನೇತಕವರಿಂದಾವ ಪುರುಷಾರ್ಥಂಗಳೆಯ್ದುವುವು
ಕಾತರಿಸಿ ಸಮರಾಂಗಣಕೆ ಭಯ
ಭೀತನಹ ಭೂಭುಜನ ದೆಸೆಯಿಂ
ಬೀತು ಹೋಗದೆ ಸಕಲ ಸಂಪದವರಸ ಕೇಳ್ ಎಂದ ॥83॥

೦೮೪ ಧರ್ಮವಾವುದು ಮೇಣು ...{Loading}...

ಧರ್ಮವಾವುದು ಮೇಣು ಜಗದೊಳ
ಧರ್ಮವಾವುದು ರಾಜ ಮಂತ್ರದ
ಧರ್ಮವಾವುದು ಮಾರ್ಗವಾವುದಮಾರ್ಗವೆಂದೇನು
ಕರ್ಮವಾವುದು ವಿಧಿವಿಹಿತ ದು
ಷ್ಕರ್ಮವಾವುದದೆಂಬ ಭೇದವ
ನಿರ್ಮಿಸಾ ಸಾಕೆಂದು ಬಿನ್ನಹ ಮಾಡಿದನು ಭೂಪ ॥84॥

೦೮೫ ಸತಿಸಹಿತ ವಿರಚಿಸಿದ ...{Loading}...

ಸತಿಸಹಿತ ವಿರಚಿಸಿದ ಧರ್ಮ
ಸ್ಥಿತಿ ಸಮೃದ್ಧಿಕವಾಗಿ ಸಲುವುದು
ಪತಿಗಳಲ್ಲದೆ ತನ್ನ ಸ್ವಾತಂತ್ರ ್ಯದಲಿ ಮಾಡಿದುದು
ಅತಿಶಯವನೆಯ್ದದು ಕಣಾ ಭೂ
ಪತಿಯೆ ಕೇಳಿಹಪರದ ಗತಿ ನಿಜ
ಸತಿಯ ದೆಸೆಯಿಂದಲ್ಲದೇ ಫಲಿಸುವುದು ಹುಸಿಯೆಂದ ॥85॥

೦೮೬ ಅತಿಥಿ ಪೂಜೆಯನುಳಿದ ...{Loading}...

ಅತಿಥಿ ಪೂಜೆಯನುಳಿದ ಜೀವ
ಸ್ಥಿತರ ಧರ್ಮಸ್ಥಿತಿಯನಪಹರಿ
ಸುತ ಬಲದಲಿಯವನಿಯಲಿ ನಿರಿಯಣದ ಕಾಲದಲಿ
ಗತಿಗೆಡಿಸಿ ಕೊಂಡೊಯ್ದು ವೈವ
ಸ್ವತನು ನಾಯಕನರಕದೊಳಗ
ದ್ದುತ ಬಹನು ಕುಲಕೋಟಿ ಸಹಿತವನೀಶ ಕೇಳ್ ಎಂದ ॥86॥

೦೮೭ ತಮ್ಮ ಕಾರ್ಯ ...{Loading}...

ತಮ್ಮ ಕಾರ್ಯ ನಿಮಿತ್ತ ಗರ್ವವ
ನೆಮ್ಮಿದರೆ ತದ್ಗರ್ವದಿಂದುರೆ
ದಿಮ್ಮಿತಹುದಾ ಕಾರ್ಯ ಮತ್ರ್ಯ ಚರಾಚರಂಗಳಲಿ
ನಿರ್ಮಮತೆಯಲಿ ನಡೆದುಪಶ್ರುತಿ
ಗುಮ್ಮಹವನೈದುವವೊಲೌಕುವ
ಮರ್ಮಿಗಳನೊಳಹೊಯ್ದು ಕೊಂಬುದು ಭೂಪ ಕೇಳ್ ಎಂದ ॥87॥

೦೮೮ ಅರಸ ಕೇಳೈ ...{Loading}...

ಅರಸ ಕೇಳೈ ಮಾರ್ಗ ಮೂರಾ
ಗಿರುತಿಹವು ಸಂಪೂರ್ಣಧನ ಗುರು
ಪರಿಚರಿಯ ಪರಿವರ್ತನೆಗಳೆಂಬಿನಿತನತಿಗಳೆದು
ತಿರುಗಿ ಬಂದೊಡೆ ನಾಲ್ಕನೆಯ ಮತ
ದೊರಕಲರಿವುದೆ ಕಲೆಗಳನು ಸಂ
ವರಿಸುವ ನರೋತ್ತಮರಿಗವನೀಪಾಲ ಕೇಳ್ ಎಂದ ॥88॥

೦೮೯ ಕಾದುದಕದಾಸ್ನಾನ ಸಿದ್ಧಿಯ ...{Loading}...

ಕಾದುದಕದಾಸ್ನಾನ ಸಿದ್ಧಿಯ
ವೈದಿಕಾಂಗದ ಮಂತ್ರ ಸಾಧನ
ವೇದ ಹೀನರಿಗಿತ್ತ ಫಲವಾ ಶ್ರಾದ್ಧ ಕರ್ಮದಲಿ
ಐದದಿಹ ದಕ್ಷಿಣೆಗಳೆಂಬಿವು
ಬೂದಿಯಲಿ ಬೇಳಿದ ಹವಿಸ್ಸಿನ
ಹಾದಿಯಲ್ಲದೆ ಫಲವನೀಯವು ಭೂಪ ಕೇಳ್ ಎಂದ ॥89॥

೦೯೦ ಇಹಪರದ ಗತಿ ...{Loading}...

ಇಹಪರದ ಗತಿ ದಾನ ಧರ್ಮದ
ಬಹುಳತೆಗಳನು ತತ್ಸ ್ವಭಾವದ
ವಿಹಿತಪುಣ್ಯದ ಬೆಳವಿಗೆಯ ಫಲವೊಂದು ನೂರಾಗಿ
ಬಹುದು ಸದ್ವಂಶದಲಿ ಜನಿಸಿಹ
ಮಹಿಮನಿರೆ ಲೋಕಾಂತರದ ಸುಖ
ವಹುದು ಸಂತಾನಾಭಿವೃದ್ಧಿಯು ನೃಪತಿ ಕೇಳ್ ಎಂದ ॥90॥

೦೯೧ ಚೋರನನು ಕಾಣುತ್ತ ...{Loading}...

ಚೋರನನು ಕಾಣುತ್ತ ಮರಳಿದು
ಚೋರನೆಂದೊಡೆ ಪತಿತನನು ನಿ
ಷ್ಠೂರತನದಿಂ ಪತಿತನೆಂದೊಡೆ ಸಾಮ್ಯದೋಷವದು
ಸಾರುವುದು ಮಿಥ್ಯೋತ್ತರದಲಿ ವಿ
ಚಾರಿಸದೆ ನುಡಿದವರಿಗಿಮ್ಮಡಿ
ನಾರಕದ ಫಲ ತಪ್ಪದವನೀಪಾಲ ಕೇಳ್ ಎಂದ ॥91॥

೦೯೨ ವಿನುತ ಮಧುಕೈಟಭರ ...{Loading}...

ವಿನುತ ಮಧುಕೈಟಭರ ಮೇಧ
ಸ್ಸಿನಲಿ ಮೇದಿನಿಯಾದುದಿದ ನೀ
ನನುಭವಿಸುವೊಡೆ ಪುಣ್ಯಕೀರುತಿಯೆಂಬ ಪರಿಮಳದ
ಹೊನಲಿನಲಿ ತರವಿಡಿದು ಲೇಸಾ
ಗನುಭವಿಸುವುದದಲ್ಲದಿದ್ದೊಡೆ
ಮನುಜ ಮಾಂಸವ ಭಕ್ಷಿಸಿದ ಫಲವರಸ ಕೇಳ್ ಎಂದ ॥92॥

೦೯೩ ತನ್ನ ದಾನವನಪಹರಿಸಿಕೊಂ ...{Loading}...

ತನ್ನ ದಾನವನಪಹರಿಸಿಕೊಂ
ಡನ್ಯರಿತ್ತುದಕಡ್ಡ ಬೀಳುವ
ಧನ್ಯರುಗಳರವತ್ತು ಸಾವಿರ ವರುಷ ಪರಿಯಂತ
ಖಿನ್ನವಹ ವಿಷ್ಠೆಯೊಳು ಕ್ರಿಮಿಗಳ
ಜನ್ಮದಲ್ಲಿಹರಿದನರಿದು ನೀ
ನಿನ್ನು ಕೊಟ್ಟುದನುಳುಹಿಕೊಂಬುದು ಧರ್ಮವಲ್ಲೆಂದ ॥93॥

೦೯೪ ಕರಣ ಮೂರರೊಳಿತ್ತ ...{Loading}...

ಕರಣ ಮೂರರೊಳಿತ್ತ ವಸ್ತುವ
ನಿರಿಸಿಕೊಂಡರೆ ಮಾಸ ಮಾಸಾಂ
ತರದೊಳೊಂದಕೆ ನೂರು ಗುಣದಲಿ ಕೋಟಿ ಪರಿಯಂತ
ಹಿರಿದಹುದು ದಾನ ಪ್ರಶಂಸೆಯ
ನಿರಿಸಿಕೊಂಡಿಹ ದಾನ ನರಕವ
ನೆರಡಕೊಂದೇ ದಾನ ಕಾರಣವೆಂದನಾ ಮುನಿಪ ॥94॥

೦೯೫ ದ್ಯೂತದಲಿ ಮದ್ಯದಲಿ ...{Loading}...

ದ್ಯೂತದಲಿ ಮದ್ಯದಲಿ ಘನ ಕಂ
ಡೂತಿಯಲಿ ನಿದ್ರೆಯಲಿ ಕಲಹ ವಿ
ಘಾತಿಯಲಿ ಮೈಥುನದಲಾಹಾರದಲಿ ಬಳಿಸಂದು
ಕೈತವದ ಉದ್ಯೋಗದಲಿ ದು
ರ್ನೀತಿಯಲಿ ಪರಸತಿಯರಲಿ ಸಂ
ಪ್ರೀತಿ ಬಲಿವುದು ಬೆದಕ ಬೆದಕಲು ಭೂಪ ಕೇಳ್ ಎಂದ ॥95॥

೦೯೬ ದುಷ್ಕೃತವನೆಸಗುವರು ಫಲದಲಿ ...{Loading}...

ದುಷ್ಕೃತವನೆಸಗುವರು ಫಲದಲಿ
ಕಕ್ಕುಲಿಸುವರು ಸುಕೃತವೆಂಬುದ
ಲೆಕ್ಕಿಸರು ತತ್ಫಲವನೇ ಬಯಸುವರು ಮಾನವರು
ಇಕ್ಕ ದೆರೆಯದೆ ಬಿತ್ತಿ ಬೆಳೆಯದೆ
ಪುಕ್ಕಟೆಯ ಸ್ವರ್ಗಾದಿ ಭೋಗವು
ಸಿಕ್ಕಲರಿವುದೆ ರಾಯ ಚಿತ್ತೈಸೆಂದನಾ ಮುನಿಪ ॥96॥

೦೯೭ ವರಶ್ರುತಿ ಸ್ಮ ...{Loading}...

ವರಶ್ರುತಿ ಸ್ಮ ೃತಿಗಳು ಕಣಾ ಭೂ
ಸುರರ ದೃಷ್ಟಿಗಳಿವರೊಳೊಂದಕೆ
ಕೊರತೆಯಾಗಲು ಕಾಣನೆನಿಸುವನೆರಡನರಿಯದಿರೆ
ನಿರುತವಿದು ಜಾತ್ಯಂಧನೆನಿಸುವ
ನರಸ ಕೇಳೀ ಮಾಂಸ ದೃಷ್ಟಿಗ
ಳೆರವಲೇ ಸರ್ವತ್ರ ಸಾಧಾರಣವು ಲೋಕದಲಿ ॥97॥

೦೯೮ ವಾಚಿಸದೆ ವೇದಾರ್ಥ ...{Loading}...

ವಾಚಿಸದೆ ವೇದಾರ್ಥ ನಿಚಯವ
ನಾಚರಿಸದಾಲಸ್ಯದಿಂದು
ತ್ಕೋಚನಾಗಿ ಪರಾನ್ನಪೂರಿತ ತಪ್ತ ತನುವಾದ
ನೀಚನಹ ಭೂಸುರನ ಕರುಳನು
ತೋಚುವಳಲೈ ಮೃತ್ಯುವವನು ನಿ
ಶಾಚರನು ದ್ವಿಜನಲ್ಲ ಚಿತ್ತೈಸೆಂದನಾ ಮುನಿಪ ॥98॥

೦೯೯ ಸರಸಿಜಾಕ್ಷನ ವಿಷ್ಣು ...{Loading}...

ಸರಸಿಜಾಕ್ಷನ ವಿಷ್ಣು ನಾಮ
ಸ್ಮರಣೆಯಲಿ ಶ್ರುತಿ ಮೂಲ ವಾಕ್ಯೋ
ತ್ಕರುಷೆಯಲಿ ಭೂತಕ್ಕೆ ಹಿತವಹ ನಡವಳಿಯನರಿದು
ಪರವಚನವನು ತ್ರಿಕರಣದೊಳು
ಚ್ಚರಿಸಲಾಗದು ಸರ್ವಥಾ ಸ
ತ್ಪುರುಷರಭಿಮತವಿದು ಚಿತ್ತೈಸೆಂದನಾ ಮುನಿಪ ॥99॥

೧೦೦ ಲೋಕ ಸಮ್ಮತವಾವುದದನು ...{Loading}...

ಲೋಕ ಸಮ್ಮತವಾವುದದನು ನಿ
ರಾಕರಿಸುವವರುಗಳು ತಾವೇ
ನಾಕೆವಾಳರೆ ಜಗಕೆ ತಮ್ಮನದಾರು ಬಲ್ಲವರು
ಬೇಕು ಬೇಡೆಂಬುದಕೆ ತಾವವಿ
ವೇಕಿಗಳು ಮೊದಲಿಂಗೆ ಪ್ರಾಮಾ
ಣೀಕರುಗಳಿವರಲ್ಲ ಚಿತ್ತೈಸೆಂದನಾ ಮುನಿಪ ॥100॥

೧೦೧ ಉತ್ತಮರುಗಳ ನಿನ್ದಿಸುತ ...{Loading}...

ಉತ್ತಮರುಗಳ ನಿಂದಿಸುತ ದು
ರ್ವೃತ್ತನಾಗಿಯಧರ್ಮ ಕೋಟಿಯೆ
ನಿತ್ಯವಿಧಿ ತನಗಾಗಿ ಧರ್ಮದ ತಾರತಮ್ಯವನು
ಎತ್ತಲೆಂದರಿಯದೆ ಜಗಕ್ಕೆ ಜ
ಡಾತ್ಮರಾಗಿಹ ವೇದಬಾಹ್ಯರ
ಮೃತ್ಯುದೇವತೆ ಮುರಿದು ಮೋದದೆ ಬಿಡುವಳೇಯೆಂದ ॥101॥

೧೦೨ ಲೋಕದೊಳಗಣ ಪುಣ್ಯ ...{Loading}...

ಲೋಕದೊಳಗಣ ಪುಣ್ಯ ಪಾಪಾ
ನೀಕವನು ಯಮರಾಜನಾಲಯ
ದಾಕೆವಾಳಂಗರುಹುವರು ಹದಿನಾಲ್ಕು ಮುಖವಾಗಿ
ನಾಲ್ಕು ಕಡೆಯಲಿ ಕವಿದು ಬರಿಸುವ
ರೌಕಿ ದಿನದಿನದಲ್ಲಿ ಗರ್ವೋ
ದ್ರೇಕದಲಿ ಮೈಮರೆದು ಕೆಡಬೇಡೆಂದನಾ ಮುನಿಪ ॥102॥

೧೦೩ ಚಕ್ರಿಯೊಬ್ಬಗೆ ಹತ್ತು ...{Loading}...

ಚಕ್ರಿಯೊಬ್ಬಗೆ ಹತ್ತು ಕಡಿಕರ
ಲೆಕ್ಕವಂತಾ ಚಕ್ರಿ ಹತ್ತರ
ಲೆಕ್ಕದೊಳಗಾ ಧ್ವಜಿ ಕಣಾ ಧ್ವಜಿ ಹತ್ತರ ಸಮಾನ
ಮಿಕ್ಕ ವೇಸಿಗೆ ವೇಸಿ ಹತ್ತರ
ಲೆಕ್ಕವೊಬ್ಬರಸಂಗೆ ಪಾತಕ
ವೊಕ್ಕಲಿಕ್ಕುವುದರಸುತನ ಸಾಮಾನ್ಯವಲ್ಲೆಂದ ॥103॥

೧೦೪ ಬಲುಕರಿಸಿ ಭೂಮಿಯೊಳಗೊನ್ದಂ ...{Loading}...

ಬಲುಕರಿಸಿ ಭೂಮಿಯೊಳಗೊಂದಂ
ಗುಲವನೊತ್ತಿದವಂಗೆ ಪಶು ಸಂ
ಕುಲದಲೊಂದೇ ಗೋವನಪಹರಿಸಿದ ದುರಾತ್ಮಂಗೆ
ಅಳುಪಿ ಕನ್ಯಾ ರತ್ನ ದೊಳಗೊ
ಬ್ಬಳನು ಭೋಗಿಸಿದಂಗೆ ನರಕದೊ
ಳಿಳಿವುದಲ್ಲದೆ ಬೇರೆ ಗತಿಯಿಲ್ಲೆಂದನಾ ಮುನಿಪ ॥104॥

೧೦೫ ದಾನವಿರಹಿತರಾಗಿ ಜನಿಸಿದ ...{Loading}...

ದಾನವಿರಹಿತರಾಗಿ ಜನಿಸಿದ
ಮಾನವರು ದಾರಿದ್ರರದರಿಂ
ಹೀನಸುಕೃತಿಗಳಾಗಿಯದರಿಂ ಘೋರತರ ನರಕ
ಆ ನರಕದಿಂ ಮರಳಿ ಪಾತಕ
ಯೋನಿ ಮರಳಿ ದರಿದ್ರವದು ತಾ
ನೇನ ಮಾಡಿಯು ಬೆನ್ನಬಿಡದವನೀಶ ಕೇಳ್ ಎಂದ ॥105॥

೧೦೬ ಪಾಕಶಾಸನನೈದಿ ವೃತ್ರನ ...{Loading}...

ಪಾಕಶಾಸನನೈದಿ ವೃತ್ರನ
ಢಾಕುಗೆಡಿಸಿ ದಧೀಚಿಯಸ್ಥಿಯ
ಲೌಕಿ ಹೊಯ್ಯಲು ದಾನವನ ತನು ನೀರೊಳಡಗೆಡೆಯೆ
ತೂಕ ಕುಂದಿ ಜಲಾಧಿ ದೇವತೆ
ಯಾ ಕಪರ್ದಿಯ ಕರುಣದಲಿ ದ
ರ್ಭಾಕೃತಿಯ ಕೈಕೊಂಡುದವನೀಪಾಲ ಕೇಳ್ ಎಂದ ॥106॥

೧೦೭ ಆದಿಯಲಿ ಕಮಲಾಸನನು ...{Loading}...

ಆದಿಯಲಿ ಕಮಲಾಸನನು ಮಧು
ಸೂದನನು ಮಧ್ಯದಲಿ ಮೇಲಣ
ಹಾದಿಯಲಿ ಗಿರಿಜೇಶನಿರೆ ತ್ರೈಮೂರ್ತಿಮಯವಾಗಿ
ಕಾದು ಕೊಂಡಿಹರಖಿಳ ಲೋಕವ
ನೈದೆ ದರ್ಭಾಂಕುರದ ಮಹಿಮೆಯ
ಭೇದವನು ಬಣ್ಣಿಸುವನಾವನು ಭೂಪ ಕೇಳ್ ಎಂದ ॥107॥

೧೦೮ ಬೆರಳ ಮೊದಲಲಿ ...{Loading}...

ಬೆರಳ ಮೊದಲಲಿ ಭೂಸುರರು ನಡು
ವೆರಳೆಡೆಗಳಲಿ ಪಾರ್ಥಿವರು ತುದಿ
ವೆರಳೊಳಗೆ ವೈಶ್ಯರುಗಳೀ ಕ್ರಮದಲಿ ಪವಿತ್ರವಿದು
ಧರಿಸಬೇಹುದು ದಕ್ಷಿಣ ಕರಾಂ
ಬುರುಹದಲಿ ದಿನದಿನದ ಸಂಧ್ಯಾಂ
ತರದ ಸಮಯದಲರಸ ಚಿತ್ತೈಸೆಂದನಾ ಮುನಿಪ ॥108॥

೧೦೯ ಮೇರೆದಪ್ಪಿದ ಜಪ ...{Loading}...

ಮೇರೆದಪ್ಪಿದ ಜಪ ಸುಕಲ್ಪಿತ
ಧಾರೆಯುಡುಗಿದ ದಾನ ದರ್ಭಾ
ಕಾರ ವಿರಹಿತವಾದ ಸಂಧ್ಯಾವಂದನಾದಿಗಳು
ಪಾರವೆಯ್ದದ ಶೌಚ ವಿನಯ ವಿ
ಹಾರವಿಲ್ಲದ ಪೂಜನೆಗಳುಪ
ಕಾರವಹುದೇ ರಾಯ ಚಿತ್ತೈಸೆಂದನಾ ಮುನಿಪ ॥109॥

೧೧೦ ದೇವತಾಸ್ಥಾನದಲಿ ವಿಪ್ರ ...{Loading}...

ದೇವತಾಸ್ಥಾನದಲಿ ವಿಪ್ರ ಸ
ಭಾವಳಯದಲಿ ರಾಜಪುರುಷರ
ಸೇವೆಯಲಿ ಗುರುಸದನದಲಿ ನದಿಯಲಿ ತಟಾಕದಲಿ
ಗೋವುಗಳ ನೆರವಿಯಲಿ ವರ ವೃಂ
ದಾವನದೊಳುಪಹತಿಯ ಮಾಡುವು
ದಾವ ಗುಣ ಗರುವರಿಗೆ ಚಿತ್ತೈಸೆಂದನಾ ಮುನಿಪ ॥110॥

೧೧೧ ದೆಸೆಗಳೇ ವಾಸಸ್ಸು ...{Loading}...

ದೆಸೆಗಳೇ ವಾಸಸ್ಸು ರಾಜ್ಯ
ಪ್ರಸರಣವು ನಿರ್ಲಜ್ಜೆ ಜಟೆ ರಂ
ಜಿಸುವ ಧೂಳೀ ದೂಸರದ ಗಂಗಾಧರನವೋಲು
ಎಸೆವ ಸುತರುಗಳಿಲ್ಲದಿರೆ ಶೋ
ಭಿಸುವುದೇ ಸಂಸಾರವೆಂಬುದು
ವಸುಧೆಯೊಳು ಪುಣ್ಯಾಧಿಕರುಗಳಿಗಲ್ಲದಿಲ್ಲೆಂದ ॥111॥

೧೧೨ ಗುರುಸುತನವೋಲಾಯು ನೀಲಾಂ ...{Loading}...

ಗುರುಸುತನವೋಲಾಯು ನೀಲಾಂ
ಬರನವೊಲು ಬಲ ದಶರಥನವೋಲ್
ಸಿರಿ ನದೀಜನವೋಲು ಶೌರ್ಯವು ರಘುಪತಿಯವೋಲು
ಅರಿವಿನಾಶನ ನಹುಷನವೊಲೈ
ಶ್ವರಿಯ ಮಾರುತಿಯವೊಲು ಗತಿ ಸಂ
ವರಿಸುವುದು ಶಿವನೊಲಿದವರುಗಳಿಗಲ್ಲದಿಲ್ಲೆಂದ ॥112॥

೧೧೩ ಕ್ಷಿತಿಯವೊಲು ಪಾವನತೆ ...{Loading}...

ಕ್ಷಿತಿಯವೊಲು ಪಾವನತೆ ಕುರು ಭೂ
ಪತಿಯವೋಲಭಿಮಾನ ಲಕ್ಷಿ ್ಮೀ
ಪತಿಯವೊಲು ಸತ್ಕೀರ್ತಿ ವಿದುರನವೋಲು ವಿಜ್ಞಾನ
ಕ್ಷಿತಿಯವೊಲು ಸೈರಣೆ ಸುಹೃತ್ಸಂ
ತತಿಯವೊಲು ಪರಿಣಾಮ ಕುಂತೀ
ಸುತರವೊಲು ಸತ್ಯಾಧಿಕರು ಲೋಕದೊಳಗಿಲ್ಲೆಂದ ॥113॥

೧೧೪ ಗಗನದಗಲದಿನುಗುವ ವೃಷ್ಟಿಯೊ ...{Loading}...

ಗಗನದಗಲದಿನುಗುವ ವೃಷ್ಟಿಯೊ
ಳೊಗೆದ ಕೀಲಾಲವು ಸಮುದ್ರವ
ಹೊಗುವ ನದಿ ನಾನಾ ಪ್ರಕಾರದ ರೂಪುಗಳಲೆಸೆವ
ಒಗುಮಿಗೆಯ ದೈವದ ಪದಾಂಬುಜ
ಯುಗಳದರ್ಚನೆ ಪೂಜನೆಗಳಿವು
ಜಗದುದರನನು ಮುಟ್ಟವೇ ಭೂಪಾಲ ಕೇಳ್ ಎಂದ ॥114॥

೧೧೫ ಜಲದೊಳಗೆ ವಾರಾಹ ...{Loading}...

ಜಲದೊಳಗೆ ವಾರಾಹ ವಿಷ್ಣು
ಸ್ಥಳದೊಳಗೆ ವಾಮನನು ವನ ಸಂ
ಕುಳದೊಳಗೆ ನರಸಿಂಹನಾಗಿಯೆ ಭಕ್ತನಿಕರವನು
ಸಲಹುತಿಹನೊಮ್ಮೆಯು ಜಗತ್ರಯ
ದೊಳಗು ಹೊರಗೆಂದೆನ್ನದನುದಿನ
ಜಲರುಹಾಕ್ಷನು ಕೃಷ್ಣ ಕೇಶವನಲ್ಲದಿಲ್ಲೆಂದ ॥115॥

೧೧೬ ಕತ್ತಲೆಯ ಕಾಲಾಟ ...{Loading}...

ಕತ್ತಲೆಯ ಕಾಲಾಟ ಸೂರ್ಯನ
ನೊತ್ತುವುದೆ ದುಷ್ಕರ್ಮ ಕೋಟಿಗ
ಳೆತ್ತ ಮುಟ್ಟುವುವೈ ಮಹಾಪುರುಷರನು ಖಗಪತಿಯ
ತತ್ತುದೇ ವಿಷ ಕೃಷ್ಣರಾಯನ
ಭಕ್ತರನು ಪರಿಭವಿಸುವುದು ತಾ
ನೆತ್ತಣದು ಜಡಜೀವರಿಗೆ ಹೇಳೆಂದನಾ ಮುನಿಪ ॥116॥

೧೧೭ ಅರುಹಬಾರದು ಮುನ್ದೆ ...{Loading}...

ಅರುಹಬಾರದು ಮುಂದೆ ಬಹ ದಿನ
ಬಿರಿಸು ನೀನೆಚ್ಚೆತ್ತು ನಡೆ ಮೈ
ಮರೆಯದಿರು ನಿನ್ನಾತ್ಮಜರ ವೈರಾನುಬಂಧದಲಿ
ಬರಿದಹುದು ಬ್ರಹ್ಮಾಂಡ ನೀನದ
ನರಿಯೆ ಮೇಲಣ ತಾಗು ಬಾಗಿನ
ಹೊರಿಗೆ ದೈವಾಧೀನವಾಗಿಹುದೆಂದನಾ ಮುನಿಪ ॥117॥

೧೧೮ ತೆರಹುಗುಡದೆ ...{Loading}...

ತೆರಹುಗುಡದೆ ಧರಿತ್ರಿಯೊಳಗೀ
ಡಿರಿದ ದೈತ್ಯ ಸಹಸ್ರ ಕೋಟಿಯ
ನಿರಿದು ಭೂಭಾರವನಿಳುಹಿ ನಿರ್ಜರರ ದುಗುಡವನು
ಹರಿದು ಹಾಯಿಕಿ ಭಕ್ತರನು ನೆರೆ
ಮೆರೆಯಲೋಸುಗ ಜನಿಸಿದನು ಹರಿ
ಯರಿಯಲಾ ಶ್ರೀಕೃಷ್ಣರಾಯನು ಮನುಜನಲ್ಲೆಂದ ॥118॥

೧೧೯ ಆತನಾ ಪಾಣ್ಡವರ ...{Loading}...

ಆತನಾ ಪಾಂಡವರ ಹರಿಬವ
ನಾತು ಪಾರ್ಥನ ರಥಕೆ ತಾನೇ
ಸೂತನಾದನು ನಿಮಗೆ ಜಯವೆಲ್ಲಿಯದು ಭೂಪತಿಯೆ
ಭೂತಳವನೊಪ್ಪಿಸುವುದಸುರಾ
ರಾತಿಯನು ಮರೆಹೊಕ್ಕು ಬದುಕುವು
ದೀ ತತುಕ್ಷಣವಲ್ಲದಿರ್ದೊಡೆ ಕೆಡುವಿರಕಟೆಂದ ॥119॥

೧೨೦ ಜಲಧಿಯೊಳು ದುಗ್ಧಾಬ್ಧಿ ...{Loading}...

ಜಲಧಿಯೊಳು ದುಗ್ಧಾಬ್ಧಿ ತೀರ್ಥಾ
ವಳಿಗಳೊಳು ಸುರನದಿ ಮುನೀಶ್ವರ
ರೊಳಗೆ ವೇದವ್ಯಾಸನಾ ವ್ರತಿಗಳೊಳು ಹನುಮಂತ
ಜಲರುಹಾಕ್ಷನೆ ದೈವದೊಳು ಕೇ
ಳುಳಿದ ಧರಣೀಪಾಲರೊಳಗ
ಗ್ಗಳೆಯನೈ ಧರ್ಮಜನು ಚಿತ್ತೈಸೆಂದನಾ ಮುನಿಪ ॥120॥

೧೨೧ ಈ ಪರಿಯ ...{Loading}...

ಈ ಪರಿಯ ಬೋಧೆಯಲಿ ನೃಪನನು
ತಾಪವನು ಮಾಣಿಸಿ ಕುಬುದ್ಧಿ
ವ್ಯಾಪಕನು ಧೃತರಾಷ್ಟ್ರನೆಂಬಪಕೀರ್ತಿಯನು ಬಿಡಿಸಿ
ಕಾಪಥಂಗಳ ನಿಲಿಸಿ ತತ್ವ ಕ
ಳಾಪ ವಿಮಲಜ್ಞಾನದುದಯದ
ರೂಪು ತಾನೆಂಬಂತೆ ಸೂರ್ಯೋದಯವ ಕಾಣಿಸಿದ ॥121॥

೧೨೨ ಧರಣಿಪನ ಸನ್ತೈಸಿದನು ...{Loading}...

ಧರಣಿಪನ ಸಂತೈಸಿದನು ಮುನಿ
ವರನು ತನ್ನಾಶ್ರಮಕೆ ತಿರುಗಿದ
ನುರುತರ ಪ್ರೇಮದಲಿ ಧೃತರಾಷ್ಟ್ರಾವನೀಶ್ವರನು
ಹರಿಯದಮಳಾನಂದ ರಸದಲಿ
ಹೊರೆದು ಹೊಂಪುಳಿಯೋಗಿ ಲಕ್ಷಿ ್ಮೀ
ಧರನ ನೆನೆದನು ರಾಯ ಗದುಗಿನ ವೀರ ನರಯಣನ ॥122॥

+೦೪ ...{Loading}...