೦೭

೦೦೦ ಸೂ ರಾಯಕಟಕದೊಳಿರುಳು ...{Loading}...

ಸೂ. ರಾಯಕಟಕದೊಳಿರುಳು ಭೀಷ್ಮರ
ಸಾಯಬೇಕೆಂದೊಡಬಡಿಸಿ ಕಮ
ಲಾಯತಾಂಬಕ ಸಹಿತ ಪಾಳಯಕರಸನೈತಂದ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ದಿನ ಮೂರಾಯ್ತು ಭೀಷ್ಮನ
ಕಾಳೆಗದೊಳಲ್ಲಿಂದ ಮೇಲಣ ಕಥನಕೌತುಕವ
ಆಲಿಸುವದೈ ಮೂಡಣದ್ರಿಯ
ಮೇಲೆ ಕೆಂಪೆಸೆಯಿತ್ತು ಘನ ನಿ
ಸ್ಸಾಳವೊದರಿದವೈ ನೃಪಾಲರ ಕಟಕವೆರಡರಲಿ ॥1॥

೦೦೨ ಹಲ್ಲಣಿಸಿ ಹರಿತನ್ದು ...{Loading}...

ಹಲ್ಲಣಿಸಿ ಹರಿತಂದು ಮೋಹರ
ವಲ್ಲಿಗಲ್ಲಿಗೆ ನಿಂದುದೆರಡರ
ಘಲ್ಲಣೆಯ ಘಾಯದ ಘಡಾವಣೆ ಮೀರಿ ಘಾತಿಸಿತು
ಕೆಲ್ಲೆಗೆಡೆದವು ಕರಿಗಳಸುಗಳ
ಚೆಲ್ಲಿದವು ತೇಜಿಗಳು ರಥಕುಳ
ವೆಲ್ಲ ಹುಡಿಹುಡಿ ಪಾಯದಳ ನಿರ್ನಾಮವಾಯ್ತೆಂದ ॥2॥

೦೦೩ ಅಳಿದುದಾ ದಿವಸದಲಿ ...{Loading}...

ಅಳಿದುದಾ ದಿವಸದಲಿ ಪಾಂಡವ
ಬಳದೊಳಗಣಿತಸೇನೆ ಭೀಷ್ಮನು
ಫಲುಗುಣನು ಕಾದಿದರು ದಿನಕರನಪರಜಲನಿಧಿಗೆ
ಇಳಿಯೆ ತೆಗೆದವು ಬಲವೆರಡು ಮೂ
ಡಲು ಮಗುಳೆ ಕೆಂಪೇರೆ ಕದನಕೆ
ಕಳನ ತುಂಬಿತು ಮತ್ತೆ ಕೌರವ ಪಾಂಡವರ ಸೇನೆ ॥3॥

೦೦೪ ಬಿದ್ದುದಗಣಿತ ಸೇನೆ ...{Loading}...

ಬಿದ್ದುದಗಣಿತ ಸೇನೆ ಪಡುವಲು
ಹೊದ್ದಿದನು ರವಿ ಮತ್ತೆ ಮೂಡಣ
ಗದ್ದುಗೆಯ ವೆಂಠಣಿಸಿದನು ಕುಮುದಾಳಿ ಕಂಠಣಿಸೆ
ಎದ್ದುದದ್ಭುತರಣ ಕೃತಾಂತಗೆ
ಬಿದ್ದನಿಕ್ಕಿದನದಟನಬುಧಿಯೊ
ಳದ್ದ ಸೂರ್ಯನ ಬಿಂಬವೆದ್ದುದು ಮೂಡಣದ್ರಿಯಲಿ ॥4॥

೦೦೫ ಏಳನೆಯ ದಿವಸದ ...{Loading}...

ಏಳನೆಯ ದಿವಸದ ಮಹಾರಥ
ರೂಳಿಗವು ಹಿರಿದಾಯ್ತು ಕುರು ಭೂ
ಪಾಲಕನ ತಮ್ಮಂದಿರಳಿದುದು ದಿವಸವೆಂಟರಲಿ
ಕೋಲ ಮೊನೆಯಲಿ ಕೃಷ್ಣರಾಯನ
ನೋಲಗಿಸಿ ಮೆಚ್ಚಿಸಿದನಾ ಕ
ಟ್ಟಾಳು ಭೀಷ್ಮನ ದಿವಸವೊಂಬತ್ತಾಯ್ತು ಸಮರದಲಿ ॥5॥

೦೦೬ ಇರುಳು ಕೃಷ್ಣನ ...{Loading}...

ಇರುಳು ಕೃಷ್ಣನ ಹೊರೆಗೆ ಬಂದನು
ಧರಣಿಪತಿ ದುಗುಡದಲಿ ನಿಜಸೋ
ದರರು ಸಹಿತ ಮುರಾರಿಯಂಘ್ರಿಗೆ ನಮಿಸಿ ಕೈಮುಗಿದು
ಸುರನದೀಸುತನಖಿಲ ಸೇನೆಯ
ನೊರಸಿದನು ನಮ್ಮಲ್ಲಿ ಖಾತಿಯ
ಧರಿಸಿದನು ಜಯವಧುವ ವರಿಸಿದ ದೇವ ಕೇಳ್ ಎಂದ ॥6॥

೦೦೭ ನೆರೆವಣೆಗೆಗುನ್ದಿತ್ತು ಬಲ ...{Loading}...

ನೆರೆವಣೆಗೆಗುಂದಿತ್ತು ಬಲ ಕೈ
ಮರೆದರದಟರು ಬಿರುದಭಟರಿಗೆ
ಬೆರಗು ಬಲಿದುದು ಹೂಣೆಗರ ಹೋರಟೆಗಳಳುಕಿದವು
ನೆರೆ ಸುಗಿದ ಹುಲಿಯಂತೆ ಬರಿಕೈ
ಮುರಿದ ಮದಗಜದಂತೆ ಚಿತ್ರದ
ಲುರುವ ಕೇಸರಿಯಂತೆ ಮೆರೆದಿದೆ ನಮ್ಮ ಬಲವೆಂದ ॥7॥

೦೦೮ ಹಾರಿದವು ಹೆಸರುಗಳು ...{Loading}...

ಹಾರಿದವು ಹೆಸರುಗಳು ಭಂಗದ
ಸೂರೆಗಳ ಕಟ್ಟಿದರು ಮಿಗೆ ತಲೆ
ಮಾರಿಗಳು ಮರಳಿದರು ರಣಹೇಡಿಗಳ ಬಗೆಯಂತೆ
ದೂರಲರಿಯೆನು ಸುಭಟರಿಗೆ ಮನ
ಬೇರೆ ನುಡಿ ಬೇರಾಯ್ತು ಸಮರದೊ
ಳೇರತಿಂಗುರಿದಿಂದು ದಣಿದುದು ನಮ್ಮ ಬಲವೆಂದ ॥8॥

೦೦೯ ಚಳಶಿಳೀಮುಖರವಕೆ ಪಟುಭಟ ...{Loading}...

ಚಳಶಿಳೀಮುಖರವಕೆ ಪಟುಭಟ
ರಳುಕಿದರು ವಿರಹಿಗಳವೊಲು ಸ
ಮ್ಮಿಳಿತ ಶಾಸ್ತ್ರಧ್ವನಿಗೆ ಸೆಡೆದರು ಮೂರ್ಖರಂದದಲಿ
ಕಲಿತ ಬಲ ಶತಕೋಟಿಗಿದಿರಾ
ಗಳಿದವದ್ರಿಗಳಂತೆ ಹರಿಪದ
ವಳಯ ವಿದಳಿತವಾಯ್ತು ಮೇಘವ್ರಾತದಂದದಲಿ ॥9॥

೦೧೦ ರಣರಹಸ್ಯ ಜ್ಞಾನಿಗಳು ...{Loading}...

ರಣರಹಸ್ಯ ಜ್ಞಾನಿಗಳು ಮಿಗೆ
ಮಣಿದರಿಂದ್ರಯವಶಕೆ ರಿಪುಭಟ
ಗಣವಿದಾರಣ ತರ್ಕ ವಿದ್ಯಾವೀತರಾಗಿಗಳು
ಸೆಣಸಿನಲಿ ಸಮದರ್ಶಿಗಳು ಧಾ
ರುಣಿಯ ಪತಿಗಳು ರಾಜಸೇವಾ
ಪ್ರಣಯಮೀಮಾಂಸದಿ ಮೂಢರು ನಮ್ಮ ಭಟರೆಂದ ॥10॥

೦೧೧ ಹರಿದುದಿನ್ದಿನ ದಿನಕೆ ...{Loading}...

ಹರಿದುದಿಂದಿನ ದಿನಕೆ ಶತ ಸಾ
ವಿರ ಮಹೀಶರು ಯವನ ನಗರಿಗೆ
ಸರಿದುದುಳಿದರ ದಿಟ್ಟತನ ಗಾಂಗೇಯನುಪಟಳಕೆ
ಅರಿಪಯೋನಿಧಿ ಬಡಬನನು ಗೆಲ
ಲರಿದು ಜೀಯ ಮುಕುಂದ ನೀನೇ
ಕರುಣಿಸೈ ವನವಾಸವೋ ನಮಗೇನು ಗತಿಯೆಂದ ॥11॥

೦೧೨ ಮುಗುಳುನಗೆ ನಸು ...{Loading}...

ಮುಗುಳುನಗೆ ನಸು ಮೊಳೆಯೆ ಭೀಮಾ
ದಿಗಳಿಗೆಂದನು ಕೃಷ್ಣನರಸಗೆ
ಸೊಗಸು ಬನದಲಿ ಬರಿಯ ಮನವೀ ಕದನಕೇಳಿಯಲಿ
ವಿಗಡತನವಂತಿರಲಿ ಭೀಷ್ಮನ
ಬೆಗಡುಗೊಳಿಸಲು ಹರನ ಹವಣ
ಲ್ಲಗಣಿತನ ಸಾಮದಲಿ ಮುರಿಯಲುಬೇಕು ನಾವೆಂದ ॥12॥

೦೧೩ ದಣ್ಡನಯ ತರುಬಿದರೆ ...{Loading}...

ದಂಡನಯ ತರುಬಿದರೆ ಗುಣದಲಿ
ಖಂಡಿಸುವುದಿದಿರಾದ ತರುಗಳು
ದಿಂಡುಗೆಡೆವವು ತೊರೆಗೆ ಮಣಿದರೆ ಗೇಕು ಬದುಕುವುದು
ಚಂಡಬಲನೀ ಭೀಷ್ಮ ಮುಳಿದರೆ
ಖಂಡಪರಶುವ ಗಣಿಸನೆನೆ ಖರ
ದಂಡನಾಭನ ಮತಕೆ ನೃಪತಿ ಹಸಾದವೆನುತಿರ್ದ ॥13॥

೦೧೪ ಇರುಳು ಗುಪಿತದಲವನಿಪತಿ ...{Loading}...

ಇರುಳು ಗುಪಿತದಲವನಿಪತಿ ಸೋ
ದರರು ಮುರರಿಪು ಸಹಿತ ಬಂದನು
ಸುರನದೀನಂದನನ ಮಂದಿರಕಾಗಿ ವಹಿಲದಲಿ
ಕರೆದು ಪಡಿಹಾರರಿಗೆ ಬಂದುದ
ನರುಹಲವದಿರು ಹೊಕ್ಕು ಸಮಯವ
ನರಿದು ಭೀಷ್ಮಂಗೀ ಹದನ ಬಿನ್ನಹವ ಮಾಡಿದರು ॥14॥

೦೧೫ ಬನ್ದನೇ ಧರ್ಮಜನು ...{Loading}...

ಬಂದನೇ ಧರ್ಮಜನು ಮುರರಿಪು
ತಂದನೇ ಕೌರವರನಕಟಾ
ಕೊಂದನೇ ಶಿವಶಿವಯೆನುತ ಮೌನದಲಿ ಮುಳುಗಿರ್ದು
ಮಂದಿಯನು ಹೊರಗಿರಿಸಿ ಬರಹೇ
ಳೆಂದರಾಗಲೆ ಕೃಷ್ಣ ಕೊಂತೀ
ನಂದನರು ಬರಲಿದಿರುವಂದನು ಭೀಷ್ಮ ವಿನಯದಲಿ ॥15॥

೦೧೬ ಅರಸಿ ಹೊಗಲಾಮ್ನಾಯನಿಕರಕೆ ...{Loading}...

ಅರಸಿ ಹೊಗಲಾಮ್ನಾಯನಿಕರಕೆ
ತೆರಹುಗುಡದ ಪರಸ್ವರೂಪನು
ಕುರುಹುಗೊಂಡರೆ ಮಂದಿವಾಳವೆ ದೇವ ನೀನೊಲಿದು
ಅರಸಿಕೊಂಡೈತರಲು ತಾನೈ
ಸರವನಾಗಲಿ ನಿನ್ನ ಭೃತ್ಯನ
ಹೊರೆವ ಪರಿಯಿದು ಕೃಷ್ಣ ಜಯಜಯಯೆನುತ ನಿಡುಗೆಡೆದ ॥16॥

೦೧೭ ನಗುತ ಹರಿ ...{Loading}...

ನಗುತ ಹರಿ ಗಂಗಾಕುಮಾರನ
ನೆಗಹಿದನು ಬಳಿಕಿವರು ರತುನಾ
ಳಿಗಳ ಕಾಣಿಕೆಯಿತ್ತು ಮೈಯಿಕ್ಕಿದರು ಭಕುತಿಯಲಿ
ತೆಗೆದು ಬಿಗಿಯಪ್ಪಿದನು ಯಮಜಾ
ದಿಗಳ ಮನ್ನಿಸಿ ವೀಳೆಯವನಿ
ತ್ತೊಗುಮಿಗೆಯ ಹರುಷದಲಿ ಹೊಂಪುಳಿಯೋದನಾ ಭೀಷ್ಮ ॥17॥

೦೧೮ ಅರಿಯ ಬೀಡಿದು ...{Loading}...

ಅರಿಯ ಬೀಡಿದು ರಾಯನನುಜರು
ದುರುಳರುಚಿತಾನುಚಿತಗೇಡಿಗ
ಳಿರುಳು ದೊರೆಗಳು ನೀವನಾಲೋಚಿತದಲೈತಹರೆ
ಹರಿಯ ಬಲುಹುಂಟಾದಡೆಯು ಧಿ
ಕ್ಕರಿಸಬಾರದು ರಾಜಮಂತ್ರವ
ನರಸ ಸಾಕಿನ್ನೇನು ಬಂದುದು ಹೇಳು ನೀನೆಂದ ॥18॥

೦೧೯ ಅರಿಯೆನುಚಿತವನೆಮ್ಮ ಭಾರದ ...{Loading}...

ಅರಿಯೆನುಚಿತವನೆಮ್ಮ ಭಾರದ
ಹೊರಿಗೆ ನಿಮ್ಮದು ಕೃಷ್ಣನದು ನಾ
ವರಿದರೆಯು ಮೇಣ್ ಮರೆದರೆಯು ರಕ್ಷಕರು ನೀವೆಮಗೆ
ಅರಿಯನೇನುವನೆಂದು ಸಲಹಲು
ಮರೆವಳೇ ಬಾಲಕನ ತಾಯ್ ನೀ
ನುರುವ ವಜ್ರದ ಜೋಡು ನಮಗಿರೆ ಭೀತಿಯೇಕೆಂದ ॥19॥

೦೨೦ ಎಮಗೆ ಜಯವೆನ್ತಹುದು ...{Loading}...

ಎಮಗೆ ಜಯವೆಂತಹುದು ರಾಜ್ಯ
ಭ್ರಮೆಯ ರಾಜಸಬುದ್ಧಿಗಳು ವಿ
ಕ್ರಮವಿಹೀನರು ನಾವು ನೀವ್ ತ್ರೈಲೋಕ್ಯವಿಜಯಿಗಳು
ಸಮರ ಸೋತುದು ನಮ್ಮ ಸುಭಟರು
ಯಮನ ಸೇವಕರಾಯ್ತು ಕೃಪೆಯಿಂ
ದೆಮಗೆ ನಿಮ್ಮಭಿಮತವ ಬೆಸಸುವುದೆಂದನಾ ಭೂಪ ॥20॥

೦೨೧ ಆಕೆವಾಳರು ಭೀಮ ...{Loading}...

ಆಕೆವಾಳರು ಭೀಮ ಪಾರ್ಥರು
ನೂಕದಾಹವವುಳಿದ ಸೇನಾ
ನೀಕವೇ ನಿಮ್ಮಿಂದ ಸವೆದುದು ಹಲವು ಮಾತೇನು
ಸಾಕುವರೆ ಮೇಣ್ ಮುನಿದು ಕೊಲುವರೆ
ಬೇಕು ಬೇಡೆಂಬವರ ಕಾಣೆನು
ಕಾಕನಾಡೆನು ಬೆಸಸಿ ನಿಮ್ಮಭಿಮತವನೆನಗೆಂದ ॥21॥

೦೨೨ ತೀದುದೆಮ್ಮಯ ಸೇನೆ ...{Loading}...

ತೀದುದೆಮ್ಮಯ ಸೇನೆ ನಸು ಸೊ
ಪ್ಪಾದುದಿಲ್ಲರಿಸೇನೆ ನಿಮ್ಮನು
ಕಾದಿ ಗೆಲುವರೆ ಮೊಲೆಯನೂಡಿದ ತಾಯಿ ಜಾಹ್ನವಿಯೆ
ಕಾದಿದೆವು ಕಟ್ಟಿದೆವು ಗೆಲಿದೆವು
ಮೇದಿನಿಯ ನಾವಿನ್ನು ಮುನ್ನಿನ
ತೀದ ವನವಾಸಕ್ಕೆ ನೇಮವ ಕೊಟ್ಟು ಕಳುಹೆಂದ ॥22॥

೦೨೩ ಮನ್ನಿಸುವಡೀ ಉಭಯರಾಯರು ...{Loading}...

ಮನ್ನಿಸುವಡೀ ಉಭಯರಾಯರು
ನಿನ್ನ ಮೊಮ್ಮಂದಿರುಗಳದರೊಳು
ನಿನ್ನ ಕುಣಿಕೆಯೊಳಿಹುದು ಕುಂತೀಸುತರ ಜೀವನವು
ನಿನ್ನನೇ ನಂಬಿಹರು ನೀನೇ
ಮುನ್ನ ಶಿಶುತನದಲ್ಲಿ ಸಲಹಿದೆ
ಮನ್ನಣೆಯ ನೀ ಬಲ್ಲೆಯೆಂದನು ದಾನವಧ್ವಂಸಿ ॥23॥

೦೨೪ ಎನಲು ಮೊಮ್ಮನ್ದಿರುಗಳಳಲಿನ ...{Loading}...

ಎನಲು ಮೊಮ್ಮಂದಿರುಗಳಳಲಿನ
ಘನತೆಯನು ಕಿವಿಗೊಟ್ಟು ಕೇಳಿದು
ನನೆದುದಂತಃಕರಣ ಕಂಬನಿದುಂಬಿದನು ಭೀಷ್ಮ
ಎನಗೆ ಕಾಲ ಸಮೀಪ ಮಗನೇ
ನಿನಗೆ ಭಯ ಬೇಡಿನ್ನು ಕುರುಪತಿ
ದನುಜವೈರಿಗೆ ತಪ್ಪಿದಾಗಳೆ ನಿಮಗೆ ಜಯವೆಂದ ॥24॥

೦೨೫ ಕೊನ್ದೆನಗಣಿತ ರಾಯರನು ...{Loading}...

ಕೊಂದೆನಗಣಿತ ರಾಯರನು ತಾ
ಮಂದಿಯನು ನಿನಗಾನು ಮುನಿಯೆನು
ಬಂದು ಪಾರ್ಥನ ರಥವ ತಡೆದರೆ ನೀವು ಧೃತಿಗೆಡದೆ
ಇಂದಿನುದಯದಲಾ ಶಿಖಂಡಿಯ
ತಂದು ನಿಲಿಸಿದಡೆನ್ನ ತನುವನು
ಹಿಂದುಗಳೆಯದೆ ನಿಮಗೆ ತೆರುವೆನು ಮಗನೆ ಕೇಳ್ ಎಂದ ॥25॥

೦೨೬ ಗಣ್ಡುತನ ತಾ ...{Loading}...

ಗಂಡುತನ ತಾ ನೆರವು ನಿಮ್ಮ ಶಿ
ಖಂಡಿಯನು ಮುಂದಿರಿಸಲಾತನ
ಕಂಡು ನಾವ್ ಕಾಳೆಗವ ಮಾಡೆವು ಕೈದುಗಳ ಬಿಸುಟು
ಚಂಡಿತನವನು ಮಾದು[ಣ್ದು] ಮಿಗೆ ಕೈ
ಕೊಂಡು ಫಲುಗುಣನೆಸಲಿ ತನುವನು
ದಿಂಡುಗೆಡಹಲಿ ಬಳಿಕ ಗೆಲುವಿರಿ ಕೌರವೇಶ್ವರನ ॥26॥

೦೨೭ ಎನಲು ಶಿವಶಿವ ...{Loading}...

ಎನಲು ಶಿವಶಿವ ಶಿವಮಹಾದೇ
ವೆನುತ ಕಿವಿಗಳ ಮುಚ್ಚಿದನು ಕಂ
ಬನಿಯನುಗುರಲಿ ಮಿಡಿದು ನೊಂದನು ಪಾರ್ಥ ಹೃದಯದಲಿ
ಎನಗೆ ಗೆಲವಾಯ್ತದು ಕೃತಾರ್ಥರು
ಜನದೊಳೆನ್ನವೊಲಾರು ಬಳಿಕೇ
ನೆನಗೆ ನಿಮ್ಮವೊಲಾರು ಹಗೆಗಳು ಜಗದೊಳುಂಟೆಂದ ॥27॥

೦೨೮ ಕಳಿದನಡವಿಯೊಳಯ್ಯನಲ್ಲಿಂ ...{Loading}...

ಕಳಿದನಡವಿಯೊಳಯ್ಯನಲ್ಲಿಂ
ಬಳಿಕ ಭೀಷ್ಮನ ತೋಳ ತೊಟ್ಟಿಲಿ
ನೊಳಗೆ ಬೆಳೆದೆವು ಸಲಹಿದನು ಧೂಳಾಟ ಮೊದಲಾಗಿ
ಬಲಿಯಲೆರಕೆಗಳೆಮಗೆ ಭಾಗಿಸಿ
ನೆಲನ ಕೊಟ್ಟನು ಭೀಷ್ಮನೀತನ
ಕೊಲೆಗೆ ಬಯಸುವ ಮನವದೆಂತುಟೊ ಕೃಷ್ಣ ಹೇಳೆಂದ ॥28॥

೦೨೯ ಈತನನು ನಾವ್ ...{Loading}...

ಈತನನು ನಾವ್ ಕೊಲಲು ಭುವನ
ಖ್ಯಾತರಹೆವೈ ಸುಡಲಿ ಬಯಸುವ
ಭೂತಳವನೀ ಬೊಡ್ಡಿಗೋಸುಗ ಸುಟ್ಟು ಸುಕೃತವನು
ಘಾತಕರು ಪಾತಕರು ತೆಗೆ ತೆಗೆ
ಏತರವದಿರು ಪಾಂಡುತನಯರ
ಮಾತನಾಡದಿರೆಂಬ ಕೀರ್ತಿಗೆ ನೋತುದಿಲ್ಲೆಂದ ॥29॥

೦೩೦ ನಿಲ್ಲು ಫಲುಗುಣ ...{Loading}...

ನಿಲ್ಲು ಫಲುಗುಣ ಕೇಳು ಹೊಲ್ಲೆಹ
ವಲ್ಲ ಸಕಲ ಕ್ಷತ್ರಧರ್ಮವ
ಬಲ್ಲೆ ನೀನೆಮಗಹಿತನೇ ನೃಪನೀತಿಬಾಹಿರನೆ
ಎಲ್ಲಿಯಪಕೀರ್ತಿಗಳು ಕೀರ್ತಿಗ
ಳೆಲ್ಲ ವಿಧಿಯವು ನಿನ್ನ ಕಾರಣ
ವಲ್ಲ ನೀ ಕೊಲಲೈಸರವನೈ ಪಾರ್ಥ ಹೇಳೆಂದ ॥30॥

೦೩೧ ಯನ್ತ್ರಿ ಮಿಡಿದರೆ ...{Loading}...

ಯಂತ್ರಿ ಮಿಡಿದರೆ ಕಾದಿ ಬೀಳ್ವವು
ಯಂತ್ರಮಯ ಹಾಹೆಗಳು ವಧೆಯಾ
ಯಂತ್ರಿಗೋ ಹಾಹೆಗಳಿಗೋ ಹೇಳಾರ ನೆಮ್ಮುವದು
ಯಂತ್ರಿ ಕೃಷ್ಣನು ನಾವು ನೀವೀ
ತಂತ್ರವಖಿಲ ಚರಾಚರಂಗಳು
ಯಂತ್ರ ರೂಪುಗಳೆಲ್ಲ ಕಾರಣವಿಲ್ಲ ನಿನಗೆಂದ ॥31॥

೦೩೨ ಒನ್ದು ಮುಖದಲಿ ...{Loading}...

ಒಂದು ಮುಖದಲಿ ಜಗವ ಹೂಡುವ
ನೊಂದು ಮುಖದಲಿ ಜಗವ ಸಲಹುವ
ನೊಂದು ಮುಖದಲಿ ಬೇಳುವನು ನಯನಾಗ್ನಿಯಲಿ ಜಗವ
ಕೊಂದು ಹಗೆಯಲ್ಲೀತ ಸಲಹಿದ
ನೆಂದು ಮೋಹಿತನಲ್ಲ ಪರಮಾ
ನಂದಮಯ ಹರಿಯಿದಕೆ ಕಾರಣವಿಲ್ಲ ನಿನಗೆಂದ ॥32॥

೦೩೩ ಕಾವುದೀತನ ಕರುಣ ...{Loading}...

ಕಾವುದೀತನ ಕರುಣ ಮುನಿದರೆ
ಸಾವೆನೀತನ ಕಯ್ಯ ಬಾಯಲಿ
ನೀವು ತಾವ್ ನೆರೆ ಮತ್ತೆ ಕೆಲಬರು ಮುನಿದಡಂಜುವೆನೆ
ನಾವು ಬೆಸಸಿದ ಮಾಡಿ ಸಾಕಿ
ನ್ನಾವಭಯ ನಿಮಗಿಲ್ಲ ಚಿತ್ತದ
ಭಾವಶುದ್ಧಿಯಲೆಮ್ಮ ನಂಬಿರಿ ಹೋಗಿ ನೀವೆಂದ ॥33॥

೦೩೪ ಹರುಷ ಬಲಿದುದು ...{Loading}...

ಹರುಷ ಬಲಿದುದು ಮನದ ಸಂಶಯ
ಹರಿದುದಾಹವ ವಿಜಯವಾರ್ತೆಯ
ಹರಹಿನಲಿ ಹೊರೆಯೇರಿ ಹೋಂಪುಳಿಯೋದರಡಿಗಡಿಗೆ
ಸುರನದೀನಂದನನ ಹರಹಿನ
ಹರಕೆಗಳ ಕೈಕೊಂಡು ಬೀಳ್ಕೊಂ
ಡರಸ ಮುರರಿಪು ಸಹಿತ ಬಂದನು ತನ್ನ ಪಾಳಯಕೆ ॥34॥

+೦೭ ...{Loading}...