೦೧

೦೦೦ ಸೂ ರಾಯ ...{Loading}...

ಸೂ. ರಾಯ ಕೇಳೈ ಕದನದಲಿ ರಾ
ಧೇಯನವಸಾನದಲಿ ಕೌರವ
ರಾಯದಳಪತಿಯಾಗಿ ಹೊಕ್ಕನು ಶಲ್ಯನಾಹವವ ॥ 0 ॥

೦೦೧ ಹೇಳರೇ ಭೀಷ್ಮಾದಿ ...{Loading}...

ಹೇಳರೇ ಭೀಷ್ಮಾದಿ ಹಿರಿಯರು
ಮೇಲುದಾಯವ ಬಲ್ಲವರು ಹೆ
ಚ್ಚಾಳುತನದಲಿ ಹಿಗ್ಗಿಕಂಡಿರೆ ಜಯದ ಜಾರುಗಳ
ಮೇಲಣಾಹವದೊಳಗೆ ದೇಹವ
ಬೀಳುಕೊಂಡನು ಶಲ್ಯನಲ್ಲಿಂ
ಮೇಲೆ ದೊರೆಗೇನಾದುದೆಂಬುದನರಿಯೆ ನಾನೆಂದ ॥1॥

೦೦೨ ಮರುಳೆ ಸಞ್ಜಯ ...{Loading}...

ಮರುಳೆ ಸಂಜಯ ಗಾಳಿಯಲಿ ಕುಲ
ಗಿರಿಯ ಬೈಸಿಕೆ ಬಿಚ್ಚಿದಡೆ ಹುಲು
ಮೊರಡಿಗಳ ಬಿಗುಹೇನು ಬೀತುದು ಕರ್ಣನೊಡ್ಡವಣೆ
ಕುರುಪತಿಯ ಪಾಡೇನು ಮಾದ್ರೇ
ಶ್ವರನ ಮತ್ಸರವೇನು ಸಾಕಂ
ತಿರಲಿ ಸವರಿತೆ ಕೌರವಾನ್ವಯವೆಂದನಂಧನೃಪ ॥2॥

೦೦೩ ಬೇಯದೆನ್ನೆದೆ ಶೋಕವಹ್ನಿಯ ...{Loading}...

ಬೇಯದೆನ್ನೆದೆ ಶೋಕವಹ್ನಿಯ
ಬಾಯಲಕಟಾ ಕರ್ಣ ಕೌರವ
ರಾಯನಳಿವಿನಲುಳಿವ ಪುತ್ರದ್ರೋಹಿಯಾರಿನ್ನು
ಸಾಯಿಸುವ ಸಾವಂಜಿತೆನಗೆ ಚಿ
ರಾಯು ತೊಡರಿಕ್ಕಿದೆನು ಮಾರ್ಕಂ
ಡೇಯ ಮುನಿಗೆಂದರಸ ಧೊಪ್ಪನೆ ಕೆಡೆದನವನಿಯಲಿ ॥3॥

೦೦೪ ಹದುಳಿಸೈ ರಾಜೇನ್ದ್ರ ...{Loading}...

ಹದುಳಿಸೈ ರಾಜೇಂದ್ರ ನೀ ಬಿ
ತ್ತಿದ ವಿಷದ್ರುಮ ಫಲಿತವಾಯಿತು
ಬೆದರಲೇಕಿನ್ನನುಭವಿಸು ಸಾಕುಳಿದ ಮಾತೇನು
ಕದನದಲಿ ಸುತನಿಧಿಯ ಹೋಗಾ
ಡಿದೆ ನಿಜಾನ್ವಯ ಕಲ್ಪತರುವನು
ಮದಕರಿಗೆ ಮಾರಿದೆಯೆನುತ ನೆಗಹಿದನು ಭೂಪತಿಯ ॥4॥

೦೦೫ ಮಲಗಿಸಿದನೊರವೇಳ್ವ ನಯನ ...{Loading}...

ಮಲಗಿಸಿದನೊರವೇಳ್ವ ನಯನ
ಸ್ಥಳವ ನೇವರಿಸಿದನು ಶೋಕಾ
ನಲನ ತಾಪಕೆ ತಂಪನೆರೆದನು ನೀತಿಮಯರಸದ
ಅಳಲಶ್ರವಮಾಡಿದೆ ನದೀಸುತ
ನಳಿವಿನಲಿ ಗುರು ಕರ್ಣ ಶಲ್ಯರ
ಕಳಿವಿನಲಿ ಕಟ್ಟಳಲ ಬಹಳಾಭ್ಯಾಸಿ ನೀನೆಂದ ॥5॥

೦೦೬ ಅಹುದು ಸಞ್ಜಯ ...{Loading}...

ಅಹುದು ಸಂಜಯ ಶೋಕಶಿಖಿ ನೆರೆ
ದಹಿಸಿತೆನ್ನನು ಬೆಂದ ವಸ್ತುಗೆ
ದಹನವುಂಟೇ ಎಂಬ ನಾಣ್ಣುಡಿ ನಮ್ಮೊಳಾದುದಲಾ
ಮಿಹಿರಸುತ ಪರಿಯಂತ ಕಥೆ ನಿ
ರ್ವಹಿಸಿ ಬಂದುದು ಶಲ್ಯಕೌರವ
ರೆಹಗೆ ನೆಗಳಿದರದನು ವಿಸ್ತರವಾಗಿ ಹೇಳೆಂದ ॥6॥

೦೦೭ ತೆಗೆದುದಾಚೆಯಲವರ ಬಲ ...{Loading}...

ತೆಗೆದುದಾಚೆಯಲವರ ಬಲ ಜಗ
ದಗಲದುಬ್ಬಿನ ಬೊಬ್ಬೆಯಲಿ ಮೊರೆ
ಮುಗಿಲಮದದಂದದಲಿ ಮೊಳಗುವ ವಾದ್ಯರಭಸದಲಿ
ಬಿಗಿದ ಮೋನದ ಬೀತ ಹರುಷದ
ಹೊಗೆವ ಮೋರೆಯ ಹೊತ್ತುವೆದೆಗಳ
ದುಗುಡದೊಗ್ಗಿನ ನಮ್ಮ ಮೋಹರ ತೆಗೆದುದೀಚೆಯಲಿ ॥7॥

೦೦೮ ಸಿಡಿದು ಕರ್ಣನ ...{Loading}...

ಸಿಡಿದು ಕರ್ಣನ ತಲೆ ಧರಿತ್ರಿಗೆ
ಕೆಡೆಯೆ ಧೊಪ್ಪನೆ ಮೂರ್ಛೆಯಲಿ ನೃಪ
ಕೆಡೆದು ಕಣ್ಮುಚ್ಚಿದನು ಶೋಕಜ್ವರದ ಢಗೆ ಜಡಿಯೆ
ಹಡಪಿಗರು ಚಾಮರದ ಚಾಹಿಯ
ರೊಡನೆ ನೆಲಕುರುಳಿದರು ಸಾರಥಿ
ಕಡಿಯಣದ ಕುಡಿನೇಣ ಕೊಂಡನು ತಿರುಹಿದನು ರಥವ ॥8॥

೦೦೯ ಬನ್ದು ಕರ್ಣನ ...{Loading}...

ಬಂದು ಕರ್ಣನ ಹಾನಿ ಕೌರವ
ವೃಂದವನು ವೇಢೈಸಿತೇ ಹಾ
ಯೆಂದು ಕೃಪಗುರುಸುತರು ರಥವನು ಬಿಟ್ಟು ಸೂಠಿಯಲಿ
ತಂದು ಬಾಚಿಸಿದರಸನಿರವೆಂ
ತೆಂದುಸುರನಾರೈದು ವಿಧಿಯನು
ನಿಂದಿಸಿದರವಧಾನ ಜೀಯವಧಾನ ಜೀಯೆನುತ ॥9॥

೦೧೦ ತಳಿತಳಿದು ಪನ್ನೀರನಕ್ಷಿಗೆ ...{Loading}...

ತಳಿತಳಿದು ಪನ್ನೀರನಕ್ಷಿಗೆ
ಚಳೆಯವನು ಹಿಡಿದೆತ್ತಿ ಗುರುಸುತ
ಮಲಗಿಸಿದಡೇನಯ್ಯ ಕರ್ಣ ಎನುತ್ತ ಕಂದೆರೆದು
ಘಳಿಲನೆದ್ದನು ಕರ್ಣ ತೆಗೆಸೈ
ದಳವನಿರುಳಾಯ್ತೆಂದು ಶೋಕದ
ಕಳವಳದಲರೆಮುಚ್ಚುಗಣ್ಣಲಿ ಮತ್ತೆ ಮೈಮರೆದ ॥10॥

೦೧೧ ರಾಯ ಹದುಳಿಸು ...{Loading}...

ರಾಯ ಹದುಳಿಸು ಹದುಳಿಸಕಟಾ
ದಾಯಿಗರಿಗೆಡೆಗೊಟ್ಟಲಾ ನಿ
ದಾರ್ಯದಲಿ ನೆಲ ಹೋಯ್ತು ಭೀಮನ ಭಾಷೆ ಸಂದುದಲಾ
ವಾಯುಜನ ಜಠರದಲಿ ತೆಗೆಯಾ
ಜೀಯ ನಿನ್ನನುಜರನು ಪಾರ್ಥನ
ಬಾಯಲುಗಿ ಸೂತಜನನೆಂದರು ಜರೆದು ಕುರುಪತಿಯ ॥11॥

೦೧೨ ಏನು ಗುರುಸುತ ...{Loading}...

ಏನು ಗುರುಸುತ ಮಡಿದನೇ ತ
ನ್ನಾನೆ ಬವರದಲಕಟ ಕುಂತೀ
ಸೂನುವೇಕೈ ತಪ್ಪ ಮಾಡಿದನೇ ಮಹಾದೇವ
ಭಾನುಸನ್ನಿಭ ಸರಿದನೇ ತ
ಪ್ಪೇನು ಪಾರ್ಥನ ಬಸುರಲೆನ್ನ ನಿ
ಧಾನವಿದ್ದುದು ತೆಗೆವೆನೈಸಲೆಯೆಂದು ಕಂದೆರೆದ ॥12॥

೦೧೩ ತಾಪವಡಗಿತು ಮನದ ...{Loading}...

ತಾಪವಡಗಿತು ಮನದ ಕಡುಹಿನ
ಕೋಪ ತಳಿತುದು ಭೀಮ ಪಾರ್ಥರ
ರೂಪು ಮುಖದಲಿ ಕರ್ಣ ದುಶ್ಯಾಸನರ ಕಲ್ಪಿಸಿದ
ಭೂಪ ಕೇಳೈ ಪಾಳಯಕೆ ಕುರು
ಭೂಪ ಬಂದನು ನಾಳೆ ಕರ್ಣೋ
ತ್ಥಾಪನವಲಾ ಎನುತ ಹೊಕ್ಕನು ಭದ್ರಮಂಟಪವ ॥13॥

೦೧೪ ಶಕುನಿ ಕೃಪ ...{Loading}...

ಶಕುನಿ ಕೃಪ ಗುರುಸೂನು ಕೃತವ
ರ್ಮಕ ಸುಕೇತು ಸುಶರ್ಮ ಸಮಸ
ಪ್ತಕರು ಮಾದ್ರೇಶ್ವರ ಸುಬಾಹು ಸುನಂದ ಚಿತ್ರರಥ
ಸಕಲ ಸುಭಟರು ಸಹಿತ ದಳನಾ
ಯಕರು ಬಂದರು ಕರ್ಣಹಾನಿ
ಪ್ರಕಟ ಕಳಿತ ಶಿರೋವಕುಂಠನ ವೈಮನಸ್ಯದಲಿ ॥14॥

೦೧೫ ಹಿಮದ ಹೊಯ್ಲಲಿ ...{Loading}...

ಹಿಮದ ಹೊಯ್ಲಲಿ ಸೀದು ಸಿಕ್ಕಿದ
ಕಮಲವನದಂದದಲಿ ಹತವಿ
ಕ್ರಮದಕೀರ್ತಿಯ ಬಹಳಭಾರಕೆ ಬಳುಕಿದಾನನದ
ಸುಮುಖತಾವಿಚ್ಛೇದ ಕಲುಷ
ಸ್ತಿಮಿತರಿರವನು ಕಂಡು ನಾಳಿನ
ಸಮರಕೇನುದ್ಯೋಗವೆಂದನು ಕೃಪನ ಗುರುಸುತನ ॥15॥

೦೧೬ ಅರಸ ಕರ್ಣಚ್ಛೇದವೇ ...{Loading}...

ಅರಸ ಕರ್ಣಚ್ಛೇದವೇ ಜಯ
ಸಿರಿಯ ನಾಸಾಚ್ಛೇದವಿನ್ನರ
ವರಿಸದಿರು ಹೊಯ್ದಾಡಿ ಹೊಗಳಿಸು ಬಾಹುವಿಕ್ರಮವ
ಗುರುನದೀಸುತರಳಿದ ಬಳಿಕೀ
ಧರೆಗೆ ನಿನಗಸ್ವಾಮ್ಯ ಕರ್ಣನ
ಮರಣದಲಿ ನೀನರ್ಧದೇಹನು ಭೂಪ ಕೇಳ್ ಎಂದ ॥16॥

೦೧೭ ಆ ವೃಕೋದರ ...{Loading}...

ಆ ವೃಕೋದರ ನರರೊಳಂತ
ರ್ಭಾವ ದುಶ್ಯಾಸನಗೆ ತನ್ನಯ
ಜೀವಸಖಗಾ ಭೀಮ ಪಾರ್ಥರ ಮರಣಸಿದ್ಧಿಯಲಿ
ಕೈವಿಡಿಯಲೇ ಕರ್ಣನಿಹನೆಂ
ದಾವು ನಿಶ್ಚಯಿಸಿದೆವು ಕರ್ಣನ
ಸಾವ ನಾಳಿನೊಳರಿವೆನೆಂದನು ನಿನ್ನ ಮಗ ನಗುತ ॥17॥

೦೧೮ ನಾವು ಹೊಯ್ದಾಡುವೆವು ...{Loading}...

ನಾವು ಹೊಯ್ದಾಡುವೆವು ಭುಜಸ
ತ್ವಾವಲಂಬವ ತೋರುವೆವು ಕ
ರ್ಣಾವಸಾನವ ಕಂಡು ಬಳಿಕುಗುಳುವೆವು ತಂಬುಲವ
ನೀವು ಸೇನಾಪತ್ಯವನು ಸಂ
ಭಾವಿಸಿರೆ ಸಾಕಿನ್ನು ಮಿಗಿಲಾ
ದೈವಕೃತ ಪೌರುಷವ ನಾಳಿನೊಳರಿಯಬಹುದೆಂದ ॥18॥

೦೧೯ ಧರಣಿಪತಿ ಚಿತ್ತೈಸು ...{Loading}...

ಧರಣಿಪತಿ ಚಿತ್ತೈಸು ಸೇನಾ
ಧುರವನೀವುದು ಮದ್ರಭೂಪತಿ
ಗೆರವಲಾ ಜಯಲಕ್ಷ್ಮಿ ಬಳಿಕಾ ಪಾಂಡುತನಯರಿಗೆ
ಸುರನದೀಜ ದ್ರೋಣ ರಾಧೇ
ಯರಿಗೆ ಸರಿಮಿಗಿಲಿಂದು ಮಾದ್ರೇ
ಶ್ವರನುಳಿಯೆ ದೊರೆಯಾರು ದಿಟ್ಟರು ನಮ್ಮ ಥಟ್ಟಿನಲಿ ॥19॥

೦೨೦ ನೀವು ಕಟಕಾಚಾರ್ಯಪುತ್ರರು ...{Loading}...

ನೀವು ಕಟಕಾಚಾರ್ಯಪುತ್ರರು
ನೀವಿರಲು ಕೃಪನಿರಲು ದಳವಾಯ್
ನಾವಹೆವೆ ನೀವಿಂದು ತೇಜೋದ್ವಯದಲಧಿಕರಲೆ
ನಾವು ತರುವಾಯವರೆನಲು ಜಯ
ಜೀವಿಗಳು ನೀವನ್ಯಗುಣಸಂ
ಭಾವಕರಲಾ ಎಂದನಶ್ವತ್ಥಾಮ ಶಲ್ಯಂಗೆ ॥20॥

೦೨೧ ಉಚಿತವಿತರೇತರಗುಣಸ್ತುತಿ ...{Loading}...

ಉಚಿತವಿತರೇತರಗುಣಸ್ತುತಿ
ರಚನೆ ಗುಣಯುಕ್ತರಿಗೆ ವಿಜಯೋ
ಪಚಿತ ರಣನಾಟಕಕೆ ಜವನಿಕೆಯಾಯ್ತಲೇ ರಜನಿ
ಅಚಲ ಮೂರರ ಪೈಸರದ ಬಲ
ನಿಚಯ ನಮ್ಮದು ವೀರ ಸುಭಟ
ಪ್ರಚಯ ಮುಖ್ಯರ ಮಾಡಿಯೆಂದನು ಕೃಪನು ಕುರುಪತಿಗೆ ॥21॥

೦೨೨ ಸುರನದೀಜ ದ್ರೋಣ ...{Loading}...

ಸುರನದೀಜ ದ್ರೋಣ ಕೃಪರೀ
ಕುರುಬಲಕೆ ಕಟ್ಟೊಡೆಯರವರಿ
ಬ್ಬರ ಪರೋಕ್ಷದಲಾರವಿಲ್ಲಿಯ ಹಾನಿವೃದ್ಧಿಗಳು
ಗುರುಸುತನೊ ಶಲ್ಯನೊ ಚಮೂಮು
ಖ್ಯರನು ನೀವೇ ಬೆಸಸಿಯೆಂದನು
ಧರಣಿಪತಿ ಕೇಳೈ ಕೃಪಾಚಾರ್ಯಂಗೆ ಕುರುರಾಯ ॥22॥

೦೨೩ ಆದಡಾ ಭೀಷ್ಮಾದಿ ...{Loading}...

ಆದಡಾ ಭೀಷ್ಮಾದಿ ಸುಭಟರು
ಕಾದಿ ನೆಗ್ಗಿದ ಕಳನ ಹೊಗುವಡೆ
ಕೈದುಕಾರರ ಕಾಣೆನೀ ಮಾದ್ರೇಶ ಹೊರಗಾಗಿ
ಈ ದುರಂತರ ಸಮರಜಯ ನಿನ
ಗಾದಡೊಳ್ಳಿತು ಶಲ್ಯನಲಿ ಸಂ
ಪಾದಿಸಿರೆ ಸೇನಾಧಿಪತ್ಯವನರಸ ಕೇಳ್ ಎಂದ ॥23॥

೦೨೪ ತರಿಸಿ ಮಙ್ಗಳವಸ್ತುಗಳನಾ ...{Loading}...

ತರಿಸಿ ಮಂಗಳವಸ್ತುಗಳನಾ
ದರಿಸಿ ಭದ್ರಾಸನದಲೀತನ
ನಿರಿಸಿ ನೃಪ ವಿಸ್ತರಿಸಿದನು ಮೂರ್ಧಾಭಿಷೇಚನವ
ಮೊರೆವ ವಾದ್ಯದ ಸಿಡಿಲ ಧರಣೀ
ಸುರರ ಮಂತ್ರಾಕ್ಷತೆಯ ಮಳೆಗಳೊ
ಳಿರುಳನುಗಿದವು ಮುಕುಟಮಣಿರಾಜಿಗಳ ಮಿಂಚುಗಳು ॥24॥

೦೨೫ ಆದುದುತ್ಸವ ಕರ್ಣಮರಣದ ...{Loading}...

ಆದುದುತ್ಸವ ಕರ್ಣಮರಣದ
ಖೇದವಕ್ಕಿತು ಹಗೆಗೆ ಕಾಲ್ವೊಳೆ
ಯಾದ ವೀರರಸಾಬ್ಧಿ ನೆಲೆದಪ್ಪಿತ್ತು ನಿಮಿಷದಲಿ
ಬೀದಿವರಿದುದು ಬಿಂಕ ನನೆಕೊನೆ
ವೋದುದಾಶಾಬೀಜ ಲಜ್ಜೆಯ
ಹೋದ ಮೂಗಿಗೆ ಕದಪ ಹೊಯ್ದನು ನಿನ್ನ ಮಗನೆಂದ ॥25॥

೦೨೬ ಕಾಣಿಕೆಯನಿತ್ತಖಿಳ ಸುಭಟ ...{Loading}...

ಕಾಣಿಕೆಯನಿತ್ತಖಿಳ ಸುಭಟ
ಶ್ರೇಣಿ ಕಂಡುದು ನುಡಿಯ ಹಾಣಾ
ಹಾಣಿಗಳ ಭಾಷೆಗಳ ಹಕ್ಕಲು ವೀರರುಕ್ಕುಗಳ
ಪ್ರಾಣಚುಳಕೋದಕದ ಚೇಷ್ಟೆಯ
ಹೂಣಿಗರು ವಿಜಯಾಂಗನೋಪ
ಕ್ಷೀಣಮಾನಸರೊಪ್ಪಿದರು ಕುರುಪತಿಯ ಪರಿವಾರ ॥26॥

೦೨೭ ಪತಿಕರಿಸಿದೈ ವೀರಸುಭಟ ...{Loading}...

ಪತಿಕರಿಸಿದೈ ವೀರಸುಭಟ
ಪ್ರತಿತಮಧ್ಯದಲೆಮ್ಮನಹಿತ
ಚ್ಯುತಿಗೆ ಸಾಧನವೆಂದು ನಿಜಸೇನಾಧಿಪತ್ಯದಲಿ
ಕೃತಕವಿಲ್ಲದೆ ಕಾದುವೆನು ಯಮ
ಸುತನೊಡನೆ ಜಯಸಿರಿಗೆ ನೀನೇ
ಪತಿಯೆನಿಸಿ ತೋರಿಸುವೆನೆಂದನು ಶಲ್ಯ ಕುರುಪತಿಗೆ ॥27॥

೦೨೮ ಉಬ್ಬಿದನಲೈ ಮಧುರವಚನದ ...{Loading}...

ಉಬ್ಬಿದನಲೈ ಮಧುರವಚನದ
ಹಬ್ಬದಲಿ ನಿನ್ನಾತನಿತ್ತಲು
ತುಬ್ಬಿನವದಿರು ತಂದು ಬಿಸುಟರು ನಿಮ್ಮ ಪಾಳೆಯದ
ಸರ್ಬ ವೃತ್ತಾಂತವನು ಗಾಢದ
ಗರ್ಭ ಮುರಿದುದು ಕೃಷ್ಣರಾಯನ
ನೆಬ್ಬಿಸಿದನಿರುಳವನಿಪತಿ ಬಿನ್ನೈಸಿದನು ಹದನ ॥28॥

೦೨೯ ದೇವ ಚಿತ್ತೈಸಿದಿರೆ ...{Loading}...

ದೇವ ಚಿತ್ತೈಸಿದಿರೆ ಬೊಪ್ಪನ
ಭಾವನನು ಸೇನಾಧಿಪತ್ಯದ
ಲೋವಿದರಲೇ ಶಲ್ಯ ಮಾಡಿದ ಭಾಷೆಯವರೊಡನೆ
ಆವನಂಘೈಸುವನೊ ಪಾರ್ಥನೊ
ಪಾವಮಾನಿಯೊ ನಕುಲನೋ ಸಹ
ದೇವನೋ ತಾನೋ ನಿದಾನಿಸಲರಿಯೆ ನಾನೆಂದ ॥29॥

೦೩೦ ಕಲಹವೆನ್ನದು ದಳಪತಿಗೆ ...{Loading}...

ಕಲಹವೆನ್ನದು ದಳಪತಿಗೆ ತಾ
ನಿಲುವೆನೆಂದನು ಭೀಮನೆನ್ನನು
ಕಳುಹಿ ನೋಡೆಂದನು ಧನಂಜಯನೆಮ್ಮ ಮಾವನಲಿ
ಸಲುಗೆಯೆನಗೆಂದನು ನಕುಲನೆ
ನ್ನೊಲವಿನರ್ತಿಯಿದೆನ್ನ ಕಳುಹಿದ
ಡುಳುಹಿದವರೆಂದೆರಗಿದನು ಸಹದೇವನಾ ಹರಿಗೆ ॥30॥

೦೩೧ ಹರಿಯದರ್ಜುನನಿನ್ದ ಭೀಮನ ...{Loading}...

ಹರಿಯದರ್ಜುನನಿಂದ ಭೀಮನ
ನೆರವಣಿಗೆ ನೋಯಿಸದು ನಕುಲನ
ಹೊರಿಗೆಯೊದಗದು ಸೈರಿಸದು ಸಹದೇವನಾಟೋಪ
ಇರಿವಡಾ ಮಾದ್ರೇಶನನು ನೆರೆ
ಮುರಿವಡೆಯು ನಿನಗಹುದು ನಿನ್ನನು
ತರುಬಿದವರೇ ಕಷ್ಟರೆಂದನು ನಗುತ ಮುರವೈರಿ ॥31॥

೦೩೨ ಲೇಸನಾಡಿದೆ ಕೃಷ್ಣ ...{Loading}...

ಲೇಸನಾಡಿದೆ ಕೃಷ್ಣ ಶಲ್ಯಂ
ಗೀಸು ಬಲುಹುಂಟಾದಡನುಜರು
ಘಾಸಿಯಾದರು ಹಿಂದೆ ಭೀಷ್ಮಾದಿಗಳ ಬವರದಲಿ
ಈ ಸಮರಜಯವೆನಗೆ ನಾಳಿನೊ
ಳೈಸಲೇ ನಳ ನಹುಷ ಭರತ ಮ
ಹೀಶ ವಂಶೋತ್ಪನ್ನ ತಾನೆಂದನು ಮಹೀಪಾಲ ॥32॥

೦೩೩ ತಾಯಿ ಹೆರಳೇ ...{Loading}...

ತಾಯಿ ಹೆರಳೇ ಮಗನ ನಿನ್ನನು
ನಾಯಕನೆ ಲೋಕೈಕವೀರರ
ತಾಯಲಾ ನಿಮ್ಮವ್ವೆಯಾ ಮೊಲೆವಾಲ ಬಲುಹಿನಲಿ
ರಾಯ ನೀ ಕ್ಷತ್ರಿಯನು ಸೇಸೆಯ
ತಾಯೆನುತ ತೂಪಿರಿದು ಕಮಲದ
ಳಾಯತಾಂಬಕನಪ್ಪಿಕೊಂಡನು ಧರ್ಮನಂದನನ ॥33॥

೦೩೪ ಸನ್ದವೈ ಹದಿನೇಳು ...{Loading}...

ಸಂದವೈ ಹದಿನೇಳು ರಾತ್ರಿಗ
ಳಿಂದಿನಿರುಳಾ ಸೇನೆ ನಿರ್ಭಯ
ದಿಂದ ನಿದ್ರಾವ್ಯಸನನಿರ್ಭರ ಪೂರ್ಣಹರುಷದಲಿ
ಸಂದುದೀ ನಿನ್ನವರು ರಾಧಾ
ನಂದನ ವ್ಯಪಗಮನ ನಷ್ಟಾ
ನಂದವಿಹ್ವಲಕರಣರಿದ್ದರು ಭೂಪ ಕೇಳ್ ಎಂದ ॥34॥

೦೩೫ ಆ ಶಿಖಣ್ಡಿಯ ...{Loading}...

ಆ ಶಿಖಂಡಿಯ ತೋರಿ ಸರಳಿನ
ಹಾಸಿಕೆಯಲೊಬ್ಬನನು ಮಾತಿನ
ವಾಸಿಯಿಂದೊಬ್ಬನನು ಮುನ್ನಿನ ಕುಲವನೆಚ್ಚರಿಸಿ
ಘಾಸಿ ಮಾಡಿದನೊಬ್ಬನನು ಧರ
ಣೀಶ ಚೇಷ್ಟೆಯಲೊಬ್ಬನನು ಕೃಪೆ
ಯೇಸು ಘನವೋ ವೀರನಾರಾಯಣಗೆ ಭಕ್ತರಲಿ ॥35॥

+೦೧ ...{Loading}...