೧೦

೦೦೦ ಸೂ ರಾಯದಳ ...{Loading}...

ಸೂ. ರಾಯದಳ ಹಳಚಿದುದು ಕಲಿರಾ
ಧೇಯನಲಿ ಸಂಕುಳದೊಳೊದಗಿದ
ವಾಯುಸುತ ಸಮರದಲಿ ಕೊಂದನು ಕರ್ಣನಂದನನ

೦೦೧ ಕೇಳು ಧೃತರಾಷ್ಟ್ರಾವನಿಪ ...{Loading}...

ಕೇಳು ಧೃತರಾಷ್ಟ್ರಾವನಿಪ ತ
ಮ್ಮಾಳ ಮೇಳಾಪದಲಿ ಪಾಂಡು ನೃ
ಪಾಲಕರ ದಳ ನಡೆದು ಬಂದುದು ಭೂರಿ ರಭಸದಲಿ
ಆಳೊಳಗ್ಗಳೆಯರಿಗೆ ಕೊಟ್ಟನು
ವೀಳೆಯವನಾ ಕರ್ಣನತಿರಥ
ಜಾಳವನು ಪರುಠವಿಸಿ ನಿಲಿಸಿದನೆರಡು ಪಕ್ಕದಲಿ ॥1॥

೦೦೨ ರಾಯ ಥಟ್ಟಿನ ...{Loading}...

ರಾಯ ಥಟ್ಟಿನ ಬಲದ ಬಾಹೆಯ
ನಾಯಕರು ಸಂಶಪ್ತಕರು ವಿವಿ
ಧಾಯುಧದ ಕಾಂಭೋಜ ಬರ್ಬರ ಚೀನ ಭೋಟಕರು
ಸಾಯಕದ ಕಿವಿವರೆಯ ತೆಗಹಿನ
ಘಾಯ ತವಕಿಗರೆಡಬಲದ ಕುರು
ರಾಯನನುಜರು ರಂಜಿಸಿತು ದುಶ್ಯಾಸನಾದಿಗಳು ॥2॥

೦೦೩ ಗುರುಸುತನ ಕೂಡೆಣ್ಟುಸಾವಿರ ...{Loading}...

ಗುರುಸುತನ ಕೂಡೆಂಟುಸಾವಿರ
ವರಮಹಾರಥರೈದುಸಾವಿರ
ಕರಿಘಟೆಗಳಿಪ್ಪತ್ತು ಸಾವಿರರಾವ್ತರೊಗ್ಗಿನಲಿ
ಧರಣಿಪತಿ ಕೃತವರ್ಮ ಕೃಪ ಹ
ನ್ನೆರಡುಸಾವಿರ ರಥಸಹಿತ ಮೋ
ಹರಿಸಿದರು ಬಲವಂಕದಲಿ ದಳಪತಿಯ ನೇಮದಲಿ ॥3॥

೦೦೪ ಥಟ್ಟಿನೆಡವಙ್ಕದಲಿ ಹಗೆಗೊರೆ ...{Loading}...

ಥಟ್ಟಿನೆಡವಂಕದಲಿ ಹಗೆಗೊರೆ
ಗಟ್ಟಿ ನಿಂದರು ಕುರುಬಲದ ಜಗ
ಜಟ್ಟಿ ವೃಷಸೇನನು ಸುಷೇಣನು ಶಕುನಿ ಬಲಸಹಿತ
ಬೆಟ್ಟ ಬೀಳಲುವರಿದವೆನೆ ಕೈ
ಮುಟ್ಟಿ ಮಹಿಯನು ದಂತಿಘಟೆ ಸಾ
ಲಿಟ್ಟುದೆತ್ತಣ ಸೇನೆಯೋ ನಾವರಿಯೆವಿದನೆಂದ ॥4॥

೦೦೫ ಆ ನದೀನನ್ದನನ ...{Loading}...

ಆ ನದೀನಂದನನ ಸಮರದಿ
ಸೇನೆ ಸವೆದುದನಂತ ಬಳಿಕಿನ
ಸೇನೆ ಗರಿ ಸೋಂಕಿಲ್ಲ ಕಂಡೆನು ದ್ರೋಣ ಪರ್ವದಲಿ
ಏನನೆಂಬೆನು ಜೀಯ ಮತ್ತೀ
ಭಾನುತನಯನ ಕದನಕೊದಗಿದ
ಸೇನೆ ಸಂಖ್ಯಾತೀತವೆಂದನು ಸಂಜಯನು ನೃಪಗೆ ॥5॥

೦೦೬ ಒಡ್ಡಿತೀ ಬಲ ...{Loading}...

ಒಡ್ಡಿತೀ ಬಲ ರಿಪುಭಟರು ಮಾ
ರೊಡ್ಡ ಮೆರೆದರು ತಮ್ಮ ನೆರತೆಯೊ
ಳೊಡ್ಡಿಗೊಬ್ಬರ ಕರೆದು ಪರುಠವಿಸಿದನು ಮುರವೈರಿ
ಒಡ್ಡಿನೆಡದಲಿ ಭೀಮನಾ ಬಲ
ದೊಡ್ಡಿನಲಿ ಕಲಿಪಾರ್ಥ ದಳಪತಿ
ಯೊಡ್ಡಿನಲಿ ನಿಂದನು ಯುಧಿಷ್ಠಿರರಾಯ ದಳಸಹಿತ ॥6॥

೦೦೭ ಈ ಮಹಾ ...{Loading}...

ಈ ಮಹಾ ಮೋಹರವನತಿ ನಿ
ಸ್ಸೀಮರಾಂತರು ಮೂವರೇ ಬಳಿ
ಕಾ ಮಹಾರಥರಾಜಿಯಡಗಿದುದವರ ರಶ್ಮಿಯಲಿ
ಸೋಮಸೂರ್ಯಾಗ್ನಿಗಳಿದಿರೊಳು
ದ್ದಾಮ ತೇಜಸ್ವಿಗಳೆ ದಿಟ ಕುರು
ಭೂಮಿಪತಿ ಹೇಳೆಂದು ನುಡಿದನು ಸಂಜಯನು ನಗುತ ॥7॥

೦೦೮ ಎರಡು ಬಲವುಬ್ಬೆದ್ದುದಿದರೊಳು ...{Loading}...

ಎರಡು ಬಲವುಬ್ಬೆದ್ದುದಿದರೊಳು
ಮೊರೆವ ಭೇರಿಯ ಭಟರ ಬೊಬ್ಬೆಯ
ಕರಿಯ ಗಜರಿನ ಹಯದ ಹೇಷಾರವದ ಹಲ್ಲಣೆಯ
ಜರಿವ ಕಹಳೆಯ ಝಾಡಿಸುವ ಜ
ಝ್ಝರದ ಡಿಂಡಿಮ ಡಮರು ಪಟಹದ
ಧರಧುರದ ದನಿ ಧೈರ್ಯಗೆಡಿಸಿತು ಸಕಲ ಸಾಗರವ ॥8॥

೦೦೯ ಬೆರಸಿದವು ಬಲವೆರಡು ...{Loading}...

ಬೆರಸಿದವು ಬಲವೆರಡು ಹೊಕ್ಕವು
ಕರಿಘಟೆಗಳೇರಿದವು ಕುದುರೆಗ
ಳುರವಣಿಸಿದವು ತೇರ ತಿವಿದರು ಹೊಂತಕಾರಿಗಳು
ಉರುಳ್ವ ತಲೆಗಳ ಬಸಿವ ಮಿದುಳಿನ
ಸುರಿವ ಕರುಳಿನ ಸೂಸುವೆಲುವಿನ
ಹೊರಳ್ವ ಮುಂಡದ ರೌದ್ರರಣ ರಂಜಿಸಿತು ಚೂಣಿಯಲಿ ॥9॥

೦೧೦ ಜೋಡನೊಡೆದವಯವದ ರಕುತವ ...{Loading}...

ಜೋಡನೊಡೆದವಯವದ ರಕುತವ
ತೋಡಿದವು ಕೂರಂಬು ಸಬಳದ
ನೀಡುಮೊನೆ ನಿರಿಗರುಳನೆಂಜಲಿಸಿದವು ಪಟುಭಟರ
ಖೇಡರಸು ಬೆನ್ನೀಯೆ ನೆತ್ತಿಯ
ಬೀಡೆ ಬಿರಿಯಲು ಬಿದ್ದ ಲೌಡೆಗ
ಳೀಡಿರಿದವರಿ ಚಾತುರಂಗದ ಚಪಳ ಚೂಣಿಯಲಿ ॥10॥

೦೧೧ ತೆಗೆಯ ಹೇಳೋ ...{Loading}...

ತೆಗೆಯ ಹೇಳೋ ಚೂಣಿಯಲಿ ಕಾ
ಳೆಗದ ಕೌತುಕವೆತ್ತ ದೊರೆಗಳು
ಹೊಗಲಿ ದಳನಾಯಕರು ನುಗ್ಗಿನ ಬೀಯಕಳುಕರಲ
ವಿಗಡ ಭೀಮಾರ್ಜುನರ ಬಸುರ
ಲ್ಲುಗಿ ಕರುಳನೆನುತಬ್ಬರದ ಬೊ
ಬ್ಬೆಗಳ ಬಿರುದರು ಕೆಣಕಿದರು ಸಮಸಪ್ತಕರು ನರನ ॥11॥

೦೧೨ ರಾಯನಾವೆಡೆ ಕೌರವೇನ್ದ್ರನ ...{Loading}...

ರಾಯನಾವೆಡೆ ಕೌರವೇಂದ್ರನ
ದಾಯಿಗನ ಬರಹೇಳು ಹಿಂದಣು
ಪಾಯ ಕೊಳ್ಳದು ನಿಮ್ಮ ಭೀಷ್ಮದ್ರೋಣರಾವಲ್ಲ
ಕಾಯಿದೆವು ಕೈಮುಗಿದನಾದರೆ
ಸಾಯಬಲ್ಲರೆ ತಿರುವನೊದೆಯಲಿ
ಸಾಯಕದ ಹಿಳುಕೆನುತ ಬಿಟ್ಟನು ಸೂಠಿಯಲಿ ರಥವ ॥12॥

೦೧೩ ಬಿಟ್ಟ ಸೂಠಿಯೊಳುಗಿವ ...{Loading}...

ಬಿಟ್ಟ ಸೂಠಿಯೊಳುಗಿವ ಕರ್ಣನ
ಥಟ್ಟಣೆಯ ಕಂಡನಿಲಸುತನಡ
ಗಟ್ಟಿದನು ಹದಿನೆಂಟು ಸಾವಿರ ರಥಿಕರೊಗ್ಗಿನಲಿ
ಇಟ್ಟಣಿಸಿ ಬರೆ ರವಿಸುತನ ಕೈ
ಮುಟ್ಟಲೀಯದೆ ಕೌರವೇಂದ್ರನ
ಥಟ್ಟಿನಲಿ ಮೂವತ್ತು ಸಾವಿರ ಕರಿಗಳೌಕಿದವು ॥13

೦೧೪ ಕರಿಘಟೆಯಲಾ ನಮ್ಮ ...{Loading}...

ಕರಿಘಟೆಯಲಾ ನಮ್ಮ ಪುಣ್ಯದ
ಪರಿಣತೆಯಲಾ ನಮ್ಮ ರಥಿಕರು
ಸರಳ ತೊಡದಿರಿ ಸೈರಿಸುವುದರೆಗಳಿಗೆ ಮಾತ್ರದಲಿ
ಅರಿ ಹಿರಣ್ಯಕಬಲಕೆ ನರಕೇ
ಸರಿಯ ಪಾಡೆನಿಸುವೆನು ಕಣ್ಣೆವೆ
ಮರೆಗೆ ಮುಂಚುವೆನೆನುತ ಹೊಕ್ಕನು ಭೀಮ ಗಜಬಲವ ॥14॥

೦೧೫ ಬಿರಿದುವೀತನ ಸಿಂಹ ...{Loading}...

ಬಿರಿದುವೀತನ ಸಿಂಹ ನಾದಕೆ
ಕರಿಗಳೆದೆಮಣಿ ಗದೆಯ ಹೊಯ್ಲಲಿ
ತಿರುಗಿ ಕೋಡಡಿಯಾಗಿ ಕೆಡೆದವು ಮಡಿದವಾಕ್ಷಣಕೆ
ಉರುಳಿದವು ಪರ್ವತದ ವಜ್ರದ
ಸರಿಸ ಹೋರಟೆ ಕಾಣಲಾದುದು
ಕರಿಘಟೆಯ ಪವನಜನ ರಣದಲಿ ರಾಯ ಕೇಳ್ ಎಂದ ॥15॥

೦೧೬ ನೀಲಗಿರಿಗಳ ನೆಮ್ಮಿ ...{Loading}...

ನೀಲಗಿರಿಗಳ ನೆಮ್ಮಿ ಘನಮೇ
ಘಾಳಿ ಸುರಿದವು ಮಳೆಯನೆನೆ ಶರ
ಜಾಳ ಕವಿದುದು ಗಜದ ಜೋಧರ ಝಾಡಿಯೆಸುಗೆಯಲಿ
ಕೋಲ ಕೊಂಬನೆ ಭೀಮ ಸಿಡಿಲುರಿ
ನಾಲಗೆಗೆ ನೀರೇಗುವುದು ಮೇ
ಲಾಳ ಮುರಿದನು ವಿವಿಧ ಶಸ್ತ್ರಾಸ್ತ್ರ ಪ್ರಹಾರದಲಿ ॥16॥

೦೧೭ ಕರಿಯ ಬರಿಕೈಯೆಸುವ ...{Loading}...

ಕರಿಯ ಬರಿಕೈಯೆಸುವ ಜೋಧರ
ಕರ ಮಹಾಂಕುಶದವನ ಕೈ ಕ
ತ್ತರಿಸಲೊಂದೇ ಶರದಲೆಚ್ಚನು ಮತ್ತೆ ಗದೆಗೊಂಡು
ತಿರುಗಿ ಹೊಯ್ದನು ಜೋಡು ಜೋಧರು
ಕರಿಯೊಡಲು ಸಮಸೀಳ ಸೀಳಲು
ಅರಸ ಬಣ್ಣಿಸಲಾರು ಬಲ್ಲರು ಭೀಮ ಸಾಹಸವ ॥17॥

೦೧೮ ಹಿಣ್ಡೊಡೆದು ಗಜಸೇನೆ ...{Loading}...

ಹಿಂಡೊಡೆದು ಗಜಸೇನೆ ಮುಮ್ಮುಳಿ
ಗೊಂಡು ಮುರಿದುದು ಮುಳಿದು ಭೀಮನ
ಗಂಡುಗೆಡಿಸುವರಿಲ್ಲ ಕೌರವ ದಳದ ಸುಭಟರಲಿ
ಅಂಡುಗೊಂಡುದು ಬಿರುದುಗಿರುದಿನ
ಗಂಡರಕಟಕಟೆನುತ ನಿಜ ಕೋ
ದಂಡವನು ದನಿಮಾಡುತಶ್ವತ್ಥಾಮನಿದಿರಾದ ॥18॥

೦೧೯ ಎಲೆಲೆ ರಾಯನ ...{Loading}...

ಎಲೆಲೆ ರಾಯನ ತಮ್ಮನೋ ಗಜ
ಬಲದೊಡನೆ ಬಳಲಿದನು ಗುರುಸುತ
ನಳವು ಕಿರಿದೇ ಸ್ವಾಮಿದ್ರೋಹರ ನೂಕು ನೂಕೆನುತ
ಉಲಿದು ಧೃಷ್ಟದ್ಯುಮ್ನ ಬಲವಿ
ಟ್ಟಳಿಸಿ ನೂಕಿತು ಭೀಮಸೇನನ
ನೆಲನ ಕೊಂಡರು ಕಡುಹಿನಲಿ ಪಾಂಚಾಲ ನಾಯಕರು ॥19॥

೦೨೦ ಮರುಗದಿರಿ ಪಾಞ್ಚಾಲರಾಯನ ...{Loading}...

ಮರುಗದಿರಿ ಪಾಂಚಾಲರಾಯನ
ಮರಿಗಳಿರ ಭೀಮಂಗೆ ತಪ್ಪೇ
ನುರುವ ದೊರೆ ಸೊಪ್ಪಾಗದಂತಿರೆ ನೀವು ಕಾದುವಿರೆ
ಅರಿವೆನಾದರೆಯೆನುತ ಬಾಣವ
ತಿರುಹಲಾ ನಿಮಿಷದಲಿ ನಿಂದನು
ಗುರುಸುತನ ಹಿಂದಿಕ್ಕಿ ಪಾಂಚಾಲರಿಗೆ ಕಲಿಕರ್ಣ ॥20॥

೦೨೧ ಕ್ಷಮಿಸುವುದು ಗುರುಸೂನು ...{Loading}...

ಕ್ಷಮಿಸುವುದು ಗುರುಸೂನು ರಣವನು
ನಿಮಿಷ ಚಿತ್ತೈಸುವುದು ಶೌರ್ಯ
ಭ್ರಮಿತರೀ ಪಾಂಚಾಲರನು ಬರಿಕೈದು ತೋರುವೆನು
ದ್ಯುಮಣಿ ಪರಿಯಂತೇಕೆ ರಶ್ಮಿಗೆ
ತಿಮಿರವಿದಿರೇ ನೀವು ನೋಟಕ
ರೆಮಗೆ ರಣ ದೆಖ್ಖಾಳವೆಂದನು ಕರ್ಣ ಗುರುಸುತಗೆ ॥21॥

೦೨೨ ಬಳಿಕ ಹೇಳುವುದೇನು ...{Loading}...

ಬಳಿಕ ಹೇಳುವುದೇನು ರಣದ
ಗ್ಗಳೆಯರವದಿರು ಮುತ್ತಿದರು ಕೈ
ಚಳಕಿಗರು ಕವಿದೆಚ್ಚರೀತನನೆಂಟು ದೆಸೆಗಳಲಿ
ಲುಳಿತ ಜಲಧರಪಟಲ ಜಠರದೊ
ಳಿಳಿದ ರವಿಮಂಡಲದವೋಲರೆ
ಘಳಿಗೆ ಕರ್ಣನ ಕಾಣೆನೈ ನರನಾಥ ಕೇಳ್ ಎಂದ ॥22॥

೦೨೩ ಗಾಳಿಯೆತ್ತಲು ಘಾಡಿಸುವ ...{Loading}...

ಗಾಳಿಯೆತ್ತಲು ಘಾಡಿಸುವ ಮೇ
ಘಾಳಿಯೆತ್ತಲು ವೈರಿ ಸೇನೆಯ
ನಾಳೆಗಡಿತದ ನೊರೆಯ ರಕುತದ ನೂಕುಧಾರೆಗಳ
ಏಳಿಗೆಯಲಾ ಛತ್ರ ಚಮರೀ
ಜಾಳ ನನೆದವು ಕರ್ಣನಂಬಿನ
ಕೋಲ ಕಡಿದೊಡನೊಡನೆ ಕೊಂದನು ಕೋಟಿಸಂಖ್ಯೆಗಳ ॥23॥

೦೨೪ ಮೇಲೆ ಬಿದ್ದುದು ...{Loading}...

ಮೇಲೆ ಬಿದ್ದುದು ಮತ್ತೆ ರಿಪು ಪಾಂ
ಚಾಲಬಲ ಸಾವುದಕೆ ಕಡೆಯಿ
ಲ್ಲಾಳ ಬರವಿಂಗರಿಯೆ ನಾನವಸಾನವನು ಮರಳಿ
ಕೋಲುಗಳ ತೆಗೆದೆಸುವನೋ ಶರ
ಜಾಳವನು ವಿರಚಿಸುವನೋ ಹಗೆ
ಯಾಳಿ ಮುರಿದುದ ಕಾಬೆನೆಸುಗೆಯ ಕಾಣೆ ನಾನೆಂದ ॥24॥

೦೨೫ ವೈರಿ ಪಾಞ್ಚಾಲಕರೊಳೈವರು ...{Loading}...

ವೈರಿ ಪಾಂಚಾಲಕರೊಳೈವರು
ಧಾರುಣೀಶ್ವರರಸುವ ಬಿಟ್ಟರು
ಚಾರು ಚಾಪಳ ಚಾತುರಂಗದ ನಿಧನ ನಿರ್ಣಯವ
ಆರು ಬಲ್ಲರು ಖಾತಿಯಲಿ ಜ
ಝ್ಝಾರರೆದ್ದುದು ಮತ್ತೆ ಸಕಲ ಮ
ಹಾರಥರು ನೂಕಿದರು ಲಗ್ಗೆಯ ಲಳಿಯ ಲಹರಿಯಲಿ ॥25॥

೦೨೬ ನಕುಲ ಧೃಷ್ಟದ್ಯುಮ್ನ ...{Loading}...

ನಕುಲ ಧೃಷ್ಟದ್ಯುಮ್ನ ಸುತ ಸೋ
ಮಕ ಶಿಖಂಡಿ ಯುಯುತ್ಸು ವರಸಾ
ತ್ಯಕಿ ಶತಾನೀಕಾಖ್ಯ ಪ್ರತಿವಿಂಧ್ಯಕರು ಶ್ರುತಕೀರ್ತಿ
ಸಕಲ ಕೈಕೆಯ ಪಾಂಡ್ಯ ಶಿಶುಪಾ
ಲಕಸುತ ಯುಧಾಮನ್ಯು ಸಹದೇ
ವಕರು ಸನ್ನಾಹದಲಿ ಕವಿದುದು ವರಮಹಾರಥರು ॥26॥

೦೨೭ ಭೀಮ ಫಲುಗುಣ ...{Loading}...

ಭೀಮ ಫಲುಗುಣ ಕೃಷ್ಣ ಧರ್ಮಜ
ರೀ ಮಹಾರಥರಲ್ಲದಿತರ
ಸ್ತೋಮವಳವಿಯ ಮೀರಿ ಕವಿದುದು ಕರ್ಣನಿದಿರಿನಲಿ
ಹಾ ಮಹಾದೇವಾ ಸಮಸ್ತ ಸ
ನಾಮರಥಿಕರು ಕರ್ಣನೊಬ್ಬನ
ಕಾಮಿಸಿದರೈ ಕದನಕವನೀಪಾಲ ಕೇಳ್ ಎಂದ ॥27॥

೦೨೮ ಉರಿಯ ಪೇಟೆಗಳಲಿ ...{Loading}...

ಉರಿಯ ಪೇಟೆಗಳಲಿ ಪತಂಗದ
ಸರಕು ಮಾರದೆ ಮರಳುವುದೆ ನಿ
ಬ್ಬರದಬಿರುದಿನೊಳೀ ಮಹಾರಥರಾಜಿ ರವಿಸುತನ
ಕೆರಳಿಚಿದರೈ ಕೇಣವಿಲ್ಲದೆ
ಬೆರಸಿದರು ಬೇಸರಿಸಿದರು ಹೊಡ
ಕರಿಸಿದರು ಹೊಯ್ದರು ವಿಭಾಡಿಸಿದರು ವಿಘಾತಿಯಲಿ ॥28॥

೦೨೯ ತಮ್ಮ ಸತ್ವೋದಧಿಯ ...{Loading}...

ತಮ್ಮ ಸತ್ವೋದಧಿಯ ತೋರಿದ
ರೊಮ್ಮೆ ಮೊಗೆದನು ಬಳಿಕ ರಾಯನ
ಸೊಮ್ಮಿನವರಲಿ ಸೀಳಿದನು ಹದಿನೆಂಟುಸಾವಿರವ
ಹಮ್ಮುಗೆಯ ಕೈಮನದ ಹೊಣಕೆಯ
ಹಮ್ಮಿನುಬ್ಬಟೆಯವರ ಪಾರ್ಥನ
ತಮ್ಮದಿರ ಸಾಹಸಕೆ ಸೇರಿಸಿದನು ಪಲಾಯನವ ॥29॥

೦೩೦ ರಥ ಮುರಿದು ...{Loading}...

ರಥ ಮುರಿದು ಬಲು ಘಾಯದಲಿ ಸು
ವ್ಯಥಿತಸಾತ್ಯಕಿ ಹಿಂಗಿದನು ಸಾ
ರಥಿಗಳಳಿವಿನಲೋಡಿದರು ಸುತಸೋಮಕಾದಿಗಳು
ಪೃಥುವಿಗೊರಗಿತು ನಾಲ್ಕುಸಾವಿರ
ರಥಿಗಳುಳಿದ ಪದಾತಿ ಗಜ ಹಯ
ರಥವ ಕೆಡಹಿದನೆನಿತನೆಂಬುದನರಿಯೆ ನಾನೆಂದ ॥30॥

೦೩೧ ಮುರಿದು ಮತ್ತೆ ...{Loading}...

ಮುರಿದು ಮತ್ತೆ ಮಹಾರಥರು ಸಂ
ವರಿಸಿಕೊಂಡು ಶಿಖಂಡಿ ಸಾತ್ಯಕಿ
ವರನಕುಲ ಸಹದೇವ ಧೃಷ್ಟದ್ಯುಮ್ನ ಶೃಂಜಯರು
ಸರಳ ಬಿರುಬಿನ ಬಾಯ ಬೈಗುಳ
ಬಿರುದುಗಹಳೆಯ ಬಿಂಕದವರು
ಬ್ಬರಿಸಿ ಕವಿದರು ಕರ್ಣನಾವೆಡೆ ತೋರು ತೋರೆನುತ ॥31॥

೦೩೨ ನುಸಿಗಳಿರ ನಿಮಗೇಕೆ ...{Loading}...

ನುಸಿಗಳಿರ ನಿಮಗೇಕೆ ಕರ್ಣನ
ಘಸಣೆ ನಾವೇ ನಿಮ್ಮ ನೆತ್ತಿಯ
ಮುಸಲವಲ್ಲಾ ಫಡ ನಕುಲ ಸಹದೇವ ನಿಲ್ಲೆನುತ
ಮುಸುಡ ಹೊಗರಿನ ಕಣ್ಣ ಕೆಂಪಿನ
ವಿಷಮರಗ್ಗದ ಕರ್ಣತನುಜರು
ಮಸಗಿ ಮುಂಚುವ ಮೋಹರವನಡಹಾಯ್ದು ತರುಬಿದರು ॥32॥

೦೩೩ ಏನ ಹೇಳುವೆನವರ ...{Loading}...

ಏನ ಹೇಳುವೆನವರ ಶರಸಂ
ಧಾನ ಸೌರಂಭವನು ಕಲಿ ವೃಷ
ಸೇನ ವೀರಸುಷೇಣರೇರಿದರೆಚ್ಚರತಿಬಳರ
ಭಾನುಸುತನಿಂದೆಂಟುಮಡಿಯ ಸ
ಘಾನರಹಿರೋ ಪೂತು ಮಝ ಎನು
ತಾ ನಿಖಿಳ ರಥನಿಕರ ಕವಿದುದು ಮತ್ತೆ ಸಂದಣಿಸಿ ॥33॥

೦೩೪ ಕಡಿದು ಬಿಸುಟರು ...{Loading}...

ಕಡಿದು ಬಿಸುಟರು ತೇರುಗಳನಡ
ಗೆಡಹಿದರು ಹೇರಾನೆಗಳ ಕೆಲ
ಕಡೆಯಲೌಕುವ ಕುದುರೆ ನನೆದವು ಬಸಿವ ನೆತ್ತರಲಿ
ತುಡುಕಿದರೆ ಕಾಲಾಳನಟ್ಟೆಯ
ನುಡಿಯಲರಿಯೆನು ಕರ್ಣತನುಜರ
ಕಡುಹು ನಕುಲಾದಿಗಳ ಬೆದರಿಸಿತರಸ ಕೇಳ್ ಎಂದ ॥34॥

೦೩೫ ತಿರುಗಿ ಕಣ್ಡನು ...{Loading}...

ತಿರುಗಿ ಕಂಡನು ಭೀಮನೆಲೆ ತರು
ವಲಿಗಳಿರ ಕೊಂಡಾಡಿ ಕಾದುವ
ದೊರೆಗಳೇ ನಕುಲಾಂಕ ತೆಗೆ ಸಹದೇವ ಸಾರೆನುತ
ಸರಳ ಕೆನ್ನೆಯ ಬಿಗಿದ ಹುಬ್ಬಿನ
ಮುರಿದ ಮೀಸೆಯಲೌಡುಗಚ್ಚಿನ
ಕುರುಕುಲಾಂತಕ ಭೀಮ ಬಿಟ್ಟನು ಸೂಠಿಯಲಿ ರಥವ ॥35॥

೦೩೬ ರಾಯ ದಳದಲಿ ...{Loading}...

ರಾಯ ದಳದಲಿ ಸೆಣಸಲಿದು ಕ
ಜ್ಜಾಯವೇ ಮಕ್ಕಳಿರ ಮನ್ನಿಸಿ
ಕಾಯಿದೆನು ಬಳಿಕೇನು ನಿಮ್ಮಂಘವಣೆ ಲೇಸಾಯ್ತು
ಸಾಯಲೇತಕೆ ಹಿಂಗಿ ನಿಮ್ಮನು
ನೋಯಿಸುವುದನುಚಿತವು ಸೇನಾ
ನಾಯಕನು ನಿಮ್ಮಯ್ಯನಾತನ ಕಳುಹಿ ನೀವೆಂದ ॥36॥

೦೩೭ ಮರುಳಲಾ ಪವಮಾನಸುತ ...{Loading}...

ಮರುಳಲಾ ಪವಮಾನಸುತ ನಿ
ನ್ನೊರೆಗೆ ಪಡಿಯೊರೆ ತೂಕ ತೂಕಕೆ
ಸರಿಸರಾವಿರೆ ಕನಕಗಿರಿಪರಿಯಂತ ಮಾತೇಕೆ
ತರಣಿಬಿಂಬದ ತತ್ತಿಗಳನು
ತ್ತರಿಸಿ ತೋರುವ ತಿಮಿರವುಂಟೇ
ತರಹರಿಸಿ ತೋರಾ ಎನುತ ಕವಿದೆಚ್ಚರನಿಲಜನ ॥37॥

೦೩೮ ಗಳಹತನವಿದು ನಿಮ್ಮ ...{Loading}...

ಗಳಹತನವಿದು ನಿಮ್ಮ ತಂದೆಯು
ಗಳಿಸಿದರ್ಥವು ನಿಮ್ಮ ಬೀಯಕೆ
ಬಳಸುವಿರಿ ತಪ್ಪಾವುದೆನುತೆಚ್ಚಂಬ ಹರೆಗಡಿದು
ಹಿಳುಕ ಕವಿಸಿದನೀತನೀತನ
ಹಿಳುಕ ಮುರಿದೊಡನೆಚ್ಚು ಭೀಮನ
ಕೆಳರಿಚಿದರೈ ಕರ್ಣನಂದನರರಸ ಕೇಳ್ ಎಂದ ॥38॥

೦೩೯ ಬಾಲರೆನ್ದೇ ಮನ್ನಿಸಿದರೆ ...{Loading}...

ಬಾಲರೆಂದೇ ಮನ್ನಿಸಿದರೆ ಛ
ಡಾಳಿಸಿತೆ ಚಪಳತ್ವವಾಗಲಿ
ಖೂಳರಾವೈ ಸಲೆಯೆನುತ ನಾರಾಚಶತಕದಲಿ
ಬೀಳಲೆಚ್ಚನು ರಥವ ಗಜಹಯ
ಜಾಳವನು ಸಾರಥಿಗಳನು ಬಲು
ಗೋಲೊಳಿಬ್ಬರೊಳೊಬ್ಬನನು ಕೆಡೆಯೆಚ್ಚು ಬೊಬ್ಬಿರಿದ ॥39॥

೦೪೦ ಶಿವಶಿವಾ ಕರ್ಣಾತ್ಮಜನೆ ...{Loading}...

ಶಿವಶಿವಾ ಕರ್ಣಾತ್ಮಜನೆ ಮಡಿ
ದವನು ದಳಪತಿ ಮಡಿದನೋ ಕೌ
ರವನ ಕೇಡೋ ಹಾಯೆನುತ ಕುರುಸೇನೆ ಕಳವಳಿಸೆ
ಕವಿದರಶ್ವತ್ಥಾಮ ಕೃಪ ಕೌ
ರವ ಶಕುನಿ ದುಶ್ಯಾಸನಾದಿಗ
ಳವಗಡಿಸಲನಿಬರನು ತೊಲಗಿಸಿ ಕರ್ಣನಿದಿರಾದ ॥40॥

೦೪೧ ಆತುಕೊಳ್ಳೈ ಭ್ರೂಣಹತ್ಯಾ ...{Loading}...

ಆತುಕೊಳ್ಳೈ ಭ್ರೂಣಹತ್ಯಾ
ಪಾತಕಿಯೆ ಪಡಿತಳಿಸು ವಿಶಿಖ
ವ್ರಾತವಿವೆಯೆನುತೆಚ್ಚನಿನಸುತನನಿಲನಂದನನ
ಆತುಕೊಂಬರೆ ಸರಿಸನಲ್ಲ ವಿ
ಜಾತಿಯಲಿ ಸಂಭವಿಸಿದನೆ ಫಡ
ಸೂತನಂದನ ಎನುತ ಕರ್ಣನನೆಚ್ಚನಾ ಭೀಮ ॥41॥

೦೪೨ ಎಚ್ಚರೊಡನೊಡನೆಚ್ಚ ಬಾಣವ ...{Loading}...

ಎಚ್ಚರೊಡನೊಡನೆಚ್ಚ ಬಾಣವ
ಕೊಚ್ಚಿದನು ಕಲಿ ಕರ್ಣನಾತನ
ನೆಚ್ಚನಂಬಿನ ಮೇಲೆ ನೂಕಿದವಂಬು ವಹಿಲದಲಿ
ಎಚ್ಚು ಕವಿಸಿದಡವನು ಪವನಜ
ನೆಚ್ಚಡವ ಪರಿಹರಿಸಿ ರವಿಸುತ
ನೆಚ್ಚಡಿಬ್ಬರು ಕಾದಿದರು ಕೈಮೈಯ ಮನ್ನಿಸದೆ ॥42॥

೦೪೩ ಭಾರಿಯಙ್ಕವು ದಳಪತಿಗೆ ...{Loading}...

ಭಾರಿಯಂಕವು ದಳಪತಿಗೆ ಪಡಿ
ಸಾರಿಕೆಯ ಭಟರಿಲ್ಲಲಾ ಪರಿ
ವಾರಕಿದು ಪಂಥವೆ ಎನುತ ಕುರುರಾಯ ಮೂದಲಿಸೆ
ಕೂರಲಗಿನಂಬುಗಿದು ಬಳಿಯ ಮ
ಹಾರಥರ ಕೈವೀಸಿ ರವಿಸುತ
ಸಾರೆನುತ ಕೆಣಕಿದನು ದುಶ್ಯಾಸನನು ಪವನಜನ ॥43॥

೦೪೪ ಎಲವೊ ಕರ್ಣಾತ್ಮಜನ ...{Loading}...

ಎಲವೊ ಕರ್ಣಾತ್ಮಜನ ಹೊಯ್ದ
ಗ್ಗಳಿಕೆಯಲಿ ಹೊರೆಯೇರದಿರು ಪಡಿ
ಬಲಕೆ ಕರಸಾ ಕೃಷ್ಣ ಪಾರ್ಥರ ನಿನ್ನಲೇನಹುದು
ಬಳಿಯ ಬಿಗುಹಿನ ಬಿಂಕ ನಿನ್ನಯ
ತಲೆಗೆ ಬಹುದಾವರಿಯೆವೆನುತತಿ
ಬಳನನೆಚ್ಚನು ನಿನ್ನ ನಂದನನರಸ ಕೇಳ್ ಎಂದ ॥44॥

೦೪೫ ತಗರು ಮುಳಿದಾರಿದರೆ ...{Loading}...

ತಗರು ಮುಳಿದಾರಿದರೆ ತೋಳನು
ತೆಗೆದು ಜೀವಿಸಲರಿವುದೇ ನಾ
ಲಗೆಯ ವೀರರು ನೀವು ಮೂಢರು ನಾವು ನುಡಿಗಳಲಿ
ಉಗಿದಡಾಯ್ದದ ಮೊನೆಯ ತುದಿ ನಾ
ಲಗೆಗಳಲಿ ಮಾತಾಡಬಲ್ಲರೆ
ಸೊಗಸುವೆವು ನಾವೆನುತ ಪವನಜನೆಚ್ಚನರಿಭಟನ ॥45॥

೦೪೬ ಪವನಸುತನೆಚ್ಚಮ್ಬ ಹರೆಗಡಿ ...{Loading}...

ಪವನಸುತನೆಚ್ಚಂಬ ಹರೆಗಡಿ
ದವಿರಳಾಸ್ತ್ರವನೀತ ಕವಿಸಿದ
ನಿವನ ಬಳಿಯ ಮಹಾರಥರು ಸೂಸಿದರು ಶರವಳೆಯ
ರವಿಯ ಕೈಕತ್ತಲೆಯ ಹೊರಳಿಯ
ತಿವಿಗುಳಿಗೆ ತೆರಳುವುದೆ ರಿಪು ಶರ
ನಿವಹವನು ಕಡಿಯೆಚ್ಚು ಕೆಡಹಿದನಾ ಮಹಾರಥರ ॥46॥

೦೪೭ ಸಿಕ್ಕಿದರೆ ಬಳಿಕೇನು ...{Loading}...

ಸಿಕ್ಕಿದರೆ ಬಳಿಕೇನು ತಾಯಿಗೆ
ಮಕ್ಕಳಾಗರು ನಿನ್ನ ತನಯನ
ನಿಕ್ಕಿ ಹಾಯ್ದರು ಹಿಂಡೊಡೆದು ನೀ ಸಾಕಿದವರೆಲ್ಲ
ಹೊಕ್ಕು ಬಳಿಕೊಂದೆರಡು ಪಸರದ
ಲುಕ್ಕುಡಿಯಲೊದಗಿದನು ನಿನ್ನವ
ನೆಕ್ಕತುಳದಲಿ ಸರಿಮಿಗಿಲ ಕಾದಿದನು ಹಗೆಯೊಡನೆ ॥47॥

೦೪೮ ತೇರು ಹುಡಿಹುಡಿಯಾಗಿ ...{Loading}...

ತೇರು ಹುಡಿಹುಡಿಯಾಗಿ ರಣದಲಿ
ಸಾರಥಿಯ ತಲೆ ಹೋಗಿ ಕಾಲಿನ
ಲಾರುಭಟೆಯಲಿ ನಿನ್ನ ಮಗನೆಸುತಿರ್ದನನಿಲಜನ
ಸಾರು ನೀ ಸಾರೆನುತ ಕರ್ಣಕು
ಮಾರನಡಹಾಯಿದನು ಭೀಮನ
ಭೂರಿ ಬಾಣದ ಪಂಜರವ ಭಂಜಿಸುತ ವಹಿಲದಲಿ ॥48॥

೦೪೯ ಎಲೆಲೆ ಕರ್ಣ ...{Loading}...

ಎಲೆಲೆ ಕರ್ಣ ಕುಮಾರನೋ ಪಡಿ
ಬಲವ ಕರೆಯೋ ಬಾಲನೊಬ್ಬನೆ
ನಿಲುವುದರಿದೋ ಸ್ವಾಮಿದ್ರೋಹರ ಹಿಡಿದು ನೂಕೆನುತ
ಉಲಿಯೆ ಕೌರವರಾಯನುಬ್ಬಿದ
ಕಳಕಳದ ಬಹುವಿಧದ ವಾದ್ಯದ
ದಳದ ದೆಖ್ಖಾದೆಖ್ಖಿಯಲಿ ಕಲಿಕರ್ಣ ನಡೆತಂದ ॥49॥

+೧೦ ...{Loading}...