೧೫

೦೦೦ ಸೂ ರಾಯ ...{Loading}...

ಸೂ. ರಾಯ ಕಟಕಾಚಾರ್ಯನೊಡ್ಡಿದ
ರಾಯ ಥಟ್ಟಿನೊಳಿರುಳು ಕೊಂದನು
ವಾಯುತನಯನ ತನುಜನಗ್ಗದ ದೈತ್ಯಕೋಟಿಗಳ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಕೃಷ್ಣಾರ್ಜುನರು ಬರೆ ಭೂ
ಪಾಲನಂದಿದಿರಾಗಿ ಬಂದನು ಸಕಲ ದಳಸಹಿತ
ಹೇಳಲರಿಯೆನು ಹರುಷದುದಯವ
ನಾಲಿ ಹೂಳಿದವಶ್ರುಜಲದಲಿ
ಮೇಲುವಾಯ್ದಪ್ಪಿದನು ದೇವನ ಪಾದಪಂಕಜವ ॥1॥

೦೦೨ ಮಾತುದೋರದು ಹೆಚ್ಚಿದಾನಂ ...{Loading}...

ಮಾತುದೋರದು ಹೆಚ್ಚಿದಾನಂ
ದಾತಿರೇಕಕೆ ಚಿತ್ತ ನೆರೆಯದು
ಹೂತು ಹಿಗ್ಗುವ ಪುಳಕರಾಜಿಗೆ ದೇಹ ಕಿರಿದೆನುತ
ಕಾತರಿಸಿದನು ಮೇಲೆ ಮೇಲೆ ಮ
ಹೀತಳಾಧಿಪ ಮೈಮರೆಯೆ ತೆಗೆ
ದಾತನನು ತಕ್ಕೈಸಿದನು ಕಾರುಣ್ಯನಿಧಿ ನಗುತ ॥2॥

೦೦೩ ಫಲಿಸಿತರಸಾ ನಿನ್ನ ...{Loading}...

ಫಲಿಸಿತರಸಾ ನಿನ್ನ ಭಾಗ್ಯದ
ಬೆಳಸು ನಿನ್ನೊಡವುಟ್ಟಿದನ ನುಡಿ
ಕಳಸಗಂಡುದು ಕದನವಿದು ಭಾರಾಂಕವುಳಿದರಿಗೆ
ಕಳಿದುದೊಂದಪಮೃತ್ಯುವೆನೆ ನೃಪ
ತಿಲಕ ನುಡಿದನು ನಿನ್ನ ಭಾಷೆಯ
ಬಲಿದೆ ನಿನ್ನಯ ಬಿರುದ ಸಲಿಸಿದೆ ನಮಗಿದೇನೆಂದ ॥3॥

೦೦೪ ತೆಗೆಸು ದಳವನು ...{Loading}...

ತೆಗೆಸು ದಳವನು ಸಾಕು ಬರಿದೇ
ಹೊಗಳುತಿಹೆ ನೀ ನಮ್ಮನೀ ಕಾ
ಳೆಗದೊಳಳಿದುದು ಹಗೆಯೊಳೇಳಕ್ಷೋಹಿಣೀ ಸೇನೆ
ಬಗೆಯದಿರಿದರು ಭೀಮ ಪಾರ್ಥರು
ಜಗದೊಳದ್ಭುತ ವೀರರಿವರೆಂ
ದಗಧರನು ಪತಿಕರಿಸಿದನು ಪವನಜನ ಫಲುಗುಣನ ॥4॥

೦೦೫ ಇತ್ತ ದುಗುಡವ ...{Loading}...

ಇತ್ತ ದುಗುಡವ ಹಿಡಿದ ರಾಯನ
ಕೆತ್ತ ಮುಖವನು ಕಂಡು ಭಟರೆದೆ
ಹೊತ್ತಿದವು ಹೊಗೆದೋರಿದವು ಮೋರೆಗಳು ಪಟುಭಟರ
ಇತ್ತ ನೋಡವನೀಶ ಸೈಂಧವ
ನೆತ್ತಲಿಹನತ್ತಲು ಮುರಾರಿಯ
ತೆತ್ತಿಗರ ಕಳುಹಿಸುವೆನೆಂದನು ಖಾತಿಯಲಿ ಕರ್ಣ ॥5॥

೦೦೬ ಇನ್ನು ನೋಡಾದಡೆ ...{Loading}...

ಇನ್ನು ನೋಡಾದಡೆ ಕಿರೀಟಿಯ
ಬೆನ್ನಲುಗಿವೆನು ಕರುಳನರ್ಜುನ
ಗನ್ನಗತಕದಲರಿಯ ಹೊಯ್ದನು ಹಾಯ್ಕು ವೀಳೆಯವ
ನಿನ್ನ ಕಂಗಳ ಬರನ ಕಳೆವೆನು
ಬೆನ್ನಲಿರು ನೃಪ ನೋಡು ಚಿತ್ರವ
ನಿನ್ನು ತೋರುವೆನೆನುತ ಭಾಷೆಯ ಕೊಟ್ಟನಾ ಕರ್ಣ ॥6॥

೦೦೭ ಉಣ್ಟು ಗರುಡನನೊಳ್ಳೆ ...{Loading}...

ಉಂಟು ಗರುಡನನೊಳ್ಳೆ ತುಡುಕುವ
ದುಂಟಲೇ ಲೋಕದಲಿ ರಾಯನ
ನಂಟರಿಷ್ಟರೊಳಧಿಕನಲ್ಲಾ ಕರ್ಣ ಕಿರುಕುಳನೆ
ಕಂಟಣಿಸಬೇಡಿನ್ನು ಭಾಷೆಗ
ಳುಂಟು ನಿನ್ನಲಿ ನಗುವರಾವ
ಲ್ಲೆಂಟುಮಡಿಯನು ಸೊರಹು ಸಾಕೆಂದನು ಕೃಪಾಚಾರ್ಯ ॥7॥

೦೦೮ ಗರುವರನು ಮಾನ್ಯರನು ...{Loading}...

ಗರುವರನು ಮಾನ್ಯರನು ರಣಧೀ
ರರನು ದೂರದಲಿರಿಸುವರು ಹ
ತ್ತಿರಕೆ ಕರೆವರು ಬಾಯಿಬಡಿಕರ ಜಗದ ಭಂಡರನು
ಅರಸುಗಳು ದುಶ್ಶೀಲರೆಂಬುದ
ನರಿಯದೇ ಜಗವಕಟ ಟೆಕ್ಕೆಯ
ಹರಳು ಗಡ ಕೌಸ್ತುಭಕೆ ಸರಿಯೆಂದನು ಕೃಪಾಚಾರ್ಯ ॥8॥

೦೦೯ ನೀವು ಮಾಡುವುದೇನು ...{Loading}...

ನೀವು ಮಾಡುವುದೇನು ರಣದಲಿ
ಕಾವೆವೆಂದಿರಿ ಸೈಂಧವನ ನಾ
ನಾವಿಧದ ವ್ಯೂಹದಲಿ ನಿಮ್ಮೀ ದ್ರೋಣನೇಗಿದನು
ತಾವು ಭಟರಾದರೆ ವಿಭಾಡಿಸಿ
ಹೇವಗೆಡಿಸುವುದುಚಿತ ಭಂಡರು
ತಾವು ಲೋಗರ ಚುನ್ನವಾಡುವರೆಂದನಾ ಕರ್ಣ ॥9॥

೦೧೦ ಎಲವೊ ಫಡ ...{Loading}...

ಎಲವೊ ಫಡ ಮಾವನ ವಿಭಾಡಿಸಿ
ಗಳಹುವೀ ನಾಲಗೆಯ ಕೀಳುವೆ
ನೆಲೆ ಮಹಾದೇವಿಲ್ಲಿ ಮೇಳವೆನುತ್ತ ಖಂಡೆಯವ
ಸೆಳೆದು ಝೊಂಪಿಸಿ ಗುರುತನುಜನ
ವ್ವಳಿಸಲುಗಿದನಡಾಯುಧವನ
ಗ್ಗಳೆಯ ರವಿಸುತ ಮೇಲುವಾಯ್ದನು ದ್ರೋಣನಂದನನ ॥10॥

೦೧೧ ಬೆನ್ದುದೊಳತೋಟಿಯಲಿ ಕೌರವ ...{Loading}...

ಬೆಂದುದೊಳತೋಟಿಯಲಿ ಕೌರವ
ವೃಂದವಕಟಕಟೆನಲು ಜನವೈ
ತಂದು ನಿಂದನು ನಡುವೆ ಕೌರವರಾಯ ಖಾತಿಯಲಿ
ಇಂದಿನಾಹವ ಲೇಸು ಲೇಸಿದು
ಮಂದಭಾಗ್ಯನು ತಾನು ಸಾಕಿ
ನ್ನೆಂದು ಮಾಡುವುದೇನು ನಿಮ್ಮೊಳು ಕದನ ಬೇಡೆಂದ ॥11॥

೦೧೨ ಹೇವವುಳ್ಳರೆ ಭೀಮ ...{Loading}...

ಹೇವವುಳ್ಳರೆ ಭೀಮ ಪಾರ್ಥರ
ನೀವು ಕೊಲುವುದು ಮೇಣು ರಣದಲಿ
ಸಾವುದಲ್ಲದೆ ಗರುವರೊಳತೋಟಿಯಲಿ ತೊಡಕುವರೆ
ಕಾವೆವೆಂದಿರಿ ಸೈಂಧವನ ಸುಭ
ಟಾವಳಿಯ ಮೂಗುಗಳನರ್ಜುನ
ದೇವ ಕೊಯ್ದನು ಸಾರಿ ನೀವೆಂದರಸ ಮಾಣಿಸಿದ ॥12॥

೦೧೩ ನೆರೆವಣಿಗೆಯುಳ್ಳರೆ ವಿರೋಧಿಯ ...{Loading}...

ನೆರೆವಣಿಗೆಯುಳ್ಳರೆ ವಿರೋಧಿಯ
ನಿರಿವುದೋಲೆಯಕಾರತನವನು
ಮೆರೆವುದುಚಿತವಿದೇಕೆ ಡೊಂಬಿನ ಶೌರ್ಯವೊಳಗೊಳಗೆ
ಕಿರುಕುಳರು ನೀವಲ್ಲ ನಿಮ್ಮಲಿ
ಕೊರvಯಿಲ್ಲದು ನಮ್ಮ ಪುಣ್ಯದ
ಬರನ ದಿನ ನೀವೇನ ಮಾಡುವಿರೆಂದು ಬಿಸುಸುಯ್ದ ॥13॥

೦೧೪ ಖಾತಿಯೇಕೈ ಸೈನ್ಧವನ ...{Loading}...

ಖಾತಿಯೇಕೈ ಸೈಂಧವನ ಕಾ
ವಾತನಾರೈ ತ್ರಿಪುರದಹನದ
ಭೂತನಾಥನ ಬಾಣ ಬಂದುದು ನರನ ಗಾಂಡಿವಕೆ
ಆತನೆಚ್ಚದು ಪಾಶುಪತವದ
ನಾತುಕೊಂಬವರಾರು ಬರಿದೆ ಭ
ಟಾತಿಶಯವನು ಹುರುಳುಗೆಡಿಸುವಿರೆಂದನಾ ದ್ರೋಣ ॥14॥

೦೧೫ ಒನ್ದು ಹರ ...{Loading}...

ಒಂದು ಹರ ಹಿಡಿವಂಬು ಶಕ್ರನ
ದೊಂದು ಕೌಬೇರಾಗ್ನಿ ವಾಯುವ
ದೊಂದು ಪಾರ್ಥನ ಬತ್ತಳಿಕೆ ದಿವ್ಯಾಸ್ತ್ರ ತುಂಬಿಹವು
ಕೊಂದಡಲ್ಲದೆ ಮಾಣವವು ನಾ
ವೊಂದಕೊಬ್ಬರು ಗುರಿ ನಿದಾನಿಸ
ಲಿಂದು ನಮಗಳವಡದು ಜಯವಿಲ್ಲೆಂದನಾ ದ್ರೋಣ ॥15॥

೦೧೬ ಅರಸ ಮರುಳೈ ...{Loading}...

ಅರಸ ಮರುಳೈ ನೀನು ಸುರರನು
ಸರಕುಮಾಡನು ಸಕಲ ದೈವದ
ದೊರೆಯಲೇ ಹರನಾತನಸ್ತ್ರವನಾರು ತರುಬುವರು
ಹರನ ಶರವಿಲ್ಲಿನ್ನು ಹಗೆಗಳ
ನಿರುಳು ರಣದಲಿ ಹಿಂಡುವೆನು ಸಂ
ವರಿಸು ಕೈದೀವಿಗೆಯನೆಂದನು ದ್ರೋಣನುಬ್ಬಿನಲಿ ॥16॥

೦೧೭ ಘಾಯವಡೆದಾನೆಗಳ ಕೈ ...{Loading}...

ಘಾಯವಡೆದಾನೆಗಳ ಕೈ ಮೈ
ನೋಯೆ ಕಾದಿದ ರಾಜಪುತ್ರರ
ನಾಯುಧದ ಮಳೆಗಳಲಿ ನನೆದ ಜವಾಯ್ಲ ತೇಜಿಗಳ
ಹಾಯಿದುರೆ ಸೊಪ್ಪಾದ ಶಕಟ ನಿ
ಕಾಯವನು ಪೂರಾಯದೇರಿನ
ನಾಯಕರ ಕರೆಕರೆದು ಬವರಕೆ ಕಳುಹಿದನು ದ್ರೋಣ ॥17॥

೦೧೮ ಜರಿದ ಜೋಡನು ...{Loading}...

ಜರಿದ ಜೋಡನು ನೆರೆ ಹರಿದ ಹ
ಕ್ಕರಿಕೆಗಳ ನುಗ್ಗಾದ ಗುಳವನು
ಬಿರಿದ ಸೀಸಕ ಬಾಹುರಕ್ಕೆಯ ಮುರಿದ ಬಲ್ಲೆಹದ
ಅರೆಗಡಿದ ಬಿಲ್ಲುಗಳ ನೆಗ್ಗಿದ
ಹರಿಗೆಯನು ಮುಕ್ಕಾದ ಕೈದುವ
ತರಿಸಿ ಕಳುಹಿಸುತಿರ್ದನತಿರಭಸದಲಿ ಕಲಿದ್ರೋಣ ॥18॥

೦೧೯ ಎಣಿಸಲರಿಯೆನು ಬಣ್ಡಿಗಳು ...{Loading}...

ಎಣಿಸಲರಿಯೆನು ಬಂಡಿಗಳು ಸಂ
ದಣಿಸಿದವು ಹಕ್ಕರಿಕೆಗಳ ಹ
ಲ್ಲಣದ ಕವಚದ ಸೀಸಕದ ಜೋಡುಗಳ ರೆಂಚೆಗಳ
ಮಣಿಮಯದ ಮೋಹಳದ ಹಿರಿಯು
ಬ್ಬಣದ ಸಬಳದ ಶೂಲ ಸುರಗಿಯ
ಕಣೆಯ ಹೊರೆ ಚಾಚಿದವು ಕಟಕಾಚಾರ್ಯನಿದಿರಿನಲಿ ॥19॥

೦೨೦ ಕರೆಕರೆದು ರಥಿಕರಿಗೆ ...{Loading}...

ಕರೆಕರೆದು ರಥಿಕರಿಗೆ ಮಾವಂ
ತರಿಗೆ ಕಾಲಾಳಿಂಗೆ ರಾವು
ತ್ತರಿಗೆ ಕೊಡಿಸಿದನವರವರಿಗವರಂಗದಾಯುಧವ
ತರಿಸಿ ಸಾದು ಜವಾದಿಯನು ಕ
ರ್ಪುರದ ವೀಳೆಯವುಡುಗೊರೆಗಳಲಿ
ಹಿರಿದು ಪತಿಕರಿಸಿದನು ಪರಿವಾರವನು ಕಲಿದ್ರೋಣ ॥20॥

೦೨೧ ಉರವಣಿಸುವುದು ಕೊಣ್ಡ ...{Loading}...

ಉರವಣಿಸುವುದು ಕೊಂಡ ಹಜ್ಜೆಗೆ
ಮುರಿಯಲಾಗದು ಶಸ್ತ್ರಧಾರಾ
ಪರಮತೀರ್ಥಸ್ನಾನ ತೊಳೆವುದು ಭವದ ಕಿಲ್ಬಿಷವ
ಹರಣದಲಿ ಕಕ್ಕುಲಿತೆ ಬೇಡು
ದ್ಧರಿಸುವುದು ಸತ್ಕುಲತೆಯನು ಸಂ
ವರಿಸುವುದು ಸದ್ಗತಿಯನೆಂದನು ದ್ರೋಣ ನಿಜಬಲಕೆ ॥21॥

೦೨೨ ಲಟಕಟಿಸಿತಾಹವಕೆ ರಾಯನ ...{Loading}...

ಲಟಕಟಿಸಿತಾಹವಕೆ ರಾಯನ
ಕಟಕ ಸುಮ್ಮಾನದಲಿ ಮೊಳಗುವ
ಪಟಹ ಡಮರು ಮೃದಂಗ ಘನಗಂಭೀರ ಭೇರಿಗಳ
ಚಟುಳ ಕಹಳೆಯ ಗಜರು ಮಿಗಲು
ತ್ಕಟಿಸಿತಂಬುಜಭವನ ನಿರ್ಮಿತ
ಘಟ ಬಿರಿಯೆ ಬಿಗುಹಾಯ್ತು ದ್ರೋಣನ ಸಮರಸನ್ನಾಹ ॥22॥

೦೨೩ ನರನ ಕರೆ ...{Loading}...

ನರನ ಕರೆ ಕರೆ ಸಿಂಧುರಾಜನ
ಹರಿಬವೆಮ್ಮದು ತಮ್ಮದೆಂದ
ಬ್ಬರಿಸಿ ನೂಕಿತು ಕದನಲಂಪಟರಾಗಿ ಪಟುಭಟರು
ಸರಿಸದಲಿ ಲಟಕಟಿಸಿ ಮೋಹರ
ಮರಳಿ ನಿಂದುದು ರಣಕೆ ರಜನೀ
ಚರರ ಥಟ್ಟಣೆ ಧಾತುಗೆಡಿಸಿತು ದಿಟ್ಟರುಬ್ಬಟೆಯ ॥23॥

೦೨೪ ಹಿನ್ದೆ ಸೆಳೆದುದು ...{Loading}...

ಹಿಂದೆ ಸೆಳೆದುದು ವೈರಿ ಬಲ ಭಟ
ವೃಂದ ನಿಲಲಿ ಕಿರೀಟಿ ಭೀಮರ
ಕುಂದುಗಾಬುದು ಲೋಕ ನಮ್ಮನು ತೆಗೆದು ಹಿಂಗಿದರೆ
ಬಂದ ಜಯವಕ್ಕುವುದು ರಜನಿಯ
ಕೊಂದೆವಾದರೆ ನಮಗೆ ಸರಿಯ
ಲ್ಲೆಂದು ಧೃಷ್ಟದ್ಯುಮ್ನ ಕರೆಸಿದನಖಿಳನಾಯಕರ ॥24॥

೦೨೫ ಸೋತ ಬಲ ...{Loading}...

ಸೋತ ಬಲ ಸಂವರಿಸಿಕೊಂಡುದು
ಪೂತುರೇ ರಣವೆಂಬುದೆಮ್ಮಯ
ಧಾತು ಕಲಿ ಮೂದಲಿಸಿ ಕರೆದರೆ ರಾಜ್ಯಸಿರಿಯೇಕೆ
ಭೀತಿ ಮನದಲಿ ಪೌರಷಾಂಗದ
ಮಾತು ಮುಖದಲಿ ಮುರಿವು ಕಾಲಲಿ
ಬೂತುಗಳು ಕುರುವೀರರೆನುತಿದಿರಾದುದರಿಸೇನೆ ॥25॥

೦೨೬ ಇಳಿದುದೀ ಕಣನೊಳಗೆ ...{Loading}...

ಇಳಿದುದೀ ಕಣನೊಳಗೆ ದಿಗುಮಂ
ಡಲದ ಸಂಧ್ಯಾರಾಗವೆನೆ ಪರಿ
ದಳಿತ ಚತುರಂಗದಲಿ ಮಸಗಿದುದರುಣಜಲರಾಶಿ
ಕಲಿಗಳುಬ್ಬಿನ ರೋಷತಾಮಸ
ತುಳುಕಿತೆನೆ ದಿಗುವಳಯದಲಿ ಕುಡಿ
ವೆಳಗ ಕುಡಿ ಕುಡಿದಡರುತಿರ್ದುದು ತಿಮಿರಲತೆ ಜಗವ ॥26॥

೦೨೭ ಜಡಿವ ಖಡುಗದ ...{Loading}...

ಜಡಿವ ಖಡುಗದ ಕಿಡಿಗಳಲಿ ಬೇ
ಗಡೆಯನಾಂತುದು ಮಕುಟಬದ್ಧರ
ಮುಡಿಯ ರತ್ನಪ್ರಭೆಗಳಲಿ ಜರ್ಝರಿತ ತನುವಾಯ್ತು
ಗಡಣದಂಬಿನ ಮಸೆಯ ಬೆಳಗಿನೊ
ಳಡಸಿದಾಕ್ಷಣ ಮತ್ತೆ ನಿಮಿಷಕೆ
ಹೊಡಕರಿಸಿ ಹಬ್ಬಿದುದು ಮಬ್ಬಿನ ಧಾಳಿ ದೆಸೆದೆಸೆಗೆ ॥27॥

೦೨೮ ಖಳರ ಹೃದಯದ ...{Loading}...

ಖಳರ ಹೃದಯದ ಗರುಡಿ ಘೂಕಾ
ವಳಿಯ ನಯನಾಂಜನ ಧರಿತ್ರಿಯ
ನಳಿನಕೆರಗಿದ ತುಂಬಿ ಸುಭಟಸ್ವಾಂತ ಶಶಿ ರಾಹು
ಪ್ರಳಯ ತಿಮಿರದ ಬೀಜ ನೀಲಾ
ಚಳದ ಸಾಯುಜ್ಯವೊ ನಭೋಮಂ
ಡಲದೊಳದನೇವೊಗಳುವೆನು ಮಸಗಿತು ತಮಸ್ತೋಮ ॥28॥

೦೨೯ ದಳದ ಬೊಬ್ಬೆಯ ...{Loading}...

ದಳದ ಬೊಬ್ಬೆಯ ಸಿಡಿಲ ಬಲುಗ
ತ್ತಲೆಯ ಝಾಡಿಯ ಮುಗಿಲ ಮಿಗೆ ಹೊಳೆ
ಹೊಳೆವ ಮಹಿಪರ ಮಕುಟರತ್ನದ ಬಳ್ಳಿಮಿಂಚುಗಳ
ಬಲುಸರಿಯ ನಾರಾಚ ಜಾಳದ
ಮಳೆಯ ನೆತ್ತರ ಹೊನಲುಗಳ ರೌ
ಕುಳದ ಮಳೆಗಾಲದಲಿ ಹೆಚ್ಚಿತು ಭಟರ ಶೌರ್ಯಶಿಖಿ ॥29॥

೦೩೦ ಹೆಣಗಿ ಮಿಗೆ ...{Loading}...

ಹೆಣಗಿ ಮಿಗೆ ತಲೆಯೊತ್ತಿ ಹೊಯ್ದರು
ಹಣಿದದಲಿ ತಮ್ಮೊಳಗೊಳಗೆ ಸಂ
ದಣಿಗಳಲಿ ಸೈಗರೆದರಂಬಿನ ಸಿರಿಯನುರವಣಿಸಿ
ರಣಮಹೀಸಂತಮಸಶಾಂತೇ
ಕ್ಷಣರು ದಿಗುಭ್ರಮೆಯಲಿ ಸ್ವಕೀಯ
ಕ್ಷಣನವನು ರಚಿಸಿದರು ರೌರವವಾಯ್ತು ರಾತ್ರಿಯಲಿ ॥30॥

೦೩೧ ಆರ ವಙ್ಗಡದಾಳಿವನು ...{Loading}...

ಆರ ವಂಗಡದಾಳಿವನು ನೀ
ನಾರು ಹೇಸರೇನೆಂದು ಬಳಿಕ ವಿ
ಚಾರ ಮಿಗೆ ಹೊಯ್ದಾಡಿದರು ಕರೆಕರೆದು ಮೂದಲಿಸಿ
ಭಾರಿಸಿತು ಬಲುತಿಮಿರ ಬಲ ಸಂ
ಹಾರವನು ವಿವರಿಸುವನಾವನು
ಭೂರಿ ಭಟರಂಘವಣೆ ಬೀತುದು ಭೂಪ ಕೇಳ್ ಎಂದ ॥31॥

೦೩೨ ತೆಗೆಸು ಚೂಣಿಯ ...{Loading}...

ತೆಗೆಸು ಚೂಣಿಯ ಬಲವ ದೀವ
ಟ್ಟಿಗರ ಕರೆ ಕರೆ ತೈಲಪೂರ್ಣದ
ತೊಗಲ ಕುನಿಕಿಲ ಬಂಡಿ ಕವಿಯಲಿ ಕೋಟಿ ಸಂಖ್ಯೆಯಲಿ
ಬಿಗಿದ ಮಳವೆಯನೆಣ್ಣೆಗೊಪ್ಪರಿ
ಗೆಗಳೊಳದ್ದಲಿ ಗಳೆಗಳಲಿ ಸೀ
ರೆಗಳ ಸುತ್ತಲಿಯೆಂದು ಕೈವೀಸಿದನು ಕಲಿದ್ರೋಣ ॥32॥

೦೩೩ ಬೆಳಗಿದವು ಬೊಮ್ಬಾಳ ...{Loading}...

ಬೆಳಗಿದವು ಬೊಂಬಾಳ ದೀವಿಗೆ
ಬಲದೊಳಾನೆಗೆ ಹತ್ತು ರಥಿಕಾ
ವಳಿಗೆ ನಾಲುಕು ಹಯಕೆರಡು ಕಾಲಾಳಿಗೊಂದೊಂದು
ಬಲಸಮುದ್ರದೊಳೊಗೆದ ವಡಬಾ
ನಳನ ಝಳವೋ ಮೃತ್ಯುವಿನ ದೀ
ವಳಿಗೆಯಿರುಳೋ ತಿಳಿಯಲರಿದೆನೆ ಚಿತ್ರವಾಯ್ತೆಂದ ॥33॥

೦೩೪ ಬಗೆಯಲರಿದಿದು ಗರ್ಭ ...{Loading}...

ಬಗೆಯಲರಿದಿದು ಗರ್ಭ ಬಲಿಯದೆ
ಹಗಲನೀದುದೊ ರಾತ್ರಿ ಕುಡಿಕುಡಿ
ದುಗುಳುತಿರ್ದುವು ತಿಮಿರವನು ಕರದೀಪ್ತಿಕಾಳಿಗಳು
ಹೊಗರುಗೆಟ್ಟುದು ಕುಮುದ ಕಮಳದ
ಬಿಗುಹು ಬಿಟ್ಟುದು ಚಕ್ರವಾಕದ
ತಗಹು ಕೆಟ್ಟುದು ಹೇಳೆನಲು ರಂಜಿಸಿತು ದೀಪಾಳಿ ॥34॥

೦೩೫ ತಿಮಿರವಡಗಿತು ಮನದ ...{Loading}...

ತಿಮಿರವಡಗಿತು ಮನದ ರೋಷದ
ತಿಮಿರವಡಗದ ಮುನ್ನ ಭುಜವಿ
ಕ್ರಮದ ವಿತರಣೆಯುಳ್ಳಡವಸರವಿದು ನೃಪಾಲರಿಗೆ
ನಿಮನಿಮಗೆ ಮುಂಕೊಂಡು ವಂಶ
ಕ್ರಮ ಸಮಾಗತ ಕೀರ್ತಿಸತಿಯಲಿ
ಮಮತೆಗಳ ನೆರೆಮಾಡಿಯೆಂದನು ದ್ರೋಣ ನಿಜಬಲಕೆ ॥35॥

೦೩೬ ಮತ್ತೆ ಹೊಕ್ಕುದು ...{Loading}...

ಮತ್ತೆ ಹೊಕ್ಕುದು ಭಟರಮಮ ದಿಗು
ಭಿತ್ತಿ ಬಿರಿಯಲು ಮೊರೆವ ಭೇರಿಯ
ಕಿತ್ತು ನೆಲ ಹೊಡೆಮರಳೆ ಮೊಳಗುವ ಪಟಹ ಡಿಂಡಿಮದ
ಹತ್ತು ಸಾವಿರ ನೃಪರು ರಿಪುಗಳ
ಮುತ್ತಿದರು ಮುಸುಕಿದರು ಮೆಯ್ಯಲಿ
ಮೆತ್ತಿದರು ಮೊನೆಗಣೆಗಳನು ಪಾಂಡವರ ಬಲದೊಳಗೆ ॥36॥

೦೩೭ ಅಕಟ ಫಡ ...{Loading}...

ಅಕಟ ಫಡ ಕುನ್ನಿಗಳಿಗಸುರಾಂ
ತಕನ ಕಪಟದ ಮಂತ್ರವೇ ಬಾ
ಧಕವಿದಲ್ಲದೆ ನಿಮಗೆ ಸೋಲುವುದುಂಟೆ ಕುರುಸೇನೆ
ಸಕಲ ಸನ್ನಾಹದಲಿ ಯಾದವ
ನಿಕರ ಸಹಿತೀಯಿರುಳು ರಣದಲಿ
ಚಕಿತರಾದರೆ ಜೋಡಿಸೆನುತಿದಿರಾದನಾ ದ್ರೋಣ ॥37॥

೦೩೮ ತವಕ ತಗ್ಗಿತು ...{Loading}...

ತವಕ ತಗ್ಗಿತು ಭಟರ ತಾಳಿಗೆ
ಜವಳಿದೆಗೆದುದು ಮನಕೆ ಭೀತಿಯ
ಗವಸಣಿಗೆ ಘಾಡಿಸಿತು ಜಾಳಿಸಿತದಟರಪಸರಣ
ಸವೆದ ಶೌರ್ಯದ ಘಾಯ ಘಲ್ಲಿಸಿ
ತವಯವದ ಮಡಮುರಿವ ಮೋಹರ
ದವನಿಪತಿಗಳ ನಿಲವ ನೋಡಿದನಸುರರಿಪು ನಗುತ ॥38॥

೦೩೯ ನಿಲ್ಲಿ ಭಯ ...{Loading}...

ನಿಲ್ಲಿ ಭಯ ಬೇಡಾವ ರಣವಿದು
ತಲ್ಲಣಕೆ ತರುವಾಯೆ ದೀವಿಗೆ
ಪಲ್ಲವಿಸಿದರೆ ತಳಿತುದೇ ಭುಜಶೌರ್ಯ ಕುರುಬಲಕೆ
ಖುಲ್ಲರಾರೋ ಬಲವ ತಿರುಹಿದ
ರಿಲ್ಲಿ ನಿಲಲಂಜಿದರೆನುತ ಕರ
ಪಲ್ಲವವ ನೆಗಹಿದನು ಲಕ್ಷ್ಮೀಕಾಂತ ಕರುಣದಲಿ ॥39॥

೦೪೦ ಅವನೊಬ್ಬನ ಮಧುರವಚನ ...{Loading}...

ಅವನೊಬ್ಬನ ಮಧುರವಚನ ಕೃ
ಪಾವಲೋಕನದಿಂದ ಶತ ಜ
ನ್ಮಾವಳಿಯ ಘನ ದುರಿತವಹ್ನಿಯ ಝಳಕೆ ಕಡೆಯಹುದು
ದೇವರೀತನ ಲಲಿತವಚನಸು
ಧಾವಸೇಚನದಿಂದ ಭಟರುರೆ
ಜೀವಿಸುವುದೇನರಿದೆ ಕೇಳ್ ಜನಮೇಜಯಕ್ಷಿತಿಪ ॥40॥

೦೪೧ ಹಿಙ್ಗಿದುದು ಭಯ ...{Loading}...

ಹಿಂಗಿದುದು ಭಯ ಕಂಠದ ಸುಸ
ರ್ವಾಂಗದಲಿ ಪಸರಿಸಿತು ಕಾಳೆಗ
ದಂಘವಣೆ ಹೊಗರೇರಿದುದು ವಿಕ್ರಮ ಛಡಾಳಿಸಿತು
ಹೊಂಗಿದರು ಹೊಂಪುಳಿಯ ಪುಳಕದ
ಮುಂಗುಡಿಯ ರೋಮಾಂಚನದ ರಣ
ರಂಗ ಧೀರರು ತರುಬಿ ನಿಂದರು ಮತ್ತೆ ಕಾಳೆಗವ ॥41॥

೦೪೨ ಭಟರು ಬಳಲಿದರಿನ್ದು ...{Loading}...

ಭಟರು ಬಳಲಿದರಿಂದು ರಣವು
ತ್ಕಟವು ಧೀವಶಿಗಳು ಮಹಾರಥ
ರಟಕಟಿಸುತಿದೆ ಮತ್ತೆ ನಾವಿದನೇನ ಹೇಳುವೆವು
ಕುಟಿಲ ಭಾರದ್ವಾಜನಿವನು
ಬ್ಬಟಿಗೆ ಮದ್ದರೆವೆನು ನಿಶಾಪರಿ
ಯಟನಪಟುಗಳು ಬರಲಿ ಕಾಳೆಗಕೆಂದನಸುರಾರಿ ॥42॥

೦೪೩ ಕರಸು ಧರ್ಮಜ ...{Loading}...

ಕರಸು ಧರ್ಮಜ ಕಲಿಘಟೋತ್ಕಚ
ನಿರುಳುಬವರಕೆ ನಿಲಲಿ ಸಾತ್ಯಕಿ
ನರ ವೃಕೋದರ ನಕುಲ ಸಹದೇವಾದಿಗಳಿಗರಿದು
ಇರುಳು ರಣದಾಯತವನವನೇ
ಹಿರಿದು ಬಲ್ಲನು ಗೆಲುವನೆನೆ ಮುರ
ಹರನ ನೇಮದಲನಿಲತನಯನತನಯನೈತಂದ ॥43॥

೦೪೪ ಜಡಿವ ಹಿರಿಯುಬ್ಬಣದ ...{Loading}...

ಜಡಿವ ಹಿರಿಯುಬ್ಬಣದ ಹೆಚ್ಚಿದ
ಮುಡುಹುಗಳ ಮುರಿದಲೆಯ ಚರಣದ
ತೊಡರ ಮೊಳಗಿನ ಬಾವುಲಿಗಳಲಿ ಘಣಘಣ ಧ್ವನಿಯ
ನಿಡಿಯೊಡಲ ಮುರಿಮೀಸೆಗಳ ಕೆಂ
ಪಡರ್ದ ಕಂಗಳ ಹೊಳೆವ ದಾಡೆಯ
ದಡಿಗ ದಾನವನವನಿ ಹೆಜ್ಜೆಗೆ ನೆಗ್ಗಲೈತಂದ ॥44॥

೦೪೫ ಏನು ಧರ್ಮಜ ...{Loading}...

ಏನು ಧರ್ಮಜ ಕರಸಿದೈ ಕುರು
ಸೇನೆ ಮಲೆತುದೆ ಬಿಡು ಬಿಡಾ ತಡ
ವೇನು ತಾ ವೀಳೆಯವನೆನುತೆಡಗಯ್ಯನರಳಿಚುತ
ದಾನವಾಮರರೊಳಗೆ ನಿನ್ನಯ
ಸೂನುವಿಗೆ ಸರಿಯಿಲ್ಲೆನಿಸಿ ನಿಲ
ಲಾನು ಬಲ್ಲೆನು ನೋಡೆನುತ ಬಿದಿರಿದನು ಖಂಡೆಯವ ॥45॥

೦೪೬ ಜಡಿದು ಝೊಮ್ಪಿಸಿ ...{Loading}...

ಜಡಿದು ಝೊಂಪಿಸಿ ವೀಳೆಯವ ಕೊಂ
ಡೆಡದ ಕಯ್ಯಿಂದೆರಗಿ ಮದಮುಖ
ನೆಡಬಲನ ನೋಡಿದರೆ ರಕ್ಕಸಕೋಟಿ ಜೀಯೆನುತ
ಸಿಡಿಲ ಸೆರೆ ಬಿಟ್ಟಂತೆ ಭುಜವನು
ಹೊಡೆದು ಮುಂಚಿತು ದೈತ್ಯಬಲವುಲಿ
ದಡಿಯಿಡಲು ಮೇಲುಸುರು ಮಸಗಿತು ಫಣಿಪ ಕಮಠರಿಗೆ ॥46॥

೦೪೭ ಕಾಳರಾತ್ರಿಯ ಕಟಕವೋ ...{Loading}...

ಕಾಳರಾತ್ರಿಯ ಕಟಕವೋ ಮೇಣ್
ಕಾಲರುದ್ರನ ಪಡೆಯೊ ದಾನವ
ನಾಳಿನಗ್ಗಳಿಕೆಗಳ ಬಣ್ಣಿಸಬಲ್ಲ ಕವಿಯಾರು
ಆಳ ಬೋಳೈಸಿದನು ಕಪ್ಪುರ
ವೀಳೆಯವ ಹಾಯ್ಕಿದನು ಲೋಹದ
ಗಾಲಿ ಘೀಳಿಡೆ ರಥವನೇರಿದನನಿಲಸುತಸೂನು ॥47॥

೦೪೮ ಸಾಲು ಮಿಗೆ ...{Loading}...

ಸಾಲು ಮಿಗೆ ಮೋಹರದೊಳಗೆ ಬೊಂ
ಬಾಳ ದೀವಿಗೆ ಬೆಳಗಿದವು ಶರ
ಜಾಳ ದೀಧಿತಿ ತೊಳಗಿದವು ರಕ್ಕಸರ ಕೈಗಳಲಿ
ಬಾಳ ಹೊಳಹನು ಜರೆದು ದಾಡೆಯ
ಢಾಳ ಮಿಗೆ ಗಜಗಲಿಸೆ ದಾನವ
ಕಾಳೆಗಕ್ಕನುವಾಗಿ ನಿಂದನು ಬಿಗಿದ ಬಿಲುದೆಗೆದು ॥48॥

೦೪೯ ಹಯಕೆ ಹಯ ...{Loading}...

ಹಯಕೆ ಹಯ ರಥ ರಥಕೆ ಪಯದಳ
ಪಯದಳಕೆ ಗಜಸೇನೆ ಗಜಸೇ
ನೆಯಲಿ ಭಾಷೆಯ ಭಟರು ಭಾಷೆಯ ಭಟರ ಗಡಣದಲಿ
ನಿಯತ ಚಾತುರ್ಬಲವೆರಡು ನಿ
ರ್ಭಯದಲೊದಗಿತು ಮಕುಟಮಸ್ತಕ
ಮಯ ಮಹೀತಳವೆನಲು ಹಳಚಿದು ಹೊಯ್ದುದುಭಯಬಲ ॥49॥

೦೫೦ ಕೌರವನ ತಳತನ್ತ್ರ ...{Loading}...

ಕೌರವನ ತಳತಂತ್ರ ಕಟಕಾ
ಚಾರಿಯನ ಕಾಹಿನಲಿ ರಿಪುಪರಿ
ವಾರ ನಿಂದುದು ಭೀಮಸೇನನ ಸುತನ ಬಳಸಿನಲಿ
ಆರಿದನು ಜಗ ನಡುಗೆ ಬೊಬ್ಬೆಯ
ಭಾರದಲಿ ವೈರಿಗಳ ಬಲಸಂ
ಹಾರ ರುದ್ರನು ಕಲಿಘಟೋತ್ಕಚ ಹೊಕ್ಕನಾಹವವ ॥50॥

೦೫೧ ಬೆಳೆದವೋ ಕೈಕಾಲು ...{Loading}...

ಬೆಳೆದವೋ ಕೈಕಾಲು ನೀಲಾ
ಚಲಕೆ ಹೇಳೆನೆ ಮುಗಿಲ ತುಡುಕುವ
ತಲೆಯ ತೋಕೆಯ ತೋರಹತ್ತನ ಕಂಡು ಕುರುಸೇನೆ
ಕಳವಳಿಸಿದರು ಕಾಯದಲಿ ಕ
ಕ್ಕುಲಿತೆಗಾರರು ಕೈದೆಗೆದರ
ಗ್ಗಳೆಯನುರುಬೆಗೆ ಬೀಳುಕೊಟ್ಟರು ಭಟರು ಸೈರಣೆಯ ॥51॥

೦೫೨ ಏನ ಹೇಳುವೆನವರ ...{Loading}...

ಏನ ಹೇಳುವೆನವರ ರಣಸು
ಮ್ಮಾನವನು ನಮ್ಮವರ ಮೊಗದು
ಮ್ಮಾನವನು ಪ್ರಥಮಪ್ರವೇಶದೊಳಾದುದೀ ಹದನು
ದಾನವರ ಥಟ್ಟಣೆಗೆ ನಿಲುವರ
ನಾನು ಕಾಣೆನು ದಿಟ್ಟತನದಲಿ
ತಾನೆ ನಿಂದನು ಕೌರವೇಂದ್ರನು ಸಕಲ ಬಲಸಹಿತ ॥52॥

೦೫೩ ಫಡ ನಿಶಾಚರ ...{Loading}...

ಫಡ ನಿಶಾಚರ ಹೋಗು ಹೋಗಳ
ವಡದು ಕರೆ ನಿಮ್ಮಯ್ಯನನು ಹೇ
ರೊಡಲ ತೋರಿಸಿ ಬಲವ ಬೆದರಿಸಲಗ್ಗಳಿಕೆಯಹುದೇ
ಮಿಡುಕುವರೆ ಕರೆ ನಿಮ್ಮ ತೆತ್ತಿಗ
ನಡಗಲೇತಕೆ ಕೃಷ್ಣ ನಿಮಗಿ
ನ್ನೊಡಲ ಬಳಿನೆಳಲವಸಹಿತ ಬಾಯೆಂದು ಗರ್ಜಿಸಿದ ॥53॥

೦೫೪ ಮರಳು ಕೌರವ ...{Loading}...

ಮರಳು ಕೌರವ ಜಂಗಮ ಸ್ಥಾ
ವರದ ದೇಹಕೆ ನೆಳಲಹುದು ದಿನ
ಕರನ ದೇಹಕೆ ನೆಳಲು ಶ್ರುತವೋ ದೃಷ್ಟವೋ ನಿನಗೆ
ಸುರ ನಿಶಾಚರ ಮತ್ರ್ಯರೊಳು ತಾ
ನೆರವ ಬಯಸುವುದುಂಟೆ ಹರಿಯಂ
ತಿರಲಿ ಚೈತನ್ಯಾತ್ಮನಾತನ ಮಾತದೇಕೆಂದ ॥54॥

೦೫೫ ಹೆಣನನರಸುತ ರಕುತಪಾನಕೆ ...{Loading}...

ಹೆಣನನರಸುತ ರಕುತಪಾನಕೆ
ಸೆಣಸಿ ಶಾಕಿನಿ ಢಾಕಿನಿಯರೊಳು
ಹೆಣಗಿ ಗೆಲುವುದೆಯಾಯ್ತು ದಾನವವಿದ್ಯೆ ಜಗವರಿಯೆ
ರಣದೊಳಗ್ಗದ ಕೈದುಕಾರರ
ಕೆಣಕಿ ಗೆಲುವುದ ಕೇಳಿದರಿಯೆವು
ಹೆಣದಿನಿಹಿಗಳು ಹೇವ ಮಾರಿಗಳೆಂದನಾ ಭೂಪ ॥55॥

೦೫೬ ಬಯ್ಯಲರಿವೆ ದುರುಕ್ತಿ ...{Loading}...

ಬಯ್ಯಲರಿವೆ ದುರುಕ್ತಿ ಶರದಲಿ
ಮೆಯ್ಯನೆಸುವೆಯೊ ಮೇಣು ಮಾರ್ಗಣೆ
ಕಯ್ಯಲುಂಟೇ ನಿನಗೆ ಸಂಬಳವೇನು ಸಮರದಲಿ
ಅಯ್ಯನನು ಕರೆಯೆಂಬ ಬಾಯನು
ಕೊಯ್ಯಬೇಡಾ ಸಿಂಹಕೇಸರ
ದುಯ್ಯಲಾಡುವ ಗಜವ ನೋಡೆಂದುರುಬಿದನು ನೃಪನ ॥56॥

೦೫೭ ಎಸುತ ಹೊಕ್ಕನು ...{Loading}...

ಎಸುತ ಹೊಕ್ಕನು ದಳ್ಳಿಸುವ ಹೊಸ
ಮಸೆಯ ಕಣೆ ಮುಕ್ಕುರುಕಿದವು ನಿ
ಪ್ಪಸರದಲಿ ನೃಪನೆಚ್ಚು ಕಾಣನು ಹರಿವನಾ ಕಣೆಗೆ
ಕುಸುರಿದರಿದವು ಜೋಡು ಸೀಸಕ
ಬೆಸುಗೆಯೊಡೆದುದು ಘಾಯದಲಿ ಮೈ
ಬಸಿಯೆ ಬಿರಿದುದು ಶೌರ್ಯ ಬಿಗಿದುದು ಭೀತಿ ಭೂಪತಿಗೆ ॥57॥

೦೫೮ ಅಕಟ ದೊರೆಯೋ ...{Loading}...

ಅಕಟ ದೊರೆಯೋ ಸಿಕ್ಕಿದನು ಪಾ
ತಕರು ರಥಿಕರು ಶಿವ ಹಿಡಿಂಬಾ
ರ್ಭಕನಿಗೊಪ್ಪಿಸಿಕೊಟ್ಟು ಕೊಂದರು ದ್ರೋಣ ಕೃಪರೆನುತ
ಸಕಲ ಪರಿಚಾರಕರು ಮಂತ್ರಿ
ಪ್ರಕರವೊರಲಲು ಕೇಳಿ ಬದ್ಧ
ಭ್ರುಕುಟಿ ಭೀಷಣಮುಖರು ಮಸಗಿತು ದೈತ್ಯಬಲಜಲಧಿ ॥58॥

೦೫೯ ಬಕನ ಮಕ್ಕಳು ...{Loading}...

ಬಕನ ಮಕ್ಕಳು ಜಟನ ಕಿಮ್ಮೀ
ರಕನ ಸುತರು ಹಿಡಿಂಬತನುಜರು
ವೃಕ ಜರಾಸಂಧಾತ್ಮಜರು ಶಿಶುಪಾಲನಂದನರು
ಸಕಲ ಸನ್ನಾಹದಲಿ ದೈತ್ಯ
ಪ್ರಕರ ಹೊಕ್ಕುದು ರಾಯ ರಥಪಾ
ಲಕರು ಕವಿದರು ತುಡುಕಿದರು ರಣವನು ಘಟೋತ್ಕಚನ ॥59॥

೦೬೦ ಕೆಣಕಿದರಲಾ ರಣವ ...{Loading}...

ಕೆಣಕಿದರಲಾ ರಣವ ರಕ್ಕಸ
ಬಣಗುಗಳು ಮಝ ಪೂತು ಸಮರಾಂ
ಗಣದೊಳಗೆ ನಾವಾವ ಸದರವೊ ನೋಡಿರೈ ಭಟರು
ಸೆಣಸು ಗಡ ನಮ್ಮೊಡನೆ ಸಲೆ ಟೆಂ
ಠಣಿಸುವರು ಗಡ ಬವರಕೋಸುಗ
ಹೊಣಕೆ ಗಡ ನಮ್ಮೊಡನೆನುತ ಸಾರಥಿಯ ಕೈವೊಯ್ದ ॥60॥

೦೬೧ ಹೆಸರುಗೊಣ್ಡರೆ ಕಿವಿಗಳಿಗೆ ...{Loading}...

ಹೆಸರುಗೊಂಡರೆ ಕಿವಿಗಳಿಗೆ ಕ
ರ್ಕಶರು ರಕ್ಕಸರೆಂಬ ಹೆಸರಿದು
ನುಸಿಗಳೊಳಗಾಶ್ರಯಿಸಿ ಕೆಟ್ಟುದು ಶಿವ ಶಿವಾಯೆನುತ
ಹೊಸ ಮಸೆಯ ಹೊಗರಂಬುಗಳನೆ
ಬ್ಬಿಸಿದನುಬ್ಬಿಸಿದನು ವಿರೋಧಿಗ
ಳಸು ಸಮೀರಣನಿಂದ ನಿಜಭುಜ ವಿಕ್ರಮಾನಳನ ॥61॥

೦೬೨ ಓಡಲೀಯದೆ ಸದರಗೊಡುತ ...{Loading}...

ಓಡಲೀಯದೆ ಸದರಗೊಡುತ ವಿ
ಭಾಡಿಸುತ ಮೇಲಿಕ್ಕಿದರೆ ಕೈ
ಮಾಡಿದರೆ ಶರಹತಿಗೆ ದೇಹವ ಕೊಟ್ಟು ಸೈರಿಸುತ
ಖೇಡತನವನು ಬಿಡಿಸಿ ಸಲೆ ಕೊಂ
ಡಾಡಿ ಕಾದಿದನಸುರಜಾತಿಯೊ
ಳೋಡೆ ಪರಿಭವ ತನ್ನದೆಂಬ ಪದಸ್ತತನದಿಂದ ॥62॥

೦೬೩ ಎಸುಗೆಯೊಳ್ಳಿತಲಾಯುಧನಲಂ ...{Loading}...

ಎಸುಗೆಯೊಳ್ಳಿತಲಾಯುಧನಲಂ
ಬುಸನ ಪರಿ ತಪ್ಪಲ್ಲ ತಪ್ಪ
ಲ್ಲಸುರನಹೆಯೋ ಜಾಗು ಕಿಮ್ಮೀರಾತ್ಮಜಾಯೆನುತ
ಅಸಿ ಪರಶು ಪಟ್ಟಿಸ ಮುಸುಂಡಿ
ಪ್ರಸರ ಧಾರಾಪಾತದಲಿ ಮೈ
ಬಸಿಯೆ ರಕುತದ ಸಾರ ಸಾಲಿಡೆ ಬಲದೊಳೊಳಹೊಕ್ಕ ॥63॥

೦೬೪ ಉರು ತಿಮಿಙ್ಗಿಳನಬುಧಿಯಲಿ ...{Loading}...

ಉರು ತಿಮಿಂಗಿಳನಬುಧಿಯಲಿ ಡಾ
ವರಿಸುವುದು ಹುಲುಮೀನಿನಂತಿರ
ಲರಸ ಹೇಳುವುದೇನು ಮೊಗೆದನು ದೈತ್ಯ ಜಲನಿಧಿಯ
ಅರಿದ ಕೊರಳಿನ ಬಸಿವ ಬಂಬಲು
ಗರುಳ ಜರಿವ ಕಪಾಲದೊಗುನೆ
ತ್ತರ ರಣಾವನಿ ಕರೆವುತಿರ್ದುದು ರೌದ್ರಮಯರಸವ ॥64॥

೦೬೫ ಜಾಗು ದೈತ್ಯರ ...{Loading}...

ಜಾಗು ದೈತ್ಯರ ರಭಸದಲಿ ಲೇ
ಸಾಗಿ ಕಾದಿದಿರೀಸು ನಮ್ಮಲಿ
ತಾಗಿ ನಿಂದವರಾರು ಕೆಚ್ಚುಳ್ಳವರು ಕಲಿತನದ
ಆಗಲಿನ್ನಾವುದು ನಮಗೆ ಕೈ
ಲಾಗು ನಿಮ್ಮಸುಗಳು ಶರೀರವ
ನೀಗಿ ಕಳೆಯಲಿ ಎಂದು ಬೊಬ್ಬಿರಿದೆಚ್ಚನತಿರಥರ ॥65॥

೦೬೬ ಸಿಡಿಲು ಮೊರೆದರೆ ...{Loading}...

ಸಿಡಿಲು ಮೊರೆದರೆ ಸರ್ಪನಂಜುವು
ದಡಗುವನೆ ಗರುಡನ ವೃಥಾ ಕೆಡೆ
ನುಡಿಯ ನುಡಿದರೆ ದಿಟ್ಟನೆಂಬರೆ ವೀರರಾದವರು
ಫಡ ಫಡೆನುತ ಬಕಾಸುರನ ಮಗ
ನಡಸಿದನು ಕೂರಂಬನಾತನ
ಕಡುಹ ಹೊಗಳುತ ಹೊಕ್ಕು ಹಿಡಿದನು ಬೀಸಿದನು ಖಳನ ॥66॥

೦೬೭ ರಥಚಯವ ನುಗ್ಗೊತ್ತಿದನು ...{Loading}...

ರಥಚಯವ ನುಗ್ಗೊತ್ತಿದನು ಸಾ
ರಥಿಗಳನು ಸೀಳಿದನು ಸುಮಹಾ
ರಥರ ಬಿಂಕದ ಬಿಗುಹ ಮುರಿದನು ಹೊಕ್ಕು ಬೀದಿಯಲಿ
ಶಿಥಿಲವಾಯಿತು ವೈರಿಬಲವತಿ
ಮಥನವಾಯಿತು ದೈತ್ಯನೂಳಿಗ
ಪೃಥುವಿ ಲಘುತರವಾಯ್ತು ಫಣಿಪನ ಕೊರಳು ಸೈನಿಮಿರೆ ॥67॥

೦೬೮ ಒರಸಿದನು ರಣದಲಿ ...{Loading}...

ಒರಸಿದನು ರಣದಲಿ ಹಿಡಿಂಬಾ
ಸುರನ ಮಕ್ಕಳ ಚೈದ್ಯ ಮಾಗಧ
ನರಕ ಕಿಮ್ಮೀರಕ ಜಟಾಸುರಸೂನು ಸಂತತಿಯ
ಬರಲಿ ಕರ್ಣ ದ್ರೋಣರುಳಿದೀ
ಜರಡ ಜೋಡಿಸಬೇಡ ಭೀಮನ
ನರನ ಬಯಸುವರೆನ್ನೊಡನೆ ಕೈಮಾಡಹೇಳೆಂದ ॥68॥

೦೬೯ ಎನಲು ಕವಿದುದು ...{Loading}...

ಎನಲು ಕವಿದುದು ಸೇನೆ ಕಂಗನೆ
ಗನಲಿ ಕರ್ಣ ದ್ರೋಣರಿಗೆ ನೀ
ನೆನಿತರವ ಫಡ ಬಾಯಿಬಡಿಕನು ಭೀಮಸುತನೆನುತ
ತನತನಗೆ ಕಾಲಾಳು ಮೇಲಾ
ಳನುಪಮಿತರೌಕಿದರು ಚಾಪ
ಧ್ವನಿಯೊಳಗೆ ನೆರೆ ಮುಳುಗೆ ಬಹುವಿಧವಾದ್ಯ ನಿರ್ಘೋಷ ॥69॥

೦೭೦ ಆಳಹಿರಿ ನಿಮಗಞ್ಜುವೆನು ...{Loading}...

ಆಳಹಿರಿ ನಿಮಗಂಜುವೆನು ಕಾ
ಲಾಳ ಹೊಯ್ಯೆನು ಕುದುರೆಕಾರರು
ಮೇಲುವಾಯಲಿ ರಥಿಕರೊಡೆಹಾಯಿಸಲಿ ತೇರುಗಳ
ತೂಳಿಸಲಿ ಗಜದಳನವರಿಗೆ
ಕೋಲ ತೊಡಚುವನಲ್ಲ ನೆರೆ ಹೀ
ಹಾಳಿಯುಳ್ಳರೆ ಬರಲಿ ಕರ್ಣ ದ್ರೋಣ ಕೃಪರೆನುತ ॥70॥

೦೭೧ ಹಲಬರಸುರರು ಮಡಿದರಿವನ ...{Loading}...

ಹಲಬರಸುರರು ಮಡಿದರಿವನ
ಗ್ಗಳೆಯನಿರುಳಿನ ಬವರದಾಯತ
ತಿಳಿವುದೀತಂಗೆನುತಲಾ ದ್ರೋಣಾದಿ ನಾಯಕರು
ಅಳುಕಿದರು ಬಳಿಕೇನು ಭಕುತಿಯ
ಲೊಲಿಸಿದರಲೈ ಪಾಂಡವರು ಯದು
ಕುಲಲಲಾಮನನಮಳ ಗದುಗಿನ ವೀರನರಯಣನ ॥71॥

+೧೫ ...{Loading}...