೦೩

೦೦೦ ಸೂ ರಾಯದಳ ...{Loading}...

ಸೂ. ರಾಯದಳ ಸಲೆ ಸವೆಯೆ ಸಮರದ
ನಾಯಕರು ನೆರೆ ಮುರಿಯಲಾ ದ್ವೈ
ಪಾಯನ ಸರೋವರವ ಹೊಕ್ಕನು ಕೌರವರ ರಾಯ

೦೦೧ ಕೇಳು ಜನಮೇಜಯಧರಿತ್ರೀ ...{Loading}...

ಕೇಳು ಜನಮೇಜಯಧರಿತ್ರೀ
ಪಾಲ ಕುರುಪತಿ ಹೆಗಲ ಗದೆಯಲಿ
ಕಾಲುನಡೆಯಲಿ ಹಾಯ್ದನೇಕಾಂಗದಲಿ ಕಳನೊಳಗೆ
ಆಳ ಕಾಣೆನು ಛತ್ರ ಚಮರದ
ವೀಳೆಯದ ವಿಸ್ತಾರವಿಭವವ
ಬೀಳುಕೊಟ್ಟನು ನಡೆದನಿಂದ್ರ ದಿಶಾಭಿಮುಖವಾಗಿ ॥1॥

೦೦೨ ಅಕಟ ನಮ್ಮಯ ...{Loading}...

ಅಕಟ ನಮ್ಮಯ ಪೂರ್ವರಾಜ
ಪ್ರಕರಕೀ ವಿಧಿಯಾಯ್ತಲಾ ಕಂ
ಟಕನಲಾ ಧರ್ಮಪ್ರಭಾವಕೆ ಕೌರವೇಶ್ವರನು
ಶಕುನಿಮತ ವಿಷಬೀಜವೇ ಬಾ
ಧಕವ ತಂದುದಲಾ ಯುಧಿಷ್ಠರ
ಸಕಲ ಬಲ ಪರಿಶೇಷವೇನೆಂದರಸ ಬೆಸಗೊಂಡ ॥2॥

೦೦೩ ಧರಣಿಪತಿ ಕೇಳ್ ...{Loading}...

ಧರಣಿಪತಿ ಕೇಳ್ ಧರ್ಮಜನ ಮೋ
ಹರದೊಳುಳಿದುದು ತೇರು ಸಾವಿರ
ವೆರಡು ಗಜವೇಳ್ನೂರು ಮಿಕ್ಕುದು ಲಕ್ಕ ಪಾಯದಳ
ತುರಗ ಸಾವಿರವೈದು ಸಾತ್ಯಕಿ
ವರ ಯುಧಾಮನ್ಯೂತ್ತಮೌಂಜಸ
ರುರು ಶಿಖಂಡಿ ದ್ರುಪದಸೂನು ದ್ರೌಪದೀಸುತರು ॥3॥

೦೦೪ ಆ ಸುಯೋಧನ ...{Loading}...

ಆ ಸುಯೋಧನ ಸೇನೆಯಲಿ ಧರ
ಣೀಶ ಕೃಪ ಕೃತವರ್ಮ ಗುರುಸುತ
ರೈಸುಬಲದಲಿ ನಾಲ್ವರುಳಿದರು ಹೇಳಲೇನದನು
ಏಸು ಬಲವೆನಿತೈಶ್ವರಿಯವಿ
ದ್ದೇಸು ಭಟರೆನಿತಗ್ಗಳೆಯರಿ
ದ್ದೇಸರಲಿ ಫಲವೇನು ದೈವವಿಹೀನರಿವರೆಂದ ॥4॥

೦೦೫ ಇತ್ತಲೀ ಸಞ್ಜಯನ ...{Loading}...

ಇತ್ತಲೀ ಸಂಜಯನ ತಂದುದು
ಮೃತ್ಯು ಧೃಷ್ಟದ್ಯುಮ್ನನೀತನ
ಕುತ್ತಿ ಕೆಡಹಿದಡಾಗದೇ ಕುರುಡಂಗೆ ರಣರಸವ
ಬಿತ್ತರಿಸುವನು ಕೌರವನ ಜಯ
ದತ್ತಲೆರಕ ದುರಾತ್ಮನನು ಕೈ
ವರ್ತಿಸಾ ಯಮನಗರಿಗೆಂದನು ಸಾತ್ಯಕಿಯ ಕರೆದು ॥5॥

೦೦೬ ಸೆಳೆದಡಾಯ್ದವ ಸಞ್ಜಯನ ...{Loading}...

ಸೆಳೆದಡಾಯ್ದವ ಸಂಜಯನ ಹೆಡ
ತಲೆಗೆ ಹೂಡಿದನರಿವ ಸಮಯಕೆ
ಸುಳಿದನಗ್ಗದ ಬಾದರಾಯಣನವನ ಪುಣ್ಯದಲಿ
ಎಲೆಲೆ ಸಾತ್ಯಕಿ ಲೇಸುಮಾಡಿದೆ
ಖಳನೆ ಸಂಜಯನೆಮ್ಮ ಶಿಷ್ಯನ
ಕೊಲುವುದೇ ನೀನೆನುತ ಕೊಂಡನು ಕೊರಳಡಾಯುಧವ ॥6॥

೦೦೭ ದೇವ ನಿಮ್ಮಯ ...{Loading}...

ದೇವ ನಿಮ್ಮಯ ಶಿಷ್ಯನೇ ಪರಿ
ಭಾವಿಸೆನು ತಾನರಿದೆನಾದಡೆ
ದೇವಕೀಸುತನಾಣೆ ಬಿಟ್ಟೆನು ಸಂಜಯನ ವಧೆಯ
ನೀವು ಬಿಜಯಂಗೈವುದೆನೆ ಬದ
ರಾವಳೀಮಂದಿರಕೆ ತಿರುಗಿದ
ನಾ ವಿಗಡಮುನಿ ಖೇದಕಲುಷಿತ ಸಂಜಯನ ತಿಳುಹಿ ॥7॥

೦೦೮ ಅರಸ ಕೇಳೈ ...{Loading}...

ಅರಸ ಕೇಳೈ ಸಂಜಯನು ಬರ
ಬರಲು ಕಂಡನು ದೂರದಲಿ ನಿರಿ
ಗರುಳ ಕಾಲ್ದೊಡಕುಗಳ ಖಂಡದ ಜಿಗಿಯ ಜಾರುಗಳ
ಕರಿಗಳೊಟ್ಟಿಲನೇರಿಳಿದು ಪೈ
ಸರಿಸಿ ಮಿದುಳಿನ ಜೋರು ಜೊಂಡಿನ
ತೊರಳೆಯಲಿ ದಡದಡಿಸಿ ಜಾರುತ ಬೀಳುತೇಳುವನ ॥8॥

೦೦೯ ಎಡಹುದಲೆಗಳ ದಾಣ್ಟಿ ...{Loading}...

ಎಡಹುದಲೆಗಳ ದಾಂಟಿ ರಕುತದ
ಮಡುವಿನಲಿ ಗದೆಯೂರಿ ನೆಲೆಗಳ
ಪಡೆದು ಕಂಪಿಸಿ ಕುಣಿವ ಮುಂಡವ ಗದೆಯಲಪ್ಪಳಿಸಿ
ಅಡಿಗಡಿಗೆ ಹೇರಾನೆಗಳ ಹೇ
ರೊಡಲ ಹತ್ತಿಳಿದೇರಿ ಝೊಂಪಿಸಿ
ಮಿಡುಕಿ ನಿಲುವನು ಬಳಲಿದೂಧ್ರ್ವಶ್ವಾಸ ಲಹರಿಯಲಿ ॥9॥

೦೧೦ ಓಡದಿಹ ನರಿ ...{Loading}...

ಓಡದಿಹ ನರಿ ಹದ್ದು ಕಾಗೆಗೆ
ಕೂಡ ಗದೆಯನು ಬೀಸುವನು ಬಿಡೆ
ನೋಡುವನು ಹೆಣದಿನಿಹಿಗಳ ಹೇರಾಳ ರಕ್ಕಸರ
ತೋಡುಗೈಗಳ ಮಿದುಳ ಬಾಯ್ಗಳ
ಬಾಡುಗರುಳಿನ ಚೀತ್ಕೃತಿಯ ತಲೆ
ಯೋಡುಗಳ ತನಿರಕುತಪಾನದ ಶಾಕಿನೀಜನವ ॥10॥

೦೧೧ ಕನ್ದ ಪಕ್ಕಲೆಗಳಲಿ ...{Loading}...

ಕಂದ ಪಕ್ಕಲೆಗಳಲಿ ತೀವಿದ
ಮಂದ ರಕುತದ ತೋದ ತಲೆಗಳ
ತಿಂದು ಬಿಸುಡುವ ನೆಣನ ಕಾರುವ ಬಸೆಯ ಬಾಡಿಸುವ
ಸಂದಣಿಸಿ ಹರಿದೇರ ಬಾಯ್ಗಳೊ
ಳೊಂದಿ ಬಾಯ್ಗಳನಿಡುವ ಪೂತನಿ
ವೃಂದವನು ಕಂಡೋಸರಿಸುವನದೊಂದು ದೆಸೆಗಾಗಿ ॥11॥

೦೧೨ ಕುಣಿವ ಕರಿಗಳ ...{Loading}...

ಕುಣಿವ ಕರಿಗಳ ತಲೆಯ ಮಡುಹಿನ
ಲಣೆದು ಹಜ್ಜೆಯನಿಡುತ ಭೂತದ
ಹೆಣನ ತೀನಿಗೆ ತವಕಿಸುವ ವೇತಾಳ ಸಂತತಿಯ
ರಣದೊಳಂಜಿಸಿ ಸೆರೆನರದ ಕಾ
ವಣದೊಳಗೆ ಕೈಯೂರಿ ಮಿಗೆ ಹಳ
ವೆಣನ ಹೊಲಸಿಗೆ ಹೇಸಿ ಹರಿದಡಿಗಡಿಗೆ ಸುಯ್ವವನ ॥12॥

೦೧೩ ಕಡಿವಡೆದ ಹಕ್ಕರಿಕೆ ...{Loading}...

ಕಡಿವಡೆದ ಹಕ್ಕರಿಕೆ ರೆಂಚೆಯ
ತಡಿಗಳಲಿ ಕುಳ್ಳಿರ್ದು ಮೊಣಕಾ
ಲ್ಗಡಿಯ ಗಾಢವ್ರಣದ ನೆಣವಸೆಗೆಸರ ಬಳಿಬಳಿದು
ಗಡಣಹೆಣದೆರಹುಗಳೊಳಗೆ ಕಾ
ಲಿಡುತ ಸೋದಿಸಿ ಮುಂದೆ ಹೆಜ್ಜೆಯ
ನಿಡುತ ಪೈಸರವೋಗಿ ಮಾರ್ಗಶ್ರಮಕೆ ಬೆಮರುವನ ॥13॥

೦೧೪ ಕಡಿದ ಕೈದುಗಳೊಟ್ಟಿಲಲಿ ...{Loading}...

ಕಡಿದ ಕೈದುಗಳೊಟ್ಟಿಲಲಿ ತನಿ
ಗೆಡೆದ ಗಾಲಿಯ ಹಾಯ್ಕಿ ಮೆಲ್ಲಡಿ
ಯಿಡುತ ಹಜ್ಜೆಯ ನೆಣದ ಕೆಸರಿಗೆ ಛತ್ರಚಮರಿಗಳ
ಅಡಸಿ ಹೆಜ್ಜೆಯನಿಡುತ ರಕುತದ
ಮಡುವನೆಡಬಲಕಿಕ್ಕಿ ಮೆಲ್ಲನೆ
ನಡಿದು ದೈವವ ಬಯ್ದು ಬಯ್ದಡಿಗಡಿಗೆ ಸುಯ್ವವನ ॥14॥

೦೧೫ ಭೂತರವ ಭೇತಾಳ ...{Loading}...

ಭೂತರವ ಭೇತಾಳ ಕಲಹ ವಿ
ಧೂತ ಜಂಬುಕ ಘೂಕ ಕಾಕ
ವ್ರಾತ ರಭಸಕೆ ಬೆಚ್ಚುವನು ಪಾಂಡವರ ಬಲವೆಂದು
ಆತು ಮರಳಿದು ಹಿಂದ ನೋಡಿ ಪ
ರೇತ ವಿಭವವಲಾ ಎನುತ ಛಲ
ಚೇತನನು ಸಲೆ ಚಂಡಿಯಾದನು ಕಳನ ಚೌಕದಲಿ ॥15|

೦೧೬ ಹೇಳುವಡೆ ಕುರುಪತಿಯನೇ ...{Loading}...

ಹೇಳುವಡೆ ಕುರುಪತಿಯನೇ ನೆರೆ
ಹೋಲುವನು ಗದೆ ಹೆಗಲಲದೆ ಮೇ
ಲಾಳ ಕಾಣೆನು ಚಮರ ಚಾಹಿಯ ಗಜಹಯಾವಳಿಯ
ಹೋಲುವುದು ಜನವೊಬ್ಬರೊಬ್ಬರ
ನಾಳೊಳೊಬ್ಬನೊ ಮೇಣು ಕುರು ಭೂ
ಪಾಲಕನೊ ನೋಡುವೆನೆನುತ ಸಂಜಯನು ನಡೆತಂದ ॥16॥

೦೧೭ ಬನ್ದು ಕಣ್ಡನು ...{Loading}...

ಬಂದು ಕಂಡನು ರಾಜವನಮಾ
ಕಂದನನು ಧೃತರಾಷ್ಟ್ರ ರಾಯನ
ಕಂದನನು ದೌರ್ಜನ್ಯವಲ್ಲೀ ವಿಪುಳಕಂದನನು
ಮುಂದುವರಿದ ವಿಲೋಚನಾಂಬುಗ
ಳಿಂದ ಸೈರಣೆ ಮಿಗದೆ ಸಂಜಯ
ನಂದು ದೊಪ್ಪನೆ ಕೆಡೆದು ಹೊರಳಿದನರಸನಂಘ್ರಿಯಲಿ ॥17॥

೦೧೮ ಕಡಲತಡಿ ಪರಿಯನ್ತ ...{Loading}...

ಕಡಲತಡಿ ಪರಿಯಂತ ರಾಯರ
ಗಡಣದಲಿ ನೀನೊಬ್ಬನೆಂಬೀ
ನುಡಿಗೆ ನಿಶ್ಚಯವೀಗಲಾಯಿತು ತಂದೆ ಕುರುರಾಯ
ಬಿಡದೆ ಬಾಗುವ ನೃಪರ ಮಕುಟದೊ
ಳಿಡುವ ಕೋಮಲ ಚರಣವಿದರೊಳು
ನಡೆಯಲೆಂತೈ ಕಲಿತೆ ಎಂದನು ಸಂಜಯನು ನೃಪನ ॥18॥

೦೧೯ ರಣಮುಖದೊಳೇಕಾದಶಾಕ್ಷೋ ...{Loading}...

ರಣಮುಖದೊಳೇಕಾದಶಾಕ್ಷೋ
ಹಿಣಿಗೆ ಹರಿವಾಯ್ತೇ ಯುಧಿಷ್ಠಿರ
ನುಣಲಿ ಧರೆಯನು ಗೋತ್ರವಧ ವಿನ್ಯಸ್ತ ಕಿಲ್ಬಿಷವ
ಸೆಣಸ ಮಾಡಿದೆ ದೈವದಲಿ ಧಾ
ರುಣಿಯ ಹುದುವಿನ ಸಿರಿಗೆ ಸೇರದೆ
ಹಣಿದವಾಡಿದೆ ರಾಜವಂಶದ ಕಲ್ಪತರುವನವ ॥19॥

೦೨೦ ಶಶಿರುಚಿಗೆ ಸೈರಿಸದ ...{Loading}...

ಶಶಿರುಚಿಗೆ ಸೈರಿಸದ ಸಿರಿಮುಡಿ
ಬಿಸಿಲ ಸೆಕೆಗಾಂತುದೆ ಸುಗಂಧ
ಪ್ರಸರಪೂರ್ಣಘ್ರಾಣವೀ ಹಳೆವೆಣನ ಹೊಲಸಿನಲಿ
ಉಸುರುದೆಗಹಾದುದೆ ಸುಗೀತದ
ರಸದ ಮಧುವಿಂಗಾಂತ ಕಿವಿ ವಾ
ಯಸ ಸೃಗಾಲಧ್ವನಿಗೆ ಸೊಗಸಿತೆ ತಂದೆ ಕುರುರಾಯ ॥20॥

೦೨೧ ಲಲಿತ ಮೃದುತರ ...{Loading}...

ಲಲಿತ ಮೃದುತರ ಹಂಸತೂಳದ
ಲುಳಿತ ಕೋಮಲ ಕಾಯ ಕೈದುಗ
ಳೆಲುಗಳೊಟ್ಟಿಲ ಹಾಸಿನಲಿ ಪೈಸರಿಸಿ ಮಲಗಿತಲಾ
ಸುಳಿಯೆ ಕೈಗೊಡುವರಸುಗಳ ಕೆಲ
ಬಲದ ಪಾಯವಧಾರಿನವರನು
ಕಳುಹಿ ಬಂದೈ ಸಾರ್ವಭೌಮರ ಚಿಹ್ನವಿದೆಯೆಂದ ॥21॥

೦೨೨ ಎತ್ತಣೇಕಾದಶ ಚಮೂಪತಿ ...{Loading}...

ಎತ್ತಣೇಕಾದಶ ಚಮೂಪತಿ
ಯೆತ್ತಣೀಯೇಕಾಕಿತನ ತಾ
ನೆತ್ತ ಗಜಹಯ ರಥ ಸುಖಾಸನದತಿಶಯದ ಸುಳಿವು
ಎತ್ತಣೀ ಕೊಳುಗುಳದ ಕಾಲ್ನಡೆ
ಯೆತ್ತಣಾಹವದಭಿಮುಖತೆ ಬಳಿ
ಕೆತ್ತಣಪಜಯವಿಧಿಯ ಘಟನೆ ನೃಪಾಲ ನಿನಗೆಂದ ॥22॥

೦೨೩ ಮುಳಿದಡಗ್ಗದ ಪರಶುರಾಮನ ...{Loading}...

ಮುಳಿದಡಗ್ಗದ ಪರಶುರಾಮನ
ಗೆಲಿದನೊಬ್ಬನೆ ಭೀಷ್ಮ ಪಾಂಡವ
ಬಲದ ಸಕಲ ಮಹಾರಥರ ಸಂಹರಿಸಿದನು ದ್ರೋಣ
ದಳಪತಿಯ ಮಾಡಿದಡೆ ಪಾರ್ಥನ
ತಲೆಗೆ ತಂದನು ಕರ್ಣನೀಯ
ಗ್ಗಳೆಯರಗ್ಗಿತು ಕಡೆಯಲೊಬ್ಬನೆ ಕೆಟ್ಟೆ ನೀನೆಂದ ॥23॥

೦೨೪ ಅವರು ಬದುಕಿದರೈವರೂ ...{Loading}...

ಅವರು ಬದುಕಿದರೈವರೂ ನಿ
ನ್ನವರೊಳಗೆ ನೀನುಳಿಯೆ ನೂರ್ವರು
ಸವರಿತವರೈವರು ಕುಮಾರರು ಸೌಖ್ಯ ಜೀವಿಗಳು
ಜವನ ಸಿವಡಿಗೆ ಹತ್ತಿದರು ನಿ
ನ್ನವರು ಮಕ್ಕಳು ನೂರು ದೈವವ
ನವಗಡಿಸಿ ದುಃಸ್ಥಿತಿಗೆ ಬಂದೈ ತಂದೆ ಕುರುರಾಯ ॥24॥

೦೨೫ ಗೆಲಿದನರಸನು ಹಸ್ತಿನಾಪುರ ...{Loading}...

ಗೆಲಿದನರಸನು ಹಸ್ತಿನಾಪುರ
ದೊಳಗೆ ಕಟ್ಟಿಸು ಗುಡಿಯನೆಂಬೆನೊ
ತಲೆಬಳಿಚಿ ತಾನೋಡಿ ಬದುಕಿದನೆಂಬೆನೋ ಮೇಣು
ಲಲನೆಯರಿಗೇನೊಸಗೆ ಕುರುಡನ
ನಳಿಸುವೆನೊ ನಗಿಸುವೆನೊ ತಾಯಿಗೆ
ಕಲಿಸು ಬುದ್ಧಿಯನೇನನೆಂಬೆನು ಭೂಪ ಕೇಳ್ ಎಂದ ॥25॥

೦೨೬ ಏನು ಸಞ್ಜಯ ...{Loading}...

ಏನು ಸಂಜಯ ಕೌರವೇಶ್ವರ
ನೇನ ಮಾಡಿದನಲ್ಲಿ ಕೊಂತೀ
ಸೂನುಗಳೊಳಾರಳಿದರುಳಿದರು ನಮ್ಮ ಥಟ್ಟಿನಲಿ
ಏನು ಹದನೈ ಶಕುನಿ ರಣದೊಳ
ಗೇನ ಮಾಡಿದನೆಂದು ಬೆಸಗೊಳ
ಲೇನನೆಂಬೆನು ತಾಯಿ ಗಾಂಧಾರಿಗೆ ರಣೋತ್ಸವವ ॥26॥

೦೨೭ ಹಿನ್ದೆ ರಾಯನ ...{Loading}...

ಹಿಂದೆ ರಾಯನ ಪಟ್ಟದರಸಿಯ
ತಂದು ಭಾರಿಯ ಭಂಗಬಡಿಸಿದೆ
ಬಂದು ಹರಿಯೈದೂರ ಬೇಡಿದರವರ ಚಿತ್ತದಲಿ
ಕಂದ ಬಿತ್ತಿದೆ ಕದನದಲಿ ನೀ
ನೊಂದು ನೆಳಲುಳಿಯಲು ಸಹೋದರ
ವೃಂದ ತನುಜ ಜ್ಞಾತಿ ಬಾಂಧವರಳಿದರದರಿಂದ ॥27॥

೦೨೮ ಕೇಳು ಸಞ್ಜಯ ...{Loading}...

ಕೇಳು ಸಂಜಯ ಪೂರ್ವ ಸುಕೃತದ
ಶಾಳಿವನವೊಣಗಿದೊಡೆ ಭಾರಿಯ
ತೋಳುಗುತ್ತಿನ ಜಯಲಕುಮಿ ಜಂಗಳವ ಜಾರಿದಡೆ
ಭಾಳಲಿಪಿಗಳ ಲೆಕ್ಕವನು ಪ್ರತಿ
ಕೂಲವಿಧಿ ಪಲ್ಲಟಿಸಿ ಬರೆದಡೆ
ಹೇಳಿ ಫಲವೇನೆನುತ ತುಂಬಿದನರಸ ಕಂಬನಿಯ ॥28॥

೦೨೯ ಕದಡಿತನ್ತಃಕರಣ ವಿಕ್ರಮ ...{Loading}...

ಕದಡಿತಂತಃಕರಣ ವಿಕ್ರಮ
ದುದಧಿ ನೆಲೆಯಾಯಿತು ನಿರರ್ಥಕೆ
ಒದರಿದಡೆ ಫಲವೇನು ಸಂಜಯ ಹಿಂದನೆಣಿಸದಿರು
ಕದನದಲಿ ದುಶ್ಯಾಸನನ ತೇ
ಗಿದನಲಾ ಬಕವೈರಿ ತಮ್ಮನ
ನುದರದಲಿ ತೆಗೆವೆನು ವಿಚಿತ್ರವ ನೋಡು ನೀನೆಂದ ॥29॥

೦೩೦ ನರನ ಬಸುರಲಿ ...{Loading}...

ನರನ ಬಸುರಲಿ ಕರ್ಣನನು ಭೂ
ವರನ ಸೀಳಿದು ಶಲ್ಯನನು ಕಾ
ತರಿಸದಿರು ಶಕುನಿಯನುಳೂಕನ ಯಮಳರಿಬ್ಬರಲಿ
ಹರಿಬಕಿದಿರಾಗಲಿ ಮುರಾಂತಕ
ಹರಹಿಕೊಳಲಿ ಮದೀಯಬಾಹು
ಸ್ಫುರಣಶಕ್ತಿಗೆ ಭಂಗಬಾರದು ನೋಡು ನೀನೆಂದ ॥30॥

೦೩೧ ಕಾನನಕೆ ಕೈಯಿಕ್ಕುವರೆ ...{Loading}...

ಕಾನನಕೆ ಕೈಯಿಕ್ಕುವರೆ ಪವ
ಮಾನನನು ಪಾವಕನು ಬಯಸುವ
ಭಾನು ಭಾರಿಯ ತಮವ ತಿವಿವನದಾರ ನೆರವಿಯಲಿ
ಈ ನಿಭೃತ ಗದೆಯಿರಲು ಕುಂತೀ
ಸೂನುಗಳ ಕೈಕೊಂಬೆನೇ ಮನ
ಹೀನನೈ ನೀನಕಟ ಸಂಜಯ ಎಂದನಾ ಭೂಪ ॥31॥

೦೩೨ ಆಳು ಬಿದ್ದುದು ...{Loading}...

ಆಳು ಬಿದ್ದುದು ಬೇಹ ನಾಯಕ
ರೋಲಗಿಸಿತಮರಿಯರನೀ ರಣ
ದೂಳಿಗಕೆ ನಾನೊಬ್ಬನೆಂದೇ ನಿನಗೆ ತೋರಿತಲಾ
ಆಳ ಹಂಗನು ನಾಯಕರ ಬಿಲು
ಗೋಲ ಜೋಡಿನ ಬಲವ ಚಿತ್ತದೊ
ಳಾಳಿದೊಡೆ ಧೃತರಾಷ್ಟ್ರರಾಯನ ಕಂದನಲ್ಲೆಂದ ॥32॥

೦೩೩ ಖಾತಿ ಕನ್ದದು ...{Loading}...

ಖಾತಿ ಕಂದದು ಮನದ ಧೈರ್ಯದ
ಧಾತು ಕುಂದದು ಲಜ್ಜೆಯಭಿಮತ
ಜಾತಿಗೆಡದು ವಿರೋಧ ಬಿಡದು ಯುಧಿಷ್ಠಿರಾದ್ಯರಲಿ
ಏತಕಿದು ನಿನ್ನೀ ಪ್ರಳಾಪ ವಿ
ಧೂತರಿಪು ಕುರುರಾಯನೆಂಬೀ
ಖ್ಯಾತಿಯಲ್ಲದೆ ಬೇರೆ ರಾಜ್ಯವನೊಲ್ಲೆ ನಾನೆಂದ ॥33॥

೦೩೪ ಜೀಯ ನಿಮ್ಮಡಿಗಳಿಗೆ ...{Loading}...

ಜೀಯ ನಿಮ್ಮಡಿಗಳಿಗೆ ಗುರು ಗಾಂ
ಗೇಯ ವಿದುರಾದಿಗಳು ಹೇಳಿದ
ಜೋಯಿಸವ ಕೈಕೊಂಡಿರೇ ನಮ್ಮೀ ಪ್ರಳಾಪದಲಿ
ರಾಯ ಫಲವೇನೈ ಯುಧಿಷ್ಠಿರ
ರಾಯನೊಲಿದಂತಿರಲಿ ನಿಮ್ಮಯ
ತಾಯಿತಂದೆಗೆ ಹೇಳ್ವೆನೇನನು ಬುದ್ಧಿಗಲಿಸೆಂದ ॥34॥

೦೩೫ ಇದೆ ಸರೋವರವೊನ್ದು ...{Loading}...

ಇದೆ ಸರೋವರವೊಂದು ಹರಿದೂ
ರದಲಿ ಭುವನಖ್ಯಾತ ತನ್ಮ
ಧ್ಯದಲಿ ಮುಳುಗಿಹೆನೊಂದುದಿನ ಪರಿಯಂತ ಸಲಿಲದಲಿ
ಕದನದಲಿ ಕೌಂತೇಯರನು ಯಮ
ಸದನದಲಿ ತೋರುವೆನು ತಾನೆಂ
ಬುದು ರಹಸ್ಯವು ಜನನಿ ಜನಕಂಗರುಹು ನೀನೆಂದ ॥35॥

೦೩೬ ತೆಗೆಸು ಪಾಳೆಯವೆಲ್ಲವನು ...{Loading}...

ತೆಗೆಸು ಪಾಳೆಯವೆಲ್ಲವನು ಗಜ
ನಗರಿಗೈದಿಸು ರಾಣಿಯರ ದಂ
ಡಿಗೆಯ ಕಳುಹಿಸು ಸೂತಸುತ ದುಶ್ಯಾಸನಾದಿಗಳ
ಹಗೆಯ ವಿಜಯವ ಹರಹದಿರು ನಂ
ಬುಗೆಯ ನುಡಿಯಲಿ ಭಾನುಮತಿಯರ
ಬಗೆಯ ಸಂತೈಸೆಂದು ಬೋಳೈಸಿದನು ಸಂಜಯನ ॥36॥

೦೩೭ ಎನುತ ಸಞ್ಜಯಸಹಿತ ...{Loading}...

ಎನುತ ಸಂಜಯಸಹಿತ ಕೌರವ
ಜನಪ ಬಂದನು ತತ್ಸರೋವರ
ಕನಿಲನಿದಿರಾದನು ಸುಗಂಧದ ಶೈತ್ಯಪೂರದಲಿ
ತನುವಿಗಾಪ್ಯಾಯನದಿನಂತ
ರ್ಮನಕೆ ಪಲ್ಲಟವಾಯ್ತು ಭೀಮನ
ಜನಕನರಿದನು ತನ್ನ ಗುಪ್ತಸ್ಥಾನ ಸಂಗತಿಯ ॥37॥

೦೩೮ ಉಲಿವ ಕೋಕಿಲ ...{Loading}...

ಉಲಿವ ಕೋಕಿಲ ಪಾಠಕರ ಮೊರೆ
ವಳಿಕುಳದ ಗಾಯಕರ ಹಂಸಾ
ವಳಿಯ ಸುಭಟರ ಜಡಿವ ಕೊಳರ್ವಕ್ಕಿಗಳ ಪಡಿಯರರ
ಅಲರ್ದ ಹೊಂದಾವರೆಯ ನವಪರಿ
ಮಳದ ಸಿಂಹಾಸನದಿ ಲಕ್ಷ್ಮೀ
ಲಲನೆಯೋಲಗಶಾಲೆಯಂತಿರೆ ಮೆರೆದುದಾ ಸರಸಿ ॥38॥

೦೩೯ ಬನ್ದು ತಡಿಯಲಿ ...{Loading}...

ಬಂದು ತಡಿಯಲಿ ಸಂಜಯನ ಕರೆ
ದೆಂದನೀ ಸರಸಿಯಲಿ ತಾನಿಹೆ
ನಿಂದಿನೀ ದಿವಸವನು ಕಳೆವೆನು ಕೊಳನ ಮಧ್ಯದಲಿ
ಮುಂದೆ ಪಾಂಡವರೈವರನು ಗೆಲಿ
ದಂದು ಹೊಗುವೆನು ಗಜಪುರವನಿಂ
ತೆಂದು ಜನನಿಗೆ ಜನಕವಿದುರರಿಗರುಹು ನೀನೆಂದ ॥39॥

೦೪೦ ಚಾರು ಚನ್ದ್ರೋಪಲದ ...{Loading}...

ಚಾರು ಚಂದ್ರೋಪಲದ ರಮ್ಯಾ
ಗಾರದಲಿ ಮಣಿಮಯದ ಬಹುವಿ
ಸ್ತಾರ ಭದ್ರೋಪರಿಯ ಭವನದ ಚಿತ್ರಶಾಲೆಯಲಿ
ಸಾರಮಣಿ ಪರಿಯಂಕ ಪರಿಸಂ
ಸ್ಕಾರದಲಿ ಮಲಗುವ ಮಹೀಪತಿ
ನೀರೊಳೊರಗುವನೆಂದು ಸಂಜಯನೊರಲಿದನು ಹೊರಳಿ ॥40॥

೦೪೧ ಒರಲದಿರು ಸಞ್ಜಯ ...{Loading}...

ಒರಲದಿರು ಸಂಜಯ ವಿರೋಧಿಗ
ಳರಿವರಾನಿದ್ದೆಡೆಯನಿಲ್ಲಿಯೆ
ಮರೆದು ಕಳೆ ಪಾಳೆಯವ ತೆಗಸಬುಜಾಕ್ಷಿಯರ ಕಳುಹು
ತೆರಹುಗೊಡು ನೀ ಹೋಗೆನುತ ಮುಂ
ಜೆರಗನಳವಡೆ ಸೆಕ್ಕಿ ಪೂರ್ವದ
ಲರಿದ ಸಲಿಲಸ್ತಂಭವಿದ್ಯೆಯನರಸ ಚಿಂತಿಸಿದ ॥41॥

೦೪೨ ಚರಣವದನಕ್ಷಾಲನಾನ್ತಃ ...{Loading}...

ಚರಣವದನಕ್ಷಾಲನಾಂತಃ
ಕರಣಶುದ್ಧಿಯಲಾಚಮನವಿ
ಸ್ತರಣದಲಿ ಸತ್ಪ್ರಣವದಂಗನ್ಯಾಸವಿಧಿಗಳಲಿ
ವರುಣ ಮಂತ್ರಾಕ್ಷರದ ಜಪಪರಿ
ಕರಣದಲಿ ನಿರ್ಣಿಕ್ತ ಚೇತಃ
ಸ್ಫುರಣ ಸಲಿಲಸ್ತಂಭನವನವನೀಶ ಮಂತ್ರಿಸಿದ ॥42॥

೦೪೩ ದ್ಯುಮಣಿ ಮೊದಲಾದಖಿಳ ...{Loading}...

ದ್ಯುಮಣಿ ಮೊದಲಾದಖಿಳ ಸುರರಿಗೆ
ನಮಿಸಿ ವರುಣಧ್ಯಾನವನು ಹೃ
ತ್ಕಮಲದಲಿ ನೆಲೆಗೊಳಿಸಿ ನಾಲುಕು ದೆಸೆಯನಾರೈದು
ಕುಮತಿಯಿಳಿದನು ಜಾನು ಕಟಿ ಹೃ
ತ್ಕಮಲಗಳ ಮುಖ ಮೂರ್ಧ ಪರಿಯಂ
ತಮರಿದುದು ಜಲ ಕೊಳನ ಮಧ್ಯದಲರಸ ಪವಡಿಸಿದ ॥43॥

೦೪೪ ಕುರುಪತಿಯ ಬೀಳ್ಕೊಣ್ಡು ...{Loading}...

ಕುರುಪತಿಯ ಬೀಳ್ಕೊಂಡು ಸಂಜಯ
ಮರಳಿದನು ತನಗಾದ ಹಿಂದಣ
ಪರಿಭವವ ನೆನೆದಡಿಗಡಿಗೆ ಕಂಪಿಸುತ ಮನದೊಳಗೆ
ಧುರದ ಮಧ್ಯದೊಳೊಬ್ಬನೇ ನಡೆ
ತರುತ ಭೂತಾವಳಿಯನೀಕ್ಷಿಸಿ
ಗುರುವ ನೆನೆದನು ಕೇಳು ಜನಮೇಜಯ ಮಹೀಪಾಲ ॥44॥

೦೪೫ ಬರುತ ಸಞ್ಜಯ ...{Loading}...

ಬರುತ ಸಂಜಯ ದೂರದಲಿ ಕೃಪ
ಗುರುಸುತರ ಕೃತವರ್ಮಕನ ಕಂ
ಡರಿರಥಿಗಳಿವರಲ್ಲಲೇ ಶಿವಶಿವ ಮಹಾದೇವ
ಭರತಕುಲ ಮೊದಲೊಂದು ಬಳಿಕಾ
ಯ್ತೆರಡುಕವಲೊಬ್ಬರಿಗೆ ಜಯವಿ
ಸ್ತರಣ ಗದುಗಿನ ವೀರನಾರಾಯಣನ ಕರುಣದಲಿ ॥45॥

+೦೩ ...{Loading}...