೧೨

೦೦೦ ಸೂ ರಣವ ...{Loading}...

ಸೂ. ರಣವ ಶೋಧಿಸಲೆಂದು ಕಳನೊಳು
ಹೆಣನ ತುಳಿತುಳಿದರಸೆ ಕುರುಧಾ
ರುಣಿಯ ಪತಿಯನು ಕಂಡು ನೆರೆ ಮರುಗಿದಳು ಗಾಂಧಾರಿ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಕೃಷ್ಣನ ಕರೆದು ನಯದಲಿ
ಲೋಲಲೋಚನೆ ನುಡಿದಳಂತಸ್ತಾಪ ಶಿಖಿ ಜಡಿಯೆ
ಏಳು ತಂದೆ ಮುಕುಂದ ಕದನ
ವ್ಯಾಳವಿಷನಿರ್ದಗ್ಧಧರಣೀ
ಪಾಲವರ್ಗವ ತೋರಿಸೆಂದಳು ತರಳೆ ಕೈಮುಗಿದು ॥1॥

೦೦೨ ನಿನ್ನ ಲೀಲೆಯ ...{Loading}...

ನಿನ್ನ ಲೀಲೆಯ ಬೆಳೆಸಿರಿಯ ಸಂ
ಪನ್ನ ಮಾಯಾರಚನೆಯಿದು ನಿ
ರ್ಭಿನ್ನಭಾರತನಿಚಿತ ಬಹಳಾಕ್ಷೋಹಿಣೀ ದಳವ
ತನ್ನೊಡನೆ ಹಗೆಬೆಳೆದ ಶೌರ್ಯವಿ
ಪನ್ನರನು ತೋರೈ ಜನಾರ್ದನ
ಮನ್ನಿಸೆಂದಳು ನಯನಜಲವನು ಮಿಡಿದು ಗಾಂಧಾರಿ ॥2॥

೦೦೩ ತಾಯೆ ಬಾ ...{Loading}...

ತಾಯೆ ಬಾ ಗಾಂಧಾರಿ ಮನದಲಿ
ನೋಯದಿರು ಪೌರಾಣಜನ್ಮದ
ದಾಯಭಾಗದ ಭೋಗ ಭಂಗಿಸಲಳುಕಲೇಕಿನ್ನು
ಸಾಯಲಾಗದೆ ಸುಭಟರಸುಗಳು
ಬೀಯವೇ ಬ್ರಹ್ಮಾದಿಗಳಿಗಿದು
ದಾಯವೀ ಸಂಸಾರವೆಂದನು ನಗುತ ಮುರವೈರಿ ॥3॥

೦೦೪ ಎನ್ದು ಕೈಗೊಟ್ಟಬಲೆಯನು ...{Loading}...

ಎಂದು ಕೈಗೊಟ್ಟಬಲೆಯನು ಹರಿ
ತಂದನಾ ಸಂಗ್ರಾಮಭೂಮಿಗೆ
ಹಿಂದೆ ಬರಲಷ್ಟಾದಶಾಕ್ಷೋಹಿಣಿಯ ನಾರಿಯರು
ಮುಂದೆ ಹೆಣದಿನಿಹಿಗಳು ಖಗಮೃಗ
ವೃಂದ ಚೆಲ್ಲಿತು ಭೂತ ಪೂತನಿ
ವೃಂದ ಕೆದರಿತು ಹೊಕ್ಕರಿವರದ್ಭುತರಣಾಂಗಣವ ॥4॥

೦೦೫ ಸೂಸಿತಬಲಾವೃನ್ದ ಕೆದರಿದ ...{Loading}...

ಸೂಸಿತಬಲಾವೃಂದ ಕೆದರಿದ
ಕೇಶಪಾಶದ ತೆಳುವಸುರ ನಿ
ಟ್ಟಾಸುರದ ಹೊಯ್ಲುಗಳ ಲೋಚನವಾರಿಧಾರೆಗಳ
ಆಸುರಾಕ್ರಂದನದ ಶೋಕಾ
ವೇಶ ಬಹಳದ ಬಾಲೆಯರು ಪ್ರಾ
ಣೇಶ ಮೈದೋರೆನುತ ಹೊಕ್ಕರಸಿದರು ಕಳನೊಳಗೆ ॥5॥

೦೦೬ ಹರಿದರಗಲಕೆ ನಾರಿಯರು ...{Loading}...

ಹರಿದರಗಲಕೆ ನಾರಿಯರು ಕುರು
ಧರಣಿಯಲಿ ತಂತಮ್ಮ ಪತಿಗಳ
ಕರಿಗಳಲಿ ತುರಗದಲಿ ರಥದಲಿ ಕಂಡರಲ್ಲಲ್ಲಿ
ಶಿರವ ಮುಂಡಾಡಿದರು ಹೆಣನಲಿ
ಹೊರಳಿದರು ವಿವಿಧ ಪ್ರಳಾಪದ
ಪರಿಠವವನೆಂತರಿದರೋ ವರ್ಣಿಸುವಡರಿದೆಂದ ॥6॥

೦೦೭ ನಡೆದಳಾ ಗಾನ್ಧಾರಿ ...{Loading}...

ನಡೆದಳಾ ಗಾಂಧಾರಿ ಶೋಕದ
ಕಡಲೊಳೇಳುತ ಮುಳುಗುತಂಘ್ರಿಯ
ಕೊಡಹುತರುಣಾಂಬುಗಳ ಹೊನಲಿನ ಜಾನುದಘ್ನಗಳ
ಅಡಗಿನಲಿ ಕಾಲೂರಿ ಸಿಲುಕಿದ
ಡೊಡನೆ ಹರಿ ನೆಗಹುವನು ನರವಿನ
ತೊಡಕ ಬಿಡಿಸುತ ಹೊಕ್ಕಳಂಗನೆ ಹೆಣನ ಮಧ್ಯದಲಿ ॥7॥

೦೦೮ ಇತ್ತ ನೋಡೈ ...{Loading}...

ಇತ್ತ ನೋಡೈ ದೇವಕೀಸುತ
ಮತ್ತಗಜ ಕಂಧರದೊಳಾ ಭಗ
ದತ್ತನನು ಕಂಡಾತನರಸಿಯರೈದೆ ಮೊಗವೆತ್ತಿ
ಸುತ್ತಬರುತೈದಾರೆ ದಂತಿಯ
ಹತ್ತಲರಿಯದೆ ನೂರುಮಡಿ ಶೋ
ಕೋತ್ತರದಲದೆ ಶಿವ ಎನುತ ಮರುಗಿದಳು ಗಾಂಧಾರಿ ॥8॥

೦೦೯ ದೇವ ನೋಡಾ ...{Loading}...

ದೇವ ನೋಡಾ ಶೋಕವಹ್ನಿಯ
ಡಾವರವ ಕಾಂಭೋಜನರಸಿಯ
ರಾವ ನೋಂಪಿಯ ನೋಂತರೋ ಶಿವಶಿವ ಮಹಾದೇವ
ಆವನಾತನು ನಿಮ್ಮವರುಗಳ
ಮಾವನೇ ಪಾಂಚಾಲ ಸತಿಯರು
ಜೀವದಲಿ ಜಾರಿದರು ರಮಣರ ಮೇಲೆ ತನಿಹೊರಳಿ ॥9॥

೦೧೦ ಅದೆ ವಿರಾಟನ ...{Loading}...

ಅದೆ ವಿರಾಟನ ಸತಿಯರೀಚೆಯ
ಲದೆ ಘಟೋತ್ಕಚನಂಗನೆಯರಾ
ಸುದತಿಯರ ಶೋಕವ ನಿರೀಕ್ಷಿಸು ಪಂಚಕೇಕೆಯರ
ಒದರಿ ಪಾಂಡ್ಯನ ಹೆಂಡಿರಾಚೆಯ
ಲದೆ ಸುಸೋಮಕ ಸೃಂಜಯಾದ್ಯರ
ವಧುಗಳೊರಲುತ್ತದೆ ಮುರಾಂತಕ ನಿಮ್ಮ ಸೇನೆಯಲಿ ॥10॥

೦೧೧ ಸುಖಿ ಕಣಾ ...{Loading}...

ಸುಖಿ ಕಣಾ ಭೂರಿಶ್ರವನವರ
ಸಖಿಯರದೆ ಪಾಡಳಿದು ನಿಮ್ಮಯ
ಸಖನ ಗೆಲಿಸಿದಿರಿವನ ಮುರಿದಿರಿ ರಾಧೆಯಾತ್ಮಜನ
ನಿಖಿಳ ಯಾಚಕಜನ ಸಹಿತ ತ
ತ್ಸಖಿಯರಳುತದೆ ಕರ್ಣ ಮರಣದೊ
ಳಖಿಳಜಗ ನೀನೊಬ್ಬ ತಪ್ಪಿಸಿ ಮರುಗಿತಿಂದಿನಲಿ ॥11॥

೦೧೨ ಭಾನುದತ್ತನ ಮೇಲೆ ...{Loading}...

ಭಾನುದತ್ತನ ಮೇಲೆ ಹೊರಳುವ
ಮಾನಿನಿಯರ ನಿರೀಕ್ಷಿಸೈ ಮ
ತ್ಸೂನುಗಳ ನೋಡಿತ್ತಲಿದೆ ದುಶ್ಯಾಸನಾದಿಗಳ
ಏನನೆಂಬೆನು ತನ್ನ ಸೊಸೆಯರ
ಹಾನಿಯನು ಮಾದ್ರೇಶನರಸಿಯ
ರೇನಧರ್ಮವ ನೆನೆದರೆಂದಳಲಿದಳು ಗಾಂಧಾರಿ ॥12॥

೦೧೩ ತನ್ದೆ ನೋಡೈ ...{Loading}...

ತಂದೆ ನೋಡೈ ಕೃಷ್ಣ ತನ್ನಯ
ನಂದನರು ನೂರ್ವರಿಗೆ ಕಿರಿಯಳ
ನಿಂದುಮುಖಿ ದುಶ್ಯಳೆಯನಾ ಸೈಂಧವನ ವಲ್ಲಭೆಯ
ಅಂದು ವಿವಿಧವ್ಯೂಹದಲಿ ಗುರು
ನಿಂದಡೆಯು ಹುಸಿರಾತ್ರಿಯಲಿ ನೀ
ಕೊಂದಲೈ ತನ್ನಳಿಯನನು ವರ ಸಿಂಧುಭೂಪತಿಯ ॥13॥

೦೧೪ ಕ್ಷೇಮಧೂರ್ತಿಯನಾ ಕಳಿಙ್ಗನ ...{Loading}...

ಕ್ಷೇಮಧೂರ್ತಿಯನಾ ಕಳಿಂಗನ
ಸೋಮದತ್ತನ ಚಿತ್ರಸೇನನ
ಭೀಮವೈರಿಯಲಂಬುಸನ ಕಿಮ್ಮೀರನಂದನನ
ಭೌಮಸುತನ ಸುಶರ್ಮಕನ ಸು
ತ್ರಾಮರಿಪುಗಳ ಭೂರಿಬಲದ ಸ
ನಾಮರರಸಿಯರದೆ ನಿಜೇಶನ ಮೇಲೆ ತನಿಹೊರಳಿ ॥14॥

೦೧೫ ಎನುತ ಬರೆಬರೆ ...{Loading}...

ಎನುತ ಬರೆಬರೆ ಮುಂದೆ ಕಂಡಳು
ತನುಜನನು ಭೀಮನ ಗದಾ ಘ
ಟ್ಟನದ ಘಾಯದ ಮೆಯ್ಯ ಖಂಡಿಸಿದೂರುಮಂಡಲದ
ನನೆದ ಹುಡಿಮಗ್ಗುಲಿನ ರಕುತದ
ಹೊನಲ ಹೊಲಸಿದ ಘೂಕಕಾಕ
ಧ್ವನಿ ಭಯಂಕರ ಸನ್ನಿಧಾನದ ಕೌರವೇಶ್ವರನ ॥15॥

೦೧೬ ಇತ್ತ ನೋಡೈ ...{Loading}...

ಇತ್ತ ನೋಡೈ ಕೃಷ್ಣ ತನ್ನಯ
ಮತ್ತದಂತಿಯನಿಂದುಕುಲ ರಾ
ಜೊತ್ತಮನನೇಕಾದಶಾಕ್ಷೋಹಿಣಿಯ ವಲ್ಲಭನ
ಹತ್ತೆ ಹಿಡಿದೋಲಗಿಸುವರು ವರ
ಮತ್ತಕಾಶಿನಿಯರುಗಳೀಗಳು
ಸುತ್ತಮುತ್ತಿತು ಘೂಕ ವಾಯಸ ಜಂಬುಕವ್ರಾತ ॥16॥

೦೧೭ ಎನುತ ಬಿದ್ದಳು ...{Loading}...

ಎನುತ ಬಿದ್ದಳು ಮೂರ್ಛೆಯಲಿ ಮಾ
ನಿನಿಯನೆತ್ತಿದನಸುರರಿಪು ನೃಪ
ವನಿತೆಯರು ಭಾನುಮತಿ ಮೊದಲಾದಖಿಳ ರಾಣಿಯರು
ಜನಪತಿಯ ಮುಕ್ಕುರುಕಿದರು ತ
ಜ್ಜನಿತ ಶೋಕಾದ್ಭುತದ ಹಾ ಹಾ
ಧ್ವನಿಯು ಥಟ್ಟನೆ ಘಟ್ಟಿಸಿತು ಬ್ರಹ್ಮಾಂಡಮಂಡಲವ ॥17॥

೦೧೮ ಜನಪ ಕೇಳೀಚೆಯಲಿ ...{Loading}...

ಜನಪ ಕೇಳೀಚೆಯಲಿ ಕುಂತೀ
ವನಿತೆ ಕರ್ಣನ ಮೇಲೆ ಹೊರಳಿದ
ಳಿನತನುಜ ಹಾ ಕರ್ಣ ಹಾ ಹಾ ಕರ್ಣ ಹಾಯೆನುತ
ನಿನಗೆ ಧರ್ಮಸುತಾದಿ ಭೂಮಿಪ
ರನುಜರೈ ಮಾಯಾವಿ ಮಧುಸೂ
ದನನೆ ಮರಯಿಸಿ ಕೊಂದನಕಟೆಂದೊರಲಿದಳು ಕುಂತಿ ॥18॥

೦೧೯ ಅರಿದನನ್ತಕಸೂನು ಮುರಹರ ...{Loading}...

ಅರಿದನಂತಕಸೂನು ಮುರಹರ
ನಿರಿದನೇ ನಾವಿನ್ನು ಕರ್ಣಗೆ
ಕಿರಿಯರೈ ಲೇಸಾಯ್ತು ಗುರುಜನ ಬಂಧುಜನಹನನ
ಉರುವ ಶಶಿವಂಶದ ಮಹಾನೃಪ
ರೆರಗಿದರೆ ಪಾತಕಕೆ ಮುನ್ನೆ
ಚ್ಚರಿಸದಕಟಾ ತಾಯಿ ಕೆಡಿಸಿದಳೆಂದು ಬಿಸುಸುಯ್ದ ॥19॥

೦೨೦ ಹೋಗಲಿನ್ನಾ ಕ್ಷತ್ರಧರ್ಮ ...{Loading}...

ಹೋಗಲಿನ್ನಾ ಕ್ಷತ್ರಧರ್ಮ
ತ್ಯಾಗ ದುವ್ರ್ಯಸನ ಪ್ರಪಂಚವ
ನೀಗಿ ಕಳೆಯೆಂದಸುರರಿಪುವೈತಂದು ಮನ್ನಿಸಿದ
ಮೇಗಿವರ ಸಂಸ್ಕಾರಕಾರ್ಯನಿ
ಯೋಗವಿವೆ ಭಾರಂಕ ನಿನಗೆ ಸ
ರಾಗದಲಿ ಸಂತೈಸಿಯೆಂದನು ಭೂಪತಿಗೆ ಶೌರಿ ॥20॥

೦೨೧ ವ್ಯಾಸ ನಾರದ ...{Loading}...

ವ್ಯಾಸ ನಾರದ ವಿದುರ ಸಾತ್ಯಕಿ
ಕೇಶವನು ದಾರುಕ ಯುಯುತ್ಸು ಮ
ಹೀಶ ಮೊದಲಾದನಿಬರರಸರ ಸಾರಥಿವ್ರಾತ
ಆ ಸಚಿವರಾ ಹಸ್ತಿನಾಪುರ
ದಾ ಸಮಸ್ತಪ್ರಕೃತಿಜನ ಸಂ
ತೈಸಿದರು ಸಂಸ್ಕಾರವಿಧಿಯನು ಹತಮಹೀಶರಿಗೆ ॥21॥

೦೨೨ ಕುರುಪತಿಯ ರವಿಸುತನ ...{Loading}...

ಕುರುಪತಿಯ ರವಿಸುತನ ಮಾದ್ರೇ
ಶ್ವರನ ದುಶ್ಯಾಸನ ವಿಕರ್ಣಾ
ದ್ಯರ ಜಯದ್ರಥ ಬಾಹ್ಲಿಕರ ಭಗದತ್ತ ಲಕ್ಷಣರ
ಗುರುವರನ ಪಾಂಚಾಲ ಮತ್ಸ್ಯೇ
ಶ್ವರರ ಕುಂತೀಭೋಜನೃಪಮು
ಖ್ಯರನು ವಿಧಿಪೂರ್ವಕದಿ ದಹಿಸಿದರಾಹಿತಾಗ್ನಿಯಲಿ ॥22॥

೦೨೩ ಕಳನ ಚೌಕದ ...{Loading}...

ಕಳನ ಚೌಕದ ಸುತ್ತಲೊಟ್ಟಿಸಿ
ತಳಿಗಳನು ಬಹಳಾಗ್ನಿಯನು ಕೈ
ಕೊಳಿಸಿದರು ದಹಿಸಿದರು ಬಹಾಳಾಕ್ಷೋಹಿಣೀಭಟರ
ಬಳಿಕ ಹಸ್ತಿನಪುರದ ಸೀಮಾ
ಸ್ಥಳಕೆ ಬಂದರು ನಿಖಿಳ ಕಾಂತಾ
ವಳಿಸಹಿತ ಗಂಗಾವಗಹನವ ಮಾಡಿದನು ನೃಪತಿ ॥23॥

೦೨೪ ಆ ನದಿಯ ...{Loading}...

ಆ ನದಿಯ ತೀರದಲಿ ತಿಂಗಳು
ಮಾನನಿಧಿ ತತ್ಪ್ರೇತರಿಗೆ ಜಲ
ದಾನ ವಿಧಿವಿಹಿತಪ್ರಪಂಚಿತ ಸಕಲ ಸಂಸ್ಕೃತಿಯ
ಭೂನುತನು ಮಾಡಿದನು ಬಂದುದು
ಜಾನಪದಜನವೈದೆ ಕುಂತೀ
ಸೂನುವನು ದರುಶನವ ಮಾಡಿತು ಕಾಣಿಕೆಯ ನೀಡಿ ॥24॥

೦೨೫ ತಿಳುಹಿ ರಾಯನ ...{Loading}...

ತಿಳುಹಿ ರಾಯನ ಹೃದಯಸಂಚಿತ
ಕಲುಷವನು ಖಂಡಿಸಿ ಗತಾಕ್ಷನ
ಬಲಿದ ಚಿತ್ತವ್ಯಥೆಯನಾರಿಸಿ ನೃಪವಧೂಜನದ
ಅಳಲನಾರಿಸಿ ಗಜಪುರದ ನೃಪ
ನಿಳಯವನು ಹೊಗಿಸಿದನು ಯದುಕುಲ
ತಿಲಕ ಗದುಗಿನ ವೀರನಾರಾಯಣನು ಪಾಂಡವರ ॥25॥

+೧೨ ...{Loading}...