೦೨

೦೦೦ ಸೂ ಉಭಯ ...{Loading}...

ಸೂ. ಉಭಯ ಕಟಕಾಚಾರ್ಯ ಪಾಂಡವ
ವಿಭುವ ಹಿಡಿತಹೆನೆಂದು ಕೌರವ
ಸಭೆಗೆ ಭಾಷೆಯ ಕೊಟ್ಟು ಸಮರಕೆ ದ್ರೋಣನನುವಾದ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ತೆಗೆದವು ಬಲವೆರಡು ನಿಜ
ಪಾಳಯಂಗಳಿಗಿರುಳು ಕೌರವನಿತ್ತನೋಲಗವ
ಹೇಳು ಕರ್ಣ ದ್ರೋಣ ರಿಪು ಭೂ
ಪಾಲಕನನರೆಯಟ್ಟಿದನು ಗಡ
ಕಾಳೆಗದ ಹದನೇನೆನುತ ಕುರುರಾಯ ಬೆಸಗೊಂಡ ॥1॥

೦೦೨ ಏನ ಹೇಳಲುಬಹುದು ...{Loading}...

ಏನ ಹೇಳಲುಬಹುದು ಜೀಯ ಕೃ
ಶಾನುವಡವಿಯಲಾಡಿದಂದದಿ
ನಾ ನಿರೂಢಿಯ ಭಟರ ಮುರಿದನು ಮುರಿದ ಮಾರ್ಗದಲಿ
ಸೇನೆ ಕಲಕಿತು ಬತ್ತಿದುದಧಿಯ
ಮೀನಿನಂತಿರೆ ಮರುಗಿದರು ಭಟ
ರಾ ನರೇಂದ್ರನನಳವಿಯಲಿ ಬೆಂಬತ್ತಿದನು ದ್ರೋಣ ॥2॥

೦೦೩ ಅಳವಿಗೊಟ್ಟನು ನೃಪತಿ ...{Loading}...

ಅಳವಿಗೊಟ್ಟನು ನೃಪತಿ ಗುರು ಕೈ
ಚಳಕದಲಿ ತೆಗೆದೆಸುತ ನಡೆದಿ
ಟ್ಟಳಿಸಿ ಹಿಡಿಹಿಂಗೊಳಗುಮಾಡಿ ವಿಘಾತಿಯ ತಡೆಯೆ
ಎಲೆಲೆ ದೊರೆ ಸಿಕ್ಕಿದನು ಸಿಕ್ಕಿದ
ನಳಿದುದೋ ದ್ರೌಪದಿಯ ಸಿರಿಯೆಂ
ಬುಲುಹ ಕೇಳುತ ಪಾರ್ಥ ಬಂದನು ಬಿಟ್ಟ ಸೂಠಿಯಲಿ ॥3॥

೦೦೪ ವೀರರಿದ್ದೇಗುವರು ದೈವದ ...{Loading}...

ವೀರರಿದ್ದೇಗುವರು ದೈವದ
ಕೂರುಮೆಯ ನೆಲೆ ಬೇರೆ ನಮಗೊಲಿ
ದಾರು ಮಾಡುವುದೇನೆನುತ ಕಲಿಕರ್ಣ ಬಿಸುಸುಯ್ಯೆ
ಭೂರಿ ಭೂಪರು ವಿಸ್ತರದ ಗಂ
ಭೀರ ಸಾಗರದಂತಿರಲು ರಣ
ಧೀರರೆದ್ದರು ವರ ತ್ರಿಗರ್ತರು ರಾಜಸಭೆಯೊಳಗೆ ॥4॥

೦೦೫ ಕೇಳು ಸೇನಾನಾಥ ...{Loading}...

ಕೇಳು ಸೇನಾನಾಥ ಕುರುಪತಿ
ಕೇಳು ಕೇಳೈ ಕರ್ಣ ಸುಭಟರು
ಕೇಳಿರೈ ದೇಶಾಧಿನಾಥರು ವೀರಪರಿವಾರ
ನಾಳೆ ಮೊದಲಾಗರ್ಜುನನ ನಾವ್
ಕಾಳೆಗಕೆ ಬರಲೀಯೆವೆಮ್ಮಯ
ಕಾಳೆಗದಲೇ ಸವೆಯಬೇಹುದು ಪಾರ್ಥನಂಬುಗಳು ॥5॥

೦೦೬ ಹಿನ್ದೆ ಹಿಡಿ ...{Loading}...

ಹಿಂದೆ ಹಿಡಿ ನೀ ಮೇಣು ಬಿಡು ಯಮ
ನಂದನನನೊಲಿದಂತೆ ಮಾಡಿ
ಲ್ಲಿಂದ ಮೇಲರ್ಜುನನ ಭಯ ನಿಮಗಿಲ್ಲ ನಂಬುವುದು
ಎಂದು ಶಪಥವ ತಮ್ಮಿನಿಬರೈ
ತಂದು ವಿಪ್ರರ ಕರಸಿ ವೈದಿಕ
ದಿಂದ ರಚಿಸಿದರಗ್ನಿಯನು ಮಾಡಿದರು ಭಾಷೆಗಳ ॥6॥

೦೦೭ ನರನ ಬಿಡಲಾಗದು ...{Loading}...

ನರನ ಬಿಡಲಾಗದು ಮಹಾ ಸಂ
ಗರದೊಳೊಬ್ಬರನೊಬ್ಬರೊಪ್ಪಿಸಿ
ತೆರಳಲಾಗದು ಮುರಿಯಲಾಗದು ಕೊಂಡ ಹಜ್ಜೆಗಳ
ಹೊರಳಿವೆಣನನು ಮೆಟ್ಟಿ ಮುಂದಣಿ
ಗುರವಣಿಸುವುದು ತಪ್ಪಿದವರಿಗೆ
ನರಕವೀ ಪಾತಕರ ಗತಿ ನಮಗೆಂದು ಸಾರಿದರು ॥7॥

೦೦೮ ನುಡಿದ ನುಡಿಗೇಡುಗನ ...{Loading}...

ನುಡಿದ ನುಡಿಗೇಡುಗನ ವಿಪ್ರರ
ಮಡುಹಿದಾತನನಮಳ ಗುರುವಿನ
ಮಡದಿಯರಿಗಳುಪಿದನ ಸಾಕಿದ ಪತಿಗೆ ತಪ್ಪಿದನ
ಹಿಡಿದ ಶರಣಾಗತರ ಕಾಯದೆ
ಬಿಡುವವನ ನಾಸ್ತಿಕನ ವಿಪ್ರರ
ಜಡಿದು ನುಡಿದನ ಗತಿಗಳಾಗಲಿ ರಣದೊಳೋಡಿದರೆ ॥8॥

೦೦೯ ಎನ್ದು ಸಮಸಪ್ತಕರು ...{Loading}...

ಎಂದು ಸಮಸಪ್ತಕರು ತಮ್ಮೊಳ
ಗಂದು ಶಪಥವ ಮಾಡಿ ವಿಪ್ರರ
ಮಂದಿಗಿತ್ತರು ಗೋ ಹಿರಣ್ಯ ಸಮಸ್ತ ವಸ್ತುಗಳ
ಇಂದು ರವಿ ಜಲ ವಹ್ನಿಯನಿಲ ಪು
ರಂದರಾದಿ ಸುರೌಘ ಸಾಕ್ಷಿಗ
ಳೆಂದು ಸೂಳೈಸಿದರು ಭುಜವನು ಸಿಡಿಲು ತನಿಹೆದರೆ ॥9॥

೦೧೦ ಇವರ ಮೊದಲಿಗ ...{Loading}...

ಇವರ ಮೊದಲಿಗ ಸತ್ಯರಥನಿಂ
ತಿವನ ಬಳಿ ರಥ ಹತ್ತು ಸಾವಿರ
ವಿವನೊಡನೆ ಸೇರುವೆಯ ರಥ ಮೂವತ್ತು ಸಾವಿರದ
ಭುವನವೀರ ಸುಶರ್ಮ ಮಾಳವ
ಯವನರತಿರಥ ಹತ್ತು ಸಾವಿರ
ಬವರಕಿಂತೈವತ್ತು ಸಾವಿರ ರಥಗಳೊಗ್ಗಾಯ್ತು ॥10॥

೦೧೧ ಸಭೆ ಬೆದರೆ ...{Loading}...

ಸಭೆ ಬೆದರೆ ಕಲ್ಪಾಂತ ಶರಧಿಯ
ರಭಸವಲ್ಲಿಯೆ ಕೇಳಲಾದುದು
ಸುಭಟರಹುದೋ ಜಾಗು ಜಾಗೆನುತೊಲೆದನಾ ದ್ರೋಣ
ಅಭವನಡಹಾಯ್ದಿರಲಿ ಪಾಂಡವ
ವಿಭುವ ಹಿಡಿವೆನು ಪಾರ್ಥನೊಬ್ಬನ
ಪ್ರಭೆಗೆ ಹೆದರುವೆನುಳಿದ ವೀರರ ಬಗೆವನಲ್ಲೆಂದ ॥11॥

೦೧೨ ನಯವಿದನು ಹೊಮ್ಬಟ್ಟಲಲಿ ...{Loading}...

ನಯವಿದನು ಹೊಂಬಟ್ಟಲಲಿ ವೀ
ಳೆಯವನನಿಬರಿಗಿತ್ತು ಕುರುಸೇ
ನೆಯಲಿ ಮರುಮಾತೇಕೆ ನೀವೇ ವಿಜಯವುಳ್ಳವರು
ಜಯವನಿನ್ನಾಹವದೊಳಗೆ ನಿ
ರ್ಣಯಿಸಬಹುದೆಮಗೆನುತ ಗುರು ಪಾ
ಳಯಕೆ ನೇಮವ ಕೊಟ್ಟನೋಲಗ ಹರೆದುದಾ ಕ್ಷಣಕೆ ॥12॥

೦೧೩ ಸಸಿ ವರುಣದಿಗುವಧುವನಾಲಿಂ ...{Loading}...

ಸಸಿ ವರುಣದಿಗುವಧುವನಾಲಿಂ
ಗಿಸಲು ಕುಮುದಿನಿ ಖತಿಯ ಹಿಡಿದಳು
ಮಸುಳಿದವು ತಾರೆಗಳು ರಜನೀನಾರಿ ಹಿಂಗಿದಳು
ಒಸೆದು ಕಮಲಿನಿ ನಗಲು ಮಿಗೆ ಹುರು
ಡಿಸುತ ಪೂರ್ವದಿಶಾನಿತಂಬಿನಿ
ನಿಶಿತ ಕೋಪದ ಕಿಡಿಯನುಗುಳಿದಳೆನಲು ರವಿ ಮೆರೆದ ॥13॥

೦೧೪ ಜೋಡು ಮಾಡಿತು ...{Loading}...

ಜೋಡು ಮಾಡಿತು ನೃಪರು ನಿಮಿಷಕೆ
ಹೂಡಿದವು ತೇರುಗಳು ಹಯತತಿ
ಕೂಡೆ ಹಲ್ಲಣಿಸಿದವು ಗುಳದಲಿ ಜಡಿದವಾನೆಗಳು
ಕೂಡೆ ಘುಮ್ಮಿಡೆ ದೆಸೆ ದೆಸೆಗಳ
ಲ್ಲಾಡಿದವು ಗಿರಿನಿಕರ ಬಿರುದನಿ
ಮಾಡಿದವು ನಿಸ್ಸಾಳತತಿ ಸೇನಾಸಮುದ್ರದಲಿ ॥14॥

೦೧೫ ಉದಯವಾಗದ ಮುನ್ನ ...{Loading}...

ಉದಯವಾಗದ ಮುನ್ನ ಕಳನೊಳು
ಹೊದರುಗಟ್ಟಿದರೀ ತ್ರಿಗರ್ತರು
ಕದನಕೆಮ್ಮೊಳಗಳವಿಗೊಡುವುದು ಬೇಗ ಬಹುದೆಂದು
ಮದವದರಿಭಟ ಭೈರವಂಗ
ಟ್ಟಿದರು ಭಟ್ಟರನವರು ಬಂದೊದ
ರಿದರು ಪಾರ್ಥನ ಮುಂದೆ ಸಮಸಪ್ತಕರ ಬಿರುದುಗಳ ॥15॥

೦೧೬ ಏಳು ಫಲುಗುಣ ...{Loading}...

ಏಳು ಫಲುಗುಣ ಕೃಷ್ಣನೇ ಗೋ
ಪಾಲನೇಸರ ಮಾನಿಸನು ಬರ
ಹೇಳಲಾಪರೆ ಕರೆ ಸಹಾಯಕೆ ಭಾಳಲೋಚನನ
ಏಳು ಜಂಜಡವೇನು ಜೊತ್ತಿನ
ಕಾಳೆಗಕೆ ಕಲಿಯಾಗು ನಡೆಯೆನೆ
ಕೇಳುತರ್ಜುನನಿತ್ತನವರಿಗೆ ನಗುತ ವೀಳೆಯವ ॥16॥

೦೧೭ ನಡೆಯಿ ನೀವಾಹವಕೆ ...{Loading}...

ನಡೆಯಿ ನೀವಾಹವಕೆ ಮೆಚ್ಚಿಸಿ
ಕೊಡುವೆನೀ ಬಹೆನೆಂದು ಮುರಹರ
ನೊಡನೆ ಮುದದಲಿ ರಥಕೆ ಬಂದನು ಬಿಲ್ಲನೊದರಿಸುತ
ನುಡಿದನಂತಕಸೂನು ಕಳಶಜ
ಹಿಡಿಯಲೆಂದೇರಿಸಿದ ನುಡಿ ತ
ನ್ನೊಡನೆ ನಿಂದಾವವನು ಕಾದುವ ಪಾರ್ಥ ಹೇಳೆಂದ ॥17॥

೦೧೮ ಕರಸಿದರೆ ಕಾಳೆಗದೊಳೆನಗೆಡೆ ...{Loading}...

ಕರಸಿದರೆ ಕಾಳೆಗದೊಳೆನಗೆಡೆ
ಮುರಿಯಬಾರದು ನಿಮ್ಮ ಕಾಹಿಂ
ಗಿರಲಿ ನೀಲನು ಸತ್ಯಜಿತು ಕೌಶಲ ಶತಾನೀಕ
ವರ ಘಟೋತ್ಕಚ ದ್ರುಪದ ಕೈಕೆಯ
ರಿರಲಿ ಪವನಜ ನಕುಲ ಸಹದೇ
ವರಿಗೆ ದ್ರೋಣನ ಬವರವಾಗಲಿ ಎಂದನಾ ಪಾರ್ಥ ॥18॥

೦೧೯ ಎನ್ದು ಸಮಸಪ್ತಕರ ...{Loading}...

ಎಂದು ಸಮಸಪ್ತಕರ ಮೋಹರ
ಕಂದು ತಿರುಗಿದ ಪಾರ್ಥನಿತ್ತಲು
ಸಂದಣಿಸಿತರಿರಾಯದಳ ಜಲರಾಸಿ ಜರಿವಂತೆ
ಮುಂದೆ ತವಕಿಗ ಭಟರ ತೆರಳಿಕೆ
ಯಿಂದ ಮೊರೆವ ಗಭೀರ ಭೇರಿಯ
ಮಂದರದ ಮುರಿಗಡಲ ಗಜರಿನೊಲೊದರಿತರಿಸೇನೆ ॥19॥

೦೨೦ ಬಳಿಯ ಸುಮಹಾರಥರ ...{Loading}...

ಬಳಿಯ ಸುಮಹಾರಥರ ರಾಜಾ
ವಳಿಯ ಚಮರಚ್ಛತ್ರ ಪಾಳಿಯ
ಸೆಳೆದಡಾಯುಧ ಹೆಗಲ ತೆಕ್ಕೆಯ ರಾಯ ರಾವುತರ
ಹೊಳೆವ ಹೇಮದ ರಥಕೆ ಹೂಡಿದ
ತಿಲಕಗುದುರೆಯ ನೆಗಹಿ ನಿಗುರುವ
ಕಳಶ ಸಿಂಧದ ದ್ರೋಣ ಹೊಕ್ಕನು ಕಾಳೆಗದ ಕಳನ ॥20॥

೦೨೧ ಗರುಡನಾಕಾರದಲಿ ಬಲವನು ...{Loading}...

ಗರುಡನಾಕಾರದಲಿ ಬಲವನು
ಸರಿಸ ಮಿಗೆ ಮೋಹಿದನು ವಿಹಗನ
ಶಿರಕೆ ಕೃಪ ಕುರುರಾಯ ದುಶ್ಶಾಸನನ ನಿಲಿಸಿದನು
ಕರೆದು ಭೂರಿಶ್ರವನ ಮಾದ್ರೇ
ಶ್ವರನ ಭಗದತ್ತನ ಸುಬಾಹುವ
ನಿರಿಸಿದನು ಬಲದೆರಕೆಯೊಳಗಕ್ಷೋಹಿಣೀ ಬಲವ ॥21॥

೦೨೨ ವಿನ್ದ್ಯನಶ್ವತ್ಥಾಮ ಕರ್ಣನ ...{Loading}...

ವಿಂದ್ಯನಶ್ವತ್ಥಾಮ ಕರ್ಣನ
ನಂದನರು ಕಾಂಭೋಜ ಕೌಶಲ
ಸಿಂಧು ನೃಪರಕ್ಷೋಹಿಣಿಯ ತಂದೆಡದ ಪಕ್ಕದಲಿ
ನಿಂದುದಾ ಮೋಹರದ ಜೋಕೆಯ
ಹಿಂದೆ ಲಕ್ಷ ಕಳಿಂಗ ಘಟೆಗಳು
ಸಂದಣಿಸಿದವು ದ್ರೋಣ ನಿಂದನು ಬಲದ ಕಾಹಿನಲಿ ॥22॥

೦೨೩ ಆರಿ ಬೊಬ್ಬಿರಿದಖಿಳ ...{Loading}...

ಆರಿ ಬೊಬ್ಬಿರಿದಖಿಳ ಸೇನೆಯ
ಭೂರಿ ಭಟರಗ್ರದಲಿ ಕಟಕಾ
ಚಾರಿಯನು ಕೈವೀಸಿದನು ಬರಹೇಳು ಪವನಜನ
ವೀರನಾದಡೆ ದೊರೆಯ ಹೊಗ ಹೇ
ಳಾರು ತಡೆದರೆ ತಡೆಯಿ ಹಿಡಿವೆನು
ಧೀರ ಕೌರವನಾಣೆನುತ ಬೊಬ್ಬಿರಿದನಾ ದ್ರೋಣ ॥23॥

೦೨೪ ಕರಸಿ ಧೃಷ್ಟದ್ಯುಮ್ನ ...{Loading}...

ಕರಸಿ ಧೃಷ್ಟದ್ಯುಮ್ನ ನಿಜ ಮೋ
ಹರವ ರಚಿಸಿದನರ್ಧ ಚಂದ್ರೋ
ತ್ಕರ ವಿಳಾಸದೊಳಳ್ಳಿರಿವ ನಿಸ್ಸಾಳ ಕೋಟಿಗಳ
ಧುರಕೆ ನಿಗುರುವ ಭಟರ ತೂಳುವ
ಕರಿಘಟೆಯ ಕೆಲಬಲಕೆ ಸೂಸುವ
ತುರಗ ರಾಜಿಯ ತೇರ ಗಮನದ ಗಜರು ಘಾಡಿಸಿತು ॥24॥

೦೨೫ ಒದೆದುದಬುಧಿಯನಬುಧಿಯೆನೆ ಹೊ ...{Loading}...

ಒದೆದುದಬುಧಿಯನಬುಧಿಯೆನೆ ಹೊ
ಕ್ಕುದು ಚತುರ್ಬಲ ಹೊಯ್ದು ತಲೆಯೊ
ತ್ತಿದುದು ಕೇಶಾಕೇಶಿ ಖಾಡಾಖಾಡಿಯಲಿ ಭಟರು
ಕೆದರಿತರಿಬಲ ಮತ್ತೆ ಹೊದರೆ
ದ್ದುದು ವಿಘಾತಿಯಲಳಿದು ಹುರಿಗೊಂ
ಡೊದಗಿ ಹಾಣಾಹಾಣಿಯಲಿ ಹೊಯ್ದಾಡಿತುಭಯಬಲ ॥25॥

೦೨೬ ಹಳಚುವಸಿಗಳ ಖಣಿಖಟಿಲು ...{Loading}...

ಹಳಚುವಸಿಗಳ ಖಣಿಖಟಿಲು ಕಳ
ಕಳಕೆ ಮಿಗೆ ಹೊಯ್ದಾಡಿತುರುಳುವ
ತಲೆಯ ಬೀಳುವ ಹೆಣನ ಧಾರಿಡುವರುಣ ವಾರಿಗಳ
ತಳಿತ ಖಂಡದ ಹರಿದ ಕರುಳಿನ
ಕಳಚಿದೆಲುವಿನ ಕುಣಿವ ಮುಂಡದ
ಕೊಳುಗುಳದ ಹೆಬ್ಬೆಳಸು ಹೆಚ್ಚಿಸಿತಂತಕನ ಪುರವ ॥26॥

೦೨೭ ಉಲಿದು ಸೂಠಿಯೊಳೇರಿದರು ...{Loading}...

ಉಲಿದು ಸೂಠಿಯೊಳೇರಿದರು ವೆ
ಗ್ಗಳೆಯ ರಾವ್ತರು ಗಜರಿ ಮಸ್ತಕ
ಹಿಳಿಯಲಂಕುಶವಿಕ್ಕಿ ಬಿಟ್ಟರು ಸೊಕ್ಕಿದಾನೆಗಳ
ತಳಪಟವ ತುಂಬಿದವು ತೇರುಗ
ಳಿಳೆ ಜಡಿಯೆ ಕಾಲಾಳು ಹೊಕ್ಕೊಡೆ
ಗಲಿಸಿ ಹೊಯ್ದರು ಚೂಣಿಯರೆದುದು ಕಳನ ಚೌಕದಲಿ ॥27॥

೦೨೮ ಇತ್ತಲರ್ಜುನನಾ ತ್ರಿಗರ್ತರಿ ...{Loading}...

ಇತ್ತಲರ್ಜುನನಾ ತ್ರಿಗರ್ತರಿ
ಗಿತ್ತನವಸರವನು ಕೃತಾಂತನ
ತೆತ್ತಿಗರಿಗೌತನವ ಹೇಳಿಸಿದನು ಶರೌಘದಲಿ
ಕುತ್ತಿದವು ಕೂರಂಬು ದೊರೆಗಳ
ಮುತ್ತಿದವು ಕೆದರಿದವು ನಿಮಿಷಕೆ
ಬತ್ತಿಸಿದನಂದಹಿತ ಸುಭಟರ ವೀರ ಶರನಿಧಿಯ ॥28॥

೦೨೯ ಏನ ಹೇಳುವೆನಿತ್ತಲಾದುದು ...{Loading}...

ಏನ ಹೇಳುವೆನಿತ್ತಲಾದುದು
ದಾನವಾಮರರದುಭುತಾಹವ
ವಾ ನಿರಂತರ ವಿಕ್ರಮೋನ್ನತ ಭಟರ ಬವರದಲಿ
ಆನಲಾರಿಗೆ ನೂಕುವುದು ತವ
ಸೂನುವಿನ ಸುಭಟರು ಪರಾಕ್ರಮ
ಹೀನರೇ ಧೃತರಾಷ್ಟ್ರ ಕೇಳೈ ದ್ರೋಣ ಸಂಗರವ ॥29॥

೦೩೦ ಬಿಲ್ಲನೊದರಿಸಿ ಕೆಲಬಲದ ...{Loading}...

ಬಿಲ್ಲನೊದರಿಸಿ ಕೆಲಬಲದ ಭಟ
ರೆಲ್ಲರಿಗೆ ಕೈವೀಸಿ ಚೌಪಟ
ಮಲ್ಲ ನುಡಿದನು ತನ್ನ ಸಾರಥಿಗಿತ್ತು ವೀಳೆಯವ
ಖುಲ್ಲ ರಿಪುಗಳ ಬಿಸುಟು ಹೊದರಿನ
ಹೊಳ್ಳುಗರನೊಡೆಹಾಯ್ಸಿ ಧರ್ಮಜ
ನೆಲ್ಲಿ ಮೋಹರದೆಗೆವನತ್ತಲೆ ರಥವ ಹರಿಸೆಂದ ॥30॥

೦೩೧ ರಥವ ಬಿಟ್ಟನು ...{Loading}...

ರಥವ ಬಿಟ್ಟನು ಸೂಠಿಯಲಿ ನಿ
ರ್ಮಥಿತ ರಿಪುಗಳನಟ್ಟಿದನು ಭುಜ
ಶಿಥಿಲ ಸಾಹಸರೇನ ನಿಲುವರು ದ್ರೋಣನುರವಣೆಗೆ
ಪೃಥಿವಿ ನೆಗ್ಗಿತು ಹೊತ್ತ ಕಮಠನ
ವ್ಯಥೆಯನಾರುಸುರುವರು ಸುಮಹಾ
ರಥರ ಹೊದರಲಿ ಹೊಕ್ಕನುರಿ ಬಲು ಮೆಳೆಯ ಹೊಕ್ಕಂತೆ ॥31॥

೦೩೨ ಆಳ ಹೊಗಿಸೋ ...{Loading}...

ಆಳ ಹೊಗಿಸೋ ದ್ರೋಣ ರಥ ದು
ವ್ವಾಳಿಯಲಿ ಬರುತದೆ ಕೃತಾಂತನ
ದಾಳಿಗೆತ್ತಣ ವೀರವೋ ನೆಗ್ಗಿದವು ನೆನಹುಗಳು
ಕಾಳುಗೆಡದಿರಿ ಕೂಡೆ ಕೈಕೊಳ
ಹೇಳಿ ಕೈ ತಪ್ಪಾಗದಿರದು ನೃ
ಪಾಲಕಂಗೆಂದೊದರಿದರು ಧರ್ಮಜನ ಮಂತ್ರಿಗಳು ॥32॥

೦೩೩ ಫಡ ಫಡಾನಿರುತಿರಲು ...{Loading}...

ಫಡ ಫಡಾನಿರುತಿರಲು ರಾಯನ
ಹಿಡಿವವನ ಹೆಸರೇನು ರಿಪು ಭಟ
ನೊಡಲ ಹೊಳ್ಳಿಸಿ ನೆಣನನುಣಲಿಕ್ಕುವೆನು ದೈತ್ಯರಿಗೆ
ಬಿಡು ರಥವನಾ ದ್ರೋಣನಿದಿರಲಿ
ತಡೆಯೆನುತ ಸಾರಥಿಗೆ ಸೂಚಿಸಿ
ತುಡುಕಿದನು ಬಲುಬಿಲ್ಲ ಧೃಷ್ಟದ್ಯುಮ್ನನಿದಿರಾದ ॥33॥

೦೩೪ ಬಲ್ಲೆನೀತನ ಬಲುಹ ...{Loading}...

ಬಲ್ಲೆನೀತನ ಬಲುಹ ಸಾಕೀ
ಯೊಳ್ಳೆಗನನೆಡಕಿಕ್ಕಿ ಹಾಯಿಸು
ಕಲ್ಲೆಯಲಿ ಮುರಿನೂಕು ನಡೆ ಭೂಪತಿಯ ಸಮ್ಮುಖಕೆ
ನಿಲ್ಲದೊಡ್ಡೈಸೆನುತ ಸಾಹಸ
ಮಲ್ಲ ಸಾರಥಿಗರುಹೆ ಬಲವ
ಲ್ಲಲ್ಲಿ ಭಯಗೊಳೆ ದ್ರೋಣ ಹೊಕ್ಕನು ರಾಯಮೋಹರವ ॥34॥

೦೩೫ ಶಿವಶಿವಾ ಸಿಕ್ಕಿದನು ...{Loading}...

ಶಿವಶಿವಾ ಸಿಕ್ಕಿದನು ಸಿಕ್ಕಿದ
ನವನಿಪತಿಯೆನಲೌಂಕಿದರು ಗಜ
ನಿವಹವಗಿದಬ್ಬರಿಸೆ ಮುಕ್ಕುರುಕಿದವು ಕುದುರೆಗಳು
ತವಕದಲಿ ಬದ್ದರದ ಬಂಡಿಗ
ಳವುಚಿದವು ತಲೆವರಿಗೆಗಳಲಾ
ಹವವ ಹೊಕ್ಕುದು ಪಾಯದಳವಾಚಾರ್ಯನಿದಿರಿನಲಿ ॥35॥

೦೩೬ ಪಟುಗಳೋ ಮಝ ...{Loading}...

ಪಟುಗಳೋ ಮಝ ಪೂತು ಪಾಂಡವ
ಭಟರು ಖರೆಯವಲಾ ಯುಧಿಷ್ಠಿರ
ನಟಮಟಿಸಿ ತಾ ಚುಕ್ಕಿಗಿಕ್ಕುವ ಲೆಕ್ಕ ಲೇಸಾಯ್ತು
ಕುಟಿಲತನದಲಿ ಗೆಲುವೆನೇ ಹುಲು
ಕುಟಿಗರಿವದಿರ ಹೊಯ್ದು ತನ್ನನು
ನಿಟಿಲಲೋಚನನಡ್ಡ ಹಾಯ್ದರೆ ಹಿಡಿವೆನೆನುತೆಚ್ಚ ॥36॥

೦೩೭ ನೂಕಿ ಹರಿತಹ ...{Loading}...

ನೂಕಿ ಹರಿತಹ ತೇಜಿಗಳ ಖುರ
ನಾಕ ಖಂಡಿಸಿ ಕವಿವ ನಾಗಾ
ನೀಕವನು ನೆರೆ ಕೆಡಹಿ ತೇರಿನ ಹೊದರ ಹರೆಗಡಿದು
ಔಕಿ ತಲೆವರಿಗೆಯಲಿ ತೆರಳಿದ
ನೇಕ ಸುಭಟರ ಸೀಳಿ ಜಯ ರ
ತ್ನಾಕರನು ಕಲಕಿದನು ಪಾಂಡವ ಸೈನ್ಯಸಾಗರವ ॥37॥

೦೩೮ ಬಲವ ಬರಿಕೈದೆವು ...{Loading}...

ಬಲವ ಬರಿಕೈದೆವು ಯುಧಿಷ್ಠಿರ
ಬಿಲುದುಡುಕು ಸಾಕೋಡಿ ಬದುಕುವ
ಹುಲು ಪರೆಯತನ ಹೆಮ್ಮೆಯೇ ಕ್ಷತ್ರಿಯರ ಮಕ್ಕಳಿಗೆ
ಅಳಿದರಮರರಿಗೊಡೆಯನಹೆ ಮೇ
ಣುಳಿದಡವನೀಪಾಲನಹೆ ಯೀ
ಕಲಹವಿಹಪರಕೊಳ್ಳಿತೆಂದುರವಣಿಸಿದನು ದ್ರೋಣ ॥38॥

೦೩೯ ಫಡ ಫಡುರವಣೆ ...{Loading}...

ಫಡ ಫಡುರವಣೆ ಬೇಡ ತೆಗೆ ಬಾ
ಯ್ಬಡಿಕತನವಿದು ಗುರುವರಂಗವೆ
ಕಡುಹ ನಾಲಗೆಯರುಹಲೇತಕೆ ಕೈಯ ಧನುವಿರಲು
ಒಡನೆ ತಾನಿರುತಿರಲು ರಾಯನ
ಹಿಡಿವ ಭಟನೇ ನೀನೆನುತ ಬಿಲು
ದುಡುಕಿ ಮುಂದೆ ಶಿಖಂಡಿ ದ್ರೋಣನ ರಥಕೆ ಮಾರಾಂತ ॥39॥

೦೪೦ ಅಕಟ ಸಿಂಹಕೆ ...{Loading}...

ಅಕಟ ಸಿಂಹಕೆ ಮಲೆತುದೋ ಜಂ
ಬುಕನು ನೋಡೈ ಸೂತ ಭೀಷ್ಮನ
ಶಕುತಿಗಂದಿದಿರಾದ ಮದದಲಿ ಮುಂದುಗಾಣನಿವ
ಚಕಿತ ಚಾಪ ಶಿಖಂಡಿ ನಿಲು ಸಾ
ಯಕದ ಮೊನೆಯಲಿ ಮಾತನಾಡುವು
ದುಕುತಿ ಚಾಪಳವೇಕೆನುತ ಕಣೆಗೆದರಿದನು ದ್ರೋಣ ॥40॥

೦೪೧ ಗುರುವಿನಮ್ಬಿನ ಬಮ್ಬಲನು ...{Loading}...

ಗುರುವಿನಂಬಿನ ಬಂಬಲನು ಕ
ತ್ತರಿಸಿ ಕೈದೋರಿದನು ದಿಗುತಟ
ಬಿರಿಯೆ ದಿಙ್ಮಯವಾದವಂಬುಗಳೇನನುಸುರುವೆನು
ಅರಿ ಶಿಖಂಡಿಯ ಕೈಚಳಕ ಕಾ
ಹುರವಲೇ ಲೇಸಾಯ್ತು ಬಿಲ್ಲಿನ
ಭರವಸಿಕೆಯಹುದೆನುತ ಕೈಕೊಂಡೆಚ್ಚನಾ ದ್ರೋಣ ॥41॥

೦೪೨ ಸಾಕು ಷಣ್ಡನ ...{Loading}...

ಸಾಕು ಷಂಡನ ಕೂಡೆ ಕಾದುವು
ದೇಕೆ ತಿದ್ದುವೆನೆನುತ ರಥವನು
ನಾಕು ಶರದಲಿ ಮುರಿದು ಸೂತನ ತಲೆಯನೆರಡರಲಿ
ನೂಕಿ ಧನುವನು ಮೂರು ಬಾಣದ
ಲೌಕಿ ಖಂಡಿಸಿ ಹೋಗು ಹೋಗಿ
ನ್ನಾಕೆವಾಳರನರಸಿ ತಾ ಎನುತೈದಿದನು ದ್ರೋಣ ॥42॥

೦೪೩ ಎಲೆ ಯುಧಿಷ್ಠಿರ ...{Loading}...

ಎಲೆ ಯುಧಿಷ್ಠಿರ ಬಿಲ್ಲ ಹಿಡಿ ನರ
ಹುಳುಗಳಿವದಿರ ಕವಿಸಿ ಕಾಲವ
ಕೊಲುವುದೇ ಸಾಕಿನ್ನು ಕೈವಶವಾದೆ ನಿಲ್ಲೆನುತ
ಅಳವಿಗಿಟ್ಟಣಿಸಲು ಶರಾಳಿಯ
ತುಳುಕಿ ಹೊಕ್ಕನು ಸತ್ಯಜಿತು ದಳ
ವುಳಿಸಿದರು ಚಿತ್ರಕ ಶತಾನೀಕಾದಿ ನಾಯಕರು ॥43॥

೦೪೪ ಬರಿಯ ಕಾರ್ಪಣ್ಯದಲಿ ...{Loading}...

ಬರಿಯ ಕಾರ್ಪಣ್ಯದಲಿ ಮೇಘದ
ಮರೆಯ ಹೊಕ್ಕರೆ ರಾಹು ಬಿಡುವನೆ
ಉರಿವ ರವಿಮಂಡಲವನೆಲೆ ಕುಂತೀ ಕುಮಾರಕನೆ
ಇರಿದು ಮೆರೆವುದು ಮಹಿಮೆಯನು ಕೈ
ಮರೆಯದಿರು ಮೈಮಾರಿಗಳ ಮು
ಕ್ಕುರಿಕಿದಿವದಿರ ತಿದ್ದಿ ಬಹೆನಿದೆಯೆನುತ ತೆಗೆದೆಚ್ಚ ॥44॥

೦೪೫ ಏನು ತರಹರಿಸುವುದು ...{Loading}...

ಏನು ತರಹರಿಸುವುದು ತಿಮಿರವು
ಭಾನುರಶ್ಮಿಯ ಮುಂದೆ ದ್ರೋಣನ
ನೂನ ಶರವರ್ಷದಲಿ ನಾದವು ಸುಭಟರೊಡಲುಗಳು
ಆ ನಿರಂತರ ನಿಶಿತ ಶರ ಸಂ
ಧಾನಕಿವದಿರು ಲಕ್ಷ್ಯವೇ ನಿ
ನ್ನಾನೆಗಳಿಗಿದಿರಾವನೈ ಧೃತರಾಷ್ಟ್ರ ಕೇಳ್ ಎಂದ ॥45॥

೦೪೬ ಕೋಲಿಗೊಬ್ಬರ ಕೆಡಹಿದನು ...{Loading}...

ಕೋಲಿಗೊಬ್ಬರ ಕೆಡಹಿದನು ಪಾಂ
ಚಾಲ ಬಲದಲಿ ಸತ್ಯಜಿತುವನು
ಮೇಲಣಾಹವದೊಳು ಶತಾನೀಕ ಕ್ಷಿತೀಶ್ವರನ
ಸೀಳಿದನು ಮಿಡುಕುವ ಮಹಾರಥ
ರೇಳು ನೂರನು ತುರಗ ಗಜ ಕಾ
ಲಾಳನಳಿದುದನಾವನೆಣಿಸುವನಹಿತ ಸೇನೆಯಲಿ ॥46॥

೦೪೭ ಹೊಳ್ಳುಗಳ ತೂರಿದೆವು ...{Loading}...

ಹೊಳ್ಳುಗಳ ತೂರಿದೆವು ಹಿಡಿ ಹಿಡಿ
ಬಿಲ್ಲ ಸುರಿ ಸುರಿ ಶರವನಕಟಿ
ನ್ನೆಲ್ಲಿ ಹೊಗುವೈ ಕಂದ ಕುಂತಿಯ ಜಠರವಲ್ಪವಲೆ
ನಿಲ್ಲು ನಿಲ್ಲೆನುತೈದಿ ಬರಲ
ಲ್ಲಲ್ಲಿ ಮರುಗಿತು ಸೇನೆ ಸಾಹಸ
ಮಲ್ಲನಡಹಾಯಿದನು ದ್ರುಪದನು ಧನುವನೊದರಿಸುತ ॥47॥

೦೪೮ ರಾಯನಾಪತ್ತಿನ್ದ ಮುನ್ನವೆ ...{Loading}...

ರಾಯನಾಪತ್ತಿಂದ ಮುನ್ನವೆ
ಸಾಯಬೇಹುದು ತನಗೆನುತಲಡ
ಹಾಯಿದನು ಕಲಿ ಮತ್ಸ್ಯನೃಪ ನಿಜಬಂಧುಗಳ ಸಹಿತ
ನೋಯಬೇಹುದು ಮುನ್ನ ತಾವೆನು
ತಾಯತಿಕೆಯಲಿ ಪಂಚ ಕೈಕೆಯ
ರಾಯುಧದ ಬೆಳಗಳ್ಳಿರಿಯೆ ನೂಕಿದರು ತೇರುಗಳ ॥48॥

೦೪೯ ತಲೆಗೆ ಕೊಣ್ಡೆವು ...{Loading}...

ತಲೆಗೆ ಕೊಂಡೆವು ಹಣವನಿನ್ನಿದ
ನುಳುಹಿಕೊಂಡಿರಲಾಗದೆಂದಿ
ಟ್ಟಳಿಸಿ ಹೊಕ್ಕುದು ಯವನ ಸಂವೀರರು ಸುಷೇಣಕರು
ಅಳವಿಗಳುಕುವುದಾಳುತನದ
ಗ್ಗಳಿಕೆಯೇ ಸುಡಲೆನುತ ಮನ ಮುಂ
ಕೊಳಿಸಿ ಕುಂತೀಭೋಜ ಹೊಕ್ಕನು ಸಕಲದಳ ಸಹಿತ ॥49॥

೦೫೦ ಹರೆದ ಬಲವೊಗ್ಗಾಯ್ತು ...{Loading}...

ಹರೆದ ಬಲವೊಗ್ಗಾಯ್ತು ರಾಯನ
ನುರವಣಿಸಲೀಯದೆ ನೃಪಾಲಕ
ರುರುಬಿದರು ತರುಬಿದರು ಪರಬಲ ಕಾಲಭೈರವನ
ಹೊರಳಿಯೊಡೆಯದೆ ಭಾರಣೆಯಲೊ
ತ್ತರಿಸಿ ಕಲ್ಪದ ಕಡೆಯ ಕಡಲಿನ
ಗರುವಿಕೆಯ ಗಾಢದಲಿ ನಡೆದರು ತಡೆದರರಿಭಟರ ॥50॥

೦೫೧ ತೊಲಗು ವಿಪ್ರಾಧಮ ...{Loading}...

ತೊಲಗು ವಿಪ್ರಾಧಮ ಸುಯೋಧನ
ಬಲದೊಳಗೆ ಬಹು ಭಾಷೆತನದಲಿ
ಗಳಹಿ ಬಂದರೆ ಹಿಡಿಯ ಬಲ್ಲೈ ಧರ್ಮನಂದನನ
ಗಳದ ಸತ್ವವನರಿಯದದ್ರಿಗೆ
ತಲೆಯನೊಡ್ಡುವರೇ ವೃಥಾ ಕಳ
ಕಳಿಸಿ ನುಡಿವರೆ ಮಾನ್ಯರೆನುತಿದಿರಾದನಾ ದ್ರುಪದ ॥51॥

೦೫೨ ದಿಟ್ಟನಹೆಯೋ ದ್ರುಪದ ...{Loading}...

ದಿಟ್ಟನಹೆಯೋ ದ್ರುಪದ ಹಾ ಜಗ
ಜಟ್ಟಿಗಳಿಗುಪಹಾಸ್ಯವೇ ಗರಿ
ಗಟ್ಟಿದಿರಿ ನೀವ್ ಹಿಡಿಯಲೀವಿರೆ ಧರ್ಮನಂದನನ
ತೊಟ್ಟ ಚೋಹಕೆ ತಕ್ಕ ನುಡಿಗಳ
ಬಿಟ್ಟೆವಲ್ಲದೆ ನಿಮ್ಮ ರಾಯನ
ಕಟ್ಟಲಾಪೆವೆ ಎನುತ ಕರೆದನು ಸರಳ ಸರಿವಳೆಯ ॥52॥

೦೫೩ ದರ್ಪದಾಭರಣಕ್ಕೆ ಸೂಸಿದ ...{Loading}...

ದರ್ಪದಾಭರಣಕ್ಕೆ ಸೂಸಿದ
ವೊಪ್ಪ ಸಲಿಗೆಗಳೆನಲು ಗರಿಗಳು
ಚಪ್ಪರಿಸಿ ತುರುಗಿದುವು ರಿಪುಸೇನಾಸಮುದ್ರದಲಿ
ಹಿಪ್ಪೆಗರ ಹರಗಡಿದು ಹೊಗರಲ
ಗೊಪ್ಪಿದವು ಕರುಳುಗಳ ನಿಮಿಷದೊ
ಳೊಪ್ಪಗೆಡಿಸಿದವರಿಕದಂಬವನೀತನಂಬುಗಳು ॥53॥

೦೫೪ ಮರುಳೆ ಮಞ್ಜಿನ ...{Loading}...

ಮರುಳೆ ಮಂಜಿನ ಮಳೆಗೆ ಕುಲಗಿರಿ
ಕರಗುವುದೆ ನೀನೆಚ್ಚ ಶರ ಪಂ
ಜರಕೆ ಸಿಲುಕುವ ವೀರರೇ ಪಾಂಡವ ಮಹಾರಥರು
ಕೊರಳ ರಕ್ಷಿಸಿಕೊಳ್ಳೆನುತ ಚ
ಪ್ಪರಿಸಿ ದ್ರುಪದ ವಿರಾಟರೆಚ್ಚರು
ಸರಳ ರಶ್ಮಿಯ ಮಾಲೆ ಮುಕ್ಕುರುಕಿದುವು ದಿಗುತಟವ ॥54॥

೦೫೫ ಗಿರಿಯ ಮಕ್ಕಳು ...{Loading}...

ಗಿರಿಯ ಮಕ್ಕಳು ನೆರೆದು ವಜ್ರವ
ಸರಸವಾಡುವ ಕಾಲವಾಯಿತೆ
ಹರಹರತಿ ವಿಸ್ಮಯವೆನುತ ಹೊಗರೇರಿ ಖತಿ ಮಸಗಿ
ತಿರುವ ಕಾರಿಸಿದನು ಕಠೋರದ
ಮೊರಹುಗಳ ಬಾಯ್ಧಾರೆಗಳ ಕಿಡಿ
ಹೊರಳಿಗಳ ಹೊಗರಂಬು ಹೊಕ್ಕವು ಪಾಂಡು ಸೈನ್ಯದಲಿ ॥55॥

೦೫೬ ನರರ ಕಡಿಯಾನೆಗಳ ...{Loading}...

ನರರ ಕಡಿಯಾನೆಗಳ ಕಡಿಯಲಿ
ಬೆರಸಿದವು ತೇಜಿಗಳ ಕರುಳಲಿ
ಕರಿಘಟೆಯ ಕರುಳುಗಳು ತೊಡಕಿದವುಡಿದ ತೇರುಗಳು
ಜರಿದ ಜೋಡಿನೊಳೊಂದಿದವು ಕ
ತ್ತರಿಸಿದಾಯುಧ ಕಡಿದ ಸಿಂಧದ
ಹೊರಳಿಯಲಿ ಹೂಳಿದವು ನಿಮಿಷಕೆ ಪಾಂಡು ಸೇನೆಯಲಿ ॥56॥

೦೫೭ ನೊರೆ ರಕುತ ...{Loading}...

ನೊರೆ ರಕುತ ಸುಳಿ ಮಸಗಿ ಮಿದುಳಿನ
ಹೊರಳಿಗಳೆದುಬ್ಬಣದ ನೆಣ ವಸೆ
ದೊರಳೆಗಳ ಮೆದಕುಗಳ ಮೂಳೆಯ ಬಸಿವ ಬಲು ಜಿಗಿಯ
ಕರುಳ ಬಂಬಲು ಖಂಡದಿಂಡೆಯ
ತುರುಗಿದೆಲುವಿನ ತಳಿತ ಚರ್ಮದ
ಶಿರದ ತಡಿಗಳಲಡಸಿ ಹರಿದುದು ವೈರಿಸೇನೆಯಲಿ ॥57॥

೦೫೮ ಕೂಡೆ ತಳಪಟವಾಯ್ತು ...{Loading}...

ಕೂಡೆ ತಳಪಟವಾಯ್ತು ಸುಭಟರ
ಜೋಡಿ ಜರಿದುದು ಕೌರವೇಂದ್ರಗೆ
ಖೋಡಿಯುಂಟೇ ದ್ರೋಣ ಕೇಣವ ಬಿಟ್ಟು ಕಾದುವರೆ
ಖೇಡತನ ಬಿಗುಹಾಯ್ತು ಮೆಯ್ಯಲಿ
ಮೂಡಿದವು ಹೊಗರಂಬುಗಳು ತೆಗೆ
ದೋಡಿದವು ತೆಕ್ಕೆಯಲಿ ಪಾಂಡವ ನೃಪ ಮಹಾರಥರು ॥58॥

೦೫೯ ಘಾಯವಡೆದನು ದ್ರುಪದ ...{Loading}...

ಘಾಯವಡೆದನು ದ್ರುಪದ ಮತ್ಸ್ಯನ
ಬಾಯೊಳೊಕ್ಕುದು ರಕುತ ಕೈಕೆಯ
ರಾಯುಧಂಗಳನೊಪ್ಪಿಸಿದರಿಳಿದೋಡಿದರು ರಥವ
ಸಾಯಲಾದನು ಧೃಷ್ಟಕೇತು ವಿ
ಡಾಯಿಗೆಟ್ಟನು ಭೋಜನಿತ್ತಲು
ರಾಯನಲ್ಲಿಗೆ ರಥವ ದುವ್ವಾಳಿಸಿದನಾ ದ್ರೋಣ ॥59॥

೦೬೦ ತೀರಿತಿನ್ನೇನರಿನೃಪನ ಸಂ ...{Loading}...

ತೀರಿತಿನ್ನೇನರಿನೃಪನ ಸಂ
ಸಾರವಿನ್ನರೆ ಘಳಿಗೆಯಲಿ ಗಾಂ
ಧಾರಿ ನೆರೆ ನೋಂಪಿಯಲಿ ಪಡೆದಳು ಕೌರವೇಶ್ವರನ
ಸಾರ ಹೇಳೋ ಸಾಹಸಿಕರೆಂ
ದಾರುತಿರೆ ಬಲವಿತ್ತಲಾಹವ
ಧೀರ ಸಾತ್ಯಕಿ ಭೀಮ ಪಾರ್ಥಕುಮಾರರನುವಾಯ್ತು ॥60॥

೦೬೧ ಗೆಲಿದನೈ ಮಝ ...{Loading}...

ಗೆಲಿದನೈ ಮಝ ಪೂತು ದ್ರೋಣನ
ಬಲುಹು ಭರ್ಗನ ಸರಿ ಯುಧಿಷ್ಠಿರ
ಸಿಲುಕಿದನಲಾ ಶಿವಶಿವಾ ಕಲಿ ಕರ್ಣ ನೋಡೆನುತ
ಉಲಿವ ದುರಿಯೋಧನನನೀಕ್ಷಿಸು
ತಲಘು ಭುಜಬಲ ಭಾನುನಂದನ
ನಳುಕದೀ ಮಾತುಗಳನೆಂದನು ನೀತಿಸಮ್ಮತವ ॥61॥

೦೬೨ ಗೆಲವು ನಮಗೆಲ್ಲಿಯದು ...{Loading}...

ಗೆಲವು ನಮಗೆಲ್ಲಿಯದು ಧರ್ಮಜ
ಸಿಲುಕುವುದು ತಾನಿಲ್ಲ ಕೃಷ್ಣನ
ನೆಳಲು ದಿಟವುಂಟಾದೊಡೊಳಗಾಗರು ವಿರೋಧಿಗಳು
ನೆಲನ ತಿಣ್ಣವ ತಿದ್ದಲೋಸುಗ
ಸುಳಿದನರಿಯಾ ಕೃಷ್ಣನೀತನ
ಬಲದವರಿಗೆಂತಹುದು ಬಾಧೆಗಳೆಂದನಾ ಕರ್ಣ ॥62॥

೦೬೩ ಗಿರಿಯ ಕೊರಳಿಗೆ ...{Loading}...

ಗಿರಿಯ ಕೊರಳಿಗೆ ವಜ್ರಮಣಿಯಾ
ಭರಣವೇ ದಳ್ಳುರಿಯ ಜೋಡುಗ
ಳರಗಿನೋಲೆಯಕಾರರಿಗೆ ಸುಯಿಧಾನವೇ ನೃಪತಿ
ವರ ತಿಮಿರ ರಾಜಂಗೆ ಮಂಗಳ
ಕರವೆ ಆ ರವಿ ಕೃಷ್ಣ ಭಕ್ತರ
ಪರಿಭವವು ಜೀವರಿಗೆ ಪಥ್ಯವೆ ಎಂದನಾ ಕರ್ಣ ॥63॥

೦೬೪ ಇರಲಿ ಮೇಣ್ ...{Loading}...

ಇರಲಿ ಮೇಣ್ ದೂರದಲಿ ಹತ್ತಿರೆ
ಯಿರಲಿ ತನ್ನವರೆಂದರತ್ತಲೆ
ಹರಹಿಕೊಂಬನು ಕೃಷ್ಣನದು ತನಗೇರಿಸಿದ ಬಿರುದು
ಹರಿ ಸಮೀಪದೊಳಿಲ್ಲ ದ್ರೋಣಂ
ಗರಸ ಸಿಲುಕಿದನೆಂದು ಬಗೆದೈ
ಮರುಳೆ ಮುರವೈರಿಯ ಕಟಾಕ್ಷದ ಕಾಹು ಘನವೆಂದ ॥64॥

೦೬೫ ಆ ಹದನದನ್ತಿರಲಿ ...{Loading}...

ಆ ಹದನದಂತಿರಲಿ ನಮ್ಮೀ
ಯಾಹವಕೆ ಕಲಿ ಭೀಮ ಸಾತ್ಯಕಿ
ರೂಹುದೋರಿದರದೆ ಘಟೋತ್ಕಚ ಪಾರ್ಥಸುತರೊಡನೆ
ಸಾಹಸಿಕರೊಗ್ಗಾಯ್ತು ದ್ರೋಣಂ
ಗೀ ಹದನು ಭಾರಾಂಕವೀಗಳೆ
ಬೇಹ ಸುಭಟರ ಕಳುಹು ಕಾಳೆಗಕೆಂದನಾ ಕರ್ಣ ॥65॥

೦೬೬ ಎನಲು ನೂಕಿದನರಸ ...{Loading}...

ಎನಲು ನೂಕಿದನರಸ ದುಶ್ಶಾ
ಸನ ಜಯದ್ರಥನಿನತನುಜ ಗುರು
ತನುಜ ಕೃಪ ಮಾದ್ರೇಶ ಭಗದತ್ತಾದಿಗಳು ಸಹಿತ
ತನತನಗೆ ನಾಯಕರು ದ್ರೋಣನ
ಮೊನೆಯಬಲಿದರು ಹಿಡಿ ಯುಧಿಷ್ಠಿರ
ಜನಪತಿಯನೆನುತುರುಬಿದರು ತರುಬಿದರು ಪರಬಲವ ॥66॥

೦೬೭ ಫಡಫಡಾರೋ ಧರ್ಮಪುತ್ರನ ...{Loading}...

ಫಡಫಡಾರೋ ಧರ್ಮಪುತ್ರನ
ಹಿಡಿವವರು ಬಾಯ್ಬಡಿಕರೈ ಕಾ
ಳ್ಗೆಡೆದಡೇನಹುದೆನುತ ಹೊಕ್ಕನು ಭೀಮನುರವಣಿಸಿ
ಕಡಲ ಕಡುಹಿನ ಬಹಳ ಲಹರಿಯ
ನೊಡೆಮುರಿವ ಮಂದರದ ವೋಲವ
ಗಡಿಸಿ ಹೊಕ್ಕನು ಗದೆಯ ಘಾಡದ ಹೊದರ ಹೊಯ್ಲಿನಲಿ ॥67॥

೦೬೮ ಗದೆಯ ಘಾತಾಘಾತಿಕಾರನ ...{Loading}...

ಗದೆಯ ಘಾತಾಘಾತಿಕಾರನ
ನಿದಿರುಗೊಂಡುದು ದೆಸೆದೆಸೆಗೆ ಹ
ಬ್ಬಿದುದು ಬಲನೆಡಜೋಡು ಬಲು ಭಾರಣೆಯ ಪಟುಭಟರು
ಮದಗಜದ ನಿಡುವರಿಯ ತೇರಿನ
ಕುದುರೆಕಾರರ ಕಾಹಿನಲಿ ಕೊ
ಬ್ಬಿದುದು ನಿಬ್ಬರವಾಗಿ ಬಹುವಿಧ ವಾದ್ಯ ನಿರ್ಘೋಷ ॥68॥

೦೬೯ ತೆತ್ತಿಗರ ಬರಹೇಳು ...{Loading}...

ತೆತ್ತಿಗರ ಬರಹೇಳು ಭೀಮಂ
ಗೆತ್ತಣದು ಜಯವೆನುತ ಸುಭಟರು
ಮುತ್ತಿಕೊಂಡರು ಮುಸುಕಿದರು ಮೆತ್ತಿದರು ಸರಳುಗಳ
ಕತ್ತಲೆಯ ಹೇರಾಸಿ ಸೂರ್ಯನ
ನೊತ್ತಿ ತಹ ದಿನವಾಯ್ತಲಾ ಎನು
ತತ್ತಲಿತ್ತಲು ಮುರಿದು ತಳಪಟ ಮಾಡಿದನು ಭೀಮ ॥69॥

೦೭೦ ಒನ್ದು ಕಡೆಯಲಿ ...{Loading}...

ಒಂದು ಕಡೆಯಲಿ ಭೀಮ ಸವರಿದ
ನೊಂದು ದೆಸೆಯಲಿ ಸಾತ್ಯಕಿಯ ಶರ
ವೊಂದು ಕಡೆಯಲಿ ಪಾರ್ಥನಂದನ ಭೀಮನಂದನರು
ಒಂದು ಕಡೆಯಲಿ ನಕುಲ ಪಾಂಡವ
ನಂದನರು ಮತ್ತೊಂದು ದೆಸೆಯಲಿ
ಮುಂದುವರಿದರು ಮುರಿದರರಿಗಳ ಹೊದರ ಹೊಸ ಮೆಳೆಯ ॥70॥

೦೭೧ ಥಟ್ಟು ನುಗ್ಗಾಯಿತು ...{Loading}...

ಥಟ್ಟು ನುಗ್ಗಾಯಿತು ವಿರೋಧಿಗ
ಳಿಟ್ಟಣಿಸುತಿದೆ ದ್ರೋಣನೊಬ್ಬನ
ಬಿಟ್ಟು ನೋಡುವುದುಚಿತವಲ್ಲೆನುತೆಡಬಲನ ನೋಡಿ
ಬಿಟ್ಟನಾಹವಕಹಿತಬಲ ಜಗ
ಜಟ್ಟಿ ಕೌರವ ನೃಪತಿ ರಥವನು
ಹೊಟ್ಟುಗರ ತೆಗೆ ಹೋಗ ಹೇಳೆಂದೆಚ್ಚನತಿರಥರ ॥71॥

೦೭೨ ಮಗನ ತೆಗೆಯೋ ...{Loading}...

ಮಗನ ತೆಗೆಯೋ ಸಾತ್ಯಕಿಯ ಹೆರ
ತೆಗೆಯ ಹೇಳೋ ಬೇಡ ನಕುಲಾ
ದಿಗಳ ನೂಕಭಿಮನ್ಯುವನು ಹಿಮ್ಮೆಟ್ಟ ಹೇಳೆನುತ
ಮೊಗದ ಹೊಗರಿನ ಕೆಂಪನುಗುಳ್ವಾ
ಲಿಗಳ ದಂತದಲೌಕಿದಧರದ
ಬಿಗಿದ ಹುಬ್ಬಿನ ಭೀಮ ಹೊಕ್ಕನು ಗದೆಯ ತಿರುಗಿಸುತ ॥72॥

೦೭೩ ಸಿಲುಕಿದನು ತಿವಿ ...{Loading}...

ಸಿಲುಕಿದನು ತಿವಿ ಸ್ವಾಮಿದ್ರೋಹನ
ಗಳದ ರಕುತಕೆ ಬಾಯನೊಡ್ಡೆನು
ತಳವಿಯಲಿ ಹೊಕ್ಕೊಕ್ಕಲಿಕ್ಕಿದನಾನೆ ಕುದುರೆಗಳ
ಎಲೆ ದುರಾತ್ಮ ದ್ಯೂತಕೇಳೀ
ಕಲಹಲಂಪಟ ನಿಲ್ಲು ನಿಲ್ಲೆನು
ತೊಳಗುವರಿದಪ್ಪಳಿಸಿದನು ದುರ್ಯೋಧನನ ರಥವ ॥73॥

೦೭೪ ತೋಳನಳವಿಗೆ ಸಿಕ್ಕಿತೋ ...{Loading}...

ತೋಳನಳವಿಗೆ ಸಿಕ್ಕಿತೋ ಮೃಗ
ಜಾಲ ಶಿವಶಿವ ದಿವಿಜ ವಧುಗಳ
ತೋಳ ತೆಕ್ಕೆಗೆ ಒಡಲನಿತ್ತನು ರಾಯನಕಟೆನುತ
ಆಳು ಮಿಗೆ ಕಳವಳಿಸೆ ಕುರು ಭೂ
ಪಾಲಕನ ಹಿಂದಿಕ್ಕಿ ಕಿವಿಗಡಿ
ಗೋಲ ತೆಗಹಿನೊಳೊದಗಿದರು ದುಶ್ಯಾಸನಾದಿಗಳು ॥74॥

೦೭೫ ವರ ವಿಕರ್ಣ ...{Loading}...

ವರ ವಿಕರ್ಣ ಸುಲೋಚನನು ದು
ರ್ಮರುಷಣನು ದುಶ್ಶಾಸನನು ಸಂ
ಗರವ ಕೆಣಕಿದರನಿಲಸುತನೊಳು ನೃಪನ ಹರಿಬದಲಿ
ನೆರೆದ ನುಸಿಗಳು ಗಿರಿಯ ಕಾಡುವ
ಸರಿಯ ನೋಡೈ ಪೂತುರೆನುತು
ಬ್ಬರಿಸಿ ಕೈದೋರಿದನು ಕಲಿ ಪವಮಾನಸುತ ನಗುತ ॥75॥

೦೭೬ ಎಚ್ಚ ಶರವನು ...{Loading}...

ಎಚ್ಚ ಶರವನು ಗದೆಯಲಣೆದಿಡು
ಗಿಚ್ಚು ಹೊಕ್ಕಂದದಲಿ ರಥವನು
ಬಿಚ್ಚಿ ಬಿಸುಟನು ಸಾರಥಿಯನಾ ಹಯವನಾ ಧನುವ
ಕೊಚ್ಚಿದನು ಕೊಲೆಗಡಿಗನಿದಿರಲಿ
ಕೆಚ್ಚುಮನದವರಾರು ಸೋಲವಿ
ದೊಚ್ಚತವಲೇ ನಿಮ್ಮ ಸೇನೆಗೆ ಭೂಪ ಕೇಳ್ ಎಂದ ॥76॥

೦೭೭ ಸರಿದರೀ ನಾಲುವರು ...{Loading}...

ಸರಿದರೀ ನಾಲುವರು ರಾಯನ
ಮರಳಲೀಯದೆ ಮತ್ತೆ ಮಾರುತಿ
ಹರಿಸಿದನು ನಿಜರಥವನತಿರಥರೊಡ್ಡು ಲಟಕಟಿಸೆ
ದೊರೆಯ ತೆಗೆಯೋ ನೂಕು ನೂಕಲಿ
ಕರಿ ಘಟೆಯನೆನೆ ಮುಗಿಲ ಮೋಹರ
ಧರೆಗೆ ತಿರುಗಿದವೆನಲು ಜೋಡಿಸಿದರು ಗಜವ್ರಜವ ॥77॥

೦೭೮ ವಙ್ಗನಮ್ಬಟ್ಟನು ವರಾಳ ...{Loading}...

ವಂಗನಂಬಟ್ಟನು ವರಾಳ ಕ
ಳಿಂಗ ಬರ್ಬರರಾನೆಗಳ ಥ
ಟ್ಟಿಂಗೆ ಕೈವೀಸಿದರು ಕೊಂಡರು ನಾಳಿವಿಲ್ಲುಗಳ
ವಂಗಡದಲೆಂಬತ್ತು ಸಾವಿರ
ತುಂಗ ಗಜಘಟೆ ಕವಿದವಿದಕಿ
ನ್ನಂಗವಿಸುವವರಾರೆನುತ ಗಜಬಜಿಸಿತರಿಸೇನೆ ॥78॥

೦೭೯ ಆಳ ಹೆದರಿಸಿ ...{Loading}...

ಆಳ ಹೆದರಿಸಿ ನುಡಿವ ನಾಯ್ಗಳ
ಬೀಳ ಬಡಿ ಬಡಬಾಗ್ನಿ ನೊರಜಿನ
ದಾಳಿಗಳುಕುವುದುಂಟೆ ಫಡ ಫಡಯೆನುತ ಬೊಬ್ಬಿರಿದ
ಕಾಲ ದಂಡವ ತಿರುಹಿ ಭುವನದ
ಲೂಳಿಗವ ಮಾಡುವ ಕೃತಾಂತನ
ಹೋಲುವೆಯ ಹೊಸಬಿಗನು ಹೊಕ್ಕನು ಭೀಮನುರವಣಿಸಿ ॥79॥

೦೮೦ ಗದೆಯಲಪ್ಪಳಿಸಿದನು ಕೋದಂ ...{Loading}...

ಗದೆಯಲಪ್ಪಳಿಸಿದನು ಕೋದಂ
ಡದಲಿ ಕಾದಿದ ಮುದ್ಗರದಲೊರ
ಸಿದನು ಲೌಡಿಯಲರೆದನುರೆ ತರಿದನು ಕೃಪಾಣದಲಿ
ಒದೆದು ಕೆಲವನು ಮುಷ್ಟಿಯಲಿ ಮೋ
ದಿದನು ಕೆಲವನು ನಿಖಿಳ ಶಸ್ತ್ರಾ
ಸ್ತ್ರದಲಿ ಕಾದಿದನನಿಲಸುತನಿಭಬಲವ ಬರಿಕೈದು ॥80॥

೦೮೧ ಗಿಳಿಯ ಹಿಣ್ಡುಗಳೆತ್ತ ...{Loading}...

ಗಿಳಿಯ ಹಿಂಡುಗಳೆತ್ತ ಗಿಡಿಗನ
ದಳದುಳವು ತಾನೆತ್ತ ಭೀಮನ
ಸುಳಿವು ಗಡ ಕಾಲೂರುವವೆ ಕರಿಘಟೆಗಳೊಗ್ಗಿನಲಿ
ಕಳಿತ ಹೂವಿನ ತೊಡಬೆಗಳೊ ರಿಪು
ಬಲವೊ ಬಿರುಗಾಳಿಯೊ ವೃಕೋದರ
ನಳವ ಬಲ್ಲವನಾವನೈ ಧೃತರಾಷ್ಟ್ರ ಕೇಳ್ ಎಂದ ॥81॥

೦೮೨ ಹೋಯಿತಾ ಮಾತೇಕೆ ...{Loading}...

ಹೋಯಿತಾ ಮಾತೇಕೆ ಗಜದಳ
ಮಾಯವಾದುದು ವಂಗಭೂಪನ
ಬಾಯೊಳಗೆ ಬೆಟ್ಟಿದನು ಗದೆಯನು ಮಿಕ್ಕ ನಾಲ್ವರನು
ಸಾಯ ಬಡಿದನು ಮುಂದೆ ಕೌರವ
ರಾಯನನು ತಾಗಿದನು ಭೀಮನ
ದಾಯ ಬಂದುದು ಸಕಲ ಕುರು ತಳತಂತ್ರ ತಲ್ಲಣಿಸೆ ॥82॥

+೦೨ ...{Loading}...