೧೧

೦೦೦ ಸೂ ರಾಯನಯ್ಯನ ...{Loading}...

ಸೂ. ರಾಯನಯ್ಯನ ತಿಳುಹಿದನು ದ್ವೈ
ಪಾಯನನು ಸಾಮದಲಿ ಕಮಳದ
ಳಾಯತಾಕ್ಷಿಯು ಶಾಪವಿತ್ತಳು ಮುಳಿದು ಗಾಂಧಾರಿ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಕುರುಪತಿ ವಿಳಯವಾರ್ತಾ
ವ್ಯಾಳವಿಷ ವೇಢೈಸಿದುದು ಗಜಪುರದ ಜನಮನವ
ಹೂಳಿದುಬ್ಬಿನ ಹುದಿದ ಮೋನದ
ಸೂಳುಚಿಂತೆಯ ಬಲಿದ ಭೀತಿಯ
ಮೇಲುದುಗುಡದ ದಡಿಯ ವದನದಲಿದ್ದುದಖಿಳಜನ ॥1॥

೦೦೨ ಆ ಸಮಯದಲಿ ...{Loading}...

ಆ ಸಮಯದಲಿ ದೇವ ವೇದ
ವ್ಯಾಸಮುನಿ ಬಂದನು ಗತಾಕ್ಷಮ
ಹೀಶನನು ಚರಣದಲಿ ಹೊರಳಿದಡೆತ್ತಿದನು ಹಿಡಿದು
ಆ ಸತಿಯ ಕರಸಿದನು ರಾಣೀ
ವಾಸವೆಲ್ಲವ ಬರಿಸಿ ಧರ್ಮವಿ
ಲಾಸವನು ವಿಸ್ತರಿಸಿದನು ವೈದಿಕ ವಿಧಾನದಲಿ ॥2॥

೦೦೩ ನಿನ್ನ ಸುತನುದ್ದಣ್ಡತನದಲಿ ...{Loading}...

ನಿನ್ನ ಸುತನುದ್ದಂಡತನದಲಿ
ನಿನ್ನ ತಮ್ಮನ ತನುಜರನು ಪರಿ
ಖಿನ್ನರನು ಮಾಡಿದನು ಕಪಟದ್ಯೂತಕೇಳಿಯಲಿ
ನಿನ್ನ ಮತ ವಿದುರೋಕ್ತಿಗಳ ಮೇಣ್
ಮನ್ನಿಸಿದನೇ ಜಗವರಿಯೆ ಸಂ
ಪನ್ನ ಶಠನಹನೈ ಸುಯೋಧನನೆಂದನಾ ಮುನಿಪ ॥3॥

೦೦೪ ಸೈರಿಸಿದರೇ ಪಾಣ್ಡುಸುತರಂ ...{Loading}...

ಸೈರಿಸಿದರೇ ಪಾಂಡುಸುತರಂ
ಭೋರುಹಾಕ್ಷಿ ರಜಸ್ವಲೆಯ ಸುಲಿ
ಸೀರೆಯಲಿ ತತ್ಪೂರ್ವಕೃತ ಜತುಗೇಹದಾಹದಲಿ
ವೈರಬಂಧದ ವಿವಿಧ ವಿಷಮ ವಿ
ಕಾರದಲಿ ವಿಗ್ರಹಮುಖವ ವಿ
ಸ್ತಾರಿಸಿದರೇ ಪಾಂಡುಸುತರುತ್ತಮರೆ ಹೇಳೆಂದ ॥4॥

೦೦೫ ಅವರು ಸುಚರಿತರೆನ್ದಲೇ ...{Loading}...

ಅವರು ಸುಚರಿತರೆಂದಲೇ ಮಾ
ಧವನು ನೆರೆ ಮರುಳಾದನವರಿಗೆ
ಶಿವನು ಮೆಚ್ಚಿದು ಶರವನಿತ್ತನು ನರನ ಪತಿಕರಿಸಿ
ಭುವನವೆರಡಾದಲ್ಲಿ ಸಾಧುಗ
ಳವರ ದೆಸೆ ದುಸ್ಸಾಧುಗಳು ನಿ
ನ್ನವರ ದೆಸೆಯಾಯ್ತರ್ಜುನನ ಸೂತಜನ ಸಮರದಲಿ ॥5॥

೦೦೬ ಅಹುದು ನಿಮ್ಮ ...{Loading}...

ಅಹುದು ನಿಮ್ಮ ಯುಧಿಷ್ಠಿರನು ಗುಣಿ
ಯಹನು ಭೀಮಾರ್ಜುನರು ಬಲ್ಲಿದ
ರಹರು ಕೃಷ್ಣನ ಕೂರ್ಮೆಯಲ್ಲಿ ಕಪರ್ದಿಯೊಲವಿನಲಿ
ಕುಹಕಿಯೆನ್ನವನವನೊಳಗೆ ನಿ
ಸ್ಪೃಹರು ವಿದುರಪ್ರಮುಖ ಸುಜನರು
ವಿಹಿತವೆನಗಿನ್ನಾವುದದ ನೀವ್ ಬೆಸಸಿ ಸಾಕೆಂದ ॥6॥

೦೦೭ ಧರ್ಮವೆಲ್ಲಿಹುದಲ್ಲಿ ಜಯ ...{Loading}...

ಧರ್ಮವೆಲ್ಲಿಹುದಲ್ಲಿ ಜಯ ಸ
ತ್ಕರ್ಮವೆಲ್ಲಿಹುದಲ್ಲಿ ಸಿರಿ ಸ
ದ್ಧರ್ಮಸಂರಕ್ಷಕರು ಹರಿ ಧೂರ್ಜಟಿ ಪಿತಾಮಹರು
ಧರ್ಮದೂರನು ನಿನ್ನವನು ಸ
ತ್ಕರ್ಮಬಾಹಿರನಾತ್ಮರಚಿತ ವಿ
ಕರ್ಮದೋಷದಲಳಿದನಿನ್ನೇನೆಂದನಾ ಮುನಿಪ ॥7॥

೦೦೮ ಎನಲು ಬಿದ್ದನು ...{Loading}...

ಎನಲು ಬಿದ್ದನು ನೆಲಕೆ ಸಿಂಹಾ
ಸನದಿನಾ ಮುನಿವಚನಶರ ಮರು
ಮೊನೆಗೆ ಬಂದುದು ಬಹಳ ಮೂರ್ಛಾಪಾರವಶ್ಯದಲಿ
ಜನಪನಿರೆ ಗಾಂಧಾರಿ ನೃಪ ಮಾ
ನಿನಿಯರೊರಲಿತು ರಾಜಗೃಹ ರೋ
ದನ ಮಹಾಧ್ವನಿ ಮೀರಿ ಮೊಗೆದುದು ಹಸ್ತಿನಾಪುರವ ॥8॥

೦೦೯ ಆರು ಸನ್ತೈಸುವರು ...{Loading}...

ಆರು ಸಂತೈಸುವರು ಲೋಚನ
ವಾರಿ ಹೊನಲಾಯ್ತರಮನೆಯ ನೃಪ
ನಾರಿಯರ ಬಹಳ ಪ್ರಳಾಪವ್ಯಥೆಯ ಬೇಳುವೆಗೆ
ಆರು ಮರುಗರು ಶೋಕಪನ್ನಗ
ಘೋರವಿಷ ಮುನಿವರನ ಹೃದಯವ
ಗೋರಿತೇನೆಂಬೆನು ಲತಾಂಗಿಯರಳಲ ಕಳವಳವ ॥9॥

೦೧೦ ಎತ್ತಿದರು ಧರಣಿಪನ ...{Loading}...

ಎತ್ತಿದರು ಧರಣಿಪನ ಕಂಗಳೊ
ಳೊತ್ತಿದರು ಪನ್ನೀರನುಸುರಿನ
ತತ್ತಳವನಾರೈದರೊಯ್ಯನೆ ತಾಳವೃಂತದಲಿ
ಬಿತ್ತಿ ತಂಗಾಳಿಯನು ಶೋಕದ
ಹತ್ತಿಗೆಗೆ ಹೊರೆದೆಗೆದು ಮರವೆಯ
ಚಿತ್ತವನು ಚೇತರಿಸಿ ಮೆಲ್ಲನೆ ನುಡಿಸಿದನು ಮುನಿಪ ॥10॥

೦೧೧ ಏನನೆನ್ದೆವು ಹಿನ್ದೆ ...{Loading}...

ಏನನೆಂದೆವು ಹಿಂದೆ ಧರ್ಮ ನಿ
ಧಾನವನು ಕಯ್ಯೊಡನೆ ಮರೆದೆಯಿ
ದೇನು ನಿನ್ನಯ ಮತಿಯ ವಿಭ್ರಮೆ ನಮ್ಮ ಹೇಳಿಕೆಗೆ
ಭಾನುಮತಿಯನು ತಿಳುಹು ನಿನ್ನಯ
ಮಾನಿನಿಯ ಸಂತೈಸು ಸಂಸಾ
ರಾನುಗತಿ ತಾನಿದು ಚತುರ್ದಶ ಜಗದ ಜೀವರಿಗೆ ॥11॥

೦೧೨ ಬಹ ವಿಪತ್ತಿನ ...{Loading}...

ಬಹ ವಿಪತ್ತಿನ ಶರಕೆ ಜೋಡೆಂ
ದಿಹುದಲಾ ಸುವಿವೇಕಗತಿ ನಿ
ರ್ದಹಿಸದೇ ಶೋಕಾಗ್ನಿ ಧರ್ಮದ್ರುಮದ ಬೇರುಗಳ
ಅಹಿತರೇ ಜನಿಸಿದಡೆ ಸುತರೆನ
ಬಹುದೆ ದುರ್ಯೋಧನನು ಹಗೆ ನಿನ
ಗಿಹಪರದ ಸುಖಗತಿಗೆ ಸಾಧನ ಧರ್ಮಸುತನೆಂದ ॥12॥

೦೧೩ ಕೇಳು ಮುನಿಭಾಷಿತವ ...{Loading}...

ಕೇಳು ಮುನಿಭಾಷಿತವ ನೃಪ ನೀ
ನಾಲಿಸುವುದಾತ್ಮಜರನಿಲ್ಲಿಂ
ಮೇಲೆ ಸಲಿಲಾಂಜಲಿಗಳನು ವೈದಿಕವಿಧಾನದಲಿ
ಪಾಲಿಸುವುದಾ ಪಾಂಡುಸುತರ ಸ
ಮೇಳದಲಿ ಸೇರುವುದು ಚಿತ್ತಕೆ
ತಾಳದಿರು ರಾಜಸ ವಿಕಾರವನೆಂದನಾ ವಿದುರ ॥13॥

೦೧೪ ತಾಯೆ ಹದುಳಿಸು ...{Loading}...

ತಾಯೆ ಹದುಳಿಸು ದೇವಲೋಕದ
ಲಾಯದಲಿ ಸಲಿಸಾ ಕುಮಾರರ
ನಾಯುಷದ ಲಿಪಿ ಹಣೆಯಲೊರಸಿದಡಾರ ವಶವಿದಕೆ
ರಾಯನಲಿ ಸೊಸೆಯರಿಗೆ ಮಿಕ್ಕಬು
ಜಾಯತಾಕ್ಷಿಯರಿಗೆ ವಿಶೋಕದ
ಬಾಯಿನವ ಕೊಡಿಸೆಂದನಾ ಮುನಿ ಸುಬಲನಂದನೆಗೆ ॥14॥

೦೧೫ ಧರಣಿಪತಿ ಹೊರವಣ್ಟನನ್ತಃ ...{Loading}...

ಧರಣಿಪತಿ ಹೊರವಂಟನಂತಃ
ಪುರವ ಬಿಸುಟರು ಭಾನುಮತಿ ಸಹಿ
ತರಸಿಯರು ಹೊರವಂಟರೇಕಾಂಬರದ ಬಿಡುಮುಡಿಯ
ಕರದಬಸುರಿನ ಹೊಯ್ಲ ಕಜ್ಜಳ
ಪರಿಲುಳಿತ ನಯನಾಂಬುಗಳ ಕಾ
ತರಿಪ ಕಮಲಾಕ್ಷಿಯರು ನೆರೆದುದು ಲಕ್ಕ ಸಂಖ್ಯೆಯಲಿ ॥15॥

೦೧೬ ವಣಿಜಸತಿಯರು ಶಿಲ್ಪ ...{Loading}...

ವಣಿಜಸತಿಯರು ಶಿಲ್ಪ ಜನವುಪ
ವಣಿಜದಬಲಾಜನವಘಾಟದ
ಗಣಿಕೆಯರು ನಾನಾದಿಗಂತದ ರಾಜಪತ್ನಿಯರು
ಹಿಣಿಲ ಕಬರಿಯ ಹೊಳೆವ ಮುಂದಲೆ
ವಣಿಯ ಮುಕುರ ಮುಖಾಂಬುಜದ ಪದ
ಝಣಝಣತ್ಕೃತಿ ಜಡಿಯೆ ನಡೆದುದು ಬೀದಿಬೀದಿಯಲಿ ॥16॥

೦೧೭ ಎಸಳುಗಙ್ಗಳ ಬೆಳಗನಶ್ರು ...{Loading}...

ಎಸಳುಗಂಗಳ ಬೆಳಗನಶ್ರು
ಪ್ರಸರ ತಡೆದುದು ಶೋಕಮಯಶಿಖಿ
ಮುಸುಡಕಾಂತಿಯ ಕುಡಿದುದೊಸರುವ ಬಿಸಿಲ ಬೇಗೆಗಳು
ಮಿಸುಪ ಲಾವಣ್ಯಾಂಬುವನು ಬ
ತ್ತಿಸಿದವಂಗುಲಿಯುಪಹತಿಯ ಕೇ
ಣಸರ ಸೆಳೆದುದು ಕುಚದ ಚೆಲುವನು ಕೋಮಲಾಂಗಿಯರ ॥17॥

೦೧೮ ತಮ್ಮೊಳೇಕತ್ವದ ಸಖಿತ್ವದ ...{Loading}...

ತಮ್ಮೊಳೇಕತ್ವದ ಸಖಿತ್ವದ
ಸೊಮ್ಮಿನಲಿ ಶ್ರುತಿಯಶ್ರುಜಲವನು
ನಿರ್ಮಿಸಿದವೆನೆ ಕರ್ಣಪೂರದ ಮುತ್ತು ಸೂಸಿದವು
ನೆಮ್ಮಿತತಿಶಯ ಶೋಕವಹ್ನಿಯ
ರೊಮ್ಮಿಗೆಯ ಕರಣಂಗಳಲಿ ನೃಪ
ಧರ್ಮಪತ್ನಿಯರಳುತ ಹೊರವಂಟರು ಪುರಾಂತರವ ॥18॥

೦೧೯ ಉಡಿದು ಬಿದ್ದವು ...{Loading}...

ಉಡಿದು ಬಿದ್ದವು ಸೂಡಗವು ಬಿಗು
ಹಡಗಿ ಕಳೆದವು ತೋಳಬಂದಿಗ
ಳೊಡನೊಡನೆ ಚೆಲ್ಲಿದವು ಮುತ್ತಿನ ಹಾರಚಯ ಹರಿದು
ಬಿಡುಮುಡಿಯ ಕಡುತಿಮಿರ ಕಾರಿದು
ದುಡುಗಣವನೆನೆ ಸೂಸಕದ ಮು
ತ್ತಡಿಸಿ ಸುರಿದವು ನೆಲಕೆ ನೃಪವನಿತಾಕದಂಬದಲಿ ॥19॥

೦೨೦ ಗಾಳಿಯರಿಯದ ಮುನ್ನ ...{Loading}...

ಗಾಳಿಯರಿಯದ ಮುನ್ನ ರವಿಕಿರ
ಣಾಳಿ ಸೋಂಕದಪೂರ್ವರೂಪಿನ
ಮೇಲೆ ಬೀಳುವವೆಂಬವೊಲು ಕಡುವಿಸಿಲು ಬಿರುಗಾಳಿ
ತೂಳಿದವು ತರುಣಿಯರನಾವವ
ರಾಲಿಯರಿಯದ ನೆಲೆಯನಾ ಚಾಂ
ಡಾಲಜನ ಪರಿಯಂತ ಕಂಡುದು ರಾಯ ರಾಣಿಯರ ॥20॥

೦೨೧ ಅರಸ ಚಿತ್ತೈಸವರು ...{Loading}...

ಅರಸ ಚಿತ್ತೈಸವರು ಹಸ್ತಿನ
ಪುರವ ಹೊರವಡೆ ದೂರದಲಿ ಕೃಪ
ಗುರುಜ ಕೃತವರ್ಮಕರು ಕಂಡರು ಕೌರವೇಶ್ವರನ
ಅರಸಿಯರ ನಾನಾದಿಗಂತದ
ಧರಣಿಪರ ಭಗದತ್ತ ಮಾದ್ರೇ
ಶ್ವರ ಜಯದ್ರಥ ಕರ್ಣ ದುಶ್ಯಾಸನರ ರಾಣಿಯರ ॥21॥

೦೨೨ ಗಣಿಕೆಯರನೇಕಾದಶಾಕ್ಷೋ ಹಿಣಿಯ ...{Loading}...

ಗಣಿಕೆಯರನೇಕಾದಶಾಕ್ಷೋ
ಹಿಣಿಯ ನೃಪರಾಣಿಯರನಾ ಪ
ಟ್ಟಣ ಜನದ ಪರಿಜನದ ಬಹುಕಾಂತಾ ಕದಂಬಕವ
ರಣಮಹೀದರುಶನಕೆ ಬಹು ಸಂ
ದಣಿಯ ಕಂಡರು ಧರ್ಮಸುತನಿ
ನ್ನುಣಲಿ ಧರಣಿಯನೆಂದು ಸುಯ್ದರು ಬಯ್ದು ಕಮಲಜನ ॥22॥

೦೨೩ ಬನ್ದು ಧೃತರಾಷ್ಟ್ರಾವನೀಶನ ...{Loading}...

ಬಂದು ಧೃತರಾಷ್ಟ್ರಾವನೀಶನ
ಮುಂದೆ ನಿಂದರು ರಾಯಕಟಕವ
ಕೊಂದ ರಜನಿಯ ರಹವನಭಿವರ್ಣಿಸಿದರರಸಂಗೆ
ಸಂದುದೇ ಛಲವೆನ್ನ ಮಗನೇ
ನೆಂದನೈ ಹರಿಬದಲಿ ಹರುಷವ
ತಂದಿರೈ ತಮಗಿನ್ನು ಲೇಸಾಯ್ತೆಂದನಂಧನೃಪ ॥23॥

೦೨೪ ಪತಿಕರಿಸಿದನು ನಮ್ಮನಹಿತ ...{Loading}...

ಪತಿಕರಿಸಿದನು ನಮ್ಮನಹಿತ
ಸ್ಥಿತಿಯನೆಲ್ಲವ ತಿಳಿದನಮರಾ
ವತಿಯ ಸತಿಯರ ಸೋಂಕಿನಲಿ ಸೇರಿದನು ನಿಮಿಷದಲಿ
ಕ್ಷಿತಿಪನಂತ್ಯದೊಳಲ್ಲಿ ಶಸ್ತ್ರ
ಚ್ಯುತಿಯಮಾಡಿ ವಿರಾಗದಲಿ ವನ
ಗತಿಕರಾವೈತಂದೆವೆಂದರು ಗುರುಸುತಾದಿಗಳು ॥24॥

೦೨೫ ಲೇಸು ಮಾಡಿದಿರಿನ್ನು ...{Loading}...

ಲೇಸು ಮಾಡಿದಿರಿನ್ನು ನಿಮಗಿ
ನ್ನೈಸಲೇ ಕರ್ತವ್ಯವೆನೆ ಧರ
ಣೀಶನನು ಬೀಳ್ಕೊಂಡರವರಗಲಿದರು ತಮ್ಮೊಳಗೆ
ವ್ಯಾಸಮುನಿಯಾಶ್ರಮವ ಗಂಗಾ
ದೇಶವನು ತದ್ದಾ ್ವರಕಿಯ ಸಂ
ವೇಶಿಸಿದರೈ ಗುರುಜ ಕೃಪ ಕೃತವರ್ಮರೊಲವಿನಲಿ ॥25॥

೦೨೬ ತಿರುಗಿದರು ಬಳಿಕಿತ್ತಲೀ ...{Loading}...

ತಿರುಗಿದರು ಬಳಿಕಿತ್ತಲೀ ಮೋ
ಹರದ ಕಾಂತಾಕೋಟಿ ಬಂದುದು
ಹರಳುಮುಳ್ಳುಗಳೊತ್ತುಗಾಲಿನ ದೂರತರಪಥರ
ಉರಿಯ ಜಠರದ ಬಿಸಿಲ ಝಳದಲಿ
ಹುರಿದ ಕದಪುಗಳೆರಡು ಕಡೆಯಲಿ
ಸುರಿವ ನಯನಾಂಬುಗಳ ರಾಜನಿತಂಬಿನೀನಿಕರ ॥26॥

೦೨೭ ಬನ್ದುದೀ ಗಜಪುರದ ...{Loading}...

ಬಂದುದೀ ಗಜಪುರದ ನಾರೀ
ವೃಂದ ಧೃತರಾಷ್ಟ್ರಾವನೀಶನ
ಮುಂದೆ ವೇದವ್ಯಾಸ ಸಂಜಯ ವಿದುರ ಪೌರಜನ
ಮುಂದಣಾಹವರಂಗಧಾರುಣಿ
ಯೊಂದು ಕೆಲದುಪವನದ ನೆಳಲಲಿ
ನಿಂದುದಿವರಾಗಮನವನು ಕೇಳಿದನು ಯಮಸೂನು ॥27॥

೦೨೮ ಮುರಮಥನ ಸಾತ್ಯಕಿ ...{Loading}...

ಮುರಮಥನ ಸಾತ್ಯಕಿ ಯುಧಿಷ್ಠಿರ
ಧರಣಿಪತಿ ನರ ಭೀಮ ಮಾದ್ರೇ
ಯರುಗಳೈವರ ಸಾರಥಿಗಳು ಯುಯುತ್ಸು ದಾರುಕರು
ತೆರಳಿತೇಳಕ್ಷೋಹಿಣಿಯ ನೃಪ
ರರಸಿಯರು ದ್ರೌಪದಿಯ ರೋದನ
ಸರದ ಗಾನದ ಜಠರತಾಡನ ತಾಳಮೇಳದಲಿ ॥28॥

೦೨೯ ಇವರು ಬನ್ದರು ...{Loading}...

ಇವರು ಬಂದರು ದೂರದಲಿ ಮಾ
ಧವನ ಮತದಲಿ ನಿಂದರಾಚೆಯ
ಯುವತಿಜನ ಗಾಂಧಾರಿ ಕುಂತೀ ಭಾನುಮತಿ ಸಹಿತ
ವಿವಿಧವಿಕೃತವಿಳಾಸನಯನೋ
ದ್ಭವಪಯಸ್ತಿಮಿರಾಂಶುಕೆಯರಂ
ದವನಿಯಲಿ ಕೆಡೆದೊರಲುತಿರ್ದರು ತಾರು ಥಟ್ಟಿನಲಿ ॥29॥

೦೩೦ ಅರಸ ಕೇಳ್ ...{Loading}...

ಅರಸ ಕೇಳ್ ಧೃತರಾಷ್ಟ್ರ ಸಂಜಯ
ವರ ಮುನಿಪ ವಿದುರಾದಿ ಪರಿಜನ
ಪುರಜನಾವಳಿಯಿದ್ದುದುಪವನದೊಂದು ಬಾಹೆಯಲಿ
ನೆರೆದುದೀಚೆಯಲೊಂದೆಸೆಯಲು
ತ್ತರೆ ಸುಭದ್ರೆಯರಾದಿ ಯಾದವ
ರರಸಿಯರು ಸಹಿತೊರಲುತಿರ್ದಳ್ ದ್ರೌಪದೀದೇವಿ ॥30॥

೦೩೧ ಹರಿಸಹಿತ ಪಾಣ್ಡವರದೊನ್ದೆಸೆ ...{Loading}...

ಹರಿಸಹಿತ ಪಾಂಡವರದೊಂದೆಸೆ
ಯಿರೆ ಚತುರ್ವಿಧವಾದುದೀ ಮೋ
ಹರದೊಳಾಯ್ತೆಡೆಯಾಟ ವೇದವ್ಯಾಸ ವಿದುರರಿಗೆ
ಧರಣಿಪನ ಕಾಣಿಸುವುದಂಧನ
ನಿರುಪಮಿತ ಶೋಕಾನಳನ ಸಂ
ಹರಿಸುವುದು ನಯವೆಂದು ವೇದವ್ಯಾಸಮುನಿ ನುಡಿದ ॥31॥

೦೩೨ ಇದಕೆ ಸಂಶಯವೇನು ...{Loading}...

ಇದಕೆ ಸಂಶಯವೇನು ಬೊಪ್ಪನ
ಪದಯುಗವ ಕಾಣಿಸುವುದೆಮ್ಮನು
ಹದುಳವಿಡುವುದು ಹಸ್ತಿನಾಪುರದರಸುತನ ತನಗೆ
ಒದೆದು ನೂಕಿದ ಹದನ ಮಕುಟಾ
ಗ್ರದಲಿ ಧರಿಸುವೆವೆಂದು ಬಿನ್ನವಿ
ಪುದು ಮಹೀಪತಿಗೆಂದು ಮುನಿಗರುಹಿದನು ಯಮಸೂನು ॥32॥

೦೩೩ ಲೇಸನಾಡಿದೆ ಮಗನೆ ...{Loading}...

ಲೇಸನಾಡಿದೆ ಮಗನೆ ಧರ್ಮದ
ಮೀಸಲಲ್ಲಾ ನಿನ್ನ ಮತಿ ಬಳಿ
ಕೈಸಲೇಯೆನುತವರು ಬಂದರು ಭೂಪತಿಯ ಹೊರೆಗೆ
ಆ ಸುಯೋಧನ ನಿನ್ನ ಮಗನ
ಲ್ಲೀ ಸಮಂಜಸ ಧರ್ಮಜನ ಹಿಡಿ
ದೀಸುವುದು ಭವಜಲನಿಧಿಯನೆಂದಮಳಮುನಿ ನುಡಿದ ॥33॥

೦೩೪ ನೃಪನ ಕಾಣಿಸಿಕೊಮ್ಬುದನಿಬರ ...{Loading}...

ನೃಪನ ಕಾಣಿಸಿಕೊಂಬುದನಿಬರ
ನುಪಚರಿಸುವುದು ನಿನ್ನ ಮಕ್ಕಳ
ಕೃಪಣತೆಯನಾರೈವರಲ್ಲವರೈವರುತ್ತಮರು
ಉಪಹತಿಯ ನೆನೆಯದಿರು ದುರ್ಜನ
ರಪಕೃತಿಗೆ ಫಲವಾಯ್ತು ಧರ್ಮವೆ
ರಪಣವಿಹಪರಲೋಕಕೆಲೆ ಧೃತರಾಷ್ಟ್ರ ಕೇಳ್ ಎಂದ ॥34॥

೦೩೫ ಹೈ ಹಸಾದವು ...{Loading}...

ಹೈ ಹಸಾದವು ನಿಮ್ಮ ಚಿತ್ತಕೆ
ಬೇಹ ಹದನೇ ಕಾರ್ಯಗತಿ ಸಂ
ದೇಹವೇ ಪಾಂಡುವಿನ ಮಕ್ಕಳು ಮಕ್ಕಳವರೆಮಗೆ
ಕಾಹುರರು ಕಲ್ಮಷರು ಬಂಧು
ದ್ರೋಹಿಗಳು ಗತವಾಯ್ತು ನಿಷ್ಪ್ರ
ತ್ಯೂಹವಿನ್ನೇನವರಿಗೆಂದನು ಮುನಿಗೆ ಧೃತರಾಷ್ಟ್ರ ॥35॥

೦೩೬ ಖಳನ ಹೃದಯದ ...{Loading}...

ಖಳನ ಹೃದಯದ ಕಾಳಕೂಟದ
ಗುಳಿಗೆಗಳನಿವರೆತ್ತ ಬಲ್ಲರು
ತಿಳುಹಿ ನುಡಿದೊಡಬಡಿಸಿದರು ನಾನಾ ಪ್ರಕಾರದಲಿ
ಘಳಿಲನೀಚೆಗೆ ಬಂದು ಹದನನು
ನಳಿನನಾಭಂಗರುಹೆ ನಸುನಗು
ತೊಳಗೊಳಗೆ ಹರಿ ವಿಶ್ವಕರ್ಮನ ನೆನೆದು ನೇಮಿಸಿದ ॥36॥

೦೩೭ ನೆನೆದ ಘಳಿಗೆಯೊಳಾತ ...{Loading}...

ನೆನೆದ ಘಳಿಗೆಯೊಳಾತ ಕಟ್ಟು
ಕ್ಕಿನಲಿ ಸರ್ವಾವಯವವನು ಸಂ
ಜನಿಸಿದನು ಪ್ರತಿರೂಪವನು ಪವಮಾನನಂದನನ
ದನುಜರಿಪುಸಹಿತವರು ಬಂದರು
ಮುನಿಯೊಡನೆ ಬಳಿಕಂಧನೃಪತಿಗೆ
ವಿನಯದಲಿ ಮೆಯ್ಯಿಕ್ಕಿದನು ಭಕ್ತಿಯಲಿ ಯಮಸೂನು ॥37॥

೦೩೮ ಬಾ ಮಗನೆ ...{Loading}...

ಬಾ ಮಗನೆ ಕುರುರಾಜವಂಶ ಶಿ
ರೋಮಣಿಯೆ ನಿರ್ಧೂತ ರಾಜಸ
ತಾಮಸನೆ ಸತ್ಯೈಕನಿಧಿ ಬಾ ಕಂದ ಬಾ ಎನುತ
ಭೂಮಿಪನ ತೆಗೆದಪ್ಪಿ ಬಹಳ
ಪ್ರೇಮದಲಿ ಮುಂಡಾಡಿದನು ಕಲಿ
ಭೀಮನೋ ಬಾ ಮಗನೆ ಬಾರೈ ಕಂದ ಬಾ ಎಂದ ॥38॥

೦೩೯ ಭೀಮನನು ಹಿನ್ದಿಕ್ಕಿ ...{Loading}...

ಭೀಮನನು ಹಿಂದಿಕ್ಕಿ ಲೋಹದ
ಭೀಮನನು ಮುಂದಿರಿಸಿದಡೆ ಸು
ಪ್ರೇಮನಪ್ಪಿದಡೇನನೆಂಬೆನು ಮೋಹವನು ಮಗನ
ಆ ಮಹಾವಜ್ರಾಯತ ಪ್ರೋ
ದ್ದಾಮದಾಯಸ ಭೀಮತನು ನಿ
ರ್ನಾಮವೆನೆ ನುಗ್ಗಾಗಿ ಬಿದ್ದುದು ನೃಪನ ತಕ್ಕೆಯಲಿ ॥39॥

೦೪೦ ಮಗನೆ ಹಾ ...{Loading}...

ಮಗನೆ ಹಾ ಹಾ ಭೀಮ ನೊಂದೈ
ಮಗನೆ ಕೆಟ್ಟೆನು ಕೆಟ್ಟೆನಕಟೆಂ
ದೊಗುಮಿಗೆಯ ಶೋಕದಲಿ ನೆರೆ ಮರುಗಿದನು ಧೃತರಾಷ್ಟ್ರ
ದುಗಡ ಬೇಡೊಮ್ಮಿಂಗೆ ನಿಮ್ಮಯ
ಮಗನುಳಿದ ನಿಮ್ಮಧಿಕರೋಷದ
ಹಗರಣದ ಹಗೆ ಹೋಯಿತೆಂದನು ನಗುತ ಮುರವೈರಿ ॥40॥

೦೪೧ ತ್ರಾಣವಿಮ್ಮಡಿಸಿತ್ತು ಕೋಪದ ...{Loading}...

ತ್ರಾಣವಿಮ್ಮಡಿಸಿತ್ತು ಕೋಪದ
ಕೇಣವೆಚ್ಚರಿಸಿದಡೆ ನೃಪ ಸ
ತ್ರಾಣದಲಿ ತನಿಬಗಿಯೆ ನುಗ್ಗಾಯ್ತಾಯಸ ಪ್ರತಿಮೆ
ಮಾಣು ಭಯವನು ಭೀಮ ಭೂಪನ
ಕಾಣು ಹೋಗೆನೆ ನಡುಗಿ ಭುವನ
ಪ್ರಾಣನಾತ್ಮಜ ಬಿದ್ದನಾ ಧೃತರಾಷ್ಟ್ರನಂಘ್ರಿಯಲಿ ॥41॥

೦೪೨ ಪವನಸುತನೇ ಬಾ ...{Loading}...

ಪವನಸುತನೇ ಬಾ ಎನುತ ತ
ಕ್ಕವಿಸಿದನು ಬಳಿಕೆರಗಿದಡೆ ವಾ
ಸವನ ಸುತ ಬಾ ಕಂದ ಎಂದಪ್ಪಿದನು ಫಲುಗುಣನ
ತವಕದಿಂದೆರಗಿದಡೆ ಮಾದ್ರಿಯ
ಜವಳಿಮಕ್ಕಳನಪ್ಪಿದನು ಕೌ
ರವಕುಲಾಗ್ರಣಿಗಳಿರ ಕುಳ್ಳಿರಿಯೆಂದನಂಧನೃಪ ॥42॥

೦೪೩ ಕುರುಮಹೀಪತಿ ನಮ್ಮ ...{Loading}...

ಕುರುಮಹೀಪತಿ ನಮ್ಮ ಪೂರ್ವಜ
ರರಸು ತತ್ಸಂತಾನ ಪಾರಂ
ಪರೆಯನಳಿವಡೆ ಕೆಲಬರಾದರು ಹೋದರವರಿಂದು
ಭರತಕುಲವನು ಹೊರೆದು ಮಿಗೆ ವಿ
ಸ್ತರಿಸು ಮಗನೆ ಸುಯೋಧನಾದ್ಯರ
ದುರುಳುತನದವಗುಣವನೆಮ್ಮನು ನೋಡಿ ಮರೆಯೆಂದ ॥43॥

೦೪೪ ಅವರೊಳವಗುಣವೇ ಚಿರನ್ತನ ...{Loading}...

ಅವರೊಳವಗುಣವೇ ಚಿರಂತನ
ಭವದ ಕಿಲ್ಬಿಷ ಕರ್ಮಪಾಕ
ಪ್ರವರ ದುರಿಯೋಧನನ ಸವ್ಯಪದೇಶಮಾತ್ರದಲಿ
ಎವಗೆ ರಚಿಸಿತು ರಾಜ್ಯವಿಭ್ರಂ
ಶವನು ತತ್ಸುಕೃತೋದಯಪ್ರಾ
ಭವವೆ ತಿರುಗಿಸಿತೆಂದು ನಯದಲಿ ಧರ್ಮಸುತ ನುಡಿದ ॥44॥

೦೪೫ ಸಾಕಿದನ್ತಿರಲಬಲೆಯರೊಳು ...{Loading}...

ಸಾಕಿದಂತಿರಲಬಲೆಯರೊಳು
ದ್ರೇಕಿ ನಿಮ್ಮಯ ಹಿರಿಯ ತಾಯು
ದ್ರೇಕವನು ಪರಿಹರಿಸು ಶೋಕಕ್ರೋಧದುಪಟಳಕೆ
ಆಕೆ ಸೈರಿಸಲರಿಯಳರಿವಿನೊ
ಳಾಕೆವಾಳರು ತಿಳಿಹಿ ತಮ್ಮನ
ನಾಕೆಯನು ಕಾಣಿಸುವುದೆಂದನು ವ್ಯಾಸ ವಿದುರರಿಗೆ ॥45॥

೦೪೬ ವಿದುರ ವೇದವ್ಯಾಸ ...{Loading}...

ವಿದುರ ವೇದವ್ಯಾಸ ಮುನಿಯೀ
ಹದನನರುಹುವೆವೆಂದು ರಾಯನ
ಸುದತಿಯಲ್ಲಿಗೆ ಬಂದು ನುಡಿದರು ಮಧುರವಚನದಲಿ
ಕದಪನಂಗೈಗಿತ್ತು ತಲೆಗು
ತ್ತಿದಳು ನಯನೋದಕದ ಪರಿವಾ
ಹದಲಿ ನನೆದಳು ಮಹಿಳೆಯಿದ್ದಳು ಬಹಳ ಮೋನದಲಿ ॥46॥

೦೪೭ ದುಗುಡವನು ಬಿಡು ...{Loading}...

ದುಗುಡವನು ಬಿಡು ಮೋಹಬಂಧ
ಸ್ಥಗಿತ ಚಿತ್ತವ ಕದಡು ಹಣಿಯಲಿ
ಮಗಳೆ ಮರುಳಾದೌ ವಿಳಾಸದ ವಿಹಿತವಿಹಪರಕೆ
ಅಗಡುಮಕ್ಕಳ ತಾಯ್ಗೆ ತಪ್ಪದು
ಬೆಗಡುಬೇಗೆ ಸುಯೋಧನಾದ್ಯರ
ವಿಗಡತನವನು ನೆನೆದು ನೀ ನೋಡೆಂದನಾ ಮುನಿಪ ॥47॥

೦೪೮ ಮುನಿಯದಿರು ಗಾನ್ಧಾರಿ ...{Loading}...

ಮುನಿಯದಿರು ಗಾಂಧಾರಿ ದಿಟ ನಿ
ನ್ನನುಜನಿಕ್ಕಿದ ಸಾರಿ ನಿನ್ನಯ
ತನುಜರನು ನಿನ್ನಖಿಳಮಿತ್ರಜ್ಞಾತಿಬಾಂಧವರ
ಮನುಜಪತಿಗಳನಂತವನು ರಿಪು
ಜನಪ ಶರವಹ್ನಿಯಲಿ ಬೇಳಿದು
ದಿನಿತು ಶೋಕೋದ್ರೇಕ ನಿನಗೇಕೆಂದನಾ ಮುನಿಪ ॥48॥

೦೪೯ ಅಳಿದವರಿಗಳಲುವುದು ಸಲ್ಲದು ...{Loading}...

ಅಳಿದವರಿಗಳಲುವುದು ಸಲ್ಲದು
ನಿಲಲಿ ಸಾಕದು ನಿಮ್ಮ ಚಿತ್ತದ
ನೆಲೆಯ ಬಯಕೆಯ ಬೆಸಸಿರೇ ಕರ್ತವ್ಯವೇನೆಮಗೆ
ಕಳವಳಿಪ ಕುಂತೀಸುತರ ಕಣು
ವಳೆಗವಗ್ರಹವಾಗು ನಿರ್ಜರ
ರೊಳಗೆ ಮಕ್ಕಳ ಮಾನ್ಯರನು ಮಾಡೆಂದನಾ ಮುನಿಪ ॥49॥

೦೫೦ ನಮ್ಬಿಸುವುದೈವರನು ಕಾಣಿಸಿ ...{Loading}...

ನಂಬಿಸುವುದೈವರನು ಕಾಣಿಸಿ
ಕೊಂಬುದನಿಬರ ಕರಣವೃತ್ತಿಗೆ
ತುಂಬುವುದು ತನಿಹರುಷವನು ಸೌಹಾರ್ದಶೋಭೆಯಲಿ
ಝೊಂಬಿಸಲಿ ಕೌರವರು ನಾಕ ನಿ
ತಂಬಿನಿಯರಳಕವನು ಮಗಳೆ ವಿ
ಡಂಬಿಸುವ ಖಳರಭಿಮತಕೆ ಮನವೀಯಬೇಡೆಂದ ॥50॥

೦೫೧ ರಾಯನನು ಕಾಣಿಸಿದಿರೇ ...{Loading}...

ರಾಯನನು ಕಾಣಿಸಿದಿರೇ ಪ್ರ
ಜ್ಞಾಯತಾಕ್ಷನ ತಿಳಿಹಿ ಬಂದಿರೆ
ತಾಯಿಗಳು ನಾವೈಸಲೇ ಬಲುಹುಂಟೆ ನಮಗಿನ್ನು
ಸಾಯೆ ಸಾವೆನು ಕುರುಕುಲಾಗ್ರಣಿ
ನೋಯೆ ನೋವೆನು ತನಗೆ ದುರಭಿ
ಪ್ರಾಯವುಂಟೇ ಮಾವ ಎಂದಳು ಮುನಿಗೆ ಗಾಂಧಾರಿ ॥51॥

೦೫೨ ಐಸಲೇ ಗುಣಮಯವಚೋವಿ ...{Loading}...

ಐಸಲೇ ಗುಣಮಯವಚೋವಿ
ನ್ಯಾಸವಿದು ಸಾರೆನುತ ಮರಳಿದು
ಭೂಸುರಾಗ್ರಣಿ ಬಂದು ನುಡಿದನು ಧರ್ಮನಂದನಗೆ
ರೋಷವಹ್ನಿಯನುಪಶಮಾಂಬು ವಿ
ಳಾಸದಲಿ ನಿಲಿಸೇಳು ನೃಪನ ಮ
ಹಾಸತಿಯ ಖತಿ ಹಿರಿದು ನಮಗೊಳಗಾಗಿ ಭಯವೆಂದ ॥52॥

೦೫೩ ಹರಿ ವಿದುರ ...{Loading}...

ಹರಿ ವಿದುರ ಪಾರಾಶರಾತ್ಮಜ
ವರ ಮಹೀಪತಿ ಭೀಮ ಮಾದ್ರೇ
ಯರು ಧನಂಜಯ ಸಹಿತ ಬಂದರು ಬಹಳ ವಿನಯದಲಿ
ಚರಣದಲಿ ಮೆಯ್ಯಿಕ್ಕಿದರೆ ನೃಪ
ವರನ ನೆಗಹಿದಳನಿಲಸುತ ಸಿತ
ತುರಗ ಮಾದ್ರೀಸುತರು ಪದಕೆರಗಿದರು ಭೀತಿಯಲಿ ॥53॥

೦೫೪ ಏಳಿರೈ ಸಾಕೇಳಿ ...{Loading}...

ಏಳಿರೈ ಸಾಕೇಳಿ ಮಕ್ಕಳಿ
ರೇಳಿರೈ ದೇಸಿಗರು ನಾವ್ ಭೂ
ಪಾಲಕರು ನೀವೀಸು ನಮ್ಮಲಿ ಭೀತಿ ನಿಮಗೇಕೆ
ಬಾಲೆಯರು ನಾವಂಧಕರು ನಿ
ಮ್ಮಾಳಿಕೆಯೊಳೇ ನಿಮ್ಮ ಹಂತಿಯ
ಕೂಳಿನಲಿ ಬೆಂದೊಡಲ ಹೊರೆವವರೆಂದಳಿಂದುಮುಖಿ ॥54॥

೦೫೫ ತಾಯೆ ಖತಿಬೇಡಿನ್ನು ...{Loading}...

ತಾಯೆ ಖತಿಬೇಡಿನ್ನು ಧರಣಿಗೆ
ರಾಯನೇ ಧೃತರಾಷ್ಟ್ರನಾತನ
ಬಾಯ ತಂಬುಲ ಬೀಳುಡೆಯ ಬಲದಿಂದ ಬದುಕುವೆವು
ತಾಯೆ ನೀವಿನ್ನೆಮಗೆ ಕುಂತಿಯ
ತಾಯಿತನವಂತಿರಲಿ ಕರುಣಿಸಿ
ಕಾಯಬೇಕೆಂದರಸ ಮಗುಳೆರಗಿದನು ಚರಣದಲಿ ॥55॥

೦೫೬ ಧರ್ಮ ನಿಮ್ಮದು ...{Loading}...

ಧರ್ಮ ನಿಮ್ಮದು ಮಗನೆ ಬರಿಯ ವಿ
ಕರ್ಮವೆಮ್ಮದು ತನ್ನ ಮಕ್ಕಳು
ದುರ್ಮತಿಗಳನ್ಯಾಯಶೀಲರಸಾಧುಸಂಗತರು
ನಿರ್ಮಳರು ನೀವೈವರಾಹವ
ಧರ್ಮಕುಶಲರು ಲೋಕ ಮೆಚ್ಚಲು
ಧರ್ಮ ನಿಮಗಿನ್ನೆನುತ ತಲೆಗುತ್ತಿದಳು ಗಾಂಧಾರಿ ॥56॥

೦೫೭ ಧರ್ಮವಾಗಲಿ ಮೇಣು ...{Loading}...

ಧರ್ಮವಾಗಲಿ ಮೇಣು ರಣದಲ
ಧರ್ಮವಾಗಲಿ ಖಾತಿಯಲಿ ಪರ
ಮರ್ಮಘಾತಕವಾಯ್ತು ಸಾಕಿನ್ನೆಂದು ಫಲವೇನು
ನಿರ್ಮಳಾಂತಃಕರಣಕೃತಪರಿ
ಕರ್ಮವಿಳಸಿತೆ ತಾಯೆ ಸೈರಿಪು
ದುಮ್ಮಳವು ಬೇಡೆಂದು ಮೆಯ್ಯಿಕ್ಕಿದನು ಕಲಿಭೀಮ ॥57॥

೦೫೮ ಏಳು ತಮ್ಮ ...{Loading}...

ಏಳು ತಮ್ಮ ವೃಥಾ ವಿಡಂಬನ
ದಾಳಿಯಾಟವಿದೇಕೆ ಸೈರಿಸ
ಹೇಳಿದೈ ಸೈರಿಸದೆ ಮುನಿದಡೆ ನಿಮಗೆ ಕೇಡಹುದೆ
ಕಾಳೆಗದ ಕೃತಸಮಯ ಸತ್ಯವ
ಪಾಲಿಸಿದವರು ನೀವಲೇ ದಿಟ
ಖೂಳರಾವೈಸಲೆ ಎನುತ ಗಜರಿದಳು ಗಾಂಧಾರಿ ॥58॥

೦೫೯ ಹೊರಿಸುವಡೆ ದುಷ್ಕೀರ್ತಿ ...{Loading}...

ಹೊರಿಸುವಡೆ ದುಷ್ಕೀರ್ತಿ ನಮ್ಮಲಿ
ಹೊರಿಗೆಯಾಯಿತು ನಾಭಿಯಿಂ ಕೆಳ
ಗೆರಗುವುದು ಗದೆಯಿಂದ ಸಲ್ಲದು ಶಸ್ತ್ರವಿದ್ಯೆಯಲಿ
ಅರಿಕೆಯಿಂದನ್ಯಾಯವೀ ಜಗ
ವರಿಯೆ ನಮ್ಮದು ತಾಯೆ ನೀ ಮನ
ಮುರಿಯದವಧರಿಸುವಡೆ ಬಿನ್ನಹವೆಂದನಾ ಭೀಮ ॥59॥

೦೬೦ ಅರಗಿನರಮನೆ ಕೊಣ್ಡವೆಮ್ಮೈ ...{Loading}...

ಅರಗಿನರಮನೆ ಕೊಂಡವೆಮ್ಮೈ
ವರು ಸಮಿತ್ತುಗಳಾ ಸುಯೋಧನ
ಪರಮಯಜಮಾನನು ಜಯಾಧ್ವರ ವಿಧಿಯಪೂರ್ವವನು
ಕುರುನೃಪತಿಯನುಭವಿಸಿದನು ತ
ಚ್ಚರಿತವೇನನ್ಯಾಯಪಥವೇ
ಧುರದೊಳೆಮಗನ್ಯಾಯವೈಸಲೆ ದೈವಕೃತವೆಂದ ॥60॥

೦೬೧ ಕಪಟದಲಿ ಜೂಜಾಡಿ ...{Loading}...

ಕಪಟದಲಿ ಜೂಜಾಡಿ ರಾಜ್ಯವ
ನಪಹರಿಸಿದಡೆ ಧರ್ಮ ನಿಮ್ಮದು
ಕೃಪಣತೆಯ ನಾನೇನ ಹೇಳುವೆನಾ ಸುಯೋಧನನ
ದ್ರುಪದಪುತ್ರಿಯ ಗಾಢ ಗರುವಿಕೆ
ಗುಪಹತಿಯ ಮಾಡುವುದು ಧರ್ಮದ
ವಿಪುಳ ಪಥ ನಿಮ್ಮದು ಮಹಾಧರ್ಮಜ್ಞರಹಿರೆಂದ ॥61॥

೦೬೨ ಲಲನೆ ಋತುಮತಿಯೆನ್ದಡೆಯು ...{Loading}...

ಲಲನೆ ಋತುಮತಿಯೆಂದಡೆಯು ಸಭೆ
ಗೆಳೆದು ತಂದವರಧಿಕಸಜ್ಜನ
ರಳಿಕುಳಾಳಿಕೆಯುಟ್ಟ ಸೀರೆಯನೂರುಮಧ್ಯದಲಿ
ಸುಲಿಸಿದರು ಧಾರ್ಮಿಕರು ತಾವೇ
ಖಳರು ನೀವೇ ಸುಜನರೆಮ್ಮೀ
ಸ್ಖಲಿತವನು ನೀವಿನ್ನು ಸೈರಿಸಿ ತಾಯೆ ನಮಗೆಂದ ॥62॥

೦೬೩ ಕದನವಿಜಯದ ಭಙ್ಗಿ ...{Loading}...

ಕದನವಿಜಯದ ಭಂಗಿ ತಲೆಗೇ
ರಿದುದೊ ಮೇಲಂಕಣದಲೊಡವು
ಟ್ಟಿದನ ನೆತ್ತರುಗುಡಿಹಿ ನಿನ್ನೊಡನೆನಗೆ ಮಾತೇನು
ಇದಿರಲಿರದಿರು ಸಾರು ಕರೆ ಧ
ರ್ಮದ ವಿಡಂಬದ ಧರ್ಮಪುತ್ರನ
ಹದನ ಕೇಳುವೆನೆನುತ ಕಳವಳಿಸಿದಳು ಗಾಂಧಾರಿ ॥63॥

೦೬೪ ಧರಣಿಪತಿ ಕೇಳ್ ...{Loading}...

ಧರಣಿಪತಿ ಕೇಳ್ ಸುಬಲಜೆಯ ನಿ
ಷ್ಠುರದ ನುಡಿಯಲಿ ನಡುಗಿ ಭೂಪತಿ
ಕರವ ಮುಗಿದತಿವಿನಯಭರದಲಿ ಬಾಗಿ ಭೀತಿಯಲಿ
ಕರುಣಿಸೌ ಗಾಂಧಾರಿ ನಿರ್ಮಳ
ಕುರುಕುಲಾನ್ವಯಜನನಿ ಕೋಪ
ಸ್ಫುರಣದಲಿ ಶಪಿಸೆನಗೆ ಶಾಪಾರುಹನು ತಾನೆಂದ ॥64॥

೦೬೫ ಶಾಪವನು ನೀ ...{Loading}...

ಶಾಪವನು ನೀ ಹೆಸರಿಸೌ ಸ
ರ್ವಾಪರಾಧಿಗಳಾವು ನಿಮ್ಮಯ
ಕೋಪ ತಿಳಿಯಲಿ ತಾಯೆ ಫಲಿಸಲಿ ಬಂಧುವಧೆ ನಮಗೆ
ನೀ ಪತಿವ್ರತೆ ನಿನ್ನ ಖತಿ ಜೀ
ವಾಪಹಾರವು ತಮಗೆ ನಿಮ್ಮನು
ತಾಪವಡಗಲಿ ತನ್ನನುರುಹೆಂದೆರಗಿದನು ಪದಕೆ ॥65॥

೦೬೬ ನನೆದುದನ್ತಃಕರಣ ಕರುಣಾ ...{Loading}...

ನನೆದುದಂತಃಕರಣ ಕರುಣಾ
ವಿನುತ ರಸದಲಿ ಖತಿಯ ಝಳ ಝೊ
ಮ್ಮಿನಲಿ ಜಡಿದುದು ಜಾರಿತಗ್ಗದ ಪುತ್ರಶತಶೋಕ
ಜನಪ ಕೇಳೈ ರಾಜಸದ ಸಂ
ಜನಿತ ತಾಮಸಬೀಜಶೇಷದ
ವನಜಮುಖಿ ನೋಡಿದಳು ನಖಪಂಕ್ತಿಗಳನವನಿಪನ ॥66॥

೦೬೭ ಉರಿದವರಸನ ನಖನಿಕರ ...{Loading}...

ಉರಿದವರಸನ ನಖನಿಕರ ಹೊಗೆ
ವೆರಸಿ ಕೌರಿಡಲೋಡಿ ಹೊಕ್ಕರು
ನರವೃಕೋದರರಸುರರಿಪುವಿನ ಪಶ್ಚಿಮಾಂಗದಲಿ
ಹರಿಯಭಯಕರವೆತ್ತಿ ಯಮಜಾ
ದ್ಯರನು ಸಂತೈಸಿದನು ರೋಷ
ಸ್ಫುರಣವಡಗಿತು ಸುಬಲಸುತೆಗಿನ್ನಂಜಬೇಡೆಂದ ॥67॥

೦೬೮ ಕೃತಕ ಭೀಮನ ...{Loading}...

ಕೃತಕ ಭೀಮನ ಕೊಂಡು ಮುಳುಗಿತು
ಕ್ಷಿತಿಪತಿಯ ರೋಷಾಗ್ನಿಯಾತನ
ಸತಿಯ ಖತಿ ಮಗ್ಗಿತು ಮಹೀಶನ ನಖಮರೀಚಿಯಲಿ
ಜಿತವಿರೋಧವ್ಯಾಪ್ತಿ ಬಹಳ
ವ್ಯತಿಕರದೊಳಾಯ್ತೆಂದು ಲಕ್ಷ್ಮೀ
ಪತಿ ನರೇಂದ್ರನ ಸಂತವಿಟ್ಟನು ಸಾರವಚನದಲಿ ॥68॥

೦೬೯ ಭೀತಿ ಬೇಡೆಲೆ ...{Loading}...

ಭೀತಿ ಬೇಡೆಲೆ ಮಕ್ಕಳಿರ ನಿ
ರ್ಧೂತ ಧರ್ಮಸ್ಥಿತಿಗಳನ್ವಯ
ಘಾತಕರು ತಮ್ಮಿಂದ ತಾವಳಿದರು ರಣಾಗ್ರದಲಿ
ನೀತಿಯಲಿ ನೀವಿನ್ನು ಪಾಲಿಸಿ
ಭೂತಳವನುರೆ ಕಳಿದ ಬಂಧು
ವ್ರಾತಕುದಕವನೀವುದೆಂದಳು ನೃಪಗೆ ಗಾಂಧಾರಿ ॥69॥

೦೭೦ ಅನುನಯವ ರಚಿಸಿದಳು ...{Loading}...

ಅನುನಯವ ರಚಿಸಿದಳು ಕೌರವ
ಜನನಿ ಲೇಸಾಯ್ತೆನುತ ಬಂದರು
ವಿನಯದಲಿ ಮೆಯ್ಯಿಕ್ಕಿದರು ನಿಜ ಮಾತೆಯಂಘ್ರಿಯಲಿ
ನನೆದಳಕ್ಷಿಪಯಃಪ್ರವಾಹದೊ
ಳನಿಬರನು ತೆಗೆದಪ್ಪಿ ಕುಂತೀ
ವನಿತೆ ಸಂತೈಸಿದಳು ನಯದಲಿ ತನ್ನ ನಂದನರ ॥70॥

೦೭೧ ಏಳು ಧರ್ಮಜ ...{Loading}...

ಏಳು ಧರ್ಮಜ ಪುತ್ರಶೋಕ
ವ್ಯಾಳವಿಷಮೂರ್ಛಿತೆಯಲಾ ಪಾಂ
ಚಾಲಸುತೆಯನು ತಿಳುಹಿ ಕಾಣಿಸು ಸುಬಲನಂದನೆಯ
ಬಾಲೆಯರನಾ ಭಾನುಮತಿಯ ಛ
ಡಾಳದುಃಖವನಪಹರಿಸು ಪಡಿ
ತಾಳ ಬೇಡೆನೆ ಬಂದರನಿಬರು ದ್ರೌಪದಿಯ ಹೊರೆಗೆ ॥71॥

೦೭೨ ಕರೆದು ತನ್ದರು ...{Loading}...

ಕರೆದು ತಂದರು ವಿಗತಲೋಚನ
ನರಸಿಯನು ಕಾಣಿಸಿದರತ್ತೆಯ
ಚರಣಯುಗಳದೊಳೆರಗೆ ಹಿಡಿದೆತ್ತಿದಳು ಗಾಂಧಾರಿ
ಮರುಳು ಮಗಳೆ ಕುಮಾರ ವರ್ಗದ
ಮರಣ ಸೊಸೆಯತ್ತೆಯರಿಗೊಂದೇ
ಪರಿ ವೃಥಾ ವ್ಯಥೆಯೇಕೆನುತ ಸಂತೈಸಿದಳು ಸತಿಯ ॥72॥

೦೭೩ ಸರಿಯಲೌ ಸುತಶೋಕ ...{Loading}...

ಸರಿಯಲೌ ಸುತಶೋಕ ನಮ್ಮಿ
ಬ್ಬರಿಗೆ ನಮ್ಮೊಳುವೆರೆಸಿ ವೈರೋ
ತ್ಕರವಿಸಂಸ್ಥುಳರಣವಿಧಾನವ ನಮ್ಮೊಳಗೆ ರಚಿಸಿ
ಎರಡು ಬಲದಲಿ ಸಕಲ ಭೂಮೀ
ಶ್ವರರ ಚಾತುರ್ಬಲವನುಪಸಂ
ಹರಿಸಿದಾತನು ತಾನೆ ಗದುಗಿನ ವೀರನಾರಯಣ ॥73॥

+೧೧ ...{Loading}...