೧೦

೦೦೦ ಸೂ ರಾಯಕಟಕವನಿರಿದ ...{Loading}...

ಸೂ. ರಾಯಕಟಕವನಿರಿದ ಗುರುಸುತ
ನಾಯುಧದ ವಿಗ್ರಹದೊಳಗೆ ಹರಿ
ಕಾಯಿದನು ಕೃಪೆಯಿಂದಲಭಿಮನ್ಯುವಿನ ನಂದನನ

೦೦೧ ಕೇಳು ಧೃತರಾಷ್ಟ್ರಾವನಿಪ ...{Loading}...

ಕೇಳು ಧೃತರಾಷ್ಟ್ರಾವನಿಪ ರಿಪು
ಜಾಲಗೀರ್ವಾಣೀ ಕದಂಬ
ಸ್ಥೂಲವಕ್ಷನು ಬಂದು ಕಂಡನು ಭೋಜಗೌತಮರ
ಲೀಲೆಯಲಿ ರಥವೇರಿ ಕುರುಭೂ
ಪಾಲನಲ್ಲಿಗೆ ಬಂದರುಬ್ಬಿನ
ಮೇಲುಮದದ ಜಯಪ್ರಚಂಡರು ಕಂಡರವನಿಪನ ॥1॥

೦೦೨ ಬಲಿದ ಮರವೆಯ ...{Loading}...

ಬಲಿದ ಮರವೆಯ ಕರಣವೃತ್ತಿಯ
ಕಳವಳದ ಪಂಚೇಂದ್ರಿಯದ ಪರಿ
ಚಲನಸಂಚದ ಶಿಥಿಲಮೂಲಾಧಾರಮಾರುತನ
ಅಲಘುತರಪರಿವೇದನಾವಿ
ಹ್ವಳಿತಕಂಠಗತಾತ್ಮನೂಧ್ರ್ವ
ಸ್ಖಲಿತ ದೀರ್ಘಶ್ವಾಸನಿದ್ದನು ಕೌರವರ ರಾಯ ॥2॥

೦೦೩ ಕಣ್ಡು ಕಮ್ಬನಿದುಮ್ಬಿದರು ...{Loading}...

ಕಂಡು ಕಂಬನಿದುಂಬಿದರು ಭೂ
ಮಂಡಲಾಧಿಪ ವೈರಿಮದವೇ
ತಂಡ ಕೇಸರಿಯಿರವಿದೇ ಮಝ ಪೂತು ವಿಧಿಯೆನುತ
ಗಂಡುಗಲಿಯವಧಾನ ರಿಪುಬಲ
ದಂಡಧರನವಧಾನ ಕುರುಕುಲ
ಚಂಡಕರನವಧಾನವೆನುತೆಚ್ಚರಿಸಿದರು ನೃಪನ ॥3॥

೦೦೪ ಕೆದರಿದುದು ಕುಡಿನೋಟ ...{Loading}...

ಕೆದರಿದುದು ಕುಡಿನೋಟ ಕರಣದ
ಕದಡು ಹರೆದುದು ಇಂದ್ರಿಯಾವಳಿ
ತುದಿಗೊಳಿಸಿದುದು ಪವನ ನಟಿಸಿತು ನಾಭಿಪರಿಯಂತ
ವದನವನು ನಸು ನೆಗಹಿ ನೃಪ ನುಡಿ
ಸಿದನಿದಾರಸ್ಮತ್ಪುರೋಭಾ
ಗದಲಿ ಸೇವಾಮಧುರವಚನವಿಳಾಸಪರರೆಂದ ॥4॥

೦೦೫ ನಾವು ನಿಮ್ಮವರೆಮ್ಮ ...{Loading}...

ನಾವು ನಿಮ್ಮವರೆಮ್ಮ ಬೊಪ್ಪನ
ಭಾವ ಕೃಪ ಕೃತವರ್ಮನೀತನು
ದೇವರವಧರಿಸುವುದು ರಜನಿಯ ರಾಜಕಾರಿಯವ
ನೀವು ಬಿನ್ನಹಮಾಡಬೇಹುದು
ಮಾವ ರಣಸಂಗತಿಯನಾತ್ಮ
ಸ್ತಾವಕರು ನಾವಲ್ಲವೆಂದನು ಕೃಪಗೆ ಗುರುಸೂನು ॥5॥

೦೦೬ ಏನನೆಮ್ಬೆನು ಜೀಯ ...{Loading}...

ಏನನೆಂಬೆನು ಜೀಯ ದ್ರುಪದನ
ಸೂನು ಪಂಚದ್ರೌಪದೇಯರ
ಹಾನಿಯನು ಸೃಂಜಯ ಶಿಖಂಡಿ ಪ್ರಮುಖರುಪಹತಿಯ
ವೈನತೇಯನ ಲಳಿಯಲಹಿಕುಲ
ವಾನುವುದೆ ಪಾಂಚಾಲಕದಳೀ
ಕಾನನವ ನಿನ್ನಾನೆ ಸವರಿತು ಹೇಳಲೇನೆಂದ ॥6॥

೦೦೭ ದೈವಕೃಪೆಜವನಿಕೆಯ ಮರೆಗೊಂ ...{Loading}...

ದೈವಕೃಪೆಜವನಿಕೆಯ ಮರೆಗೊಂ
ಡೈವರುಳಿದರು ಮೇಲೆ ಸಾತ್ಯಕಿ
ದೈವದೊಡಹುಟ್ಟಿದನಲೇ ತಾನಿಲ್ಲ ಶಿಬಿರದಲಿ
ದೈವಬಲವಿನಿತಕ್ಕೆ ಕೇಳ್ ನಿ
ರ್ದೈವಬಲನಿಶ್ಶೇಷವಿನಿತೇ
ದೈವವೆತ್ತಿದ ಛಲದ ವಾಸಿಗೆ ರಾಯ ಕೇಳ್ ಎಂದ ॥7॥

೦೦೮ ಎಲೆ ಕೃಪಾಚಾರಿಯ ...{Loading}...

ಎಲೆ ಕೃಪಾಚಾರಿಯ ವಿರೋಧಿಗ
ಳುಳಿದರೈವರು ಬಲ್ಲೆನದನಸ
ದಳದ ಕೃಪೆಯಲಿ ಬಸಿದು ಬೀಳುವನವರಿಗಸುರಾರಿ
ಅಳಿದುದೇ ನಿಶ್ಶೇಷ ಪಾಂಡವ
ದಳ ಕುಮಾರರು ಸಹಿತವಿನ್ನ
ಗ್ಗಳೆಯನಶ್ವತ್ಥಾಮನಹನೆಂದನು ಮಹೀಪಾಲ ॥8॥

೦೦೯ ಏನನೊದಗಿದ ನಮಗೆ ...{Loading}...

ಏನನೊದಗಿದ ನಮಗೆ ಗಂಗಾ
ಸೂನು ಭಾರದ್ವಾಜ ನಮಗೊಲಿ
ದೇನ ಮಾಡಿದ ನಮ್ಮ ಥಟ್ಟಿನ ಭದ್ರಗಜವೆಂಬ
ಮಾನನಿಧಿ ರಾಧಾತನುಜನಿಂ
ದೇನು ಹರಿದುದು ಹರಿಬವನು ಗುರು
ಸೂನುವೇ ಮರಳಿಚಿದನೆಂದನು ಕೌರವರರಾಯ ॥9॥

೦೧೦ ಹರಿಬ ಬನ್ದುದೆ ...{Loading}...

ಹರಿಬ ಬಂದುದೆ ಪಾಂಡುಸುತರುಳಿ
ದಿರಲಿ ಸಾಕಂತಿರಲಿ ನಿಮ್ಮಡಿ
ಪುರಕೆ ಬಿಜಯಂಗೆಯ್ಯಿರೇ ಚೈತನ್ಯಗತಿಯೆಂತು
ಹರಣವುಳಿದಡೆ ಪಾಂಡುತನುಜರ
ಶಿರವ ಕೇವಣಿಸುವೆನಲೈ ಕೇ
ಸರಿಯ ಪೀಠದೊಳೆಂದನಶ್ವತ್ಥಾಮ ಕೈಮುಗಿದು ॥10॥

೦೧೧ ಸಾಕದನ್ತಿರಲಿನ್ನು ವೈರಿ ...{Loading}...

ಸಾಕದಂತಿರಲಿನ್ನು ವೈರಿ
ವ್ಯಾಕರಣಪಾಂಡಿತ್ಯದಲ್ಲಿ ವಿ
ವೇಕಶೂನ್ಯರು ನಾವು ಮೊದಲಾಗೌಧ್ರ್ವದೈಹಿಕವ
ಆಳೆವಾಳರಿಗರುಹಿ ನೀವ
ಸ್ತೋಕಪುಣ್ಯರ ತಿಳುಹಿ ವಿಗಳಿತ
ಶೋಕರೆನಿಸುವುದಂಧನೃಪ ಗಾಂಧಾರಿದೇವಿಯರ ॥11॥

೦೧೨ ಎನುತ ಕಣ್ ...{Loading}...

ಎನುತ ಕಣ್ ಮುಚ್ಚಿದನು ಜೀವಾ
ತ್ಮನು ಜವಾಯಿಲತನದಲೊಡೆಹಾ
ಯ್ದನು ಸುನಾಸಾಲಂಬಿತಶ್ವಾಸದ ಸಮಾಪ್ತಿಯಲಿ
ಜನಪ ಮರೆದೊರಗಿದನಲಾ ಹಾ
ಯೆನುತ ವದನಾಂಜುಳಿಪುಟದ ತಾ
ಡನದಲಿವರಳಲಿದರು ಕುರುರಾಜಾವಸಾನದಲಿ ॥12॥

೦೧೩ ತಿರುಗಿದರು ಕೈದುವ ...{Loading}...

ತಿರುಗಿದರು ಕೈದುವ ಬಿಸುಟು ಮೂ
ವರು ಮಹಾರಥರಂಧತಿಮಿರಕೆ
ತರಣಿಕಿರಣದ ಧಾಳಿ ಹರಿದುದು ಕೂಡೆ ದೆಸೆದೆಸೆಗೆ
ಅರಸನುಪ್ಪವಡಿಸಿ ಮುರಾರಿಯ
ಸಿರಿಮೊಗವ ನೋಡಿದನು ತಮ್ಮಂ
ದಿರು ಸಹಿತ ಹೊರವಂಟನಾ ಕುರುಪತಿಯ ಪಾಳೆಯವ ॥13॥

೦೧೪ ಪಾಳೆಯದಲಿ ಕುಮಾರರನು ...{Loading}...

ಪಾಳೆಯದಲಿ ಕುಮಾರರನು ಪಾಂ
ಚಾಲರನು ನೋಡುವೆವೆನುತ ಭೂ
ಪಾಲ ನಡೆತರಲಿದಿರುವಂದುದು ಯುವತಿನಿಕುರುಂಬ
ಸೂಳುವೊಯ್ಲಿನ ತೆಳುವಸುರ ಕರ
ತಾಳದಲಿ ಹಾಹಾವಿರಾವದ
ಮೇಳವದ ಗೀತದಲಿ ಬಂದಳು ದ್ರೌಪದೀದೇವಿ ॥14॥

೦೧೫ ಏನಿದೇನದುಭುತವೆನುತ ದು ...{Loading}...

ಏನಿದೇನದುಭುತವೆನುತ ದು
ಮ್ಮಾನದಲಿ ಹರಿತಂದು ಹಿಡಿದನು
ಮಾನಿನಿಯ ಕೈಗಳನು ಕಂಬನಿದೊಡೆದು ಸೆರಗಿನಲಿ
ಹಾನಿಯೇನೆನೆ ಮಡಿದರೆನ್ನಯ
ಸೂನುಗಳು ತನ್ನನುಜರೆನೆ ಪವ
ಮಾನಸುತ ಕೇಳಿದನು ಕೋಳಾಹಳವ ಗುರುಸುತನ ॥15॥

೦೧೬ ಸುತರ ತಲೆಯೈದಕ್ಕೆ ...{Loading}...

ಸುತರ ತಲೆಯೈದಕ್ಕೆ ರಿಪುಗುರು
ಸುತನ ತಲೆಯೇ ಹೊಣೆ ಕಣಾ ಬಿಡು
ಸತಿಯೆ ಶೋಕವನೆನುತ ಬಿಟ್ಟನು ಸೂಠಿಯಲಿ ರಥವ
ವ್ಯತಿಕರವಿದವಗಡ ಸಮೀರನ
ಸುತಗೆ ಹರಿಯದು ಬವರ ನಡೆಯೆಂ
ದತಿರಥನ ಬಳಿಸಲಿಸಿದರು ನೃಪ ಹರಿ ಧನಂಜಯರು ॥16॥

೦೧೭ ನಿಲ್ಲು ಗುರುಸುತ ...{Loading}...

ನಿಲ್ಲು ಗುರುಸುತ ಶೌರ್ಯಪಣ ನ
ಮ್ಮಲ್ಲಿಯೇ ಹುಲುಜೀವರಿಗೆ ಜವ
ನಲ್ಲಿ ಮೇಳವೆ ಉಗುಳು ಪಂಚದ್ರೌಪದೀಸುತರ
ಬಿಲ್ಲ ಗುರು ನೀನಾದಡೆಮಗೇ
ನಿಲ್ಲಿ ದ್ರೌಪದಿಯಕ್ಷಿಜಲಕೃಪೆ
ಯಲ್ಲಿ ಲಂಬಿಸಬೇಕೆನುತ ಮೂದಲಿಸಿದನು ಭೀಮ ॥17॥

೦೧೮ ಎಲವೊ ಶರಸನ್ನ್ಯಾಸವನು ...{Loading}...

ಎಲವೊ ಶರಸಂನ್ಯಾಸವನು ಕುರು
ತಿಲಕನವಸಾನದಲಿ ಮಾಡಿದೆ
ನಳಲಿದಡೆ ಫಲವೇನು ನಮ್ಮೀ ಸ್ವಾಮಿ ಕಾರ್ಯದಲಿ
ತಲೆಯ ಹೊಯ್ದೆನು ನಿನ್ನವರ ನೀ
ವಳುಕಿ ರಣದೊಳಗಡಗಿ ಜೀವವ
ನುಳುಹಿಕೊಂಡಿರಿ ಕೊಲುವೆನಲ್ಲದೊಡೆಂದನಾ ದ್ರೌಣಿ ॥18॥

೦೧೯ ಮರುಳಲಾ ಗುರುಸುತ ...{Loading}...

ಮರುಳಲಾ ಗುರುಸುತ ಯುಧಿಷ್ಠಿರ
ನಿರೆ ವಿಭಾಡಿಸುವಾ ಮೃಗೇಂದ್ರನ
ಗರವಟಿಗೆಯಲಿ ಬಡಸೃಗಾಲನ ಬಾಧೆ ಬಲುಹು ಗಡಾ
ಕುರುನೃಪತಿಯಾಸ್ಥಾನವಲ್ಲು
ಬ್ಬರಿಸಿ ಬೊಬ್ಬಿಡಲಾಹವಾಂತ
ಸ್ಸರಣಿ ಗುರುಸುತ ನಿನಗೆ ಸದರವೆಯೆಂದನಸುರಾರಿ ॥19॥

೦೨೦ ಕಾಯಬಲ್ಲೈ ಪಾಣ್ಡವರನು ...{Loading}...

ಕಾಯಬಲ್ಲೈ ಪಾಂಡವರನು ನಿ
ರಾಯುಧರು ನಾವೆಂದು ನೀ ನಿ
ರ್ದಾಯದಲಿ ನಿನ್ನವರು ಹೊಗುವರೆ ಹಸ್ತಿನಾಪುರವ
ಸಾಯಕವ ಪರಿಹರಿಸು ಪಾಂಡವ
ರಾಯಜೀವಿ ಗಡೆನುತ ವರ ಚ
ಕ್ರಾಯುಧನ ಬೋಳೈಸಿ ತೃಣದಿಂದಿಟ್ಟನಾ ದ್ರೌಣಿ ॥20॥

೦೨೧ ಆ ಮಹಾಮನ್ತ್ರಾಭಿಮನ್ತ್ರಿತ ...{Loading}...

ಆ ಮಹಾಮಂತ್ರಾಭಿಮಂತ್ರಿತ
ಭೀಮವಿಕ್ರಮತೃಣವನಶ್ವ
ತ್ಥಾಮನಿಡೆ ಲೋಕತ್ರಯಕ್ಷೋಭಪ್ರಭಂಜನವ
ವ್ಯೋಮಕೇಶಲಲಾಟ ವಿಶ್ರುತ
ಧೂಮಕೇತುಶಿಖಾವಿಸಂಸ್ಥುಳ
ಧೂಮಚುಂಬಿತ ಖಚರಚಯ ಭೂರಿಸಿತು ರಿಪುನೃಪರ ॥21॥

೦೨೨ ಅವನಿಪತಿ ಕೇಳೈ ...{Loading}...

ಅವನಿಪತಿ ಕೇಳೈ ಮಹಾವೈ
ಷ್ಣವದ ಸತ್ರಾಣವನು ಗುರುಸಂ
ಭವನ ಮಂತ್ರದ ಪಾಡಿ ನಡಪಾಡಿಸಿತು ಪಾಂಡವರ
ತವಕದಲಿ ತೃಣಬಾಣವಭಿಮ
ನ್ಯುವಿನ ರಾಣೀವಾಸದುದರೋ
ದ್ಭವದ ಗರ್ಭಕೆ ಮುರಿದು ಹರಿದುದು ಸೂಕ್ಷ್ಮರೂಪದಲಿ ॥22॥

೦೨೩ ಜಗವ ಹೂಡುವ ...{Loading}...

ಜಗವ ಹೂಡುವ ಮೇಣ್ ಚತುರ್ದಶ
ಜಗದ ಜೀವರನೂಡಿಯುಣಿಸುವ
ಜಗವನಂತರ್ಭಾವದಲಿ ಬಲಿಸುವ ಗುಣತ್ರಯದ
ಸೊಗಡು ತನ್ನ ಸಹಸ್ರಧಾರೆಯ
ಝಗೆಯೊಳೆನಿಪ ಮಹಾಸುದರ್ಶನ
ಬಿಗಿದು ಸುತ್ತಲು ವೇಢೆಯಾಯ್ತುತ್ತರೆಯ ಗರ್ಭದಲಿ ॥23॥

೦೨೪ ಸೆಳೆದುಕೊಣ್ಡನು ಮಿತ್ತುವಿನ ...{Loading}...

ಸೆಳೆದುಕೊಂಡನು ಮಿತ್ತುವಿನ ಗಂ
ಟಲಲಿ ಮಾರ್ಕಂಡೇಯನನು ರಣ
ದೊಳಗೆ ಭಗದತ್ತಾಂಕುಶದಿ ನಾರಾಯಣಾಸ್ತ್ರದಲಿ
ಉಳುಹಿದನು ಪಾರ್ಥನನು ಗುರುಸುತ
ಕಳುಪಿದೀ ಕುಶಿಕಾಸ್ತ್ರದಲಿ ಶಶಿ
ಕುಲದ ರಾಜಾಂಕುರವ ಕರುಣಿಸಿ ಕಾಯ್ದನಸುರಾರಿ ॥24॥

೦೨೫ ತೀರಿತೈ ಕುಶಿಕಾಸ್ತ್ರಘಾತಿ ...{Loading}...

ತೀರಿತೈ ಕುಶಿಕಾಸ್ತ್ರಘಾತಿ ಮು
ರಾರಿ ಗುರುಸುತರೊಬ್ಬರೊಬ್ಬರ
ವೀರಪಣವಾಸಿಯಲಿ ಶಪಿಸಿದರಧಿಕರೋಷದಲಿ
ನಾರಿಯಂತಸ್ತಾಪವಹ್ನಿ ನಿ
ವಾರಣಕೆ ಜಲವೀತನೆಂದಾ
ಚಾರಿಯನ ನಂದನನ ಹಿಡಿದರು ಭೀಮಫಲುಗುಣರು ॥25॥

೦೨೬ ಬನ್ದಳಾ ದ್ರೌಪದಿಯಹಹ ...{Loading}...

ಬಂದಳಾ ದ್ರೌಪದಿಯಹಹ ಗುರು
ನಂದನನ ಕೊಲಬಾರದಕಟೀ
ನಂದನರ ಮರಣದ ಮಹಾವ್ಯಥೆಯೀತನಳಿವಿನಲಿ
ಕೊಂದುಕೂಗದೆ ಕೃಪೆಯನಬಲಾ
ವೃಂದ ಸಮಸುಖದುಃಖಿಗಳು ಸಾ
ರೆಂದು ಭೀಮಾರ್ಜುನರ ತೆಗೆದಳು ಬಳಿಕ ಪಾಂಚಾಲಿ ॥26॥

೦೨೭ ತಲೆಯ ಕೊಮ್ಬವಗಡದ ...{Loading}...

ತಲೆಯ ಕೊಂಬವಗಡದ ಭಾಷೆಯ
ಸಲಿಸಲೆಂದಾ ದ್ರೋಣತನುಜನ
ಹೊಳೆವ ಮಕುಟದ ಮಾಣಿಕವ ಕೊಂಡುತ್ತರಾಯದಲಿ
ಗೆಲಿದು ತಿರುಗಿದರಿವರ ಸಾಹಸ
ವಳುಕಿಸದೆ ಮೂಜಗವ ಯದುಕುಲ
ತಿಲಕ ಗದುಗಿನ ವೀರನಾರಾಯಣನ ಕರುಣದಲಿ ॥27॥

+೧೦ ...{Loading}...