೦೧

೦೦೦ ಸೂ ವೈರಿ ...{Loading}...

ಸೂ. ವೈರಿ ಭಟಕುಲ ವಿಲಯ ರುದ್ರನು
ದಾರತೇಜೋಭ್ರದ್ನನಾ ಭಾ
ಗೀರಥೀಸುತ ಧರಿಸಿದನು ಕುರುಸೇನೆಯೊಡೆತನವ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಕೌರವರಾಯನಲ್ಲಿಗೆ
ಕಾಳೆಗದ ಕಾತರಿಗರಿವರಟ್ಟಿದರು ಭಟ್ಟರನು
ಕೇಳಿದನು ಕುರುಭೂಮಿಯಲಿ ರಿಪು
ಜಾಲದುದಯವನಂದು ಕುರುಕುಲ
ಮೌಳಿ ಕರೆಸಿದನಾಪ್ತರನು ಪರಿಮಿತಕೆ ಮಂತ್ರಿಗಳ ॥1॥

೦೦೨ ರವಿಜ ಗುರುಸುತ ...{Loading}...

ರವಿಜ ಗುರುಸುತ ಶಲ್ಯ ಕಲಶೋ
ದ್ಭವರು ಸೌಬಲರಾದಿಯಾದವ
ರವನಿಪಾಲನ ಕಂಡರಂದೇಕಾಂತ ಭವನದಲಿ
ಅವನಿಪತಿ ಹದನೇನು ರಿಪುಪಾಂ
ಡವರ ಬೀಡಿನ ಗುಪ್ತದನುಮಾ
ನವನು ಚಿತ್ತಯಿಸಿದರೆ ಬೆಸಸುವುದೆನಲು ನೃಪ ನುಡಿದ ॥2॥

೦೦೩ ಸನ್ದಣಿಸಿ ಕುರುಭೂಮಿಯಲಿ ...{Loading}...

ಸಂದಣಿಸಿ ಕುರುಭೂಮಿಯಲಿ ತಾ
ಮಂದಿ ಬಿಟ್ಟುದು ನಾಡ ಗಾವಳಿ
ಬಂದುದಲ್ಲಿಗೆ ಕಳುಹಿದರು ದೂತರನು ದುರ್ಜನರು
ನಂದಗೋಪನ ಮಗನ ಕೊಂಡೆಯ
ದಿಂದ ಕಲಿಯೇರಿದರು ಕೃಪಣರ
ಕೊಂದಡಹುದಪಕೀರ್ತಿಯಿದಕಿನ್ನೇನು ಹದನೆಂದ ॥3॥

೦೦೪ ಭೂರಿ ನೆರೆದುದು ...{Loading}...

ಭೂರಿ ನೆರೆದುದು ನಾಡ ಗಾವಳಿ
ಭಾರ ಧೃಷ್ಟದ್ಯುಮ್ನನದು ಗಡ
ಜಾರದೇವನ ಜೋಕೆ ಮಂದಿಯ ಕಾಹು ಕಟ್ಟು ಗಡ
ಧಾರುಣಿಯ ಲಂಪಟರು ಕದನವ
ಹಾರಿ ಬಂದರು ಗಡ ಕೃತಾಂತನ
ಭೂರಿ ಭೂತದ ಧಾತುವಾಯಿತು ಲೇಸು ಲೇಸೆಂದ ॥4॥

೦೦೫ ನಾಡ ಮನ್ನೆಯ ...{Loading}...

ನಾಡ ಮನ್ನೆಯ ಗಿನ್ನೆಯರುಗಳ
ಕೂಡಿಕೊಂಡೆಮ್ಮೊಡನೆ ಕಲಹವ
ಬೇಡಿ ಮಹಿಪಾಲನೆಯ ಪಟ್ಟಕೆ ನೊಸಲನೊಡ್ಡುವರು
ನೋಡಿರೈ ನಿರುಪಮವಲಾ ಕಾ
ಡಾಡಿಗಳ ಕಲಿತನವನೆನೆ ಮಾ
ತಾಡಿದನು ಕಲಿಕರ್ಣನಾತನ ಮನದ ಮೈಸಿರಿಯ ॥5॥

೦೦೬ ನೆರೆದ ದೊದ್ದೆಯನೊರಸಬಹುದೇ ...{Loading}...

ನೆರೆದ ದೊದ್ದೆಯನೊರಸಬಹುದೇ
ನರಿದು ಜೀಯ ವಿರೋಧಿರಾಯರ
ನೆರವಿ ತಾನೇಗುವುದು ಗಹನವೆ ನಿನ್ನ ವೀರರಿಗೆ
ಕರಿಗಳಿಗೆ ಪ್ರತ್ಯೇಕವಿವೆ ಕೇ
ಸರಿಗಳೆಮ್ಮನು ಕಳುಹು ನಿಮ್ಮಡಿ
ಪರಿಮಿತಕೆ ಬರಲಾವ ಭಾರವಿದೆಂದನಾ ಕರ್ಣ ॥6॥

೦೦೭ ಕಲಕುವೆನು ಪಾಣ್ಡವರ ...{Loading}...

ಕಲಕುವೆನು ಪಾಂಡವರ ಸೇನಾ
ಜಲಧಿಯನು ತೇರಿನಲಿ ತಲೆಗಳ
ಕಳುಹುವೆನು ಕದನದಲಿ ಕೈದೋರಿದ ಕುಠಾರಕರ
ಹೊಳಲ ಹೊರಶೂಲದಲಿ ರಿಪುಗಳ
ಸೆಳಸುವೆನು ತಾ ವೀಳೆಯವನೆಂ
ದಲಘುಭುಜಬಲ ಕರ್ಣ ನುಡಿದನು ಕೌರವೇಂದ್ರಂಗೆ ॥7॥

೦೦೮ ಕುಲಿಶ ಪರಿಯನ್ತೇಕೆ ...{Loading}...

ಕುಲಿಶ ಪರಿಯಂತೇಕೆ ನೇಗಿಲ
ಬಳಿಯ ಹುಲುವೆಟ್ಟಕೆ ವಿರೋಧಿಗ
ಳಳಿಬಲಕೆ ಕಲಿಕರ್ಣ ನೀ ಪರಿಯಂತ ಸಂಗರವೆ
ಹೊಳಲ ಪರಿವಾರಕ್ಕೆ ಸಾರಿಸು
ಕೆಲಬಲದ ರಾಯರಿಗೆ ದೂತರ
ಕಳುಹಿ ನೆರಹಿಸು ಕಾದಿಸೆಂದನು ಕೌರವರ ರಾಯ ॥8॥

೦೦೯ ಮೂಗಿನಲಿ ಬೆರಳಿಟ್ಟು ...{Loading}...

ಮೂಗಿನಲಿ ಬೆರಳಿಟ್ಟು ಮಕುಟವ
ತೂಗಿದನು ಚತುರಂಗಬಲವನು
ಬೇಗದಲಿ ಕೊಳುಗುಳಕೆ ಕಳುಹಿಸು ಗೆಲಿಸು ಕಾಳೆಗವ
ತಾಗಿ ಬಾಗದ ಮರುಳುತನದು
ದ್ಯೋಗವಿದಕೇನೆಂಬೆನಕಟಕ
ಟೀಗಲದ್ದುದು ಕೌರವಾನ್ವಯವೆಂದನಾ ದ್ರೋಣ |9॥

೦೧೦ ಹಿನ್ದೆ ಗಳಹುವನಿವನು ...{Loading}...

ಹಿಂದೆ ಗಳಹುವನಿವನು ಬಾಯಿಗೆ
ಬಂದ ಪರಿಯಲಿ ಪಾಂಡುತನಯರ
ಕೊಂದನಾಗಳೆ ಕರ್ಣನಿನ್ನಾರೊಡನೆ ಸಂಗ್ರಾಮ
ಹಿಂದೆ ಹಮ್ಮಿದ ಸಮರದೊಳು ನಡೆ
ತಂದು ಖೇಚರನಡಸಿ ಕಟ್ಟಿದ
ಡಂದು ನಿನ್ನನು ಬಿಡಿಸಿದವನರ್ಜುನನೊ ರವಿಸುತನೊ ॥10॥

೦೧೧ ಸಾಹಸಿಗಳಲ್ಲಿಲ್ಲ ಹರಿ ...{Loading}...

ಸಾಹಸಿಗಳಲ್ಲಿಲ್ಲ ಹರಿ ತುರು
ಗಾಹಿ ಪಾಂಡವರೈವರಡವಿಯ
ಮೇಹುಗಾರರು ಬಂದ ಭೂಭುಜರೆಲ್ಲ ತಾ ನೆರವಿ
ಆಹವಕೆ ನಿನ್ನೂರ ತಳವರ
ಗಾಹಿನವರನು ಕಳುಹುವುದು ಸಂ
ದೇಹವೇ ನೀನಿಲ್ಲಿ ಸುಖದಲಿ ರಾಜ್ಯ ಮಾಡೆಂದ ॥11॥

೦೧೨ ಎಲೆ ಸುಯೋಧನ ...{Loading}...

ಎಲೆ ಸುಯೋಧನ ಕಾಳುಗೆಡೆದರೆ
ಫಲವನಿದರಲಿ ಕಾಣೆನಹಿತರ
ಬಲದ ಭಾರಣೆ ಬಿಗುಹು ಭೀಮಾರ್ಜುನರು ಬಲ್ಲಿದರು
ನಳಿನನಾಭನ ಮಂತ್ರಶಕ್ತಿಯ
ಬಲುಹು ನೀವ್ ನಿರ್ದೈವರವರ
ಗ್ಗಳ ಸದೈವರು ಕೆಟ್ಟಿರಿನ್ನೇನೆಂದನಾ ದ್ರೋಣ ॥12॥

೦೧೩ ಅಸುರರಿಪುವಿನ ಮಾತ ...{Loading}...

ಅಸುರರಿಪುವಿನ ಮಾತ ನೀ ಮ
ನ್ನಿಸದೆ ಕೌರವಕುಲವನದ್ದಿದೆ
ನುಸಿಗಳಿವದಿರು ಮುನಿದು ಪಾರ್ಥನನೇನ ಮಾಡುವರು
ಅಸುರರಲಿ ಸುರರಲಿ ಭುಜಂಗ
ಪ್ರಸರದಲಿ ಭೀಮಾರ್ಜುನರ ಸೈ
ರಿಸುವರುಂಟೇ ಕೆಟ್ಟಿರಿನ್ನೇನೆಂದನಾ ದ್ರೋಣ ॥13॥

೦೧೪ ಅವರಿಗಸುರಾನ್ತಕ ಸಹಾಯನು ...{Loading}...

ಅವರಿಗಸುರಾಂತಕ ಸಹಾಯನು
ನಿವಗೆ ಗಂಗಾಸುತನ ಬಲವಾ
ಹವವನೀತನ ನೇಮದಲಿ ನೆಗಳುವುದು ನೀತಿಯಿದು
ಅವರಿವರ ಮಾತಿನಲಿ ಫಲವಿ
ಲ್ಲವನಿಪತಿ ಕೇಳೆನಲು ಕಲಶೋ
ದ್ಭವನ ಮತದಲಿ ಬಳಿಕ ಮಣಿದನು ಕೌರವರ ರಾಯ ॥14॥

೦೧೫ ಮತವಹುದು ತಪ್ಪಲ್ಲ ...{Loading}...

ಮತವಹುದು ತಪ್ಪಲ್ಲ ಗಂಗಾ
ಸುತನ ತಿಳುಹುವ ವೀರಪಟ್ಟವ
ನತುಳ ಬಲಭೀಷ್ಮಂಗೆ ಕಟ್ಟುವೆನೆನುತ ಕುರುರಾಯ
ಮತದ ನಿಶ್ಚಯದಿಂದ ಗುರು ಗುರು
ಸುತನ ಕಳುಹಿದನಿತ್ತಲಬುಜ
ಪ್ರತತಿಯುತ್ಸಹವಡಗೆ ಪಡುವಣ ಕಡಲೊಳಿನನಿಳಿದ ॥15॥

೦೧೬ ವಿನುತ ಸನ್ಧ್ಯಾದೇವಿಗಭಿವಂ ...{Loading}...

ವಿನುತ ಸಂಧ್ಯಾದೇವಿಗಭಿವಂ
ದನ ಜಪಾದಿ ಸಮಸ್ತ ದೇವಾ
ರ್ಚನೆಯ ಮಾಡಿಯೆ ರವಿತನೂಜನ ಕರಸಿ ಪಂತಿಯಲಿ
ಜನಪನಾರೋಗಿಸಿದನಾಪ್ತಾ
ವನಿಪ ಸಚಿವರು ಸಹಿತ ಭೀಷ್ಮನ
ಮನೆಗೆ ಬಂದನು ಕೌರವೇಶ್ವರನಂದಿನಿರುಳಿನಲಿ ॥16॥

೦೧೭ ಮುನ್ದೆ ಹರಿದರು ...{Loading}...

ಮುಂದೆ ಹರಿದರು ಕೈಯ ಕಂಬಿಯ
ಸಂದಣಿಯ ಪಡೆವಳರು ಗಂಗಾ
ನಂದನಂಗೀ ಹದನನರುಹಲು ಬಂದನಿದಿರಾಗಿ
ಕಂದುಮೋರೆಯ ರಾಯನನು ತೆಗೆ
ದಂದಣದೊಳಾಲಿಂಗಿಸುತ ನಲ
ವಿಂದ ಮನ್ನಿಸಿ ತಂದನರಮನೆಗುಚಿತವಚನದಲಿ ॥17॥

೦೧೮ ಏನಿರುಳು ನೀ ...{Loading}...

ಏನಿರುಳು ನೀ ಬಂದ ಹದನೆಲೆ
ಮಾನನಿಧಿ ಬೇಕಾದರೆಮ್ಮನು
ನೀನು ಕರೆಸುವುದರಿಪುವುದು ನಿಜಕಾರ್ಯಸಂಗತಿಯ
ಏನ ಹೇಳುವೆ ನಗೆಯನನುಸಂ
ಧಾನದಲಿ ಪಾಂಡವರು ಕುರುಭೂ
ಮೀ ನಿವಾಸಕೆ ಬಂದು ಬಿಟ್ಟರು ಕಿರಿದು ದಳಸಹಿತ ॥18॥

೦೧೯ ಹರಿಯ ಹಿಸುಣಿಕೆಯವರ ...{Loading}...

ಹರಿಯ ಹಿಸುಣಿಕೆಯವರ ಚಿತ್ತವ
ಬೆರಸಿ ವೈರವ ಬೆಳಸಿ ಬಂದರು
ಧರೆಯ ಭಾಗವ ಬೇಡಿ ಕದನವ ಮಸೆದರೆಮ್ಮೊಡನೆ
ಹರನ ಸಮದಂಡಿಗಳು ನೀವೆಮ
ಗಿರಲು ಜಯಿಸುವ ವೀರನಾವನು
ಮರುಳುತನವನು ಧರ್ಮಪುತ್ರನೊಳರಿಯಲಾಯ್ತೆಂದ ॥19॥

೦೨೦ ಬನ್ದರೇ ಪಾಣ್ಡವರು ...{Loading}...

ಬಂದರೇ ಪಾಂಡವರು ಸುದ್ದಿಯ
ತಂದರೇ ನಿನ್ನವರು ನಿನಗೇ
ನೆಂದು ಭಾಷೆಯ ಕೊಟ್ಟರೀ ಕರ್ಣಾದಿ ನಾಯಕರು
ಇಂದು ಸಂತತಿಗುರುವರಲ್ಲಾ
ಬಂದರೇನಪರಾಧವೇ ಇ
ನ್ನೆಂದು ಪರಿಯಂತವರು ನವೆವರು ಎಂದನಾ ಭೀಷ್ಮ ॥20॥

೦೨೧ ಜಗದ ಗುರುವಲ್ಲಾ ...{Loading}...

ಜಗದ ಗುರುವಲ್ಲಾ ಮುರಾಂತಕ
ನಗಣಿತೋಪಮಮಹಿಮನಲ್ಲಾ
ಸಗುಣ ನಿರ್ಗುಣನಾ ಮಹಾತ್ಮನನಂತ ರೂಪನನು
ವಿಗಡಿಸಲು ಜಯವಹುದೆ ಜಾಣರ
ಬಗೆಗೆ ಬಹುದೇ ನಿನ್ನ ಮತವೆಲೆ
ಮಗನೆ ಮರುಳಾದೈ ಮದಾಂಧರ ಮಾತುಗಳ ಕೇಳಿ ॥21॥

೦೨೨ ಮಿಕ್ಕ ಮಾತೇಕಿನ್ನು ...{Loading}...

ಮಿಕ್ಕ ಮಾತೇಕಿನ್ನು ನೀ ಹಿಂ
ದಿಕ್ಕಿ ಕೊಂಬರೆ ಕೊಲುವನಾವನು
ಮಕ್ಕಳಾವೆನಬೇಡ ಬಲ್ಲೆವು ನಿನ್ನ ವಿಕ್ರಮವ
ಹೊಕ್ಕು ಹಗೆಗಳ ಹೊಯ್ದ ದಿಗುಬಲಿ
ಯಿಕ್ಕಿ ನನ್ನಯ ಹರುಷಜಲಧಿಯ
ನುಕ್ಕಿಸಲು ಬೇಕೆನಲು ಕೇಳಿದು ಭೀಷ್ಮನಿಂತೆಂದ ॥22॥

೦೨೩ ದೈವಬಲವವರಲ್ಲಿ ನೀವೇ ...{Loading}...

ದೈವಬಲವವರಲ್ಲಿ ನೀವೇ
ದೈವಹೀನರು ಧರ್ಮಪರರವ
ರೈವರೂ ಸತ್ಪುರುಷಶೀಲರು ನೀವಧಾರ್ಮಿಕರು
ಮುಯ್ವನಾನುವುದವರ್ಗೆ ಭುವನವು
ಬೈವುದೈ ನಿಮ್ಮಿನಿಬರನು ನಿಮ
ಗೈವಡಿಯ ಸಹಸಿಗಳವರು ದುರ್ಬಲರು ನೀವೆಂದ ॥23॥

೦೨೪ ದಯವನತ್ತಲು ತಿದ್ದಿ ...{Loading}...

ದಯವನತ್ತಲು ತಿದ್ದಿ ನಮ್ಮನು
ಭಯಮಹಾಬ್ಧಿಯೊಳದ್ದಿ ಸಮರದ
ಜಯವನವರಿಗೆ ಮಾಡಿ ನಮ್ಮಭಿಮತವ ನೀಗಾಡಿ
ನಯವ ನೀವೊಡ್ಡುವರೆ ನಿಮ್ಮನು
ನಿಯಮಿಸುವರಾರುಂಟು ಭಾಗ್ಯೋ
ದಯವಿಹೀನನು ತಾನೆನುತ ಕುರುರಾಯ ಬಿಸುಸುಯ್ದ ॥24॥

೦೨೫ ಉಚಿತವನು ನಾನರಿಯೆ ...{Loading}...

ಉಚಿತವನು ನಾನರಿಯೆ ವಾರ್ಧಕ
ರಚಿತ ನಿಜವನು ನುಡಿಯೆ ನಿನಗವು
ರುಚಿಸವೇ ಮಾಣಲಿಯದಂತಿರಲೀ ಕುಮಂತ್ರಿಗಳ
ವಚನವತಿಗಾಢದಲಿ ನಟ್ಟುದು
ಸಚಿವ ನಯವಿನ್ನೇಕೆ ಸೇನಾ
ನಿಚಯಕೆಮ್ಮನು ಮೊದಲಿಗನ ಮಾಡರಸ ಹೋಗೆಂದ ॥25॥

೦೨೬ ಖಳನ ಕಳುಹಿದನತಿಬಳನು ...{Loading}...

ಖಳನ ಕಳುಹಿದನತಿಬಳನು ತ
ನ್ನೊಳಗೆ ನೆನೆದನು ಪಾಂಡುನಂದನ
ರುಳಿವು ತನ್ನದು ಮೀರಿ ಕಾದುವಡಸುರರಿಪುವಿಹನು
ಅಳುಕಿ ಕಾದುವಡಿತ್ತ ಹಾವಿನ
ಹಳವಿಗೆಯ ಕಡುಮೂರ್ಖನಿಗೆ ಬೆಂ
ಬಲವ ಕಾಣೆನು ತನಗೆ ಹದನೇನೆನುತ ಚಿಂತಿಸಿದ ॥26॥

೦೨೭ ಆದಡೇನಿದಿರಾದ ರಿಪುಬಲ ...{Loading}...

ಆದಡೇನಿದಿರಾದ ರಿಪುಬಲ
ವಾದುದನು ಸಂಹರಿಸಿ ಮಕ್ಕಳ
ಕಾದು ಬಿಸುಡುವೆನೊಡಲನಾ ಸಂಗ್ರಾಮಭೂಮಿಯಲಿ
ಆದುದಾಗಲಿ ಬಳಿಕ ಮಾಡುವ
ಭೇದ ಬೇರಿಲ್ಲೆನುತ ಹೃತ್ಸಂ
ವಾದವನು ಬೀಳ್ಕೊಟ್ಟು ಗಂಗಾಸೂನು ಪವಡಿಸಿದ ॥27॥

೦೨೮ ಮಗನೊಡನೆ ಮೂದಲಿಸಿ ...{Loading}...

ಮಗನೊಡನೆ ಮೂದಲಿಸಿ ಭೀಷ್ಮನು
ಹೊಗುವ ಗಡ ಪರಸೇನೆಯನು ಕಾ
ಳೆಗವ ನೋಡುವೆನೆಂಬವೊಲು ತಲೆದೋರಿದನು ದಿನಪ
ನಗೆಯಡಗಿ ನಾಚಿದವು ಕುಮುದಾ
ಳಿಗಳು ಮುಂಗಾಣಿಕೆಯ ಹರುಷದೊ
ಳೊಗೆದು ವಿರಹವ ಬೀಳುಕೊಟ್ಟುವು ಜಕ್ಕವಕ್ಕಿಗಳು ॥28॥

೦೨೯ ಅರಸನುಪ್ಪವಡಿಸಿದನವನೀ ...{Loading}...

ಅರಸನುಪ್ಪವಡಿಸಿದನವನೀ
ಶ್ವರವಿಹಿತಸತ್ಕರ್ಮವನು ವಿ
ಸ್ತರಿಸಿದನು ಚಾವಡಿಗೆ ಬಂದನು ಹರುಷದುಬ್ಬಿನಲಿ
ಚರರನಟ್ಟಿದನಖಿಳಧರಣೀ
ಶ್ವರ ನಿಕಾಯಕೆ ಸಕಲ ಸುಭಟರ
ಬರಿಸಿದನು ತರಿಸಿದನು ಪಟ್ಟಕೆ ಬೇಹ ವಸ್ತುಗಳ ॥29॥

೦೩೦ ಗುರುತನುಜ ರವಿಸೂನು ...{Loading}...

ಗುರುತನುಜ ರವಿಸೂನು ಮಾದ್ರೇ
ಶ್ವರ ಕೃಪದ್ರೋಣಾದಿಗಳು ಬಂ
ದರಮನೆಯ ಹೊಕ್ಕರು ನದೀನಂದನನ ಬಳಿವಿಡಿದು
ನೆರೆದರವನೀ ನಿರ್ಜರರು ಕೇ
ಸರಿಯ ಪೀಠವ ರಚಿಸಿ ವೈದಿಕ
ಪರಿಣತರ ಮತದಿಂದ ವಿಸ್ತರಿಸಿದರು ಮಂಗಳವ ॥30॥

೦೩೧ ಕಮಲಜನ ಹೋಲುವೆಯ ...{Loading}...

ಕಮಲಜನ ಹೋಲುವೆಯ ಧಾರುಣಿ
ಯಮರಕರದಲಿ ನಿಗಮ ಪೂತೋ
ತ್ತಮ ಸುವಾರಿಗಳಿಳಿದವಜಸನ್ನಿಭನ ಮಸ್ತಕಕೆ
ಕಮಲಜನ ಕರದಿಂದ ಗಂಗಾ
ವಿಮಲನದಿಯಿಳಿತಂದು ಸಾರ್ದುದೊ
ಹಿಮಗಿರಿಯನೆಂಬಂತಿರಿಳಿದುದು ಪಟ್ಟದಭಿಷೇಕ ॥31॥

೦೩೨ ಆರತಿಯನೆತ್ತಿದರು ತನ್ದು ...{Loading}...

ಆರತಿಯನೆತ್ತಿದರು ತಂದು
ಪ್ಪಾರತಿಯ ಸೂಸಿದರು ನೃಪಪರಿ
ವಾರವೆಲ್ಲವು ಬಂದು ಕಂಡುದು ಕಾಣಿಕೆಯ ನೀಡಿ
ಕೌರವೇಂದ್ರನ ಮೋಹರದ ಗುರು
ಭಾರ ಭೀಷ್ಮಂಗಾಯ್ತು ಸಮರದ
ವೀರಪಟ್ಟವನಾಂತನಾಚಾರ್ಯಾದಿಗಳು ನಲಿಯೆ ॥32॥

೦೩೩ ಈ ನದೀನನ್ದನನ ...{Loading}...

ಈ ನದೀನಂದನನ ಬಲದಲಿ
ಸೇನೆ ಶಿವಗಂಜುವುದೆ ಕುಂತೀ
ಸೂನುಗಳಿಗಾರಣ್ಯಜಪವಿನ್ನವರಿಗಿಳೆಯೇಕೆ
ಮಾನನಿಧಿ ಭೀಷ್ಮಂಗೆ ಸಮರಸ
ಮಾನಭಟನಿನ್ನಾವನೆಂದು ಮ
ನೋನುರಾಗದ ಮೇಲೆ ಕೌರವರಾಯ ಬಣ್ಣಿಸಿದ ॥33॥

೦೩೪ ಎಲೆ ಮರುಳೆ ...{Loading}...

ಎಲೆ ಮರುಳೆ ಭೂಪಾಲ ಕೌರವ
ಕುಲಪಿತಾಮಹನಹನು ಧರ್ಮಂ
ಗಳಲಿ ಪರಿಣತನಹನು ಕಾಳೆಗವೆತ್ತಲಿವರೆತ್ತ
ಗಳದ ಗರಳನ ದೊರೆಯ ಭಟಮಂ
ಡಲಿಯೊಳಗೆ ಮನ್ನಣೆಯೆ ಹೇಳೈ
ಕಳಿದ ಹರೆಯಂಗೆಂದು ಗಹಗಹಿಸಿದನು ಕಲಿಕರ್ಣ ॥34॥

೦೩೫ ತೊಗಲು ಸಡಿಲಿದ ...{Loading}...

ತೊಗಲು ಸಡಿಲಿದ ಗಲ್ಲ ಬತ್ತಿದ
ಹೆಗಲು ನರುಕಿದ ನರೆತ ಮೀಸೆಯ
ಜಗುಳ್ದ ಹಲುಗಳ ಹಾಯಿದೆಲುಗಳ ನೆಗ್ಗಿದವಯವದ
ಅಗಿಯಲಲುಗುವ ತಲೆಯ ಮುಪ್ಪಿನ
ಮುಗುದನೀತನ ಕಾದಹೇಳಿದು
ನಗೆಯ ಸುರಿದೈ ರಾಯ ಕಟಕದೊಳೆಂದನಾ ಕರ್ಣ ॥35॥

೦೩೬ ಇಲ್ಲಿ ಭೀಷ್ಮನು ...{Loading}...

ಇಲ್ಲಿ ಭೀಷ್ಮನು ರಾಘವನ ಬಲ
ದಲ್ಲಿ ಜಾಂಬವನುಭಯವೀರರು
ಬಲ್ಲಿದರು ಬಳಿಕುಳಿದ ಸುಭಟರ ಶೌರ್ಯವೊಪ್ಪುವುದೆ
ನಿಲ್ಲು ನೀ ಕೊಲಲೆಳಸುವರೆ ಹಗೆ
ಯಲ್ಲಿಗೊಪ್ಪಿಸಿ ಕೊಲಿಸಲೇತಕೆ
ಬಿಲ್ಲಿನಲಿ ಬಡಿದಡ್ಡಗೆಡಹುವೆನೆಂದನಾ ಕರ್ಣ ॥36॥

೦೩೭ ಹಾ ನುಡಿಯದಿರು ...{Loading}...

ಹಾ ನುಡಿಯದಿರು ನಿನ್ನ ಹವಣಿನ
ಮಾನಿಸನೆ ಸುರಸಿಂಧುಜನು ತಾ
ನೀನು ಮಿಗೆ ಮೇಲರಿಯೆ ಜವ್ವನದುಬ್ಬುಗೊಬ್ಬಿನಲಿ
ನೀನು ಸರಿಯೇ ರಾಮಕಟಕದ
ಹಾನಿಯನು ತಲೆಗಾಯ್ದ ಜಾಂಬವ
ಗೇನು ಕೊರತೆಯೆನುತ್ತ ಜರೆದನು ಗರುಡಿಯಾಚಾರ್ಯ ॥37॥

೦೩೮ ರಣದೊಳೊಡ್ಡಿದರಾತಿಗಳನೀ ಹಣೆಯ ...{Loading}...

ರಣದೊಳೊಡ್ಡಿದರಾತಿಗಳನೀ
ಹಣೆಯ ಪಟ್ಟದ ವೀರ ಜಯಿಸಲು
ಹಣವಿಗಾನೋಲೈಸೆ ಮಾಡುವೆನಡವಿಯಲಿ ತಪವ
ರಣದೊಳಿವನಡಗೆಡೆದನಾದರೆ
ಮಣಿಯದಿರಿದಪೆನನ್ನೆಬರ ಮಾ
ರ್ಗಣೆಯನಾಹವದೊಳಗೆ ಸಂಧಿಸೆನೆಂದನಾ ಕರ್ಣ ॥38॥

೦೩೯ ಗಳಹದಿರು ರಾಧೇಯ ...{Loading}...

ಗಳಹದಿರು ರಾಧೇಯ ನಿನ್ನಯ
ಕುಲವ ನೋಡದೆ ಮೇರೆದಪ್ಪುವ
ಸಲುಗೆಯಿದಲೇ ಸ್ವಾಮಿಸಂಪತ್ತಿನ ಸಗಾಢತನ
ಕಲಿಗಳುಳಿದಂತೆನ್ನ ಸರಿಸಕೆ
ನಿಲುವನಾವನು ದೇವದಾನವ
ರೊಳಗೆ ನಿನ್ನೊಡನೊರಲಿ ಫಲವೇನೆಂದನಾ ಭೀಷ್ಮ ॥39॥

೦೪೦ ಕೇಳು ಕೃಪ ...{Loading}...

ಕೇಳು ಕೃಪ ಕೇಳೈ ಜಯದ್ರಥ
ಕೇಳು ಗುರುಸುತ ಶಲ್ಯ ಕುಂಭಜ
ಕೇಳು ದುಶ್ಯಾಸನ ವಿಕರ್ಣ ಸುಲೋಚನಾದಿಗಳು
ಕಾಳೆಗದೊಳರಿ ದಶಸಹಸ್ರ ನೃ
ಪಾಲಕರ ಮಣಿಖಚಿತನಿರ್ಮಲ
ಮೌಳಿಗಳ ದಿಗುಬಲಿಯ ಕೊಡುವೆನು ದಿವಸ ದಿವಸದಲಿ ॥40॥

೦೪೧ ಹರಿಯ ಚಕ್ರವ ...{Loading}...

ಹರಿಯ ಚಕ್ರವ ತುಡುಕಿಸುವೆ ವಾ
ನರಪತಾಕನ ರಥವ ಹಿಂದಕೆ
ಮುರಿಯಲಿಸುವೆನು ಮಹಿಮರಿಬ್ಬರ ನಡೆವಳಿಯ ಕೆಡಿಸಿ
ಸುರನರೋರಗರೊಳಗೆ ಮೀಟಾ
ದರಿಗೆ ಕಟ್ಟಿದ ತೊಡರು ಇವನು
ಬ್ಬರಿಸಿ ನುಡಿದರೆ ನೊರಜ ಕೊಲುವರೆ ಕೈದುವೇಕೆಂದ ॥41॥

೦೪೨ ಜಲಧಿಯುಬ್ಬಿದವೊಲು ಸಭಾಮಂ ...{Loading}...

ಜಲಧಿಯುಬ್ಬಿದವೊಲು ಸಭಾಮಂ
ಡಲಿಯ ಸೌಹೃದವಾಗ್ವಿವಾದದ
ಕಳಕಳಿಕೆ ದಿಗುತಟವ ಗಬ್ಬರಿಸಿದುದು ಗಾಢದಲಿ
ಕೆಲರು ಭೀಷ್ಮನನಿನತನೂಜನ
ಕೆಲರು ಕೊಂಡಾಡಿದರು ಕೌರವ
ನಳುಕಿ ಭೀಷ್ಮನ ಬೇಡಿಕೊಂಡನು ವಿನಯಪರನಾಗಿ ॥42॥

೦೪೩ ಬೀಳುಕೊಣ್ಡುದು ರಜನಿ ...{Loading}...

ಬೀಳುಕೊಂಡುದು ರಜನಿ ಮರುದಿನ
ವಾಳು ಕುದುರೆಯ ನೆರಹಿ ಧರಣೀ
ಪಾಲ ಸುಮುಹೂರ್ತದಲಿ ಹೊಯ್ಸಿದನಂದು ಹೊರಗುಡಿಯ
ಸೂಳವಿಸಿದವು ಲಗ್ಗೆಯಲಿ ನಿ
ಸ್ಸಾಳಕೋಟಿಗಳುರುಚತುರ್ಬಲ
ಮೇಳವಿಸಿ ನಡೆದುದು ಸಮಸ್ತ ಮಹಾಮಹೀಶ್ವರರು ॥43॥

೦೪೪ ವೀರ ಧೃತರಾಷ್ಟ್ರಙ್ಗೆ ...{Loading}...

ವೀರ ಧೃತರಾಷ್ಟ್ರಂಗೆ ವರ ಗಾಂ
ಧಾರಿಗೆರಗಿದನವರ ಹರಕೆಯ
ಭೂರಿಗಳ ಕೈಕೊಂಡನವನೀಸುರರಿಗಭಿನಮಿಸಿ
ಚಾರುಚಮರದ ನಿಕರದವರೊ
ಯ್ಯಾರಿಸಲು ಜಯರವದ ರಭಸದು
ದಾರ ಮೆರೆಯಲು ಬೀಳುಕೊಂಡನು ರಾಜಮಂದಿರವ ॥44॥

೦೪೫ ಒಡನೊಡನೆ ಕರಿತುರಗವೇರಿದ ...{Loading}...

ಒಡನೊಡನೆ ಕರಿತುರಗವೇರಿದ
ರೊಡನೆ ಹುಟ್ಟಿದ ಶತಕುಮಾರರು
ಗಡಣದಾಪ್ತರು ಕರ್ಣ ಶಕುನಿ ಜಯದ್ರಥಾದಿಗಳು
ಅಡಸಿದವು ಸೀಗುರಿಗಳಭ್ರವ
ತುಡುಕಿದವು ಝಲ್ಲರಿಗಳಂತ್ಯದ
ಕಡಲವೊಲು ಪಡೆ ನಡೆಯೆ ಹಸ್ತಿನಪುರವ ಹೊರವಂಟ ॥45॥

೦೪೬ ಭುಗುಭುಗಿಪ ಚಮ್ಬಕನ ...{Loading}...

ಭುಗುಭುಗಿಪ ಚಂಬಕನ ಗಜಕೋ
ಟಿಗಳ ಮುಂದಣ ಡೌಡೆಗಳ ಭೂ
ಗಗನವೊಡನೊಡನೊದರೆ ಮೊರೆವ ಗಭೀರಭೇರಿಗಳ
ಅಗಿವ ಪಟಹ ಮೃದಂಗ ಕಹಳಾ
ದಿಗಳ ಕಳಕಳ ರಭಸ ದಶದಿ
ಕ್ಕುಗಳ ಮಾತಾಡಿಸೆ ಮಹಾಬಲ ತೆರಳಿತಿಭಪುರಿಯ ॥46॥

೦೪೭ ಅಗಿವ ವಜ್ರದ ...{Loading}...

ಅಗಿವ ವಜ್ರದ ಹೊಳೆಕೆಗಳೊ ದಿಟ
ಹಗಲ ತಗಡೋ ಮೇಣು ಮಿಂಚಿನ
ಬಗೆಯ ಸೆಕ್ಕೆಯೊ ಸೂರ್ಯಕಾಂತಚ್ಛವಿಯ ತೆಕ್ಕೆಗಳೊ
ಜಗುಳಿದೊರೆಗಳ ಜಾಳಿಗೆಯ ಹೊಗ
ರೊಗಲು ಝಳಪಿಸೆ ಹೊಳೆಹೊಳೆವ ಕೈ
ದುಗಳ ಹಬ್ಬುಗೆವೆಳಗು ಗಬ್ಬರಿಸಿದುದು ದಿಗುತಟವ ॥47॥

೦೪೮ ಜಲಧಿಗಳ ಕುಡಿದುದು ...{Loading}...

ಜಲಧಿಗಳ ಕುಡಿದುದು ನಭೋಮಂ
ಡಲವ ಸೆಳೆದುದು ಸುರನದಿಯ ಮು
ಕ್ಕುಳಿಸಿತಖಿಲಾದ್ರಿಗಳ ನುಂಗಿತು ದಿವವನಳುಕಿಸಿತು
ನೆಲನ ಸವೆಸಿತು ನೇಸರಿನ ಕಂ
ಗಳನು ಕದುಕಿತು ನೆನೆಯ ಬಾರದು
ನಳಿನಭವ ಹರನಾದನೆನಲುಚ್ಚಳಿಸೆ ಪದಧೂಳಿ ॥48॥

೦೪೯ ಸುರಿವ ಗಜಮದಧಾರೆಯಲಿ ...{Loading}...

ಸುರಿವ ಗಜಮದಧಾರೆಯಲಿ ಹೊಸ
ಶರಧಿಗಳು ಸಂಭವಿಸಿದವು ನೃಪ
ವರರ ಮಕುಟದ ಮಣಿಯೊಳಾದರು ಚಂದ್ರಸೂರಿಯರು
ಗಿರಿಗಳಾದುವು ದಂತಿಯಲಿ ಪಡಿ
ಧರಣಿಯಾದವು ಛತ್ರ ಚಮರದ
ಲರರೆ ನೂತನ ಸೃಷ್ಟಿಯಾಯ್ತು ವಿರಿಂಚಸೃಷ್ಟಿಯಲಿ ॥49॥

೦೫೦ ಅರರೆ ನಡೆದುದು ...{Loading}...

ಅರರೆ ನಡೆದುದು ಸೇನೆ ಕುಲಗಿರಿ
ಯೆರಡು ಕೂರುಮ ಫಣಿಪರಿಬ್ಬಿ
ಬ್ಬರ ದಿಶಾಮಾತಂಗಗಳ ಹದಿನಾರನಳವಡಿಸಿ
ಸರಸಿಜೋದ್ಭವ ಸೃಜಿಸದಿರ್ದರೆ
ಧರಿಸಲಾಪುದೆ ಧರಣಿಯೆನೆ ಕುರು
ಧರೆಗೆ ಬಂದುದು ಸೇನೆ ಪಯಣದ ಮೇಲೆ ಪಯಣದಲಿ ॥50॥

೦೫೧ ನಡೆದು ಬನ್ದುದು ...{Loading}...

ನಡೆದು ಬಂದುದು ಕೌರವೇಂದ್ರನ
ಪಡೆ ಕುರುಕ್ಷೇತ್ರಕ್ಕೆ ಮೂಡಣ
ಕಡೆಯಲಳವಡಿಸಿದರು ಬೀಡಾಯಿತ್ತು ವಹಿಲದಲಿ
ಗುಡಿಗಳನು ಬಿಡಿಸಿದರು ಲೋಹದ
ತಡಿಕೆಗಳನಳವಡಿಸಿ ಬೀಡಿನ
ನಡುವೆ ರಚಿಸಿದರವನಿಪಾಲನ ರಾಜಮಂದಿರವ ॥51॥

೦೫೨ ಅಳವಿ ನಾಲ್ವತ್ತೆಣ್ಟರೊಳಗಿ ...{Loading}...

ಅಳವಿ ನಾಲ್ವತ್ತೆಂಟರೊಳಗಿ
ಟ್ಟಳಿಸಿ ಬಿಟ್ಟುದು ಸೇನೆ ಕೋಟಾ
ವಳಯವಗಳಲ್ಲಲ್ಲಿ ತಳಿ ಮುಳುವೇಲಿ ಪಡಿಯಗಳು
ಕೆಲದೊಳೊಪ್ಪುವ ಭೋಗವತಿ ನಿ
ರ್ಮಲ ಗಭೀರೋದಕದ ನದಿ ಕುರು
ಬಲದ ಪಾಳಯದಂಗವಿದು ಕೇಳೈ ಮಹೀಪಾಲ ॥52॥

೦೫೩ ಪಡೆಯ ಮುಙ್ಗುಡಿ ...{Loading}...

ಪಡೆಯ ಮುಂಗುಡಿ ಭೀಷ್ಮನದು ಬಲ
ನೆಡನು ಪಿಂಗುಡಿಯಾತನದು ನೃಪ
ಗಡಣಬೀಡಿನ ಕಾಹು ಗಂಗಾಸುತನ ಗುರುಭಾರ
ನಡೆವಡಾತನ ನೇಮ ಮರಳಿದು
ಬಿಡುವಡಾತನ ಮಾತು ಕೌರವ
ಪಡೆಗೆ ಭಾರಿಯ ವಜ್ರ ಪಂಜರವಾದನಾ ಭೀಷ್ಮ ॥53॥

೦೫೪ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಧೃತರಾಷ್ಟ್ರಂಗೆ ಮಕ್ಕಳ
ಮೇಲೆ ನೆನೆಹಾಯ್ತಧಿಕಶೋಕೋದ್ರೇಕ ಪಲ್ಲವಿಸೆ
ಕಾಳೆಗದೊಳೇನಾದರೋ ಭೂ
ಪಾಲತಿಲಕರು ದೃಗುವಿಹೀನರ
ಬಾಳಿಕೆಯ ಸುಡಲೆನುತ ತನ್ನೊಳು ಹಿರಿದು ಚಿಂತಿಸಿದ ॥54॥

೦೫೫ ಆ ಸಮಯದಲಿ ...{Loading}...

ಆ ಸಮಯದಲಿ ರಾಯ ವೇದ
ವ್ಯಾಸಮುನಿ ನಡೆತಂದು ಗತಪರಿ
ತೋಷನನು ಸಂತೈಸಿ ಕರೆಸಿದನಂದು ಸಂಜಯನ
ಆ ಸಮರವೃತ್ತಾಂತ ನಿನಗೆ ಸ
ಮಾಸ ವಿಸ್ತಾರವಾಗಿರಲಿ ಭೂ
ಮೀಶತಿಲಕಂಗರುಹುವುದು ನೀನೆಂದು ನೇಮಿಸಿದ ॥55॥

೦೫೬ ಪರಮ ವೇದವ್ಯಾಸ ...{Loading}...

ಪರಮ ವೇದವ್ಯಾಸ ಮುನಿಪನ
ಕರುಣವಾಗಲು ಕಂಗಳಿಗೆ ಗೋ
ಚರಿಸಿತೀ ಭಾರತ ಮಹಾಸಂಗ್ರಾಮ ಸೌರಂಭ
ಧುರದ ವೃತ್ತಾಂತವನು ಚಿತ್ತೈ
ಸರಸ ತಿಳುಹುವೆನೆಂದು ಸಲೆ ವಿ
ಸ್ತರಿಸ ಬಗೆದನು ಸಂಜಯನು ಧೃತರಾಷ್ಟ್ರ ಭೂಪತಿಗೆ ॥56॥

೦೫೭ ಅವಧರಿಸು ಧೃತರಾಷ್ಟ್ರ ...{Loading}...

ಅವಧರಿಸು ಧೃತರಾಷ್ಟ್ರ ಗಂಗಾ
ಭವನ ನೇಮದಲಂದು ಮಹದಾ
ಹವಕೆ ನಡೆದುದು ಕಟಕವಲ್ಲಿಯುಲೂಕನೆಂಬುವನು
ಇವರು ಕಳುಹಿದೊಡವನು ರಿಪು ಪಾಂ
ಡವರ ಹೊರಗೈತಂದನಿನ್ನಾ
ಹವಕೆ ನಿಂದಿರು ಧರ್ಮಪುತ್ರ ವಿಳಂಬವೇಕೆಂದ ॥57॥

೦೫೮ ಅಗ್ಗಳೆಯನೆಮ್ಮರಸ ಸಮ್ಪ್ರತಿ ...{Loading}...

ಅಗ್ಗಳೆಯನೆಮ್ಮರಸ ಸಂಪ್ರತಿ
ನೆಗ್ಗಿ ಕೆಟ್ಟಿರಿ ನೀವು ನಿಮಗೀ
ಹುಗ್ಗಿಗರು ಹುರಿಗೂಡಿ ಗೆಲಿದಿನ್ನಿಳೆಯ ಕೊಡಿಸುವರೆ
ಅಗ್ಗಿತಾ ಮಾತೇಕೆ ರಣದಲಿ
ನುಗ್ಗು ನುಗ್ಗಾಗದೆ ಸಹೋದರ
ರೊಗ್ಗು ಮುರಿಯದೆ ಮಾಣದರೆಗೇಡಾಯ್ತ ನಿಮಗೆಂದ ॥58॥

೦೫೯ ಬೆಮ್ಬಲಕೆ ತಾನೆನ್ದು ...{Loading}...

ಬೆಂಬಲಕೆ ತಾನೆಂದು ಬಯಲ ವಿ
ಡಂಬದಲಿ ಕಾಳೆಗವ ಮಸೆದರೆ
ನಂಬಿ ಕೆಟ್ಟಿರಿ ಕೃಷ್ಣನನು ನೀವೇನ ಮಾಡುವಿರಿ
ಇಂಬುಗೆಟ್ಟುದು ರೀತಿ ರಣಕೆ ತ್ರಿ
ಯಂಬಕನನಮರಾಧಿಪನ ಕೈ
ಕೊಂಬನೇ ಕೌರವನೆನಲು ಖತಿಗೊಂಡನಾ ಭೀಮ ॥59॥

೦೬೦ ಸೀಳು ಕುನ್ನಿಯ ...{Loading}...

ಸೀಳು ಕುನ್ನಿಯ ಬಾಯನೆಲವೋ
ತೋಳ ತೀಟೆಯನವನ ನೆತ್ತಿಯ
ಮೇಲೆ ಕಳೆವೆನು ಕಲಕುವೆನು ಕೌರವ ಬಲಾಂಬುಧಿಯ
ಹೇಳು ಹೋಗೀ ನಾಯನಾಡಿಸಿ
ಕೇಳುತಿರಲೇಕಹಿತ ಕುರುಕುಲ
ಕಾಲಭೈರವನೆಂದು ನಿನ್ನೊಡೆಯಂಗೆ ಹೇಳೆಂದ ॥60॥

೦೬೧ ಮಾಡಲಿದ್ದುದು ಬಹಳ ...{Loading}...

ಮಾಡಲಿದ್ದುದು ಬಹಳ ಪೌರುಷ
ವಾಡಿ ಕೆಡಿಸಲದೇಕೆ ಕೌರವ
ರಾಡಿ ಕೆಡಿಸಲಿ ಮಾಡಿ ಕೆಡಿಸಲಿ ಚಿಂತೆ ನಮಗೇಕೆ
ಮಾಡಿದೆವು ಗುರುಭಾರವನು ಮುರ
ಗೇಡಿಯಲಿ ರಣಪಾರಪತ್ಯವ
ಮಾಡುವಾತನು ಕೃಷ್ಣನೆಂದನು ಧರ್ಮಸುತ ನಗುತ ॥61॥

೦೬೨ ವೈರಿದೂತನ ಕಳುಹಿದನು ...{Loading}...

ವೈರಿದೂತನ ಕಳುಹಿದನು ಕೈ
ವಾರಿಗಳು ಜಯಜಯಯೆನಲು ಹೊಂ
ದೇರ ತರಸಿದನಬುಜನಾಭನ ಪದಯುಗಕೆ ನಮಿಸಿ
ವಾರುವದ ಖುರನಾಲ್ಕರಲಿ ಮಣಿ
ಚಾರು ಕನಕವ ಸುರಿದು ಧರ್ಮಜ
ತೇರನೇರಿದನೊದರಿದವು ನಿಸ್ಸಾಳ ಕೋಟಿಗಳು ॥62॥

೦೬೩ ಹರಿಯ ಬಲವನ್ದಣ್ಣನಙ್ಘ್ರಿಗೆ ...{Loading}...

ಹರಿಯ ಬಲವಂದಣ್ಣನಂಘ್ರಿಗೆ
ಶಿರವ ಚಾಚಿ ನಿಜಾಯುಧವ ವಿ
ಸ್ತರಿಸಿ ಪವನಜ ಪಾರ್ಥಮಾದ್ರೀಸುತರು ರಥವೇರಿ
ಧುರಕೆ ನಡೆದರು ದ್ರುಪದ ಸಾತ್ಯಕಿ
ವರ ವಿರಾಟಾದಿಗಳು ಚೂಣಿಯೊ
ಳುರವಣಿಸಿದರು ಸೇನೆ ನಡೆದುದು ಮುಂದೆ ಸಂದಣಿಸಿ ॥63॥

೦೬೪ ಬಳಿಕ ...{Loading}...

ಬಳಿಕ ಧೃಷ್ಟದ್ಯುಮ್ನನಾಜ್ಞೆಯೊ
ಳಳವಿಗೊಟ್ಟುದು ಸೇನೆ ಮೂಡಣ
ಜಲಧಿಗಾಂತುದು ಪಶ್ಚಿಮೋದಧಿಯೆಂಬ ರಭಸದಲಿ
ಪಳಹರದ ತೋಮರದ ಕುಂತಾ
ವಳಿಯ ಚಮರಚ್ಛತ್ರಮಯ ಸಂ
ಕುಳದಿನಾದುದು ಭೂತ ನಾಲ್ಕಾಕಾಶಗತವಾಗಿ ॥64॥

+೦೧ ...{Loading}...